ಒಟ್ಟು 6459 ಕಡೆಗಳಲ್ಲಿ , 126 ದಾಸರು , 3912 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೊ ಗೋಪಿನಾಥ ನಿನ್ನಗಲಿರಲಾರೆನೊ ಪ ಶೌರಿ ಅ.ಪ ವಾರಿಚರ ಕೂರ್ಮನೆ ಧಾರುಣಿ ತಂದನೆ ತೋರ ಕೊರಳ ಹಾರ ವರಮೃಗರೂಪನೆ 1 ಮೇದಿನಿ ಪಾಲಕರ ಕೊಂದು ವೈರಿ 2 ಬೆತ್ತಲೆ ನಿಂತು ದುಷ್ಕøತ್ಯ ಮಾಳ್ಪರ ಕೊಂದು ಉತ್ತಮ ತುರಗವೇರಿದ ಭೃತ್ಯವತ್ಸಲ ದೇವ 3 ವಿಜಯ ರಾಮಚಂದ್ರವಿಠಲರಾಯನೆ ಸುಜನ ವಂದಿತ ನಿನ್ನ ಭಜನೆಯ ಪಾಲಿಸೊ 4
--------------
ವಿಜಯ ರಾಮಚಂದ್ರವಿಠಲ
ಬಾರೊ ನೀ ಭಕುತರ ಸುರಧೇನು ಪ ಕರಗಳ ಮುಗಿವೆನು ಅ.ಪ. ಮೂರು ಲೋಕದ ದೊರೆ ನೀನಾಗಿರೆ ನೀರಿನೊಳೀಪರಿಯಾಟವು ತರವೆ ಕೂರುಮ ರೂಪದಾಕಿಟಿ ನರಮೃಗದಾ ಕಾರನೆನುತ ಪರಿಹಾಸವ ಮಾಳ್ಪರು 1 ಪೋರ ನಗುತ ಬಲಿಯನು ವಂಚಿಸಿ ಮೀರಿದ ಕೋಪದಿ ಮಾತೆಯನಿರಿದು ನಾರಿಯ ನೀಗುತ ಮಾವನ ಕೊಂದು ಜಾರಿದ ವಸನದ ರಾಹುತನೆಂಬರು2 ವಾರಿಧಿಯೊಳು ನಿನಗಾಟವು ಸಲ್ಲದು ಕೋರಿದ ಕೊಡುವೆನು ಬಾರೆನ ದೊರೆಯೆ ವಾರಿಜಾಭನೆ ಕರೆ ಕರೆ ಮಾಡದೆ ಶ್ರೀರಂಗೇಶವಿಠಲನೆ ಬೇಗದಿ 3
--------------
ರಂಗೇಶವಿಠಲದಾಸರು
ಬಾರೊ ನೀಯನ್ನಮನಿಗೆ ಗೋಪಾಲಕೃಷ್ಣ ಪ ಅಂದದಿ ಚಂದದಿ ಆಡುತ ಪಾಡುತ ಧಿ ಮಿಧಿಮಿಯನ್ನುತ ದಿನ ದಿನ ಕುಣಿಯುತ 1 ಅಂದುಗೆ ಗೆಜ್ಜೆಗಳಿಂದ ಶೋಭಿತನಾಗಿ ಮಂದಾರ ಕೂಡಿಕೊಂಡು ಗಜಗು ಭೊಗರಿಯಾಡುತ 2 ಬಾಲಕನಾಗಿ ನೀ ಲೀಲೆಯ ತೋರುತ ಲಾಲಿಯ ನಾಡುವ ಬಾಲಕರ ಕೂಡ 3 ಕುಡಿಯಲು ನಿನಗೆ ಕೊಡುವೆನು ನೊರೆಹಾಲ ಹುಡುಗರ ಕೂಡಿಕೊಂಡು ಶಿಡಿಗುಡಿನಾಡುತ 4 ಪತಿ ಹೆನ್ನೆ ವಿಠಲ 5
--------------
ಹೆನ್ನೆರಂಗದಾಸರು
ಬಾರೊ ಬಾರೊ ರಂಗ-ಬಾರೊ ನಮ್ಮನೆಗೆ ಪ ಬೋರನ್ಹಾಕುವೆ ನಡೆಮುಡಿಯ ನಿಮ್ಮಡಿಗೆ ಅ.ಪ ಪರಿಮಳಾಂಬುವಿನಿಂದ-ಪದವ ತೊಳೆಯುವೆನೊ ವರಗಂಧಾಕ್ಷತೆಯನು-ಭರದಿ ಧರಿಸುವೆನೋ 1 ಹೊಸಪಟ್ಟೆಯನು ತಂದು-ಹೊಂದಿಸಿ ರಾಜಿಸುವೆ ಕುಸುಮದಿಂದರ್ಚಿಸಿ ಕೂಡೆ ಸಂತಸವ 2 ಕುಂಕುಮಾಗಿಲು ದಿವ್ಯ ಗುಗ್ಗುಲಹೊಗೆಯ ಬಿಂಕದಿಂದರ್ಪಿಸುವೆನು ಭೋಗಿಸಯ್ಯಾ 3 ಮೇಲೆ ಸದ್ಭಕ್ಷ್ಯ ತಾಂಬೂಲವರ್ಪಿಸುವೆ ಲಾಲಿತ ಮಹಮಂಗಳಾರತಿಯೀವೆ 4 ಬಿಡದೆ ಸಾಷ್ಟಾಂಗವ ನಿಡುವೆ ರಮೇಶ ಪೊಡವಿಯೊಳ್ ಮಹದೇವಪುರದ ಶ್ರೀಹರಿಯೆ5
--------------
ರಂಗದಾಸರು
ಬಾರೊ ಮುಂದಿರೊ ಪರನಾರಿಸಹೋದರಮಾರ ನಿನಗಾರ ಮುದ್ದತಾರ ವೀರಹನುಮ ಪ. ಮರಗಳ ಮುರಿದೆ ಕರೆಕರೆದು ನೆರೆದಸುರರಶಿರಂಗಳ ತರಿದೆ ನಿನ್ನ ಸರಿಯಾರೋ ವೀರ ಹನುಮ 1 ಕಂಡೆ ನಿನ್ನ ಬಲವ ಸುಪ್ರಚಂಡ ರಿಪುಕುಲವತುಂಡು ತುಂಡಿಕ್ಕಿ ಮೆರೆದೆ ಬಲುಗಂಡೆ ವೀರ ಹನುಮ 2 ಎನ್ನೊಡೆಯ ಶ್ರೀಹಯವದನಗೆ ರನ್ನದ ಕನ್ನಡಿಯಂತೆ ಪ್ರಸನ್ನ ಮೋಹದ ......ಬಾಳು ಬಾಳು ವೀರ ಹನುಮ 3
--------------
ವಾದಿರಾಜ
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೊ ಶ್ರೀವೆಂಕಟರಮಣ ತವಪಾ- ದಾರಾಧಕರನು ಪೊರೆಯಲು ಕರುಣಾಪೂರ್ಣ ಪ ಬಾರೋ ನಮಿಸುವೆ ಪೂರ್ಣ ಕೃಷ್ಣಾ ತೀರದಲಿ ಮಾಂಡವ್ಯ ಋಷಿಗಳ ಘೋರ ತಪಸಿಗೆ ಒಲಿದು ಗುಡೆಬಲ್ಲೂರು ಮಂದಿರನೆಂದು ಕರೆಸುತ ಅ.ಪ ಎಲ್ಲ ಕಡೆಗೆ ನೆಲೆಸಿರುವ ಸಿರಿ ನಲ್ಲನೊಲಿಸಲು ತಪವನು ಗೈವ ಬಲ್ಲಿದ ಮಾಂಡವ್ಯರಿರವ ಕಂಡು ಗೊಲ್ಲರು ಮಾಡಿದರನು ದಿನ ಶೇವಾ ಪುಲ್ಲನಾಭನು ದರುಶನವ ಮುನಿ ವಲ್ಲಭಗೆ ತೋರಿಸಲು ಬೇಡಿದ ಗೊಲ್ಲರೆನ್ನಯ ಭಕುತರವರಿಂದಲ್ಲಿ ಪೂಜೆಯಗೊಳ್ವದೆಂದನು 1 ಬಾರೊ ಬೇಗನೆ ದ್ವಿಜರಾಜ ಧ್ವಜ ವೇರಿ ಪೊರೆದೆಯೊ ಬಂದು ಕರಿಯೆ ಕರಿ ರಾಜ ತೋರೋ ಚವತರಣ ಸರೋಜಯುಗ್ಮ ಸಾರಿ ಭಜಿಸುವ ಭಕುತರ ಕಲ್ಪ ಭೂಜ ಮಾರಜನಕನೆ ಚಾರುಕನಕ ಕಿ ರೀಟ ಕುಂಡಲಹಾರಪದಕ ಕೇಯೂರ ಸಾಲಂ- ಕಾರ ವಪು ಶೃಂಗಾರದಲಿ ರಥವೇರಿ ಮೆರೆಯುತ 2 ವೇದವೇದ್ಯನೆ ನಿನ್ನ ಪ್ರೇಮಾ ಪಡೆದ ಪಾದ ಮಹಿಮೆಯ ವರ್ಣಿಸಿದ ದೇವ ಶರ್ಮಾ ಬೋಧಾದಿ ಸದ್ಗುಣಧಾಮ ಪಾಹಿ ಮೇದಿನಿ ವಿಬುಧ ಪೂಜಿತ ಪೂರ್ಣಕಾಮ ಮೇದಿನಿಯೊಳು ಶ್ರೀದ ನಿನ್ನಯ ಪಾದಯುಗಳವ ಕಂಡು ಹರುಷದಿ ಪಾದುಕೆಯ ರಚಿಸಿದಗೆ ಒಲಿದ ಅಗಾಧ ಮಹಿಮನೆ ಮೋದಗರೆಯಲು 3 ಒಂದಿನ ನಿಶಿಯೊಳುತ್ಸವದಿ ದಣಿ ದಂದು ಮಲಗಿರಲರ್ಚಕರು ದೇವಾಲಯದಿ ಬಂದು ಚೋರರು ಅತಿಜವದಿ ನಿನಗೆ ಪೊಂದಿಸಿದೊಡವೆ ಗಳನು ಚೌರ್ಯತನದಿ ಮಂದ ಮತಿಗಳು ಒಯ್ಯುತಿರೆ ಖಳ ವೃಂದಕಂಗಳು ಪೋಗೆ ತುತಿಸಲು ಚಂದದಿಂ ಬರೆ ಹೇಮನಾಮವ ಕುಂದದಲೆ ಮಾಡಿಸಿದರಾಕ್ಷಣ 4 ನೀರಜಾಸನ ಮುಖ್ಯ ತ್ರಿದಶ ಗಣದಿಂ- ಪಂಕಜ ಭಕ್ತಪೋಷ ಸೂರಿಜನರ ಸಹವಾಸ ಕೊಡು ಧಾರುಣಿಯೊಳು ಕೃಷ್ಣ ತೀರನಿವಾಸ ಬಾರೊ ನಿನ್ನನು ಶೇರಿದವರW ವಾರಿವಾಹ ಸಮೀರ ಕಾರ್ಪರ ನಾರ ಶಿಂಹಾತ್ಮಕನೆ ಯನ್ನಯ ಭವ ಭಯ ದೂರಮಾಡಲು 5
--------------
ಕಾರ್ಪರ ನರಹರಿದಾಸರು
ಬಾರೊ ಸುದಾಮ ಬಾರೆನ್ನ ಮಿತ್ರ ದಾರಿ ನಮ್ಮಲ್ಲಿಗೆ ತೋರಲಿಲ್ಲೇನೊ ಪ ನಿನ್ನಯ ಪತ್ತೆಯು ಸಿಕ್ಕಲಿಲ್ಲೆನಗೆ ಎನ್ನಯ ಪತ್ತೆಯು ನಿನಗತಿ ಸುಲಭ ಎನ್ನತ್ತಿಗೆ ಕ್ಷೇಮದಿಂದಿರುವಳೆ ಪೇಳೊ ನಿನ್ನತ್ತಿಗೆ ಕ್ಷೇಮದಿರುವಳು ಕೇಳು 1 ಸತಿಸುತರನು ಕಾಣದುಂಟೇನೊ ಚಿಂತೆ ಸತಿಸುತರನ್ನಿಲ್ಲಿ ಕರೆಸುವೆ ಕಾಣೊ ನೀ ತಂದ ಒಡವೆಗಳೇನೇನು ತೋರೊ ಪೃಥುಕದ ಗಂಟನೆ ಬಿಚ್ಚೊ ನೀ ಬೇಗ 2 ಪೃಥುಕೈಕÀ ಮುಷ್ಟಿಯ ತಿಂದಾಗುತಿರಲು ಕ್ಷಿತಿಪತಿ ಕರವನೆ ಪಿಡಿದಳು ಭೈಷ್ಮೀ ಪೃಥುಕದ ಮುಷ್ಟಿಗೆ ಮೋಕ್ಷವ ಕೊಡುವಿ ಮತ್ತಿನ್ನು ತಂದರೆ ಕೊಡುವುದೇನರಸ 3 ತಟ್ಟಿ ಮುದ್ದಾಡಿ ಸುದಾಮನ ಬಿಡನು ಪುಟ್ಟಾದ ಮಕ್ಕಳ ಬಿಟ್ಟು ಬಂದಿರುವಿ ಕಷ್ಟವು ನಿನಗೇನೊ ಮಿತ್ರ ನಾನಿರಲು 4 ರಾಜೇಶ ಹಯಮುಖ ಚರಣಾಬ್ಜಗಳನು ಭಜಿಸುತ್ತ ನೀ ಪೋಗು ಮರೆಯದೆ ಮಿತ್ರನ ಮೂಜಗದೊಳಗಿಂಥ ಮಿತ್ರನೆಲ್ಲಿಹನು 5
--------------
ವಿಶ್ವೇಂದ್ರತೀರ್ಥ
ಬಾರೋ ಕ್ಷೀರೋದಧಿಶಯನ ಹರೆ ನಿನ್ನ ಕರುಣವ ಎನ್ನೊಳು ತೋರೊ ಪ ನಂದನಂದನ ಹೃನ್ಮಂದಿರಕೆ ನೀ ಬೇಗ ಬಾರೊ ಅ.ಪ ಶೌರೇ ನಿಂಗೆ ಸೇರಿದಾವನಾಗಿ ಇನ್ಯಾರಿಗೆ ಬೇಡಲೊ ಮುರಾರೆ ಕರುಣಿಸಿ ಬಾರೊ 1 ಕೃಷ್ಣಾಮೂರ್ತೆ ಸೃಷ್ಟಿಪಾಲನಾಗಿ ಪರಮೇಷ್ಠಿ ಜನಕ ನಿಂಗಿಷ್ಟೂಪೇಕ್ಷೆ ಯಾಕೋ 2 ಇಂದಿರೇಶ ಚಂದಿರವದನ ಮುಚುಕುಂದವರದ ಗೋವಿಂದ ಕರುಣಿಸಿ ಬಾರೊ 3 ಮಂಗಳಾಂಗ ಅಂಗಜ ಜನಕ ಯದುಪುಂಗವ ಕೈಬಿಡದಾಂಗೆ ಪಾಲಿಸು 4 ನಾಮಗಿರಿಸ್ವಾಮಿ ನಾರಸಿಂಹ ಬಲರಾಮ ಸೋದರ ಪ್ರಣಾಮ ಮಾಡುವೆ ಬಾರೊ 5
--------------
ವಿದ್ಯಾರತ್ನಾಕರತೀರ್ಥರು
ಬಾರೋ ಗುರು ರಾಘವೇಂದ್ರ ಸದ್ಗುಣಸಾಂದ್ರ ಪ ಬಾರೋ ಸದ್ಗುರುವರ ಸಾರಿದ ಸುಜನರ ಘೋರ ದುರಿತವ ತರಿದು ಕರುಣದಿ ಸಾರ ಸೌಖ್ಯವಗರಿದು ಪೊರಿಯಲು ಅ.ಪ ಸೂರಿಜನಾಲಂಕೃತ ಸುರಪುರದಿ ವಿಠ್ಠ ಲಾರ್ಯರಿಂದಲಿ ಪೂಜಿತ ಯದುಗಿರಿಯ ಕ್ಷೇತ್ರಾಗಾರನೆಂದೆನಿಸಿ ನಿರುತ ಭಜಕರನು ಪೊರೆಯುತ ಸೇವೆಯನುಕೊಳ್ಳುತ ತುರಗವನೇರಿ ಮೆರೆಯುತ1 ಭಕ್ತ್ಯಾದಿ ಫಲವೀವಂಥ ಗುರುವರನೆ ನಿಮ್ಮಯ ಸ್ತೋತ್ರ ಪಠಣವ ಮಾಡುತ್ತ ಅನವರತ ಭಜ- ನಾಸಕ್ತ ಜನರ ಕಾಮಿತ ನಾ ಕೊಡುವೆನೆನುತ ಮತ್ತೆ ಎಡಬಲದಲ್ಲಿ ದ್ವಿಜಕೃತ ಛತ್ರಚಾಮರ ವ್ಯಜನ ಸೇವಾ ನೃತ್ಯಗಾಯನ ವೈಭವದಿ ವರ ಹಸ್ತಿವಾಹನ ವೇರಿ ಮೆರೆಯುತ 2 ಇಳಿಸುರರೊಳು ಪ್ರಖ್ಯಾತ ಲಿಂಗೇರಿ ಭೀಮಾ ಹೊಳಿಯ ಸ್ಥಾನಕೆ ಬಂದಂಥ ಯದುಗಿರಿಯ ದ್ವಿಜವರ ಗೊಲಿದರ್ಚನಿಯ ಗೊಂಬಂಥ ಶರ್ವಾದಿವಿನುತ ಚಲುವ ಪ್ರಾಣನಾಥನ ಜಲಜಯುಗ ಸನ್ನಿಧಿ ಯೊಳನುದಿನ ಪೊಳೆವ ವೃಂದಾವನದಿ ಭಕುತರಿ ಗೊಲಿದು ಪೊರೆಯಲು ಕುಳಿತ ಯತಿವರ 3 ನಂದತೀರ್ಥರ ಸುಮತ ಸಿಂಧುವಿಗೆ ಪೂರ್ಣ ಚಂದ್ರರೆಂದೆನಿಸಿ ದಂಥಾ ಕರ್ಮಂದಿವರ್ಯನೆ ದುರಿತ ಘನಮಾರುತ ವಂದೆ ಮನದಲಿ ಬಂದು ನಿಮ್ಮಡಿ ದ್ವಂದ್ವವನು ಶೇವಿಸುವ ಶರಣರ ವೃಂದವನು ಪಾಲಿಸಲು ಸುಂದರಸ್ಯಂದನ- ವೇರುತಲಿ ವಿಭವದಿ 4 ನೀರಜಾಸನ ವರಬಲದಿ ಸಮರಾರೆನುತ ಬಂ- ಗಾರ ಕಶ್ಯಪ ಪೂರ್ವದಿ ಪ್ರಹ್ಲಾದ ರಾಜಕು ಮಾರ ನಿನ್ನೊಳು ವೈರದಿ ಹರಿಯನ್ನು ಜವದಿ ಚಾರು ಕೃಷ್ಣಾ ತೀರಕಾರ್ಪರ ನಾರಸಿಂಹನ ಸ್ತಂಭದಿಂದಲಿ ತೋರಿಸಿದ ಗುರು ಸಾರ್ವಭೌಮನೆ 5
--------------
ಕಾರ್ಪರ ನರಹರಿದಾಸರು
ಬಾರೋ ನಲಿದಾಡೋ ಜಿಹ್ವೆಯಲಿ ಮೂರಧಿಕಾರೊಡೆಯನೆ ಬಾರೋ ನಲಿದಾಡೋ ಜಿಹ್ವೆಯಲಿ ಪ ದಾಸಾ ಬಹು ಮೋಸಕ್ಕೊಳಗಾಗಿಹೆನು ಶ್ರೀಶಾ ಕರಪಿಡಿಯೆನ್ನ ದೋಷ ಮಹದಾಶಾ ವಹಿಸಿರುವೇನು ಘಾಸಿಯಾದೇನು ಮಾಡೋ ಕರುಣಾರ್ಣವದಿ ಈಶಾ ಘನವೇಷಾ ಬಹುತೋಷ ದಾಸನ ಮಾಡಿಕೊ ಎನ್ನ 1 ಕಂದೀ ನಾ ಕುಂದೀ ಗೃಹದೊಳಗೆ ಮಂದಿಯಾ ಶೇರಿದೆ ನೊಂದೇ ಬಹು ಬೆಂದೇ ಮನದೊಳಗೆ ಬಂಧನದೊಳು ಶಿಲ್ಕಿ ಸುಂದರ ಮೂರುತಿ ಸಂದಣಿಯದೆ ನಾ ಹೊಂದಿದೆನಿನಭವ ಭವ ನಾಯಿಂದೂ ದ್ವಂದ್ವಾಪದವಿಡಿದಿದೆ 2 ಘೋರಾ ನಿಸ್ಸಾರ ಭವದೊಳಗೆ ದಾರಿಗಾಣೆನು ಮಾರಾ ಬಹುದೀ ರಾಮನದೊಳಗೆ ಶೇರಿ ಕುಣಿವಾನು ಮಾರಜನಕ ನಿನ್ ಹಾರೈಶನುದಿನ ಶೇರಿ ಭಜಿಸಿ ನಿನ್ನ ನರಸಿಂಹವಿಠ್ಠಲ ಸಾರಿ ನಿನ ಕೋರಿ ಪದಶೇರಿ ಆರಾಧಿಸುವೀಗಳೆ 3
--------------
ನರಸಿಂಹವಿಠಲರು
ಬಾರೋ ನಿತ್ಯಾನಂದಲೀಲಾ | ಗೋಪಾಲ ಬಾಲ ಪ ಬಾರೋ ವನಜಮಾಲಾ ಬಾರೋ | ಗಾನಲೋಲಾ ಅ.ಪ ನಿನ್ನ ಕರುಣೆ ಎನ್ನೊಳಿರಲಿ ನಿನ್ನ ಚರಣ ಎನಗೆ ಸಿಗಲಿ ನಿನ್ನ ಧ್ಯಾನ ಮನದೊಳಿರಲಿ ನಿನ್ನ ನಾಮ ರಸನೆಯೊಳಿರಲಿ 1 ಮುರಳೀಧರ ಲೋಕೇಶ ಧರಣೀಧರ ವೆಂಕಟೇಶ ಶರಣಾಗತ ಕ್ಲೇಶನಾಶ ವರದಾಯಕ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾರೋ ಬಾರೋ ಕೋಪವಿನ್ಯಾತಕೆನ್ನ ಕೂಡಾ ರಂಗರಾಯಾ| ಸಾರಿದ ನಿನ್ನರಸಿಯ ತಪ್ಪನೊಳ್ಪರೇ ರಂಗರಾಯಾ ಪ ಚಲ್ವ ಕಣ್ದೆರೆವುತ ಮೊಗವತಿರಹುವರೇ ರಂಗರಾಯಾ| ಹಲ್ಲವ ಮಸೆಯುತ ಘುಡುಘುಡಿಸುವರೇ ರಂಗರಾಯಾ 1 ಭೀಕರಾಕೃತಿಯಾಗಿ ಕೊಡಲಿಯ ಪಿಡವರೇ ರಂಗರಾಯಾ| ಏಕಾಂಕಿಯಾಗಿ ಕದ್ದು ತಿರುಗುವರೇ ರಂಗರಾಯಾ 2 ಆಗೋಚರವಾಗದೇ ತುರಗೇರಿ ತ್ವರಿತದಿ ರಂಗರಾಯಾ| ಸುಮದಿ ಬಾ ಮಹಿಪತಿ ಸುತ ಜೀವನ ರಂಗರಾಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಬಾರಯ್ಯ ಬಾರೊ ಸದ್ಗುರುಸ್ವಾಮಿ ಬಾರಯ್ಯ ಬಾರೊ ಮದ್ಗುರು ಸ್ವಾಮಿ ಬಾರಯ್ಯ ಬಾರೊ ಧ್ರುವ ಸ್ವರೂಪಸುಖ ನಿಜವನ್ನು ತೋರೊ ಹರುಷಾನಂದದನುಭವ ಬೀರೊ ಗುರುತವಾಗ್ಯೆನ್ನೊಳು ನಿತ್ಯವಿರೊ ತರಣೋಪಾಯದ ನಿಜಬೋಧ ನೀ ಸಾರೊ 1 ಕಣ್ಣುಕೆಂಗೆಂಡುತಾವೆ ಕಾಣದೆ ನಿಮ್ಮ ಪುಣ್ಯಚರಣ ತೋರೊ ಘನ ಪರಬ್ರಹ್ಮ ಚಿಣ್ಣಕಿಂಕರ ಅತಿದೀನ ನಾ ನಿಮ್ಮ ಧನ್ಯ ಧನ್ಯಗೈಸುವದೆನ್ನ ಜನುಮ 2 ಚಾಲ್ವರುತಾವೆ ಮನೋರಥಗಳು ಆಲೇಶ್ಯ ಮಾಡದಿರು ನೀ ಕೃಪಾಳು ಮೇರೆದಪ್ಪಿ ಹೋಗುತಿದೆ ದಿನಗಳು ಬಲು ಭಾಗ್ಯೊದಗಿಬಾಹುದು ನೀ ದಯಾಳು 3 ಹಾದಿ ನೋಡುತಿದೆ ಹೃದಯ ಕಮಲ ಸಾಧಿಸಿಬಾಹುದು ಮುನಿಜನ ಪಾಲ ಸಾಧುಹೃದಯ ನೀನಹುದೊ ಸಿರಿಲೋಲ ಛೇದಿಸೊ ನೀ ಬಂದು ಭವಭಯಮೂಲ 4 ಬಾರದಿದ್ದರೆ ಪ್ರಾಣ ನಿಲ್ಲದೊ ಎನ್ನ ಕರುಣಿಸಿಬಾಹುದು ಜಗನ್ಮೋಹನ ತರಳ ಮಹಿಪತಿಗೆ ನೀ ಜೀವಜೀವನ ಕರೆದು ಕರುಣ ಮಳೆಗೈಸು ಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು