ಒಟ್ಟು 974 ಕಡೆಗಳಲ್ಲಿ , 95 ದಾಸರು , 804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಜ್ಞಾನಿಯ ಕಾಣಲು ಧಗದಲ್ಯನಾಗುವ ಶಾಸ್ತ್ರಿಜ್ಞಾನಿಗಳು ಶಾಸ್ತ್ರಿಗೇನ ಮಾಡಿದರೋಏನಾದರೂ ಪೂರ್ವದ್ವೇಷವಿತ್ತಾದರೂತಾನು ನಿಂದಿಸಿ ಕುಲಸಹ ಕೆಡಿಸುವನು ಶಾಸ್ತ್ರಿ ಪ ದನವ ಕಾಣುವ ವದನವರಿಹುತಲಿಹದನವ ಕಾಯ್ದವಗಿಂತ ಅತ್ತಿತ್ತ ಕಡೆ ಶಾಸ್ತ್ರಿಘನ ವೇದಾಂತವನೋದಿ ಜ್ಞಾನಿಗಳ ನರರೆಂಬಎನಿತುಗರ್ವ ಅಹಮ್ಮಲಿ ತನ್ನ ತಿಳಿಯ ಶಾಸ್ತ್ರಿ 1 ಓದೋದು ವೇದಾಂತ ಓದುವನಾರೆಂದು ಅರಿಯಓದಿಹೆನೆಂಬ ಗರ್ವವು ತಲೆಗೆ ಹತ್ತಿಓದಿಯೇ ಅಲ್ಲಿ ಗೆದ್ದೆ, ಇಲ್ಲಿ ಗೆದ್ದೆ ನೆಂಬಅದನೊಬ್ಬನೆಲ್ಲೋ ಇರೆ ಆರಗೆದ್ದನು ಶಾಸ್ತ್ರಿ 2 ಸಾಧುಗಳಿಗೆ ವಂದಿಸಲಿಲ್ಲ ಸಾಧುಗಳ ಮನೆ ಹೋಗಲಿಲ್ಲಸಾಧುವು ಮುಂದೆ ಹಾಯಲು ಕುಳಿತು ಏಳದಲಿಹನುಸಾಧುವ ಕಂಡು ನಡೆಯೇನು ನುಡಿಯೇನು ಎಂಬಸಾಧುವ ಭಜಿಪಗೆ ಬಹಿಷ್ಕಾರೆಂದನು ಶಾಸ್ತ್ರಿ 3 ನಾನು ಅರಿಯೆ ನಿನಗೆ ಗತಿಯೇನು ಮತಿಯೇನುನಾನು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆನಾನು ನನ್ಹೆಸರೇನು ಆರು ತಿಳಿಸುವರೆಂಬಜ್ಞಾನವಿಲ್ಲದೆ ಘಟಪದಿ ಮೆರೆದಿಹ ಶಾಸ್ತ್ರಿ 4 ನಾನೇ ಶ್ರೇಷ್ಠನೆಂದೂ ನಾನೇ ದೊಡ್ಡವನೆಂದೂನಾನು ಆರಿಹೆನೆಂಬ ಎಚ್ಚರವದು ಹೋಗಿತಾನಾದ ಚಿದಾನಂದರಾದ ಸತ್ಪುರುಷಏನೇನೋ ನಿಂದೆಯ ಮಾಡಿ ನರಕಕ್ಕಿಳಿಸುವ ಶಾಸ್ತ್ರಿ 5
--------------
ಚಿದಾನಂದ ಅವಧೂತರು
ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ತಂದೇ ಕಮಲಾಪತಿಯೇ ಕಂದನ ಬಂಧನವಳಿದ ಹರಿಯೇ ಪ ನಂದನ ಕಂದ ಗೋವಿಂದ ಮುರಾರೇ ಅ.ಪ ಜವನ ಬಾಧೆಗೆ ಪಕ್ಕಾದೆ ನಿನ್ನ ಚರಣವೆ ಗತಿಯೆಂದು ಬಂದೆ 1 ಶರಣರು ಕರೆಯಲು ಬರುವೆ ರಂಗ ತ್ವರಿತದಿ ಪಾಪವ ಕಳೆವೆ ಪರಮದಯಾಕರ ಮಣಿವೆ ಎನ್ನ ಮೊರೆಯ ಲಾಲಿಸದಿರೆ ತರವೆ 2 ಮಂಗಳದಾಯಕ ನೀನೆ | ತ್ರಿಲೋಕಂಗಳ ಸಲಹುವ ನೀನೇ ಮಾಂಗಿರಿರಂಗನು ನೀನೇ | ನಿನ್ನ ದಾಸರ ದಾಸನು ನಾನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನ್ನ ತಿಳಿಯದವನೇಕೆ ಇನ್ನವನನು ಸುಡಬೇಕು ಪ ವೇದಾರ್ಥಿಯು ತಾನಾಗಿ ವಾದಿಸುತಿಹನೀ ಗೂಗೆಓದಿದ ಓದದು ವ್ಯರ್ಥ ಒಳ್ಳಿತಾಗಿ ಗಳಿಸಿದನರ್ಥ 1 ಆಚಾರದಿ ಒದ್ದಾಡಿ ಅಡವಿಯ ಹಿಡಿದನು ಖೋಡಿಕುಚಾಳಿಯೆ ವ್ಯವಹಾರ ಕುಮಂತ್ರಕೆ ಬಲು ಧೀರ 2 ಮಾನ್ಯರ ಕೋಪದಿ ಝಡಿವಾ ಅವಮಾನ್ಯರ ಕೊಂಡಾಡಿ ನುಡಿವಾಜ್ಞಾನದ ಹಾದಿಯ ಕಾಣ ಗೋಣಿಯ ಹೊರುವ ಕೋಣ3 ಮುಕ್ತಿಯ ತಿಳಿಯಲು ಬಾರ ಮುಂದಿನ ಭವಿತವ ನೋಡಭಕ್ತಿಯೆಂಬುದಿಲ್ಲ ಈ ಕತ್ತೆಗೇನು ಸಲ್ಲ 4 ಕಲ್ಲನೆ ದೇವರು ಎಂಬ ಕಡಮೆಯಲಿಲ್ಲವು ಎಂಬಒಳ್ಳಿತಲ್ಲವು ಅವನಿರವು ಒಲಿದವನೇ ಚಿದಾನಂದ ಗುರುವು 5
--------------
ಚಿದಾನಂದ ಅವಧೂತರು
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ತಪ್ಪುವುದೇ ಬ್ರಹ್ಮಕೆ ಗುರಿಯು ನೀನುತಪ್ಪಿದರು ತಾನು ತಪ್ಪದು ಅರಿಯೋ ನೀನು ಪ ಕರವ ಭೂಮಿಗೆ ಬಡಿಯಲು ಪೆಟ್ಟಹೊರಗನೆ ಮಾಡುವುದು ಆವ ಪರಿಪರಿಪೂರ್ಣ ಬ್ರಹ್ಮ ತುಂಬಿರಲು ನೀನುಪರವೆಂದು ಕಾಣೆ ಸಂಶಯವೆ ನಿಜವಿರಲು 1 ಗುಡ್ಡಕೆ ಗುರಿಯ ನೋಡಿದೆ ಅದುಅಡ್ಡಬಿಟ್ಟು ಬೇರೆ ನಿಲ್ಲುವುದೆ ನೋಡೆಖಡ್ಡಿಕೊಳ್ಳದು ಬ್ರಹ್ಮವಾಡೆ ನಿನ್ನದೊಡ್ಡ ಬ್ರಹ್ಮವೆನಲು ಸಂಶಯ ನೋಡೆ 2 ಆಕಾಶ ನೋಡುವುದೇ ತಾನು ಆಆಕಾಶ ನೋಡಲು ನೂಕು ನುಗ್ಗೇನುಏಕ ಚಿದಾನಂದ ನೀನು ಜಗದೇಕ ಬ್ರಹ್ಮವೆಂದು ನಿನ್ನ ನೀನೇ ಕಾಣ 3
--------------
ಚಿದಾನಂದ ಅವಧೂತರು
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಮರಸ ಇನ್ನು ಕಾಂಬುವದೆಂದುಪನ್ನಗಾತನ ವಾಹನಾ ಪ ಕಣ್ಣು ಕಾಣದ ಹೀನ ಮಾನವನು ನಾನಾದೆಉನ್ನಂತ ಗುಣ ಪೂರ್ಣ ಕಾಯೋ ಯೆನ್ನ ಅ.ಪ. ಕರಿ ಮಕರಿ ಸೆಣಸ್ಯಾಡಿಹರುಷ ಕುಗ್ಗುತ ಮರುಕದೀ |ಹರಿ ಹರಿ ಹರಿ ಎಂದು | ಕರಿರಾಜ ಮೊರೆಯಿಡಲುತ್ವರದಿಂದ ನೀಯವನ | ಎಡರ ಹರಿಸಿದೆ ದೇವ 1 ಕುರುರಾಜ ಸಭೆಯಲಿ | ತರುಳೆ ದ್ರೌಪದಿ ಸೀರೆಕೌರವಾನುಜ ಸೆಳೆಯಲೂ |ನಾರಿಮಣಿ ನಿಜಪತಿಗಳೈ | ವರಲಿ ಮನ ತಿಳಿದುಹಿರಿಯ ಸಭಿಕರಿಗರುಹಲೂ | ವರ ವೃದ್ಧ ಭೀಷ್ಮಾದಿ |ಬಹುಮಂದಿ ಇರುತ ಕಾಲವ ಕಳೆಯಲು |ಆರಾದರೂ ಬಂದು ಪಾರು ಮಾಡಿದರೇನೊಶೌರಿ ನಿನ್ನನು ಕರೆಯೆ | ಪಾರು ಮಾಡಿದ ದೇವ 2 ಪಾರುಗಾಣಿಸೊ ಎನ್ನ | ಮೂರು ವಿಧ ತಾಪಗಳಮಾರ ಜನಕನೆ ಪ್ರಾರ್ಥಿಪೇ ದೂರ ಮಾಡಿಸೊ ಹರಿಯೆ | ಮೂರು ಗುಣದಿಂದೆನ್ನಬಾರಿ ಬಾರಿಗು ಬೇಡುವೆ |ದುರುಳ ತತ್ವರ ಕಾರ್ಯ | ಕಡೆಗೈಸಿ ಶ್ರೀ ಹರಿಯೆಸುರರ ಸಹಕಾರ ನೀಡೊ |ಗುರುಗಳಂತರ್ಯಾಮಿ | ಗುರು ಗೋವಿಂದ ವಿಠಲನೆಕರುಣದಲಿ ತವ ಚರಣ | ಸರಸಿಜವ ತೋರೋ 3
--------------
ಗುರುಗೋವಿಂದವಿಠಲರು
ತಾರಕ ನೀನೇ ಹರಿ ಮುರಾರಿ ಪ ಉದಕದಿ ನಕ್ರನು ಪದವೆಳೆಯಲು ನೊಂದು ಮದಗಜ ಹರಿಯನ್ನೆ ಮುದದಿ ಪೊರೆದ ಕಾರಣ 1 ತುಂಬಿದ ಸಭೆಯಲಿ ಮಾನ ಕೊಂಬುದ ಕೇಳಿ ನಂಬಿದ ದ್ರೌಪದಿಗಂಬರವಿತ್ತ ಕಾರಣ 2 ಶ್ರೀದವಿಠ್ಠಲ ನಿನ್ನ ಪಾದಪೂಜಿಸಲರಿಯೆ ಆದರದಿ ಅಜಾಮಿಳನನ ಕಾಯ್ದ ಕಾರಣ 3
--------------
ಶ್ರೀದವಿಠಲರು
ತಾರಿಸೆನ್ನ ನೀ ಭವದಿಂದಲಿ ಪ ನಾನಾ ಯೋನಿಯಲಿ ಬಹು ಹೀನ ಜನುಮವನು | ನೀ ನೆವೆ ಕಳೆಯಲು ಕರ್ತನು | ಏನು ಅರಿಯದ ನಾ ಮೂಢನು 1 ಭಜಕರ ಪ್ರೀಯಾ ಕೃಪಾಬ್ಧಿಯು | ನಿಜವರಿಲಿಲ್ಲಾ ಜ್ಞಾನಿಯು 2 ಮೆರೆಯುತಲಿದೆ ನಿಮ್ಮ ಕೀರ್ತಿ | ಸಾರಥಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾವಲ್ಲಿ ನೆನೆಯಲು ದಶಮತಿ ಗುರುಗಳು ನಾವಿಲ್ಲಿ ಸುಖಿಗಳು ಸುಲಭದಿಂದ ಪ ಪೂರತಿ ಮನದೊಳಗಾಗುವಂತೆ ತಾರಾ ರಮಣನು ತಾ ಮ್ಯಾಲೆ ಉದಿಸಲು ವಾರಿಧಿ ಹರುಷದಿ ಉಕ್ಕುವಂತೆ 1 ತರಣಿ ಕಿರಣ ಪಸರಿಸೆ ಸರೋವರದಲ್ಲಿ ಸರಸಿಜ ವಿಕಸಿತವಾಗುವಂತೆ ವಾರಿದ ಮ್ಯಾಲಿರೆ ತಾ ನೋಡಿ ಮಯೂರ ಮೀರಿ ಹರುಷದಿ ಕುಣಿ ಕುಣಿದಾಡುವಂತೆ2 ವ್ಯಾಸ ದೇವರ ಕೂಡ ಮಾತುಗಳಾಡುವಾಗ ಶುಭ ನಮಗೆ ವಾಸುದೇವವಿಠಲ ಪಾಶದಿಂದಾಡುವಾಗ ವಾಸ ಅಕ್ಷಯವೆನ್ನಿ ಕೃಷ್ಣೆಯಂತೆ 3
--------------
ವ್ಯಾಸತತ್ವಜ್ಞದಾಸರು
ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ಪ ಹೆಚ್ಚಿದ ತಮನೆಂಬ ದನುಜ ವೇದವ ಕದ್ದುಬಚ್ಚಿಟ್ಟು ನೀರೊಳು ಮುಳುಗಿರಲುಮಚ್ಚ ರೂಪದಿಂದ ಪೋಗಿ ಅವನ ಕೊಂದಅಚ್ಯುತರಾಯನೆಂಬ ಮಾಸಾಳಮ್ಮ1 ಕೂರ್ಮ ರೂಪಿನಿಂದೆತ್ತಿದ ಗೋ-ವಿಂದನೆಂಬುವ ಮಾಸಾಳಮ್ಮ2 ವರಾಹ ರೂಪಿ ಮಾಸಾಳಮ್ಮ 3 ಲೇಸು ತಪ್ಪಿದನೆಂದು ಹಿರಣ್ಯಕ ತನಯನಘಾಸಿ ಮಾಡಲು, ಕಂಬ ಒಡೆದುದಿಸಿರೋಷದಿ ದೈತ್ಯನ ಕರುಳ ಕಿತ್ತ ನರಕೇಸರಿ ರೂಪಿನ ಮಾಸಾಳಮ್ಮ 4 ಆ ಮಹಾಸಿರಿಯ ಗರ್ವದಿ ಮುಂದರಿಯದೆಭೂಮಿಯನು ಬಲಿ ತಾನಾಳುತಿರೆನೇಮಿಸಿ ಎರಡೇ ಹೆಜ್ಜೆಯೊಳಳಕೊಂಡವಾಮನ ರೂಪಿನ ಮಾಸಾಳಮ್ಮ 5 ಕಾಮಧೇನುವಿಗಾಗಿ ಕಾರ್ತವೀರ್ಯಾರ್ಜುನಆ ಮಹಾಮುನಿಯ ಪ್ರಾಣಕೆ ಮುನಿಯೆತಾಮಸವಿಲ್ಲದೆ ಕ್ಷತ್ರಿಯರ ಸಂಹರಿಸಿದರಾಮ ಭಾರ್ಗವನೆಂಬ ಮಾಸಾಳಮ್ಮ 6 ಜನಕ ಸುತೆಯನು ಕದ್ದೊಯ್ಯಲು ಲಂಕೆಗೆಗಣಿತಾತೀತ ಶರಧಿಯ ಕಟ್ಟಿಘನ ಕೋಪದಿ ದಶಿಶಿರನ ಕತ್ತರಿಸಿದಇನಕುಲ ರಾಮನೆಂಬ ಮಾಸಾಳಮ್ಮ 7 ದೇವಕಿ ಬಸುರೊಳು ಬಂದು ಗೋಕುಲದಿಆವ ಕಾವ ಗೊಲ್ಲರ ಸಲಹಿಮಾವನ ಕೊಂದು ಮತ್ತೈವರ ಸಲಹಿದದೇವ ಕೃಷ್ಣನೆಂಬ ಮಾಸಾಳಮ್ಮ8 ಪತಿವ್ರತೆಯರ ವ್ರತವಳಿಯಬೇಕೆನುತಲಿಅತಿಶಯದಿ ತ್ರಿಪುರದ ಸ್ತ್ರೀಯರನುತ ಬೌದ್ಧ ರೂಪದಿ ಬಹು ಭಂಗಪಡಿಸಿದರತಿಪತಿಪಿತನೆಂಬ ಮಾಸಾಳಮ್ಮ 9 ಖುಲ್ಲ ಮನುಜರನು ಕೊಲ್ಲಬೇಕೆನುತಲಿಭಲ್ಲೆ ಹಿಡಿದು ತುರಗವನೇರಿಅಲ್ಲಲ್ಲೆ ಸೊಲ್ಲಡಗಿಸಿ ವಲ್ಲಭನೆನಿಸಿದಬಲ್ಲಿದ ಕಲ್ಕಿಯೆಂಬ ಮಾಸಾಳಮ್ಮ 10 ಮಂಗಳ ಮಹಿಮ ಭುಜಂಗ ಶಯನ ಕಾ-ಳಿಂಗ ಮರ್ದನ ದೇವೋತ್ತುಂಗಅಂಗಜಪಿತ ನೆಲೆಯಾದಿಕೇಶವ ಅಂತ-ರಂಗದೊಳಿರುವ ಮಾಸಾಳಮ್ಮ 11
--------------
ಕನಕದಾಸ
ತಿರುಪೆಗಾರರಯ್ಯಾ ನಾವು ತಿಳಿದುಕೊಳ್ಳಿರೀ ಜೀಯಾ ನೀವು ಪ ತಿರುಪೆಗಾರರನು ತಿರಸ್ಕರಿಸದಿರಿ ತಿರುಪಿಲ್ಲದಿದ್ದರೆ ತೀರಹುದು ಅ.ಪ ತಿರುಪಿಲ್ಲವೇ ಧಗಡಿ ತಿರುಪು ವಡವೆಗಳು | ತಿರುಪುಹೂಜಿಗಳು ತಿರುಪು ಭರಣಿಗಳು | ತಿರುಪು ರಕ್ಷಣಿಯು 1 ವಾಲೆ ಏನಾಯಿತು ಅರಿತು ನೋಡದೇ ಮೂರ್ಖರಾಗದಿರೀ 2 ಗೊಣಗಬೇಡಿರಿ ನೀವೂ ಹಣವು ನಿಮಗು ನಮಗುಂಟು ವಿಚಾರಿಸೆ ಹಣವಿಲ್ಲದ ನರ ಹೆಣಕಿಂತ ಕಡಿಮೆ 3 ರಾಶಿಯೊಳೊಂದು ಹಿಡಿ | ತೆಗೆಯಲು ಹ್ರಾಸವೇನೋ ನೋಡಿ ಮೋಸವೆ ಬರುವುದು ಓಸುಜನರೇ ಕೇಳಿ 4 ನಿಮ್ಮ ದೊರೆಗಾಳು ನಮ್ಮ ಗುರುವಲ್ಲವೇ ನಿಮಗೆ ನಾವಾಳಾದರೂ ದಯೆಯಿಲ್ಲವೇ 5 ಧೀರನು ಬಹುಬಲ್ಲ ಭೋಗದಿಂದಲೆ ರೋಗ ಬರುವುದು ತ್ಯಾಗದಿಂದಲೆ ಯೋಗ ಒದಗುವುದು6 ಸತಿಗೆ ಒಡವೆಯಿಟ್ಟು | ಕಳೆಯಲು ಹಿತವೇ ನಿಮಗಷ್ಟು ಅತಿಶಯ ಭೋಗಗಳಪೇಕ್ಷಿಸುವಿರೈ 7 ಮರವೆಯೆ ಅತಿ ಕಷ್ಟ ಮರವೆಯೆ ದುಃಖವು ಮರವೆಯೆ ನರಕವು ಹರಿ ಕೃಪೆಪಡೆದು ಅರಿವು ಸಂಪಾದಿಸಿ 8 ತಿರುಕನು ಈಶ್ವರನೂ | ಇಂದ್ರಗಾಗಿ ತಿರುಪುಹಾಕಿರುವ ತ್ರಿಲೋಕಗಳಿಗೂ9
--------------
ಗುರುರಾಮವಿಠಲ