ಒಟ್ಟು 9384 ಕಡೆಗಳಲ್ಲಿ , 131 ದಾಸರು , 5285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶ್ರೀ ರಮಣನೆಲ್ಲಿಹ ಕರೆತಾರೆ ಸಖಿಯಳೆ ) * ಪ ಮನು ಕಮಂಡಲ ಕೂಪದಲ್ಲಿ ಹಿಡಿಯದಂತೆ ಬೆಳೆದು ಅವರ ಶರಧಿ ಒಳಗೆ ಹರಿದಾಡುತಿರುವ ಕೇಳ್ ಸಖಿಯಳೆ ಶರಧಿ ಒಳಗೆ ಹರಿದಾಡುತಲೆ ವೇದತಂದು ತೋರಿದ್ಹೊಳೆವ ಮಚ್ಛನ್ನ ಬಲಗೊಂಬೆ ಕೇಳ್ ಸತಿಯಳೆ 1 ಸೃಷ್ಟಿಗೆ ಅಧಿಕ ಸ್ತ್ರೀಯಳ ದೈತ್ಯರು ಮೋಹಿಸಲು ಕಂಡು ಹುಟ್ಟಿಸಿದ ಸುಧೆಯ ಸುರರಿಗೆರೆದ ಕೇಳ್ ಸಖಿಯಳೆ ಹುಟ್ಟಿಸಿದ ಸುಧೆಯ ಸುರರಿಗೆರೆದು ಬೆಟ್ಟವನು ಬೆನ್ನ- ಲಿಟ್ಟ ಕೂರ್ಮನ ಬಲಗೊಂಬೆ ಕೇಳ್ ಸತಿಯಳೆ 2 ವಾಸುದೇವ ಕ್ರೋಡರೂಪಿಲಿಂದ ಹಿರಣ್ಯಾಕ್ಷನ ನಾಶವ ಮಾಡಿ ಕೋರೆಯಿಂದ ಕೇಳ್ ಸಖಿಯಳೆ ನಾಶವ ಮಾಡಿ ಕೋರೆಯಿಂದ ಧರಣಿ ತಂದು ಹರ್ವಿ (ರವಿ?)ದ ಭೂಪತಿವರ್ಹ(ರಾಹ?)ನ್ನ ಬಲಗೊಂಬೆ ಕೇಳ್ ಸತಿಯಳೆ 3 ಒಡೆದು ಕಂಬ ಕಡೆಗೆ ಕಿತ್ತು ಬಿಡದೆ ಅರಿಯ ತೊಡೆಯಲಿಟ್ಟು ಒಡಲ ತಾ ಬಗೆದ ಭಕ್ತರೊಡೆಯ ಕೇಳ್ ಸಖಿಯಳೆ ಒಡಲ ತಾ ಬಗೆದ ಭಕ್ತರೊಡೆಯನಾಗಿದ್ದ ಲಕ್ಷ್ಮೀ- ನಾರಸಿಂಹನ್ನ ಬಲಗೊಂಬೆ ಕೇಳ್ ಸತಿಯಳೆ 4 ಪಾದ ದಾನ ಬೇಡಿ ಪೃಥ್ವಿ ಆಕ್ರಮಿಸಿದ ಪರಮಾತ್ಮ ಕೇಳ್ ಸಖಿಯಳೆ ಪೃಥ್ವಿ ಆಕ್ರಮಿಸಿದ ಪರಮಾತ್ಮನಾದ ನಮ್ಮ ಕಶ್ಯಪರ ಸುತ ವಾಮನನ ಬಲಗೊಂಬೆ ಕೇಳ್ ಸಖಿಯಳೆ 5 ಋಷಿಗಳಲ್ಲಿ ಜನಿಸಿ ಕರದಿ ಧರಿಸಿ ಕುಠಾರವನ್ನು ಅರಸು ಕ್ಷತ್ರಿಯರಿಗಂತಕನ ಕೇಳ್ ಸಖಿಯಳೆ ಅರಸು ಕ್ಷತ್ರಿಯರ ಕುಲಕೆ ಅಂತಕನಾಗಿದ್ದ ನಮ್ಮ ಪರÀಶುರಾಮನ್ನ ಬಲಗೊಂಬೆ ಕೇಳ್ ಸಖಿಯಳೆ 6 ಮುದ್ರೆ ಕಳುವಿ(ಹಿ?) ಲಂಕಾಪುರದಲ್ಲಿದ್ದ ವಾರ್ತೆ ಕೇಳಿ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೇಳ್ ಸಖಿಯಳೆ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೂಡಿ ಬಂದ ಅ- ಯೋಧ್ಯಾರಾಮನ್ನ ಬಲಗೊಂಬೆ ಕೇಳ್ ಸಖಿಯಳೆ7 ಎಲ್ಲ ಜಗವ ತನ್ನ ಉದರದಲ್ಲೇ ಇಟ್ಟು ಗೋಕುಲದ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕೇಳ್ ಸಖಿಯಳೆ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕದ್ದು ಮೆಲ್ಲುವಂಥ ಚೆಲ್ವ ಕೃಷ್ಣನ್ನ ಬಲಗೊಂಬೆ ಕೇಳ್ ಸುಖಿಯಳೆ 8 ಮಾಯಾಶಿಶುರೂಪ ತಾನಾಗಿ ವೇದನಿಂದ್ಯವನ್ನು ಮಾಡಿ ಬೋಧಿಸಿದ ದುರ್ಮತವ ಕೇಳ್ ಸಖಿಯಳೆ ಮಾಡಿ ಬೋಧಿಸಿದ ದುರ್ಮತವ ತ್ರಿಪುರಜನರಿಗೆಲ್ಲ ಬೋಧಿಸಿದ ಬೌದ್ಧನ್ನ ಬಲಗೊಂಬೆ ಕೇಳ್ ಸಖಿಯಳೆ 9 ಕಲಿಸಮಾಪ್ತಿ ಕಾಲದಲ್ಲಿ ಚೆಲುವ ಅಶ್ವಾರೂಢನಾಗಿ ಬಿಡದೆ ಪಾಲಿಸಿದ ಶರಣಜನರ ಕೇಳ್ ಸಖಿಯಳೆ ಬಿಡದೆ ಪಾಲಿಸಿದ ಶರಣಜನರನು ಭೀಮೇಶಕೃಷ್ಣನ ಚರಣಕಮಲಕೆರಗಿ ಬಲಗೊಂಬೆ ಕೇಳ್ ಸಖಿಯಳೆ 10
--------------
ಹರಪನಹಳ್ಳಿಭೀಮವ್ವ
(ಶ್ರೀ ವಾದಿರಾಜರ ಪ್ರಾರ್ಥನೆ) ಭಾವಿಭಾರತಿವರನೆ ದಾಸನ ಬೇಗ ಕಾವ ಕಲುಷಹರನೆ ದೇವ ಋಜು ಗಣನಾಥನೀಪರಿ ಸಾವಕಾಶಕೆ ಸಮಯವಲ್ಲಿದು ಪ. ಅರಿಷಡ್ವರ್ಗದಿ ಸಿಲುಕಿ ಕ್ಷಣಕ್ಷಣ ಕರಗಿ ಕುಂದುತ ಬಂದೆನು ನಾನಾ ಪರಿಯ ಕ್ಲೇಶದಿ ನೊಂದೆನು ಮುಂದೇನು ದುರಿತಾರಾಶಿಗಳನ್ನು ಬೇಗದಿ ತರಿದು ಸಜ್ಜನಗುಣವ ಸುಲಭದಿ ಪೊರೆದನೆಂಬೈತಿಹ್ಯ ವಚನದಿ ಭರವಸದಿ ನಂಬಿರುವೆ ನಿನ್ನನು 1 ತುರಗ ವದನ ದೇವನ ವಲಿಸಿ ದೇವ ನರವರ ಸಂಘವನು ಕರದು ತಂಪೇರಿಸಿ ಸರಿಯೆನಿಸಿದನೆ ಹರಿಯೆ ತಾನೆಂದೊದರಿಕೊಂಡಿಹ ನರಕಭಾಜಿಗಳಾದ ಮೈಗಳ- ನರಿದು ವಾದದಿ ಮುರಿದು ಹಲ್ಲನು ಸಿರಿವರನ ಸತ್ಕರಿಸಿ ಪೂಜಿಪ2 ವನಜಾಕ್ಷ ರಾಮಭಕ್ತನಾಗಿಹ ವಿಭೀಷಣಗೆ ಮಾರುತಿಯಿಂದುತ್ತ- ಮುಂದಿನ ಫಲ ನೀಡೆಂದು ಮಣಿದು ಬೇಡುವೆ ನಿನ್ನ ಪದಯುಗ ವನರುಹಗಳನುವಶ್ಯದಾಯಕ ನಿತ್ಯ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ವಿಷ್ಣುತೀರ್ಥರು) ಮೋದ ಬೀರುತ ತಾ ಮೋದಪುರಕೆ ಬಂದವನ್ಯಾರೆಪೇಳಮ್ಮಯ್ಯಾ ಪ ಶುಕಮುನಿ ಪೇಳಿದ ಶಾಸ್ತ್ರದ ಸಾರವ ಸುರಿಸಿದ ಧೀರ ಶ್ರೀ ವಿಷ್ಣುತೀರ್ಥಾರ್ಯ ಕಾಣಮ್ಮಾಅ.ಪ. ಶುದ್ಧವೃತ್ತಿಗಳಿಂದನುಭೋಗಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಜೀವರತಾ ಬುದ್ಧಿ ಭೇದಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಶೂನ್ಯರುಪದ್ರವ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಶುದ್ಧ ಶೃತಿ ಸ್ಮøತಿ ಪದ್ಧತಿ ತಪ್ಪದೆ ಇರುವೋ ಯತೀಶ್ವರರೇ 1 ಮರೆಪೊಕ್ಕವರನು ಮರೆಯದೆ ಪೊರೆವನದಾರೆ ಪೇಳಮ್ಮಯ್ಯಾ ಮೋರೆಯ ತೋರೆಂದು ಮಾರನಯ್ಯ ಮುರಾರಿಗೆ ಪೇಳ್ವವನಾರೆ ಪೇಳಮ್ಮಯ್ಯಾ ಮೋರೆ ಮೋಹಿಸಿ ಮೂಲೋಕವ ಸುತ್ತಿದನ್ಯಾರೆ ಪೇಳಮ್ಮಯ್ಯಾ ಮೋರೆ ಒಂದು ಮೂರು ಕಣ್ಣುಳ್ಳ ಬೊಮ್ಮನ ಪ್ರೀತಿಯ ಮಗನಮ್ಮ 2 ಬಂದು ಸೇವಿಸೆ ಘನ ಬಂಧನ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಹಿಂದು ಮುಂದು ತನ್ನ ನಂಬಿದವರ ಮನಮಂದಿರ ದಿಪ್ಪುವನ್ಯಾರೆ ಪೇಳಮ್ಮಯ್ಯಾ ಇಂದುಧರ ಖಳವೃಂದ ಮೋಹನ ಗುರು ನಂದಿವಾಹನನೇ ಪೇಳಮ್ಮಯ್ಯಾ ಇಂದಿರೇಶ ತಂದೆವರದಗೋಪಾಲವಿಠಲನ ಸೇವಿಪ ನೀಲಕಂಠ ಕಾಣಮ್ಮಾ 3
--------------
ತಂದೆವರದಗೋಪಾಲವಿಠಲರು
(ಶ್ರೀ ವ್ಯಾಸರಾಯರ ಪ್ರಾರ್ಥನೆ) ಶ್ರೀಹರಿಗತಿಪ್ರಿಯಗುರುವ್ಯಾಸರಾಯ ಪ. ಶರ್ಕರ ಕ್ಷೀರವ ಕುಡಿಸುವಂದದಿ ಶುಭ ತರ್ಕತಾಂಡವ ನ್ಯಾಯಾಮೃತವನು ಸುರಿದ 1 ಸಾಂದ್ರ ಹೃತ್ತಾಮಸ ತಂದ್ರವೋಡಿಸುವ ಶ್ರೀ ಚಂದ್ರಿಕಾಕರ ಕರುಣಾಂಬುಧಿ ಧೀರಾ 2 ಕುಂಡಲ ಗಿರಿವರ ಪಾಂಡವಧಾರಾ ಬ್ರ ಹ್ಮಾಂಡಕೋಟೀಶನ ಮಂಡಿಸಿ ನಲಿದಂಥ ಗುರು ವ್ಯಾಸರಾಯ3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ಸುಜ್ಞಾನೇಂದ್ರ ಪ್ರಾರ್ಥನೆ) ಪಾದ ಸ್ಮøತಿಯಿಂದಾಯ್ತೆನಗಾನಂದ ಅತಿಶಯ ತೋರಿಲ್ಲಿಗೆ ಬಂದ ಪ. ಮೂರ್ತಿಯನು ಕೀರ್ತಿಯನು ತಾ ಕರುಣಿಸಿಹನು ಕ್ಷಮಿಸುವನಖಿಳಪರಾಧವನು 1 ಗೆಲುವನು ವಾದಿಗಳ ಸ್ತೋತ್ರಗಳ ಸಾದರದಲಿ ತಾ ಮಾಡುತ ನಶ್ವರ ಬೋಧರ ಶಾಸ್ತ್ರದ ಕರ್ಮಗಳ ಪಾದಾನತರಿಗೆ ಪರಮಕರುಣದಿಂದೋದಿಸಿ ತಿಳಿಸುವ ಧರ್ಮಗಳ 2 ಅಜಭವನುತ ದಿಗ್ವಿಜಯ ರಾಘವನ ಪದಪಂಕಜ ಭೃಂಗಾಯತನ ಭಜಿಸಿರೊ ಭಕ್ತಜನಾರ್ದನನ ನಿಜ ಜನರಿಗೆ ಸುರಕಲ್ಪತರುವೋಲಿದಿರಲಿ ತೋರ್ಪ ಶುಭಾಕೃತನ ಸದ್ವಿಜಜನ ಮಂಡಲಮಂಡಿತನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀಹರಿಯ ಮೋಹಿನಿ ರೂಪ) ನೋಡಿರೊ ಸ್ತ್ರೀರೂಪವ ನೋಡಿರೋ ಪ. ನೋಡಿರೊ ಹರಿಯ ಸ್ತ್ರೀರೂಪ ಸ್ತುತಿ ಮಾಡಿರೊ ಮಹಿತಾ ಪ್ರತಾಪ ಅಹ ಜೋಡಾದ ಸತಿಯರ ನೋಡಿ ನಗುತ ನಲಿ- ದಾಡುವ ಶ್ರೀಕೃಷ್ಣ ಪ್ರಹುಡೆಯಾಗಿರುವುದ ಅ.ಪ. ಭಾರ್ಗವ ವಾಸರದಲ್ಲಿ ಯತಿ ವರ್ಗವೆಲ್ಲವು ಸೇರುತಿಲ್ಲಿ ಪಂಚ ಮಾರ್ಗಣಪಿತನಿದಿರಲ್ಲಿ ಅಷ್ಟವರ್ಗೋಪಚಾರಗಳಲ್ಲಿ ವಿಧಿ ಭರ್ಗ ವಂದ್ಯ ಪ್ರಭು ದುರ್ಗಾರಮಣ ಸತ್ವ ಸರ್ಗಪಾಲನ ಸನ್ಮಾರ್ಗದಿ ಸ್ತುತಿಪುದ 1 ಧೀರಮರಾಸುರರಂದು ಕ್ಷೀರವಾರಿಧಿ ತಡಿಯಲ್ಲಿ ಬಂದು ಬಹು ಮಂದರ ಕಟ್ಟಿ ನಿಂದು ಸುಧ ಸಾರವ ತೆಗೆಯಲು ಕಾರುಣ್ಯದಲಿ ದಾನ ವಾರಿಗಳಿಗೆ ಕೊಟ್ಟ ನಾರಾಯಣಿಯನ್ನು 2 ನಾಯಕ ಧೀರ ಕಂಜ ನಿವಹ ರಕ್ಷಿಸು ಗಂಭೀರಾ ಅಹ ಪವನಾವತಾರನ ಸ್ತವನಕೊಲಿದು ಬಂದ ಕವಿ ಶೇಷಗಿರಿವಾಸ ಭವಭಯಹಾರಿಯ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಷೋಡಶೋಪಚಾರ ಪೂಜಾ ಕೀರ್ತನೆಗಳು) ಧ್ಯಾನಿಸಲರಿಯೆ ನಿನ್ನ ಶ್ರೀನಿವಾಸ ಪ ಧ್ಯಾನಿಸಲರಿಯೆನು ದೀನಮಂದಾರ ನಿ- ತ್ಯಾನಂದ ಮೂರ್ತಿಯಂದರಿತು ಹೃದಯದೊಳು ಅ.ಪ ಕ್ರಮದಿ ಪ್ರತ್ಯಾಹಾರದಿ ಭ್ರಮಗೊಳಿಸುವ ಮನವ ನಿಲಿಸಿಧಾರಣೆಯನು- ಪಮ ಸಮಾಧಿಯಲಿ ಹಂಮಮಯಂಬುವದು ಬಿಟ್ಟು 1 ಪರಿಪರಿಶಾಸ್ತ್ರ ವೇದ ಪುರಾಣಗಳ ತರತಮ ಭೇದಾಭೇದದರುವಿಗೆ ಸಾಕ್ಷಿಯಾ- ಚರಣಕಮಲವರಿತು 2 ಮದಮತ್ಸರಾದಿಗಳು ಕೂಡಿಯನ್ನನು ಬಾಧಿಸುತಿಪ್ಪವು ಅನುದಿನವು ಸದಮಲಾತ್ಮಕ ಶ್ರವಣ ಮನನಗಳರಿಯೆ ಮೋ- ಹದ ಕೂಪದಲ್ಲಿ ಬಿದ್ದೆ ಗುರುರಾಮ ವಿಠಲನೆ 3
--------------
ಗುರುರಾಮವಿಠಲ
(ಸೂರ್ಯನಾರಾಯಣನ ಪ್ರಾರ್ಥನೆ) ಸೂರ್ಯಬಿಂಬಗತ ನಾರಾಯಣನನು ಸೇರಿರುವೆನು ಸತತ ಸಾರಸಜಾಸನ ಹೈರಣ್ಯವಪುಷನ ಪ . ಸರ್ಗಸ್ಥಿತಿಗತಿ ಕಾರಣವ್ಯಾಹೃತಿ ಗರ್ವವೇದ್ಯ ಚರಣಾ ಭರ್ಗ ಶಬ್ದಿತ ತೇಜೋಧಾರಣ ಸ್ವರ್ಗವಾಸಿ ಶರಣಾ ಭಾರ್ಗವಿ ಮುಖ ಸಂಸರ್ಗಾನನ ಮತಿ ವರ್ಗಕೇತ್ವತೈದ ಮಾರ್ಗವ ತೋರಿಸು 1 ಸೂರಿಗಮ್ಯಪದ ವಾರಿಜಸುರಪರಿವಾರ ನಿನ್ನ ಕರುಣಾ ತೋರು ಭೌತಿಕ ಶರೀರ ದಾಢ್ರ್ಯ ಮೂರಾರು ಭಕುತಿ ನವ ನಾರದಾದಿ ಮುನಿವಂದಿತ ನಿನ್ನಾ- ನೀರಜ ಬಾಂಧವ 2 ಈ ಜಗದೊಳು ಬಹು ಸೋಜಿಗದೋರುವ ರಾಜರಾಜ ನೀನೆ ರಾಜಸೂಯಯುತ ವಾಜಿಮೇಧ ಕೃದ್ರಾಜನ ಮೈದುನನೆ ಓಜೋಬಲ ಬಹು ತೇಜದ ಪನ್ನಗ ರಾಜ ಗಿರೀಂದ್ರ ವಿರಾಚಿತ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹಯವದನ ಪ್ರಾರ್ಥನೆ) ಹಾರುತ ಬಂದಿಹ ಹಯಮುಖ ಮೂರುತಿಯನು ನೋಡಿ ಮಾರುತ ವಂದಿತ ಮಹಿಮೆಯ ತೋರುವ ಕಾಪಾಡಿ ಪ. ವೇದವ ಕದ್ದ್ಯೊದಸುರನ ಹಾದಿಯೊಳಡ್ಡಗಟ್ಟಿ ಮೇದಿನಿಗೊರಗಿಸಿ ಶ್ರುತಿಯನು ಕಾದನು ಜಗಜಟ್ಟಿ ವೇಧಗೆ ಪರತತ್ವಂಗಳ ಬೋಧಿಸಿ ಮನಮುಟ್ಟಿ ಶ್ರೀಧರ ದುರ್ಜನರೆದೆಗಳ ಭೇದಿಸುವನು ಮೆಟ್ಟಿ1 ವಾದಿನೃಪ ಯತೀಂದ್ರ ಮನೋಲ್ಲಾಸದಿ ಪದಾಂಭೋಜ ಸಾಧಿಸುವನು ಸಕಲಾರ್ಥನ ಸ್ವಜನಕೆ ಸುರರಾಜ ಸ್ವೋದರಗತ ವಿಶ್ವಂಭರ ಶಮಿತದುರಿತ ಬೀಜ ವ್ಯಾಧಿಯ ಹರಸುವ ವಿಭವಾಸಾದಿತ ಗಜರಾಜ 2 ಹೇಷಾ ನಿಭೃತಾಶಾನತ ಕೋಶಾಸ್ಪದ ರೂಪ ದೋಷಾಂಬುಧಿಶೋಷಾದ್ಭುತ ವೇಷಾಸುರ ತಾಪ ವೀಶಾಹಿ ಗಣೇಶಾದ್ಯಮರೇಶಾರ್ಚಿತ ಪಾದ ಶೇಷಾಚಲ ಭೂಷಾಗಮ ಭಾಷಾಮಿತವಾದ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹೆಬ್ಬುರಿ ಶ್ರೀ ಅನಂತಪದ್ಮನಾಭ) ಹೆಬ್ಬುರಿ ಪದ್ಮನಾಭಾ ನಂಬಿದೆನು ಪದಾಬ್ಜವ ಪೂರ್ವಶೋಭಾ ಕೊಬ್ಬಿದ ಶತ್ರು ಪುಂಜಗಳನ್ನು ದೂರದಿ ದಬ್ಬಿ ದಯಾರಸ ಉಬ್ಬಿಪಾಲಿಸು ದೇವಾ ಪ. ಯೋಗಿ ಹೃನ್ಮಂಡಲದಿ ನಿತ್ತಂದದಿ ಸಾಗಿ ಬಂದಿರುವಿಯಲ್ಲಿ ನಾಗಶಯನ ನಿನ್ನ ನೆಲೆಯರಿಯದ ತಪ್ಪ ನೀ ಪಾಲಿಪುದೆಂದು ಬಾಗಿ ಬೇಡುವೆ ನಿಂದು 1 ಈ ಕ್ಷಮೆ ಮೇಲಿಲ್ಲದಾ ಲೋಕೋತ್ತರ- ದಾಶ್ಚರ್ಯ ತೋರುವುದು ಪಕ್ಷಿಧ್ವಜ ನಿನ್ನ ಪಾದಪದ್ಮಗಳಲ್ಲಿ ನಕ್ಷತ್ರ ಮಾಲೆಗಳುರುಳುವದೇನಿದು 2 ಪಾಂಡವ ಸಾರಥಿಯೆ ನಿನ್ನಯ ಮೂರ್ತಿ ಕಂಡೆನು ಶ್ರೀಪತಿಯೆ ಕೌಂಡಿಣ್ಯ ಮುನಿಯನು ಕಾಪಾಡಿದಖಿಳ ಬ್ರ- ಹ್ಮಾಂಡ ನಾಯಕ ನಿನ್ನ ದಾಸ್ಯವ ದಯಮಾಡು 3 ಹೆಬ್ಬುಲಿಯಂತಿರುವ ಹೂಣ ಭೂಪ ನಬ್ಬರವಡಗಿಸುತ ಭಾರ ನಿನ್ನದಯ್ಯ ವಾರಿಧಿ ಕೃಷ್ಣ 4 ನೀನೆ ಸದ್ಗತಿಯೆಂಬರ ಕಾವುದಕನು- ಮಾನವ್ಯಾತಕೊ ಭೂವರ ದೀನ ಬಂಧು ಶೇಷಗಿರಿನಾಥ ದಯದಿಂದ ಮಾನಸ ಫಲವ ಪೂರಣಗೈಸು ಗೋವಿಂದ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಹೋಳಿ ಪದ) ಧುಮ್ಮಿಶಾಲೆನ್ನಿ ನಮ್ಮ ರಮ್ಮೆಯರಸ ಕೃಷ್ಣನಡಿಯ ಒಮ್ಮನದಿ ನೆನೆದು ಸಕಲ ಕರ್ಮಕಲುಷವ ಕಳಿಯಿಸಿ ಪ. ನಿಗಮ ಸ್ಮøತಿ ಗಣೋಕ್ತ ಕರ್ಮಕರಣ ಭವಿ ಷ್ಯೋತ್ತರ ಪುರಾಣವಚನವೆತ್ತಿ ಜಗಕೆ ತಿಳಿಸಿದಾ ಒತ್ತಿ ಬರುವ ವಿಘ್ನಗಣವ ಕತ್ತರಿಸುವ ಹೋಳಿಯೆಂಬ ಉತ್ತಮದ ವ್ರತವು ಜಗವ ಸುತ್ತಿಕೊಂಡು ಮೆರೆವುದು 1 ವಿಧಿಯ ಸ್ತುತಿಗೆ ಮೆಚ್ಚಿ ಕರುಣಾಸುಧೆಯ ಸುರರ ಮೇಲೆ ಕರದು ಮಧುರೆಯಲ್ಲಿ ಜನಿಸಿ ಬಂದ ಮಧುಮುರಾರಿ ಮರ್ದನ ಯದುಕುಲೇಶ ಕೃಷ್ಣಗೋಪ ಚದುರೆಯರನು ಒಲಿವೆನೆಂದು ಮದನನು ಹುಣ್ಣಿವೆಯ ಹಬ್ಬ ಸದರದಿಂದ ರಚಿಸಿದ 2 ಮೇಲು ಬೆಲೆಗಳುಳ್ಳ ಬಿಳಿಯ ಶಾಲೆಗಳನು ಧರಿಸುತ ಗು ಲಾಲ ಪುಡಿಯ ಸುರಿವ ಗೋಪ ಬಾಲಜನರ ಕೂಡುತ ಗಜ ಮೇಲಾಳುತನವ ನಡೆಸುತಿರಲು ಶ್ರೀ ಲಲಾಮ ವಾರನಾರಿ ಜಾಲವನ್ನು ಕರೆಸಿದ 3 ಸಿರಿಯ ಮುಡಿಯ ಮೇಲೆ ನವಿಲಗರಿಯ ಗೊಂಚಲಿರಿಸಿ ನಾನಾ ಪರಿಯ ಪುಷ್ಪ ಮಾಲೆಗಳನು ಧರಿಸಿ ಕಂಠ ಮಧ್ಯ ಪೋಕ ಥರವ ತೋರ್ಪ ಪದವ ಸಪ್ತ ಸ್ವರದಿ ಕೂಡಿ ವಾಡಿ ಬೀದಿ ತಿರುಗಿ ಬಂದ ಕೃಷ್ಣನು 4 ಶಿಷ್ಟ ಸಂಗ್ರಹೀತ ಕಾರ್ಯ ಶ್ರೇಷ್ಠವಾಗಿ ತಿಳಿಯಿರೆಂದು ದಮನ ನರನೊಳೆಂದ ಸ್ಪಷ್ಟ ಗೀತ ವಚನವ ಶಿಷ್ಟ ಜನರು ಗ್ರಹಿಸಿ ನಡದರಷ್ಟ ಭಾಗ್ಯವಿತ್ತು ಶೇಷ ಬೆಟ್ಟದೊಡೆಯ ಹರಿಯು ಕರುಣಾ ದೃಷ್ಟಿಯಿಂದ ಪೊರೆವನು 5
--------------
ತುಪಾಕಿ ವೆಂಕಟರಮಣಾಚಾರ್ಯ
[ದಿತಿಜರಿಗೆದುರಾಂತ] ಕೃತಾಂತಗತಿ ನೀ ನಮಗೆ ಗುಣವಂತ ಹನುಮಂತಪ. ಕೇಸರಿತನಯ ದಕ್ಷಿಣಗಾಗಿ ಬಂದೆ ವ-ರುಷಗಳಿಂದಲಿ ಬಲುಗಿರಿಯನು ತಂದೆಈಶ ರಘುಪತಿ ಸೇವೆ ಘನವಾಗಿ ನಿಂದೆಅಸುರ ರಾವಣನ ಸರ್ವ ಸೈನ್ಯವ ಕೊಂದೆ 1 ಅಂಬುಧಿಯ ದಾಂಟಿ ಸೀತೆಯ ರೂಪ ಕಂಡೆಕುಬುದ್ಧಿಯ ರಾವಣನ ಪುರವ ಸೂರೆಗೊಂಡೆವಿಬುಧರ ಸ್ನೇಹವ ಮಾಡಿದೆ ಬಲುಗಂಡೆಪ್ರಬುದ್ಧರಂದದಿ ಪುಣ್ಯಫಲರಸ ಉಂಡೆ 2 ಹಯವದನನ ಕೃಪೆ ಪ್ರಿಯ ಹೂಡಿ ಪೊತ್ತೆ ಪ್ರಿಯವಾದ ಭವತರುವಿನ ಬೇರ ಕಿತ್ತೆಭಯವ ಖಂಡಿಸಿ ನಮಗಭಯವನಿತ್ತೆಜಯಜಯ ಪ್ರಾಣನಾಥ ನಮೋ ನಮಸ್ತೆ 3
--------------
ವಾದಿರಾಜ
[ನಿನ್ನ ಭಕ್ತರಿಗೆ ಭವದ ದೋಷವಿಲ್ಲ ಸರ್ವ ಕರ್ತೃ ಸ್ವತಂತ್ರ ಹರಿಯೇ, ನೀನೆ ಪ್ರೇರಿಸಿ ಭಕ್ತರಿಂದ ಅಪರಾಧ ಮಾಡಿಸಿ ಹೊಣೆಗಾರರನ್ನು ಮಾಡಿ ದಣಿಸದಲೆ ಕ್ಷಮಿಸಿ ಚಿತ್ತದಲಿ ಪೊಳೆ ಎಂದು ಪ್ರಾರ್ಥನಾ.] ಧ್ರುವತಾಳ ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲವಿಪರೀತವೇನಯ್ಯ ಎನ್ನಂದಿಲಿಅಪರಿಮಿತ ಸ್ವಾತಂತ್ರವುಳ್ಳ ಕರ್ತುತ್ವದಿಂದಕೃಪಣರ ಬಾಧೆಗೆ ಯತನವೇನೋವಿಪುಳ ಐಶ್ವರ್ಯದಿಂದ ಸ್ವಾಮಿ ನೀನಾದರೂಸುಪಥ ನಡಿಯದಿಪ್ಪ ಕುಜನರನ್ನತಪುತ ದುಃಖದಲ್ಲಿ ನಿಯಾಮಿಸುವಿಯೆಂದುಅಪೌರುಷೇಯವಾದ ಶ್ರುತಿಯು ಪೇಳೆಖಪತಿ1ಯು ಬಾಧಿಪದಕೆ ಕಾರಣವೇನುಂಟುಉಪಗೂಢ2 ಕರುಣಿಯೇ ತಿಳುಹಬೇಕುಕ್ಲಿಪುತ ರಹಿತವಾದ ವಪುಗಳು ಬರಲೇಕೆಶಪಥ ಉಂಟು ನಿನ್ನ ಬಿಡೆನೆಂದೂಉಪರಿಯಿನ್ನು ಉಂಟು ಅಪರಾಧವೇನು ತಿಳಿಯೆನೃಪತಿ ಹೀನವಾದ ಸತಿಯನೊಲಸೆಉಪಮ ರಹಿತವಾದ ಸಥೆ ಮಾಳ್ಪ ತೆರದಂತೆಚಪಲನಾದರು ಇದನು ಪೋಗದೆಂದು ರಿಪು ಕುಲ ದಲ್ಲಣನಾದ ಪಿತನ ಭಯಕೃಪೆಗೆ ವಿಷಯನಾದ ಸುತರಿಗೆ ನೀನುಅಪಾರ ಗುಣನಿಧೆ ಇನಿತು ಮಾತೆ ಹೊರತುಕುಪಿತನಾಗುವದಕ್ಕೆ ಕೃತ್ಯವಿಲ್ಲಶಪಥ ರೂಪನೆ ನಿನ್ನ ಆಜ್ಞ ಪಾಲನೆ ಮುಖ್ಯಸಫಲವಲ್ಲದೆ ಮತ್ತೊಂದಧಿಕವಿಲ್ಲ ಅ-ನುಪಮ ಸಾಧನ ಇದೆ ಇದೆ ಸಿದ್ಧವೆಂದುವಿಪ ಅಹಿಪಾದ್ಯರು ಮಾಳ್ಪುದಾಗಿ ಸುಪವಿತ್ರವೆನಿಪ ಸತ್ವಬೋಧಿತನಾಗಿ ಹರಿಕ್ಷಿಪಣರ1 ವ್ಯಾಪಾರನಿಂದಾದಕ್ಕೆಸ್ವ ಪಕ್ಷದವರನ್ನು ವೊಹಿಸದಲೆ ಕಡಿಗೆ ಪ-ರ ಪಕ್ಷದವರೆಲ್ಲ ನುಡಿದ ನುಡಿಗೆ ಅಪಹಾಸ ಮಾಡಿದಿ ಅಭಿಮಾನವಿಲ್ಲದಲೆಆಪ್ತನೆಂಬೊ ಮಾತು ಉಳಿಸದಲೆತಪನವಾದ ಭವದಿ ತಂದು ಕ್ಲೇಶವ ಬಡಿಸಿಅಪಹೃತವಾದ ಜ್ಞಾನ ಮಾಡಿದೆನಗೆಉಪಕಾರವೇನು ನಿನ್ನ ಮಾತು ಕೇಳಿದದಕೆಈ ಪರಿ ಮಾಡದಿರು ನಂಬಿದವರತಪುತ ಸುವರ್ಣ ವರ್ಣ ಗುರು ವಿಜಯ ವಿಠ್ಠಲರೇಯಯಃ ಪ್ರಾಣದಾತಿ ಮದ್ಭಕ್ತನೆಂಬೋದು2 ಸತ್ಯ ಮಾಡು 1 ಮಟ್ಟ ತಾಳ ಪ್ರೌಢ ಕರ್ಮದಿ ನಿನ್ನ ಪ್ರೀತಿಯ ಎನಸಲ್ಲಕೀಡ ಕರ್ಮ3 ನರಕವೆಂದೆಂಬೋಸು ಅಲ್ಲಮಾಡು ಎಂದವರನ್ನು ಬಿಡುವರೆ ಮಹಾಪಾಪಬೇಡ ಎಂದದರನ್ನ ಮಾಡುವದೆ ದೋಷಈಡಿಲ್ಲವೋ ನಿನ್ನ ಮಹಿಮೆಗೆ ಏನೆಂಬೆ ರೂಢಿಗಾಗಿದೆ ನೋಡು ದ್ರೋಣನ ವಧೆಗಾಗಿ ನೀ-ನಾಡಿದ ಉಕುತಿಯನು ಗ್ರಹಿಸದ ಕಾರಣದಿ ನೋಡಿಸಿದಿ ನರಕ ದುಃಖವ ಧರ್ಮಜಗೆಗೂಢ ಬಲ್ಲವರಾರು ನಿನ್ನ ಪ್ರೀತಿಯು ಧರ್ಮಗಾಢ ಭಕುತರೆಲ್ಲ ಇದೆ ಮಾಡುವರಾಗಿಕ್ರೋಧ ಮೂರುತಿ ಗುರು ವಿಜಯ ವಿಠ್ಠಲರೇಯಆಡಿದ ವಚನಗಳು ಸಕಲ ಸಾಧನವೆನಗೆ 2 ತ್ರಿವಿಡಿತಾಳ ಅರಸು ತನ್ನ ನಿಜ ಪರಿಚಾರ ಜನರಿಗೆಸರಿ ಬಂದ ಕಾರ್ಯದಲಿ ನಿಲ್ಲಿಸಲುನರರಿಗುಂಟೇನಯ್ಯ ವಿಹಿತಾವಿಹಿತದ ಭಯಧರಣಿಪತಿಯ ಪ್ರೀತಿ ಒಂದೇ ಹೊರ್ತುಸರಸಿಜ ಹರಿಭವ ಸುರಪಾದಿ ನಿರ್ಜರರುಹರಿಯೆ ನಿನ್ನಾಜ್ಞವ ಪಾಲಿಪರೋಸರಸಿಜಾಂಡವನ್ನು ನಿಯಾಮಿಸಿ ಒಂದೊಂದುಪರಿಯ ವ್ಯಾಪಾರದಲ್ಲಿ ನಿಲ್ಲಿಸಲೂಪರಮಾಣುಗಳ ಸ್ಥೂಲ ಸೃಷ್ಟಿ ಸ್ಥಿತಿಯ ಮಾಡಿತರುವಾಯ ಲಯದಲ್ಲಿ ಅಭಿಮುಖರುಪರಮ ಭಯಂಕರವಾದ ಕಾರ್ಯಗಳಿಂದಕರುಣವಿಲ್ಲದಲೆ ಖಂಡ್ರಿಪರು ಈತೆರದಿ ಮಾಡುವರಿಗೆ ಪಾಪ ಪುಣ್ಯವೇನುಧೊರಿಯೆ ನಿನ್ನಯ ಪ್ರೀತಿ ಒಂದಲ್ಲದೆಮರಳೆ ಸಂದೇಹವಿಲ್ಲ ``ಭೀಷಾಸ್ಮಾದ್ವಾತಃ ಪವತಿ’’ವರಲುತಿವೆ ವೇದ ಅಂತವಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಾಶರಣರ್ಗೆ ಕರ್ಮಗಳ ಲೇಪ ಉಂಟೆ 3 ಅಟ್ಟತಾಳ ಸತಿ ಕರ್ಮ ಕೊರತೆ ಮಾಡೆಪಾತಿವ್ರತಕೆ ದೋಷಕೆ ಎಂದಿಗಾದರೂ ನೋಡಾಸ್ತೋತ್ರ ಮಾಡುವಾಗ ಶಬ್ದ ಡೊಂಕಾಗಲು ಪಾ-ರತ್ರಿಕವಾಗುವ ಪುಣ್ಯಕ್ಕೆ ದೋಷವೆಸೂತ್ರನಾಮಕ ನಿನ್ನ ಆಜ್ಞವ ನಡಿಸುವಭಕ್ತರಿಗೆ ಉಂಟೇನೊ ಭವದೋಷವನ್ನುಕ್ಷೇತ್ರ ಮೂರುತಿ ಗುರು ವಿಜಯ ವಿಠ್ಠಲರೇಯಾ ಧಾ-ರಿತ್ರಿಯೊಳಗೆ ನಿನ್ನವಗೆ ದೋಷವೇನೊ 4 ಆದಿತಾಳ ಒಂದಪರಾಧ ಉಂಟು ವಂದಿಪೆ ತಲೆಬಾಗಿಇಂದಿರೆ ಮೊದಲಾಗಿ ಶ್ವಾಸ ಬಿಡಿಸೊ ಶಕ್ತಿಎಂದಿಗೆ ಬಾರದು ನಿನ್ನ ಹೊರತಾಗಿ ಸಿಂಧುಜ1 ಮೊದಲಾದ ಸುರರಲ್ಲಿ ನೀನಿಂದುಚಂದ ಚಂದದ ಕಾರ್ಯ ಮಾಡಿಸಿ ಭಕ್ತರ್ಗೆಪೊಂದಿದ ಘನತೆಯು ನಿನ್ನದಲ್ಲದೆ ಅನ್ಯ-ರಿಂದಲಿ ಮಾಳ್ಪ ಕೃತ್ಯ ಎಳ್ಳಿನಿತಿಲ್ಲವೆಂದುಮಂದಮತಿಗನಾಗಿ ತಿಳಿಯದೆ ಅಹಂಕಾರಬಂದೊದಗಲು ಅದರನ್ನೆ ಅತ್ಯಭಿವೃದ್ಧಿ ಮಾಡಿತಂದು ಈ ಲೋಕದಿ ಬಂಧನ ಮಾಡಿಸಿದಿತಂದೆ ನಿನಗೆ ಇದು ಪರಮ ಸಮ್ಮತವಾಗೆ ಎ-ನ್ನಿಂದಾಗುವದೆ ಮೋಚನ ಮಾರ್ಗವಒಂದು ತೀರಿಸ ಬಂದು ಹನ್ನೊಂದು ಗಳಿಸಿಕೊಟ್ಟಿಬಂಧು ಅನಿಮಿತ್ಯನಾದದ್ದು ನಿಜವಿತ್ತೆಕುಂದುಗಳೆಣಿಸದೆ ಪಾಲಿಪದೆನ್ನನುಮಂದರಧರ ಗುರು ವಿಜಯ ವಿಠ್ಠಲರೇಯಾಇಂದು ಎಂದೆಂದಿಗೆ ನೀನೆವೆ ಗತಿಯೊ 5 ಜತೆ ಭಕತರ ಅಪರಾಧವೆಣಿಸದಲೆ ತ್ವರಿತದಿ ಚಿತ್ತಮುಕುರದಲಿ ಪೊಳೆಯೊ ಗುರು ವಿಜಯ ವಿಠ್ಠಲರೇಯಾ || [ವಿಷನಾಮ ಸಂ|| ಮಾರ್ಗಶೀರ್ಷ ಶುದ್ದ 8]
--------------
ಗುರುವಿಜಯವಿಠ್ಠಲರು
[ಶ್ರೀ ಪ್ರಾಣದೇವರ ಅನುಗ್ರಹವಿಲ್ಲದೆ ಶ್ರೀ ಹರಿಯು ಎಂದಿಗೂ ಒಲಿಯನೆಂಬ ಪ್ರಮೇಯ. ಪೂರ್ವಜನ್ಮದಲ್ಲಿ ವಾಲಿ ಹನುಮಂತನ ಅನುಗ್ರಹವಿಲ್ಲದ ಕಾರಣ ರಾಮನು ನಿಗ್ರಹಿಸಿದ. ಅರ್ಜುನನಾದಾಗ್ಗೆ ಭೀಮನು ಅಗ್ರಜನಾಗಿ ದಯ ಮಾಡಿದುದಕ್ಕೆ ಕೃಷ್ಣನು ಸಖನಾದ. ಮೂರನೆ ಜನ್ಮ ಜಯತೀರ್ಥರಾದಾಗ್ಗೆ ಜ್ಞಾನವಿತ್ತು ಕುಮತಗಳ ನಿರಾಕರಿಸಿದಿ ಪ್ರಾಣನ ಕೃಪೆಯಿಂದ ಎಲ್ಲ ಸೌಖ್ಯ ಗಂಟು. ಈಗಾದರು ಹಿಂದಿನಂತೆ ಪೊರೆಯೊ ಎಂದು ಪ್ರಾರ್ಥನೆ.] ಧ್ರುವತಾಳ ಹಿತಮಾಳ್ಪ ಜನಕನಾಗಿ ರಕ್ಷಸು ಎಂದೆಂಬೆನೆಪಿತೃ ಸಮಾನ ಜೇಷ್ಠನೆಂದೆಂಬ ವಿಧದಿ ಪಿತನೆ ಸರಿ ಎನಗೆ ಉಪಕಾರವ್ಯಾತಕಿನ್ನುಮಾತರಿಶ್ವನೆ ದೂರ ನೋಳ್ಪದೇನೊಭಾತೃನಾಗಿ ಎನ್ನ ಪಾಲಿಸು ಎಂದೆಂಬೆನೆನೋತ ಪುಣ್ಯಗಳಿಂದ ಹರಿಯು ತಾನೆ ಸ್ವತ ಏವ ಮಾಡಿದ ಈಗ ನುಡಿವದೇನೊಮಾತೃ ನೀನೆ ದೇಹ ಪೊರೆಯುವಲ್ಲಿಅತುಳ ಗುರುವಾಗಿ ಬೋಧಿಸು ಎಂದೆಂಬೆನೆಆತ್ಮ ಗುರುವಿಗೆ ನಿಜ ಗುರುವೆನಿಸಿದೆ ನಿತ್ಯನೂತನವಾಗಿ ಯಿದನು ಬೇಡಿಕೊಂಬುವದೇನುವೀತಿ ಹೋತ್ರನೆ ದೈತ್ಯ ಸಂತತಿಗೆಪ್ರತ್ಯಂತರ ಜನುಮದ್ವಯದಿ ನಿಜ ಮುಖದಿಂದಲೆಮತಿಯು ನೀಡಿದ ಮುಖ್ಯ ಗುರು ನೀನೆ ಪ್ರತಿಯಿಲ್ಲದೆ ಇದ್ದ ಇಷ್ಟನೇನೊ ಎನಗೆಗತಿ ಪ್ರದಾತನು ನೀನೆ ಆವಕಾಲಆಪ್ತನಾಗಿ ನೀನು ಸಲಹಬೇಕೆಂಬೆನೆ ಗತ ಜನ್ಮಗಳಲಿ ನೀನು ಮಾಡಿದುಪ-ಕೃತಿಗಳೆಣಿಸೆ ಈಗ ನಿನಗಿಂದಧಿಕವಾದಆಪ್ತನಾವನು ಎನಗೆ ಅರಸಿ ನೋಡಾಮತಿಯು ರಹಿತವಾದ ಜನುಮಗಳು ಬರಲಿಅತಿ ಹಿತ ನೀನೆ ಎನಗೆ ಇಹ ಪರದಿಅತಿಶಯ ಕೃಪಾನಿಧೆ ಗುರು ವಿಜಯ ವಿಠ್ಠಲರೇಯಅತಿ ಪೀಯನಾಗುವನು ನಿನ್ನ ದಯದಿ 1 ಮಟ್ಟತಾಳ ಬಾಂಧವನು ನೀನೆ ಎರಡು ಬಗೆಯಿಂದ ತಂದೆ ನಿನ್ನುಪಕಾರ ಅನಂತ ಜನುಮದಲಿಮಂದನಾದವ ನನು ತೀರಿಸಬಲ್ಲೆನೆಬಂಧು ಅನಿಮಿತ್ಯ ಗುರು ವಿಜಯ ವಿಠ್ಠಲ ನಿ-ನ್ನಿಂದಲಿ ಎನಗೆ ಅನುಗ್ರಹ ಮಾಡುವನೊ 2 ತ್ರಿವಿಡಿತಾಳ ನಿನ್ನ ಕರುಣಪೇಕ್ಷ ಮಾಡದಲೆ ಒಂದುಜನುಮ ಹರಿ ಕರುಣವಿಲ್ಲದಲೆ ಕಳದೇಅನಂತರದಿ ಎನ್ನ ಪುಣ್ಯ ಸಾಸಿರದಿಂದಅನುಜನಾದೆ ನಿನ್ನ ಕೃಪೆಯಿಂದಲಿಮನುಜ ಕೃತಿಯಾದರು ಪ್ರತಿಮದಲ್ಲಿ ಘನ್ನ ಚೇಷ್ಟಾದಿಗಳು ತೋರಿದಂತೆ ಎನ್ನ ನಾಮಕನಾಗಿ ಎನ್ನ ರೂಪದಿಂದಎನ್ನ ಕೃತ್ಯಗಳೆಲ್ಲ ನೀನೆ ಮಾಡಿಉನ್ನತವಾದ ಕೀರ್ತಿ ತಂದು ಇತ್ತು ಎನ್ನಜನ್ನರ ಮಧ್ಯದಲಿ ಶ್ರೇಷ್ಠನೆನಸಿಪನ್ನಗ ತಲ್ಪನ್ನ ಕರವಶನೆನನಿಸಿದಿನಿನ್ನ ಕರುಣಕೆ ಎಣೆ ಆವದಯ್ಯಾಎನ್ನ ಸ್ವಭಾವದಿಂದ ಹರಿ ತಾನು ಇನಿತಾದ ಮನ್ನಣೆ ಮಾಡುವನೆ ಎಂದಿಗನ್ನನಿನ್ನುಪಕಾರವೆಂಬ ವನ್ನಧಿಯೊಳಗೆ ನಿರುತಮುಣಗಿ ಇಪ್ಪೆನಯ್ಯಾ ತೆರವಿಲ್ಲದೆ ಚನ್ನ ಪ್ರಸನ್ನ ಗುರು ವಿಜಯ ವಿಠ್ಠಲರೇಯನಿನ್ನಿಂದಲೆ ಎನಗೆ ಬಂಧುನಾದಾ 3 ಅಟ್ಟತಾಳ ದುರುಳ ಮತಗಳೆಂಬೊ ಮಾಯಿ ಗೋಮಾಯಿಗಳುಶಿರವೆತ್ತಿ ನೋಡದೆ ಪಲಾಯಧ್ವರಾದರು ಈತೆರವಾದ ಮಹತ್ಮಿ ನಿನ್ನದು ನಿನ್ನದುಮರಳೆ ಮಾತುಗಳನ್ನು ತೋರದಿದ್ದರನಿಗೆ (ರೆನಗೆ)ಕರುಣವಲ್ಲದೆ ಅನ್ಯಾಲೋಚನೆ ಇದಕ್ಕಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಪೊರೆವನು ನಿನ್ನಯ ಬಲದಿಂದಲಾವಾಗ 4 ಆದಿತಾಳ ಮೂರ್ತಿ ಗುರು ವಿಜಯ ವಿಠ್ಠಲರೇಯನಿನ್ನಿಂದ ಮಾಡಿಸುವ ವಸುಧಿಯ ವ್ಯಾಪಾರ 5 ಜತೆ ನಿಖಿಳ ಸೌಖ್ಯವೆ ಉಂಟುಉನ್ನತ ಮಹಿಮ ಗುರು ವಿಜಯ ವಿಠ್ಠಲ ಒಲಿವ || [ನಳ ನಾಮ ಸಂ|| ಚೈತ್ರ ಬ|| 12 ಆದಿತ್ಯವಾರ]
--------------
ಗುರುವಿಜಯವಿಠ್ಠಲರು
* ನೆರದು ಗೋಪಿಯರೆಲ್ಲಾರು ಕೃಷ್ಣಯ್ಯನ ಶೆರಗಪಿಡಿದುಕೊಂಡು ಅರುಹಿದರತಿ ಬೇಗದಿ ಪ. ಹಾಲು ಕರವುತಿರಲು ತೊಲೆಗೆ ನಿಚ್ಚಣಿಕೆಯ ಹಾಕದೆ ಸುರಿದಾನು ನೆಲವಿನ ಪಾಲ್ಮೊಸರಾ 1 ಅಂಮೈಯ್ಯಾ ಇಲ್ಲಾ ಕಾಣೆ ಇವಳು ಯಂನ್ನಾ ಸುಂಮ್ಮಾನೆ ದೂರುವಳು ಹುಂಮ್ಮಿಂದ ನಾನವಳ ಅಟ್ಟಕ್ಕೆ ನೆಗವೊರೆ ಬೊಮ್ಮ ಜಟ್ಟಿಗನೆ ನಾನು 2 ಮತ್ತೊರ್ವಳಿಂತೆಂದಳು ನಿಂನಮಗ ಹತ್ತಿ ಗವಾಕ್ಷಿಯಿಂದಾ ಬಚ್ಚಿಟ್ಟ ಬೆಣ್ಣೆಯನೆಲ್ಲಾವ ಮೆದ್ದಾನು ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆಯ ಮೆಲ್ವಾರೆ ಇವನ ಹೊಟ್ಟೆ ಕೆರೆಭಾವಿಯೇನೆ ಅಮ್ಮಾ ಹುಡುಗರಿಗೆ ಎಂದು ಬಚ್ಚಿಟ್ಟ ಬೆಣ್ಣೆಯನೆಲ್ಲಾ ಹೊಡೆದರವರ ಮಕ್ಕಳು 4 ಮಲಗೋಮಂಚದ ಮೇಲೆ ನಾ ಮಲಗೀರೆ ಮೊರೆವ ಹಾವನು ಪಿಡಿದು ಅರಿಯದಂತೆ ಬಂದು ಮುಸುಕಿ- ನೊಳಗಿಟ್ಟು ಅರಿಯಾದೆ ಹೋದನಂಮಾ 5 ಹರನಡುಗುವ ಹಾವನು ನಾ ಪಿಡಿವಾರೆ ತರಳಾನು ತಡೆಕಾರನೆ ಹರಕೆಯ ಹೊತ್ತುದವಪ್ಪಿಸದಿದ್ದರೆ ಗುರುತು ತೋರÀಲು ಬಂತೇನೊ 6 ಮಕ್ಕಳ ಪಡೆದವರುಯಿಲ್ಲದ ಕಳ ವಿಕ್ಕಲಿ ಬಹುದೆ ಕೃಷ್ಣಗೆ ಸಿಕ್ಕಿದ ತಪ್ಪು ಸಹಿತವೆ ತಂದರೆ ನಾನು ತಕ್ಕ ಬುದ್ದಿಯ ಪೇಳುವೆ 7 ಅಣುಮಯರೂಪ ಕಾಣೆ ನಿಂನಯ ಮಗ ಚಿನುಮಯ ರೂಪ ಕಾಣೆ ಚಿನುಮಯ ರೂಪ ಹೆಳ ವನಕಟ್ಟೆ ಆದಿಕೇಶವ ರಂಗನೆ8
--------------
ಹೆಳವನಕಟ್ಟೆ ಗಿರಿಯಮ್ಮ