ಒಟ್ಟು 230 ಕಡೆಗಳಲ್ಲಿ , 70 ದಾಸರು , 218 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಗನ ಲೂಟಿ ಘನವಮ್ಮ-ಕರೆದು |ಚಿಣ್ಣಗೆ ಬುದ್ಧಿಯ ಹೇಳೇ ಗೋಪಮ್ಮ ಪಶಿಶುಗಳ ಕೈಲಿದ್ದ ಬೆಣ್ಣೆಗೆ ಉಳಿವಿಲ್ಲ |ಪಸು-ಕರುಗಳಿಗೆ ಮೀಸಲುಗಳಿಲ್ಲ ||ಮೊಸರ ಮಡಕೆಯಲಿಮಾರಿಹೊಕ್ಕಂತಾಯ್ತು |ಶಶಿಮುಖಿಯರು ಗೋಳಿಡುತಿಹರಮ್ಮ1ಮರೆತು ಮಲಗಿದ್ದವರ ಮೊಲೆಗಳ ತಾನುಂಬ |ಕಿರಿಯ ಮಕ್ಕಳಿಗೆ ಮೊಲೆಹಾಲಿಲ್ಲವೊ ||ಹೊರಗೆ ಲೂಟಿ ಒಳಗೆ ಈ ಲೂಟಿ-ಎ-|ಚ್ಚರದ ಬಟ್ಟೆಯ ಕಾಣೆವಮ್ಮ ಗೋಪಮ್ಮ 2ಊರೊಳಗಿರಲೀಸ ಊರ ಬಿಟ್ಟು ಹೋಗಲೀಸ |ಈರೇಳು ಭುವನಕೆ ಒಡೆಯನಂತೆ ||ವಾರಿಜನಾಭಶ್ರೀ ಪುರಂದರವಿಠಲನ |ಕೇರಿಯ ಬಸವನ ಮಾಡಿ ಬಿಟ್ಟೆಯಮ್ಮ 3
--------------
ಪುರಂದರದಾಸರು
ಪಟ್ಟಸಾಲೆÉ ಮೇಲೆ ರಂಗಮ್ಮ ನಕ್ಕು ನಲಿದುದಟ್ಟಸಾಲಿಕ್ಕಲಿ ಕಲಿತ ಪ.ಕೈಯವಿಡಿದುಗೋಪಿಮುಂಗೈಯ ಮುರಾರಿ ಮಗನಥೈಯ ಥೈಯಯೆಂದು ಕಂದನ ಹಣೆಗೆ ಹಣೆಯೊತ್ತಿಪ್ರಿಯದಿ ಹೊಂಗೆಜ್ಜೆಕಾಲ ಒಯ್ಯನಡಿಯಿಡಿಸೆನೀಲಮೈಯನಜನಯ್ಯನ ಮುದ್ದಿಸಲು ಬಂಗಾರದ 1ಬಾಯ ಜೊಲ್ಲುಂಗುರುಗುರುಳೆಳೆಯ ಪಲ್ಲ್ವಾಧರ ಮದ್ದಿಕಾಯಿ ಅರಳೆಲೆ ಮಾಗಾಯಂದುಗೆ ಒಪ್ಪೆಮಾಯಾರಸವನ್ನೆಶೋದೆ ತಾಯಿಗುಣಿಸುವ ಬಾಲನಾಯಕವೃಂದಾರಕಪಾಲಕ ರತ್ನಮಯದ2ಬಾಳೆಯಂತೆ ಬಳುಕಿ ನಡೆವ ಬಾಲಕೃಷ್ಣ ಬಳಲ್ದನೆಂದುಆಲಂಗಿಸಲೊಲ್ಲದಂಬೆಗಾಲನಿಕ್ಕುವಮೇಲೆ ಪ್ರಸನ್ವೆಂಕಟೇಶನ ಲೀಲೆಗೆಸುರರುಮೆಚ್ಚೆಲಾಲಿಸಿ ನಂದನನ ನಿವಾಳಿಸಿಕೊಂಡಳು ನಿವರ್iಳ 3
--------------
ಪ್ರಸನ್ನವೆಂಕಟದಾಸರು
ಪೂರ್ವಜನ್ಮದಲಿ ನಾ ಮಾಡಿದಾ ಭವದಿಂದಉರ್ವಿಯೊಳು ಜನಿಸಿದೆನೊ ಕೃಷ್ಣ ಪಕಾರುಣ್ಯನಿಧಿಯನ್ನ ಕಾಯಬೇಕಯ್ಯಹರಿವಾರಿಜನಾಭನೇ ಮುದ್ದುಕೃಷ್ಣ ಅ.ಪಹುಟ್ಟಿದಂದಿಂದಿಗೂ ಸುಖವ ನಾ ಕಾಣದಲೆಕಷ್ಟನಾದೆನು ಕೇಳೊ ಕೃಷ್ಣತೊಟ್ಟಿಲಿನ ಶಿಶು ತಾಯ ಬಿಟ್ಟ ತೆರನಂತೆ ಕಂಗೆಟ್ಟು ಸೊರಗಿದೆನಯ್ಯ ಕೃಷ್ಣಮುಟ್ಟಲಮ್ಮರು ಎನ್ನಸತಿಸುತರು ಬಾಂಧವರುಅಟ್ಟಿ ಎಳೆಯುತ್ತಿಹರೋ ಕೃಷ್ಣಕಷ್ಟ ದಾರಿದ್ರ್ಯವನು ಪರಿಹರಿಸದಿರೆ ದೂರುಮುಟ್ಟುವುದು ನಿನಗಯ್ಯ ಕೃಷ್ಣ 1ಕಾಶಿಯಾವಾಸವನು ಬಯಸಿ ಬಹುದಿನದಿಂದಆಸೆಯೊಳಗಿದ್ದೆನಯ್ಯ ಕೃಷ್ಣಗಾಸಿಯನು ಮಾಡದಲೆ ದೋಷವನು ಪರಿಹರಿಸೊಸಾಸಿರನಾಮದ ಕೃಷ್ಣಹೇಸಿಕೆಯೊಳಿರ್ದ ಸಂಸಾರವೆಂಬುವ ಮಾಯಪಾಶದಿಂದಲಿ ಬಿಗಿದರೇ ಕೃಷ್ಣಕಂಸಮರ್ದನನೆ ನೀ ಕಾಯಬೇಕಯ್ಯಹರಿವಾಸುದೇವನೆ ಮುದ್ದು ಕೃಷ್ಣ 2ಲೋಕದೊಳಗೆನ್ನನು ಪೋಲ್ಪ ಪಾಪಿಗಳನ್ನುನೀ ಕಂಡು ಬಲ್ಲೆಯಾ ಕೃಷ್ಣಸಾಕಿನ್ನು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನೆ ಮಾಡಯ್ಯ ಕೃಷ್ಣರಾಕೇಂದುಮುಖಿ ದ್ರೌಪದಿಯಮಾನವಕಾಯ್ದೆಆಕೆಗಕ್ಷಯವಿತ್ತೆ ಕೃಷ್ಣ ಪಿನಾಕಿಸಖಪುರಂದರವಿಠಲನೆ ಉಡುಪಿಯ ವಾಸಸಾಕಿ ಸಲಹೈ ಎನ್ನ ಕೃಷ್ಣ
--------------
ಪುರಂದರದಾಸರು
ಪ್ರಸನ್ನ ಶ್ರೀ ರುಕ್ಮಿಣೀಶ ಕಲ್ಯಾಣ24ಪ್ರಥಮ ಅಧ್ಯಾಯಪ್ರಾದುರ್ಭಾವಸಾರಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆ ನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖಬಲ ಚೇಷ್ಟಾರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪಆಲದೆಲೆ ಮೇಲ್ ಮಲಗಿ ಅದ್ವಿತೀಯನೇ ನೀನುಲೀಲೆಯಿಂ ನಿನ್ನೋಳ್ ನಿನ್‍ಅನಂತ ರೂಪಗಳನಿಲ್ಲಿರಿಸಿ ಉದರದೊಳ್ ಜಗವನ್ನೆಲ್ಲವ ಧರಿಸಿನೀ ಲಯಾಬ್ಧಿ ಸುಖವ ರಮೆಗಿತ್ತಿಸ್ವರತ1ಗುಣಕಾಲ ದೇಶ ಅಪರಿಚ್ಛಿನ್ನ ನಿನ್ನನ್ನುಗುಣತ್ರಯಮಾನಿಮಾಅನಘಸಂಸ್ತುತಿಸಿಆನಂದಮಯನೀನು ಆನಂದ ಲೀಲೆಯಿಂಸ್ವರ್ಣಾಂಡ ಪಡೆದು ಅದರೊಳ್ ಪೊಕ್ಕಿ 2ಪದುಮನಾಭನೇ ನಿನ್ನ ನಾಭಿ ಕಮಲೋದ್ಭೂತವಿಧಿಯಪ್ರತಿದಿನದಲ್ಲಿ ಅವತಾರ ಮಾಡಿಸಾಧು ಸಾತ್ವಿಕರಿಗೆಅಭಯಸದ್ಗತಿ ಇತ್ತುಅಧಮ ಅಸುರರ ಸದೆದು ಭೂಭಾರ ಕಳೆದಿ 3ಮೂಲಾವತಾರಂತರ್ಯಾಮಿ ವ್ಯಾಪ್ತಾಂಗಗಳುಎಲ್ಲವೂ ಪೂರ್ಣವು ನಿತ್ಯವು ಅಭಿನ್ನಳಾಳುಕನೇ ನಿನ್ನಮಲ ರೂಪವಿಶೇಷವಲೀಲೆಯಿಂದಲಿ ಪ್ರಕಟಮಾಡುವಿ ಆಗಾಗ 4ವೇದ ಉದ್ಧಾರನೇ ಮತ್ಸ್ಯರೂಪನೇ ನಮೋಮಧುಕೈಟಭಹಾರಿ ಹಯಗ್ರೀವ ಶರಣುಮಂಡಲಾದ್ರಿಯ ಪೊತ್ತಕೂರ್ಮಧನ್ವಂತರಿಸುಧೆಸುರರಿಗುಣಸಿದ ಸ್ತ್ರೀರೂಪಪಾಹಿ5ಸುರಪಕ್ಷಅಜಅಜಿತ ಸಿಂಧುಜಾಪತಿ ಧರೋ-ದ್ಧಾರವರಾಹನಮೋ ಪುರುಟಾಕ್ಷಹಾರಿಶರಣು ತ್ರಯತ್ರಿಂಶದಕ್ಷರ ಮನುಗ ಶ್ರೀದವರಚಕ್ರಧರಾಅಭಯಭೂಧರಶಾಮ6ಪ್ರೋದ್ಯಾರ್ಕ ನಿಭ ವರ್ತುಲ ನೇತ್ರತ್ರಯವುಹಸ್ತದ್ವಯ ಅಜಾನುದರಾರಿಧರ ಕೋಟಿಆದಿತ್ಯಾಮಿತತೇಜಮಾಲಕ್ಷ್ಮೀಯುತ ವೀರಉತ್ಕøಷ್ಟಬಲ ವಿಷ್ಣೋ ನರಸಿಂಹ ಶರಣು 7ದ್ವಾತ್ರಿಂಶದಕ್ಷರ ಸುಮಂತ್ರ ಪ್ರತಿಪಾದ್ಯನೇಹಿರಣ್ಯಕಶಿಪುವ ಸೀಳ್ದಿ ಪ್ರಹ್ಲಾದಪಾಲಮೂರಡಿಯ ಕೇಳ್ದ ವಾಮನಬಲಿಬಂಧಕಶರಣು ಶ್ರೀತ್ರಿವಿಕ್ರಮನೇ ಧೂರ್ಜನಕಪಾಹಿ8ದುಷ್ಟ ನೃಪರನ್ನಳಿದು ಭೂಭಾರ ಇಳಿಸಿದಿಕೋಟಿ ಸೂರ್ಯಮಿತೋಜ್ವಲ ಪರಶುರಾಮಸಾಟಿ ಇಲ್ಲದ ಹನುಮತ್ಸೇವ್ಯಸೀತಾರಮಣಪಟ್ಟಾಭಿರಾಮನಮೋ ರಾವಣ ಧ್ವಂಸೀ 9ಭಜಿಸುವೆ ನರಸೇವ್ಯ ನಾರಾಯಣ ವ್ಯಾಸಸ್ವಜನತೇಷ್ಟಪ್ರದನೇ ಪಾಹಿಮಾಂ ಶ್ರೀಶಕುಜನಮೋಹಕ ನಮೋ ಸುರ ಸುಬೋಧಕಬುದ್ಧದುರ್ಜನ ಸಂಹಾರಿ ನಮೋ ಶಿಷ್ಟೇಷ್ಟ ಕಲ್ಕಿ 10ಕ್ರೂರ ದೈತ್ಯರ ಭಾರಿಭಾರಧರಿಯಿಂದಿಳಿಸಿದೆವಾರಿಜಾಸನ ಶಿವಾದ್ಯಮರರ ಮೊರೆಕೇಳಿಕ್ಷೀರಸಾಗರಶಯ್ಯ ಪುರುಷಸೂಕ್ತದಿ ಸ್ತುತ್ಯಪರಮಪೂರುಷ ಶ್ರೀಶ ಪ್ರಾದುರ್ಭವಿಸಿದೆಯೋ11ವಸುದೇವ ದೇವಕೀಸುತನೆಂದು ತೋರಿದವಾಸುದೇವನೇ ನಿನ್ನ ಸುಚರಿತ್ರೆ ಕೇಳೆಶ್ರೀಶ ನಿನ್ನಯ ದಯದಿಕಲುಷಪರಿಹಾರವುಸುಶುಭ ಪಾವನಕರವು ಸರ್ವಭಕ್ತರಿಗೂ 12ಕಲಿಕಲಿಪರಿವಾರ ದೈತ್ಯ ದುರ್ಜನರುಖಳರು ಇಳೆಯಲ್ಲಿ ನಾನಾ ರೂಪದಲಿ ಜನಿಸಿಶೀಲ ಹರಿಭಕ್ತರ ಕಂಡು ಸಹಿಸದೇ ಬಹುಬಲಕಾರ್ಯ ವಂಚನೆಯಿಂದ ಪೀಡಿಸಿದರು 13ಎಂಟನೇ ಮಗು ತನ್ನ ಮೃತ್ಯುವಾಗುವುದೆಂದುದುಷ್ಟ ಕಂಸನು ತಂಗಿ ಸಪತಿ ದೇವಕಿಯಇಟ್ಟ ಸೆರೆಮನೆಯಲ್ಲಿ ಆರು ಮಕ್ಕಳ ಕೊಂದಎಂಟ ನಿರೀಕ್ಷಿಸಿದ ಭಯ ದ್ವೇಷದಿಂದ 14ಏಳನೇ ಗರ್ಭವು ವ್ಯಾಳದೇವನ ಅಂಶಸ್ವಲ್ಪ ಕಾಲದಲೇ ಆ ಕ್ಷೇತ್ರದಿಂ ಹೊರಟುಚೆಲ್ವ ಗೋಕುಲದಲ್ಲಿ ರೋಹಿಣಿ ಉದರದಿಂ-ದಲ್ಲಿ ಪುಟ್ಟಿದನು ನಿನ್ನ ನಿಯಮನದಿಂದ 15ಸಾರಾತ್ಮಾ ನಿನ್ನಲ್ಲಿ ಪ್ರೇಮಾತಿಶಯದಿಂದಸುರರುಸೇವಿಸುವುದಕೆ ನಿನ್ನಿಚ್ಛೆ ದಯದಿಧರೆಯಲ್ಲಿ ನೃಪಮುನಿಗೋಪ ಗೋಪಿಯರಾಗಿಪರಿಪರಿವಿಧದಲ್ಲಿ ಕೃತ ಕೃತ್ಯರಾದರು16ದೇವಿ ಮಾಯಾದುರ್ಗೆ ನಿನ್ನಯ ಪ್ರಶಾಸನದಿಅವತಾರಕ್ಕನುಸರಿಸಿ ಬಂದು ತೆರಳಿದಳುದೇವ ನಿನ್ನ ಕಲಾ ಸಂಯುಕ್ತ ಶೇಷನುಭವಿಸಿದನು ನಿನ್ನಣ್ಣ ಬಲರಾಮನೆಂದು 17ನಿರ್ದೋಷನೀ ಸರ್ವ ಜಗನ್ನಿವಾಸನು ದೇವ-ಕೀ ದೇವಿಯೋಳ್ ನಿವಸಿಸಿ ಪೊಳೆಯುವಾಗವಿಧಿಭವಾದಿಗಳೆಲ್ಲ ಬಂದು ಸಂಸ್ತುತಿಸಿದರುಸತ್ಯಜ್ಞÕನಾನಂತಗುಣಪೂರ್ಣನಿನ್ನ18ಯಾವನು ಸರ್ವದಾ ಸರ್ವ ಬಹಿರಂತಸ್ಥಯಾವನು ಸರ್ವ ಹೃತ್ ಯೋಮದೊಳು ಇರುವಯಾವನಲ್ಲಿ ಸರ್ವವೂ ಸಮಾಹಿತವೋಅವನೇವೇ ನೀಹರಿವಿಷ್ಣು ಕೃಷ್ಣ ಅವತಾರ19ಪ್ರಾಕೃತಶರೀರ ವಿಕಾರಗಳು ನಿನಗಿಲ್ಲಪ್ರಾಕೃತಕಲಾವಿಲ್ಲ ಭಿನ್ನಾಂಶನಲ್ಲಏಕಪ್ರಕಾರಅಕ್ಷರಪೂರ್ಣಅಜನಿನ್ನಅಜ್ಞಾನದಲಿ ನರರು ಜನಿಸಿದಿ ಎಂಬುವರು 20ಅನುಪಮಾದ್ಭುತ ಬಾಲಕನು ಅಂಬುಜೇಕ್ಷಣರತ್ನಕಿರೀಟಕುಂಡಲಪೊಳೆವಕೌಸ್ತುಭಮಣಿಉರದಿ ಶ್ರೀವತ್ಸ ಚತುರ್ಭುಜವು ಪಾಂಚಜನ್ಯಕೌಮೋದಕೀ ಸುದರ್ಶನ ಸರೋಜ 21ಉದ್ದಾಮ ಕಾಂಚಂಗದ ಕಂಕಣಾದಿಗಳಪೀತಾಂಬರ ಪಾದನೂಪುರ ಪೂರ್ಣೇಂದುಮುದ್ದು ಮುಖ ಮುಗುಳುನಗೆ ಸುಳಿಗೊರಳು ಶುಭನೋಟಮೋದಚಿನ್ಮಯ ಹೀಗೆ ಪ್ರಾದುರ್ಭವಿಸಿದಿಯೋ22ಈರೂಪವಾಸುದೇವನೋಡಿ ಸ್ತುತಿಸಿದನು ನಿನ್ನಅರಿಯೇ ನಾ ವರ್ಣಿಸಲು ನಿನ್ನ ಗುಣರೂಪಶರಣು ಆತ್ಮನೇ ಪರನೇ ಉದ್ದಾಮ ಹರಿಕೃಷ್ಣಶರಣು ಸರ್ವಾಶ್ರಯನೇ ಶ್ರೀಶ ಮಾಂಪಾಹಿ 23ನಿನ್ನ ಮಹಾ ಪುರುಷ ಲಕ್ಷಣವ ದೇವಕಿಯುಕಾಣುತ್ತಾ ನರಲೋಕ ವಿಡಂಬನಕ್ಕಾಗಿತನ್ನ ಗರ್ಭಗನಾದಿ ಎಂದರಿತು ಭಕ್ತಿಯಿಂಸನ್ನತಿಯ ಮಾಡಿದಳು ಆ ಪೂರ್ವಪೃಷ್ಣಿ 24ದೇವಕಿಯ ಸ್ತುತಿಕೇಳಿಯುಕ್ತ ಮಾತುಗಳಾಡಿದೇವ ನಿನ್ನೀಚ್ಛಾ ಶಕ್ತಿಯಿಂದಲೇವೇಪವಡಿಸೆ ನರಶಿಶುಪೋಲ್ ಪಿತ ನಿನ್ನ ಎತ್ತಿಕೊಂಡುತೀವ್ರ ಹೊರಟನು ವೈಜಕೆ ನೀ ಪೇಳಿದಂತೆ 25ಶೇಷದೇವನು ಹೆಡೆಯ ಕೊಡೆಯಂತೆ ಪಿಡಿಯಲುಆಶ್ಚರ್ಯವಲ್ಲ ನದಿಮಾರ್ಗಬಿಟ್ಟಿದ್ದುಯಶೋದೆ ಸುಪ್ತಿಯಲಿರೆ ಮಗ್ಗುಲಲಿ ಮಲಗಿಸಿವಸುದೇವ ಎತ್ತಿಪೋದನು ಅವಳ ಮಗಳ 26ಯಶೋದೆಯ ಹೆಣ್ಣುಮಗು ಶಿಶುರೂಪ ದುರ್ಗೆಯವಸುದೇವ ತಂದು ದೇವಕಿ ಬದಿ ಇಡಲುಪ್ರಸವ ಸುದ್ದಿಯಕೇಳಿಕಂಸ ಆರ್ಭಟದಿಂದಶಿಶುವು ಹೆಣ್ಣಾದರೂ ಎತ್ತಿ ಶಿಲೆಯ ಹೊಡೆದ 27ಅಂಬರದಿ ದಿವ್ಯ ರತ್ನಾಭರಣ ಭೂಷಿತೆಕಂಬುಚಕ್ರಾದಿಧರೆ ಅಷ್ಟ ಮಹಾಭುಜೆಯುಅಂಬಾ ಮಹಾದುರ್ಗಾ ಭಗವತೀ ಮಯಾದೇವಿಅಂಭ್ರಣೀ ನಿಂತಳು ದೇವಗಾಯಕರು ಸುತ್ತಿಸೇ 28ಕಂಸನ್ನ ಎಚ್ಚರಿಸಿ ಭಗವತಿ ತೆರಳಲುಕಂಸನುಪರಮವಿಸ್ಮಿತನಾಗಿ ಬೇಗವಸುದೇವ ದೇವಕಿಯ ನಿಗೂಢ ಬಂಧನ ಬಿಡಿಸಿಅಸುರ ಮಂತ್ರಿಗಳೊಡೆ ಆಲೋಚಿಸಿದನು 29ನಂದ ಯಶೋದೆಯು ತಮ್ಮ ಶಿಶು ನೀನೆಂದುನಂದ ಆನಂದದಿವಿಪ್ರವೈದಿಕರ ಕರೆದುಅಂದದಿ ಪಿತೃ ದೇವತಾರ್ಚನೆಗಳ ಮಾಡಿಸಿಚೆಂದದಿ ಅಲಂಕೃತ ಧೇನುಗಳ ಕೊಟ್ಟ 30ಜಯತು ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗಜ್ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ ಪ್ರಸನ್ನ ಶ್ರೀನಿವಾಸ 31-ಇತಿ ಪ್ರಥಮಾಧ್ಯಾಯ ಸಂಪೂರ್ಣಂ -ದ್ವಿತೀಯ ಅಧ್ಯಾಯಬಾಲಲೀಲಾಸಾರಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖಬಲ ಚೇಷ್ಟಾರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪಸಣ್ಣ ಶಿಶುರೂಪ ನೀ ಪೂತನೀ ಶಕಟತೃಣಾವರ್ತರ ಕೊಂದಿ ನಮೋ ಅಮಿತಶೌರಿನಿನ್ನ ಸುಂದರ ಮುಖದಿ ಪ್ರಪಂಚ ಗಗನಾದಿಗಳಕಾಣಿಸಿದಿ ಮಾತೆಗೆ ನಮೋವಿಶ್ವವಿಷ್ಣೋ1ಗರ್ಗಾದಿ ವಿಬುಧರು ಯೋಗ್ಯ ಸಜ್ಜನರೆಲ್ಲಅಗಣಿತಮಹಿಮ ಶ್ರೀ ವಿಷ್ಣು ನೀ ಎಂದುಭಕುತಿಯಿಂದಲಿ ನಿನ್ನ ಬಾಲಲೀಲೆ ನೋಡೆಕಾಕುದುರ್ಮತಿಗಳು ದ್ವೇಷ ಬೆಳೆಸಿದರು2ಕಂಸ ಜರಾಸಂಧ ಕಾಲಯವನ ಕಲಿಯಅಸುರ ಭೃತ್ಯರು ಬಂದು ನಿನ್ನ ನಿನ್ನವರನ್ನಹಿಂಸಿಸಬೇಕೆಂದು ಆಗಾಗ ಯತ್ನಿಸಲುದ್ವಂಸ ಮಾಡಿದಿ ಅವರನ್ನ ಸಜ್ಜನ ಪೊರೆದಿ 3ವತ್ಸಬಕಅಘಧೇನುಕ ಪ್ರಲಂಬಾರಿಷ್ಟಕೇಶಿ ಕಮಲಯ ಪೀಡಾ ಮುಷ್ಟಿಕ ಚಾಣೂರಕಂಸಾದಿ ಅಸುರರ ಸದೆದು ಮುದ್ದೆಯ ಮಾಡಿವಸುಮತಿಯ ಸಾಧುಗಳ ಭಯ ನಿವಾರಿಸಿದಿ 4ಬಲವಂತ ರಾಮ ಸಹ ಅಮಿತ ಪೌರುಷ ನೀನುಬಲಿಷ್ಠ ಅಸುರರ ಅಳಿದು ಭೂಭಾರ ಇಳಿಸಿಶೀಲ ಭಕ್ತರಿಹಪರಸುಖ ಒದಗಿಸಿದಿಬಲರಾಮ ಕೃಷ್ಣ ನಮೋ ಫಣಿಪ ವಿಷ್ಣೋ 5ಯಮಳಾರ್ಜುನೋದ್ಧಾರ ದಾವಾಗ್ನಿಯಿಂದ ನೀಸಂರಕ್ಷಿಸಿದಿ ವೃಜಗೋಪ ಜನರನಿನ್ನ ಮಹಿಮೆ ಏನೆಂಬೆ ವರುಣನಾಲಯದಿಂದಸಮ್ಮುದದಿ ನಂದನ್ನ ಕರತಂದಿ ಅಜಿತ 6ನಾಗಪತ್ನೀಯರು ಬಂದು ನಮಸ್ತುಭ್ಯಂಭಗವತೇ ಪೂರುಷಾಯ ಮಹಾತ್ಮನೇ ಎಂದುಅಗುಣ ಅವಿಕಾರ ನಿನ್ನನ್ನು ಭಕ್ತಿಯಿಂ ಸ್ತುತಿಸೆನಾಗನೂ ಸಹ ಸ್ತುತಿಸೆ ಅನುಗ್ರಹ ಮಾಡಿದಿಯೋ 7ಶ್ರೀಧರನೇ ನಿನ್ನಯ ವೇಣುನಾದದ ಸುಧೆಯಮಾಧುರ್ಯ ರಸವನ್ನು ವರ್ಣಿಸಲಶಕ್ಯಶ್ರೀದೇವಿ ಕೊಳಲÉೂಳು ಪ್ರವೇಶಿಸಿ ನಿನ್ನ ಅರ-ವಿಂದ ಮುಖದ ಆನಂದ ಸವಿದು ಸುಖಿಸುವಳು 8ಪಾಲು ಬೆಣ್ಣೆ ಪ್ರಿಯ ಕಳ್ಳ ಮುದ್ದು ಕೃಷ್ಣಗೊಲ್ಲತಿಯರ ಸಹ ಸಲ್ಲಾಪಿಸುವ ಎಂಬಸೊಲ್ಲಿನ ತತ್ವವ ಬಲ್ಲವರೇ ಬಲ್ಲರುಫಲಿ ನಮೋ ಪಾಲ್ಬೆಣ್ಣೆ ಗೋಪಿಜನ ಪ್ರಿಯ 9ಅತ್ಯಲ್ಪ ಅಸುರ ಆವೇಶ ಸುರರಿಗೆ ಎಂದುಮುಖ್ಯ ವಾಯು ಅಖನರ್ಮ ಸಮಗಿಲ್ಲಹೊಯ್ಯಿಸೆ ಮಳೆಶಕ್ರನೀ ಲೀಲೆಯಂ ಗೌರಿ ಎತ್ತಿಕಾಯ್ದಿ ಗೋಜನಗಳ ಅನ್ನದ ಅನ್ನಾದ 10ಭಕ್ತಿ ಉಕ್ಕಿ ನಿನ್ನಲ್ಲಿ ಕೂಡಿ ಕ್ರೀಡಿಸುವಸದ್ಧರ್ಮವರ್ತಿಗಳ ಸ್ವಸ್ವಯೋಗ್ಯತೆಯಿಂರಾಧಾದಿ ಗೋಪಿಗಳ ಅನಂದ ಉಕ್ಕಿಸಿಸ್ವರತಇಂದಿರಾಪತಿ ಗೋವಿಂದ ಗೋ ಕಾಯ್ದ 11ಅಧಿಕಾರಿ ತ್ರಿವಿಧರಲಿ ತಾರತಮ್ಯ ಉಂಟುಅದರಂತೆ ಭಕ್ತಿಯಲಿ ಅವರೋಚ್ಯ ಉಂಟುಭಕ್ತಿ ಸಾಧನದಂತೆ ಯೋಗ್ಯ ಸುಖ ಓದಗಿಸಿದಿಮಂದಗಮನೆಯರಿಗೆ ರಾಸಕ್ರೀಡೆಯಲಿ 12ನಂದವ್ರಜಗೋಕುಲ ಮಥುರೆ ಬೃಂದಾವನಚಂದ್ರ ಯಮುನೆವನಲತೆ ಪುಷ್ಪ ವೃಕ್ಷಸಿಂಧುದ್ವಾರಕೆ ವಂಶಯಷ್ಠಿ ಗೋ ಸರ್ವರಿಗೂವಂದಿಸುವೆ ಕೃಷ್ಣ ಸಂಬಂಧಿಗಳು ಎಂದು 13ವಿದ್ಯಾಧರ ಸುದರ್ಶನನು ಶಾಪದಿ ಅಹಿಯುನಂದನ್ನ ಕಾಯ್ದಿ ಆ ಅಹಿಯ ಬಾಯಿಂದಪಾದಸ್ಪರ್ಶವ ಕೊಟ್ಟು ಶಾಪ ವಿಮೋಚನೆ ಮಾಡಿಸ್ತುತಿಸಿ ಕೊಂಡಿಯೋ ಮಹಾಪೂರುಷ ಸತ್ಪತಿಯೇ 14ಅಕ್ರೂರ ಕುಬ್ಜ ಉದ್ಧವಗೆ ಅನುಗ್ರಹಿಸಿದುರುಳವ್ರಜನ ಶಿರವ ಕತ್ತರಿಸಿ ಬಿಸುಟುವಿಪ್ರನಾರಿಯರ ಅನ್ನ ಉಂಡು ಒಲಿದಂತೆಕ್ಷಿಪ್ರವಾಯಕ ಗೊಲಿದಿ ಮಾಲಾಕಾರನಿಗೂ15ಬಲಿಷ್ಠ ಮಲ್ಲಾದಿಗಳ ಕುಟ್ಟಿ ಹೊಡೆದು ಕೊಂದುಖಳದುಷ್ಟ ಕಂಸನ್ನ ದ್ವಂಸ ಮಾಡಿದಿಯೋಒಳ್ಳೇ ಮಾತಿಂದ ಮಾತಾಪಿತರ ಆಶ್ವಾಸಿದಿಬಲರಾಮ ಕೃಷ್ಣ ನಮೋಪಾಹಿಸಜ್ಜನರ16ಉಗ್ರಸೇನಗೆ ರಾಜ್ಯವನು ಒಪ್ಪಿಸಿ ನೀನುಗುರುವಿನ ಮೃತ ಪುತ್ರನ್ನ ಕರೆತಂದಿಜರಾಸುತನ ಸಹ ಯುದ್ಧ ಮಾಡಿ ಬೇಗನೇ ನೀನುನಿರ್ಮಾಣಿಸಿದಿ ದ್ವಾರಕೆಯ ಕಡಲ ಮಧ್ಯ 17ಈರಾರುಯೋಜನವು ದ್ವಾರಕಾ ದುರ್ಗವುಸ್ಫುರಧೃಮ ಲತೋದ್ಯಾನ ವಿಚಿತ್ರೋಪ ವನಗಳ್ಪುರಟ ಶೃಂಗೋನ್ನತ ಸ್ಫಟಿಕಾ ಅಟ್ಟಾಳಗಳ್ ಗೋ -ಪುರಗಳು ನವರತ್ನ ಸ್ವರ್ಣಮಯ ಗೃಹಗಳು 18ಮುಚುಕುಂದ ಶಯನಿಸಿದ ಗುಹೆಯೋಳ್ ನೀ ಪೋಗೆನೀಚ ದುರ್ಮತಿ ಕಾಲಯವನ ಹಿಂಬಾಲಿಸಿಮುಚುಕುಂದನ್ನ ನೋಡಿ ನೀನೇವೇ ಎಂದು ಹೊಡಿಯೇಭಸ್ಮವಾದನು ಅಲ್ಲೇ ರಾಜ ಕಣ್ತೆರೆದು 19ನೃಪನು ನಿನ್ನ ಸ್ತುತಿಸಿ ಅನುಗ್ರಹ ಪಡೆದುಸುಪವಿತ್ರ ನರನಾರಾಯಣ ಕ್ಷೇತ್ರಯೈದೇಉಪಾಯದಿಂದಲಿ ಮಾಗಧನ ಸಮ್ಮೋಹಿಸಿನೀ ಬಲರಾಮ ಸಹ ಸ್ವಪುರ ಸೇರಿದಿಯೋ 20ವನಜಸಂಭವಪ್ರೇರಿಸಲು ರೇವತರಾಜಅನರ್ತ ದೇಶಾಧಿಪತಿಯು ಶ್ರೀಮಂತತನ್ನ ಸುತೆ ರೇವತಿಯು ನಮ್ಮ ಬಲರಾಮನಿಗೆಧನ್ಯ ಮನದಲಿ ಕೊಟ್ಟು ಮದುವೆ ಮಾಡಿದನು 21ಸುಧಾ ಕಲಶವ ಗರುಡ ಕಿತ್ತಿ ತಂದಂತೆಚೈದ್ಯಮಾಗಧಶಾಲ್ವಾದಿ ಕಡೆಯಿಂದಎತ್ತಿ ತಂದಿ ಸ್ವಯಂವರದಿಂ ಭೈಷ್ಮಿಯವಂದಿಸಿ ಶರಣಾದೆ ಕೃಷ್ಣ ರುಕ್ಮಿಣಿಗೆ 22ಜಯತು ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗಜ್ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ ಪ್ರಸನ್ನ ಶ್ರೀನಿವಾಸ 23-ಇತಿದ್ವಿತೀಯಅಧ್ಯಾಯ ಸಂಪೂರ್ಣಂ-ತೃತೀಯ ಅಧ್ಯಾಯಕಲ್ಯಾಣ ಸುಧಾಸಾರಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆ ನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖಬಲ ಚೇಷ್ಟಾರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪವಿಧರ್ಭ ದೇಶಾಧಿಪತಿ ಭೀಷ್ಮಕರಾಜನುಸದ್ಧರ್ಮನಿಷ್ಟ ಕುಂಡಿನಿಪುರವಾಸಿಐದು ಮಂದಿ ಗಂಡು ಮಕ್ಕಳು ಅವನಿಗೆಮೊದಲನೆಯವನಿಗೆ ರುಗ್ಮಿ ಎಂದು ಹೆಸರು 1ರುಗ್ನಿ ಬಹು ದುಷ್ಟನು ಕೃಷ್ಣ ದ್ವೇಷಿ ಖಳರುಮಾಗಧಾದಿಗಳಲ್ಲಿ ಬಹು ಸ್ನೇಹರುಗ್ಮಿಗೆ ರುಕ್ಮರಥ, ರುಕ್ಮಬಾಹು ಮತ್ತುರುಕ್ಮಕೇಶಿ, ರುಕ್ಮಮಾಲಿ ಅನುಜರು2ಈ ಪುಣ್ಯವಂತ ರಾಜನಿಗೊಂದು ಮಗಳುಂಟುಈ ಪುತ್ರಿ ರುಕ್ಮಿಣಿ ಸ್ಫುರದ್ವಾರಾನನೆಯುಹೇ ಪುರುಷೋತ್ತಮನೇ ನಿನ್ನ ನಿಜಸತಿ ಲಕ್ಷ್ಮೀಅಪ್ರಮೇಯನೇ ನಿನ್ನ ಬಿಟ್ಟಗಲದವಳು 3ಉರುಗುಣಾರ್ಣವ ನಿನ್ನ ಅವತಾರಕನುಸರಿಸಿಶ್ರೀ ರಮಾದೇವಿಯೇ ಪ್ರಾದುರ್ಭವಿಸಿದಳುನರರ ನೋಟಕೆ ರಾಜಪುತ್ರಿಯಂತೆ ಇಹಳುಪುರಟಗರ್ಭನ ತಾಯಿ ಸರ್ವಜಗನ್ಮಾತೆ 4ಈ ಷÉೂೀಡಶ ಕಲಾಯುಕ್ ನಮ್ಮ ತನುವೋಲ್ ಅಲ್ಲಕ್ಲೇಶಸಂತಾಪಾದಿ ವಿಕಾರಗಳು ಇಲ್ಲದೋಷ ದೊರೆ ದುಃಖ ಅಸ್ಪøಷ್ಟೆ ಎಂದೆಂದೂಕೃಷ್ಣ ವಿಷ್ಣೋ ನಿನ್ನಾಧೀನೆ ಎಂದೆಂದೂ 5ಉತ್ತಮ ಮಹಾಪೂರುಷ ಶ್ರೀಕರನೇ ನಿನ್ನಉತ್ತಮ ಕ್ರಿಯಾರೂಪ ಗುಣವಿಶೇಷಗಳನ್ನಸಂತತ ಅಲೋಚಿಸಿ, ಹೊಸ ಹೊಸ ಅತಿಶಯವಸತತ ಕಾಣುತ ತಾ ಸನ್ನುತಿಸಿ ಸುಖಿಸುವಳು 6ವಿಮಲಆನಂದಮಯನಿನ್ನ ಸಹಲಕ್ಷ್ಮೀಬ್ರಹ್ಮರುದ್ರಾದಿ ಸುರರಿಂದ ಸನ್ನುತಳುಅಮಿತೋಚ್ಛ ಭಕ್ತಿಯಿಂ ಸದಾ ನಿನ್ನಸೇವಿಪಳುರಮಾ ಸಿಂಧುಜಾ ಜಾನಕೀಯೇವೇ ಭೈಷ್ಮಿ 7ಸಿರಿದೇವಿ ತಿಳಿದಷ್ಟುಹರಿನಿನ್ನ ತಿಳಿದವರುನರರಲ್ಲಿ ಸುರರಲ್ಲಿ ಯಾರೂನೂ ಇಲ್ಲನರಲೋಕದಲ್ಲಿ ನರರಂತೆ ನಟಿಸುವ ಸಿರಿಯುಅರಿಯಬೇಕೇ ಇತರರಿಂದ ಹೊಸದಾಗಿ 8ಅರಮನೆಗೆ ಬರುವವರು ನಾರದಾದಿಗಳಿಂದಹರಿಮುಕುಂದನೆ ನಿನ್ನರೂಪಗುಣಮಹಿಮೆಹರುಷದಿಂದಲಿ ಚೆನ್ನಾಗಿಕೇಳಿಮನದಲ್ಲಿವರಿಸಿದಳು ಸದಾ ನಿನ್ನ ಪ್ರೇಮದಿ ಭೈಷ್ಮಿ 9ಕೃಷ್ಣನಿಗೆಸಮ ಸದೃಶ ಪುರುಷ ಯಾರೂ ಇಲ್ಲರುಕ್ಮಿಣಿಗೆ ಸಮ ಸದೃಶ ಸ್ತ್ರೀ ಯಾರೂ ಇಲ್ಲಗುರುರೂಪ ಔದಾರ್ಯ ಬುದ್ದಿ ಲಕ್ಷಣಾಶ್ರಯಳುನಿನ್ನ ನಿಜಪತ್ನಿ ರುಕ್ಮಿಣಿ ಎಂದು ನೀ ಅರಿವಿ 10ಮದುವೆ ಮಾಡಲು ರುಕ್ಮಿಣಿಗೆ ಯೋಚಿಸಿನೃಪಬಂಧುಗಳು ಕೃಷ್ಣಗೆ ಕೊಡಲು ಇಚ್ಛೈಸೆಧೂರ್ತರುಗ್ಮಿ ಕೃಷ್ಣ ದ್ವೇಷಿ ತಡೆ ಮಾಡಿದನುಚೈದ್ಯ ಶಿಶುಪಾಲನಿಗೆ ಕೊಡಲು ನೆನೆದು 11ಸುತಗೆ ಕೃಷ್ಣನು ಮಾತ್ರ ವರನೆಂದು ತಿಳಿದರೂಪುತ್ರ ಸ್ನೇಹದಿ ರುಕ್ಮಿಗೆ ಒಡಂಬಟ್ಟ ರಾಜಚೈದ್ಯನಿಗೆ ಕೊಡಲು ಏರ್ಪಾಡು ಮಾಡಲುಆಪ್ತ ದ್ವಿಜವರ್ಯನ ಕರೆದಳು ಭೈಷ್ಮೀ 12ವಿಪ್ರನ ದ್ವಾರ ಸಂದೇಶ ಕಳುಹಿಸಿದಳುಪತ್ರ ಬರೆದಳು ನಿನಗೆ ಸತ್ತತ್ವ ನಿಮಿಡಆ ಬ್ರಾಹ್ಮಣ ಶ್ರೇಷ್ಟ ದ್ವಾರಕಾ ಪುರಿಯೈದುಪರಮಪೂರುಷ ನಿನ್ನ ನೋಡಿದನÀು ಮುದದಿ13ಕಾಂಚನಾಸನದಲ್ಲಿ ಕುಳಿತಿದ್ದ ನೀನುದ್ವಿಜವರ ಶ್ರೇಷ್ಠ ಬರುವುದು ಕಂಡಾಕ್ಷಣದಿತ್ಯಜಿಸಿಆಸನಪೋಗಿ ಎದುರ್ಗೊಂಡು ಕರೆತಂದುಪೂಜಿಸಿದೆಯೋ ಸ್ವಾಮಿ ಬ್ರಹ್ಮಾಂಡದೊಡೆಯ 14ಅಖಂಡೈಕ ಸಾರಾತ್ಮಾ ಸರ್ವರೂಪಾಟಿಭಿನ್ನಅಕಳಂಕ ಉರು ಸರ್ವ ಸಚ್ಛÀಕ್ತಿಪೂರ್ಣಏಕಾತ್ಮ ನೀ ಪೂಜ್ಯ ಪೂಜಕ ನೀಚೋಚ್ಛಗಳಕಾಕುಜನಮೋಹಕ್ಕೆ ಅಲ್ಲಲ್ಲಿ ತೋರ್ವಿ15ಸಜ್ಜನರ ಗತಿಪ್ರದನು ಅವ್ಯಯನು ನೀನುಭೋಜನಾದಿ ಬಹು ಉಪಚಾರ ಮಾಡಿದ್ವಿಜವರ್ಯನ ಹೊಗಳಿ ಸಾಧುಸನ್ಮತಿನೀತಿನಿಜ ಸುಖಪ್ರದಮಾರ್ಗಬೋಧಕ ಮಾತಾಡಿದಿ16ಭೂತ ಸಹೃತ್ತಮ ಸದಾ ಸಂತುಷ್ಟ ಮನಸ್ಸುಳ್ಳಸಾಧು ಆ ಬ್ರಾಹ್ಮಣನು ನಿನಗೆ ಸನ್ನಮಿಸಿಬಂದ ವಿಷಯವ ಪೇಳಿ ಪತ್ರವ ಸಮರ್ಪಿಸಿದವಂದೇ ಆ ಅಕುಟಿಲಗೆ ಭೈಷ್ಮೀ ಕೃಷ್ಣರಿಗೆ 17ಪತ್ರಸಾರಭುವನಸುಂದರ ನಿನ್ನ ಕಲ್ಯಾಣ ಗುಣಗಳಶ್ರವಣ ಮನನವಪರಮಆದರದಿ ಮಾಳ್ಪಜೀವರುಗಳ ಕಾಯಜಾದಿ ತಾಪಂಗಳುದ್ರಾವಿತವು ಆಗುವೆವು ಎಂದು ಕೇಳಿಹೆನು 18ಗುಣಕ್ರಿಯಾರೂಪಸುಶ್ರವಣ ಮನನವ ಮಾಡಿಧ್ಯಾನಿಪರಿಗೆ ನಿನ್ನರೂಪದರ್ಶನವುನಿನ್ನ ಅರಿತ ಭಕ್ತರಿಗೆ ಅವತಾರಾದಿ ದರ್ಶನವುಕಾಣುವವರಿಗೆ ಅಖಿಲಾರ್ಥ ಲಭಿಸುವವು 19ಇವು ಇಂತಹ ನಿನ್ನ ಉನ್ನತ ಮಹಿಮೆಗಳಶ್ರವಣ ಮಾಡಿ ಅಂತರಂಗದಿ ತನ್ನ ಮನಸ್ಧಾವಿಸುತ್ತೇ ನಿನ್ನಲ್ಲೇಅಚ್ಯುತಮುಕುಂದದೇವಿ ರುಕ್ಮಿಣಿ ಹೀಗೆ ಬರೆದಿಹಳು ವಿಭುವೇ 20ಸುಖರೂಪ ಲಕ್ಷ್ಮೀಶವಿಧಿಪಿತಜಗಜನ್ಮಾದಿಕರ್ತಶುಕ್ರ ನಿಷ್ಕಲಅಪ್ರಾಕೃತಅವ್ಯಕ್ತಅಖಂಡೈಕ ಸಾರಾತ್ಮ ಅನಂತೋರು ಸೌಂದರ್ಯನಿಗಮಗ್ಯ ಗಾಯತ್ರಿ ಅಮಾತ್ರ ತ್ರಿಮಾತ್ರ 21ಬೃಹತೀಸಹಸ್ರ ಸ್ವರವ್ಯಂಜನಾಕ್ಷರ ವಾಚ್ಯಅಹರ್ನೇತ್ರು ಭೂಮನ್ನಿತ್ಯನೀ ಸ್ವತಂತ್ರಮಹೈಶ್ವರ್ಯ ಪೂರ್ಣೇಂದ್ರ ಅಶೇಷ ಗುಣಾಧಾರಮಹಾಶಕ್ತಿ ದಿವಃಪರ ಪರಮೇಶ್ವರ - ಸ್ವ 22ನಿನ್ನ ಈ ಕುಲಶೀಲ ವಿದ್ಯಾದಿ ಗುಣರೂಪಅನುಪಮೈಶ್ವರ್ಯದಿ ನಿನಗೆ ನೀನೇತುಲ್ಯನಿನ್ನ ಗುಣಗಳು ಸರ್ವಾಕರ್ಷಕವಾಗಿರುವವುತನ್ನಾತ್ಮ ನಿವೇದನ ಮಾಡಿಯೇ ಎಂದಳು 23ಉನ್ನಾಮ ಉದ್ಧಾಮ ಅಚ್ಯುತನು ನೀನಿತ್ಯಆನಂದಚಿತ್ ತನು ಯದುಪತೇ ಕೃಷ್ಣನೀನೇವೇ ತನ್ನಪತಿಸಿರಿತಾನು ಎಂದುಅನಘಲಕ್ಷ್ಮೀ ಭೈಷ್ಮಿ ಸೂಚಿಸಿಹಳು24ರಾಜಪುತ್ರ ಎಂಬ ವಿಡಂಬನಾ ರೀತಿಯಲಿದುರ್ಜನರ ಭಯ ತನಗೆ ಇರುವಂತೆ ಬರೆದುಸೂಚಿಸಿದಳು ತನ್ನ ಅಂಬಿಕಾ ಗುಡಿಯಿಂದಅಚ್ಯುತನೇ ನೀ ಕರಕೊಂಡು ಹೋಗೆಂದು 25ರುಕ್ಮಿಣಿಯಲಿ ನಿನ್ನ ಪ್ರೇಮ ಪ್ರಕಟಿಸುತಬೇಗಸಾರಥಿದಾರುಕನ್ನ ನೀ ಕರೆದುಮೇಘಪುಷ್ಪ, ಶೈಭ್ಯ, ಬಲಾಹಕ ಸುಗ್ರೀವನಾಲ್ಕಶ್ವ ರಥದಲ್ಲಿ ದ್ವಿಜವರ ಸಹ ಕುಳಿತಿ 26ಖಗವೇಗದಿ ರಥದಿ ಏಕ ರಾತ್ರಿಯಲ್ಲೇಪೋಗಿ ಸೇರಿದಿ ಆ ಕುಂಡಿನಾಪುರವಸೊಗಸಾದ ಅಲಂಕಾರ ಪಚ್ಚೆ ತೋರಣಗಳುಪೂಗಿ ಮಾವು ಮೊದಲಾದ ಗೊಂಚಲುಗಳು 27ಎಲ್ಲಿ ನೋಡಿದರಲ್ಲಿ ಕಾಂಚನಾಭರಣದಿಪೊಳೆವ ಪೀತಾಂಬರ ಪಟ್ಟೆ ಉಟ್ಟಿದ್ದಲೋಲಾಯಿತಾಕ್ಷಿಯರು ವಿಪ್ರಜನ ಗುಂಪುಕೋಲಾಹಲವಾಗಿ ಕಂಡಿ ಕುಂಡಿನವ 28ಕಾರಣವು ತಿಳಿದಿದ್ದೆ ಭೀಷ್ಮಕರಾಜನುಪುತ್ರಸ್ನೇಹದಿ ಚೈದ್ಯಶಿಶುಪಾಲನಿಗೆಪುತ್ರಿಯ ಕೊಡಲಿಕ್ಕೆ ಕಾರ್ಯೋನ್ಮುಖನಾಗಿಪಿತೃ ದೇವಾರ್ಚನೆ ವಿಪ್ರಪೂಜೆಯಗೈದ 29ಚೇದಿಪತಿ ದಮಘೋಷ ಪುತ್ರ ಶಿಶುಪಾಲಗೆಮದುವೆಪೂರ್ವದ ಕಾರ್ಯ ತಾನೂ ಮಾಡಿಸಿದಮದುವೆ ಸಂಭ್ರಮಕ್ಕಾಗಿ ಸೈನ್ಯ ಸಹ ಬಂದರುವೈದರ್ಭ ಪೂಜಿಸಿದ ಉಪಚಾರದಿಂದ 30ಮಾಧವನೇ ನಿನ್ನಲ್ಲಿ ಭಯ ದ್ವೇಷ ಕಾರಣದಿಚೈದ್ಯ ಪಕ್ಷೀಯರು ಜರಾಸಂಧ ಸಾಲ್ವದಂತ ವಕ್ರಾದಿಗಳು ಸಹಸ್ರಾರು ಮಂದೀರುಬಂದುತುಂಬಿಎಚ್ಚರಿಕೆಯಲಿ ಇದ್ದರು31ಆ ಪರಿಸ್ಥಿತಿಯಲ್ಲಿ ಕುಂಡಿನಾಪುರಕೆ ನೀಒಬ್ಬನೇ ಪೋದದ್ದುಕೇಳಿಬಲರಾಮಕ್ಷಿಪ್ರದಿ ರಥಾದಿ ಯಾದವಸೈನ್ಯ ಸಹಿತತಾ ಬಂದ ಅಚ್ಯುತನೇ ನಿನ್ನ ಬದಿಗೆ 32ಸರೋರುಹಾಸನನಿಗೂ ಕೋಟಿಗುಣ ಉತ್ತಮಳುಸಿರಿದೇವಿ ರುಕ್ಮಿಣಿ ಭೀಷ್ಮ ಕನ್ಯಾಹರಿಯೇ ನಿನ್ನಾಗಮನ ಆಕಾಂಕ್ಷಿಯಾಗಿ ತಾನಿರೀಕ್ಷಿಸಿದಳು ನಿನ್ನ ಹಾಗೂ ಆ ದ್ವಿಜವರನ್ನ 33ಮೇದಿನಿಸ್ತ್ರೀಯರಿಗೆ ಎಡಗಣ್ಣು ತೊಡೆ ಭುಜಅದುರುವುದುಶುಭಸೂಚಕವೆಂದು ಪೇಳುವರುಸದಾನಿತ್ಯಸುಶುಭ ಮಂಗಳರೂಪಿ ದೇವಿಗೆಅದರಿದವು ಎಂಬುವುದು ಲೌಕಿಕ ದೃಷ್ಟಿ 34ಮುಖದಲ್ಲಿ ಸಂತೋಷ ಪ್ರಕಟಿಸುತ ವಿಪ್ರನುರುಕ್ಮಿಣಿ ಬಳಿ ಬಂದು ಸಮಸ್ತವೂ ಪೇಳೆಶ್ರೀ ಕೃಷ್ಣ ನಿನ್ನನ್ನು ಸಂಸ್ಮರಿಸುತ ಭೈಷ್ಮಿಲೋಕ ರೀತಿಯಲಿ ಆದ್ವಿಜಶ್ರೇಷ್ಠನ್ನ ಪೂಜಿಸಿದಳು35ಕೃಷ್ಣ ಬಲರಾಮರಿಗೆ ಬಿಡಾರವ ಕೊಟ್ಟುಭೀಷ್ಮಕನು ಪೂಜಿಸಿದ ಪುರದ ಸಜ್ಜನರುಕೃಷ್ಣನಿಗೆ ರುಕ್ಮಿಣಿಯೇ ರುಕ್ಮಿಣಿಗೆ ಕೃಷ್ಣನೇಘೋಷಿಸಿದ ರೀತಿ ಸಂತೋಷದಿಂದ 36ಸಂಪ್ರದಾಯವನುಸರಿಸಿ ಭೀಷ್ಮಕನುತನ್ನ ಪುತ್ರಿಯ ಕಾಲುನಡೆಯಲ್ಲಿ ಕರೆಕೊಂಡುಅಂಬಿಕಾಪೂಜೆಯ ಮಾಡಲು ಪೋಗಲುಸಂಭ್ರಮವ ಬಂದಿದ್ದ ರಾಜರು ನೋಡಿದರು 37ಮುಕುಂದ ನಿನ್ನಯ ಪಾದಪಂಕಜವ ಧ್ಯಾನಿಸುತರುಕ್ಮಿಣಿ ಅಂಬಿಕಾಆಲಯವ ಸೇರಿಬಾಗಿನಾದಿಗಳ ಕೊಟ್ಟು ನಿನ್ನ ಸಂಸ್ಮರಿಸುತ್ತರಾಕೇಂದುಮುಖಿ ನಿನ್ನಾಕಾಂಕ್ಷೆಯಿಂ ತಿರುಗಿದಳು38ರಥಗಜತುರಗಪದಾದಿಸೈನ್ಯಗಳುಪ್ರತಿರಹಿತರು ತಾವೆಂಬ ಡಾಂಭಿಕರಾಜರುಅತಿಗೂಢಚಾರ ರಾಜಭೃತ್ಯರು ಅಲ್ಲಲ್ಲಿಇತ್ತ ಅತ್ತ ಎಲ್ಲೂ ಪುರಜನ ಗುಂಪು 39ಮಂದಗಜಗಮನೆಯು ಸ್ವಚ್ಛ ಹಂಸದವೋಲುಚಂದಪಾದವ ಮೆಲ್ಲ ಮೆಲ್ಲನೆ ಇಡುತಸ್ವಯಂವರದಿ ಸಯಂದನದಿ ನೀ ಇರೆ ವಾರೆನೋಟ ನೋಡಿಬಂದಳು ಉದಯಾರ್ಕ ಪದುಮಮುಖ ಮುದದಿ 40ಮಂದಜಭವಾಂಡದಲ್ಲಿ ಎಲ್ಲೆಲ್ಲೂ ಇಲ್ಲದರೂಪಸೌಂದರ್ಯವತಿಯ ಮೋಹದಲ್ಲಿ ನೋಡಿಮಂಧಧೀ ರಾಜರು ಕಾಯದಿ ಮೈಮರೆಯೇಮಂದಜಕರದಿಂದ ನೀ ಎತ್ತಿಕೊಂಡಿ ಭೈಷ್ಮಿಯ41ಗರುಡಧ್ವಜದಿಂದ ಶೋಭಿಸುವ ರಥದಲ್ಲಿಸಿರಿರುಕ್ಮಿಣಿ ಸಹ ಕುಳಿತು ನೀನುಹೊರಟಿ ಸಸೈನ್ಯ ಬಲರಾಮ ಸಹ ಅದುರುಳರ ಕಣ್ಣು ಮುಂದೆಯೇ ಶ್ರೀಧರಾಚ್ಯುತನೇ 42ಹಾಹಾಕಾರದಲಿ ಕೂಗಿ ಆರ್ಭಟಮಾಡಿಮಹಾಸೈನ್ಯ ಸಹ ಜರಾಸಂಧಾದಿ ರಾಜರುಬಹುವಿಧ ಧನುರ್‍ಸ್ತ್ರಯುತ ಹಿಂಬಾಲಿಸಿಕುಹಕರು ಅತಿಘೋರ ಯುದ್ದ ಮಾಡಿದರು 43ಲೀಲೆಯಿಂದಲಿ ನೀನು ಬಲರಾಮ ಯಾದವರುಖಳಜರಾಸಂಧಾದಿಗಳ ಸೈನ್ಯದವರತಲೆ ಕಾಲು ಕತ್ತರಿಸಿ ಛಿನ್ನ ಭಿನ್ನ ಮಾಡೇಪೇಳದೆ ಓಡಿದನು ಜರಾಸುತನು ಸೋತ 44ಧಾಮಘೋಷನಲಿ ಪೋಗಿ ಅವನ್ನ ಆಶ್ವಾಸಿಸಿತಾಮರಳಿ ಪೋದನು ತನ್ನ ಪಟ್ಟಣಕ್ಕೆತಮ್ಮ ತಮ್ಮ ಪುರಿಗಳಿಗೆ ಇತರ ರಾಜರೂ ಪೋಗೇವರ್ಮದಿ ಯುದ್ಧವ ಮುಂದುವರೆಸಿದ ರುಗ್ಮಿ 45ಶಪಥ ಮಾತುಗಳಾಡಿ ಯುದ್ಧ ಮಾಡಿದ ರುಗ್ಮಿಚಾಪಶರಸಾರಥಿಅಶ್ವಗಳ ಕಳಕೊಂಡುಕೋಪೋಚ್ಛದಿ ಖಡ್ಗದಿ ಎತ್ತಿಕೊಂಡು ಬರಲುಶ್ರೀಪ ನೀ ಆ ಖಳನ್ನ ಕಟ್ಟಿಹಾಕಿದೆಯೋ 46ಜಲಜಾಕ್ಷಿ ಭೈಷ್ಮೀ ಪ್ರಾರ್ಥಿಸಲು ನೀ ರುಗ್ಮಿಯಕೊಲ್ಲದೇ ವಿರೂಪ ಮಾತ್ರವ ಮಾಡೇ ಆಗಬಲರಾಮ ವಾದಿಸಿ ಬಿಡುಗಡೆ ಆಗಿ ಆಖಳಓಡಿ ಪೋದನು ಭೋಜಘಟಕ್ಕೆ47ಜಯ ಕೃಷ್ಣ ಶ್ರೀರುಕ್ಮಿಣಿ ಸಮೇತದಿ ಬಾರೆಜಯಭೇರಿ ತಾಡಿಸಿ ದ್ವಾರಕಾವಾಸಿಗಳುಗಾಯಕರು ನರ್ತಕರುವಿಪ್ರಮುತ್ತೈದೆಯರುಜಯ ಜಯ ಎನ್ನುತ್ತ ಆನಂದದಿ ಮುಳುಗಿದರು 48ಯದುಪುರಿಯಲ್ಲಿ ಮನೆಮನೆಯಲ್ಲಿ ಮಹೋತ್ಸವವುಮುದದಿ ಅಲಂಕೃತರಾಗಿ ಸ್ತ್ರೀ ಪುರುಷರುಜ್ಯೋತಿ ಉಜ್ಜಲ ದೀಪಾವಳಿ ಪೂರ್ಣ ಕುಂಭಗಳುಚೆಂದ ಗೊಂಚಲು ಪುಷ್ಪ ರತ್ನ ತೋರಣಗಳು 49ಸಂಜಯ ಕುರುಕೇಕಯಾದಿ ರಾಜರುಗಳುರಾಜಕನ್ಯೇಯರ ಗಜಗಳ ಒಡ್ಯಾಟಮೂರ್ಜಗದೊಡೆಯ ನೀ ರುಕ್ಮಿಣಿಯ ಕರೆತಂದಸುಚರಿತ್ರೆಯ ಪೊಗಳಿದರು ನರನಾರಿಯರೆಲ್ಲಾ 50ಚತುರ್ಮುಖ ಸುವೀರೆ ವೈನತೇಯನುಶೇಷಶತಮುಖಸ್ಮರಅಹಂಕಾರಿಕ ಪ್ರಾಣಮೊದಲಾದ ಸುರರ ಮುನೀಂದ್ರರ ವೇದಮಂತ್ರಗಳಮದುವೆ ಮಹೋತ್ಸವದ ವೈಭವಏನೆಂಬೆ ಜಯ ಜಯ ಜಯತು 51ಪೂರ್ಣ ಜ್ಞÕನಾತ್ಮನೇ ಪೂರ್ಣ ಐಶ್ವರ್ಯಾತ್ಮಪೂರ್ಣ ಪ್ರಭಾನಂದ ತೇಜಸ್ ಶಕ್ತ್ಯಾತ್ಮಆ ನಮಿಪೆ ಅಚ್ಯುತಾನಂದ ಗೋವಿಂದ ವಿಭೋಕೃಷ್ಣ ರುಕ್ಮಿಣೀನಾಥ ಜಗದೇಕವಂದ್ಯ 52ಆದರದಿ ಸುರವೃಂದ ರಾಜರೂ ವಿಪ್ರರೂಯಾದವರುಗಳು ಶ್ರೀ ಕೃಷ್ಣ ರುಕ್ಮಿಣೀನಿತ್ಯಸತಿಪತಿ ಮದುವೆ ನೋಡಿ ಮಹಾನಂದಹೊಂದಿದರು ಸೌಭಾಗ್ಯಪ್ರದ ಇದು ಪಠಿಸೆ 53ಯೋಗೇಶ್ವರ ದೇವ ದೇವ ಶ್ರೀಯಃಪತಿಅನಘಅಗಣಿತಗುಣಪೂರ್ಣಅಪ್ರಮೇಯಾತ್ಮನ್ಶ್ರೀಕೃಷ್ಣ ವಿಷ್ಣೋ ಶ್ರೀ ರಮಾರುಕ್ಮಿಣೀಬಾಗಿ ಶರಣಾದೆ ನಿಮ್ಮಲ್ಲಿ ಮಾಂಪಾಹಿ 54ಜಯತು ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗಜ್ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ ಪ್ರಸನ್ನ ಶ್ರೀನಿವಾಸ 55-ಇತಿ ಶ್ರೀ ರುಕ್ಮಿಣೀಶ ಕಲ್ಯಾಣ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬರಿದೆ ಬಯಸದಿರಿಹಲೋಕಸುಖವೆಂಬ ಬರಗಿನ ಪಾಯಸವ |ಶರಿಧಿಶಯನನ ಬೇಡೊ ಪರಲೋಕಸುಖವೆಂಬಸೇವಗೆ ಪಾಯಸವ ಪ.ಮುಂದರಿಯದೆ ಮಾಳ್ಪ ಮೂಢನೃಪನ ಸೇವೆ ಮುಗ್ಗುರಾಗಿಯ ಹಿಟ್ಟು |ಮಂದಮತಿಯೆ ನೀನನ್ಯರಲಿ ಬಯಸುವ ನೀಚಮಾರ್ಗವ ಬಿಟ್ಟು ||ಕಂದರ್ಪಜನಕನ ಕಿಂಕರನೆಂಬುವ ಕಲಸೋಗರ ಕಟ್ಟು |ಸಂದೇಹಿಸದೆಪರಾತ್ಪರವಸ್ತು ಮುಕುಂದನಂಘ್ರಿಯ ತಟ್ಟು1ಅಗ್ಗದಾಸೆಗೆ ಸಂಗ್ರಹಿಸದಿರಘವೆಂಬ ಅಡಿಗಂಟು ದವಸವನು |ಬಗ್ಗನುಳಿದು ಸಂಪಾದಿಸು ಪರವೆಂಬ ಪುಣ್ಯದ ದವಸವನು ||ಯೋಗ್ಯರನರಿಯದೆ ಏತಕೆ ಬೇಡುವೆ ಸಾಕಾರ ಕೇಶವನು |ಕುಗ್ಗಗೊಡದೆ ಸಂಸಾರವೆಂತೆಂಬುವ ಕೋಟಲೆ ತಪ್ಪಿಸುವನು 2ಸಕ್ಕರಿ ಚಿಲಿಪಾಲು ಘ್ರತ ರಾಜಾನ್ನಕೆ ಸವಿಯೀವಹರಿಕಥೆಯ - ಬಿಟ್ಟು |ಅಕ್ಕರೆಯಿಂದಪೇಕ್ಷಿಸುವರೆ ನೀ ಅಲ್ಪರ ಸಂಗತಿಯ ||ಸೊಕ್ಕೊಳಿತಲ್ಲೆಲೊ ಮದಡು ಜೀವಾತ್ಮನೆ ಸ್ವಾಮಿಕಾರ್ಯಸ್ಥಿತಿಯ |ಗಕ್ಕನಂತು ಸೇರು ಪುರಂದರವಿಠಲನ ಚರಣಕಮಲದ್ವಿತಯ 3
--------------
ಪುರಂದರದಾಸರು
ಮಡಿಯಾಗಿ ತಂಗಿ ಮಹಾಲಿಂಗ ಪೂಜೆ ಮಾಡೆಮುಕ್ತಿ ಸದನಕೇರುವೆ ನೋಡೇಪದೇಹವೆಂಬ ಮನೆಯ ಸಾರಿಸೆಮೋಹವೆಂಬ ತಂಗಳ ಮಡಕೆ ಹೊರಗಿರಿಸೆಸೋಹಂ ಎಂಬ ರಂಗವಲ್ಲಿಯನಿಡೆಜ್ಯೋತಿಯನು ಬೆಳಗಿಸೆ ನೀನು1ನಾನಾವಾಸನೆಯ ಮೈಲಿಗೆಯನು ಬಿಡೆಮನಮೈಲಿಗೆಯನು ತೊಳೆಸ್ವಾನುಭವದ ಪೀತಾಂಬರವನುಡೆನಾನು ಎಂಬ ಕಸವನು ಗುಡಿಸೆನಾದದ ಸುಖವನು ಅನುಭವಿಸೆ ನೀನು2ಧ್ಯಾನ ಮನನೆನಪಿಲ್ಲದಾಗಿಸ್ವಸ್ಥಾನದಲ್ಲಿ ಭಾನುವೀಗ ಬೆಳಗಿದಂತಾಗಿ ನೀನುನಾನು ಎಂಬುದು ಅಳಿದು ನೀನೆಚಿದಾನಂದನಾಗಿ ಪೂಜಿಸು3
--------------
ಚಿದಾನಂದ ಅವಧೂತರು
ಮಂದಿಯಗೊಡವೆ ಇನ್ನೇನು ಮಗಳೆ |ಮುಂದೆ ನೋಡಿ ಹಂಜಿ ನೂಲವ್ವ............ ಪ.ಕಣ್ಣ ಮುಂದಿನ ಕಸವನು ತೆಗೆದು |ಸಣ್ಣಗೆ ನೀ ನೂಲವ್ವ............... ಅಪವಸುಧೆಯ ದೊಡ್ಡ ಮಣೆಯಮಾಡಿ |ಶಶಿರವಿಗಳೆರಡು ಕಂಬವ ಹೂಡಿ ||ಆ ಸಿರಿರಂಗರ ಎರಡು ಚಕ್ರವ ಮಾಡಿ |ದರ್ಶನವೆಂಬುವ ನುಲಿಯನು ಬಿಗಿದು 1ಪರಬ್ರಹ್ಮನಅಳವು ಮಾಡಿ |ಕುರುಡು ನಾಶಿಕ ಬೆನಕದಿ ತಿಕ್ಕಿ ||ಹರಿ ನೀನೆ ಎಂಬ ದಾರವಕಟ್ಟಿ |ವಿರತಿವಿಚಾರದ ಬೆಲ್ಲಗಳಿಕ್ಕಿ2ಜಾÕನವೆಂಬುವ ಕದರನ್ನಿಕ್ಕಿ |ಮಾನಮದವೆಂಬ ಹಂಜಿಯ ಹಿಡಿದು ||ಧ್ಯಾನವೆಂಬ ಎಳೆಯನು ತೆಗೆದು |ಮೌನದಿಂದಲಿ ನೂಲವ್ವ 3ಕಕ್ಕುಲಾತಿ ಕಾಂಕ್ಷೆಗಳೆಂಬ |ಸಿಕ್ಕುದೊಡಕುಗಳನೆ ಬಿಡಿಸಿ ||ಒಕ್ಕುಡಿತೆಯ ಮಾಡಿದ ಮನದಿ |ಕುಕ್ಕಡಿನೂಲು ಕೂಡಿ ಹಾಕಮ್ಮ 4ಇಪ್ಪತ್ತೊಂದು ಸಾವಿರದ ಮೇ -ಲಿಪ್ಪ ನೂರು ಎಳೆಯನು ಹೊಡೆದು ||ತಪ್ಪದೆ ಹುಂಜವಕಟ್ಟಿ ನೀನು |ಒಪ್ಪದಿ ಸೀಳು ಇಳುವಮ್ಮ 5ಸದ್ಯದಿ ನೀ ಜಾಡರಲ್ಲಿ |ಸಿದ್ಧಬದ್ಧ ಸೀಳುಗಳ ಹಾಕಿ ||ವಿದ್ಯೆಯೆಂಬುವ ಹಚ್ಚಡವನ್ನು |ಬುದ್ಧಿಯಿಂದಲಿ ನೇಯಿಸಮ್ಮ 6ಒಪ್ಪುವಾತ್ಮ ಪರಮಾತ್ಮನೆಂಬ |ಒಪ್ಪ ಎರಡು ಹೋಳುಗಳಹಚ್ಚಿ ||ತಪ್ಪದೆ ಪುರಂದರವಿಠಲನ ಪಾದಕೆ |ಒಪ್ಪಿಸಿ ಕಾಲವ ಕಳೆಯಮ್ಮ 7
--------------
ಪುರಂದರದಾಸರು
ಮರೆತನೇನೇ ರಂಗ ಸ್ತ್ರೀಯರಸುರತದ ಸುಖಸಂಗ ಪಪರಿಪರಿ ವಿಧದಲಿ ಸರಸವನಾಡುತಗುರುಕುಚ ಎದೆಗಿರಿಸಿ ಮುದ್ದಿಸುವುದ ಅ.ಪಗೋವರ್ಧನವೆತ್ತಿ ವನದೊಳುಗೋವ್ಗಳೊಡನೆ ಸುತ್ತಿಹಾವನು ಭಂಗಿಸಿ ಮಾವನ ಮರ್ದಿಸಿಕಾಯದಿ ಘನತರ ನೋವಾಗಿದೆಯೆಂದು 1ಭಕ್ತ ಜನರಿಗೊಲಿದು ದೈತ್ಯರಶಕ್ತಿಯಿಂದಲಿ ಗೆಲಿದುಭಕ್ತರಂದದಿ ವೀರಕ್ತಿಯ ತಳೆದನೆನಕ್ತ ನಡತೆಗೆನ್ನ ಶಕ್ತಿ ಕುಂದಿಹುದೆಂದೂ 2ಎಣಿಕೆಯಿಲ್ಲದ ನಾರೀ ಜನರೊಳುಸೆಣಸಿ ರಮಿಸಿದಶೌರಿದಣಿದು ಮನದಿ ಗೋವಿಂದನ ದಾಸರಮನೆಯ ಸೇರ್ದನೆ ಮ£ÀುªÀುಥನನು ಜರೆಯುತ 3
--------------
ಗೋವಿಂದದಾಸ
ಮಾಡುತಿಹ ಸಂಸಾರ ಮಲಿನ ಹೊದ್ದೆದೆಯೋಗಿಆಡಲೇನವ ಆನಂದವಿಹ ಸುಖವಪಬಾಲ ಶಿಶುಲೇಲೆಗಳ ಬಗೆ ಬಗೆಯ ಲಾಲಿಸುತಶೂಲಧರಸುತರೀಗ ಬಂದರೆನುತ್ತಕಾಲು ಕೈ ಮೋರೆಗಳ ತೊಳೆದುಣಿಸಿ ರಕ್ಷಿಸುತಮೂಲೋಕಕೆನ್ನ ಭಾಗ್ಯ ಮಿಗಿಲು ಮಿಗಿಲೆನುತ1ಸತಿವಿನೋದವ ಮಾಡೆ ಸರಸವನೆ ಮಾಡುತ್ತಅತಿ ಆದಿವಸ್ತು ತಾನೀಕೆಯನುತಾಮತಿಭ್ರಾಂತನಾಗದಲೆ ಮಂಗಳನು ತಾನೆನುತಮತಿಯಾಟ ಬ್ರಹ್ಮವಿದು ಇದುವೆ ಎನ್ನುತ್ತ2ಬಡತನವು ಬಂದು ಕಾಡುತ್ತಲಿರೆ ನೋಡುತ್ತದೃಢಬುದ್ಧಿಯಾಗಿ ತಾನೀಗಲಿರುತಬಿಡದೆ ರಕ್ಷಿಪ ವಿಶ್ವಕುಟುಂಬಿಯಹನೆನುತಪಡದೆ ಆಯಾಸ ಸುಖವಾಸಿಯಾಗಿರುತ3ಬಡಿದಾಡುತಿಹ ಗೃಹದ ಜನರುಗಳ ನೋಡುತ್ತಬಿಡು ನಿನ್ನ ಬುದ್ಧಿಯನು ಎಂದು ಹೇಳುತ್ತಕಡೆಗಣಿಸಿದವರ ಅತ್ತಿತ್ತ ಮಾಡುತ್ತಕಡಹನಿಶ್ಚಲದಿಂದ ಮತಿಶಾಂತವಿರುತ4ನಿಂದ್ಯದೂರಪವಾದವನು ಕೇಳುತ್ತಮಂದಶ್ರವಣನೋ ಎಂಬ ತರದಲಿರುತನಿಂದುದೃಢ ಚಿತ್ತದಲಿ ನಿರ್ಲೇಪ ತಾನೆನುತಬಂಧಹರ ಚಿದಾನಂದ ತಾನಾದಗೆನುತ5
--------------
ಚಿದಾನಂದ ಅವಧೂತರು
ಮಾರಿಯನು ತೋರುತಿಹೆನು ಅದನೀಗನಾರಿ ಎಂದೆಂಬರಯ್ಯಪಸೀರೆ ಕುಪ್ಪಸವನುಟ್ಟುಸಿಂಗರದಿ ತೋರ ಕಂಕಣವನಿಟ್ಟು ಅಯ್ಯಮೂರಳೆಯಕಟ್ಟಾಣಿಕಟ್ಟಿಯೇಮೋರೆ ಮುರಕಿಸುತಿಹುದು ಅಯ್ಯ1ಚಳ್ಳತುಂಬುಗಳಿಂದಚವುರಿ ಬೆಳ್ಳಿಯ ಬಳೆಗಳಿಂದ ಅಯ್ಯಮುಳ್ಳು ಗಜ್ಜೆಗಳ ಧರಿಸಿ ಮನೆಯೊಳಗೆಹಲ್ಲು ಕಡಿಯುತಲಿಹುದು ಅಯ್ಯ2ಓಲೆ ಮಾಡಿಸು ಎಂಬುದುವರಹಕೆ ಬಾಳುವೆ ನೋಡಿರಿ ಎಂಬುದಯ್ಯಹೇಳುವುದು ಕಿವಿಯೊಳಗೆ ಲೋಭಕಾಲು ಕೈ ತಿರುಹುವುದು ಅಯ್ಯ3ಕರೆಕರೆಯ ಮಾಡುತಿಹುದು ತಾಯಿಯಹೊರಡಿಸು ಮನೆಯಿಂದಲೆಂಬುದಯ್ಯಹರನ ಚಿಂತೆಗೆ ಹಾನಿಯು ಇದರಿಂದನರಕ ಬಹಳವ ತಿರುಗುವೆ ಅಯ್ಯ4ನಾರಿಯೆನಿಸಿಹುದೆ ಮೃತ್ಯುಇದನೀಗ ದೂರ ಮಾಡಿದನಾದರೆ ಅಯ್ಯಸೇರುವುದು ಸರ್ವಮುಕ್ತಿಚಿದಾನಂದನಿರೆ ತಾನೆಯಹುದು ಅಯ್ಯ5
--------------
ಚಿದಾನಂದ ಅವಧೂತರು
ಮಾರುತನೆ ಏಳೆಂದು ಎಬ್ಬಿಸಿದಳಂಜನೆಯುಶ್ರೀ ರಾಮ ಸೇವೆಗೆ ತಡವಾಯಿತೇಳು ಪ.ಸೇತುಗಟ್ಟಲು ಬೇಕುಶರಧಿ ದಾಟಲು ಬೇಕುಮಾತೆಗೆ ಉಂಗುರವ ಕೊಡಲು ಬೇಕು ||ಪಾತಕಿ ರಾವಣನ ಶಿರವನ್ಹರಿಯಲು ಬೇಕುಸೀತೆಪತಿ ರಾಮರಿಗೆ ನಮಿಸಬೇಕು 1ಇಂತು ಕಳಿಯಲು ಬೇಕು ಅಙ್ಞÕತವಾಸವನುಪಂಥದಲಿ ಕೀಚಕರ ಒದೆಯಬೇಕು ||ತಂತ್ರದಲಿ ಗೆಲಬೇಕು ಶಕುನಿ ದುರ್ಯೋಧನರಕುಂತಿನಂದನನೆಂದು ಹೆಸರಾಗಬೇಕು 2ಮಧ್ವರಾಯರು ಎಂದು ಪ್ರಸಿದ್ಧರಾಗಲು ಬೇಕುತಿದ್ದಿ ಹಾಕಲು ಬೇಕು ಸಕಲಗ್ರಂಥಗಳ ||ಅದ್ವೈತವಾದಿಗಳ ಗೆದ್ದು ಕೆಡಹಲು ಬೇಕುಮುದ್ದು ಪುರಂದರವಿಠಲ ದಾಸನೆನಿಸಲು ಬೇಕು 3
--------------
ಪುರಂದರದಾಸರು
ರಂಭೆ-ಊರ್ವಸಿ ರಮಣಿಯರೆಲ್ಲರು ||ಚೆಂದದಿಂ ಭರತನಾಟ್ಯವ ನಟಿಸೆ |ಝಂತಕ ತಕಧಿಮಿ ತದಿಗಣತೋಂ ಎಂದು |ಝಂಪೆತಾಳದಿ ತುಂಬುರನೊಪ್ಪಿಸೆ ||ಧಾಪಮಪಧಸರಿ ಎಂದು ಧ್ವನಿಯಿಂದ |ನಾರದ ತುಂಬುರು ಗಾನವ ಮಾಡಲು |ನಂದಿಯು ಚೆಂದದಿ ಮದ್ದಲೆ ಹಾಕಲು 1ಫಣಿಯ ಮೆಟ್ಟಿ ಬಾಲವ ಕೈಯಲಿ ಪಿಡಿದು |ಫಣಘಣಿಸುತ ನಾಟ್ಯವನಾಡೆ |ದಿನಪಮಂಡಲದಂತೆ ಪೊಳೆಯುವ ಮುಖದೊಳು ||ಚಲಿಸುತ ನೀಲಕೇಶಗಳಾಡೆ |ಕಾಲಲಂದಿಗೆ ಗೆಜ್ಜೆ ಘುಲುಘುಲು ಘುಲುಘುಲು |ಘುಲುರೆಂದು ಉಡಿಗೆಜ್ಜೆ ಗಂಟೆಗಳಾಡೆ ||ದುಷ್ಟ ಕಾಳಿಂಗನ ಮೆಟ್ಟಿ ಭರದಿಂದ |ಪುಟ್ಟಿ ಪಾದವನು ಇಟ್ಟ ಶ್ರೀಕೃಷ್ಣನು |ಮೆಟ್ಟಿದ ತದ್ಧಿಮಿ ತಧಿಗಣತೋಂ ಎಂದು 2ಸುರರುಪುಷ್ಪದ ವೃಷ್ಟಿಯ ಕರೆಯಲು |ಸುದತಿಯರೆಲ್ಲರು ಪಾಡಲು |ನಾಗಕನ್ನೆಯರು ನಾಥನ ಬೇಡಲು |ನಾನಾವಿಧ ಸ್ತುತಿ ಮಾಡಲು ||ರಕ್ಕಸರೆಲ್ಲರು ಕಕ್ಕಸವನೆ ಕಂಡು |ದಿಕ್ಕಿದಿಕ್ಕುಗಳಿಗೋಡಲು ||ಚಿಕ್ಕವನಿವನಲ್ಲ ಪುರಂದರವಿಠಲ |ವೆಂಕಟರಮಣನ ಬೇಗ ಯಶೋದೆ |ಬಿಂಕದೊಳೆತ್ತಿ ಮುದ್ದಾಡೆ ಶ್ರೀಕೃಷ್ಣನ 3
--------------
ಪುರಂದರದಾಸರು
ರಾಮ ರಾಮಾಯೆಂದು ಮಾರುತಿಯು ನಡೆದು |ಸೋಮವದನೆ ಜಾನಕಿಯನು ಹುಡುಕಾ ಪಹರಿಯಿಂದ ಗುರುತು ಪಡೆದು ತನ್ನ ಶಿಖದಲಿ |ಧರಿಸಿಕೊಂಡತಿಶಯ ಭಕುತಿಯಲಿ ||ತೆರಳಿ ಮುಂದು ಮುಂದಕೆ ಕಡಲ ಸಮೀಪದಿ ವಾ- |ನರಾಧೀಶ ಮಾಡಿದ ವಾಸವನೂ1ರವಿಜನ ಭಯದಿಂದ ಕಪಿಗಳೆ- |ಲ್ಲವು ಎದೆಯನೊಡೆದು ನಗದೊಳು ಕುಳಿತಿರಲು ||ಪವನಜನು ಬಂದು ವಿಚಾರವ ಮಾಡಲು ಸಾಗ- |ರವ ದಾಟಲೊಬ್ಬಗೊಶವಲ್ಲವೆಂದರೆಲ್ಲರಲ್ಲಿ 2ನಮ್ಮನು ರಕ್ಷಿಸೋ ಕುಲಮಣಿಯೆ ವಾಸುದೇವನ |ಮೊಮ್ಮಗನೆ ಎಂದು ಕಪಿಗಳು ಯಾಚಿಸೆ ||ಗಮ್ಮನೆ ಹಾರಿ ರಕ್ಕಸಿ ಹೊಟ್ಟೆಯ ಹೊಕ್ಕು ದಾಟಿ ಮತ್ತೇ |ಒಮ್ಮೆ ಒಬ್ಬಳನ್ನು ಸೀಳಿ ಪುರಪ್ರವೇಶ ಮಾಡಿದ3ಗಿಡಗಿಡ ಚರಿಸುತ ಸ್ಥಳ ಸ್ಥಳದಲಿ ಬಲು |ಹುಡುಕುತ ಮೂಜಗ ಪೂಜಿತನ ||ಮಡದಿಯಾಕೃತಿಯನು ಕಾಣಲಾಕ್ಷಣದೊಳು |ತಡೆದನಲ್ಲಿಯೇ ಪದಗಳ ಮುಂದಕ್ಕಿಡದಲೇ4ಋಷಿಗಳಂದದಿ ಪ್ರಾಣೇಶ ವಿಠಲನೆನುತಿರೆ |ಶಶಿಮುಖಿಯಳು ಆಂಜನೇಯ ಪದ |ಬಿಸಜಾಂಘ್ರಿಗಳಿಗೆರಗಿ ಜಯ ಜಯವೆಂದು |ಉಸಿರಿದ ರಘುಪತಿಯ ಸುದ್ದಿ ವಿಸ್ತರದಲಿ 5
--------------
ಪ್ರಾಣೇಶದಾಸರು
ವಾಸವನೆ ಮಾಡಿರೋ ಕಾಶಿಯಲಿ ಪವಾಸವನೆ ಮಾಡಿ ಕಾಶಿಯಲಿ ವಸುಧೆಯ ಜನರು |ಏಸುಜನ್ಮದ ಪಾಪವನೆ ಕಳೆದು ಯಮಪುರಿಯ ||ಹೇಸಿಕೆಯ ರಾಶಿಗಳ ಒದೆದು ಹೆಚ್ಚಳವಾದ |ಮೀಸಲಳಿಯದಪದವಿಸಾರಿರಯ್ಯಅಪಶ್ರೀ ವಿಷ್ಣು ಸಿರಿಸಹಿತ ಗರುಡ ವಾಹನನಾಗಿ |ಜೀವಿಗಳ ಸ್ಥಿತಿಯ ನೋಡುತ ಬರಲು ಮರುಗಿ ಆ |ದೇವಿ ಬಿನ್ನಹ ಮಾಡಲಾಗ ಕರುಣಾಕರನು |ಭಾವಿಸಿದನೀ ಕೃತಿಯನು |ದೇವತ್ರಿಧಾಮನವ ದಿವ್ಯ ವೈಕುಂಠದೊಳು |ಪಾವನಸ್ಥಳವಿದೆಂದೊರೆದ ಧರೆಯೊಳು ಕಾಶಿ |ಶ್ರೀ ವಾರಣಾಸಿ ಪಂಚಕ್ರೋಶಮಿತಿಯಲ್ಲಿಆ ವಿಪುಳ ಮಣಿಕರಣಿಕೆ 1ಬಲಿಯ ಬಳಿ ಮೂರಡಿಯ ಭೂದಾನವನೆ ಬೇಡಿ |ನೆಲನಳೆಯ ಈರಡಿಗೆ ಸಾಲದಿರೆ ಬ್ರಹ್ಮಾಂಡ |ಬಲಪದದ ನಖದಿ ಸೀಳಲ್ಕೆ ಬಹಿರಾವರಣ |ಜಲಸುರಿಯೆ ಅಂಗುಟದಲಿ ||ಸಲೆ ತೀರ್ಥವೆಂದಜ ಕಮಂಡಲದೊಳಗೆ ಧರಿಸಿ |ತೊಳೆದನಾ ಚರಣಗಳ ಬಲು ಗಂಗೆ ಬರಲು ಜಡೆ - |ತಲೆಯೊಳಿಟ್ಟಾ ಶಿವ ಭಗೀರಥನ ಯತ್ನದಿಂ |ದಿಳಿದಿಹಳು ಕಾಶಿಯಲ್ಲಿ 2ಪರಮನಿರ್ಮಲ ಶುಭ್ರತರದ ಭಾಗೀರಥಿಯನಿರಜೆ ನೀಲಾಭೆ ಯಮುನೆಯ ಮಧ್ಯದಲಿ ಕಾರ್ತ |ಸ್ವರವರ್ಣದಿಂದಲ್ಲಿ ಗುಪ್ತಗಾಮಿನಿಯಾದ |ಸರಸತಿಯ ಸಂಗಮದಲಿ ||ಮೆರೆಯುವ ತ್ರಿವೇಣಿಯೆನಿಸುವ ತೀರದಲ್ಲಿ ವಟ - |ತರುಛಾಯೆಯಲ್ಲಿಹುದು ದೇವ ಋಷಿ - ಮೌನೀಗಣ 3
--------------
ಪುರಂದರದಾಸರು
ವ್ಯಾಪಾರವೆನಗಾಯಿತುಶ್ರೀಪತಿಯ ಪಾದಾರವಿಂದ ಸೇವೆಯೆಂಬ ಪಹರಿಕರುಣವೆಂಬಂಗಿಗುರುಕರುಣಮುಂಡಾಸುಹರಿದಾಸರ ದಯವೆಂಬ ಒಲ್ಲಿ ||ಪರಮಪಾಪಗಳೆಂಬ ಪಾಪೋಸವನೆ ಮೆಟ್ಟಿದುರುಳಾತ್ಮರಾದವರ ಎದೆ ಮೇಲೆ ನಡೆವಂಥ 1ಬಿಳಿಯ ಕಾಗದ ಹೃದಯ ಬಾಯಿ ಕಲಮದಾನಿನಾಲಗೆಯೆಂಬ ಲೆಕ್ಕಣಿಕೆ ||ಶ್ರೀಲೋಲನ ದಿವ್ಯನಾಮವೆಂಬುವ ಲೆಕ್ಕಶೀಲದಿ ಬರೆದು ಶ್ರೀಹರಿಗೆ ಒಪ್ಪಿಸುವಂಥ 2ನುಡಿನುಡಿಗಾನಂದ ಬಾಷ್ಪ ರೋಮಾಂಚನಮುಡುಪಿನೊಳಗೆ ಇಟ್ಟ ಕೈಜೀತವು ||ಕಡಿಮೆ ಸಂಬಳಕೆಲ್ಲ ಮುಕ್ತಿಸಾಧನವನ್ನುಕೊಡುವ ತೆರನಂತೆ ಚೀಟಿ ಬರೆಸಿಕೊಟ್ಟ 3ಹಿಂದಿನ ಸಂಸಾರ ಆಗಮನದ ಭಯಎಂದೆಂದಿಗದರ ಚಿಂತೆಯು ಬಿಟ್ಟಿತು ||ಮುಂದಿನ ಸಂಸಾರ ಸ್ಥಾನ ಭಾರಕೆಲ್ಲಸಂದಾಯವನು ಮಾಡಿ ಕತಬಿ ಹರಿಸಿಕೊಟ್ಟ 4ಕಂಡಕಂಡವರ ಕಾಲುಗಳಿಗೆರಗಿ ನನ್ನಮಂಡೆದಡ್ಡುಗಟ್ಟಿ ಬಳಲಿದೆನೊ ||ಪುಂಡರೀಕಾಕ್ಷಶ್ರೀಪುರಂದರವಿಠಲನುಕಂಡು ವೀಳೆಯ ಕೊಟ್ಟು ತನ್ನ ಸೇವೆಗೆ ಇಟ್ಟ 5
--------------
ಪುರಂದರದಾಸರು