ಒಟ್ಟು 1048 ಕಡೆಗಳಲ್ಲಿ , 93 ದಾಸರು , 787 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲವೆಂತು ಕಳೆಯಲೆನ್ನಯ್ಯ ಪ ಕಾಲಕಳೆಯಲೆಂತು ನಾನು ತಾಳಿಮೂಗುತಿ ಕಾಣದೊನಿತೆಯ ಹಾಳುಮುಖವ ನೋಡೆವೆಂದು ಶೀಲಮುತ್ತೈದೇರ್ಹಳಿಯುತಿಹ್ಯರು ಅ.ಪ ಏಳುಸುತ್ತಿನಕೋಟಿ ಪಟ್ಟಣದಿ ಖೂಳರುಪಟಳ ಹೇಳಲಳವಲ್ಲ ಸೇರಿ ವಿಧ ವಿಧದಿ ದಾಳಿನಿಕ್ಕಿ ಹಾಳು ಮಾಡ್ವರು ಮನಕೆ ಬಂದತೆರದಿ ಗೋಳು ಕೇಳುವರಿಲ್ಲವೋರ್ವರು ತಾಳೆನೀಬಾಧೆ ಶೀಲದೆನ್ನ ಬಹು ಜೋಕಿಯಿಂ ಮೇಲ್ಮಾಲಿನೋಳಿಟ್ಟು ಆಳುವಂಥ ಮೂಲಪುರಷನಿಲ್ಲದಿನ್ನು 1 ಆರು ಕೇಳುವರಿಲ್ಲ ಇವಳಿಗೆಯೆನುತ ಕೀಳ ಮೂರು ಮಂದಿ ಊರ ಬೀದಿಯೊಳಗೆ ದಾರಿ ತರುಬಿ ಸಾರಿ ತರಿವರು ಮಾರಕೇಳಿಗೆ ಸೈರಿಸಲಿ ಹ್ಯಾಗೆ ಚೋರನೋರ್ವನು ಮೀರಿ ಬಾಧಿಪ ಆರು ಮಂದಿ ಬಿಡದೆ ಎನ್ನನು ಘೋರಿಸುವರು ನಾನ ವಿಧದಿ ಪಾರುಗಾಣೆನು ವ್ರತದಿ ಇನ್ನು 2 ಪತಿಯು ಇಲ್ಲದ ಜನ್ಮವ್ಯಾತಕ್ಕೆ ಕ್ಷಿತಿಯಮೇಲೆ ಸತಿಗೆ ಪರಮ ಗತಿಯ ಕೊಡಲಿಕ್ಕೆ ಪತಿಯೆ ಬಾಧ್ಯ ಇತರರು ಕಾರಣಲ್ಲ ಕಾಯಕ್ಕೆ ಜತನ ಗೈಲಿಕ್ಕೆ ಪ್ರಥಮ ಮುತ್ತಿನ ಮೂಗುತಿಯನು ಹಿತದಿ ಕರುಣಿಸಿ ಪತಿಯಾಗೆನಗೆ ಗತಿಯ ನೀಡಿ ಹಿತದಿಂ ಸಲಹು ಪತಿತ ಪಾವನೆನ್ನ ಪ್ರಾಣ ಶ್ರೀರಾಮ 3
--------------
ರಾಮದಾಸರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವಲಿರು ಕಮಲಾಕ್ಷ ಕರುಣಿ ನಿರಪೇಕ್ಷ ದೇವ ದೇವಾಧ್ಯಕ್ಷ ದುರಿತಾಳಿಶೀಕ್ಷ ಪ. ಪಾಂಡುಕುವರರ ಪರಮ ಪ್ರೇಮದಿಂದಲಿ ಕಾಯ್ದೆ ತೋಂಡಮಾನಗೆ ಚಕ್ರ ಶಂಖಗಳನಿತ್ತೆ ಪಂಡಿತಾಗ್ರಣಿ ಬಲಿಯ ಬಾಗಿಲೊಳು ಶಾಙ್ರ್ಞಕೋ- ದಂಡ ಶರಗಳ ಧರಿಸಿಕೊಂಡು ಕಾಪಾಡುವನೆ 1 ವಿತತರೂಪನೆ ನಿನ್ನೊಳಿಟ್ಟಹೆನು ಭರವಸವ ಸತತ ನೀ ಸಲಹುವುದು ಸರ್ವಸ್ವವ ಕ್ಷಿತಿಯನಾಳುವ ಜನರೊಳಂತರಾತ್ಮಕ ನೀನೆ ಗತಿಯೆಂದು ನಂಬಿದೆನು ಗರುಡಾಂಗಗಮನ 2 ಕಂಟಕವ ಪರಿಹರಿಸು ಕಂಠೀರವಾಸ್ಯ ವೈ- ಕುಂಠಗಿರಿಯರಸ ಮೂರೆಂಟು ತತ್ವೇಶ ಸ್ವಿಂಟನಾಭಿದನ ನಿಷ್ಕಂಟತನವನು ಬಿಡಿಸಿ ಬಂಟವಾಗಿಹರ ಮೇಲೆ ತಂಟೆ ಬರದಂದದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಶಿಯ ಹಾದಿಯಲಿ ಕೇಶವನಿದ್ದಾನೆ ರಾಮರಾಮ ಕೇಶವನ ದಯದಿ ಕಾಶಿಯಾತ್ರೆಯ ಕಂಡೆ ರಾಮರಾಮ 1 ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮ ಬದರಿಕಾಶ್ರಮ ಕಂಡೆ ನಾರಾಯಣನ ದಯದಿ ರಾಮರಾಮ 2 ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮ ಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ 3 ಗೋಕುಲದಲ್ಲಿ ಶ್ರೀ ಗೋವಿಂದನಿದ್ದಾನೆ ರಾಮರಾಮ ಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ 4 ವಿಷ್ಣು ತೀರ್ಥದಲಿ ಶ್ರೀವಿಷ್ಣುವಿದ್ದಾನೆ ರಾಮರಾಮ ವಿಷ್ಣು ತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ 5 ಮತ್ಸ್ಯತೀರ್ಥದಲ್ಲಿ ಮಧುಸೂದನನಿದ್ದಾನೆ ರಾಮರಾಮ ದಯದಿ ರಾಮರಾಮ6 ತ್ರಿವೇಣಿಯಲ್ಲಿ ತ್ರಿವಿಕ್ರಮನಿದ್ದಾನೆ ರಾಮರಾಮ ತ್ರಿವಿಕ್ರಮನ ದಯದಿ ತ್ರಿವೇಣಿಯಲ್ಲಿ ಮಿಂದೆ ರಾಮರಾಮ7 ವಾಮನ ನಮ್ಮನು ಒಲಿದು ಕಾಯುವನಂತೆ ರಾಮರಾಮ ವಾಮನನ ದಯದಿ ಭೂವೈಕುಂಠವ ಕಂಡೆ ರಾಮರಾಮ8 ಶ್ರೀಧರ ನಮ್ಮ ಹೃದಯದಲ್ಲಿದ್ದಾನೆ ರಾಮರಾಮ ಶ್ರೀಧರನ ದಯದಿಂದ ಹೃದಯವಾಸನ ಕಂಡೆ ರಾಮರಾಮ9 ಋಷಿಗಳಾಶ್ರಮದಲ್ಲಿ ಹೃಷಿಕೇಶನಿದ್ದಾನೆ ರಾಮರಾಮ ಹೃಷಿಕೇಶನ ದಯದಿ ಋಷಿಗಳಾಶ್ರಮ ಕಂಡೆ ರಾಮರಾಮ10 ಪದ್ಮನಾಭದಲ್ಲಿ ಪದ್ಮನಾಭನಿದ್ದಾನೆ ರಾಮರಾಮ ಪದ್ಮನಾಭನ ದಯದಿ ಪದ್ಮನಾಭನ ಕಂಡೆ ರಾಮರಾಮ11 ಸಾಧು ಬೃಂದದಲ್ಲಿ ದಾಮೋದರನಿದ್ದಾನೆ ರಾಮರಾಮ ಸಾಧು ಬೃಂದವ ಕಂಡೆ ದಾಮೋದರನ ದಯದಿ ರಾಮರಾಮ 12 ಸಕಲ ತೀರ್ಥದಲ್ಲಿ ಸಂಕರ್ಷಣನಿದ್ದಾನೆ ರಾಮರಾಮ ಸಂಕರ್ಷಣನ ದಯದಿ ಸಕಲ ತೀರ್ಥವೆ ಮಿಂದೆ ರಾಮರಾಮ 13 ವಸುಧೇಯ ಮೇಲೆಲ್ಲ ವಾಸುದೇವನಿದ್ದಾನೆ ರಾಮರಾಮ ವಾಸುದೇವನ ದಯದಿ ವಸುಧೆಯೆಲ್ಲವ ಕಂಡೆ ರಾಮರಾಮ 14 ವೃದ್ಧಗಂಗೆಯಲ್ಲಿ ಪ್ರದ್ಯುಮ್ನನಿದ್ದಾನೆ ರಾಮರಾಮ ಪ್ರದ್ಯುಮ್ನನ ದಯದಿ ವೃದ್ಧಗಂಗೆಯ ಮಿಂದೆ ರಾಮರಾಮ 15 ಅಲಕನಂದೆಯಲ್ಲಿ ಅನಿರುದ್ಧನಿದ್ದಾನೆ ರಾಮರಾಮ ಅಲಕನಂದನೆ ಮಿಂದೆ ಅನಿರುದ್ಧನ ದಯದಿ ರಾಮರಾಮ 16 ಪುಣ್ಯಕ್ಷೇತ್ರದಲ್ಲಿ ಪುರುಷೋತ್ತಮನಿದ್ದಾನೆ ರಾಮರಾಮ ಪುಣ್ಯಕ್ಷೇತ್ರವ ಕಂಡೆ ಪುರುಷೋತ್ತಮನ ದಯದಿ ರಾಮರಾಮ 17 ವೈತರಣಿಯಲ್ಲಿ ಅಧೋಕ್ಷಜನಿದ್ದಾನೆ ರಾಮರಾಮ ವೈತರಣಿದಾಟಿದೆ ಅಧೋಕ್ಷಜನ ದಯದಿ ರಾಮರಾಮ 18 ನಿರ್ಮಲ ಗಂಗೆಲಿ ನರಸಿಂಹನಿದ್ದಾನೆ ರಾಮರಾಮ ನಿರ್ಮಲ ಗಂಗೆಯ ಮಿಂದೆ ನರಸಿಂಹನ ದಯದಿ ರಾಮರಾಮ 19 ವೈಕುಂಠಗಿರಿಯಲ್ಲಿ ಅಚ್ಯುತನಿದ್ದಾನೆ ರಾಮರಾಮ ವೈಕುಂಠಗಿರಿ ಕಂಡೆ ಅಚ್ಯುತನ ದಯದಿ ರಾಮರಾಮ20 ಜಾಹ್ನವಿಯಲ್ಲಿ ಜನಾದರ್Àನಿದ್ದಾನೆ ರಾಮರಾಮ ಜನಾರ್ದನನ ದಯದಿ ಜಾಹ್ನವಿಯಲಿ ಮಿಂದೆ ರಾಮರಾಮ21 ಉಡುಪಿ ಕ್ಷೇತ್ರದಲ್ಲಿ ಉಪೇಂದ್ರನಿದ್ದಾನೆ ರಾಮರಾಮ ಉಡುಪಿ ಕ್ಷೇತ್ರವ ಕಂಡೆ ಉಪೇಂದ್ರನ ದಯದಿ ರಾಮರಾಮ 22 ಹರಿಯುವ ನದಿಯಲ್ಲಿ ಶ್ರೀ ಹರಿಯಿದ್ದಾನೆ ರಾಮರಾಮ ಹರಿಯ ದಯದಿಂದ ಹರಿವ ನದಿಯ ಮಿಂದೆ ರಾಮರಾಮ 23 ಕೃಷ್ಣನ ದಯದಿ ಸಕಲ ಕಷ್ಟ ಬಿಟ್ಟಿತು ರಾಮರಾಮ 24 ಭಕ್ತಿಲಿಪ್ಪತ್ನಾಲ್ಕು ನಾಮ ಪೇಳುವರಿಗೆ ರಾಮರಾಮ ಭುಕ್ತಿ ಮುಕ್ತಿಯ ನೀವ ವಿಜಯವಿಠ್ಠಲರೇಯ ರಾಮರಾಮ 25
--------------
ವಿಜಯದಾಸ
ಕಾಳ ಬೆಳದಿಂಗಳು ಈ ಸಂಸಾರ ಕತ್ತಲೆ ಬೆಳದಿಂಗಳು ಪ ಸತ್ಯಕ್ಕೆ ಧರ್ಮನು ಲೆತ್ತವನಾಡಲುಅರ್ಥ ಭಾಂಡರವೆಲ್ಲವ ಸೋತುಮತ್ತೆ ವಿರಾಟರಾಯನ ಮನೆಯಲ್ಲಿತೊತ್ತಾದಳು ದ್ರೌಪದಿ ಒಂದು ವರುಷ1 ಪುಂಡರೀಕಾಕ್ಷ ಪುರುಷೋತ್ತಮ ಹರಿಯಬಂಡಿಬೋವನಾದ ಪಾರ್ಥನಿಗೆ ಭೂ -ಮಂಡಲನಾಳುವ ಹರಿಶ್ಚಂದ್ರರಾಯನುಕೊಂಡವ ಕಾಯ್ದನು ಹೊಲೆಯನಾಳಾಗಿ2 ಉಂಟಾದ ಕಾಲಕ್ಕೆ ನೆಂಟರು ಇಷ್ಟರುಬಂಟರಾಗಿ ಬಾಗಿಲ ಕಾಯ್ವರುಉಂಟಾದತನ ತಪ್ಪಿ ಬಡತನ ಬಂದರೆಒಂಟೆಯಂತೆ ಗೋಣ ಮೇಲೆತ್ತುವರು 3 ಉಂಬಾಗ ಉಡುವಾಗ ಕೊಂಬಾಗ ಕೊಡುವಾಗಬೆಂಬಲದಲಿ ನಲಿನಲಿವುತಿಹರುಬೆಂಬಲತನ ತಪ್ಪಿ ಬಡತನ ಬಂದರೆಇಂಬು ನಿನಗಿಲ್ಲ ನಡೆಯೆಂಬರು4 ಏರುವ ದಂಡಿಗೆ ನೂರಾಳು ಮಂದಿಯುಮೂರು ದಿನದ ಭಾಗ್ಯ ಝಣ ಝಣವುನೂರಾರು ಸಾವಿರ ದಂಡವ ತೆತ್ತರೆರಂಗವಿಠಲನೆ ಸರಿಯೆಂಬೊರಯ್ಯ5
--------------
ಶ್ರೀಪಾದರಾಜರು
ಕುಲ ಕುಲ ಕುಲವೆನ್ನುತಿಹರು ಪ ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಅ ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ1 ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು 2 ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ 3
--------------
ಕನಕದಾಸ
ಕುಲದ ಮೇಲೆಯೇ ಹೊಂದಲಿಬೇಡ ಕೇಳಿದನೋ ಕತ್ತೆಕುಲವು ಬೇರೆ ಜ್ಞಾನದ ಹಾದಿಗೆ ನಿನಗೆ ತಿಳಿಯಿತೆ ಪ ಸಣ್ಣವನಾಗಲಿ ಸ್ತ್ರೀಯು ಆಗಲಿ ಆರು ಆದರೆ ಏನುತನ್ನನ್ನು ತಿಳಿದು ತಾನೆಯು ಆದರೆ ಅವನೆ ನಿಜ ಮುಕ್ತಾ 1 ಹಿರಿಯನು ಇಲ್ಲವು ಕಿರಿಯನು ಇಲ್ಲವುತನ್ನನು ತಿಳಿದವ ಹಿರಿಯ ಕರೆಕರೆಸಂಸಾರ ಕೇವಲ ಸುತ್ತಲು ಅರಿತವ ಎಂದಿಗೆ ಮನೆಯೂ 2 ಆವ ಕುಲವು ಆದರೆ ಏನು ತನ್ನ ತಿಳಿಯೆ ಜ್ಞಾನದೇವ ಚಿದಾನಂದನವನನು ಇಲ್ಲವನೆಂದವ ನಲಿವನಾ 3
--------------
ಚಿದಾನಂದ ಅವಧೂತರು
ಕುಲವೇನೆಂತು ಹೇಳಲಿ ಯೋಗೀಶನಕುಲವೇನೆಂತು ಹೇಳಲಿಕುಲವ ಕೇಳುತಿಹ ಕತ್ತೆಯ ಮಗನಿಗೆ ಪ ಬಲಿದು ಆಧಾರವನು ಕುಂಬಕದೊಳು ನಿಲಿಸಿ ವಾಯುವನುನೆಲೆಯನು ಹತ್ತಿಸಿ ನೆಲೆಯಾಗಿ ನೆಲೆಸಿನೆಲೆಯೊಳು ಕುಳಿತಿಹ ಪುಣ್ಯ ಪುರುಷನಿಗೆ 1 ಜಾಗ್ರತದಿ ಸ್ವಪ್ನವನು ಸುಷುಪ್ತಿಯು ಸಹನಿಗ್ರಹಿಸೆಲ್ಲವನು ಸ್ವರ್ಗದ ಮೇಲೆ ಮಹಾ ಸ್ವರ್ಗವಿರಲುಸುಸ್ವರ್ಗದಿ ನೆಲೆಸಿಹ ಭರ್ಗನಾದವಗೆ2 ಎಣಿಕೆಯ ಜನ್ಮವನು ಕಳೆದು ಮುಂದೆಕ್ಷೀಣಿಸಿ ಪ್ರಾರಬ್ಧವನು ತ್ರಿಣಯನನಾಗಿ ದಿನಮಣಿಯಾಗಿ ಕಣಿಯಾಗಿಗುಣಕಗೋಚರ ಚಿದಾನಂದನಾದವನಿಗೆ 3
--------------
ಚಿದಾನಂದ ಅವಧೂತರು
ಕೃತ ಕೃತ್ಯನಾದೆನಿಂದಿನ ದಿನದೊಳು ಕ್ಷಿತಿಸುತ ವೆಂಕಟರಾಮಾರ್ಯರನ ಕಂಡು ಪ ಭೂಮಂಡಲದೊಳುಳ್ಳ ಸಕಲ ತೀರ್ಥಸ್ನಾನ ಹೇಮಾದ್ರಿ ಮೊದಲಾದ ಕ್ಷೇತ್ರ ಯಾತ್ರೆ ನೇಮ ಜಪತಪ ವ್ರತಾದಿಗಳ ಮಾಡಿದ ಪುಣ್ಯ ಈ ಮಹಾತ್ಮರ ಕಂಡ ಮಾತ್ರ ಸಮನಿಸಿತು 1 ಪರಿಯಂತ ಹರಿಮಹಿಮೆಗಳ ಸನ್ನುತಿಯಲೀ ಶ್ರುತಿಸ್ಮøತಿಗಳಿಂದ ಧನ್ಯರೆಂದೆನಿಸಿ ಮಹಿಯೊಳಗೆ ಪೂರಿತರಾದ ಪುಣ್ಯಚರಿತರ ದಿವ್ಯ ಪಾದವನೆ ನಾ ಕಂಡು 2 ಹೀನ ಜನರೇ ಬಹಳ ಕ್ಷೋಣಿಯ ಮೇಲೆ ಸು ಜ್ಞಾನಿಗಳು ದುರ್ಲಭರು ಕಲಿಯುಗದಲಿ ಆನತೇಷ್ಟಪ್ರದ ಜಗನ್ನಾಥ ವಿಠಲ ತಾನೆ ಕರೆತಂದು ತೋರಿ ಪುನೀತನ ಮಾಡ್ದ 3
--------------
ಜಗನ್ನಾಥದಾಸರು
ಕೃಷ್ಣಾ ಎಣಿಕ್ಯಾಕೈಯ್ಯ ನಮ್ಮ ಕೂಡ ತುಟ್ಟಿ ಮಿಸುಕಬಾರದು ನೋಡಬ್ಯಾಡ ಇಷ್ಟರಮೇಲೆ ತಿಳಿಯದ ನಾ ಮೂಢ 1 ಅಂದು ಏನಾಗಿತ್ತೈಯ್ಯ ನಿಮ್ಮ ಬುಧ್ದಿ ಬಂದು ಗೊಲ್ಲರೊಡನೆ ಕೂಡ್ಯಾಕಿದ್ದಿ ಸಂಧಿಸ್ಯವರುಚ್ಚಿಷ್ಟವೆಂದು ನೀ ಮೆದ್ದಿ ಇಂದು ಬ್ಯಾರೆ ನೋಡಲಿಕ್ಕೆ ಮರದ ಸುದ್ದಿ 2 ಕುಬ್ಜೆ ಕೂಡಿಕೊಂಬಾಗ ನೋಡಲಿಲ್ಲಿ ನಿಜಪದಕ ಯೋಗ್ಯಳ ಮಾಡಲಿಲ್ಲಿ ಅಜಮಿಳನೆಷ್ಟೆಂದು ಅರಿಯಲಿಲ್ಲಿ ಸೋಜಿಗೆಲ್ಲಾನು ನಿಮ್ಮದು ನಾ ಬಲ್ಲೆ 3 ಸುಮ್ಮನಿರಬೇಕೆನ್ನ ನೀ ಕೂಡಿಕೊಂಡು ನಿಮ್ಮ ಮಾತು ಒಡಿಯದು ಉದ್ದಂಡು ಇಮ್ಮನಾಗದಲ್ಲಿಂದ ಮನಗಂಡು ಬ್ರಹ್ಮಾನಂದ ಕೊಂಡಾಡುವೆ ಘನನುಂಡು 4 ಹಿಂದೆ ಭಕ್ತರೇನು ತಾಂ ಕೊಟ್ಟರಯ್ಯ ಇಂದು ನಾ ಕೊಡುವದೇನು ಹೇಳಯ್ಯ ಕಂದ ಮಹಿಪತಿ ನಾ ನಿಮ್ಮ ನಿಶ್ಚಯ ಎಂದು ಬಿಡದೆ ಸಲಹೊ ನೀ ನಮ್ಮಯ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳಿಪೇಳಮ್ಮ ನಮ್ಮಮ್ಮ ಲಕುಮೀ ಪ ಕೇಳಿಪೇಳೆ ಹರಿಯಲಿ ಪೋಗಿ ಬಹಳ ಸೋಕಿನವ ಗೋಪಿಬಾಲೀಯರಿಗೆ ಮೆಚ್ಚಿ ಬಹು ಜಾಲವ ಮಾಡಿದ ಕೃಷ್ಣನ ಅ.ಪ. ಪ್ರಳಯ ಕಾಲದಲ್ಲಿ ಆಲದೆಲೆ ಮೇಲೆ ಮಲಗಿಪ್ಪನುಒಲುಮಿಗಳ ಒಲುಮಿಕಾಂತ ಲಲನೆ ನೀನು ಕಮಲಾದೇವಿ 1 ನಿತ್ಯಮುಕ್ತೆ ನಿತ್ಯತೃಪ್ತೆ ನಿತ್ಯಾವಿಯೋಗಿನಿ ಹರಿಗೆಭೃತ್ಯನಲ್ಲೆ ನಾನು ಸ್ವಲ್ಪ ಚಿತ್ತವಿಟ್ಟು ನೋಡೆ ತಾಯಿ 2 ನಿನ್ನ ಹೊರತು ಆತನನ್ನು ತೋರುವರ ಕಾಣೆನಮ್ಮಸನ್ನುತಾಂಗಿ ಸಾರಸಾಕ್ಷಿ ಎನ್ನೊಳು ಕರುಣವ ಮಾಡೇ 3 ಎಲ್ಲ ದಿವಿಜರಲ್ಲಿ ಪೋಗೆ ಬಲುಬಗೆ ಪೇಳಿಕೊಂಡೆಫುಲ್ಲನಾಭನಲ್ಲಿ ಒಂದು ಸೊಲ್ಲನಾಡೋ ಶಕ್ತಿಯಿಲ್ಲ 4 ಪಾದ ಬಾಲ್ಯದಿಂದ ಸೇರಿದ್ದಕ್ಕೆನೀರಜಾಕ್ಷನನ್ನು ತೋರೆ ಭಾರಿ ಫಲವಾಯಿತೆಂಬೆ 5 ನಿಮ್ಮ ಮಾತು ಮೀರ ಶೂರ ನಮ್ಮ ಮಾರಜನಕ ಕೃಷ್ಣಅಮರ ತರುವ ಕಿತ್ತಿ ನಿಮ್ಮ ಮನೆಯೊಳ ಹಚ್ಚಿದನಂತೆ 6 ಸುಂದರಿ ಸೌಭಾಗ್ಯವಂತೆ ಮಂದಿರದೋಳಿಪ್ಪನನ್ನುಇಂದಿರೇಶನನ್ನು ತೋರೆ ನಂದ ಬಾಲ ಮಹಿಳೆ ಅಂಬಾ 7
--------------
ಇಂದಿರೇಶರು
ಕೇಳೆ ನಂದನ ಕಾಂತೆ ಹೇಳೆ ಮಗಗೆ ಬುದ್ದಿ ಬಾಲೆಯರನು ಇರಗೊಡನೆ ದಮ್ಮಯ್ಯ ಪ ಕುತ್ತಿಗೆಯೊಳಗಣ ಮುತ್ತಿನ ಸರಗಳ ಕಿತ್ತು ಹರಿದು ಚೆಲ್ಲಿ ಪೋದ ದಮ್ಮಯ್ಯ 1 ಕಟ್ಟಿದ ಕರುಗಳ ಬಿಟ್ಟು ಒಲೆಯ ಮೇಲೆ ಇಟ್ಟ ಪಾಲ್ಗಳನೆಲ್ಲ ಕುಡಿದ ಗೋಪಮ್ಮ 2 ಪಿಕ್ಕದೊಳಿಹ ಬೆಣ್ಣೆ ಚೊಕ್ಕನೆಲ್ಲವ ಮೆದ್ದು ಮರ್ಕಟಗಳಿಗಷ್ಟನಿತ್ತ ದಮ್ಮಯ್ಯ 3 ಬೇಡವೆಂದರೆ ಛಲಗೇಡಿ ಹಿಡಿದು ಎನ್ನ ನೋಡಿ ಮೋಸವ ಮಾಡಿ ಹೋದ ದಮ್ಮಯ್ಯ 4 ಮರುತಾತ್ಮಜ ಕೋಣೆ ಲಕ್ಷ್ಮೀರಮಣಗೊಮ್ಮೆ ನಾರಿ ನೀ ಬುದ್ದಿಯ ಹೇಳೆ ದಮ್ಮಯ್ಯ 5
--------------
ಕವಿ ಪರಮದೇವದಾಸರು
ಕೇಳೆ ಯಶೋದೆ ನಿನ್ನ ಮಗನ ಲೂಟಿಯಪ ತಾಳಲಾರೆವೆ ನಾವು ತರಳನ ದುಡುಕುಪೇಳಬಾರದೆ ಗೋಪಾಲಕೃಷ್ಣಗೆ ಬುದ್ಧಿಅಮ್ಮಾ-ಇದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕುಪಾಲು ಮೊಸರು ಬೆಣ್ಣೆಗಳ ಮೆದ್ದುಕೋಲಲಿ ನೀರ ಕೊಡಗಳೊಡೆದನೀಲವರ್ಣದ ದಿಟ್ಟ ನಿತ್ಯವೀ ಹೋರಾಟಬಾಲೆಯರಲ್ಲಿ ನೋಟ ಬಹಳ ಬಗೆಯಲ್ಲಿತಿಳಿದೆವೆಂದರೆ ಮೇಲೆ ಎಂಜಲುಗುಳಿ ಪೋದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನೊಳು ಜಲಕ್ರೀಡೆಯನಾಡಲುಚಿತ್ತಚೋರ ನಮ್ಮ ಸೀರೆಗಳೆಲ್ಲವಹೊತ್ತು ಕೊಂಡು ಮರವನೇರಿದಬತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಯುಕ್ತಿ ಬಹುಬಲ್ಲ ಹತ್ತಿಲಿ ಬಂದು ಕರವೆತ್ತಿ ಮುಗಿದರೆ ವಸ್ತ್ರ ಕೊಡುವೆನೆಂದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 2 ಸದ್ದು ಮಾಡದೆ ಸರಿ ಹೊತ್ತಿಲಿನಿದ್ದೆಗಣ್ಣಿಲಿ ನಾನಿರಲುಮುದ್ದು ಕೃಷ್ಣ ನಮ್ಮ ಮನೆಯವರಂತೆಮುದದಿಂದಲೆನ್ನನು ತಾ ಕೂಡಿದಎದ್ದು ನೋಡುವೆನಲ್ಲ ಆಹ ಏನೆಂಬುವರೆಲ್ಲಬುದ್ಧಿ ಮೋಸ ಬಂತಲ್ಲ ಪೊದ್ದಿ ಸಲ್ಲಿಸಿದೆಬುದ್ಧಿವಂತನೆಂದರೆ ಪರಿಹಾಸ್ಯ ಮಾಡಿ ನಗುವಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 3
--------------
ವ್ಯಾಸರಾಯರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ