ಒಟ್ಟು 1253 ಕಡೆಗಳಲ್ಲಿ , 106 ದಾಸರು , 1051 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಖಂಡಕಿ ಪ್ರಸನ್ನ ವೆಂಕಟದಾಸರು ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1 ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2 ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು ಜ್ಞಾನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3 ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4 ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5
--------------
ರಮಾಪತಿವಿಠಲರು
ಕಾಪಾಡು ಕಾಪಾಡು | ಕಾಪಾಡು ಗುರುವೇ ಪ ಶ್ರೀ ಪತಿಯ ಪರಮಾತ್ಮ | ಅಪದ್ಹರ ಗುರುವೇ ಅ.ಪ. ಕೃಪಣ ವತ್ಸಲ ಗುರುವೆ | ಕೋಪಸಲ್ಲದು ನಿಮಗೆಕಾಪಥವ ನೈದುವನು | ತವಕೃಪೆ ವಿಹೀನಾ ||ಅಪರಾಧ ವೆಣಿಸದಲೆ | ಕೃಪೆಮಾಡಿ ಕೈ ಪಿಡಿದುಸುಪಥದಲ್ಲಿರಿಸುತ್ತ | ಆಪವರ್ಗದನ ತೋರೊ 1 ತಂದೆ ತಾಯಿಯು ನೀವೆ | ಬಂಧು ಬಳಗವು ನೀವೆಎಂದೆಂದಿಗೂ ಎನಗೆ ಗುರುವು ನೀವೆ ||ಕಂದ ಮಾಡಿದ ತಪ್ಪ | ತಂದೆಯೆಣಿಸುವರೇನೊಪೊಂದಿ ಭಜಿಸುವೆ ಕಾಯೊ | ತಂದೆ ಕೃಪ ಸಾಂದ್ರಾ 2 ತಂದೆ ಮುದ್ದು ಮೋಹನ್ನ | ವಂದಿಸುವೆ ನಿಮ್ಮಡಿಗೆಇಂದು ತವ ದರ್ಶನವ | ಸಂಧಿಸಲಿ ಬೇಕೋ ||ಇಂದಿರಾಪತಿ ಗುರು | ಗೋವಿಂದ ವಿಠ್ಠಲನಛಂದಾಗಿ ಭಜಿಸುವ | ತಂದೆ ಕೈ ಪಿಡಿಯೋ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಪಾಡೆಲೆ ಸಕಲಾಪಧ್ಹಾರಿಣಿ ಕೊಲ್ಲಾಪುರಗತ ಕಮಲೆ ಪ. ಪರಿ ಹರಿಯ ದಯಾಪಾತ್ರಳೆ ಶುಭನೂಪುರಾದಿ ಸುಕಲಾಪೆ ಶೋಭಿತೆ ಭ್ರೂ-ಚಾಪ ಚಲನದಿಂದ ಪವಮಾನನಿ-ಗೆ ಪದದೇ ಭವತಾಪಗಳಳಿದು ಅ.ಪ. ಇಂದೀವರವರಮಂದಿರನಂದಿನಿ ಚಂದ್ರಜಯಿಪ ವದನೆಬೃಂದಾರಕ ಮುನಿವಂದಿತ ಪದಯುಗೆ ಕುಂದಕುಟ್ಮಲರದನೆ ಮದನೆ ಮುಕುಂದ ಹೃದಯಸದನೆಇಂದ್ರನೀಲನಭ ಸುಂದರತನು ಗುಣ-ಸಾಂದ್ರ ಇಂದುಮುಖಿ ಮಂದರಧರಗೋ-ವಿಂದ ಬಂಧುನುತೆ ಬೃಂದಾವನಪತಿನಂದನಂದನನಾನಂದಿನಿ ವಂದಿತೆ 1 ಕನ್ಯಾಮಣಿ ಜಗನ್ಮಾನ್ಯಾಮೃತ ಪಾವನ್ನಾಧರ ಬಿಂಬೆಘನ ಕಲಶ ಕುಚವನ್ನು ಧರಿಪ ಕಟಿಸಣ್ಣ ಘನನಿತಂಬೆ ಅಂಬೆ ಚಿನ್ನಪುತ್ಥಳಿ ಬೊಂಬೆಅನ್ನವಸನ ಧನಧಾನ್ಯಕಾಗಿ ಪರ-ರನ್ನ ಯಾಚಿಸಿ ಬಲು ಖಿನ್ನನಾಗುತಲಿನಿನ್ನನು ಮರೆದೆನು ಎನ್ನವಗುಣಗ-ಳನ್ನು ಎಣಿಸದಿರು ಮನ್ನಿಸು ಬಿನ್ನಪ 2 ಕಪೋಲ ಶೋಭಿತ ಕೀಲಾಲಜಾತಪಾಣಿಕೇಳಿಲಿ ಯಮುನಾಕೂಲದಿ ಹರಿ ದು-ಕೂಲಚೋರನ ರಾಣಿ ಜಾಣೆ ಶುಶ್ರೋಣೆ ಜಗತ್ರಾಣೆಕಾಳಕೂಟಸಮ ಕೀಳು ವಿಷಯದಲಿಬೀಳುವುದೆನ್ನ ಮನ ಕೀಳಿಸಿ ಶ್ರೀಗೋ-ಪಾಲವಿಠಲನನುಗಾಲ ಸೇವಿಪಂತೆಶೀಲವೀಯೆಯೆಂದು ಕೇಳುವೆ ಲಾಲಿಸೆ 3
--------------
ಗೋಪಾಲದಾಸರು
ಕಾಮಿನೀಮಣಿ ರಾಮಭಾಮಿನಿ ಪ ಸೋಮಬಿಂಬ ವದನೆಯೆ ಸೀತೆಯೆ ಅ.ಪ. ಪಾವಮಾನಿ ಮನೋವಾರಿಜಾಶ್ರಿತೆ ದೇವತಾವಳೀ ದೇವಸನ್ನುತೆ ದೇವಬೃಂದ ವಂದಿತೆ ಸನ್ನುತೆ 1 ಭಕ್ತವತ್ಸಲೆಯೆ ಶಕ್ತಿರೂಪೆಯೆ ಮಾರ್ಗವಿಶದೆಯೆ ಮಾತೆಯೆ 2 ವರಧೇನುಪುರಿ ಪರಮೇಶ್ವರಿ ವರದಾಯಿನಿ ವರಲೋಕಪಾಲೆ ಕರುಣಾಕರೆ ವರರಾಮ ಜಾಯೆ ಪರಿಪಾಲಿತಾಶ್ರಿತೆ ಸುರನುತೆ 3
--------------
ಬೇಟೆರಾಯ ದೀಕ್ಷಿತರು
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಯೊ ಕರುಣ ಕೃಪಾಳ ಸದ್ಗುರು ಘನಲೋಲ ದ್ರುವ ಎನ್ನಹೊಯಿಲ ನಿಮಗೆಂತು ಮುಟ್ಟುವದಾನಂತಗುಣಮಹಿಮೆ ಚಿಣ್ಣ ಕಿಂಕರನಾದ ಅಣುಗಿಂದತ್ತಲಿ ಹೀನ ದೀನ ನಾ ಪರಮ ಖೂನತಿಳಿಯಲು ನಿಮ್ಮ ಕೃಪಾಸಿಂಧು ನಿಮ್ಮ 1 ಅನಂತಕೋಟಿ ಬ್ರಹ್ಮಾಂಡನಾಯಕನೆಂದೊದರುತಿಹಾನಂತ ವೇದ ಅನಂತಾನಂತಾನಂತ ಮಹಿಮರು ಸ್ತುತಿಸುತಿಹರು ಸರ್ವದ ಗುಹ್ಯ ಅಗಾಧ ತಿಳಿಯದು ಮಹಿಮ್ಯಂಗುಷ್ಠದ 2 ಮಾಡುವರಾನಂದ ಘೋಷ ದೋರುವ ಹರುಷ ತಾ ಶೇಷ ಸುರಮುನಿ ಜನರೆಲ್ಲ ಚರಣಕಮಲಕೆ ಹಚ್ಚಿದರು ನಿಜಧ್ಯಾಸ ಸಿರಿಲೋಲ ನೀ ಸರ್ವೇಶ 3 ಸಕಲಾಗಮ ಪೂಜಿತ ಸದ್ಗುರು ಶ್ರೀನಾಥ ಕಾಮಪೂರಿತ ಕರುಣಾನಂದಮೂರುತಿ ಯೋಗಿಜನ ವಂದಿತ ಜನರಿಗೆ ಸಾಕ್ಷಾತ 4 ಸಲಹುವದೋ ನೀ ಶ್ರೀಹರಿಯೆ ನೀ ಎನ್ನ ಧೊರೆಯೆ ಮುರ ಅರಿಯೆ ಸಕಲಪೂರ್ಣಸಿರಿಯೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಸುಗುಣ ಮಣಿಯೆ ಪ ಪ್ರೀಯ ಮುರಾರಿ ವಿನಾಯಕ ಸೋದರ ||ಅ|| ಅಘ ಪಾವನಮೂರ್ತಿ ಶರಣರ ರಕ್ಷಕ 1 ಕುಂದ ಕುಂದಕುಟ್ಮಲಪದನಾನಂದಿಧ್ವಜ ಸುತ ಸುಂದರ ಮೂರುತಿ | ಇಂದುವದನ ಮುನಿವೃಂದ ವಂದಿತ ಗುಹ 2 ಮಯೂರ ಧ್ವಜಾ | ಕ್ಲೇಶದಿ ನರಳುವ ದಾಸರ ರಕ್ಷ ಸ-ರ್ವೇಶಕರಜ ನಿರ್ದೋಷಿ ಸುಬ್ರಹ್ಮಣ್ಯ 3
--------------
ಬೆಳ್ಳೆ ದಾಸಪ್ಪಯ್ಯ
ಕಾರುಣ್ಯಸಾಗರನೇ ನಾ ಸೇರುವೆ ಮಾರನ ಪಡೆದವನೇ ಪ ಭಾವಾತೀತನೆ ಯೆನ್ನ ಅವಗುಣವೆನಿಸದೆ ಸೇವಕನಿಗೆ ನಿನ್ನ ಭಕ್ತಿಯ ನೀಡೋ 1 ದೇವಕಿ ಕಂದನೇ ಸನಕವಂದಿತನೇ ಸೇವೆಯ ಮಾಡುವೆ ಚರಣವ ನೀಡೋ 2 ಅಜನಿಗೆ ಪಿತನಾಗಿ ದ್ವಿಜರಿಗೊಡೆಯನಾಗಿ ಗಜನನ್ನು ಪೊರೆದ ಶ್ರೀ ಲಕ್ಷ್ಮೀ ಸೇವಿತನೇ 3 ಪಾದ ಯುಗ್ಮಗಳನ್ನು ಭಜಕನ ಸಲಹಯ್ಯ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ಚಕ್ರವನೇರಿ ಭಾಸಿಪ ಬಾಲ ಸೂರ್ಯನ ವಂದಿಪೆ ಪ ಕಾಲ ರೂಪನೆ ಬಾಲ ಚಂದ್ರನೆ ಪೂಜಿಪೆ ಅ.ಪ. ಸೃಷ್ಟಿ ರೂಪನೆ ವೃಷ್ಟಿದಾಯಕ ಶ್ರೇಷ್ಠ ಭೂಮಿಯ ಪುತ್ರನೆ ಕಷ್ಟಹರ ಸುಜ್ಞಾನ ಮೂರುತಿ ಇಷ್ಟದಾಯಕ ಸೌಮ್ಯನೆ 1 ದೇವಗಣಗುರು ಕ್ಷೇಮದಾಯಕ ಜೀವವರ ಗುರು ಪಾಲಿಸೈ ದೇವಶುಕ್ರನೆ ಕಾವ್ಯರೂಪನೆ ಕಾವ್ಯ ಸೇವನೆ ಪೋಷಿಸೈ 2 ಪುಂಗವರ ಮಹಿಮಾಂಗ ಶನಿ ಸನ್ಮಂಗಳಾತ್ಮಕ ದೇವನೆ ಮಂಗಳವನೆಸಗೆಂದು ವಂದಿಪೆ ರಾಹುವೆ ವರಕೇತುವೆ 3 ಶ್ರೀನಿವಾಸನೆ ಪಾಲಿಸುವುದೆಂದೀ ನವಗ್ರಹ ಭಕ್ತಿಯಿಂಧೇನುನಗರ ಜನೇಶನೇವರ ವೇಂಕಟೇಶನೆ ಪೋಷಿಸೈ 4
--------------
ಬೇಟೆರಾಯ ದೀಕ್ಷಿತರು
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯ ಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು-ಣೇಕ್ಷಣದಲಿ ನಿರೀಕ್ಷಿಸೆಮ್ಮನು3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು- ಣೇಕ್ಷಣದಲಿ ನಿರೀಕ್ಷಿಸೆಮ್ಮನು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾವದು ಎನ್ನನುದಿನಾ ರಂಗಾ| ಕಾವದು ಕಾವದು ಎನ್ನನುದಿನಾ | ಭಾವಿಕ ಜನರ ನಿಧಾನಾ ಪ ಜಲದಲಿ ಕರಿಯಾ ಪಿಡಿದ ಮಕರಿಯಾ | ಸೀಳಿದ ಯಾದವರಾಯಾ | ಇಳೆಯೊಳು ಗಿರಿಯಾ ಧರಿಸಿದೆ ಗರಿಯಾ | ಕುಲ ಅರಿನಂದನ ಪ್ರೀಯಾ 1 ರಮಣನೆ ಸಿರಿಯಾ ಲಲನೆಗೆ ಸೀರಿಯಾ | ಸಮಯಕ ನಿತ್ತ ಅನೇಕ | ಕಮನೀಯ ಕಾಯಾ ದೇವ ನೀ ಕಾಯಾ | ಜನಕನೇ ವ್ಯಾಪ್ತ ತ್ರಿಲೋಕಾ 2 ಸರಸಿಜನಯನಾ ಸಾಸಿರ ನಯನಾ | ಸೋದರ ದೇವ ದೇವೇಶಾ | ವರಸದ್ವದನಾ ಈ ರೆರಡೊದ ನಾ | ವಂದಿತ ಚರಣಾ ಶ್ರೀಯೀಶಾ3 ಭಕುತರಬಂಧು ಕೈರವ ಬಂಧು ಶೇಖರಧೇಯ ಮುಕುಂದಾ | ಸಕಲಾಧಾರಾ ದಿನೊದ್ಧಾರಾ | ದೇವಕಿ ದೇವಿಯ ಕಂದಾ4 ಸುಜನರ ಪಕ್ಷಾ ಕುಜನ ವಿಪಕ್ಷಾ | ಶ್ರೀ ವತ್ಸಾಂಕಿತ ದೇವಾ | ಗಜವರ ವರದಾ ಯದುಕುಲ ವರದಾ | ನವಮರ್ಧನ ಜಗಜೀವಾ5 ಕಾಳಿಯ ಸರ್ಪಾ ಮದಹರ ಸರ್ಪಾ| ಶನವಾಹನ ಗೋವಿಂದಾ | ಶ್ರೀ ಲಲನೀಯಾ ಸದ್ಭಾವನೀಯಾ | ಪೂರಿತ ಪರಮಾನಂದಾ6 ಸಿಂಧು ಸಿಂಧು | ವಿಗಾಗಿಹೆ ಕುಂಭಜ ನೀನು | ಹರಣ ರಂಗಾ | ಧೀರನೇ ಭಜಕರ ಧೇನು7 ನವನೀತ ಚೋರಾ ನಿಗಮದ ಚೋರಾಂ | ತಕ ಗೋಕುಲ ವಿಹಾರಾ | ಭವ ಪರಿಹಾರಾ ಕೌಸ್ತುಭಧಾರಾ | ಮಹಿಪತಿಸುತ ಮನೋಹಾರಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಿಂಕರರು ಗಣಪನ್ನ ಧ್ಯಾನಿಸಿ ಪ. ಪಾದ ಪಂಕಜವನೆ ನೆನೆಯುವುದು ಮನದೊಳು ಶಂಕರನ ಪ್ರಾಥಿಸುತ ಹರಿಯನಾತಂಕವಿಲ್ಲದೆ 1 ಪರಿ ಶಂಕೆಯಿಲ್ಲದೆ ಹರಿ ಮಹಿಮೆ ಪೊಗಳಲು 2 ಸರಸತಿಯ ಧ್ಯಾನಿಸಿ ನಿಮ್ಮ ಮಂಕಿನಜ್ಞಾನವನು ಕಳೆಯಲು ಪವಮಾನಗೆ ವಂದಿಸಿ 3 ಪಂಕಜಾಕ್ಷಿ ರಮಾದೇವಿ ಶ್ರೀ ಶ್ರೀನಿವಾಸನ ಪಾದ ಪಂಕಜವÀ ನೆನೆದು ಹರುಷದಿ 4 ಹರಿಕಿಂಕರು ಇರಿ ಎಂದರುಹಿದ ಪುರಂದರದಾಸರ ನೆನವೆನನುದಿನವೂ 5
--------------
ಸರಸ್ವತಿ ಬಾಯಿ