ಒಟ್ಟು 777 ಕಡೆಗಳಲ್ಲಿ , 99 ದಾಸರು , 661 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾರಿ ನೋಡುವನು ರಂಗಯ್ಯನಿಮ್ಮ ದಾರಿ ನೋಡುವನು ಮುರಾರಿ ಮುದ್ದು ವೈಯ್ಯಾರಿ ನಿನ್ನಯಮಾರಿ ತೋರೆಂದು ದಾರಿ ನೋಡುವನು ಪ. ಏಳು ಸಾವಿರ ಮನೆಯು ತೆರವೆಂದು ಹೇಳಿದನಿಮಗಾಗಿ ಜಾಳಿಗೆ ಮುತ್ತು ಜಡಿಸೆಂದ ಜಾಳಿಗೆ ಮುತ್ತು ರಂಗಯ್ಯ ಜಡಿಸೆಂದ ಪಾಂಡವರ ಆಳು ಮಂದಿಗಳ ತಂದು ಇಳಿಸೆಂದ 1 ಕುಂದಣ ಕುಂದಣ ರತ್ನ ರಚಿಸೆಂದ ರಂಗಯ್ಯಪಾಂಡವರ ಬಂಧುಗಳ ತಂದು ಇಳಿಸೆಂದ 2 ನೀಲಮೇಘಶ್ಯಾಮ ಮುತ್ತಿನ ಮಹಲು ರಚಿಸೆಂದಮ್ಯಾಲೆ ಮಾಣಿಕವ ರಚಿಸೆಂದ ಮ್ಯಾಲೆ ಮಾಣಿಕವ ರಚಿಸೆಂದ ರಂಗಯ್ಯ ಪಾಂಡವರ ಬಾಲಿಯರ ತಂದು ಇಳಿಸೆಂದ 3 ಸದನ ವಿಸ್ತರಿಸೆಂದಹದಿನದಿ ರತ್ನ ರಚಸೆಂದಹದಿನದಿ ರತ್ನ ರಚಸೆಂದ ರಂಗಯ್ಯಪಾಂಡವರ ಮುದದಿಂದ ತಂದು ಇಳಿಸೆಂದ 4 ಚದುರ ರಾಮೇಶನು ಮಡದಿಯರೆದುರಿಗೆಮುದದಿ ದ್ರೌಪತಿಯ ಕರೆಯೆಂದಮುದದಿ ದ್ರೌಪತಿಯ ರಂಗಯ್ಯ ಕರೆಯೆಂದ ವಜ್ರದ ಸದನದಿ ತಂದು ಇಳಿಸೆಂದ 5
--------------
ಗಲಗಲಿಅವ್ವನವರು
ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡುದಾಸದಾಸನ ನೋಡು ಮುದ್ದು ದಾಶರಥೇ ದಯ ಮಾಡು ಪ ನೀರಜಾಕ್ಷ ನಿಜ ಮಾಯ ಮಮತೆ ಸಂಸಾರ ಶರಧಿಯೊಳು ಬಿದ್ದುಪಾರುಗಾಣದೆ ಬರಿದೆ ಪೋಗುವಾ ತಾರಕ ಬ್ರಹ್ಮ ನೀನೆಂದೂ 1 ವಿಶ್ವ ಕುಟುಂಬನೆ ಎನಗಾ ಇಂಗುಗೊಡದೆಯೆಲ್ಲರ್ಗಲ್ಲಿ 2 ಇಂದಿರೇಶ ಮುಚುಕುಂದ ವರದ ಮುನಿ ವಂದ್ಯನೆ ದಶರಥ ಕಂದಾಚಂದದಿ ನಿನ್ನ ಪದದ್ವಂದ್ವಗಳನುದಿನ ವಂದಿಸುವೆನುಮುದದಿಂದಾ3
--------------
ಇಂದಿರೇಶರು
ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು
ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರಾಯರ ಪಾಡಿರೋ | ರಂಗನೊಲಿದ ಶ್ರೀ |ದಾಸರಾಯರ ಪಾಡಿರೋ ಪ ದಾಸರಾಯರ ಪಾಡಿ | ದೋಷಗಳೀಡಾಡಿಶಾಶ್ವತ ಲೋಕಗ | ಳಾಶಿಪ ಜನರೆಲ್ಲಾ ಅ.ಪ. ಮಾನವಿ ಕ್ಷೇತ್ರಸ್ಥಿತನೂ | ಘನಕರ್ಣೀಕ ನರಸಪ್ಪನೆಂಬ ದ್ವಿಜನೂ |ಜ್ಞಾನಿ ತಿಮ್ಮಣ್ಣನ ಸತಿಸಹಿತ ಸೇವಿಸೆಮಾನ್ಯ ಸಹ್ಲಾದ ತಾ ಸುತನಾಗಿ ಜನಿಸಿದ 1 ಶಾಲಿವಾಹನ ಶಕವೂ | ಮತ್ತೇಗಾಳಿಗಣಯುತ ಹತ್ತಾರ್ನೂರು |ಕೀಲಕವತ್ಸರ ಶುಕ್ಲ ಶ್ರಾವಣದಲ್ಲಿಶೀಲ ವೆರಡೆನೆ ದಿನ ಜನಿಸಿಹರನ್ನಾ 2 ಈತನು ಹರಿಭಕ್ತನೊ | ಪ್ರಹ್ಲಾದಗೆಪ್ರೀತಿಯ ಸೋದರನೋಧಾತ ಜನಕ ಹರಿ ಮಾತಿನಿಂದಲಿ ಇವಖ್ಯಾತನಾಗಿ ಶ್ರೀನಿವಾಸನೆಂದೆನಿಸಿದ 3 ಆದ ಸಕಾಲದಿ ದ್ವಿಜನು | ಸದ್‍ಬೋಧಿತ ವರದೇಂದ್ರರಿಂ |ಭೇದ ಮತದೊಳದ್ವಿತೀಯ ನೆಂದೆನಿಸುತ್ತವಾದಿ ನಿಗ್ರಹದೊಳತ್ಯಾದರವನೆ ಪೊತ್ತ4 ಒದಗಲುದ್ಧುøತ ಕಾಲವೂ | ಪ್ರಾಪ್ತಸಾಧು ವಿಜಯ ದಾಸರು | ಮುದದಿ ನರ್ತವಗೈದು ಕೀರ್ತನೆ ಪಾಡಲುಹದಗೆಟ್ಟನಿವನೆಂದು ಬಿರುನುಡಿ ನುಡಿದಂಥಾ5 ಒದಗಲುದರ ರೋಗವೂ | ಮುಂದೆಹದನ ಕಾಣದೆ ತಪಿಸಾಲು |ಮೋದ ತೀರ್ಥರ ರೂಪ ಆದರದಲಿ ಭಜಿಸಿಸಾಧು ಸೋತ್ತಮ ದ್ರೋಹ ಕಳವ ಮಾರ್ಗವ ತಿಳಿದ6 ವಿಜಯ ದಾಸರ ಪಾದವಾ | ತಮ್ಮಯನಿಜ ಶಿರದೊಳು ಪೊತ್ತು ಮೆರೆವಾ |ನಿಜ ಶಿಷ್ಯ ಗೋಪಾಲದಾಸರಲ್ಲಿಗೆ ಬಂದುಭಜಿಸೆ ಅವರ ಆಯು ನಾಲ್ವತ್ತು ಪಡೆದಂಥ 7 ಮಂತ್ರಿತ ಭಕ್ಕರಿಯಾ | ಭುಜಿಸೆ ದೇಹಯಂತ್ರ ಸಾಧನ ಕೊದಗಲೂ |ಮಂತ್ರೋಪದೇಶವ ಗೊಳ್ಳುತ ಮುದದಿಂದೆಯಂತ್ರೋದ್ಧಾರಕ ಪ್ರಿಯ ರಂಗನ ಒಲಿಸಿದ 8 ಇಂದು ಭಾಗದಿ ಸ್ನಾನವೂ | ಮಾಡುತಲಿರೆಸ್ಕಂಧಾ ರೋಹಿತ ಶಿಲೆಯಸ್ಥ |ಇಂದಿರಾ ರಮಣ ಶ್ರೀ ಜಗನ್ನಾಥ ವಿಠಲನಸುಂದರಾಂಕಿತವನ್ನು ಧರಿಸಿದ ಶಿರದಲ್ಲಿ 9 ಪಾಂಡುರಂಗನ ಕಾಣುತ | ತನ್ನಯದಿಂಡುಗೆಡಹಿದ ಆಕ್ಷಣಾ |ಅಂಡಜಾಧಿಪನುದ್ದುಂಡ ದೇವರ ದೇವಪುಂಡರೀಕಾಕ್ಷನ ಪಾದಕೆ ಶರಣೆಂದ 10 ಸ್ವಾದಿ ಕ್ಷೇತ್ರಕ್ಕ ಪೋಗೀ | ಪೂಜ್ಯರಾದವಾದಿರಾಜರ ಪೂಜಿಸೀ |ಸಾಧು ವರ್ಯರ ಆಜ್ಞಾಧಾರಕರಿವರಾಗಿಬುಧರಿಗೆ ಹರಿಕಥಾ ಸುಧೆಯ ಸಾರವನಿತ್ತ 11 ಪದ ಸುಳಾದಿಗಳಿಂದಲಿ | ಹರಿಯ ಪಾದಸದ್ವನಜವ ಸ್ತುತಿಸುತಲೀ |ಹೃದಯ ಸದ್ಮದಿ ತದ್ಧಿಮಿ ಧಿಮಿ ಧಿಮಿಕೆಂದುವಿಧಿಪಿತ ಹರಿಯನ್ನ ಕುಣಿಸಿ ಮೋದಿಸಿದಂಥ 12 ಸುವತ್ಸರವು ಶುಕ್ಲದೀ | ಸಿತಭಾದ್ರನವಮಿ ತಾರೆಯು ಮೂಲದೀ |ರವಿಯ ವಾರವು ಸಂದ ಶುಭದಿನದಲಿ ಗುರುಗೋವಿಂದ ವಿಠಲನ ಸೇರಿ ತಾಮೆರೆದಂಥ 13
--------------
ಗುರುಗೋವಿಂದವಿಠಲರು
ದಾಸರಾಯರಾ ಚರಣಕಮಲ ಭಜಿಸೋ |ದುರ್ವಿಷಯವ ತ್ಯಜಿಸೋ ||ಶ್ರೀಶ ಭಜಕ ಗುರು ಪ್ರಾಣೇಶದಾಸಾರ್ಯ |ಹರಿದಾಸ ವರ್ಯಾ ಪ ಸದ್ವೈಷ್ಣವ ಅಧ್ಯಕ್ಷರೆಂದೆನಿಪರೊ |ಕರ್ಮಠರೆನಿಪರೋ |ಮಧ್ವಮತ ಪ್ರವರ್ತಕರೆನಿಪರೋ |ಜ್ಞಾನಿಗಳೆನಿಪರೊ ||ಪದ್ಧತಿ ಪೂರ್ವಕ ಕವನವ ಪೇಳುವರೊ |ಹರಿ ಪರನೆಂಬುವರೊ |ಶುದ್ಧಾತ್ಮರಿಗತಿ ಪ್ರಿಯರೆಂದೆನಿಸುವರೋ |ಸತ್ಕಥಾಲಾಪರೋ 1 ಕಾಮಕ್ರೋಧ ಮದಮತ್ಸರವನು ಗೆಲಿದೂ |ತಾಮಸರನು ಹಳಿದೂ |ನೇಮದಿಂದ ಯಮನಿಯಮಗಳನು ವಹಿಸೀ |ಇಂದ್ರಿಯಗಳ ಜೈಸೀ |ತಾಮುದದಿಂದಲಿ ಹರಿಗುಣ ಕೀರ್ತನೆಯಾ |ಮಾಡುತ ನರ್ತನೆಯಾ ||ಪ್ರೇಮದಿಂದ ಮಾಡಿ ದೇಶದಲ್ಲಿ ಮೆರೆದಾ |ನಾಮ ಸುಧೆಯನ್ನೆರದಾ 2 ಏಸು ಪೇಳಲಿ ಇವರ ಚರಿತೆಯನ್ನು |ಆ ಪಾರವು ಇನ್ನೂ |ಸೋಸಿನೋಡಲು ಎನಗೆ ವಶವಲ್ಲಾ |ಇದು ಪುಸಿಯೂ ಅಲ್ಲಾ ||ಮೀಸಲ ಮನದಲಿ ತುತಿಸಲು ಸಂತಾಪಾ |ಪೋಪದು ನಿರ್ಲೇಪಾ |ಶ್ರೀಶ ಪ್ರಾಣೇಶ ವಿಠಲ ತಾ ಬಲ್ಲಾ |ವಲಿದಿಹನಲ್ಲಾ 3
--------------
ಶ್ರೀಶಪ್ರಾಣೇಶವಿಠಲರು
ದಿನಗಳನು ಕಳೆವ ಜನರೆ ಸುಜನರು ವನಜನಾಭನ ದಾಸರ ಸಮಾಗಮದಿಂದ ಪ. ಅರುಣೋದಯದಲೆದ್ದು ಆಚಮನ ಕೃತಿಯಿಂದ ಪರಿಶುದ್ಧರಾಗಿ ಇಹಪರಗಳಿಂದ ಎರಡುವಿಧ ಸುಖವೀವ ಗುರುಮಧ್ವಮುನಿವರನ ಪರಮಮತವಿಡಿದು ಹರಿಕಥಾಮೃತ ಸವಿದು 1 ಸ್ನಾನವನು ಮಾಡಿ ಸಂಕಲ್ಪಪೂರ್ವಕದಿ ಸಂ- ಧ್ಯಾನ ಗಾಯಿತ್ರಿ ಗುರು ಮಂತ್ರ ಜಪವು ಭಾನುನಾಮಕನಾದ ಪರಮಾತ್ಮನಂಘ್ರಿಯನು ಧ್ಯಾನವನು ಮಾಡಿ ಅಧ್ಯಯನ ಪಾಠಗಳಿಂದ 2 ವಾಸುದೇವ ಅಡಿಗಡಿಗೆ ನೆನೆದು ಪಾವಕಗೆ ಪ್ರಾತರಾಹುತಿಯನಿತ್ತು ಭಾವಜ್ಞರಲಿ ಸಕಲಪುರಾಣಗಳ ಕೇಳಿ ಹೂವು ಶ್ರೀತುಲಸಿವನಗಳ ಸೇವೆಯನು ಮಾಡಿ 3 ನದನದಿಗಳಲಿ ಸ್ನಾನವನು ಮಾಡಿ ಕಂಠÀದಲಿ ಪದುಮಾಕ್ಷಿ ಶ್ರೀತುಲಸಿ ಮಾಲೆಗಳನು ಮುದದಿಂದ ಧರಿಸಿ ಮಧ್ಯಾಹ್ನ ಕಾಲದಿ ಬ್ರಹ್ಮ ಯ- ಜ್ಞ ದೇವ ಋಷಿ ಪಿತೃಗಳ ತೃಪ್ತಿಯನು ಬಡಿಸಿ4 ಸಾವಧಾನದಿ ತಂತ್ರಸಾರೋಕ್ತ ವಿಧಿಯಿಂದ ದೇವಪೂಜೆಯ ಮಾಡಿ ದೇವೇಶಗೆ ನೈವೇದ್ಯಗಳನಿಟ್ಟು ನಿತ್ಯತೃಪ್ತಗೆ ವೈಶ್ವ- ದೇವ ಬಲಿಹರಣ ಅತಿಥಿ ಪೂಜೆಗಳಿಂದ 5 ಪರಮ ಹರುಷದಿಂದ ದೇವ ಪ್ರಸಾದವನು ವರ ಮಾತೃ ಪಿತೃ ಸೋದರರು ಸಹಿತ ಪರಮ ಸಖರ ಪಂಙÂ್ತ ಪಾವನರೊಡಗೂಡಿ ನರಹರೆ ಎನುತ ಭೋಜನ ಮಾಡಿ ಮೋದಿಸುತ 6 ಸಾಯಾಹ್ನದಲಿ ಸಂಧ್ಯಾನ ಗಾಯಿತ್ರಿ ಜಪ ಶ್ರೀಯರಸನಂಘ್ರಿ ಸೇವೆಯನು ಮಾಡಿ ವಾಯುಸಖನೊಳಗಾಹುತಿಯನಿತ್ತು ಲಕ್ಷ್ಮೀನಾ- ರಾಯಣನ ಗುಣಗಳನು ಪೊಗಳುತಲಿ 7 ತನುಮನವÀ ಶ್ರೀಹರಿಯಾಧೀನವ ಮಾಡಿ ಅನುಸರಿಸಿ ಭಾಗ್ಯಬಡತನ ಎಣಿಸದೆ ಮನವರಿತು ಹರಿಕೊಟ್ಟುದು ತನ್ನದಲ್ಲದೆ ಅಧಿಕ ಅಣುಮಾತ್ರ ಬಾರದೆಂದು ಅಲ್ಪ ಸಂತುಷ್ಟನಾಗಿ8 ಈ ವಿಧದಿ ಅನುದಿನವಾಚರಿಸಿ ರಾತ್ರಿಯಲ್ಲೊಂದು ಜಾವ ಜಾವಕೆ ಎದ್ದು ನೆರೆಹೊರೆಯು ಕೇಳ್ವಂತೆ ಪಾವನ ಚರಿತ್ರ ಹಯವದನನ ನೆನೆದು 9
--------------
ವಾದಿರಾಜ
ದುಂಡುಗಟ್ಟಿ ನಿಂತರಮ್ಮದುಂಡುಗಟ್ಟುತ ಎಲ್ಲರೂದುಂಡುಗಟ್ಟುತ ಪೆಂಡೆಯಗೆಜ್ಜೆಗಳು ಘಿಲ್ಲು ಘಿಲಕು ಎನ್ನುತ ಪ. ಕೋಗಿಲಂತೆ ಸ್ವರವನೆತ್ತಿಬಾಗಿ ಬಳಕುತ್ತ ಎಲ್ಲರೂಬಾಗಿ ಬಳುಕುತ್ತ ನಾಗವೇಣಿಯರುಚಂದ್ರನ್ಹಾಂಗೆ ಒಪ್ಪುತ ಚಂದ್ರನ್ಹಾಂಗೆ ಒಪ್ಪುತ1 ಕಮಲ ಮುದದಿ ಎತ್ತಿಮುಗಿಯುತರಂಗಗೆ ಎತ್ತಿ ಮುಗಿಯುತ 2 ಲಕುಮೇಶನಲ್ಲೆ ಸ್ನೇಹ ಉಕ್ಕಿ ಚೆಲ್ಲುತ ಶರದಿ ಉಕ್ಕಿಚಲ್ಲುತ ಅಕ್ಕನೇತ್ರವೆಂಬೊ ಕುಮುದ ಚಕ್ಕನೆ ಅರಳುತ ಚಕ್ಕನರಳುತ 3 ರಂಗನಂಫ್ರಿಗೆರಗುವಂತೆ ಭೃಂಗವಾಗುತ ಎರಗಿಭೃಂಗವಾಗುತ ತಮ್ಮಅಂಗ ಮರೆದು ಮುದದಿಉತ್ತುಂಗರಾಗುತ ಉತ್ತುಂಗರಾಗುತ4 ಹರವಿದ ಕ್ಯಾದಿಗೆಯು ನÀವಿಲು ಗರಿಯಂತೊಪ್ಪುತ ನವಿಲುಗರಿಯಂತೊಪ್ಪುತ ಶ್ರೀ ರಾಮೇಶನೆಂಬೊ ಮುಗಿಲಿಗೆ ಪರಿವೆ ನಲಿಯುತ ಪರಿವೆನಲಿಯುತ5
--------------
ಗಲಗಲಿಅವ್ವನವರು
ದೇವ ದೇವತೆಗಳ ಸ್ತುತಿ ಆವ ಕಾರ್ಯಕೂ ಮುಂಚಿನ ಪೂಜೆ ನಿಮ್ಮತಾಯಿ ತಂದೆಯು ಕಲಿಸಿದ ಪೂಜೆ ಪ ಜಾತಕರ್ಮಕೆ ನಾಮಕರಣಕೆ ಚೌಲಕೆಸಾತಿಶಯಾಕ್ಷರ ಪ್ರಾರಂಭಕೆನೂತನ ವಿದ್ಯಾರಂಭಕೆ ಮುಂಜಿಗೆಯಾತಕೂ ಶ್ರೀ ಗಣಪತಿ ಜಯ ಜಯವೆಂದೂ 1 ಮದುವೆಗೆ ಋತುಶಾಂತಿಗೆ ಸೀಮಂತಕೆಮುದದಿಂದ ಜನನವ ಬರೆವುದಕೆಸದಮಲ ಯಜ್ಞಾರಂಭಕೆ ಸಮರಕೆಮೊದಲೇ ಶ್ರೀ ವಿಘ್ನೇಶ್ವರ ಜಯ ಜಯವೆಂದೂ2 ಪರ ಉಪಕಾರಕೆಜ್ಞಾನಮಾರ್ಗಕೆ ಗಾನಕೆ ಗೀತೆಗೆನಾನಾವಿಧ ಸುವ್ರತ ತೀರ್ಥಯಾತ್ರೆಗೆನೀನೆ ಗತಿ ಗಣಪತಿ ಜಯ ಜಯವೆಂದೂ 3 ಕೆರೆ ಕಾಲುವೆ ಕೂಪಗಳ ವಿಸ್ತಾರಕೆಸುರಗೃಹ ರಥ ಉತ್ಸವ ಪೂಜೆಗೆಸರಸ ಸರೋವರಗಳ ನಿರ್ಮಾಣಕೆಸಿರಿ ಗಣಪತಿ ಪಾವನಮೂರ್ತಿ ಜಯವೆಂದೂ 4 ಹರ ನಿಮ್ಮ ಪೂಜಿಸಿ ಪುರಮೂರ ಜಯಿಸಿದಗರುಡಗೆ ಅಮೃತವು ಸಿದ್ಧಿಸಿತುವರರಾಮಚಂದ್ರ ನಿಮ್ಮಡಿಯ ಪೂಜಿಸಿ ದಶಶಿರನ ಗೆಲಿದನೆನೆ ಗಣಪತಿ ಜಯವೆಂದೂ 5 ದ್ವಾಪರಯುಗದಲಿ ಧರ್ಮರಾಯನು ನಿಮ್ಮನೇ ಪೂಜಿಸಿ ಕೌರವರ ಗೆಲಿದಾಭೂಪರ ಜೈಸಿ ತುರಗವ ತಂದ ಸಾಂಬನುಶ್ರೀಪತಿನುತ ಗಣಪತಿ ಜಯ ಜಯವೆಂದೂ6 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮಮೋಹದ ಪುತ್ರ ಪಾವನತರಗಾತ್ರವರದ ಶ್ರೀ ಗಣಪತಿ ಜಯ ಜಯ ಜಯವೆಂದೂ 7
--------------
ಕೆಳದಿ ವೆಂಕಣ್ಣ ಕವಿ
ದೇವ ಫಣಿಭೂಷಣನೆ ಬಾ ಸಕಲ ಜನ ಜೀವಚೈತನ್ಯ ಬಾರೈ ದೇವತೆಗಳುಯ್ಯಲೆಯನು ಭಯಭಕ್ತಿ ಭಾವದಿಂ ತೂಗತಿಹರು ಪ ಅವನಿಯೊಳಗಯನವೆರಡು ಸರಪಣಿಗೆ ಭುವನವೇಳರ ಪೀಠವು ಶಿವನೆ ತೊಡಿಸಿರಲು ಮೇಲೆ ಕುಣಿಕೆ ತಾ ಧ್ರುವನ ಕೈಲಿಹುದುಯ್ಯಲೆ 1 ಧರಣಿಯಿದು ಮೇಲುಮಣೆಯು ಗಗನದಿ ಸ್ಫುರಿಸುತಿಹ ಶಶಿಸೂರ್ಯರು ದೀಪವಾ ಗಿರಲೊಪ್ಪುತಿಹದುಯ್ಯಲೆ 2 ಇಂದ್ರಾದಿ ದಿಕ್ಪಾಲಕರು ಮಿಕ್ಕಾದ ಗಂಧರ್ವ ಸುರ ಸಿದ್ಧರು ವಂದಿಸುತ ಸ್ತುತಿಗೈಯುತ ಸಂದಣಿಸಿ ಮುಂದೆ ನಿಂದಿಹರು ಮುದದಿ 3 ಕುಸುಮಮಾಲೆಗಳಾಗಿವೆ ನಕ್ಷತ್ರ ವೆಸೆದು ಗಗನದಲೊಪ್ಪುತ ಅಸಮತೇಜೋರಾಶಿಯೆ ಮದನಹರ ನಸುನಗುತ ಬಂದು ನೆಲೆಸು 4 ಮಂಗಳ ಮಹಾಮಹಿಮನೆ ಶಿವಗಂಗೆ ಗಂಗಾಧರೇಶ ನೀನೆ ಲಿಂಗವೆಂದೆನಿಸುತಿಲ್ಲಿ ತಿರುಪತಿಯ ರಂಗ ವೆಂಕಟನೆನಿಸುವೆ 5
--------------
ತಿಮ್ಮಪ್ಪದಾಸರು
ದೇವರಾಜ ನುತನೆ ಖಗಪಾ | ಬಲ | ದೇವ ಚರಣ ಮಧುಪ ಪ ಭಾವಜಾರಿ ಸಮನು ಎನಿಪ | ತಾವಕನ್ನ ಸಲಹೊ ಕಾಶ್ಯಪ ಅ.ಪ. ಜಲಧಿ ಗಾರುಡ ಮುಖ ಕಾರುಣ್ಯದಿ | ಹೊರಡೂಡುತ | ಹಾರಿದೆ ವಿ | ಸ್ತಾರಾಮೆಗೆ 1 ಕೂರ್ಮ ದ್ವೇಷದಿಂದಾ | ನೆರೆಹೊರೇಯ ದುಃಖದಿಂದಾ |ಇರಲು ಕಳೆಯೆ ಗರುಡನಿಂದಾ | ವರಮುನಿ ಪೇಳ್ದ ಮುದದಲಿಂದಾ ||ಭಾರಿಲಿ ಇಹ | ಕೂರಮ ಕರ್ಯ | ಹರವ ಮೇಲೆ | ಢೋರದ ತರುಕ್ಹಾರಲದೂ | ದಾರಿತ ವಿ | ಸ್ತಾರದ ಮಹಿ | ಮೋರುಗುಣಿ2 ಅಮೃತ ಕಲಶ ತಂದಾ ||ಕಾರುಣಿ ದಿತಿ | ಜಾರಿಗೆ ಮಾತೆ | ಕಾರಾಗೃಹ | ತಾರಣ ಮುರವೈರಿಯ ವಹ | ತೋರೈ ಹೃ | ದ್ವಾರಿಜದಿ | ಶ್ರೀಹರಿಪದ 3
--------------
ಗುರುಗೋವಿಂದವಿಠಲರು
ದೇವಾನಾ ಮೂರು ಲೋಕಂಗಳನುನೆರೆ ಕಾವಾನಾ ಶರಣಾಗತ ಸಂ ಜೀವಾನ ರೂಪ ಕಂಡೆ ಕೈಯಡಿಯಾ ಪ ಧಗಧಗಿಸುವ ಕೋಟಿ ದಿವಾಕರ ಕಿರಣಗಳ ಧೃಗುಳುಗಳ ಕಾಂತಿಯ ಮೊಗೆದು ಚೆಲ್ಲುತ ಪಾ ಲೊಗುವ ಕದಪಿಲಿ ಢಾಳಿಪ ಕುಂಡಲಂಗಳಾ 1 ತಿಲಕದ ಕುಡಿವರಿದಿಹ ಪುರ್ಬುಗಳ ಮಂ ಹೇಮ ಚಂಪಕದ ನಾಸಿಕದಾ ಜಲಜ ಕಸ್ತೂರಿ ಕಪ್ಪುರದ ಕಂಪಿನ ಸುಲಿಪಲ್ಲಿನ ಬಾಯಿದೆರೆಯ ಚೆಲುವನುಳ್ಳಾ 2 ತೋರಮಂದಾರ ತುಲಸೀ ವನಮಾಲೆ ಕೊರಳ ಹಾರ ಪೇರುರದಾ ಶ್ರೀ ಚಂದನದಾ ವಾರಿಜಪಾಣಿಯುಗದೆ ಶಂಖಚಕ್ರ ಸ- ರೋರುಹ ಕರದಲಭಯವಿತ್ತು ಸಲಹುವಾ 3 ಅಂದು ಜಘನದಿ ಕರವಿಟ್ಟು ಪೊಂಬಟ್ಟೆಯನುಟ್ಟು ಮಣಿ ಬಿರುಡೆಯವಿಟ್ಟು ಸ ನ್ಮುದದಿ ವೀರಮುದ್ರಿಕೆ ಮಂಡಿಕಾಗಳನಿವಿಟ್ಟು ಮೃದುಪಾದನಖದಿ ಮೂಜಗವ ಬೆಳಗುತಿಹ4 ಪಾವಕ ವರಕಾಂತಿಯ ಗೆಲುವಾ ಜಾಜಿ ಸೇವಂತಿಗೆ ಮೃದುವನು ಸೋಲಿಪಡಿಗಳಾ ಶ್ರೀ ವೆಲಾ ಪುರದ ವೈಕುಂಠೇಶ ವೇಂಕಟಾದ್ರೀಶಾ 5
--------------
ಬೇಲೂರು ವೈಕುಂಠದಾಸರು
ದೇವಿ ನಿನ್ನಯ ಮುಡಿಮ್ಯಾಲಿದ್ದ ಮಲ್ಲಿಗೆ- ಹೂವ ಕೊಡೆ ನೀ ವರವ ಕೊಡೆ ಪ ಕಟ್ಟ್ಟುವೊ ತೊಟ್ಟ್ಟಿಲ್ಹುಟ್ಟುವೊ ಗಂಡು ಮಕ್ಕಳು ಮುತ್ತೈದೆತನವ ಮುದದಿ ಬೇಡುವೆ ಶ್ರೀ ಮಾಲಕ್ಷ್ಮಿಯೆ ನಮಗೆ ದಯಮಾಡೆ 1 ಅಂದಣ ರಥ ಬಂದ್ಹೋಗುವೋ ಹೆಣ್ಣು ಮಕ್ಕಳು ಬಂಧುಗಳಿಗೆಲ್ಲ ಬಲುಕ್ಷೇಮ ಬಂಧುಗಳಿಗೆಲ್ಲ ಬಲುಕ್ಷೇಮ ಇರುವಂತೆ ಇಂದಿರಾದೇವಿ ದಯಮಾಡೆ 2 ದಂಪತಿ ನಲಿಸುತ ಸಂಪತ್ತು ಸೌಭಾಗ್ಯ ಇಂಥ ಮಂದಿರಕೆ ಬಹುಮಾನ ಇಂಥ ಮಂದಿರಕೆ ಬಹುಮಾನಯಿರುವಂತೆ ಸಂತೋಷದಿ ವರವ ದಯಮಾಡೆ 3 ಅನ್ನ ಗೋವ್ಗಳು ದಿವ್ಯ ಕನ್ಯಾ ಭೂದಾನಹಿ- ರಣ್ಯದಾನಗಳ ಹಿತದಿಂದ ಹಿ- ರಣ್ಯದಾನಗಳ ಹಿತದಿಂದ ಮಾಡುವಂತೆ ಸಂ- ಪನ್ನ ನೀ ವರವ ದಯಮಾಡೆ 4 ಇಂದಿಗೆ ಮನೋಭೀಷ್ಟ ಎಂದೆಂದಿಗೆ ನಿನಪಾದ ಹೊಂದಿರಲೆಂದೂ ಮರೆಯದೆ ಹೊಂದಿರಲೆಂದೂ ಮರೆಯದೆ ಭೀಮೇಶಕೃಷ್ಣನ- ರ್ಧಾಂಗಿ ನೀ ವÀರವ ದಯಮಾಡೆ 5
--------------
ಹರಪನಹಳ್ಳಿಭೀಮವ್ವ
ಧನ್ಯತೆಯಾಂತೆನಿಂದು ದೇವಿಯಕಂಡು ಮಾನ್ಯತೆ ಪಡೆವೆನೆಂದು ಪ. ಚಿನ್ಮಯರೂಪನ ಚೆನ್ನೆ ಲಕ್ಷ್ಮಿಯ ಸಂ ಪನ್ನ ಮೂರ್ತಿಯ ಕಂಡಿನ್ನೆನಗೆಣೆಯಾರೆನೆ ಅ.ಪ. ನಾಗವೇಣಿಯರೆಲ್ಲರು ಪಾಡುತ ಶಿರ ಬಾಗಿ ವಂದಿಸುತಿರಲು ರಾಗದಿಂ ನಲವೇರೆ ಭೋಗಭಾಗ್ಯವನೀವ ಯೋಗೇಶ್ವರಿಯ ದಯಾಸಾಗರಿಯ ಕಂಡು 1 ಐದೆಯರತಿಮುದದಿ ವೈದೇಹಿಯೆ ಯೆಮ್ಮ ಆದರ್ಶ ಮಹಿಳೆಯೆಂದು ಆದಿಶಕ್ತಿಯೇ ಈ ಶ್ರೀದೇವಿ ನಿಜವೆಂದು ಆದರಿಸುತ್ತಿರಲಾಮೋದವಾಂತುದರಿಂ 2 ಅರಿದಾವುದೆಮಗಿಳೆಯೊಳು ಶೇಷಗಿರೀಶನ ಅರಸಿಯೆಮ್ಮವಳಾದಳು ದುರಿತರೋಗವು ದೂರ ಸರಿದುದು ಮನವಾರ 3
--------------
ನಂಜನಗೂಡು ತಿರುಮಲಾಂಬಾ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ