ಒಟ್ಟು 430 ಕಡೆಗಳಲ್ಲಿ , 80 ದಾಸರು , 383 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಭಯಂಕರ ಪ ಶಂಕರ ತ್ವತ್ಪದ ಪಂಕಜದಲಿ ಮನ ಶಂಕೆಯಿಲ್ಲದೆ ಕೊಟ್ಟು ಕಿಂಕರನನು ಪೊರೆ 1 ಮೃತ್ಯುಪಾಶಕೆ ಸಿಕ್ಕಿ ತತ್ತರಿಸುತಲಿದ್ದ ಭಕ್ತನ ಸಲಹಿದ ಮೃತ್ಯುಂಜಯ ಸಲಹೆನ್ನ 2 ವಿಷವು ಆವರಿಸಲು ತ್ರಿದಶರು ಬೇಡಲು ನಸುನಗುಗಲಿ ವಿಷ ಧರಿಸಿದ ಸದಾಶಿವ 3 ಶಿವಶಿವಾವಲ್ಲಭ ಭವಾಭವ ಪ್ರಭವನೆ ಭುವನ ಪವಿತ್ರನೆ ಭವಹರ ಸಲಹೆನ್ನ 4 ಅಂಬಿಕನಾಥನೆ ನಂಬಿದೆ ನಿನ್ನನೆ ಶಂಭುವೆ ಭಕ್ತನ ಬೆಂಬಿಡದೆಲೆ ಪೊರೆ 5 ಅಷ್ಟ ವಿಭೂತದ ಅಷ್ಟಮೂರ್ತಿಯೆ ಪದ ಮುಟ್ಟಿ ಭಜಿಪ ಮನ ಕೊಟ್ಟು ರಕ್ಷಿಸು 6 ದಿಗಂಬರ ದಯಾಕರ ಭಗೀರಥ ಹಿತಕರ ಅಘಹರ ಮೃಗಧರ ಹಗರಣಗೊಳಿಸಿದೆ 7 ವಿಘ್ನಪ ಜನಕನೆ ಅಜ್ಞತೆ ಬಿಡಿಸಯ್ಯ ಸುಜ್ಞನೆ ಭವಾಂಬುಧಿ ಮಗ್ನನನುದ್ಧರಿಸಯ್ 8 ಲಕುಮಿಕಾಂತನ ಪ್ರಿಯಸÀಖನೆ ಶ್ರೀಕಂಠನೆಭಕುತಿ ಭಾಗ್ಯವನೀಯೊ ಶಕುತ ಬಿಡದೆ ಕಾಯೊ 9
--------------
ಲಕ್ಷ್ಮೀನಾರಯಣರಾಯರು
ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ಪ ಶಂಕೆಯಿಲ್ಲದೆ ಪಾದಪಂಕಜ ಪೂಜಿಸಲೂಮಂಕುಮತಿಯ ಕಳೆವಾ ಅಕಳಂಕನೆಂದೆನಿಸುವಾ ಅ.ಪ. ಕಲಿಯುಗದೊಳು ಕಲಿ ಬಾಧೆಗೆ ಒಳಗಾಗಿ ಬಹುವಿಧವಾಗಿಒಲಿಸದೆ ವರಗುರು ಹಿರಿಯರ ನಿಂದಿಸುತಾ ವೇಳೆಗಳೆಯುತಾಗಳಿಸಿದೆ ಪಾಪವ ಚರಿಸುತ ಧರೆಯೊಳಗೆ ತೊಳಲುವೆ ತಮದೊಳಗೇಘಳಿಲನೆ ರಕ್ಷಿಸೊ ಬಾಲಕರನು ದೇವಾ ಎನ್ನಯ ಕುಲದೈವಾ 1 ಸಾಧನೆಗೋಸುಗ ಮೇದಿನಿಗೆ ಬಂದು ಸಾಧಿಸದೆ ಬಂದುಶೋಧಿಸುವೆನು ಪುರುಷಾರ್ಥದ ಮಾರ್ಗವನು ಮೋದವ ಪೊಂದುವೆನುಭೇದವ ತಿಳಿಯದೆ ಹಾದಿಯ ತಪ್ಪಿರುವೆ ಖೇದವ ಪುಡುತಿರುವೆಸಾದರದಲಿ ತವ ಪಾದದಿ ಧ್ಯಾನವನು ಒದಗಿಸಬೇಕಿನ್ನು 2 ಮಂದ ತಾಪ ಬಿಡಿಸೊ ಕರುಣವ ತೋರಿಸೊಆರು ಮೂರು ವಿಧ ಭಕ್ತಿಯನೆ ಈಯೋ ಕರಪಿಡಿದು ಕಾಯೋಸಾರುವ ಭಕುತರ ಧೀರ ವೃಂದದೊಳಗೆ ಸೇರಿಸೊ ಜವದೊಳಗೆಧಾರುಣೀಶ ತಂದೆವರದವಿಠಲನೆ ಶರಣೆಂಬೆನು ನಾನೇ 3
--------------
ಸಿರಿಗುರುತಂದೆವರದವಿಠಲರು
ಭವ ಸಾಗರಕೆ ಸ್ವಲ್ಪ ಪ ಬಿಟ್ಟು ವೇಗದಿಂದ ಸಾಧ್ಯ ಮಾಡಿಕೊಂಡು ಮೆಟ್ಟಿಕೆಯಿಂದಲಿ ದಾಟಿ ಪೋದರು ಜಗ ಜಟ್ಟಿ ದಾಸರು ತಮಗೆ ಸುಲಭವಾದದು ಯನಗೆ ಇಟ್ಟುಪೋದರೆಯಿಂದು ಗುಟ್ಟು ತೋರುತಲಿದೆ ಸಾಧಾರಣವಲ್ಲ 1 ಕೊಟ್ಟಿಗೆ ಮೇಲುಪ್ಪರಿಗೆಯಾಗುವದೆ ಹುಟ್ಟಾರಭ್ಯವಾಗಿ ಮಂದನಾಗಿದ್ದವಗೆ ಮಟ್ಟಯಿಲ್ಲದೆ ಬುದ್ಧಿ ಬರುವದೆಂತೊ ಧಿಟ್ಟಳಿ ಮಹಿಮ ಶಿರಿ ವಿಜಯವಿಠಲ ಮನ ಮುಟ್ಟಿ ಭಜಿಸಿದವ ದಾಸರ ಕರುಣವೆನ್ನಿ2
--------------
ವಿಜಯದಾಸ
ಭವರೋಗ ಹರವಾದೊಂದೌಷಧಿತ್ರೈಭುವನ ವಿಖ್ಯಾತವಾಗಿದೆ ಬುದ್ಧಿವಂತರಿಗೆ ಪ ಚತುರ ವೇದಶಾಸ್ತ್ರ ಮೇಣಷ್ಟಾದಶವಾದಸ್ಮøತಿತರ್ಕ ಪೌರಾಣದಡವಿಯಲ್ಲಿಮತಿವಂತ ಮುನಿಗಳಾರಿಸಿ ತಂದು ತಾವುಪ್ರತಿಗಂಡು ಲೋಕಕ್ಕೆ ಹಿತವಾಗಿ ತೋರುವ 1 ಅಡವಿಯೊಳರಸಿ ಅಗಿಯಲಿಲ್ಲ ತಂದುಇಡಿದು ಚೂರ್ಣವಮಾಡಿ ಒಣಗಿಸಲಿಲ್ಲಕುಡಿದು ಕಹಿಖಾರವೆಂದೆನಲಿಲ್ಲ ನೋಡೆಬಡವ ಬಲ್ಲಿದರೆಲ್ಲರಿಗೆ ಸಾಧ್ಯವಾಗಿಪ್ಪ 2 ಪಥ್ಯಪಾನದ ನೇಮಗಳಿಲ್ಲ ಹೋಗಿಸ್ತೋತ್ರ ಮಾಡಿ ವೈದ್ಯನ ಬೇಡಲಿಲ್ಲನಿತ್ಯಸೇವಿಸೆ ಆಲಸ್ಯಗಳಿಲ್ಲ ನೋಡೆಮತ್ಯಾರ ಮಾತ ನಡೆಸುವ ಬಗೆಯಿಲ್ಲ3 ರಸಪಾಷಾಣಾದಿ ಮೂಲಿಕೆಯನು ತಂದುಕುಶಲದಿ ಶೋಧಿಪ ಕೋಟಲೆಯಿಲ್ಲಮಿಸುಣಿ ವರ್ಣದ ಭಸ್ಮ ತೈಲಗಳೆಂತೆಂಬಫಸಣೆಯಿಲ್ಲದೆ ಗಾಂಧರ್ವರು ಸೇವಿಪ 4 ಒಮ್ಮೆ ಸೇವಿಸೆ ಜನ್ಮ ಜನ್ಮಂಗಳ ದು-ಷ್ಕರ್ಮ ಸವೆದು ಸಕಲಾನಂದವೀವಘಮ್ಮನೆ ಕೃಷ್ಣರಾಯನ ಪುರದಲಿ ಬಿಡದÉಮ್ಮ ರಕ್ಷಿಪ ಮುದ್ದುಕೃಷ್ಣ ಕೃಷ್ಣಯೆಂಬ 5
--------------
ವ್ಯಾಸರಾಯರು
ಭಾಗ್ಯವಂತನು ಇನ್ನು ಯಾರಯ್ಯ ಪ. ಯೋಗ್ಯ ವೈಷ್ಣವಕುಲದ ಭಾಗವತನಲ್ಲದೆ ಅ.ಪ. ಚತುರನೆನಿಸಿ ಲಕ್ಷ ಮನೆಮನೆ ತಿರುಗಿದೆಚತುರಾನನನಾ ಮಾತು ಅನುಸರಿಸಿದೆಸತು ಚಿತು ಆನಂದ ಆತ್ಮ ಹರಿಸ-ರ್ವೋತ್ತಮನ ದಾಸರದಾಸ ಎಂಬುವನಲ್ಲದೆ 1 ತಾರÀತಮ್ಯ ಪಂಚಭೇದವನೆ ತಿಳಿದು ಶ್ರೀಮಾರುತನ ಮತಗಳೇ ಹಾರೈಸುತಕರ್ಮ ವಂಚನೆಯಿಲ್ಲದನುದಿನದಿ ಮಾಡುತಚರಿಸುತ ಸಂಚಿತಾಗಾಮಿ ಕಳೆವವನಲ್ಲದೆÉ2 ಪತಿತಪಾವನ ಶ್ರೀಹರಿಗುರುಗಳನು ಮೋದದಿಕ್ಷಿತಿಯೊಳಗೆ ಭಜನೆಯೆ ಧನವೆನ್ನುತಅತಿಶಯದಿ ಶೇಷಾದ್ರಿ ಹಯವದನನ್ನ ನೆನೆನೆನೆದುಪ್ರೀತಿಯಿಂದಲಿ ಭಜಿಸುವವನಲ್ಲದೆ 3
--------------
ವಾದಿರಾಜ
ಭಾಗ್ಯವಂತರಾರು ಪೇಳಿರೈ ಸದ್ಭಕ್ತರೆಲ್ಲರು ಪ ಭಾಗ್ಯವೊ ವೈರಾಗ್ಯವೊ ನಿಮ್ಮ ಯೋಗ್ಯತಾನುಸಾರ ಶ್ಲಾಘ್ಯವೆಂದರಿತವರು ಅ.ಪ ಧನಿಕನು ಪರರನು ಗಣಿಸದೆ ತ- ಹಣವುಯಿಲ್ಲದ ಸುಗುಣವಂತನು ತಾ ವನಜಾಕ್ಷನನೆನದೂ ಅನುದಿನದಿ ಸುಖಿಸುವನು1 ಭಾಗವತ ಜನ ವಿ- ರಾಗ ವೈಭೋಗದಿ ತ್ಯಾಗಿಗಳೆನಿಪರು 2 ತಾಮನೆಯೆನಿಸಿ ಧಾಮರಾಗಿಹರ್ ಕ್ಷೇಮವುಳ್ಳ ಸಾಧುಗಳು ನಿರತ ಗುರು- ರಾಮವಿಠಲನ ನಿಷ್ಕಾಮದಿ ಭಜಿಸುವರು 3
--------------
ಗುರುರಾಮವಿಠಲ
ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮಂಗಳಂ ಜಯ ಮಂಗಳಂ ಮಂಗಳಂ ಬೆಟ್ಟದೊಡೆಯ ಹರಿಗೆ ಜಯ ಪ. ಮಂಗಳಂ ಕೊಳಲನೂದುವ ದೊರೆಗೆ ಮಂಗಳಂ ಶ್ರೀ ಶ್ರೀನಿವಾಸ ವೆಂಕಟನಿಗೆ ಮಂಗಳಂ ಶೇಷಾಚಲ ಹರಿಗೆ ಅ.ಪ. ವೈಕುಂಠದಲಿ ಬಂದವಗೆ ಆ ಕೋಲಗಿರಿಯಲಿ ನಿಂದವಗೆ ತಾ ಕಾಸುಕಾಸಿಗೆ ಬಡ್ಡಿಯ ಕೊಳುತಲಿ ಬೇಕಾದ ವರಗಳ ಕೊಡುವನಿಗೆ 1 ಬುತ್ತಿ ಪೊಂಗಲುಗಳ ಮಾರುವಗೆ ಮತ್ತೆ ದರ್ಶನ ಕೊಡದೆ ಒದೆಸುವಗೆ ನಿತ್ಯ ಸ್ವಾಮಿಪುಷ್ಕರಣಿ ತೀರದಿ ನಿಂತು ಭೃತ್ಯವರ್ಗಗಳನು ಪೊರೆವವಗೆ 2 ಶಂಖ ಚಕ್ರ ವರ ಹಸ್ತನಿಗೆ ಶಂಕೆಯಿಲ್ಲದೆ ಅಭಯ ಕೊಡುವನಿಗೆ ಶಂಕರಮಿತ್ರಗೆ ಪರಮಪವಿತ್ರಗೆ ಸಂಕೋಲೆ ಹನುಮಗ್ಹಾಕಿಸಿದವಗೆ 3 ವೃಂದಾವನದಲಿ ಮೆರೆದವಗೆ ಮಂದಗಮನೆಯರ ಮೋಹಿಪಗೆ ಚಂದದ ಪೊಂಗೊಳಲೂದಿ ಗೋಪಿಯರ ಕಾಯ್ದ ಗೋಪಿ ಕಂದನಿಗೆ 4 ನಾಗರಾಜನ ಗಿರಿ ನಿಲಯನಿಗೆ ಯೋಗಿಗಳಿಗೆ ನಿಲುಕದ ಹರಿಗೆ ಸಾಗರನಿಲಯ ಗೋಪಾಲಕೃಷ್ಣವಿಠ್ಠಲ ಭೋಗಿಶಯನ ಲಕ್ಷ್ಮೀಪತಿಗೆ 5
--------------
ಅಂಬಾಬಾಯಿ
ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ
ಮಂಗಳಾಂಗ ಮನ್ನಿಸು ತಪ್ಪನು ರಂಗನಾಥ ರಕ್ಷಿಸೈ ತಂದೆ ಯೆನ್ನನು ಪ ಅಮಿತ ಕಮಲ ರವಿತನಾಗದ ಮನುಜನೇಕೆ1 ಕಣ್ಣು ಇಲ್ಲದ ರೂಪು ಯಾಕೆ | ರಂಗನಾಥ ಹೊನ್ನು ಇಲ್ಲದ ಬಾಳು ಯಾತಕೆ | ಮುನ್ನ ಮೂಗು ಇಲ್ಲದ ಮೊಗವು ಮಣ್ಣು ತಿಂದು ಹೋದರೇನು ಅಣ್ಣ ನಿನ್ನ ಭಕುತಿ ಇಲ್ಲದ ಸಣ್ಣ ಮನುಜ ಸತ್ತರೇನು 2 ದಾನವಿಲ್ಲದ ಧನವಿದೇತಕೆ | ರಂಗನಾಥ ಜ್ಞಾನವಿಲ್ಲದ ವಿದ್ಯೆ ಯಾತಕೆ ಆಣೆಯಿಲ್ಲದ ಅರಸು ತಾನು ಅಡವಿಪಾಲು ಆದರೇನು ದೀನಬಂಧು ನಿನ್ನ ನಂಬದ ಮಾನಹೀನ ಮನುಜನೇಕೆ 3 ಮಕ್ಕಳಿಲ್ಲದ ಮನೆಯು ಯಾತಕೆ | ರಂಗನಾಥ ಅಕ್ಕರಿಲ್ಲದ ಊಟ ಯಾತಕೆ ಸೊಕ್ಕಿ ನಡೆವ ಬಂಟನೇಕೆ ಮಿಕ್ಕು ಮೀರ್ವ ಶಿಷ್ಯನೇಕೆ ರಕ್ಕಸಾರಿ ನಿನ್ನ ಸೇರದ ಸೊಕ್ಕು ನರ ಜನ್ಮವೇಕೆ ? 4 ಕಾಕು ಮಾಡಿಯೆ ವೈಕುಂಠ ನಗರದೊಡೆಯ ನಾರಸಿಂಹ ಏಕಭಕ್ತಿಯಿಂದಲಿರುವೆ ಏಕೆ ಕೈಯ ಬಿಡುವೆ ದೊರೆಯೆ 5
--------------
ಅನ್ಯದಾಸರು
ಮಟಮಾಯ ಮಟಮಾಯ ದಿಟ್ಟಿಸಿ ನೋಡೆಲೊ ಪ ದುಷ್ಟ ಸಂಸಾರವ ಕುಟ್ಟಿಕುಟ್ಟಿಕೊಂ ದೆಷ್ಟು ಮಾಡಿದರು ಕಟ್ಟಕಡೆಗೆಯಿದು ಅ.ಪ ಕೋಟಿಧನವ ನೀಟಾಗಿ ಗಳಿಸಲೇನು ಸಾಟಿಯಿಲ್ಲದ ಸಂಪತ್ತು ಇರ್ದರೇನು ಕಾಟುಮಾಡಿ ಯಮಗೂಟ ಒದಗಲಾಗ ದಾಟಿ ಹೋಗಬೇಕು ಅಷ್ಟು ಸಂಪದ ಬಿಟ್ಟು 1 ಆನೆಕುದುರೆ ಒಂಟೆ ವಾಹನವಿರಲು ಏನು ನಾನಾಸಿರಿಯು ಮಾನ್ಯ ಮಿರಾಸಿಗಿರಲೇನು ತ್ರಾಣಗುಂಡಿಸಿ ಯಮ ಪ್ರಾಣ ಸೆಳೆಯುವಾಗ ನಾನಾಭಾಗ್ಯ ಬಿಟ್ಟು ತಾನೆ ಹೋಗಬೇಕು 2 ಮಾನಪಾನದಿ ತಾನೆ ಹಿರಿಯನೆನಿಸಲೇನು ನಾನಾಪೊಡವಿಗೋರ್ವ ದಣಿಯಾಗಾಳಿದರೇನು ಪ್ರಾಣೇಶ ಶ್ರೀರಾಮಧ್ಯಾನವೊಂದಿಲ್ಲದಿರೆ ಏನು ಗಳಿಸಿದ್ದೆಲ್ಲ ಹಾನಿಯೆನಿಪುದೆಲೋ 3
--------------
ರಾಮದಾಸರು
ಮಧ್ವಮತ ಪೊಂದದೆ ಬದುಕಿದವನೂ ಹದ್ದು ಕಾಗಿ ಬದುಕಿ ಕಾಲವನು ಕಳೆದಂತೆ ಪ ಸಕಲೇಂದ್ರಿಯಗಳು ಇದ್ದು ನಯನೇಂದ್ರಿಯ ಇಲ್ಲದಂಅ.ಪ. ಫಲಪುಷ್ಪಯಿಲ್ಲದಾ ಗಿಡಬಳ್ಳಿ ಇದ್ದಂತೆ ಮಳೆಯಿಲ್ಲದಾ ಬೆಳಸು ನೋಡಿದಂತೆ ಚಲುವನಾದಡೆ ಏನು ಗುಣಹೀನನಾದಂತೆ ಖಳರು ನಿತ್ಯಾಕರ್ಮ ಚರಿಸಿದಂತೆ 1 ಉತ್ತಮರ ಕೂಡದಾ ಯಾತ್ರೆ ಮಾಡಿದಂತೆ ಕತ್ತೆ ಪರಿಮಳ ಪೊತ್ತು ತಿರುಗಿದಂತೆ ಮೃತ್ತಿಕೆ ಶೌಚ ಇಲ್ಲದೆ ಆಚಾರ ಮಾಡಿದಂತೆ ಸತ್ತ ಹೆಣಕ್ಕೆ ವಸ್ತ್ರ ಶೃಂಗರಿಸಿದಂತೆ2 ನಿಶಿಕರ ಇಲ್ಲದಾ ತಾರೆಗಳು ಇದ್ದಂತೆ ವಸುಧಿಪತಿಯಿಲ್ಲದಾ ರಾಜ್ಯದಂತೆ ಹಸಿವೆ ಇಲ್ಲದವನು ಮಧುರನ್ನ ಉಂಡಂತೆ ಹಸುಗಳಿಲ್ಲದ ಮನೆ ವೊಪ್ಪಿದಂತೆ 3 ತಾರತಮ್ಯಗಳಿಲ್ಲದ ವೇದ ಓದಿದಂತೆ ಪುರಂದರದಾಸರು ಪೇಳಿದಂತೆ ಸಿರಿ ವಿಜಯವಿಠ್ಠಲನ ಕಾರುಣ್ಯ ಪಡಿಯದವ ಅಧಮನಂತೆ 4
--------------
ವಿಜಯದಾಸ
ಮಧ್ವಮತವ ಪೊಂದದವನ ಭಕುತಿಯಾತಕೆ ಪ ಊಧ್ರ್ವಪುಂಡ್ರ ತಿದ್ದದವನ ಕರ್ಮವ್ಯಾತಕೆಅ.ಪ ದಾನವನ್ನು ಮಾಡದವನ ದ್ರವ್ಯವ್ಯಾತಕೆ | ಸ್ನಾನವನ್ನು ಮಾಡದವನ ಮೌನವ್ಯಾತಕೆ | ಮಾನಿನಿಯು ಇಲ್ಲದವನ ಬದುಕು ಯಾತಕೆ | ಧ್ಯಾನವನ್ನು ಅರಿಯದವನ ಪೂಜೆ ಯಾತಕೆ 1 ವಂಶವನ್ನುದ್ಧರಿಸದಂಥ ಮಗನು ಯಾತಕೆ | ಹಿಂಸೆಯನ್ನು ಪಡಿಸುವಂಥ ಅರಸು ಯಾತಕೆ || ಸಂಸಾರವನು ಒಲ್ಲದಂಥ ಸತಿಯು ಯಾತಕೆ | ಕಂಸಾರಿಯನು ತಿಳಿಯದಂಥ ಜ್ಞಾನವ್ಯಾತಕೆ 2 ಬಂಧು ಬಳಗ ಬಿಟ್ಟು ಉಂಬ ನೆಂಟರ್ಯಾತಕೆ | ಕಂದರನ್ನು ಮಾರುತಿಪ್ಪ ತಂದೆಯಾತಕೆ || ಬಂದ ಅತಿಥಿಗನ್ನವಿಕ್ಕದ ಸದನವ್ಯಾತಕೆ | ನಿಂದೆಗಳು ಮಾಡುತಿಹನಾಚಾರವ್ಯಾತಕೆ 3 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆ | ಹಿರಿಯರನ್ನು ಸಾಕದವನ ಪುಣ್ಯವ್ಯಾತಕೆ || ಚರಿಸಿ ತೀರ್ಥಯಾತ್ರೆ ಮಾಡದ ದೇಹವ್ಯಾತಕೆ | ವರ-ಪ್ರಸಾದವೀಯದಂಥ ದೇವರ್ಯಾತಕೆ4 ಏಕಾದಶಿಯ ಮಾಡದವನ ವ್ರತವು ಯಾತಕೆ | ಏಕಮನಸು ಇಲ್ಲದವನ ನಡತೆ ಯಾತಕೆ || ಸಾಕಿದವನ ಕೊಲ್ಲುವಂಥ ಭಂಟನ್ಯಾತಕೆ | ಲೋಕವಾರ್ತೆ ಬಿಡದವನ ಜಪವು ಯಾತಕೆ 5 ಭಾಷೆ ಬದ್ಧವಿಲ್ಲದವನ ಮಾತು ಯಾತಕೆ | ಕಾಸುವೀಸÀಕೆ ಬಡಿದಾಡುವ ಅನುಜರ್ಯಾತಕೆ || ಲೇಸು ಹೊಲ್ಲೆಹ ನೋಡದಂಥ ಗೆಳೆಯನ್ಯಾತಕೆ | ಆಸೆಯನ್ನು ಬಿಡದ ಸನ್ಯಾಸವ್ಯಾತಕೆ 6 ತಪ್ತ ಮುದ್ರೆಯಿಲ್ಲದವನ ಜನ್ಮವ್ಯಾತಕೆ | ಗುಪ್ತದಲ್ಲಿ ನಡೆಯದಿಪ್ಪ ದಾಸನ್ಯಾತಕೆ || ಆಪ್ತಬಂಧು ವಿಜಯವಿಠ್ಠಲನ ಶ್ರೀ ಚರಣದಿ | ಕ್ಲುಪ್ತ ಮೀರದೆ ನಡೆದ ಮೇಲೆ ನರಕವ್ಯಾತಕೆ 7
--------------
ವಿಜಯದಾಸ
ಮರಳುತನವು ಬಂದು ಎನ್ನ ಕೊರಳ ಕೊಯ್ವುದು ದುರುಳನಾಗಿ ಇರುಳು ಹಗಲು ಒರಲುತಿಪ್ಪುದು ಪ ಮಾರಿಯನ್ನು ಮನೆಗೆ ತಂದು ತೋರಿಯಿಡುವುದು ಚೋರರನ್ನು ತಂದು ತನಗೆ ಸೇರಿ ಕೊಡುವುದು ದೂರುಬಪ್ಪ ದಾರಿಯನ್ನು ಸೇರಿ ನಡೆವುದು ಸಾರಿ ಪರನಾರಿಯನ್ನು ಸೂರೆಗೊಂಬುದು 1 ಹೆಂಡತಿಯ ಸುಲಿದು ತನ್ನ ಮಿಂಡಿಗಿಡುವುದು ಕಂಡು ಕಂಡು ಹರುಷ ತಾಳಿ ಕೊಂಡುಯಿರುವುದು ಭಂಡತನದಿ ಕೊಂದು ದೂರ ಕೊಂಡು ಪೋಪುದು ಉಂಡು ಉಡುವ ಹರುಷ ಸರಿಯ ಮಿಂಡಿಗಪ್ಪುದು 2 ಸೂಳೆಯನ್ನು ಕಂಡು ಹರುಷ ತಾಳಿಯಿರುವುದು ವೇಳೆಗವಳು ಬಾರದಿರಲು ಚೀ[ರಿ]1ಯಳುವುದು ಹಾಳು ಬದುಕಿನೊಳಗೆ ಬಹಳ ಚಾಳು ತೋರ್ಪುದು ಖೂಳರನ್ನು ಕರೆದು ಅನ್ನ ಪಾಲನೆರೆವುದು 3 ಇಲಿಯು ಹೆಚ್ಚಿತೆಂದು ಮನೆಗೆ ಉರಿಯನಿಡುವುದು ಚಳಿಯು ಹೋಯಿತೆಂದು ಮನದಿ ನಲಿವುತಿರುವುದು ಬಿಳಿದು ಬೂದಿಯನ್ನು ಕೊಂಡು ಹೊಳೆಗೆ ಬಿಡುವುದು ಸ್ಥಳವ ಕೆಡಿಸಿ ಕುಲವನೆಲ್ಲ ಬಳಕೆ ತೀರ್ಪುದು 4 ಹೆತ್ತ ಮಗನ ತೊರೆದು ತಾನು ದತ್ತ ತಪ್ಪುದು ಸತ್ತ ಎಮ್ಮೆ ಹಾಲು ಹತ್ತು ಸೇರಿಗಳವುದು ಕತ್ತಿಯನ್ನು ಬಿಸುಟು ಒರೆಯ ಹತ್ತಿರಿಡುವುದು ಶತ್ರುವಾಗ ಬಂದ ತನ್ನ ಒತ್ತಿ ನಿಲುವುದು 5 ಗಾಳವಿಲ್ಲದೆ ಮೀನುಗಳ ಮೇಲೆ ತೆಗೆವುದು ಕೋಲುಯಿಲ್ಲದ ಕೊಲೆಗಳೆನ್ನ ಮೇಲೆ ಬೀಳ್ವುದು ಸಾಲವನ್ನು ಕೊಟ್ಟವರು ಸಾಯಲೆಂಬುದು ಕಾಲನೊಳು ಕೈಯ ಕಟ್ಟಿ ಶೂಲೆ ತಪ್ಪುದು 6 ಸರ್ವತಂತ್ರವೆಲ್ಲ ಹರಿಯ ಹತ್ತಿರಿಡುವುದು ಗರ್ವವನ್ನು ತೋರಲವನ ಸುತ್ತಿ ಬರುವುದು ಇರುವೆಯಂತೆ ಮೈಯನೆಲ್ಲ ಕುತ್ತಿ ತರಿವುದು ತೋರ ವರಾಹತಿಮ್ಮಪ್ಪನ ಎತ್ತಿ ನೆನೆವುದು 7
--------------
ವರಹತಿಮ್ಮಪ್ಪ
ಮಲಗು ಮಲಗಯ್ಯ ಹನುಮ ಕಲಿಭಂಜನ ಭೀಮ ಜಲಧಿ ಅಲವಬೋಧನಾಮಾ ಜೋ ಜೋ ಪ ತ್ರೇತೆಯಲಿ ರಾಮದೂತನಾಗಿ ನೀ ಬಂದು ಭೀತಿಯಿಲ್ಲದೆ ಲಂಕೆಯ ದಹಿಸಿದೆಯೊ ಅಂದು ಸೀತೆಯಿತ್ತಂಥ ಚೂಡಾಮಣಿಯನು ತಂದು ಪ್ರೀತಿಪಡಿಸಿದೆ ರಾಮನ ನೀ ದಯಾಸಿಂಧು 1 ದ್ವಾಪರಾಂತದಲಿ ಭೀಮನಾಗಿ ನೀ ಬಂದೆ ಪಾಪಿ ಕೀಚಕ ದುಶ್ಶಾಸನಾದ್ಯರ ಕೊಂದೆ ಸಿರಿ ಕೃಷ್ಣನ ಪಾದಕೆರಗಿ ನಿಂದೆ ಭಾಪು ಭಾಪುರೆಂದೆನಿಸಿಕೊಂಡೆ ಅವನಿಂದೆ 2 ನಾನೆ ದೇವರೆಂಬ ಮತವನು ಹೆಮ್ಮೆಯಿಂದ ದಾನವರೀ ಕಲಿಯುಗದಲಿ ಪೊಗಳೆ ಮುದದಿಂದ ನೀನವತರಿಸಿ ಮಧ್ವಮುನಿ ಪೆಸರಿನಿಂದ ಹೀನ ಮತವ ಮುರಿದೆಯೊ ವಾಗ್ಭಾಣಗಳಿಂದ 3 ಏಕಾದ್ಯಶ ಕರ್ಮಗಳ ಶ್ರೀ ಹರಿಗರ್ಪಿಸಿ ಆತನನು ನೀ ಬಹು ಸಂತೋಷವನುಪಡಿಸಿ ಜಾತರಹಿತನಾಗೆನುತ ಆಶಿಷವ ವಹಿಸಿ ವಾತಸುತ ಕುಳಿತಿಹೆ ಯಂತ್ರೋದ್ಧಾರನೆನಿಸಿ 4 ಕಂಗಳನು ಮುಚ್ಚಿ ಜಪಮಾಲೆಯನು ತಿರುಗಿಸುತ ರಂಗೇಶವಿಠಲನ ತಾನದೊಳು ಸ್ಮರಿಸುತ ಹಿಂಗೇಕೆ ಕುಳಿತಿಹೆ ಮಲಗೇಳಯ್ಯ ದಾತ ತುಂಗ ವಿಕ್ರಮ ನೀನು ತ್ರಿಭುವನದಿ ಪ್ರಖ್ಯಾತ 5
--------------
ರಂಗೇಶವಿಠಲದಾಸರು