ಒಟ್ಟು 214 ಕಡೆಗಳಲ್ಲಿ , 65 ದಾಸರು , 200 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಷಷ್ಠಿಯ ದಿವಸ(ಶ್ರೀ ವೆಂಕಟೇಶನ ಅವಭೃಥ ಸ್ನಾನ)ಮುಕುತಿದಾಯಕ ಮೂಲಪುರುಷಗೆ 1ಭೇರಿಶಬ್ದವು ನಗಾರಿಘರ್ಜನೆಮೌರಿತಾಳವು ಮೃದಂಗಶಬ್ದವು 2ಉದಯಕಾಲದಿ ಒದಗಿ ಭಕುತರುಪದುಮನಾಭನ ಪಾಡಿ ಪೊಗಳ್ವರು 3ಭೂರಿಮಂಗಲಕರದ ಶಬ್ದವುಸೇರಿ ಕಿವಿಯೊಳು ತೋರುವುದಲ್ಲೆ 4ನಿದ್ದೆಬಾರದು ನಿಮಿಷಮಾತ್ರಕೆಎದ್ದು ಪೇಳೆಲೆ ಏಣಲೋಚನೆ 5ಸುಮ್ಮನೀನಿರು ಸುಳಿಯಬೇಡೆಲೆಎಮ್ಮುವುದು ನಿದ್ರೆ ಏನ ಪೇಳಲಿ 6ಬೊಮ್ಮಸುರರಿಗು ಪೊಗಳತೀರದುತಿಮ್ಮರಾಯನ ಮಹಿಮೆ ದೊಡ್ಡಿತು 7ನಿನ್ನೆ ದಿವಸದ ನಿದ್ರೆವಿಹುದೆಲೆಕಣ್ಣಿಗಾಲಸ್ಯ ಕಾಂಬುವದಲ್ಲೇ 8ಬಣ್ಣಿಸುವದೆಲೆ ಬಹಳವಿಹುದಲೆಪನ್ನಗವೇಣಿ ಪವಡಿಸೆ ನೀನು 9ಏಳು ಏಳಮ್ಮ ಅಲಸ್ಯವ್ಯಾತಕೆಕಾಲಿಗೆರಗುವೆ ಹೇಳಬೇಕಮ್ಮ 10ಜಯಜಯ ವಾಧಿಶಯನಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ 1ಗಂಧಕಸ್ತೂರಿಪುಣುಗಚಂದನಪನ್ನೀರುಗಳಹೊಂದಿಸಿ ತೋಷದಿ ಮಂದರಧರಗೆ 2ಆಕಾಶರಾಯನ ಮಗಳು ಹರುಷದಿಂದೊಡಗೂಡಿಶ್ರೀಕರ ವೆಂಕಟಪತಿಯು ಸರಸವಾಡಿ 3ಶ್ರೀದೇವಿ ಭೂದೇವಿಮಾಧವಸಹಿತಲಿಸಾದರದಿಂದಲಿ ಸರಸವಾಡಿ 4ಬಡನಡು ಬಳುಕುತಲಿ ಎಡಬಲದಲಿ ಸುಳಿದುಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ 5ಛಲದಿ ಪದ್ಮಾವತಿಯು ಜಲಜನಾಭನ ಮೇಲೆಒಲವಿನಿಂದಲಿ ಬಂದು ಚೆಲ್ಲಿದಳಾಗ 6ಭರದಿ ಶ್ರೀದೇವಿಯು ಸರಸಿಜಮುಖದಲ್ಲಿಪರಮಸುಸ್ನೇಹದಿ ಬೆರಸಿದಳಾಗ7ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆಮೋದದಿಂದಲಿ ಬಂದು ಚೆಲ್ಲಿದಳಾಗ 8ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯುವೃತ್ತಕುಚವ ನೋಡಿ ಚೆಲ್ಲಿದನಾಗ 9ಝಣಝಣಾಕೃತಿಯಿಂದ ಮಿನುಗುವಾಭರಣದಧ್ವನಿಯ ತೋರುತ ಬಲು ಸರಸವಾಡಿ 10ಓಕುಳಿಯಾಡಿದ ನೀರಾನೇಕಭಕ್ತರು ಮಿಂದುಏಕಮಾನಸರಾಗಿ ಪೊರಟರು ಕಾಣೆ 11* * *ಆಡಿದರೋಕುಳಿಯ ಶರಣರೆಲ್ಲಆಡಿದರೋಕುಳಿಯ ಪ.ಕಾಡುವ ಪಾಪವ ಓಜಿಸಿ ಹರಿಯೊಳ-ಗಾಡಿನಿತ್ಯಸುಖಬೀಡಿನ ಮಧ್ಯದಿ1ಅಬ್ಬರದಿಂದಲಿ ಉಬ್ಬಿ ಸಂತೋಷದಿಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2ಚೆಂಡು ಬುಗರಿನೀರುಂಡೆಗಳಿಂದಲಿಹಿಂಡುಕೂಡಿ ಮುಂಕೊಂಡು ಪಿಡಿಯುವರು3ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ-ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ 4ರಂಭೆ : ನಾರಿ ಕೇಳೀಗ ಭೂರಿಭಕುತರುಶ್ರೀರಮಾಧವ ಸಹಿತ ಬಂದರು 1ಭಾವಶ್ರೀಹರಿ ಪ್ರತಿರೂಪದೋರುತದೇವ ತಾನೆ ನಿದ್ರ್ವಂದ್ವನೆನ್ನುತ 2ಹೇಮಖಚಿತವಾದಂದಣವೇರಿಪ್ರೇಮಿಯಾಗುತ ಪೊರಟು ಬರುವನು 3ವಲ್ಲಭೆಯರ ಕೂಡಿ ಈ ದಿನಫುಲ್ಲನಾಭನು ಪೊರಟನೆತ್ತಲು 4ಊರ್ವಶಿ : ನಾರಿ ನೀ ಕೇಳಿದರಿಂದ ಈಗಭೂರಿಭಕುತರಾನಂದಶ್ರೀರಮಾಧವ ಮಿಂದ ನೀರಿನೊಳಾಡುತ್ತಓರಂತೆ ತುಳಸಿಮಾಲೆಯ ಧರಿಸುತ್ತಭೇರಿಡಂಕನಗಾರಿಶಬ್ದ ಗಂ-ಭೀರದೆಸಕವ ತೋರಿಸುತ್ತ ವೈ-ಯಾರದಿಂದಲಿ ರಾಮವಾರ್ಧಿಯತೀರದೆಡೆಗೆಲೆ ಸಾರಿ ಬಂದರು 1ವರದಭಿಷೇಕವ ರಚಿಸಿ ಬಕು-ತರ ಸ್ನಾನವನನುಕರಿಸಿಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡುತ್ವರಿತದಿ ನಗರಾಂತರಕನುವಾದನುಬರುತ ದಿವ್ಯಾರತಿಗೊಳ್ಳುತಚರಣಸೇರಿದ ಭಕ್ತರಿಷ್ಟವನಿರುತ ಪಾಲಿಸಿ ಮೆರೆವ ಕರುಣಾ-ಕರಮನೋಹರ ಗರುಡವಾಹನ2ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆಕರವಮುಗಿಯುತ್ತಕೈಯ ತೋರುತ1ಪರಮಪುರುಷ ಗೋವಿಂದ ಎನುತಲಿಹೊರಳುತುರಳುತ ಬರುವದೇನಿದು 2ಭಂಗಿಪ ಸೇವೆಯೆಂಬುದನುಅಂಗಜಪಿತಚರಣಂಗಳ ರಜದಲಿ 1ಹೊಂಗಿ ಧರಿಸಿ ಲೋಟಾಂಗಣ ಎಂಬರುರಂಗನಾಥನ ಸೇವೆಗೈದ ಜ-ನಂಗಳಿಗೆ ಭಯವಿಲ್ಲವದರಿಂ-ದಂಗವಿಪ ಲೋಲೋಪ್ತಿ ಕೋಲಾ-ಟಂಗಳನು ನೀನೋಡುಸುಮನದಿ2* * *ಕೋಲು ಕೋಲೆನ್ನಿರೊ ರನ್ನದಕೋಲು ಕೋಲೆನ್ನಿರೊ ಪ .ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದಲೀಲೆಗಳಿಂದ ಜನಜಾಲಗಳೆಲ್ಲರು 1ಗುಂಗಾಡಿತಮನನ್ನು ಕೊಂದು ವೇದವ ತಂದುಬಂಗಾರದೊಡಲನಿಗಿಟ್ಟನು ನಮ್ಮ ದೇವ 2ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತುಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ 3ರೂಢಿಯ ಕದ್ದನ ಓಡಿಸಿ ತನ್ನಯದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ 4ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದುಬಂಗಾರಕಶ್ಯಪುವಂಗವ ಕೆಡಹಿದ 5ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ-ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ 6ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದುಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ 7ಬೆಟ್ಟಗಳೆಲ್ಲ ತಂದೊಟ್ಟಿಸಿ ಶರಧಿಯಕಟ್ಟಿದೈತ್ಯರ ತಲೆ ಕುಟ್ಟಿದ ನಮ್ಮ ದೇವ8ಚಂಡಗೊಲ್ಲತಿಯರ ಹಿಂಡುಗಳೊಳು ಕೂಡಿಉಂಡ ಪಾಲ್‍ಬೆಣ್ಣೆಯ ಪುಂಡ ಗೋಪಾಲನಮ್ಮ 9ಯುವತಿಯರ ವ್ರತವ ತವಕದಿ ಖಂಡಿಸಿಶಿವನ ರಕ್ಷಿಸಿ ತ್ರಿಪುರವನು ಕೆಡಹಿಸಿದ 10ಕುದುರೆಯ ಮೇಲೇರಿ ಕುಮತಿ ಮ್ಲೇಂಛರನೆಲ್ಲಸದೆಬಡಿಯುವ ನಮ್ಮ ಮಧುಕೈಟಭಾರಿ ದೇವ 11ಕಲಿಯುಗದೊಳು ಬಂದು ನೆಲೆಯಾಗಿ ತಿರುಪತಿ-ಯೊಳಗೆ ಭಕ್ತರನೆಲ್ಲ ಸಲಹುವ ನಮ್ಮ ದೇವ 12ದುಷ್ಟರ ಬೇಗ ಕಂಗೆಟ್ಟು ಓಡುವ ಭಕ್ತ-ರಿಷ್ಟವ ಕೊಡುವರೆ ದೃಷ್ಟಿಗೋಚರನಾದ 13ತಪ್ಪದೆ ಸ್ವಪ್ನದಿ ಬಪ್ಪೆನೆನ್ನುತ ಪೇಳಿಸರ್ಪಪರ್ವತದಿಂದ ಒಪ್ಪಿಲ್ಲಿ ಬಂದನಮ್ಮ 14ಸೃಷ್ಟಿಯೊಳುತ್ತಮ ಶ್ರೇಷ್ಠ ಕಾರ್ಕಳದಲ್ಲಿಪಟ್ಟದರಸ ತಿಮ್ಮ ಸೆಟ್ಟಿಯೆಂದೆನಿಸಿದ 15ಊರ್ವಶಿ :ನಾರೀರನ್ನಳೆ ಕೇಳಿದ್ಯಾ ಶ್ರೀಹರಿನಿತ್ಯಭೂರಿಸೇವೆಗೆ ಸಾನ್ನಿಧ್ಯತೋರುತ ಆರತಿಯ ಶೃಂಗಾರದೋರುತ ಕಾಣಿಕೆಯ ಕಪ್ಪುವು ಸೇರಿತುಸೇರಿದಾನತಜನರ ಮನಸಿನಕೋರಿಕೆಗಳನ್ನಿತ್ತು ಸಲಹುವವೀರವೆಂಕಟಪತಿಯ ಸದನ-ದ್ವಾರ ದಾಟುತ ಸಾರಿಬಂದನು 1ಬಳಿಕಲ್ಲಿ ತುಲಾಭಾರದ ಹರಕೆಯನ್ನು ಕೈ-ಗೊಳುತಲೀಪರಿ ಮೋದವನಲವಿನಲಿ ಮಂಗಲದ ವಿಭವದಗೆಲುವಿನಲಿ ವಿಧಕಲಶ ವೇದದನಲವಿನಲಿ ಸುಲಲಿತಭಿಷೇಕವನು ಕೊಳುತಲಿಜಲಜನಾಭನು ಸುರಚಿರದ ನಿ-ಶ್ಚಲಿತ ಸಿಂಹಾಸನದಿ ಮಂಡಿಸಿಒಲಿದ ವಂದಿತ ಜನರ ಭಕ್ತಿಗೆ 2ವಲ್ಲಭೆಯರ ಸಹಿತ ಸಮರ್ಪಿಸಿ-ದೆಲ್ಲ ಸ್ವೀಕರಿಸಿ ಮತ್ತಾಪಲ್ಲವಪಾದಗಳ ತೋರಿಸಿಎಲ್ಲವ ರಕ್ಷಿಸಿ ದಯಾರಸವುಳ್ಳವಫುಲ್ಲನಾಭನು ಪೂರ್ಣಕಾಮ ಶ್ರೀ-ವಲ್ಲಭನು ನರನಾಟಕದಿ ಜಗ-ಎಲ್ಲ ರಕ್ಷಿಸಿ ಮೆರೆವ ಭಕ್ತರಸುಲ್ಲಭನು ಸುಮನೋನುರಾಗನು 3ಶರದಿಯೇಳರ ಮಧ್ಯದ ಧಾರಿಣಿಯೊಳುಮೆರೆವ ಹೇಮಾಚಲದಸ್ಫುರಿತದಾ ಮಹಾಜಂಬುದ್ವೀಪ ವಿ-ಸ್ತರಿತದಾ ಭರತಾಖ್ಯ ಖಂಡದಿಹರುಷದಿ ನಿರುತ ತೌಳವದೇಶಮಧ್ಯದಿಮೆರೆವ ಕಾರ್ಕಳಪುರವರವೆ ಪಡುತಿರುಪತಿಯು ಎಂದೆನಿಸಿ ಭಕುತರನೆರವಿಯನು ಪರಿಪಾಲಿಸುವನೆಲೆ 4ಈಪರಿವಿಭವದಲಿ ಪ್ರತಿವರುಷಕೆಶ್ರೀಪರಮ್ಮಾತನಲ್ಲಿವ್ಯಾಪಿಸಿ ಭಕ್ತರನುಕಾವನಿ-ರೂಪಿಸಿ ಸೇವೆಯನು ಕೈಕೊಂಡೊಪ್ಪಿಸಿಪಾಪವೆಲ್ಲವ ಪರಿಹರಿಸಿ ಚಿ-ದ್ರೂಪನಂದದಿ ಹೊಳೆವ ಪರತರ-ರೂಪಕರುಣಾಲಾಪ ಸದ್ಗುಣ-ದೀಪ ಚಪ್ಪರ ಶ್ರೀನಿವಾಸನು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಲಹು ಸಲಹು ಗುರುರಾಯನೆ ನನ್ನಾಲಸದೆ ಪಾವನ್ನಕಾಯನೆ ನಾನುಹಲವು ದಿವಸ ನಿನ್ನ ನಂಬಿರೆದ್ವಿಜಕುಲಮಣಿ ಜನಾರ್ದನಾಚಾರ್ಯನೆ ಪ.ನಿನ್ನ ಶರಣು ಹೊಕ್ಕ ಭೃತ್ಯರು ತತ್ವಪೂರ್ಣರಾದರು ಪೂತರಾದರುನನ್ನ ಮನ್ನಿಸಲಾಗದೆ ದಾತನೆ ವಿದ್ಯೋನ್ನತ ವಿಶ್ವಕೆ ಪ್ರೀತನೆ 1ಆ ಬಾಲ್ಯದೊಳು ರಘುಪತಿಪಾದಭಜನಾದರ ನಿನಗುಂಟುಕೋವಿದಈ ಮೇದಿನಿಯಲಿ ಸುಧಾಸುರಸದಬಹು ಸ್ವಾದವ ಬಲ್ಲ ಇಷ್ಟಾರ್ಥದ 2ಅಜ್ಞಾನ ಕತ್ತಲೆ ಕವಿದಿದೆ ಅಭಿಜÕನ ಮಾಡಲಿ ಬಾರದೆ ನಿನ್ನಪ್ರಜÕತನದ ಪ್ರಸವನಿತ್ಯಆಜ್ಞಾಧಾರಕಗೀಯೊ ಜ್ಞಾನವ 3ಭಕ್ತಿ ವೈರಾಗ್ಯ ಸುಜ್ಞಾನ ಸಂಯುಕ್ತ ಮಂಗಳ ಗುಣಾಲಂಕೃತಯುಕ್ತಿ ಸಾಲದು ಹರಿಸೇವೆಗೆ ಸ್ವಪ್ನವ್ಯಕ್ತ ಬೋಧಿಸೆನಗೆ 4ತಂದೆ ತಾಯಿ ಆಪ್ತಮಿತ್ರ ನೀಗತಿಹೊಂದಿಪ ದುರಿತಘಹರ್ತ ನೀ ಗೋವಿಂದ ಪ್ರಸನ್ವೆಂಕಟೇಶನ ಹೃದಯಮಂದಿರದೊಳು ಪೂಜಾಶೀಲನೆ 5
--------------
ಪ್ರಸನ್ನವೆಂಕಟದಾಸರು
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆನಿರ್ಭಯವ ಪಾಲಿಸು ಪ್ರೇಮಿ ಪ.ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ-ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕ ಅ.ಪ.ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದಸೇವೆಗಾಲಸ್ಯವ ಮಾಳ್ಪರುಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು-ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ-ರಿಂದ ಪೂಜೆಗೊಳೈ ಷಣ್ಮುಖವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶಕೇವಲ ವಿಜ್ಞಾನಪ್ರಕಾಶಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ-ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸುಳಾದಿಧ್ರುವತಾಳರಾಮ ರಘುಕುಲ ಸಾರ್ವಭೌಮ ಪೂರಣಕಾಮಜೀಮೂತಶಾಮ ಶ್ರೀಮೂಲರಾಮಕೋಮಲ ಶರೀರ ಸೀತಾ ಮುಖಾಂಬುಜಭ್ರಮರಪ್ರೇಮಸಾಗರ ಭಕ್ತಜನ ಮನೋಹರಸಾಮಜಾತಿಹರ ಸಾಮಗಾನಾದರ ನಿಸ್ಸೀಮ ಗುಣಗಂಭೀರ ಏಕವೀರಸ್ವಾಮಿ ಮಠದರಸ ಮುನಿಸ್ತೋಮ ಮಾನಸಹಂಸನೀ ಮನ್ನಿಸು ಪ್ರಸನ್ನವೆಂಕಟಾದ್ರೀಶ ರಘುರಾಮ 1ಮಠ್ಯತಾಳಪಿಂತೆ ಸಮೀರಜನ ಸೇವೆಗೆ ಮೆಚ್ಚತ್ಯಂತ ಪ್ರಸನ್ನನಾಗ್ಯವನ ಶುಭಕರಸಂತತಿಗಭಯವನಿತ್ತಪೆನೆಂದೀಶನಿಂತಿಹೆ ಪ್ರಸನ್ನವೆಂಕಟಪತಿರಾಮಕಂತುಜನಕನಿತ್ಯಾನಂದನೆ ನಿನ್ನಂತವರಿಯೆ ನಿಗಮಾಗಮಕಳವೆ 2ತ್ರಿಪುಟತಾಳನಿರುತ ವೈಕುಂಠ ಮಂದಿರವಿದ್ದುಪರಣ ಕುಟೀರವನಾಶ್ರಯಿಸುವ ಘನತೆಯೆತ್ತವರಪೀತಾಂಬರ ದಾಮವನು ಬಿಟ್ಟುವಲ್ಕಲಧರಿಸಿ ಕಾನನದಿ ಸಂಚರಿಪೋದೆತ್ತನರಲೀಲೆಗಿದು ಶ್ಲಾಘ್ಯವೆಂದು ತೋರಿದೆ ಜಗದೆರೆಯ ಪ್ರಸನ್ನವೆಂಕಟಾದ್ರಿ ರಘುರಾಮ 3ಅಟ್ಟತಾಳಹರವರದಲಿ ಬಲು ಮತ್ತಾದ ರಜನೀಚರವರ ಲಂಕೆಯಲಿ ಬಲಿದು ಗರ್ವದಿಸುರವರರನುರೆ ಬಾಧಿಸಲವರನುಪೊರೆವರು ದಾರಯ್ಯ ನಿನ್ನಿಂದಸ್ಥಿರವರದಾಯಕ ಪ್ರಸನ್ವೆಂಕಟಗಿರಿವರನಿಲಯ ಕೌಸಲ್ಯೆಯ ಕಂದ 4ಆದಿತಾಳಅಕಳಂಕ ಅಕುತೋತಂಕ ಅಕಳಂಕಮಕುಟಕುಂಡಲಕೌಸ್ತುಭಕೇಯೂರ ವಲಯಾಂಕಿತಕೋದಂಡಕಾರ್ಮುಕಪಾಣಿಅಕಳಂಕ ಸುಖತೀರ್ಥವಂದಿತ ಪಾದಕಮಲ ವಿಧಿನುತ ಮಖಪಾಲಕ ಪ್ರಸನ್ನವೆಂಕಟಾಧಿಪ ಅಕಳಂಕ 5ಜತೆಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿಬಂದು ನೀನಿಂತೆ ನಿಜರಮಣಿಯೊಡನೆಎಂದೆಂದು ಸತ್ಯಾನಭಿವ ತೀರ್ಥಗುರುಹೃದಯಮಂದಿರನೆ ಪ್ರಸನ್ನವೆಂಕಟವರದ ರಾಮ
--------------
ಪ್ರಸನ್ನವೆಂಕಟದಾಸರು
ಸ್ಮರಿಸು ಮನವೆ ಸ್ಮರಿಸು ಸ್ಮರನ ಪಿತನದುರಿತಭವಭಯಸಮೂಹದೂರಮಾವರನಪ.ಒಬ್ಬ ಬಾಲನಯ್ಯನ ಒದೆದಒಬ್ಬ ಬಾಲಗಟವಿಲೊಲಿದಒಬ್ಬ ಬಾಲನ ಅಪ್ಪಿ ರಾಜ್ಯವ ಒಬ್ಬ ಬಾಲಗಿತ್ತುಒಬ್ಬ ಬಾಲೆಯುಂಗುಟದಿ ಪೆತ್ತಒಬ್ಬ ಬಾಲೆಯುಂಗುಟದಿ ಪೊತ್ತಒಬ್ಬ ಬಾಲೆಗಕ್ಷಯ್ಯೆಂದು ಕುಕ್ಷಿಲೊಬ್ಬ ಬಾಲಪನ 1ಇಬ್ಬರ ಮೂರುಸಾರೆಲಳಿದಇಬ್ಬರಿಹ ಭೂಜವ ಮುರಿದಇಬ್ಬರೊಗ್ಗೂಡಿ ಬೆಳೆದು ಹನ್ನಿಬ್ಬರ ಬಡಿದಇಬ್ಬರ ಕಾರಾಗಾರ ತಗಿದಇಬ್ಬರುಪ್ಪು ಬೇಡಲಿ ಸದೆದಇಬ್ಬರಿಂದೈದಿ ಹೋಳಮಯ್ಯನ ನಿಬ್ಬರಿಸಿದನ 2ಮೂರು ಮನೆಯೊಳಗಿಹನಮೂರುಮಾತಿಗೆ ಹೊಂದದವನಮೂರು ಮೈಯನ ಕೃತ ಸೇವೆಗೆ ಮೂರು ರೂಪಾದನಮೂರು ಪೊಳಲ ಹಗೆಕಾರನಮೂರುವೆಂಬನುರುಹಿದನಮೂರಾಂತಕ ಪ್ರಸನ್ವೆಂಕಟ ಮೂರು ಲೋಕೇಶನ 3
--------------
ಪ್ರಸನ್ನವೆಂಕಟದಾಸರು