ಒಟ್ಟು 588 ಕಡೆಗಳಲ್ಲಿ , 71 ದಾಸರು , 470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆಚ್ಚಬೇಡಿ ಪತಿತನಾರಿಯ | ಕಚ್ಚುವ ಹಾವಿನ ಸಂಗವೆನ್ನಿ || ಪ ಮೆಚ್ಚುಗೊಳಿಪಳು ಗುಣಿಸಿ ನೋಡಿ ನಿಚ್ಚದಲಿ ಚಿತ್ತ ಚಂಚಲಳಾಗಿ ಅ.ಪ ಪರಿಯಂತ | ಯಾವದನಿತು ಮೊಗವನೆತ್ತದಲೆ || ಎವೆ ತೆಗೆದು ದಿಕ್ಕುಗಳು ನೋಡದೆ | ಅವನಿಗೆ ಬಾಗಿ ನಡೆಯುತ || ತವರು ಮನೆಯವರನು ಹಳಿದು | ನವÀನವ ಪ್ರಾವರ್ತನವನು ತೋರುತ || ಅವಗುಣಂಗಳಿಲ್ಲ ದೋಷಾದಲಿ | ಲವಕಾಲವನು ಕಳೆವ ನಾರಿಯ 1 ಪ್ರಾಯಾವಸ್ಥೆ ಬಂದು ಪ್ರಾಪ್ತವಾಗಲು | ಆಯುತಾಕ್ಷಿಗಳ ತಿರುಹಿ ಮೆಲ್ಲನೆ || ಬಾಯಲ್ಲಿ ಒಂದೊಂದು ಕ್ರಮಾಸಾರದಿ | ನೋಯ ನೋಯದಂತೆ ವಚನವ || ದಾಯಿಗಳಂತೆ ಮತ್ಸರಿಸಿ ಬಯ್ಯದೆ | ಮಾಯಾವಿ ಕಲ್ಪಿಸಿ ಮುಸಿಮುಸಿ ನಗೆ || ಆಯಕೆ ತಗಲಿ ಕಂಡ ಜನರಿಗೆ | ಘಾಯ ಕಾಣಿಸದಂತೆ ಮಾಳ್ಪಳ 2 ಅತ್ತೆ ಮಾವಗೆ ಅತ್ಯಂತವಾಗಿ ತಾನು | ಪ್ರತಿ ಉತ್ತರ ಪೇಳಲು ಅಂಜಿ ಅಂಜಿದಂತೆ || ಉತ್ತಮರ ಮನೋರಥವ ಕೆಡಿಸಿ | ಅತ್ತಿಗಿ ನಾದುನಿ ಮಿಗಿಲಾದವರೆಲ್ಲ || ಕತ್ತೆ ನಾಯಿ ನರಿಯೆಂಬೊ ಸೊಲ್ಲಲ್ಲಾದೆ | ಎತ್ತಲಾದರು ವಂಚಿಸಿ ಗಂಡನ್ನ || ತನ್ನಂತೆ ಮಾಡಿಕೊಂಡು ಹಗಲಿರುಳು ಥೈ- | ತಥ್ಥಾ ಎಂದಾಡಿಸಿ ಕುಣಿಸುವ ಸತಿಯಳ 3 ಕೊಂಡ ತೆರದಿ | ಪತಿಯ ಸಮಯ ನೋಡದೆ ತಾನು || ಸಥೆಯಿಂದಲಿ ಸಂಸಾರದೊಳಗಿದ್ದು | ಸುತರ ಪಡೆದು ಹಮ್ಮಿಲಿ || ಕಥನವೆಬ್ಬಿಸಿ ಗಂಡನ್ನ ಅಡವಿ | ಪಥವ ಹಿಡಿಸಿ ಹಣದಗೋಸುಗ || ಸತತ ಮನೆಯೊಳಗಿದ್ದ ಬದುಕು | ಮಿತಿಯಿಲ್ಲದೆ ಭಕ್ಷಿಸುವ ನಾರಿಯ 4 ಒಲಿಪಗೆ ನೀವು ಮೋಸಗೊಂಡು | ಒಲಿಯದಿರಿ ಸ್ತ್ರೀಯರಿಗೆ ಸೋತು || ಕಲಿಗೆ ಪ್ರಥಮ ಪಟ್ಟದ ಗದ್ದಿಗೆ | ಸುಲಭವಲ್ಲವೋ ಸುಖವಿಲ್ಲಾ || ಕೆಲಕಾಲ ಮಹಾ ಕಾತರದಿಂದಲಿ | ವಳಗಾಗದಿರು ಒಳಿತು ಪೇಳುವೆ || ಜಲಜಾಕ್ಷ ವಿಜಯವಿಠ್ಠಲನ್ನ ನಂಬಿರೋ | ನಂಬಿರೋ ನಂಬಿರೋ ಚತುರರು 5
--------------
ವಿಜಯದಾಸ
ನೆರೆ ಪ್ರಚಂಡ ಬರತಕದ ನಿರಗೊಡದ ಮನ್ಮಥನ ಪರಿಯನೆಲ್ಲ ಕೇಳು ಕೆಳದಿ ಸುರಪುರದ ಕರಿವರದ ಗರುಹಿದಡೆ ಮುತ್ತಿನ ಸರದ ಹಾರವ ನೀವೆ ಕೆಳದೀ ಪ ಸಸಿ ಬಿಂಬ ದೆಸೆ ತುಂಬಿ ಪಸರಿಸಿತೆಂಬುದನು ಪಿಕ ಕುಸುಮಾಂಬರಗೆ ಪೇಳೆ ಕೆಳದೀ ಮಸರೆಳೆಯದಸು ಬಿಳಿ ಯೆಸಳು ಕೇದಗೆಯಲರ ಹಸಮಾಡಿದನು ನಲಿದು ಕೇಳದಿ 1 ಅಸಿನನೆಯ ಹೊಸಮನೆಯ ಬಿಸುಗಣೆಯೆಂದಳೆಸೆಯೆಮಣಿಸಲುತರಹರಿಸುವುದುಕೆಳದಿ ಬಿಸಜಾಕ್ಷನ ನುಶಿಕ್ಷಣದಿ ತನು ಉಚ್ಚಿಕಡುಸುಡುತಲಿದೆ ನೀ ಸಾಕ್ಷಿ ಕೆಳದೀ 2 ತಂಬೆಲರ ಮುಂಬೆಲರ ಪಂಬೆಲರನುಳಿದು ಮರಿ- ದುಂಬಿಗಳ ಸಂಭ್ರಮದಿ ಕೇಳದ ಕೆಳದೀ ಬೆಂಬಿಡದೆ ಇಂಬುಗೊಂಡಂಬುಜಾಸ್ತ್ರವ ತುಡುಕಿ 3 ಪೊಂಬಲಕೆ ಕೊಳಗಾದೆ ಕೆಳದೀ ಪಣೆ ಯೆಂಬುವಗೆ ಕುಂಬಿನಿಯೊಳೇ ಮಣಿಹ- ದೆಂಬುದನು ಕೊಡಬಹುದೆ ಕೆಳದೀ 4 ನಂಬಿದಳು ಕಂಬನಿಯ ತುಂಬಿರಲು ಸಖಿಯರೊಳು ಗಾಂಭೀರ್ಯತನವಹುದೇ ಕೆಳದಿ ಕಂತುಶರವಂತಿರದೆಂತೊರೆಯಬಹುದೆನಗೆ ಚಿಂತೆ ತಲ್ಲಣ ಕೆಳದೀ 5 ದಂತಿ ನಡೆಯಂತೆ ಬೆಡಗಿಂತವಳ ಕಾಣೆ ಗುಣ ವಂತೆ ವಿಧಾನ್ಯಾಯದಲಿ ಸಂತೈಸಿ ಯೆನ್ನ ನೆರೆವಂತೆ ಸುರಪುರದ ಲಕ್ಷ್ಮೀ ಕಾಂತನಿಗೆ ಬಿನ್ನಯಿಸು ಕೆಳದೀ 6
--------------
ಕವಿ ಲಕ್ಷ್ಮೀಶ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೋಡು ನೋಡು ನೋಡಯ್ಯ ರಂಗ ಮಾಡು ದಯ ಕರುಣಾಂತರಂಗ ಪ ಖೋಡಿಸಂಸಾರದ ಪೀಡೆಯ ಕಡೆಹಾ ಕರ ಭವಭಂಗ ಅ.ಪ ಮಡದಿಮಕ್ಕಳುಯೆಂಬ ಕಡುತೊಡರಿನ ಬಳ್ಳಿ ತೊಡರಿಕೊಂಡೆನ್ನನು ಕಡುವಿಧ ನೋಯಿಸುವುದೊಡೆಯನೆ ಕಡಿ ಗಡ1 ಸಜ್ಜಾಗಿಲ್ಲೊಲ್ಲೆ ನಾನು ಪ್ರಪಂಚವಿದು ಹೆಜ್ಜೆ ಹೆಜ್ಜೆಗೆ ಕಷ್ಟ ಗರ್ಜಲ್ಲೊರ್ಜಿಸು ಸುಜನರಜ್ಜನೆ 2 ಪ್ರೇಮದಿಂ ಕಂದನ ಪಾಮರಮನಸಿನ ಕಾಮಿತವಳುಕಿಸಿ ಕ್ಷೇಮವ ಪಾಲಿಸು ಸ್ವಾಮಿ ಶ್ರೀ ರಾಮನೆ 3
--------------
ರಾಮದಾಸರು
ಪಕ್ಕಿವಾಹನ ದಯಸಿಂದು ನೀ ಎನ್ನ ಚಿಕ್ಕ ಮನತುರಗವನ್ನು ನೀನೆ ತಿದ್ದೊ ಪ ಕತ್ತಲೆಯೊಳು ಬಲು ಕಾಲಕಳದೆಯಾಗಿ ಮತ್ತೆ ಬೆಳಕು ಕಂಡು ಬೆದರುತಿದೆ ಕತ್ತಲಂಜಿಕೆ ತೋರಿ ಬೆಳಕಿನ ರುಚಿಯನು ಇತ್ತು ಕುಶಲಗತಿ ಕಲಿಸಯ್ಯ 1 ಹಿಂದಕ್ಕೆ ತಿರಗದೆ ತಾನಾಗಿ ಬ್ಯಾಗನೆ ಮುಂದಕೆ ನಡೆದು ಪರರ ಬೆಳಸುಗಳ ಒಂದನ್ನ ಬಯಸದೆ ಪದ್ಧತಿ ಬಿಡದಂತೆ ಒಂದಾಗಿ ಗಮ್ಯಸ್ಥಾನವ ಸೇರಿಸಯ್ಯ 2 ವಿಧಿನಿಷೇಧಗಳೆಂಬ ಗಿಲಕಿಯ ದನಿಗೈಸಿ ಹೆದರಿಸೊ ಸನ್ಯಾಯ ಕಶದಿಂದಲೀ ಮುದದಿ ಭಕುತಿ ಗುಣವ ಕೊರಳು ಕಟ್ಟಿ ಬಿಗಿದು ಪದುಮಾಕ್ಷ ನಿನ್ನ ಪಾದವ ಸ್ತುತಿಸಯ್ಯ 3 ಉತ್ತಮ ಗುಣವುಳ್ಳ ವಾಜಿಯಿದನೆ ಮಾಡಿ ವಸ್ತು ಎನ್ನದು ಮಾತ್ರವೆಂದೆನಿಸಿ ಚಿತ್ತಕೆ ಬಂದಂತೆ ಇದಿರಾರು ನೀ ನಿತ್ಯ ಹತ್ತಿ ಹರಿಸುವನು ಸನ್ಮತವೆನಗೆ 4 ಲೇಸಾದಾ ಹಯಗಳೊಳು ನೀನೆವೆ ಜಗದೊಳು ಲೇಸು ಮಾಡಿದೆಯೆಂಬ ವಾರ್ತಿ ಕೇಳಿ ವಾಸುದೇವವಿಠಲ ನಿನಗೆ ಬಿನ್ನೈಸಿದೆ ದಾಸನ ಮಾತು ಲಾಲಿಸೆ ಕಾಯೋ ಸರ್ವೇಶ5
--------------
ವ್ಯಾಸತತ್ವಜ್ಞದಾಸರು
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪಚ್ಚೆಯ ಬಂದೀಗ ಶ್ರೀ ಪುಲಿಗಿರಿ ಪಚ್ಚೆಯ ನೋಡಿ ಬೇಗ ಪ ಸಚ್ಚಿದಾನಂದರೂಪಚ್ಚರಿಯಾದಂಥ ಮುಚ್ಚುಮರೆಯಿಲ್ಲದಚ್ಚುತನೆಂಬುವ ಅ.ಪ ಕೈಗೆ ಸಿಕ್ಕುವುದಲ್ಲವೈ ತಕ್ಕಡಿಯಲ್ಲಿ ತೂಗಿ ನೋಡುವುದುಲ್ಲ ವೈ ಯೋಗಿ ಹೃದಯದಲ್ಲಿ ಭಾಗವತರೊಳನುರಾಗದಿ ಮೆರೆಯುವ 1 ಬೆಲೆಯ ಕಟ್ಟುವದಲ್ಲವೈ ಈ ಪಚ್ಚೆಯ ನೆಲೆಯ ಕಂಡವರಿಲ್ಲವೈ ನಲಿದು ಧ್ಯಾನಿಪರಿಗೆ ಒಲಿದು ತೋರುವ ದಿವ್ಯ ಜಲಧರವರ್ಣದ ಜಲಜಾಕ್ಷನೆಂಬುವ 2 ಧರೆಯೊಳುತ್ತಮವಾಗಿಹ ಶ್ರೀ ಪುಲಿಗಿರಿಯೆಂಬ ಗಿರಿಯೊಳು ನೆಲೆಯಾಗಿಹ ಚರಣವ ನಂಬಿದ ಶರಣರ ಪೊರೆಯುವ ವರದವಿಠಲ ದೊರೆ ವರದೆನಂದೆಸರಾದ3
--------------
ವೆಂಕಟವರದಾರ್ಯರು
ಪಡಿ ಇನಿಯನ ವಶದಿ ಮನಸಿಜನಯ್ಯನ ದಯದಿಂದ ಬಾಲೆ ಪ ಮನೆಗೆಲಸಗಳನು ದಿನಗೈಯುತ ಬಲು ವಿನಯ ಸೌಶೀಲ್ಯದಿ ವನಿತೆಯರೊಳು ನೀ 1 ಪತಿಯನು ಪರದೇವತೆಯೆಂಬುವ ಮಹಾ ಮತಿಯಲಿ ಸೇವಿಸಿ ಸುತರನು ಪಡೆದು ನೀ 2 ಗುರುಜನರಿಗೆ ಸದಾಶಿರಬಾಗುತ ಬಹು ಸರಸದಿ ಸದ್ಗುಣಾಭರಣಗಳಿಂದ ನೀ 3 ರತಿಪತಿ ಪಿತನಿಗೆ ಪ್ರತಿಮೆಗಳೆನ್ನುತ ಅತಿಥಿಗಳನು ಸಂತತ ಸತ್ಕರಿಸುತ 4 ಗಿರಿಜೆಯ ಪೂಜೆಯನು ನಿರುತದಿಗೈಯುತ ಸಿರಿಕಾರ್ಪರ ನರಹರಿಯನು ಸ್ಮರಿಸುತ 5
--------------
ಕಾರ್ಪರ ನರಹರಿದಾಸರು
ಪತಿತನ್ನ ಪಾವನ ಮಾಡುವ ರಂಗಾ | ಗತಿಯಿಲ್ಲದವರಿಗೆ ಗತಿಯೇ ನೀನೇ ಗತಿ ಪ ನಿಂದಿರಲು ನೆರಳಿಲ್ಲ ನಿಲ್ಲಲು ನೆಲೆಯಿಲ್ಲ | ತಂದಿ-ತಾಯಿಯೆಂಬೋರು ಮೊದಲೆ ಇಲ್ಲ|| ಒಂದು ಸಂಗತಿ ಇಲ್ಲ ಪಡದಾನಂದನರಿಲ್ಲ | ಬಂದು-ಬಳಗದವರು ಆರಿಲ್ಲ ಹರಿಯೇ 1 ಕುಡಿಯಲು ನೀರಿಲ್ಲ ಕಾಲಿಡಲು ಇಂಬಿಲ್ಲಾ | ಪಿಡಿವೆನೆಂದರೆ ಮೇಲೆ ಕೊಡೆಯಿಲ್ಲ || ಒಡನೆ ಬರುವರಾರಿಲ್ಲ ಸಂಗಡದಿ | ಆಡಿವೆನೆಂದರೆ ವಳ್ಳಿಗಾಯಿತೊ ಹರಿಯೆ 2 ಧೈರ್ಯ ಕೊಡುವವರು ಇಲ್ಲ ದಾತರೊಬ್ಬರಿಲ್ಲ | ಕಾರ್ಯವೆಂದರೆ ಕೇಳಿ ಅರಿವರಿಲ್ಲಾ || ವೀರ್ಯವು ಎನಗಿಲ್ಲ ವಸಿಷ್ಠನು ನಾನಲ್ಲ | ಧೈರ್ಯವು ದು:ಖವು ವೆಗ್ಗಳಿಸಿತೋ ಹರಿಯೆ 3 ತನ್ನವರು ತನಗಿಲ್ಲ ತಾಳು ಎಂಬುವರಿಲ್ಲ | ಸಣ್ಣ ಮನಸ್ಸು ಅಲ್ಲದೇ ಘನವು ಯಿಲ್ಲ || ಕರ್ಮ ಬೆನ್ನ ತೊಲಗಲಿಲ್ಲ | ಇನ್ನು ಜನ್ಮ ವ್ಯರ್ಥವಾಯಿತೊ ಹರಿಯೇ 4 ಪಾದ | ಸಾಕಾರ ಮಾಡಿಕೊಂಬುವರ ಸಂಗಡ || ಶ್ರೀಕಾಂತ ವೆಂಕಟ ವಿಜಯವಿಠ್ಠಲರೇಯ | ನೀ ಕರುಣಸಿದರೆ ಸಕಲಾರ್ಥವಹುದು 5
--------------
ವಿಜಯದಾಸ
ಪತಿಯಿಂದಲೆ ಸದ್ಗಿತಿಯೆಂಬುವಳು ಅತಿಮತಿಯೆನ್ನುವಳು ನಮ್ಮ ಶ್ರೀದೇವಿ ಪ ಕ್ಷಿತಿಯೊಳು ತನ್ನಯ ಪತಿಯೊಳು ಸಲ್ಲದೆ ಇತರವನೆಣಿಪಳೆ ಮೂದೇವಿ ಅ.ಪ ಗಂಡನು ಪುಂಡನು ಕುರುಡನು ಕುಂಟನು ಭಂಡಾಂಗನೆಯಂ ಕಲಹಿಪಳೆ ಮೂದೇವಿ 1 ಅತ್ತೆಮಾವನ ಹೇಳಿಕೆಗೆ ಪ್ರ ತ್ಯುತ್ತರಳಲ್ಲ ಶ್ರೀದೇವಿ ಕತ್ತೆಯಂತೆ ತಾ ಬಗಳುವ ಕಳ್ಳ ಚಿತ್ತಿನಿ ಹವುದೆಲೊ ಮೂದೇವಿ 2 ಅರಿಸಿನ ಕುಂಕುಮ ಹಣೆಯೊಳಗಿಡುವಳು ಅಡಿಯಾ ಗಿರುವಳು ಶ್ರೀದೇವಿ ಅನು- ಕರಿಸಲು ಬಾರದೆ ಕಳವಳಗೊಳುವಳು ಕರಠೆಕಮಾನಳು ಮೂದೇವೀ 3 ಶಿರಬಾಗಿ ತನ್ನರಸನ ಸೇವೆಯ ಹರುಷದೊಳಿರುಪವಳೆ ಶ್ರೀದೇವೀ ಕರಸಲು ಬಾರದೆ ಕಳವಳಗೊಳುವಳು ಕರಟಕ ತನುವಳು ಮೂದೇವೀ 4 ಇರುವ ಅತಿಥಿ ಅಭ್ಯಾಗತಗಳಿಗುಪ ಚರಿಸುವಳೆ ನಮ್ಮ ಶ್ರೀದೇವಿ ಗುರುವು ತುಲಶಿರಾಮಯೆಂದೆನ್ನುತ ಭಜಿಸದೆ ಯಿರುವಳೆ ಮೂದೇವೀ 5
--------------
ಚನ್ನಪಟ್ಟಣದ ಅಹೋಬಲದಾಸರು
ಪದವ ಕಲಿಸೆನಗೆ ಶ್ರೀಹರಿ ಪದವ ಕಲಿಸೆನಗೆ ಪ ಪದವ ಕಲಿಸಯ್ಯ ಪದುಮನಾಭ ಪದದ ಮಹಿಮೆಯೆಂಬ ಸುಧೆಯು ಭರಿತವಾದ ಅ.ಪ ನಾಗಶಾಯಿಯ ವಿಮಲನಾಮವೆಂಬ ರಾಗಕಲಿಸು ಮಿಗಿಲು ಭೋಗ ಭಾಗ್ಯದಾಸೆ ನೀಗಿಸಿ ಈ ಭವ ರೋಗ ಗೆಲಿದು ತಲೆದೂಗಿ ನಲಿಯುವಂಥ 1 ದೋಷದೂರನ ಚರಿತರಸದಿಂ ಸೂಸಿ ಹರಿವ ಕವಿತ ಶ್ಲೇಷ ನೀಗಿಸಿ ಪ್ರಪಂಚ್ವಾಸನದುಳಕಿಸಿ ಸಾಸಿರನಾಮ ಹುಸಿ ತಾಳದಿ ಪಾಡುವಂಥ 2 ಯತಿತತಿಗಳು ಪೊಗಳ್ವ ಬಿಡದತಿ ಮತಿಮಾನ್ಯರು ಪಾಡ್ವ ರತಿಪತಿಪಿತ ಶ್ರೀರಾಮ ನಿನ್ನಡಿಭ ಕ್ತ್ಯತಿಗಣಕೂಡಿದ ಅತಿಶಯಾನಂದಕರ 3
--------------
ರಾಮದಾಸರು
ಪರ ಪುರುಷರಾಚರಣೆ ಬೇರೆ |ಈ ಪಾಪಿ ಜನಕೆ ಮತ್ತೊಂದು ಬಗೆದೋರೆ ಪ ಚಿಂತೆಯೆಂಬುದು ಚಿತ್ತದಲ್ಲಿಲ್ಲಾ | ಅಂತರಂಗದಿ ಆನಂದದಲಿಹರೂ | ಸಂತ ಸಮೂಹದಿ ಶಾಂತದಿ ಒಡಗೂಡಿ | ಕಂತುಹರನ ಯೋಗ ಮಾಡುತಿಹರೂ 1 ಮಾಯಾ ನಿತ್ಯ ವಸ್ತುವಿನೊಳು ಪೂರ್ಣರಾಗಿಹ 2 ಬೇಕೆಂದು ಬೇಡರು ಬೇಕೆಂದು ಮಾಡರು |ಕಾಡು ಮಂದಿಗಳೊಡನೆ ಮಾತನಾಡರು | ಲೋಕನಾಯಕ ಭವತಾರಕನ ಚರಣವ | ಏಕಾಂತದಲಿ ಪೂಜಿಸುತಿಹರು 3
--------------
ಭಾವತರಕರು
ಪರಮೌಷಧಿ ಸಿಕ್ಕಿತು ಪರಿಪರಿರೋಗ ಪರಿಹಾರಕಿದು ದಕ್ಕಿತು ಪ ಜ್ವರದ ಬೇಗೆಗೆ ದಾಹ ಕರುಳ ಕುಂದಿಸಿಯೆನ್ನ ನರಳಿಸಿದಾಗ ಮಾಂಗಿರಿರಂಗಾ ಎಂದೆಂಬ ಅ.ಪ ಸುರನರೋರಗ ಗರುಡ ಚರಣ ಗುರು ದಿವಾಕರ ಕಿನ್ನರಾಪ್ಸರ ಶರಣಜನ ಕರುಣಾಕರ ಶ್ರೀ ಧರ ಸುಖಂಕರ ಶೌರಿಯೆಂಬಾ1 ಪಿತ್ತವು ತಲೆಗೇರಿತು ಸುತ್ತಲು ಕಣ್ಗೆ ಕತ್ತಲೆ ಮುಸುಕಿದ್ದಿತು ಚಿತ್ತಪಲ್ಲಟಿವಾಗಿ ಮತ್ತನಾಗಿರಲಾಗ ನೆತ್ತಿಯೊಡೆದ ಎನ್ನ ಕುತ್ತಿಗೋಂಕಾರ 2 ಚಿತ್ತ ಮಸ್ತಕ ನೆತ್ತಿಗಳ ಬೆಂಬತ್ತಿ ಮತ್ತತೆಯಿತ್ತ ಪತ್ತದ ಕತ್ತಲೆಯನುತ್ತರಿಸಿದುತ್ತಮ ಚಿತ್ತಜನಪೆತ್ತಚ್ಯುತಾ ಯೆಂಬ 3 ಉಸಿರು ಉಗ್ಗಡಿಪಾಗ ವಸುದೇವ ಸುತಯೆಂಬ 4 ರಸರಸಂಗಳೊಳೆಸೆದು ವಾಸಿಸಿ ಉಸಿರು ಬಸಿರನು ವಸುವಿಲಾಸದೊಳೆಸೆದು ಪೊಸ ಪೊಸ ಎಸಕದಿಂ ಸುಖ ರಸವನೀಯುವ ರಾಮಯೆಂಬಾ 5 ಕರ ನೇತ್ರಗಳು ತಂಪಿಂಪಿನ ಸವಿ ಬಲೆಯೊಳು ಬಿದ್ದುವು ಜವ ನೇಣೆಸೆದಾಗ ಭವದೂರಹರಿ ಯೆಂಬ 6 ಶಿವ ಭವಾಮರಪವನಪಾವಕ ಜವ ಶಶಾಂಕವಾಕರಾನಕ ಶ್ರೀಧರ ಹರೇ ಭವದೂರನೆಂಬಾ 7 ಲಕ್ಷನಾಮಗಳೆಲ್ಲ ಲಕ್ಷಣವಾದ [ತು ರಕ್ಷೆಯೀಯುವಗುಳಿಗೆ] ಮಾತ್ರಾ ಮೋಕ್ಷಸುಖವನಿತ್ತು ರಕ್ಷಿಪುದೆಂಬುದ ದಕ್ಷಸುತೆಗೆ ಫಾಲಾಕ್ಷ ತಾಂ ಪೇಳಿದ 8 ಅಕ್ಷಯಾತ್ರವಿಪಕ್ಷ ರಾಕ್ಷಸ ಶಿಕ್ಷ ಸುಜನರಕ್ಷ ಪ್ರದವ ಅ ಧ್ಯಕ್ಷ ನುತಕಮಲಾಕ್ಷ ಶರಣಕಟಾಕ್ಷ ಲಕ್ಷ್ಮೀಪಕ್ಷ [ಮೂಂಗಿರಿರಂಗ] ಯೆಂಬಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪರಸುಖದಿರವನು ಕರುಣಿಸು ಎನಗೆ ಪರಮಪಾವನ ತವಚರಣಸೇವೆಯೆಂಬ ಪ ಅರಿಷಡ್ವರ್ಗದ ಉರುಬಾಧೆ ತಪ್ಪಿಸಿ ಮೆರೆವೆಂಟುಕೋಣಗಳು ಶಿರತರಿದ್ಹಾರಿಸಿ ಜರೆಮರಣೆಂದೆಂಬ ಉರುಲನು ಜೈಸಿದ ಹರಿಶರಣರ ಮಹ ಕರುಣಕಟಾಕ್ಷವೆಂಬ 1 ಹತ್ತು ಇಂದ್ರಿಯಗಳು ಒತ್ತಿ ಮುರಿದು ನೂಕಿ ಸುತ್ತಿಸುಳಿವ ಕಪಿನ್ಹತ್ತಿರ ಬಂಧಿಸಿ ಭವ ಕತ್ತರಿಸೊಗೆದ ಚಿತ್ತಜತಾತನ ಭೃತ್ಯಂ ನಡೆಯೆಂಬ 2 ಹರಣಪೋದರು ನಿನ್ನ ಚರಣಸ್ಮರಣೆಯನ್ನು ನೆರೆನಂಬಿ ಬಿಡದಂಥ ಪರಮದಟವ ನೀಡೋ ಶಿರದಿ ಹಸ್ತವನಿತ್ತು ವರದ ಶ್ರೀರಾಮ3
--------------
ರಾಮದಾಸರು
ಪರಿ ಸಾಧನವರ್ಗವಾ ಅರಿಷಡ್ವರ್ಗವೆಂಬ ದುರ್ಗವಾ ತನ್ನಯ ದಿವ್ಯಕರುಣಾರಸವೆಂಬ ಸ್ವರ್ಗವಾ ಕರೆದಿತ್ತಾ ಪರಿವುತ್ತಾ ಪರವುತ್ತಾ ಅರಿಸುತ್ತಾ 1ಕಾಳಗತ್ತಲೆಯ ಯೂಥವಾ ಮನದೊಳಿದ್ದಕೀಳು ಬುದ್ಧಿಯಪರಾಧವಾಮೂಳ ವಾಸನೆಯ ಮುಖವಾ ವೇದಾಂತ ಸಂಮೇಳದಿಂದ ಬಹ ಸುಖವಾಪೇಳುತ್ತಾ ಸೀಳುತ್ತಾ ತಾಳುತ್ತಾ ಕೀಳುತ್ತಾ 2ಸಾರ ಸತ್ಸಂಗದ ದಾರಿಯಾ ಮುಂದುಗಾಣಿಸದಕ್ರೂರ ಕರ್ಮಂಗಳ ಪರಿಯಾ ಘೋರ ಮಾಯೆಯೆಂಬ ತೊರೆಯಾ ಗೋಪಾಲಾರ್ಯಸಾರಾನಂದವೆಂಬ ಪುರಿಯಾತೋರಿಸುತಾ ಹೀರಿಸುತಾ ಹಾರಿಸುತಾ ಸೇರಿಸುತಾ 3
--------------
ಗೋಪಾಲಾರ್ಯರು