ಒಟ್ಟು 6145 ಕಡೆಗಳಲ್ಲಿ , 127 ದಾಸರು , 3945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಡವಿನಿಲಯ ನಿನ್ನಡಿಗೆರಗುವೆ ಕರ ಪಿಡಿದು ಪಾಲಿಸಯ್ಯ ಪ ಮೃಡನುತ ಭಾರತಿ ಒಡೆಯನೆ ಪ್ರಾರ್ಥಿಪೆ | ಮಾಯಾ ಅ.ಪ ನಿನ್ನ ದರುಶನದಿ ಎನ್ನ ಜನ್ಮ ಪಾ | ವನ್ನ ವಾಯಿತಯ್ಯ | ನಿನ್ನನುಗ್ರಹಪಡೆದ ಸಂ | ಪನ್ನರೊಳಿಡು ಜೀಯಾ 1 ತರುಚರನರದ್ವಿಜ | ವರರೂಪತ್ರಯ | ಧರಿಸಿದಂಥ ದೇವ || ಶರಣರ ಸಂಜೀವಾ 2 ಸೃಷ್ಟಿಯೊಳಗೆ ಅತಿ ಶ್ರೇಷ್ಟನೆಂದೆನಿಸಿದ | ಕುಷ್ಟಗಿ ಮೂರುತಿ ಪುರವಾಸ ಧಿಟ್ಟ ಮೂರುತಿ ಶಾಮಸುಂದರ ವಿಠಲ ಪ್ರಿಯದಾಸ 3
--------------
ಶಾಮಸುಂದರ ವಿಠಲ
ಅಂತರಂಗದಲಿ ಹರಿಯ ಕಾಣದವನೆಹುಟ್ಟು ಕುರುಡನೋ ಪ ಸಂತತ ಸಿರಿಕೃಷ್ಣ ಚರಿತೆ ಕೇಳದವನೆಜಡಮತಿ ಕಿವುಡನೊ ಎಂದೆಂದಿಗುಅ.ಪ. ಹರುಷದಲಿ ನರಹರಿಯ ಪೂಜೆಯ ಮಾಡದವನೆ ಕೈ ಮುರಿದವನೊಕುರುವರ ಸೂತನ ಮುಂದೆ ಕೃಷ್ಣಾಯೆಂದುಕುಣಿಯದವನೆ ಕುಂಟನೋನರಹರಿ ಚರಣೋದಕ ಧರಿಸದ ಶಿರನಾಯುಂಡ ಹೆಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರ ಭೋಜನವೋ ಎಂದೆಂದಿಗು 1 ಅಮರೇಶ ಕೃಷ್ಣಗರ್ಪಿತವಿಲ್ಲದಾ ಕರ್ಮಅಸತಿಯ ವ್ರತನೇಮವೋರಮೆಯರಸಗೆ ಪ್ರೀತಿಯಿಲ್ಲದ ವಿತರಣೆರಂಡೆ ಕೊರಳ ಸೂತ್ರವೊಕಮಲನಾಭನ ಪಾಡಿ ಪೊಗಳದ ಸಂಗೀತಗಾರ್ಧಭ ರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರಮಾಡದವನೆ ಮೃಗವೊ, ಎಂದೆಂದಿಗು2ಜರೆ ಪುಟ್ಟು ಮರಣವ ತೊಡೆವ ಸುಧೆಯ ಬಿಟ್ಟುಸುರೆಯ ಸೇವಿಸಬೇಡವೊಸುರಧೇನುವಿರಲಾಗಿ ಸೂಕರ ಮೊಲೆಹಾಲುಕರೆದು ಕುಡಿಯಬೇಡವೊಕರಿರಥಾ ತುರಗವಿರಲು ಬಿಟ್ಟು ಕೆಡಹುವಕತ್ತೆಯೇರಲಿಬೇಡವೊಪರಮ ಪದವನೀವ ಸಿರಿಕೃಷ್ಣನಿರಲಾಗಿನರರ ಸೇವಿಸಬೇಡವೊ, ಎಂದೆಂದಿಗು 3
--------------
ವ್ಯಾಸರಾಯರು
ಅಂತರಾತ್ಮನ ದ್ಯಾನವನ್ನು ಅಂತರಂಗದಿ ಮಾಡೋ ನೀನು ಸಂತತ ನಿರ್ಮಲನಾಗಿ ನಲಿದಾಡು ಮನವೆ ಪ ನರದೇಹಕ್ಕೆ ಬಂದು ನೀನು ಇರುವಂಥಾ ಸಾರ್ಥಕವೇನು ಗುರುಕರುಣಕವಚವ ತೊಟ್ಟು ಕರ್ಮವ ಸುಟ್ಟು ಮಾಯಾ ಮೋಹವೆಲ್ಲವ ತರಿದು ಷಢ್ವೈರಿಗಳ ಶಿರವನು ಸರಸ ಹೃದಯದಿ ಮೆರೆವ ಜ್ಯೊತಿಯ ಬೆಳ ಗಿರುವ ಕೋಟಿಪ್ರಕಾಶದÀಂತಿಹ 1 ಬಿಡದೆ ಶ್ರೀ ಗುರುವಿನ ಪಾದಾ ಪಿಡಿದು ನಿತ್ಯಾನಂದ ಬೋಧಾ ಕಡಲ ತೆರೆಯೊಳು ಮಿಂದು ಕಾಮನ ಕೊಂದು ಅಡಿಗಡಿಗೆ ತತ್ವಾಮೃತರಸ ನಡುವಿರಳು ಶೀತ ಕಿರಣಕೋಟಿಯ ಪಡೆಯಕಟ್ಟಿದ ತರಣಿಯಂತಿಹ 2 ಮಂದಮತಿಯ ಕಳೆದು ಚಿದಾ ನಂದನ ಶ್ರೀ ದಿವ್ಯಪಾದ ಹೊಂದಿ ಬ್ರಹ್ಮಾ ನಂದರಸವಾ ಬಿಡದೆ ಸೇವಿಸುವ ಶಿವಾ ನಂದವನು ಕೈಕೊಂಡು ವಿಮಲಾ ನಂದ ದತ್ತಾತ್ರೇಯನೊಳಾಡುವಾ ಎಂದಿಗೂ ಆಳವಿಲ್ಲದಾತ್ಮನ ಚಂದವನು ನೋಡುತ್ತನಿನ್ನೊಳು 3
--------------
ಭಟಕಳ ಅಪ್ಪಯ್ಯ
ಅತ್ತೆಯಣುಗನು ಮತ್ತೆ ಸತ್ಯಾತ್ಮನಿವನೆನುತೆ ಚಿತ್ತದೊಳು ನೆರೆನಂಬಿ ಪತ್ನಿಯಾದೆ ಪಲಜನರನೆರೆಬೇಡಿ ಪಲಜನರನುರೆ [ವಧು]ಕಾಡಿ ಪಲಸತಿಯರ ಕೂಡಿದಿವನಗಾಡಿ ಅರಿತು ಪೇಳುವರುಂಟೆ ಸರಸಿಯಿವನೆಂದೆನುತೆ ನೆರೆದು ಜೀವಿಪರುಂಟೆ ಅರರೆ ತಂಟಿ ಮೋಸಗಾರರೊಳಗಗ್ರೇಸರನು ಈ ವರನು ವಾಸುದೇವನು ಬಂಧುದ್ವೇಷಿಯಿವನು ಸ್ತ್ರೀಯರನದಾವಗಮನದೆನಿತೊ ಜರೆವ ಮಾಯೆಯಿಂದವರೊಡನೆ ಕೂಡಿಮೆರೆವ ಬಾಯೊಳಗೆ ಸುಬ್ರಹ್ಮಜ್ಞಾನ ಮೊರೆವ ಜೀಯ ಶೇಷಗಿರೀಶತಾನೆಂದು ನಲಿವ
--------------
ನಂಜನಗೂಡು ತಿರುಮಲಾಂಬಾ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅಂಥವನಲ್ಲಾ ಕಾಣಿರೇ ಸಂತತ ತೃಪ್ತಾ ಪ ಹಸಿದರೆ ಬಂದು ಬೇಡಿ ತುಸು ಹಾಲು ಕೊಳ್ಳಲರಿಯಾ ಮೊಸರಾಲು ಕುಡಿಯ ಬಲ್ಲನೇ ನಮ್ಮ ಶ್ರೀರಂಗಾ 1 ಗಡಿಬಿಡಿಯನ್ನಾಲಾಗ ವಡನೆಂಜಿಸಾರುವ ಕಡೆವ ಬೆಣ್ಣೆಯ ಮೆಲುವನೇ 2 ತರಳರ ಕೂಡ ಹೋಗಿ ಬರಲು ಹಾದಿ ತಪ್ಪವ ಕೇರಿ ಕೇರಿತಿರುಗಬಲ್ಲನೇ 3 ಹೊಸ ಮೋರೆ ಕಾಣಲು ಕುಸಿದು ತಲೆ ಭಾಗುವ ವಿಷಯಕ್ಕೆ ನಿಮ್ಮ ಯಳೆವನೇ 4 ಅಡಿಯಿಡ ವುತ-ಕಾಲ ತೊಡಕಿತಾ ಬೀಳುವಾ ತುಡುಗದಿ ಓಡ ಬಲ್ಲನೇ 5 ಹಡೆದಾ ಮಕ್ಕಳು ನಿಮಗ ಪೊಡವಿಯೊಳಿಲ್ಲವೇನೇ ಬಿಡ ನುಡಿಗವ ಸಲ್ಲನೇ 6 ಗುರು ಮಹಿಪತಿ ಸ್ವಾಮಿ ಸರಸಾಟಕವತಾಳಿ ಚರಿಸುವ ಅಂತದೋರನೇ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಂದರೇನೋ ಆ ನಾರಿಯರು ನಿನ್ನಂದರೇನೋ ಪ ಕಂದಯ್ಯ ನಿನ್ನಂದಾರೇನೋ ಅ.ಪ ಬಿಸಿಲೊಳು ಮನೆಕಟ್ಟಿ ಬಿಸಿಬಿಸಿಯಾಗಿ ಹಾಲೆರದೂ ಕೊಲ್ಲೀಸುವೆ ನೀನಳದಿರಣ್ಣಾ1 ನಿನ್ನಾಡಿಕೊಂಬೋರಚೆನ್ನಾಗಿ ಹಿಡಿದೆಳತಂದು ಬೆನ್ಹಾ ಹೊಯಿಸುವೆನೀನಳಬೇಡವೋ ಚಿನ್ನಾ 2 ಬಲುಭಂಗಾ ಪೋಗಾಬೇಡಾ 3 ಪಾಲು ಮೊಸರನ್ನವ ಕಲೆಸಿ ನಾ ಉಣಿಸುವೆ ಸದ್ದು ಮಾಡದೆ ಉಂಡು ನಿದ್ರೆ ಮಾಡೆನ್ನ ಕಂದಾ 4 ಮುದ್ದು ಕಂದಯ್ಯ ನೀನು ಮಡುವ ಧುಮಿಕಿದರೆ ಮನದಾ ಸಂತಾಪ ಸೈರಿಸಲಾರೆನೋ 5 ಶೇಷ ಗಿರೀಶನೆ ದಾಸರಧಿನನೇ ಶೇಷ ಶಯನನೇ ವೇಂಕಟ ವಿಠಲನೇ 6
--------------
ರಾಧಾಬಾಯಿ
ಅಂದವ ಜರೆವರಾರು ರಂಗ ನಿನ್ನ ಅಂಗವ ಹಳಿವರಾರು ಪ ಅಂದವ ಜರೆವರಾರೋ ಇಂದೀವರಾಕ್ಷ ಗೋವಿಂದ ನಿ ನ್ನಂದಕೇಣಿ ಬಂದವರಿಲ್ಲವಯ್ಯ ಅ.ಪ ನೀರಮೀನು ಎಂಬರೇನೋ ರಂಗಯ್ಯ ಭಾರಿ ಕೂರ್ಮನೆಂಬರೇ ಭಾರಿ ರೋಮ್ಯನು ಎನೆ ಭೂರಿಸಂತಸವಿತ್ತೇ 1 ಕೋರೇ ಹಲ್ಲವನೆಂಬರೇ ರಂಗಯ್ಯ ಕೇಸರಿ ಎಂಬರೇ ಕೋರೆ ಹಲ್ಲಿಗೆ ಶೃಂಗಾರ ಧರಣಿದೇವಿ ಘೋರ ಕೇಸರಿಗೆ ಹತ್ತಾರು ಕೈಗಳು ಚಂದ 2 ಕೊಡಲಿ ಹಿಡಿದನೆಂಬರೇ ಕೊಡೆಯ ಹಿಡಿದಡೇನು ಬಲಿಯ ಬಾಗಿಲ ಕಾಯ್ದೆ ಕೊಡಲಿ ಹಿಡಿದು ಕಾರ್ತವೀರ್ಯಾರ್ಜುನನ ಕೊಂದೆ 3 ಎಂಜಲ ತಿಂದರೇ ರಂಗಯ್ಯ ಗುಂಜುಗದಾತನೆಂಬರೇ ಎಂಜಲ ತಿಂದಾ ಬಲದಿ ಮಾರೀಚನ ಕೊಂದೇ ಗುಂಜುಗ ವೇಗದಿಂದ ಸತಿಯ [ಬಿಡಿಸಿ ಕಂದೆ] ಕಂಜನೇತ್ರೆಯಳ ಕೈ [ಹಿಡಿದು ಬಂದೆ] 4 ದುರುಳ ಚೋರನು ಎಂಬರೇ ರಂಗಯ್ಯ ತುರಗವನೇರಿದನೆಂಬರೇ ದುರುಳ ಕೌರವರೆದೆ ಬಿರಿವಂತೆ ಮಾಡಿದೆ ದುರಿತಾರಿ ನೀ ಮಾಂಗಿರಿಯ ರಂಗಯ್ಯ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಂದಾರಮ್ಮಾ ಆ ನಾರಿಯರು ನನ್ನಂದಾರಮ್ಮಾ ಪ ಗೋಪಾಲನೆಲ್ಲಾ ಸೂರೆಗೊಂಬುವೆ ನಂತೇ ಕುಡಿದು ಗಡಿಗೆಯ ಒಡೆದು ತೂತು ಮಾಡಿದೆನಂತೆ 1 ನಾರೀಮಣಿಗಳೆಲ್ಲ ನೀರಿಗೆ ಪೋಪಾಗ ದಾರಿಗಡ್ಡವಕಟ್ಟಿ ಒಳ್ಳೆ ಬುದ್ದಿ ಇಲ್ಲಾವಂತೇ ಯನ್ನ ಹೋಗ್ಹೋಗಂದರಮ್ಮಾ2 ಕಟ್ಟಿ ಬರಿದ ಬಾಧಿಸುವರೇ ಸುಳ್ಳಾಡಿ ಕೊಂಬೋರೆ 3 ಮುದ್ದು ಮಾಡಿದಿಯಂತೆ ಬುದ್ಧಿ ಕಲಿಸಲಿಲ್ಲವಂತೆ ಮೊಸರು ಬೆಣ್ಣೆಗಳನು ಮೆದ್ದು ಓಡುವೆನಂತೆ 4 ಮಡುವನ್ನಾದರು ಪೋಗಿ ಧುಮುಕುವೆನೇ ತಾಯೆ 5
--------------
ರಾಧಾಬಾಯಿ
ಅಂದೇನಿಂದೆನುತಾ ಪ ಒಂದು ಮನದಿ ನಿಂದು ನಂಬ ಬಲ್ಲಡೆ ಸಾಕು|ತನ್ನ| ಹೊಂದಿದವರ ಕಾವಾ ಇಂದಿರೇಯರಸನು ಅ.ಪ. ಸಗರ ಕಾರ್ತೀಕನು ಭಗೀರಥ ಮೊದಲಾದಾ| ಸುಗುಣ ರಾಯರನುಧ್ಧರಿಸಿಹ| ಜಗದೊಳೀ ಪಾಮರ ಲೋಕದ ಕುಂದವ| ಬಗೆಯದೇಪಾವನ ಮಾಡುವ ಗಂಗೆಗೆ 1 ರನ್ನಗಣಕು ಪರೀಕ್ಷೆ ಮುಖ್ಯರಾಗಿಹ| ಮನ್ನೆಣೆಯವರನು ಎಚ್ಚರಿಸಿ| ಮುನ್ನಿನ ಬೋಧಧಿ ಭಾವಿಕ ಸಾಧಕ| ರನ್ನು ತಾರಿಸುವ ಸತ್ಸಂಗ ಮಹಿಮೆಗೆ 2 ಹಿಂದಿನ ಶರಣರ ಸಲಹಿದ ದೇವರಿ| ಗಿಂದೇನು ಮಹಿಮೆಗೆ ಬಲ್ಲವಿಲ್ಲದೇ| ತಂದೆ ಮಹಿಪತಿ ಸ್ವಾಮಿಯ ನಾಮವ| ಛಂದದಿ ನೆನೆಯುತ ಇಹಪರ ಪಡೆವುದಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅದ್ಭುತ ಅದ್ಭುತ ಪರಮಾದ್ಭುತನೆ ಪ ಮಧ್ವರ ಚರಣದಿ ಬಿದ್ದ ಜನರಪರಿ ಶುದ್ಧಗೈದು ಸುಖ ಸಿದ್ಧಿಗೊಳಿಪ ಹರಿ ಅ.ಪ ಅನವದ್ಯ ಪರಾತ್ಪರ ಶುದ್ಧ ಸುಖಾತ್ಮಕ ಕದ್ದನೆ ಬೆಣ್ಣೆಯನು ಮಧ್ವರ ದೇವನು ಪದ್ಮಾಲಯ ಪತಿ ಸಿದ್ಧಿ ಸುವಂದಿತ ಕದ್ದನೆ ಕನ್ಯೆಯನು 1 ಮೇದಿನಿ ತಂದವ ಮೇದಿನಿ ಅಳಿಯನೆ ವೇದವ ತಂದವ ವೇದಸು ಬÉೂೀಧಕ ಬುದ್ಧನು ಆಗುತ ವೇದವ ನುಳುಹಿದನೆ 2 ಸತ್ಯವತೀ ಸುತ ಸತ್ಯನ ಸತ್ಯನು ಬತ್ತಲೆ ನಿಲ್ಲುತ ಸತಿಯರ ಕೆಡಸಿದನೆ ಕತ್ತಲೆ ಕಾಣದ ಉತ್ತುಮ ದೇವನು ಮಿಥ್ಯಾಜ್ಞಾನವ ಬಿತ್ತಿದನೆ 3 ಅನ್ನಾದನ್ನನು ಅನ್ನದ ಬೃಹತೀ ಅನ್ನನು ಸತಿಯರ ಅನ್ನವ ಬೇಡಿದನೆ ಉಣ್ಣದೆ ರಾಜನ ಅನ್ನವ ವಿದುರನ ಅನ್ನವ ನುಂಡನು ಸಣ್ಣವನೆನ್ನದಲೆ 4 ನಿಂದೆಯ ಸುರಿಸಿರೆ ನಂದವ ನೀಡಿದ ವಂದಿಸಿ ರಾಜ್ಯವ ಮುಂದಿಡೆ ಜರಿದವನೆ 5 ಅಣ್ಣನ ಕೊಂದು ತಮ್ಮನ ಸಲಹಿದ ಸಣ್ಣನು ತಮ್ಮನ ಅಣ್ಣನ ಮಾಡಿದ ಅಣ್ಣ ತಮ್ಮಂದಿರ ನುಣ್ಣಗೆ ಸವರಿದ ಅಗಣ್ಯ ಮಹಿಮ ಮೈಗಣ್ಣಗೆ ವಲಿದಿಹನೆ 6 ಭಾರೀ ಗಿರಿಧರ ನಾರಿಯು ಆದನು ಮಾರನ ಪಡೆದವ ನಾರೇರಿ ಗೊಲಿದನೆ ನಾರಿಯು ಮೊರೆಯಿಡೆ ಸೀರೆಯ ಕರೆದವ ಜಾರನು ಎನಿಸುತ ಶೀರೆಯ ಚೋರನೆ 7 ಇಲ್ಲಿಹೆ ಅಲ್ಲಿಹೆ ಎಲ್ಲಾಕಡೆಯಿಹ ಎಲ್ಲರ ಒಳಗಿಹ ಎಲ್ಲರ ಹೊರಗಿಹ ಎಲ್ಲವ ಬಲ್ಲನು ಬಲ್ಲ ವರಿಲ್ಲವೆ 8 ಅಣುಕಿವÀ ಅಣುತಮ ಘನಕಿವ ಘನತಮ ಅಣು ಘನ ಮಾಡುವ ಘನ ಅಣುಮಾಡುವ ಅಣುವಲಿ ಅಡಗಿಪ ಘನವನು ಬಲ ಬಲ ತೃಣ ಸಹ ಚಲಿಸದು ಚಿನುಮಯ ನಿಲ್ಲದೆ 9 ಜಾಗರ ಸ್ವಪ್ನ ಸುಷುಪ್ತಿಗಳೆಲ್ಲವ ಆಗಿಸಿ ಕಾಯುವ ಯೋಗಸು ಭೋಕ್ತನು ಬೀಗರ ಮನೆಯಲಿ ಸಾಗಿಸಿ ಯಂಜಲ ತೇಗಿದ ತಿನ್ನುತ ಶಾಖವ ನಿಜಕರುಣಿ 10 ಲೋಕವ ಸೃಜಿಸುವ ಲೋಕವ ನಳಿಸುವ ಲೋಕನು ಪಾಲಕ ಲೋಕ ವಿಲಕ್ಷಣನೆ ನಾಕರ ನಾಯಕ ನಾಕಗತಿ ಪ್ರದ ಶೋಕವಿದೂರಗೆ ತಾಕಿತು ಕೊಡಲಿ ಬತ 11 ಎಲ್ಲಾ ನಾಮವು ಇವನದೆ ಸರಿಸರಿ ಎಲ್ಲಾ ರೂಪವು ಕೂಡ್ರವ ದಿವನಿಗೆ ಎಲ್ಲಾ ಚೇತನ ಜಡದಿಂ ಭಿನ್ನನು ಎಲ್ಲಾ ಕಾಲದಿ ಒಂದೇ ಸಮನಿಹ 12 ಎಲ್ಲಾ ರೂಪಗಳೊಂದೇ ಸಮ ಬತ ಎಲ್ಲಾ ರೂಪದನಂತ ಗುಣಂಗಳು ಎಲ್ಲಾ ರೂಪವು ನಿತ್ಯಸು ಪೂರ್ಣವು ಎಲ್ಲಾ ಮಹಿಮೆಯ ಯಾರು ಕಾಣರು 13 ಜೀವರ ಬಿಂಬನು ಜೀವನ ಸಹವಿಹ ಜೀವರಿ ಗುಣಿಸುವ ಸುಖ ದುಃಖಂಗಳ ಸಾರ ಸುಭೋಕ್ತನು ಜೀವರಿ ಗಲ್ಲವೆ ಕರ್ಮದ ಲೇಪವು 14 ಅಗಣಿತ ಮಹಿಮನು ನಗೆಮೊಗ ಶ್ರೀ ಕೃಷ್ಣವಿಠಲ ಪರಾತ್ಪರ ಸಿಗುವನು ಭಕ್ತಿಗೆ ಸರಿಮಿಗಿಲಿಲ್ಲವೆ ಬಗೆಯನೆ ದೋಷವ ಶರಣೆಂದವರ15
--------------
ಕೃಷ್ಣವಿಠಲದಾಸರು
ಅದ್ರಿಸಂಭವೆ ಸರ್ವಸಂಭ್ರಮದೊಳುಭಾದ್ರಪದ ಶುದ್ಧ ತದಿಗೆಯ ದಿವಸದಿಸದ್ರಾಜಮಾರ್ಗದಿ ನಡೆತರಲುನಡೆತರೆ ಸತ್ಯಭಾಮೆ ರುಕ್ಮಿಣಿಯೊಳೀಭದ್ರೆ ಯಾರೆಂದು ನುಡಿದಳು 1 ಕೋಟಿ ಸೂರ್ಯಕಾಂತಿಯ ನವರತ್ನ ಕಿರೀಟಾಗ್ರದಿ ಚಂದನ ರೇಖೆಯಮೀಟೆನೆ ತಳೆದು ಬಾಹವಳಾರೆ ಅಕ್ಕಕೈಟಭವೈರಿಯ ಸತಿಕೇಳೆ ಮಧುಕೈಟಭ ದಾನವರ ಗೆಲಿದ ಶಶಿಜೂಟನ ವಲ್ಲಭೆ ಶಂಕರಿ ಶಾಕಂಬರಿಯೀಕೆ ಕಾಣೆ 2 ಸತಿ ಕೇಳೆಚಂಡಾಮುಂಡಾಸುರರನು ಗೆಲಿದು ಭೂಮಂಡಲವ ಕಾಯ್ದ ದೇವಿ ಭವಾನಿಯೀಕೆ ಕಾಣೆ 3 ವೀರಮುದ್ರಿಕೆ ಕಂಕಣ ಕಡಗವದೋರೆ ಹಿಂಬಳೆ ದಂಡು ಮುತ್ತಿನಹಾರವ ಧರಿಸಿ ಬಾಹವಳಾರೆ ಅಕ್ಕನಾರಾಯಣನರಸಿ ನೀ ಕೇಳೆಧೀರನಿಶುಂಭನ ಗೆಲಿದಮರರ ಪರಿವಾರವ ಪೊರೆದ ಪರಶಿವೆ ಪರಮೇಶ್ವರಿ ಕಾಣೆ 4 ಮೆರೆವೇಕಾವಳಿಗುಂಡಿನಸರಪರಿಪರಿ ಚಕ್ರಸರ ನಕ್ಷತ್ರದಸರಗಳ ಧರಿಸಿ ಬಾಹವಳಾರೆ ಅಕ್ಕಕರಿವರದನ ಅರಸಿ ನೀ ಕೇಳೆಧುರದೊಳೆ ಧೂಮ್ರಾಕ್ಷನ ವಧಿಸಿದಗಿರಿರಾಜ ಕುಮಾರಿ ಮಂಗಳಗೌರಿ ದೇವಿ ಈಕೆ ಕಾಣೆ5 ಅಚ್ಚ ಮುತ್ತಿನ ಸರಗಳ ನಡುವೆಪಚ್ಚೆಯ ರತುನದ ಪಂಚಸರಗಳನಿಚ್ಚಳದಿ ಧರಿಸಿ ಬರುವವಳಾರೆ ಅಕ್ಕಅಚ್ಚುತನ ಅರಸಿ ನೀ ಕೇಳೆಅಚ್ಚರಿಯನೆ ಶುಂಭ ನಿಶುಂಭರಕೊಚ್ಚಿದ ರುದ್ರಾಣಿ ಶಿವೆ ಶರ್ವಾಣಿ ಈಕೆ ಕಾಣೆ 6 ಚೆಂಗಾವಿಯ ಸೀರೆಯನುಟ್ಟುರಂಗುರತುನದೊಡ್ಯಾಣವನುಟ್ಟುಭೃಂಗಕುಂತಳನರ್ತಿಸೆ ಬಾಹಳಾರ ಅಕ್ಕಅಂಗಜನ ಮಾತೆ ನೀ ಕೇಳೆಸಂಗರದಲಿ ರಕ್ತಬೀಜನ ಗೆಲ್ದಗಂಗಾಧರನರಸಿ ಕಾಳಭುಜಂಗವೇಣಿ ಈಕೆ ಕಾಣೆ 7 ಝಗಝಗಿಸುವ ಕುಂಕುಮರೇಖೆಮಗಮಗಿಸುವ ಮೃಗಮದ ತಿಲಕದಿಅಗಿಲುಗಂಧದೊಳೊಪ್ಪುತ ಬಾಹಳಾರೆ ಅಕ್ಕನಗಧರನಂಗನೆ ನೀ ಕೇಳೆಜಗಳದೆ ಮಹಿಷನ ಮಿಗೆ ಮರ್ದಿಸಿದಗಣಿತ ಸನ್ಮಹಿಮಾಸ್ಪದೆ ಸರ್ವೇಶ್ವರಿ ಈಕೆ ಕಾಣೆ8 ಕೆಂದಾವರೆಯಂದವ ನಿಂದಿಪಬಂಧುರಪದದಂದುಗೆ ಕಲಿರೆನೆಕುಂದಣದ ಸರಪಣಿಯಿಟ್ಟು ಬಾಹಳಾರೆ ಅಕ್ಕಮಂದರಧರನಂಗನೆ ಕೇಳರ-ವಿಂದಜ ಸಂಕ್ರಂದನಮುಖಿ ಸುರವೃಂದವ ಪೊರೆವ ಮಾಹೇಶ್ವರಿ ಈಕೆ ಕಾಣೆ 9 ಮರುಗ ಮಲ್ಲಿಗೆ ಸುರಗಿ ಸೇವಂತಿಗೆಪರಿಮಳಿಸುವ ಸಂಪಗೆ ಕೇದಗೆ-ಯರಳನೆ ಮುಡಿದು ಬಾಹವಳಾರೆ ಅಕ್ಕಮುರಹರನಂಗನೆ ನೀ ಕೇಳೆವರ ಕೆಳದಿಯ ಪುರದೊಳು ನೆಲಸಿದವರದ ರಾಮೇಶ್ವರನಂಗನೆ ಪಾರ್ವತಿ ಈಕೆ ಕಾಣೆ 10
--------------
ಕೆಳದಿ ವೆಂಕಣ್ಣ ಕವಿ
ಅಧೀನ ಸ್ತೋತ್ರ ನಿನ್ನಧೀನವು ಎಲ್ಲ ಘನ್ನ ಸುಮಹಿಮನೆ ಪ ಬೊಮ್ಮನ ಪಿತ ನೀನು ಅಮ್ಮ ಲಕುಮಿಪತೆ ಎಮ್ಮನು ಪೊರೆ ಶ್ರೀನಿವಾಸ 1 ಬೃಹದಣುರೂಪನೆ ಮಹದಣು ಸರ್ವದಿ ಬಹಿರಂತರದಿ ಇಹ ಮಹಾವಿಷ್ಣು ಪರಮಾತ್ಮ 2 ಸಿರಿಯು ನಿನ್ನೊಡಗೂಡಿ ಚರಿಪಳು ಎಲ್ಲೆಲ್ಲೂ ಸರಿ ಯಾರು ನಿನಗಿಲ್ಲ ಪರರುಂಟೆ ಸಿರಿಸೇವ್ಯ 3 ಅಜ ನರಹರೇ ನಮೋ ಸೃಜಾಸೈಜ ಅಂಗಗಳೊಳ್ ಜ್ವಲಿಸುವೆ ಶಕ್ತೀಶ 4 ಪೋಷ ಕಲುಷಹ ಶೇಷಗಿರೀಶನೆ ದೋಷವೇನಿಲ್ಲದ ಹೃಷೀಕೇಶ ಕ್ಷೇತ್ರಜ್ಞ 5 ಏಕಮಾದ್ವಿತೀಯ ಸರ್ವೋತ್ತಮ ಭೂಮನ್ ಸಾಕಲ್ಯ ನಿನ್ನ ತಿಳಿಯಲು ಅಶಕ್ಯ 6 ಪ್ರಾರ್ಥಿಸಲರಿಯೆ ನಾ ದಯದಿ ನೀ ಸಲಹೆನ್ನ ವೃತತಿಜಾಸನ ತಾತ ಪ್ರಸನ್ನ ಶ್ರೀನಿವಾಸ 7
--------------
ಪ್ರಸನ್ನ ಶ್ರೀನಿವಾಸದಾಸರು
ಅಧ್ಯಾಯ :ನಾಲ್ಕು ಪದ್ಯ ಮುಂದೆ ತ್ರೇತಾಯುಗವು ಬಂದಂಥ ಕಾಲದಲಿ ಇಂದಿರೇಶನು ರಾಮಯೆಂದು ದಶರಥನಲ್ಲಿ ಕಂದನಾಗ್ಯವತರಿಸಿ ತಂದೆ ಆಜ್ಞದಿ ಸೀತೆಯಿಂದ ಲಕ್ಷ್ಮಣನಿಂದ ಚಂದಾಗಿ ಬಡಗೂಡಿ ವನ ಚರಿಸಿ ಬಂದ ಯಮುನಾದ್ರಿಯಲಿ ನೊಂದು ನೀರಡಿಸಿ ತನ್ನ ಬಾಣದಿಂದ ಭೇದಿಸಿದಾ|| 1 ತಡವು ಇಲ್ಲದೆ ಭೂಮಿ ಒಡೆದು ಬಂದಿತು ಆಗ ಕಡು ಭೋಗವತಿ ನಾರಿಯು ಗುಡದಂಥ ಸವಿನೀರು ಕುಡಿದು ನರನಂತೆ ದೃಢನಿದ್ರೆಗೊಂಡ ಜಗದೊಡೆಯ ರಾಘವನು|| ದೃಢವಾಗಿ ಬಹುಕಾಲ ಬಿಡದೆ ಅಲ್ಲಿರುವ ಆ ಮೃಡನ ರಾಣಿಯು ತಾನು ನಡೆದು ಬಂದಳು ಅಲ್ಲೇ ಶರಗರಾದಿ ಕೈಯಲ್ಲಿ ಹಿಡಿದು, ಆರತಿಯನ್ನು ದೃಢಭಕುತ ಲಕ್ಷಣನು ದೃಢ ನಿದ್ರಿಗೊಂಡಂಥ ಒಡಿಯಗೆಚ್ಚರ ಮಾಡಗೊಡದೆ ಆಕೆಯ ಕಂಡು ನುಡಿದನೀಪರಿಯ|| ಪದ ರಾಗ:ಭೈರವಿ ಅಟತಾಳ ಸ್ವರ ಋಷಭ ದಾವಾಕಿ ಪೇಳಮ್ಮಾ|| ಬಂದವಳು ನೀ ದಾವಾಕಿ|| ದಾವಾಕಿ ಪೇಳಮ್ಮಾ ದಾವ ರಾಜನ ಸತಿ ದಾವ ಕಾರಣದಿಂದ ಧಾವಿಸಿಲ್ಲಿಗೆ ಬಂದೆ|| ಪ ಸುಂದರಿ ವಾಣಿಯೋ|| ಅಥವಾ ಮುಶುಂದನ ರಾಣಿಯೋ|| ಇಂದ್ರನ ರಾಣಿಯೋ|| ಚಂದ್ರನ ರಾಣಿಯೋ|| ಚಂದ್ರಮುಖಿಯೇ ನೀನು ಚಂದಾಗಿ ಪೇಳಮ್ಮಾ|| 1 ಭಾತೃರಾದವರು ನಾವು|| ಪರಸ್ಪರ ಪ್ರೀತಿಯಿಂದಿರುವೆವು|| ಸೀತಾವಿರಹದಿಂದ ಸೋತುಬಂದೆವು ಇಲ್ಲೆ ಮಾತೇ ಮೌನವು ಬಿಟ್ಟು ಮಾತಾಡು ಬ್ಯಾಗನೇ|| 2 ಬ್ರಹ್ಮಚರ್ಯವೆಂಬುದು|| ಈ ಕಾಲಕ್ಕೆ ನಮ್ಮಲ್ಲಿ ಇರುವುದು|| ತಮ್ಮ ಲಕ್ಷ್ಮಣ ನಾನು ನಿರ್ಮಲ ಗುಣರಾಮ ನಮ್ಮಣ್ಣನಿವ ಪರಬ್ರಹ್ಮಾನಂತಾಧ್ರೀಶಾ|| 3 ಆರ್ಯಾ ಲಕ್ಷ್ಮಣ ನಾಡಿದ ಮಾತೂ|| ಲಕ್ಷಿಗೆ ತರಲಿಲ್ಲ ದೇವಿ ಮಾತಾಡಿದನೂ ಹೀಗೆಂದೂ|| ಪದ ರಾಗ:ಧನ್ಯಾಸಿ ಆದಿತಾಳ ನಡಿ ನಡಿ £ಡಿ ನೀನು || ನುಡಿಯದ ಭಾಗಿಯೇನು|| ನ || ನಡಿ ನಡಿ ಹಿಂದಕು ಬಡಿವಾರೇನಿದು ಬಿಡು ಬ್ಯಾಗನೆ ನಿನ್ನ ಎನಗೆ ಬಿಡದೆ ಬಾಣದಿಂದೊಡೆವೆನು ನಾನು| ಪ ಎಕಾಂತ ಸ್ಥಳಕೆ ಕಾಲಕೆ ಒಬ್ಬಾಕೆ ಬರುವದಿದು ದಿಂದ ನೀ ಬೇಕಾದಲ್ಲೆ|| 1 ವನವನ ಚರಿಸುಲವ ವನವಾಸಿಗಳಿಗೆ ವನುತಿಯ ಸಂದರ್ಶನ ನಮಗ್ಯಾಕಿದು ಗುಣವಂತಿಯೆ ಅರಕ್ಷಣ ನಿಲ್ಲದಲೆ 2 ಕಾಲದಲಿ ಗದ್ದಲ ಮಾಡದೆ ಬುದ್ಧಿವಂತೆಯೆ|| 3 ಅನುಜನ ಈಪರಿ ಸಿಟ್ಟು || ಅನುಸರಿಸುತಾ ಎದ್ದ ನಿದ್ರೆಯನು ಬಿಟ್ಟು || ವನುತಿಯ ನೋಡಿದ ರಾಮ|| ವಿನಯದಿ ಮಾತಾಡಿವನು ಗುಣಧಾಮ || 1 ಪದ ರಾಗ:ದೇಶಿ ಅಟತಾಳ ಸ್ವರ :ಷಡ್ಜ ದಾರ್ಹೇಳಮ್ಮಯಾ ಉದಾರ್ಹಳಗಿರುವೆ ನೀ || ದಾರ್ಹೇಳಮ್ಮಯ|| ದಾರಿಲ್ಲಿ ಸ್ಥಳದಲ್ಲಿ ದಾರನ್ಹುಡುಕುವಿ ನಿ|| ದಾ|| ಪ ವನದಲ್ಲೆ ಇರುವಂಥ ವನದೇವತೆಯೇ ನೀ|| ದಾ|| ಮನಿಯಲ್ಲೇ ಇರುವಂಥ ಮನಿದೇವತೆಯೋ ನೀ || ದಾ|| 1 ಪ್ರಾಯಶ ಶ್ರೀಹರಿ ಮಾಯಾರೂಪಿಯೋ ನೀನು || ದಾ|| ಆಯಾದ ವಿಲ್ಲದೆ ಬಾಯಿಲೆ ಬಿಚ್ಚಾಡು || ದಾ||2 ಕ್ಲೇಶ ವೋಡಿಸುವಂಥ ಈಶನ ರಾಣಿಯೋ || ದಾ|| ದೋಷರಹಿ ತಾನಂತಾಧ್ರೀಶನ ರಾಣಿಯೋ|| 3 ಆರ್ಯಾ ಕೋಮಲತರ ವಚನಗಳೂ || ರಾಮನ ಬಾಯಿಂದ ಮಾತಾಡಿದಳು ಹೀಗೆಂದೂ|| 1 ಪದ ರಾಗ:ದೇಶೀ ಆಟತಾಳ ಸ್ವರ :ಷಡ್ಜÀ ಕೇಳೋ ರಾಮನೆ ನಿನಗ್ಹೇಳುವೆ ಗುರುತವ || ಕೇಳೋ ರಾಮ|| ಕೇಳುತ ನಿನ್ನ ಮಾತು ಬಾಳ್ಹಾನಂದಾಯಿತು || ಕೇಳೋ|| ಪ ವನದೇವತೆ ಅಲ್ಲ ಮನಿಯ ದೇವತೆ ಅಲ್ಲ || ಕೇ|| ವನಜಾಕ್ಷ ತುಳಜಾಯಂದ್ಯನಿ ಕೊಂಬುವೆ ನಾನೂ || ಕೇ|| 1 ಮಾಯಾರೂಪಿಯು ಅಲ್ಲ ಆಯಾಸಯನಗಿಲ್ಲ ||ಕೇ|| ಮಾಯಾರಮಣ ನಿನ್ನ ತಾಯಿ ಯಂದ್ಯನಿಸುವೆ || ಕೇ|| 2 ಶುದ್ಧ ಚಿನ್ಮಯ ಅನಂತಾದ್ರಿರಮಣ ನೀನು || ಕೇ|| ಸಿದ್ಧಾಗಿ ನಾ ಯಮುನಾದ್ರಿಯಲ್ಲಿರುವೆನು||3 ಆರ್ಯಾ ಕಾಯಜ ಪಿತ ಕೇಳಿದನೂ|| ಹಾಯಿದು ಏನೆಂದೂ|| ಮಾತನಾಡಿದನೂ || ಆಯತಾಕ್ಷಿ ಆದವಳೂ || ತಾಯಿಯು ಎನಗ್ನಾಂಗಾದಿ ನೀ ಪೇಳೆ|| 1 ರಾಮನ ಮಾತಿಗೆ ತುಳಜಾ || ಪ್ರೇಮದಿ ಮಾತಾಡಿದಳು ತಾವಿರಜಾ || ರಾಮಗ ಕಥಿ ಆದಂತಾ|| ನೇಮಿಸಿ ಹೇಳಿದಳು ಪೂರ್ವ ವೃತ್ತಾಂತಾ|| 2 ಪದ್ಯ ರಾಮಕೇಳು ಪೂರ್ವದಲ್ಲಿ ಜಮದಾಗ್ನಿಯು ಪರಶುರಾಮನಾಗಿರುವಿ ನೀನಾ ಮಹಾಮುನಿ ಪತ್ನಿ ನಾಮದಲೆ ರೇಣುಕಿಯು ನೀ ಮಗನು ಎನಗಾದಿ ಭೂಮಿಯಲಿ ಪ್ರಾಖ್ಯಾತ ನಾಮತಿ ಕೃತವೀರ್ಯಜನು ಕಾಮಧೇನುವು ಬಯಸಿ ಆ ಮುನಿಯ ಕೊಂದಿರಲು ಆಮ್ಯಾಲ ಪತಿಯಿಂದ ನೇಮದಲಿ ಸಹಗಮನ ನಾ ಮಾಡಿದೆನು|| 1 ಪತಿಯ ಪ್ರೇಮದಲಿ ಸ್ಮರಿಸಿ ಪರಶುರಾಮನು ಎನ್ನಸ್ಮರಿಸಿ ಕೈಮುಗಿದು ಈ ಪರಿಯು ಮಾತಾಡಿದನು ವರ ಮಾತೆಯನು ಕೂಡಿ ಇರದೆ ನೀ ಹೋದಿ ಸಂದರ್ಶನವು ಎಂದಿನ್ನ ತ್ವರದಿ ನೀ ಹೇಳೆನಗೆ ಕೇಳುತಲೆ ತ್ವರದಿಂದ ನಾನು ಸುಂದರ ರೂಪವ ತೋರಿ ಈ ಪರಿಯು ಮಾತಾಡಿದೆನು ವರಪುತ್ರ ಕೇಳು ಮುಂದಿರುವ ತ್ರೇತಾಯುಗವು ಬರುತಿರಲು ಆಗ ಸಂದರ್ಶನವ ಕೊಡವೆ|| 2 ಹೀಗೆಂದು ಹೇಳಿದ್ಯಾಗ ಆತಗ ನಾನು ಈಗ ಆತನೇ ನೀನು ರಾಘವನು ಆಗಿರುವಿ || ಹಿಂಗೆನಲು ಮುಂದೆ ಆ ರಾಘವನು ಕೊಟ್ಟಳಾಗ ತುಳಜಾದೇವಿ ಬ್ಯಾಗ ನಿನ್ನ ಕಾರ್ಯ ಚನ್ನಾಗಿ ಆಗುವುದೆಂದು || ನಾಗವೇಣಿಯು ತಾನು ಹೋಗಿಬರುವೆನೆಂದು ಆಗ ಅಲ್ಲೇವೇ ಗುಪ್ತಾಗಿ ಇರುವುವಳು|| 3 ಪದ ರಾಗ:ಶಂಕರಾಭರಣ ಆದಿತಾಳ ಸ್ವರ :ಮಧ್ಯಮಾ ತಂದನು ಕೇವಳ್ಹಾಗ್ನಿಯ ಸಾಕ್ಷಿಯಿಂದೆ|| 1 ಆದರೂ ಇಷ್ಟಾರ್ಥಗಳು ಕೊಡುವೋದು|| 2 ವರದ ಶ್ರೀರಾಮ ವರವು ಕೊಟ್ಟಿರುವಂಥಾ ತುಳಜಾ ದೇವಿಯ ದಿವ್ಯ ಮಹಿಮೆ || ಹರುಷದಿ ಕೇಳಿದರೆ ಹರುಷವ ಕೊಡುವುದು ಪರಿಹರಿಸೋದು ಕಷ್ಟವೆಲ್ಲಾ 3 ಪುತ್ರರು ಆಗುವರು ಪೌತ್ರರು ಆಗುವರು ಸತ್ಯಮಾತಿದು ಭಾವವ ಬಿಟ್ಟು|| 4 ಗ್ರಂಥವೆಂಬುವದಿಂದು || ಎಂಥಾದಾದರೂ ಎನೂ ಸಂತೋಷ ನಮ್ಮ ಗುರುಗಳಿಗೆ|| ಸಂತರೆಂಬುವರಿಗೆ ಸಂತೋಷಾಗಲಿ ನಮ್ಮಾನಂತಾದ್ರೀಶನೆ ನುಡಿಸಿದಾ|| 5 ಆರ್ಯಾ ವರ ಕವಿತಾ ರZನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದೆನ್ನ ಉಪಾಯಾ || ಗುರುಕೃಪೆಯಿಂದಾಯಿತು ನಾಲ್ಕು ಅಧ್ಯಾಯಾ|| 1 ಪದ ರಾಗ:ಪೂರ್ವಿ ಅಟತಾಳ ಸ್ವರ:ಮಧ್ಯಮಾ ನಿತ್ಯ ಮಂಗಳವನು ಕೊಟ್ಟು ಸಲಹುವ ತಾಯಿಗೆ|| ಪ ಘನತರ ಕೈಲಾಸ ಮನಿಯು ಮಾಡಿದವಳಿಗೆ|| ಅನುದಿನ ಅಲ್ಲಿರುವಂಥಾಕಿಗೆ | ಅನುಭೂತಿ ತಪಸಿಗೆ ಅನುಕೂಲಾಗುವೆನೆಂದು ಅನುಮಾನಿಲ್ಲದೆ ಬಂದಿರುವಾಕಿಗೆ|| 1 ಅಷ್ಟಭುಜಗಳುಳ್ಳಂಥಾಕಿಗೆ || ಅಷ್ಟೆಶ್ಚರ್ಯದಿಂದಿರುವಾಕಿಗೆ|| ದುಷ್ಟದೈತ್ಯನ ಕೊಂದಂಥಾಕೆಗೆ|| 2 ಅಮಿತ ಮಹಿಮೆ ಉಳ್ಳಂಥಾಕೆಗೆ|| ಯಮುನಾದ್ರಿಯಲಿ ಬಂದಿರುವಾಕೆಗೆ|| ಗಮನದಿಂದಲಿ ರಾಮ ಶ್ರಮಬಟ್ಟು ಅಲ್ಲೇ ವಿಶ್ರಾಮಿಸಲು ದರ್ಶನ ಕೆÀೂಟ್ಟಾಕೆಗೆ|| 3 ಕಾಮಿತ ಫಲವನು ಕೊಡುವಾಕೆಗೆ|| ರಾಮನು ಸಾವಿರ ನಾಮದಿ ಸ್ತುತಿಸಲು|| ಪ್ರೇಮದಿವರವು ಕೊಟ್ಟಂಥಾಕಿಗೆ|| 4 ಚಿಂತಿಸುವರ ಮುಂದ ನಿಂತಾಕೆಗೆ|| ಸಂತೋಷವನು ಕೊಡುವಂಥಾಕಿಗೆ|| ಅಂತರಂಗದಲ್ಲಿಹ ಚಿಂತೆಯ ಬಿಡಿಸಿ|| ಅನಂತಾದ್ರೀಶನ ತೋರುವಂಥಾಕೆಗೆ|| 5
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಆರು ರಾಗ:ನಾಟಿ ಝಂಪೆತಾಳ ಅಘಟ್ಯಘಟಿನಾಟ್ವೀ ಪುಲಿಂದಾ ಶ್ರೀಪತೇಸ್ತನುಃ ನೃಪಜಾಸ್ಮರಪೀಡಾಂ ತಾಂ ಕಥಯಂತೀ ಹರೇದಘಮ್ ನಿತ್ಯ ಸಂತೋಷ ಜಯತು ಜಯ ಲಕ್ಷ್ಮೀಶಾ ವೆಂಕಟೇಶಾ 1 ಪದ್ಮಜಾಕೃತಯಾತ್ರೆ ಪ್ರದ್ಮವಿಕಸಿತ ನೇತ್ರಾ ಪ್ರದ್ಮಾಜಾಸನ ಮುಖ್ಯ ಪದ್ಮನಾಭಾಖ್ಯ 2 ಗುರ್ವನುಗ್ರಹ ಗಮ್ಯ ಗುರುಗುಣಾರ್ಣವಸೌಮ್ಯ ಗುರ್ವನಂತಾದ್ರೀಶ ಗುರುಸುಪ್ರಕಾಶ3 ವಚನ ಪುರುಷನ ಪಾದ ನಿತ್ಯ ಮರೆಯದಲೆ ಮನದಲ್ಲಿ ಕರವ ವರಬುದ್ಧಿಯಲಿ ಎನ್ನ ಶಿರಮೆಟ್ಟಿ ಕರಮುಗಿದು ಕೊರವಂಜಿ ಕಥೆಯ 1 ಮುನ್ನಾಗಿ ನಾರೀಕುಲ ತನ್ನ ಕಾರ್ಯಕೆ ಕಳುಹಿ ಎನ್ನ ಕಾರ್ಯಕೆ ಅನ್ಯ ತನ್ನ ಕಾರ್ಯವು ಮತ್ತೆ ಮಾಡುವರಲ್ಲ ಚನ್ನವಾಗಿ2 ಉಬ್ಬುಬ್ಬಿ ವನಿತೆಯರು ಈ ರೀತಿ ಅವಲಂಬಿ ಗಂಭೀರಕೊರವಿ ಮುಖ ಬಾಯ್ವಳಗ್ಹಲ್ಲು ಎಂಬುವದು ಒಂದಿಲ್ಲ ಲಂಭಕರ್ಣಗಳಿಹವು ಲಂಭಕುಚಗಳು ಮತ್ತ ಲಂಬೋದರಿ ಯೆನಿಸಿಕೊಂಬುವಳು ತಾನು 3 ಜಡೆಗಳ ಧರಿಸಿ ಧೀರ ಮಾಡಿ ಸಾರ ಚಾರುನವಧಾನ್ಯಗಳ ಪೂರ ಚಾರು ತಿಲಕವನಿಟ್ಟು ಹಾರ ಗೀರುಕಂಕಣ ಕೈಗೆ ಚಾರು ತಾ ಐವತ್ತು ಪೂರ ವಯದವಳಾಗಿ ತೋರುತಿಹಳು4 ಮಣಿ ಮಾಲೆಗಳ ಧರಿಸಿ ಮಣಿ ಮೇಲೆ ಕರ್ಪೂರ ಮಣಿಯು ಮೇಲೆ ಸಾಲ್ಹಿಡಿದು ವಿವಿಧಮಣಿ ಬಾಲಕನ ಉಡಿಯಲ್ಲಿ ಕೋಲು ಕೈಯಲಿ ಪಿಡಿದು ನಡೆದಳಾಗ 5 ರಾಗ:ಶ್ರೀರಾಗ ಆದಿತಾಳ ಗಿರಿಯಿಂದಲಿ ನಾರಾಯಣ ಪುರಕೆ ಬಂದಳು ಪುರದ ಬಾಗಿಲುಗಳನ್ನೆಲ್ಲ ತ್ವರದಿ ದಾಟಿದಳು ತಿರವಿದ ಸೆರಗು ತಿರುಗಿ ಹೊದೆಯುತಲೆ ತಿರುಗಾಡುತ ಬಂದಳು ತಿರುಕೊಂಬುವರಂತೆ ಮನೆ ಮನೆ ಬಾಗಿಲನು ಮೆಟ್ಟುತಿಹಳು ಮನಸಿಗೆ ಬಂದ್ಹಾಂಗೆ ಧ್ವನಿಮಾಡುತಿಹಳು ಮನಗೊಟ್ಟು ಕೇಳಿರಿ ಎನ್ನ ತಾಯಿಗಳಿರಾ ಮನದ ಮಾತುಗಳ್ಹೇಳುವೆ ಮನೆಯವ್ವಗಳಿರಾ 1 ಹಿಂದಾದದ್ದು ಹೇಳೇನು ಇಂದಾದದ್ದು ಮತ್ತೆ ಚಂದಾಗಿ ಪೇಳೇನು ಮುಂದಾಗುವದೆಲ್ಲಾ ಹಿಂದಕ್ಕೆ ನಾ ಬಹಳ ಮಂದಿಗ್ಹೇಳಿದೆನು ಒಂದೂ ಸುಳ್ಳಾಗಿಲ್ಲ ಸಂದೇಹವಿಲ್ಲ 2 ಸಾಮಭೇದವ ಬಲ್ಲೆ ಸಾಮುದ್ರಿಕಿ ಬಲ್ಲೆ ಹೈಮಾದಿ ಜ್ವರಕೌಷಧ ನಾ ಮಾಡಲು ಬಲ್ಲೆ ಕಾಮಿನಿಯರಿಗಾದ ಕಾಮಜ್ವರ ಬಲ್ಲೆ ಕೌಮಾರಿಗಳಿಗಂತು ನಾ ಮುಂಚೆ ಬಲ್ಲೆ 4 ಭೂತ ಬಿಡಿಸಲು ಬಲ್ಲೆ ಬೇತಾಳವ ಬಲ್ಲೆ ಮಾತಾಡದ ಮೂಕರನು ಮಾತಾಡಿಸಬಲ್ಲೆ ನೀತಿನುಡಿಗಳ ಬಲ್ಲೆ ಜ್ಯೋತಿಷ್ಯವ ಬಲ್ಲೆ ಕೂತು ಕೇಳಿದರೆಲ್ಲ ಮಾತ್ಹೇಳಲು ಬಲ್ಲೆ5 ಹಸನಾಗಿ ಪೇಳುವೆ ಕುಶಲಾದವಾಣಿ ಹುಸಿಯಲ್ಲವಿದು ಎನ್ನ ಹಸುಗೂಸಿನಾಣಿ ಅಸು ಹೋದರು ನಾನಲ್ಲ ಹುಸಿಯಾಡುವ ಕೊರವಿ ವಸುಧೆಯೊಳಗೆ ನಾ ಹೆಸರಾದ ಕೊರವಿ6 ನರನಾರಾಯಣಲಿ ಇರುವಂಥ ಕೊರವಿ ವರನಂತಾದ್ರೀಶನ ನೆರವುಳ್ಳ ಕೊರವಿ ಕೊರವಿ ಮಾತನು ಕೇಳಿ ಪುರದ ನಾರಿಯರು ಅರಸನ ರಾಣಿಗೆ ತ್ವರದಿ ಪೇಳಿದರು7 ರಾಗ:ಪೂರ್ವಿರಾಗ ಭಿಲಂದಿ ತಾಳ ಬಂದಳಮ್ಮ ಇಲ್ಲೆ ಜನರು ನೆರೆದು ಬಹಳ ಆತುರ ಪಟ್ಟು ಕೇಳುತಿಹರÀುಪ ಮಾತನಾಡುತಿಹಳು ಮುದದಿ ಕೇಳಿ ದ್ಹೇಳುವಳು ಮುದಕಿಯಾಗಿ ತೋರುತಿಹಳು 1 ತನ್ನ ಮಕ್ಕಳಾಣೆ ಕೊಡುತಿಹಳು 2 ನರನಾರಾಯಣರು ಎಲ್ಲಿ ಇವರೊ ಅಲ್ಲೆ ಇರುವಳಂತೆ ವರದನಂತಾದ್ರೀಶ ಕೊಟ್ಟ ವರವುಳ್ಳ ಕೊರವಿಯಂತೆ 3 ರಾಗ:ಕನ್ನಡ ಕಾಂಬೋದಿ ಅಟತಾಳ ಬೇಗ ಅರಸನ ಪಟ್ಟದ ರಾಣಿ ಪನ್ನಗವೇಣಿ 1 ತಿರುಗಿ ಬಂದರು ಮತ್ತಲ್ಲೆ ಕೊರವಿ ಇದ್ದಲ್ಲೆ 2 ಎಂದು ಕರೆದರು ಕಯ್ಯ ಬೀಸುತ ಕಣ್ಣುತಿರುವುತ 3 ನುಡಿದಾಳೀಪರಿ ವಾಣಿ ಮಾತಿನ ಜಾಣೆ 4 ಆಕೆ ಸೌಭಾಗ್ಯದ ಒಡವಿ ಹುಟ್ಟನಾ ಬಡವಿ 5 ನೋಡಿ ಎನ್ನ ಒಡವೆಯ ನೋಡಿರಿ ಮಾತನಾಡಿರಿ 6 ಎನ್ನ ಕರಿದಾಳೆಂಬುವದು ಅಪಹ್ಯಾಸವಿದು 7 ನಕ್ಕು ಮಾತಾಡುವಿರಾ ಬಂಡು ಮುದಕಿಯ ಕಂಡು 8 ಅಂಜಿ ಮಾತಾಡಿದರಾಗ ವಿನಯದಿ ಬೇಗ9 ಒಮ್ಮೆಗಾದರುದಕ್ಕೀತೆ ಆಡೋದು ರೀತೆ10 ಬಂದು ನಡೆದಳು ಮುಂದೆ ಆನಂದದಿಂದ11 ಅರಮನೆಗೆ ಬಾಗಿಲೊಳಗೆ ಅಂಗಳದೊಳಗೆ 12 ಕೋಲುಕೋಲೆಂದು ಪಾಡುವಳು ಮಾಯಾತೋರುವಳು 13 ರಾಗ:ಶಂಕರಾಭರಣ ಆದಿತಾಳ ಕೋಲೆನ್ನ ಕೋಲು ಲೀಲೆಕೊಂಡಾಡುತಲಿ ಪ ಭರದಿಂದೊದೆಯುತಿರೆ ತಿರುಗಿ ಕಾಲ್ಹಿಡಕೊಂಡು ಪರಿಪರಿಸ್ತುತಿಸಿದಾ 1 ನೋಡಿ ಸಹಿಸದೆ ಕೊಲ್ಲಾಪುರಕೆ ನಡೆದಳು 2 ಹರಿ ವೈಕುಂಠದಿಂ ಧರೆಗಿಳಿದನು 3 ಹುತ್ತಮನೆಯ ಮಾಡಿ ಗುಪ್ತದಲ್ಲಿರುತಿಹ4 ನೆತ್ತಿಯ ಒಡಕೊಂಡು ಭಕ್ತನ ಸಲುಹಿದೆ 5 ಗುರುವಕರೆದ ಅವನಿಂದ ತಲೆ ಗಾಯವ ಕಳೆದನು 6 ತಾ ಬೇಡಿ ಸ್ವಾಮಿ
--------------
ಅನಂತಾದ್ರೀಶ - ಕಥನಕಾವ್ಯಗಳು