ಒಟ್ಟು 558 ಕಡೆಗಳಲ್ಲಿ , 89 ದಾಸರು , 469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಪಿಯ ನೋಡೆ ಬಡಿಸುವ ಪಾಪಿಯ ನೋಡೆಪಾಪಿಯ ನೋಡೆ ಪಾಪದ ಪಿಶಾಚಿಪಾಪಿಯ ಮೋರೆಯ ನೋಡಬಾರದಕ್ಕೆ ಪ ಅನ್ನವನೀಗ ಇಷ್ಟಿಷ್ಟು ಹಾಕುವಳು ಅತ್ತಲಾಗಿ ಇಡುವಳುಏನು ಇಷ್ಟೆಂದು ಕೇಳಲು ಅರಿಯಿರಿ ಹೊಟ್ಟೆಯೆಂದು ಎದುರಿಗೆ ನಿಂತೆ ಮುಸಿ ಮುಸಿ ನಗುವಳು 1 ಆಜ್ಯವ ಹಾಕೆನೆ ಅಲ್ಲಾಡುತಲಿ ಅರಿಯಿರಿ ಬೇಸಗೆ ಸೆಖೆ ಎಂತೆಂಬಳುಮಜ್ಜಿಗೆ ಹಾಕೆನೆ ಮಂದಮತಿಗಳ ಮಹಾಶೈತ್ಯವು ಬೇಡವು ಎಂತೆಂಬಳು 2 ಉತ್ತಮರೆಂದರೆ ಒಳ್ಳೆಯದಿಕ್ಕಳು ಉಬ್ಬಿಸಹೋದರೆ ಉಬ್ಬದಿಹಳುನಿತ್ಯ ಚಿದಾನಂದ ಸತ್ಪುರುಷರಿಗೆ ನಿಶ್ಚಯವಾಗಿ ಉಣಬಡಿಸುವಳು 3
--------------
ಚಿದಾನಂದ ಅವಧೂತರು
ಪಾಪೋಸು ಹೋದುವಲ್ಲಾ ಪ ಅಪಾರ ಜನ್ಮದಿಂದ ಆರ್ಜನ ಮಾಡಿದ ಅ.ಪ. ಉರುಗಾದ್ರಿಯಲ್ಲಿ ಸ್ವಾಮಿ ಪುಷ್ಕರಣಿ ಮೊದಲಾದಪರಿಪರಿ ತೀರ್ಥ ಸ್ನಾನಗಳ ಮಾಡಿಹರಿದಾಸರ ಕೂಡ ಶ್ರೀನಿವಾಸ ಮೂರ್ತಿದರುಶನದಲಿ ಮೈಮರೆತು ಇದ್ದೆನು ಎನ್ನ 1 ಪರಮ ಭಾಗವತರು ಹರಿಕಥೆ ಹೇಳಲುಪರಮ ಹರ್ಷದಿಂದ ಕೇಳುತಿದ್ದೆಪರಮ ಪಾಪಿಷ್ಠರ ಪಾಲಾಗಿ ಹೋದಾವುಪರಮಾತ್ಮನ ಚಿತ್ತಕೆ ಬಂದಿತೀಗೆನ್ನ 2 ಮಾಯಿ ಒಲಿದು ಎನಗೆ ಕೊಂಡು ಕೊಟ್ಟಿದ್ದಳುದಾಯಿಗಾರರು ನೋಡಿ ಸಹಿಸಲಿಲ್ಲಾಮಾಯಾರಮಣ ನಮ್ಮ ಮೋಹನ್ನ ವಿಠಲನ್ನಮಾಯದಿಂದಲಿ ಮಟ್ಟವಾಯಿತು ಎನ್ನ 3
--------------
ಮೋಹನದಾಸರು
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪಾರ್ವತಿದೇವಿ ಕರುಣದಿ ಕಾಯೆ ತಾಯೆ ಕರುಣಾಭರಣೆ ವಿಶ್ವಂಭರಣೆ ಪ. ಕರುಣಿಸಿ ಕಾಯೆ ತಾಯೆ ಮರೆಯದೆ ನಿನ್ನಯ ಚರಣಸ್ಮರಣೆಯಿತ್ತು ಭರದಿ ಕಾಪಾಡೆ ಅ.ಪ. ಅಂಬಾ ಲೋಕೇಶ್ವರಿ ಅಂಬಿಕೆ ನಿನಪಾದ ನಂಬಿದವರಿಗೆ ಕಷ್ಟಗಳುಂಟೆ ತಾಯೆ ನಿನ್ನ ಕಂಬುಕಂಠನರಾಣಿ ಬೆಂಬಿಡದಲೆ ಕಾಯೆ ಸಂಭ್ರಮದಲಿ ನಿನ್ನ ಇಂಬ ತೋರಿಸುತ 1 ಅಖಿಳಾಂಡನಾಯಕಿ ಸುಖಪ್ರದಾಯಕಿ ಸಖ ಶಂಕರನೊಳು ಸುಖಿಪ ಕಲ್ಯಾಣಿ ಅಕಳಂಕ ಮಹಿಮಳೆ ಸಕಲಕಾಲದಿ ನಿನ್ನ ಭಕುತಿಯೊಳ್ ಪೂಜಿಪÀ ಸಖರೊಳಗಿರಿಸೆ 2 ಭಕ್ತ ಮಂದಾರೆ ಭಕ್ತಿ ಮುಕ್ತಿಯನೀಯೆ ಸಹೋದರಿ ಕಾಯೆ ಭುಕ್ತಿಗೋಸುಗ ನಿನ್ನ ಸ್ಮರಣೆ ನಾನೊಲ್ಲೆನೆ ಶಕ್ತಿ ಸ್ವರೂಪಿಣಿ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ
ಪಾಲಯಮಾಂ ಪಾರ್ವತಿಯೆ ಪಾಪ ವಿನಾಶಿನಿ ತಾಯೆ ಶೀಲ ಮೂರುತಿ ಶಿವೆ ಈ ಜಾಲ ಸಂಸಾರದಿ ಪ. ತ್ರಿಜಗ ಪೂಜಿತೆ ನಿನ್ನ ಭಜಿಸೂವಾಮನವಿತ್ತು ಸುಜನರಾಪ್ತೆಯೆ ಎನ್ನಾ 1 ರಾಗ ರಾಗದಿ ನಿನ್ನ ಅನುರಾಗದಿಂ ಪೂಜಿಪೆ ಭಾಗ್ಯವನು ಕೊಟ್ಟು ನೀ ವೈರಾಗ್ಯ ಭಕ್ತಿಯನು 2 ಅರಿಶಿಣ ಕುಂಕುಮವನ್ನು ವರ ಮಾಂಗಲ್ಯದಾ ಭಾಗ್ಯ ನಿರುತದಿ ನೀಡುತ ಪೊರೆಯೆ ಶ್ರೀ ಶ್ರೀನಿವಾಸ ಸಹೋದರಿಯೆ3
--------------
ಸರಸ್ವತಿ ಬಾಯಿ
ಪಾಲಯಾ ಉರಗಾರಿ ಗಮನಾ | ಶ್ರೀ ಲಕ್ಷುಮಿ ರಮಣಾ | ಭಂಜನ ಸಾಗರ | ಕೀಲನ ಫಣಿಶಯನಾ | ಭಾಲಲೋಚನ ವಂದಿತ ಚರಣಾ | ತ್ರಿಲೋಕ ಜೀವನಾ | ವಾಲಿ ಮರ್ದನ ಶರಣಾಗತ ಜನ | ಕಮಲ ನಯನಾ 1 ವಾರಜಾನನ ವಾರಿಜ ಭ್ರಮರಾ | ಕರಿಭಯ ನಿವಾರಾ | ನೀಲ - ಶರೀರಾ | ಕೇಶವ ಕೇಯೂರ ಕೌಸ್ತುಭಧಾರ | ನೀರಜಾಸನನುತ ಯದುವೀರಾ | ಶ್ರೀರಂಗ ಗದಾಧರಾ | ಸುಜನ | ಹೃದ್ವನಜ ವಿಹಾರ ಧರಣೀಧರಾ 2 ಮಂದರೋದ್ದರ ಪತಿತ ಪಾವನ | ಕುಂದ ಕುಟುಲಮರದನಾ | ಸ್ಯಂದ ಜನಕ ಸಖಸ್ಮರಪಿತಹರಿ | ಗೋವಿಂದ ಧುರಿತ ಹರಣಾ | ನಂದಕಿಶೋರ ಶ್ರೀ ನಾರಾಯಣಾ | ಸುಂದರ ವದನಾ | ಮಂದರಕುಲರಿಸಹೋದರ ಮಹಿಪತಿ | ನಂದನ ಪ್ರಭು ಕೃಷ್ಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಲಿಸು ದಯಾಕರನೆ ನೀಲಮೇಘಶ್ಯಾಮ ಪಾಲಿಸು ದಯಾಕರನೆ ಪ ಪಾಲಿಸು ಎನ್ನ ಕರುಣಾಳು ವ್ಯಾಲಮಾಲ ಬಾಲನ ದಯದಿಂ ಮಾಲತುಲಸೀವನ ಅ.ಪ ಬಂದುಬಿದ್ದೆನಯ್ಯ ಸಂಸಾರ ದಂದುಗ ವೆಂಬ ಮಾಯಬಲೆಯೊಳು ನೊಂದು ಕಾಯ ಬಂಧನಿವಾರಿಸಯ್ಯ ನೊಂದಿಸಿ ಅರ್ಥವ ತಂದು ಸತಿಯು ಸುತ ರೆಂದು ಸಲಹಿ ಯಮ ಬಂಧಕೀಡಾದೆನು ಮುಂದೆ ಇಂಥ ಬವಣಿಂದೆ ತಾರದೆನ್ನ 1 ರಿಣವೆಂಬ ಸೂತಕಿದು ಎನ್ನಗೆ ಘನವಾಗಿ ಕಾಡುವುದು ಇನ್ನಿದು ಜನು ಜನುಮದಿ ಬಿಡದು ಬೆನ್ನತ್ತಿ ಬರ್ಪುದು ಗನ್ನಗತಕನಾಗಿನ್ನು ಭವಭವಂಗ ಬನ್ನ ಬಡಲಿಬೇಕೊ ಮನ್ನಿಸಿ ದಯದಿಂ ನಿನ್ನ ಕೃಪೋದಕ ವನ್ನು ತಳೆದು ಬೇಗೆನ್ನ ಶುದ್ಧಮಾಡು 2 ಆಗಿಹೋದದ್ದ್ಹೋಯ್ತು ಮುಂದಿಹ್ಯ ಭೋಗ ಬೇಡ ಜಗತ್ತು ಪಾಲನೆ ಬಾಗುವೆ ಮನವರಿತು ಚರಣಕೆ ಶಿರವಿತ್ತು ಭೋಗಭಾಗ್ಯದಾಸೆ ನೀಗಿಸಿ ಈ ಭವ ಸಾಗರ ದಾಂಟಿಸು ಯೋಗಿಗಳರಸನೆ ನಾಗಶಯನ ದಯಮಾಡಿ ದಾಸನ ದು ರ್ಭೋಗ ದೂರಮಾಡು ಜಗಮೋಹ ಶ್ರೀರಾಮ 3
--------------
ರಾಮದಾಸರು
ಪಾಲಿಸು ಪರಮೇಶ್ವರಿ ಅಂಬಾ ಪ ಶ್ರೀಲಲಿತೇ ಗೌರಿ ಶೌರಿಸಹೋದರಿ ಫಾಲಾಕ್ಷಸಹಚರಿ ಬಾಲೇಂದುಶೇಖರಿ ಅ.ಪ ಭ್ರಮರಾಂಬೆ ದುರಿತಾರಿ ಹಿಮವಂತ ಸುಕುಮಾರಿ ಹೇಮಾಂಬರಧಾರಿ ಜಗದೀಶ್ವರೀ ಜಂಭಾರಿ ವಿನುತೆ ಮಾಹೇಶ್ವರಿ ಶ್ರೀಮಾಂಗಿರೀನಾಥ ಪ್ರೇಮಾಂಬುಲಹರೀ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಲಿಸು ಪಾಲಿಸು ಪಾಲಿಸು ಸುಮನಾ ಪಾರ್ವತಿ ತಾಯೇ ಪ. ಪಾಲಿಸು ಶ್ರೀ ರಜತಾದ್ರಿನಿವಾಸಿ ಶೀಲಮೂರುತಿ ಶಿವಶಂಕರಿ ದೇಹಿಮೆ ಅ.ಪ. ಮನಕಭಿಮಾನಿ ಮಾನುನಿರನ್ನೆ ಸರ್ವ ತನುಮನನಿನಗರ್ಪಿಸಿಹೆನೆ ತಾಯೆ ಕಾಯೆ ಅನುದಿನ ನಿನ್ನಯ ಚರಣವ ಪೂಜಿಪ ಮನವಿತ್ತು ಕರುಣದಿ ನಿನ್ನ ತನುಜರಿಗೇ ನೀಡೆ 1 ಪಂಕಜಗಂಧಿನಿ ಪಂಕಜಾಕ್ಷಿಯೆ ಶಿವ ನಂಕದಿ ಅಲಂಕೃತ ಮಾತೆ ಸುಗೀತೆ ತಾಯೆ ಅಂಕುರವಾಗುವ ತೆರ ನಿನನಾಮವ ಕಿಂಕರರಿಗೆ ನೀಡಿ ದಯಮಾಡೆ ತಾಯೆ 2 ಶ್ರೀಶ ಶ್ರೀ ಶ್ರೀನಿವಾಸ ಸಹೋದರಿ ಈಶನೈಯ್ಯನೈಯ್ಯನೊಲಿಸುವ ಮರೆಯ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ
ಪಾಲಿಸು ಶ್ರೀನಿವಾಸ ಪಾಲಿಸೋ ಪ ಪಾಲಿಸೋ ಯದುಕುಲ ಬಾಲಾ ಗಾನ- ಲೋಲನೆ ಯಾಕಿಂಥ ಜ್ವಾಲಾ ಜನ್ಮ ಬಲ್ಲೇನಾ ಸಂಸಾರಶೂಲಾ ನಿನ್ನ ಚಾಲನದಿಂದಾದವೆಲ್ಲಾ ಪದ್ಯ ಮಾಲೆಹಾಕುವೆ ಸಿರಿಲೋಲಾ ಆಹಾ ಬಾಲನ ಪಡೆದು ಪಾಲಿಸಲಾರೆನೆಂದರೆ ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1 ನಾನು ಮಾಡುವುದೆಂಬುದಿಲ್ಲಾ ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ ಅನುಗಾಲ ಕಷ್ಟವು ಸಲ್ಲಾ ಎನಗೆ ಜನುಮಾದಿ ಭಯವು ಬಿಟ್ಟಿಲ್ಲ ನೀನು ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ- ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2 ನಿತ್ಯ ಸಂಸಾರಿಯಾದೆನಗೆ ಮತ್ತೆ ಮೃತ್ಯು ಬೆನ್ಹತ್ತಿರುವವಗೆ ಮಾಡೋ ಕರ್ಮ ಬದ್ಧ ಎನಗೆ ನೀ- ಚತ್ವದಿದುಪಜೀವಿಸುವವಗೆ ನಾನು ನಿತ್ಯನೆಂಬುವ ದುರಾತ್ಮನಿಗೆ ಆಹಾ ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ- ಸತ್ವನಿತ್ತು ಸುಶಕ್ತನಮಾಡು ನೀ 3 ನಿನ್ನ ಆಧೀನವೊ ಎಲ್ಲಾ ನಾನು ನಿನ್ನ ದಾಸನು ಶಿರಿನಲ್ಲಾ ಅನು- ದಿನ ಮಾಡುವ ಕಾರ್ಯವೆಲ್ಲ ನೀನು ಚಲನೆದಂದದಿ ಮಾಡ್ವೆನಲ್ಲಾ ಯೆಂನೊ- ಳಾವ ತಪ್ಪಿತವೇನೋ ಇಲ್ಲಾ ನಿನ್ನ ಸಂಕಲ್ಪದಂತಾಗೋದೆಲ್ಲಾ ಆಹಾ ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
--------------
ಹನುಮೇಶವಿಠಲ
ಪಾಹಿ ಪಾಂಡವ ಪರಿಪಾಲ ನೀನೇ ನಿತ್ಯ ಮಹದಾದಿವಂದ್ಯಾ ಸುಶೀಲಾ ಪ ದೈಹಿಕ ಮೊದಲಾದ ಕರ್ಮವ ಮಾಡಿಸಿ ಮೋಹಕ ಪಾಶವ ಓಡಿಸು ಕೇಶವಾಅ.ಪ ಇಂದ್ರತನಯಾ ಮಾನಭಂಗ ಮಾಡಿದೆ ನೀನು ಇಂದು ಉಂಡೆನೋ ಸಿರಿರಂಗಾ ಮಂದರೋದ್ಧರ ಕೋಮಲಾಂಗಾ ಕೇಳೊ ಪೊಂದಿಸು ಸುಜನರ ಸಂಗಾ ಕಂದರ್ಪಜನಕ ಆನಂದ ವಿಗ್ರಹ ಪೂರ್ಣ ಮಾತನು ಸುಂದರ ನಿಜ ಭಕ್ತ ವೃಂದ ಮಹೋದಧೇ 1 ಕಾಲಕರ್ಮ ಗುಣದಿಂದಾ ವೃಥಾಯು ವೇಳೆಯ ಕಳದೆ ಮುಕುಂದಾ ಪೇಳಾ ಲೇಸೊ ಪ್ರತಿ ಬಂಧಾ ಇನ್ನು ನಾನು ತಾಳಲಾರೆ ದು:ಖದಿಂದಾ ಆಲಸ ತಾಳದೆ ಆಲಿಸು ಮಾತನು ಆಳುಗಳೊಳಗಿಹ ಆಳಾನೆಂದು 2 ಅನಾದಿಯಿಂದಲಿ ನಿನ್ನ ಪದಗಳ ಧ್ಯಾನವ ಮಾಡುವೆ ಚನ್ನಾ ನಾನಾ ಬಗೆಯಿಂದ ಯೆನ್ನಾ ಸಾಕುತಲಿಪ್ಪ ನೀನೆ ಮುಖ್ಯನೊ ಪ್ರಸನ್ನ ಅನಂತಶಯನ ಭೋ ವಿಜಯವಿಠ್ಠಲರೇಯ ಮಾನದಲಿ ನಿಂದು ಪ್ರಾಣಪ್ರೇರಕನಾಗೊ 3
--------------
ವಿಜಯದಾಸ
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪೀತಾಂಬರಧರ ನಮೋನಮೋ ವನ ಜಾತಾಂಬಕ ತೇ ನಮೋ ನಮೋ ಪ ಖ್ಯಾತ ಚರಿತ್ರ ವಿಧಾತೃಜನಕ ಪುರು - ಹೂತ ಸಹೋದರ ನಮೋ ನಮೋ ಅ.ಪ ಪಾರ್ಥೋನಿಧಿಶಯ ನಮೋ ನಮೋ ಶ್ರೀ ತರುಣೀಪ್ರಿಯ ನಮೋ ನಮೋ 1 ಶ್ಯಾಮಳನೀರದ ಕೋಮಳದೇಹ ನಿ ರಾಮಯ ನಿರ್ಮಲ ನಮೋ ನಮೋ ಕಾಮಜನಕ ಬಲರಾಮ ಸಹಜ ಸಂ ಗ್ರಾಮಮುಜ್ವಲ ನಮೋ ನಮೋ 2 ಸುಂದರ ನಮೋ ನಮೋ ಕುಂದರದನ ಶರದಿಂದುವದನ ಗೋ ವಿಂದ ಜನಾರ್ಧನ ನಮೋನಮೋ 3 ಶಂಸ ವಿಹಿಂಸಕ ನಮೋ ನಮೋ ಸಂಸರದಘ ವಿಧ್ವಂಸಕ ಪರಮ ಹಂಸೋತ್ತಂಸಕ ನಮೋ ನಮೋ 4 ಗರುಡಗಮನ ತೇ ನಮೋ ನಮೋ ವರದವಿಠಲ ತೇ ನಮೋ ನಮೋ 5
--------------
ವೆಂಕಟವರದಾರ್ಯರು
ಪುಟ್ಟಿದೆ ಭುವಿಯೊಳು ಬಹುದಿನ ಕಳೆದೆನೊಪುಟ್ಟಿಸ ಬೇಡವೆನ್ನ ಪ ಪಟ್ಟಾಭಿರಾಮನೆ ಪರಮಘಟ್ಯಾಗಿ ನಿನ್ನ ಪಾದಗಳ ನಂಬಿದೆ ದೇವ ಅ.ಪ ಎಂಭತ್ತು ನಾಲ್ಕು ಲಕ್ಷ ಯೋನಿಯಚೀಲಗಳಲಿ ಬಂದೆನೊ ಕುಂಭಿಣಿಯೊಳು ಪುಟ್ಟಿ ಬಹು ಪಾಪಗಳ ಮಾಡಿಕುಂಭೀಪಾಕದಿ ಬೆಂದೆನೊ ಅಖಿಳ ಸುರರೊಡೆಯನೆಅರ್ತಾರ್ತಿಹರನೆಂದು ಕೇಳಿ ಬಂದೆನು ನಾನು 1 ಜನಪಾಶ ಬದ್ಧನಾದೆಮೀನು ಮಾಂಸದಾಸೆಗ್ಹೋಗಿ ಸಿಕ್ಕಿದಂತೆಮೋಸ ಹೋದೆನೊ ಬರಿದೆಏಣವು ಕಿಂಕಿಣಿಧ್ವನಿಗೆ ಮರುಳಾದಂತೆಇಳೆಯೊಳು ಮಂಕಾದೆನೊಏನೆಂಬೆ ದಾಸರಿ ಕೋಡಗದಂದದಿಕುಣಿಯುವೆ ನಾನೆಲ್ಲ ಜನಗಳ ಮುಂದೆ 2 ಕಾಯ ಪೋಷಣೆಗಾಗಿ ಹೇಯಕರ್ಮಂಗಳಕಾಲ ಕಾಲದಿ ಮಾಡ್ದೆನೊಜಾಯಾದಿಗಳ ರಕ್ಷಣೆಮಾಡೆ ಅದರಿಂದಜಾಗರೂಕನಾದೆನೊನ್ಯಾಯರಹಿತನಾಗಿ ಗುರು ಹಿರಿಯರ ಪಾದಭಜನೆ ಮಾಡದೆ ಪೋದೆನೊಕಾಯಜನೈಯನೆ ಶ್ರೀಕೃಷ್ಣರಾಯನೆಕಾಯಬೇಕೆನ್ನಪರಾಧಗಳನು ದೇವ3
--------------
ವ್ಯಾಸರಾಯರು
ಪುಣ್ಯ ದೊರಕುವುದು ಅನು ಗಣ್ಯವಾಗಿದ್ದ ಸತಿಯಿದ್ದ ಜನರಿಗೆ ಪ ಬಡತನವಿದ್ದರು ನೆರೆಹೊರೆ ಮನೆಯಲ್ಲಿ ನುಡಿ ಬಿಚ್ಚಿ ಪೇಳದೆ ಸೌಮ್ಯಳಾಗಿ ಬಿಡದೆ ಮಾಡುವ ಗೃಹಕೃತ್ಯಂಗಳು ಜಗ ಅನುದಿನ 1 ವಿಪರೀತ ಕಾಲಗಳಟ್ಟಿದ ಕಾಲಕ್ಕು ಸ್ವಪನಾದಿಯಪ ಕಳವಳಿಸದಲೇ ಪತಿ ಸೇವೆ ಅಫಲದಲ್ಲಿ ಮಾಡಿ ಒಲಿದೊಲಿದಾಡುವ2 ಲಾವಣ್ಯ ಪುರುಷರ ಕಂಡರು ಮನದಲ್ಲಿ ಭಾವಿಸಬೇಕು ಸಹೋದರರು ಎಂದು ವಿಭೂತಿ ರೂಪವ ನಿತ್ಯ 3 ಬಂದು ತಂದರೆ ಸಾವಿರ ಮಾಡಿ ಚಿಂತಿಸಿ ಇಂದಿರೇಶನೆ ಪತಿರೂಪವೆಂದು ಅಂದದದಲಿದ್ದ ವಿಭವಾನುಸಾರ ಆ ನಂದವಾಗಿ ಸಂಸಾರದೊಳಗಿರೆ 4 ಪತಿಯ ಜನಕ ಮಾತೃ ಮಿಗಿಲಾದ ಜನರಿಗೆ ಹಿತವಂತಳಾಗಿ ನುಡಿಸಿಕೊಳುತಾ ಗಾತ್ರ ಸರ್ವದಾ ಪ್ರತಿದಿನ ಸುವಿನುವಳಾ ನಾರಿ ಅಧಿಕಾರಿ 5 ಚಕೋರ ಚಂದ್ರಮನಲ್ಲಿ ಮನಸು ಇಟ್ಟು ಸುಖಬಡುವಂತೆ ನಾನಾ ಪ್ರಕಾರ ಕಕುಲಾತಿಯಿಂದ ಕಾಮುಕಳಾಗದೆ ಮಹಾ ಭಕುತಿಯಿಂದಲಿ ಗುರು ಹಿರಿಯರ ಸಮ್ಮತ 6 ಸಂತಜನರೆಂಬ ಕ್ಷೀರಾಂಬುಧಿ ಮಧ್ಯ ಸಂತತ ಮೀನಿನಂದದಿ ಬೀಳುತಾ ಪತಿ ಧರ್ಮವಹಿಸಿ ಶ್ರೀ ಕಾಂತನ ಗುಣಕಥೆ ಕೇಳಿ ಪೊಗಳಲಾಗಿ 7 ನಾಮ ಮೊದಲು ಮಾಡಿ ಪ್ರಕೃತಿಯ ಪರಿಯಂತ ಪ್ರೇಮದಿಂದಲಿ ಗುಣಗಳ ಗುಣಿಸೀ ಕಾಮಾದಿ ಚತುರ್ವಿಧÀ ಪುರುಷಾರ್ಥ ತನ್ನಯ ಸ್ವಾಮಿಯಲಿಂದಲಿ ಸಂಪಾದಿಸುತಿಪ್ಪಾ 8 ಆವಾವ ಪ್ರಯೋಜನ ಮಾಡಲು ಸರ್ವದ ದೇವದೇವೇಶನಾಧೀನವೆಂದೂ ಭಾವದಲಿ ತಿಳಿದನ್ಯ ಕರ್ಮವ ಬಿಟ್ಟು ಪಾವನ ವಿಜಯವಿಠ್ಠಲನ ಭಕುತಿಯಿಂದಾ 9
--------------
ವಿಜಯದಾಸ