ಒಟ್ಟು 3758 ಕಡೆಗಳಲ್ಲಿ , 119 ದಾಸರು , 2292 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲ್ಲಿದಗುರುಗಳಿಗೆಎಲ್ಲ ಹಿರಿಯರಿಗೆ ಎರಗಿಬಲ್ಲಷ್ಟು ತತ್ವ ರಚಿಸಿದೆಕೋಲಬಲ್ಲಷ್ಟು ತತ್ವ ರಚಿಸಿದೆಲಕ್ಷ್ಮಿವಲ್ಲಭನಿದಕೆ ಒಲಿಯಲಿಕೋಲ1ಪತಿಗಳ ದಯದಿ ಮಾತುಪತಿರಚಿಸಿದಶ್ರೀಪತಿ ಗುಣನಿಧಿ ಕವನವಕೋಲಶ್ರೀಪತಿ ಗುಣನಿಧಿ ಕವನವು ವಿಸ್ತರಕೆಮಧ್ವ ಮತದ ಜನತಿದ್ದಿ ಕೊಡಬಹುದುಕೋಲ2ರಾಮಕೃಷ್ಣ ದೈವರು ಪ್ರೇಮದ ನುಡಿಗಳುನೇಮ ನಿಷ್ಠೆಯಲೆ ಶ್ರವಣವೆಕೋಲನೇಮ ನಿಷ್ಠಯಲಿ ಶ್ರವಣವ ಮಾಡಲುನಮ್ಮ ಕಾಮನ ಪಿತನುಕೈಹಿಡಿವಕೋಲ3ಮುದ್ದುರಂಗನ ಕಥೆಬುದ್ಧಿ ಸಾಲದೆ ಅಪದ್ಧವೆ ಇರಲಿಅತಿದಯದಿಕೋಲಅಪದ್ಧವೆ ಇರಲಿ ಅತಿದಯದಿ ಪಾಂಡುರಂಗವಿದ್ವಜ್ಜನ ವಂದ್ಯ ಕೈಕೊಳ್ಳೊಕೋಲ4ಅರಸಿ ರುಕ್ಮಿಣಿ ಭಾವೆಗೆಸರಸಲ್ಲಾಡಿದ ಮಾತುಹರುಷ ಮನದಿಂದ ಶ್ರವಣವೆಕೋಲಹರುಷ ಮನದಿಂದಶ್ರವಣ ಮಾಡಲುನಮ್ಮ ನರಸಿಂಹನಿದಕೆ ಒಲಿವನುಕೋಲ5ಹರದಿರುಕ್ಮಿಣಿ ಭಾಮೆತಿರುಗಿಸಿದ ಮುಯ್ಯವಆದರದಿಂದ ಕೇಳಿದವರಿಗೆಕೋಲಆದರದಿಂದ ಕೇಳಿದವರಿಗೆ ಶ್ರೀಕೃಷ್ಣಪರಮಪದವಿಯನೆ ಕೊಡುವನುಕೋಲ6ಮಚ್ಛ ನೇತ್ರಿಯರು ತಂದಅಚ್ಛಾದ ಮುಯ್ಯವಸ್ವಚ್ಛಮನದಿಂದ ಶ್ರವಣವÀಕೋಲಸ್ವಚ್ಛಮನದಿಂದ ಶ್ರವಣವ ಮಾಡಲುನಮ್ಮ ಅಚ್ಯುತನಿದಕೆ ಒಲಿವನುಕೋಲ7ಮಂದಗಮನೆಯರು ತಂದಚಂದದ ಮುಯ್ಯವಆನಂದ ಮನದಿಂದ ಶ್ರವಣವಕೋಲಆನಂದ ಮನದಿಂದ ಶ್ರವಣವ ಮಾಡಲುನಮ್ಮ ಅನಂತ ನಿದಕೆ ಒಲಿವನುಕೋಲ8ಕಾಂತೆ ರುಕ್ಮಿಣಿ ಭಾಮೆಗೆಪಂಥಲಾಡಿದ ಮಾತುಸಂತೋಷದಿಂದ ಶ್ರವಣವಕೋಲಸಂತೋಷದಿಂದ ಶ್ರವಣವ ಮಾಡಲು ಭಾಗ್ಯಸಂತಾನ ಕೊಡುವ ರಮಿ ಅರಸುಕೋಲ9
--------------
ಗಲಗಲಿಅವ್ವನವರು
ಬಾತೆಗೆ ಬಾರದ ವಸ್ತು ಬಹಳಿದ್ದರೇನುಹೋತಿನ ಕೊರಳೊಳಗೆ ಮಾಲೆಯಿದ್ದರೇನು ? ಪ.ತಾನು ಉಣ್ಣದ ದ್ರವ್ಯ ತಾಳೆಯುದ್ದ ಇದ್ದರೇನು?ದಾನವಿಲ್ಲದ ಮನೆಯು ದೊಡ್ಡದಾದರೇನು ?ಹೀನ ಕುಲದವಂಗೆ ಹಿರಿತದ ಬಂದರೇನುಶ್ವಾನನ ಮೊಲೆಯೊಳು ಹಾಲಿದ್ದರೇನು 1ವಾದಿಸುವ ಮಗನು ಒಯ್ಯಾರದಲಿದ್ದರೇನುಕಾದುವಸತಿ ಕೆಲದೊಳಿದ್ದರೇನು ?ಕ್ರೋಧವನು ಅಳಿಯದ ಸೋದರನು ಇದ್ದರೇನುಮಾದಿಗರ ಮನೆಯಲಿ ಮದುವೆ ಆದರೇನು 2ಹೋಗದೂರಿನ ಹಾದಿಕೇಳಿ ಮಾಡುವುದೇನುಮೂಗನ ಕಾಡ ಏಕಾಂತವಿನ್ನೇನು ?ಯೋಗಿ ಶ್ರೀ ಪುರಂದರವಿಠಲನ ನೆನೆಯದವಯೋಗಿಯಾದರೆ ಏನು ಜೋಗಿಯಾದರೆ ಏನು ? 3
--------------
ಪುರಂದರದಾಸರು
ಬಾರನ್ಯಾತಕೆ ವಾರಿಜಾನನೆ ಶ್ರೀಮಾರಜನಕಸಕಲ ಸುಖಕೆ ಕಾರಣನು ಕರುಣಿಸಿ ತಾನೆಪ.ಭುವನೇಶನಿನಿಯಳಣುಗ ತಾ ಪಿಡಿದು ಜರಿದ ಬಲಹಗೆಹ್ಯಾವಿಲೆಳೆದವನೊಳು ಕಾದಿ ತಾವೊಲಿದ ದೊರೆಯ ನಮಿಸಿಭಾವಕದಿದು ಇಷ್ಟವ ಪಡೆದನ ಜನನಿಸುತರಜೀವಕೆಡರು ಬರಲಿ ಕಳಿದನೆ ರಂಧ್ರ ಪೊಳಲದೇವ ಭಗಿನಿ ತುತಿಯ ಕೇಳ್ದನೆಇಂದುವದನೆ1ಹರಿಪದಸ್ಥನೆರೆಯನಿಂದ ಹರುಷದೊರೆದ ಪುರುಷನುಗ್ರಕರಿಯ ಮೈಯು ಬರಲಿ ಕಳೆದ ನರಟುನುಳ್ಳವನು ಭುವಿಲಿಹರಗೊಲಿಸಿ ಎಬಡ ಗಡ ಹೆಣ್ಣಿನ ಒಡಲ ಪೊಡೆಯುಉರಿಯಲರಿದ ಸಿರಿಯವರದನೆ ಬಾಳರುಚಿಯುಳ್ಹರಿಯನಟ್ಟಿಜವದಿಕಾಯ್ದನೆಕುಂದರದನೆ2ಭಾರಮಣನ ಅಗ್ರಜಳ ಕಿಶೋರಬಾಣಪ್ರಿಯಜನವತಾರನರಮನೆಗೊಲಿದು ವಿಷದ್ವಿಜನ್ನ ಧ್ವಜ ಕರೆದರೆಬಾರದೇನೆ ಮೂಗಮುರಿವನೆ ತನ್ನ ನಂಬಿಸಾರಿದವರ ಮನದೊಳಿರುವನೆ ಪ್ರಸನ್ನವೆಂಕಟಧೀರನೊಬ್ಬ ಜಗಕೆ ಚೆಲುವನೆ ಭಾಮಿನಿ 3
--------------
ಪ್ರಸನ್ನವೆಂಕಟದಾಸರು
ಬಾರಮ್ಮ ಮನೆಗೆ ಸೌಭಾಗ್ಯದ ಮಹಲಕ್ಷ್ಮಿ ಪಬಾರಮ್ಮ ಮನೆಗೆ ಭಕ್ತರು ನಿನ್ನ ಸ್ತುತಿಪರುಮಾರನಯ್ಯನ ಕೂಡಿ ಮನ ಹರುಷದಿ ಬೇಗ ಅ.ಪಶಂಖು ಚಕ್ರ ಗದ ಪದ್ಮವು ಧರಿಸಿದಪಂಕಜಾಕ್ಷನಸಿರಿಪಟ್ಟದರಸಿದೇವಿಕುಂಕುಮಾಂಕಿತೆ ಸರ್ವಾಲಂಕಾರ ಶೋಭಿತೆಬಿಂಕಮಾಡದಲೆ ಬಾ ವೆಂಕಟನರಸಿಯೆ1ಶುಕ್ರವಾರದಿ ನಿನ್ನ ಭಕ್ತಿಲಿ ಸ್ತುತಿಪರಇಷ್ಟ್ಯಾರ್ಥಗಳ ಕೊಟ್ಟುದ್ಧರಿಪಭಾರ್ಗವಿತಾಯೆಭಕ್ತವತ್ಸಲನೊಡಗೂಡುತ ಬಾರಮ್ಮಮಿತ್ರೇರು ಕರೆವರು ಕೃಷ್ಣವೇಣಿಯೆ ನಿನ್ನ 2ಕನ್ನಡಿ ಕದುಪಿನ ಕಡು ಮುದ್ದು ಮಹಾಲಕ್ಷ್ಮಿರನ್ನ ಪವಳ ಹಾರಾಲಂಕೃತ ಶೋಭಿತೆಸ್ವರ್ಣಮಂಟಪದಿ ಕುಳ್ಳಿರು ಬಾರೆಂದೆನುತಲಿಕರ್ನೇರು ಕರೆವರು ಕಮಲಾಕ್ಷನೊಡಗೂಡಿ 3ನಿಗಮವೇದ್ಯಳೆ ನಿನ್ನಅಗಣಿತಗುಣಗಳಪೊಗಳುವ ಸುಜನರಅಘಪರಿಹರಿಸುತ್ತಬಗೆ ಬಗೆ ನಾಮಗಳಿಂದ ಪೂಜೆಯಗೊಂಬಖಗವಾಹನನ ರಾಣಿ ಲಗುಬಗೆಯಿಂದಲಿ 4ತಡಮಾಡದಲೆ ಬಾ ಬಾ ಮುಡಿದ ಹೂವು ಉದರುತ್ತಬಡನಡು ಬಳುಕುತ್ತ ಕೊಡುತ ವರಗಳನ್ನುಬಿಡಿಮಲ್ಲಿಗೆಯ ತಂದು ನಡೆಮುಡಿ ಹಾಸುವರುಕಡಲೊಡೆಯನ ರಾಣಿ ಸಡಗರದಿಂದೊಮ್ಮೆ 5ಕ್ಷೀರವಾರಿಧಿಯ ಕುಮಾರಿಯೆ ಬಾರೆಂದುಸಾರಸಮುಖಿಯರು ಸರಸದಿ ಕರೆವರುಮೂರ್ಲೋಕ ವಿಖ್ಯಾತೆ ಮಾರಮಣನ ಪ್ರೀತೆಚಾರುಮಂಗಳೆ ಸತ್ಯ ಶ್ರೀ ಭೂದುರ್ಗಾಂಬ್ರಣೆ 6ಕಮಲಾಕ್ಷಿ ಕೇಳಮ್ಮ ಶ್ರಮ ಪರಿಹರಿಸೆಂದುನಮಿಸಿ ಬೇಡುವೆ ನಿನ್ನಭ್ರಮರಕುಂತಳೆ ತಾಯೆಕಮಲನಾಭ ವಿಠ್ಠಲನ ಕೂಡಿ ಹರುಷದಿಸುಮನಸರೊಡೆಯನಸತಿಸಾರ್ವಭೌಮಳೆ7
--------------
ನಿಡಗುರುಕಿ ಜೀವೂಬಾಯಿ
ಬಾರಮ್ಮ ಶೇಷಾದ್ರಿ ಭಾರ್ಗವಿದೇವಿ ಪತೋರಮ್ಮ ಮೃದುಪದ ತೋಯಜಕೇಳೆಜನನಿಅ.ಪದುಷ್ಟನು ನಿನ್ನ ಕ ನಿಷ್ಟ ಕುಮಾರನೂಕಷ್ಟವ ಪರಿಹರಿಸು ಇಷ್ಟು ಸಂಪದ ಕೊಡು 1ಕಾರುಣ್ಯ ರೂಪಿಣಿ | ಕಾಮಿತ ದಾಯಿನೀಸಾರಸದಳನೇತ್ರಿ | ಸೌಂದರ್ಯ ಗಾತ್ರೀ2ವಾಸವದುಃಖ ನಿವಾರಿಣಿ ಶ್ರೀತುಲಸೀದಾಸ ಹೃತ್ಸರಸಿಜ | ವಾಸಿನಿ ರುಕ್ಮಿಣಿ 3
--------------
ತುಳಸೀರಾಮದಾಸರು
ಬಾರೆ ವೈಯ್ಯಾರಿದೊಡ್ಡಮಾರಿ ಸಂಚರಿಸುವಾಗಫೋರರಾತ್ರಿಲೆ ಬರಬಹುದೆ ಪ.ಮಂದಗಮನೆ ನೀ ಮದನಜ ನೈಯ್ಯನಬದಿಯಲೆ ಬೆರೆದ ಬಗೆ ಹ್ಯಾಂಗಬಗೆಹ್ಯಾಂಗನಿನ್ನ ಕೀರ್ತಿಅದ್ಭುತವಮ್ಮಾ ಜಗದೊಳು 1ಧರ್ಮನ ಒಂದು ವರುಷ ರಮ್ಮಿಸಿ ಕರೆದೆಲ್ಲಧರ್ಮ ತಾ ಹೇಸಿ ಜರಿದನುಧರ್ಮ ತಾ ಹೇಸಿ ಜರಿದನು ಅದಕೇಳಿಬ್ರಮ್ಹಾದಿಗಳೆಲ್ಲ ನಗುತಾರೆ 2ಭೀಮನ ಒಂದು ವರುಷ ಕಾಮಿಸಿ ಕರೆದೆಲ್ಲಭೀಮತಾ ಹೇಸಿ ಜರಿದನುಭೀಮತಾ ಹೇಸಿ ಜರಿದನು ಅದಕೇಳಿಭೂಮಿ ಪಾಲಕರು ನಗುತಾರೆ 3ಮಿತ್ರಿ ಇಬ್ಬರ ಸಂಗ ತೃಪ್ತಿಯ ಗೈಯದೆಪಾರ್ಥನ ವರುಷ ಕರೆದೆಲ್ಲಪಾರ್ಥನ ವರುಷ ಕರೆದೆಲ್ಲಅವಜರಿದುಯಾತ್ರೆಗೆ ನಡೆದ ಬಿಡಳೆಂದು4ಸಕಲರ ಕರೆಯಲುಕಕುಲಾತಿತೀರದೆನಕುಲನ ವರುಷ ಕರೆದೆಲ್ಲನಕುಲನ ವರುಷ ಕರೆದೆಲ್ಲಅವಜರಿದುಯುಕ್ತಿಲೆಬ್ಯಾಗಕಡೆಯಾದ5ಸಹದೇವನೊಂದು ವರುಷ ಮೋಹಿಸಿ ಕರೆದೆಲ್ಲಸಹದೇವ ಹೇಸಿ ಜರೆದನುಸಹದೇವ ಹೇಸಿ ಜರೆದನುಆದೆಲ್ಲ ಹಲ್ಲಿ ಮರಿಯಂತೆ 6ಎಲ್ಲರ ಕರೆಯಲು ಒಲ್ಲದೆ ಜರೆದರುಅಲ್ಲವತಿಂದ ಇಲಿಯಂತೆಅಲ್ಲವತಿಂದ ಇಲಿಯಂತೆ ಮರುಗಲು
--------------
ಗಲಗಲಿಅವ್ವನವರು
ಬಾರೆ ಸುಬುದ್ಧಿ ನಿನ್ನ ಕಾಣದೆ ಇರಲಾರೆ ಕಾಣೆ ಸಖಿ ಜಾಣೆ ಪ್ರವೀಣೆ ಪ.ಮಾರನ ಶರಗಣ ದಾರುಣ ನೀಗವ್ವನಾರಿ ನಾರೀಮಣಿ ಕಾಳಾಹಿವೇಣಿತೋರೆ ನಿನ್ನಧರದಸಾರಸುಧೆಯೆನಗೆಚಾರುಹಿತಾನಂದ ಕಾರಣ ನೀರೆ1ಮಂದಗಮನೆ ಕೇಳೆ ಇಂದಿಗೆ ನಿನ್ನರವಿಂದಶರನಿಟ್ಟಧ್ವರ್ಯ ಕುಚದ್ವಂದ್ವವಹೊಂದಲು ಬಂದಿಹ ಅವನೊಳುಹಿಂದುಮುಂದಾಡಲಿ ಬೇಡೆನಿಂದುಮಾತಾಡೆ2ಪಂಕಜಗಂಧಿ ಮುದಾಂಕಿತಳೆ ನಿನ್ನಸೋಂಕಲು ಪ್ರಸನ್ವೆಂಕಟೇಶಭೋಂಕನೆ ಬಂದಿಹ ಚಿಂತಾಯಕ ಹೃದಯಪರಿಯಂಕದಿ ಸುಖಿಸೇಳೇಣಾಂಕ ಮುಖಿ 3
--------------
ಪ್ರಸನ್ನವೆಂಕಟದಾಸರು
ಬಾರೋ ಬ್ರಹ್ಮಾದಿವಂದ್ಯಾಬಾರೋ ವಸುದೇವ ಕಂದ ಪಧಿಗಿಧಿಗಿ ನೀ ಕುಣಿದಾಡುತ ಬಾರೋದೀನ ರಕ್ಷಕನೇಜಗದೀಶಾ ಕುಣಿದಾಡುತ ಬಾರೋಚನ್ನಕೇಶವನೇ 1ಗೊಲ್ಲರ ಮನೆಗೆ ಪೊಗಲು ಬೇಡಗೋವಿಂದಾ ಕೇಳೋಹಾಲು ಬೆಣ್ಣೆ ಮೊಸರಿಕ್ಕುವೆನೀನುಣ್ಣ ಬಾರೋ 2ದೊಡ್ಡ ದೊಡ್ಡ ಮುತ್ತಿನ ಹಾರವ ಹಾಕಿನೋಡುವೆ ಬಾರೋದೊಡ್ಡ ಪುರದ ದ್ವಾರಕಿವಾಸಪುರಂದರವಿಠಲ3
--------------
ಪುರಂದರದಾಸರು
ಬಾರೋ ವೆಂಕಟಗಿರಿನಾಥ| ದಯ-ದೋರೈ ಭಕುತರ ಪ್ರೀತ ಪ.ಮಾರಪಿತ ಗುಣಹಾರ ಮಂದರ-ಧಾರ ದೈತ್ಯಸಂಹಾರ ಸುಜನೋದ್ಧಾರ ಮಮಹೃದಯಾರವಿಂದಕೆಬಾರೋ ಕೃಪೆದೋರೋ ವೆಂಕಟ ಅ.ಪ.ವೃಷಭಾಸುರನೊಳು ಕಾದಿ ಸಾ-ಹಸವ ಮೆರೆಸಿದ ವಿನೋದಿವಶಗೈದು ದೈತ್ಯನ ಶಿರವ ಕತ್ತ-ರಿಸುತಲಿ ನೀನಿತ್ತೆ ವರವವಸುಧೆಯೊಳಗಿಹ ಸುಜನರನು ಮ-ನ್ನಿಸುತಲಿಷ್ಟವನಿತ್ತು ಕರುಣಾ-ರಸದಿ ಸಲಹುವ ಬಿಸಜನಾಭ ಶ್ರೀ-ವೃಷಭಾಚಲವೊಡೆಯ ವೆಂಕಟ 1ಅಂಜನೆಯೆಂಬಳ ತಪಕೆ ಭಕ್ತ-ಸಂಜೀವನೆಂಬ ಶಪಥಕೆರಂಜಿಪ ಪದವಿತ್ತೆ ಮುದದಿ ಖಿಲ-ಭಂಜನಮೂರ್ತಿ ಕರುಣದಿ|ಮಂಜುಳಾಂಗ ಶ್ರೀರಂಗ ಸುರವರಕಂಜಭವವಿನುತಾದಿ ಮಾಯಾ-ರಂಜಿತಾಂಘ್ರಿ ಸರೋರುಹದ್ವಯಅಂಜನಾಚಲವೊಡೆಯ ವೆಂಕಟ 2ಶೇಷನ ಮೊರೆಯ ತಾಕೇಳಿಬಲುತೋಷವ ಮನಸಿನೊಳ್ತಾಳಿದೋಷರಹಿತನೆಂದೆನಿಸಿ ಕರು-ಣಾಶರಧಿಯ ತಾನೆ ಧರಿಸಿಶ್ರೀಶಹರಿಸರ್ವೇಶ ನತಜನ-ಪೋಷ ದುರ್ಜನನಾಶ ರವಿಶತ-ಭಾಸ ಕೌಸ್ತುಭಭೂಷವರಶ್ರೀ-ಶೇಷಾಚಲವಾಸ ವೆಂಕಟ 3ಮಾಧವವಿಪ್ರ ವಿರಹದಿ ಭ್ರಷ್ಟಹೊಲತಿಗಳನು ಸೇರ್ದ ಮುದದಿಸಾದರದಲಿ ನಿನ್ನ ಬಳಿಗೆ ಬರೆನೀ ದಯಾನಿಧಿ ಕಂಡು ಅವಗೆಶೋಧಿಸುತ ಪಾಪಗಳೆಲ್ಲವಛೇದಿ ಬಿಸುಡುತನಿಂದುವೆಂಕಟ-ಭೂಧರದ ನೆಲೆಯಾದ ನಾದವಿ-ಭೇದಬಿಂದು ಕಲಾದಿಮೂರುತಿ 4ಧನಪತಿಯೊಳು ತಾನು ಸಾಲಕೊಂಡಘನಕೀರ್ತಿಯಿಂದ ಶ್ರೀಲೋಲವನಿತೆ ಪದ್ಮಾವತಿಪ್ರೀತ ಭಕ್ತ-ಜನಸುರಧೇನು ಶ್ರೀನಾಥವನಧಿಶಯನ ಮುರಾರಿಹರಿಚಿ-ಧ್ವನಿನಿಭಾಂಗ ಸುಶೀಲ ಕೋಮಲವನಜನಾಭನೀಯೆನ್ನ ಕೃಪೆಯೊಳ-ಗನುದಿನದಿ ಕಾಯೊ ಕೃಪಾಕರ 5ಛಪ್ಪನ್ನೈವತ್ತಾರು ದೇಶದಿಂದಕಪ್ಪವಗೊಂಬ ಸರ್ವೇಶಅಪ್ಪ ಹೋಳಿಗೆಯನ್ನುಮಾರಿಹಣ-ಒಪ್ಪಿಸಿಕೊಂಬ ಉದಾರಿಸರ್ಪಶಯನ ಕಂದರ್ಪಪಿತ ಭಜಿ-ಸಿರ್ಪವರ ಸಲಹಿರ್ಪ ಕುಜನರದರ್ಪಹರಿಸುತ ಕಪ್ಪಕಾಣಿಕೆಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6ಚಾರುಚರಣತೀರ್ಥವೀಂಟಿ ನಿನ್ನೊ-ಳ್ಸಾರಿ ಬರುವ ಪುಣ್ಯಕೋಟಿಸೇರಿದೆ ಕೊಡು ಮನೋರಥವ ಲಕ್ಷ್ಮೀ-ನಾರಾಯಣನೆನ್ನೊಳ್ದಯವತೋರುನಿರತಸಮೀರಭವ ವರ-ದಾರವಿಂದದಳಾಕ್ಷ ತಿರುಪತಿವೀರ ವೆಂಕಟರಮಣ ಮದ್ಬಹು-ಭಾರನಿನ್ನದು ಪಾಲಿಸೆನ್ನನು7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾಲನ ಮೇಲೆ ನಿನ್ನ ಮೋಹವಮ್ಮ ನಾವುಹೇಳಿದ ಮಾತು ನೀ ಕೇಳೆಯಮ್ಮ ಪ.ಚಿಣ್ಣಗಿಣ್ಣನೆಂಬುವÀ ಬಣ್ಣ ಬ್ಯಾಡೆ ನಮ್ಮಬೆಣ್ಣೆ ಕದ್ದು ಮೆದ್ದ ಕಟವಾಯಿ ನೋಡೆಸಣ್ಣಗಿಣ್ಣವನಿವನಾದರೆ ಪರರ ಚೆಲುವಹೆಣ್ಣಿನೊಳಗಾಡುವನೆ ಕುವರ 1ಪುಟ್ಟಗಿಟ್ಟನೆಂಬುವ ಮಾತು ಬೇಡೆ ನಮ್ಮರಟ್ಟು ಮಾಡುವ ಜನರೊಳು ನೋಡೆಸಿಟ್ಟುಗಿಟ್ಟಿಗೆ ಕೃಷ್ಣ ಅಳುಕನಮ್ಮ ನಮ್ಮಬಟ್ಟ ಕುಚವಿಡಿವ ದಿಟ್ಟನಮ್ಮ 2ಚಿಕ್ಕಗಿಕ್ಕವನೆಂಬುದುರೂಢಿಕಾಣೆ ನಮ್ಮಪಕ್ಕವ ಬಿಡನು ಬಾಲಕಾರ್ಯವೇನೆಅಕ್ಕೊ ಇಕ್ಕೊ ಎಂಬುವನ್ನಕ್ಕ ಕಳ್ಳ ನಮ್ಮಠÀಕ್ಕಿಸೆದ್ದೋಡುವ ಸಿಕ್ಕುವನಲ್ಲ 3ಕಕ್ಕುಲಾತಿತೋರೆ ನಮ್ಮ ಮನೆಗಳ ಪೊಕ್ಕು ಸಣ್ಣಮಕ್ಕಳಾಟವಾಡದೆಮ್ಮ ನೋಡಿ ನಕ್ಕುತಕ್ಕೈಸಿ ಓಡುವ ಮಹಾಮಾಯಗಾರನಮ್ಮದಕ್ಕಲೀಸ ಪತಿವ್ರತಧರ್ಮಜಾರಕೃಷ್ಣ4ಕೂಸುಗೀಸು ಇನ್ನೆನ್ನಬಾರದವಗೆಭವಘಾಸಿಯ ತಪ್ಪಿಸುವ ಎಂದಿಗೆಮಗೆಬೇಸರ ಗೀಸರದೆ ನೆನೆವರ ಒಡೆಯಲಕ್ಷ್ಮೀಶ ಪ್ರಸನ್ವೆಂಕಟ ರಂಗಯ್ಯ 5
--------------
ಪ್ರಸನ್ನವೆಂಕಟದಾಸರು
ಬಿಡಲಾರೆ ಬಿಡಲಾರೆ ನಿನ್ನಡಿದಾವರೆಯ ನೀಕೊಡು ಕಂಡ್ಯ ಅಭಯವಿಡಿದೆಮ್ಮ್ಮಯ ತಂದೆ ಪ.ಕೂಗುವೆ ಕೂಗುವೆ ಕೃಪಾಸಾಗರನೆಂದ್ಹೇಳಿ ತಾಕೂಗಿದರೊದಗಿ ಕಾಯಿದೆ ನಾಗನ್ನಕೇಳಿತಂದೆ1ಬಡವ ನಾ ಬಡವನು ಕಾಣೊ ಬಾಡದೊನಮಾಲಿ ಕಡುಬಡವ ಸುದಾಮನ ಕೈಯವಿಡಿದ್ಯೆಂದುಕೇಳಿತಂದೆ2ಡೊಂಕುನಡೆದೆಡೊಂಕುನುಡಿದೆ ಶಂಕಿಲ್ಲದಲೆ ಮೂಡೊಂಕಿಯ ತಿದ್ದಿದ ಬಿರುದಾಂಕನಕೇಳಿತಂದೆ3ಬಲ್ಲೆನೊ ಬಲ್ಲೆನೊ ನೀನಿದ್ದಲ್ಲಿ ವ್ರಜದಲ್ಲಿ ಗೋಗೊಲ್ಲರು ಪುಲ್ಗಲ್ಲಿಗೆ ಕೈವಲ್ಯವುಕೇಳಿತಂದೆ4ಅವರೇವೆ ನಿನ್ನವರು ನಾನೇನವರ ಶಿಶುವಲ್ಲೆ ತನ್ನವರಹೊರೆವಪ್ರಸನ್ವೆÉಂಕಟ ತವರೂರಕೇಳಿತಂದೆ5
--------------
ಪ್ರಸನ್ನವೆಂಕಟದಾಸರು
ಬಿಡೆ ನಿನ್ನ ಚರಣವಉಡುಪಿಕೃಷ್ಣನೆಭವಕಡಲ ದಾಟಿಸು ಕೈಯವಿಡಿದು ಪಾಲಿಸು ತಂದೆ ಪ.ಧÀ್ರುವಶುಕಪ್ರÀಹ್ಲಾದಬಲಿಅಜಾಮಿಳನುದ್ಧವ ಅಂಬರೀಷ ವಿದುರ ಮುಖ್ಯರುತವ ಪಾದವಿಡಿಯಲವರಿಗಿಂಬು ನೀಡ್ದಹವಣವ ಬಲ್ಲೆ ನಾನೇನ ಮಾಡಿದರೇನ 1ಪಾಂಚಾಲಿಮಾನವಕಾಯ್ದೆ ಪೆರರಿಗಂದುಅಚ್ಯುತನಿನ್ನಂಗುಟವು ಸೋಂಕಲುನಿಚ್ಚಳ ಸತಿಯಾದಳೆಂಬ ಸಾಹಸಕೇಳಿಮುಚ್ಚು ಮರೆಯ ಮಾಡಿದರೆ ನಿಮ್ಮ ಮರೆಯೆನು 2ನಿನ್ನ ಪಾದಾಂಬುಜ ಧ್ಯಾನ ಮರೆಯದಂತೆಎನ್ನ ಮನದ ವಕ್ರಗತಿಯ ತಿರ್ದುಮನ್ನಿಸು ತಂದೆ ಪ್ರಸನ್ನವೆಂಕಟ ಕೃಷ್ಣಪೂರ್ಣಪ್ರಜ್ಞಾರ್ಚಿತ ಚರಣಕಮಲನೆ 3
--------------
ಪ್ರಸನ್ನವೆಂಕಟದಾಸರು
ಬಿಡೆನೊ ನಿನ್ನಂಘ್ರಿ ಶ್ರೀನಿವಾಸ ನನ್ನದುಡಿಸಿಕೊಳ್ಳೆಲೊ ಶ್ರೀನಿವಾಸ ನಿನ್ನುಡಿಯ ಜೀತಲ್ಲೊ ಶ್ರೀನಿವಾಸ ನನ್ನನಡೆ ತಪ್ಪು ಕಾಯೊ ಶ್ರೀನಿವಾಸ ಪ.ಬಡಿಯೊ ಬೆನ್ನಲಿ ಶ್ರೀನಿವಾಸ ನನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾಬಡವ ಕಾಣೆಲೊ ಶ್ರೀನಿವಾಸ ನಿನ್ನೊಡಲ ಹೊಕ್ಕೆನೊ ಶ್ರೀನಿವಾಸ 1ಪಂಜುವಿಡಿವೆನೊ ಶ್ರೀನಿವಾಸ ನಿನ್ನೆಂಜಲ ಬಳಿದುಂಬೆ ಶ್ರೀನಿವಾಸ ನಾಸಂಜೆ ಉದಯಕೆ ಶ್ರೀನಿವಾಸ ಕಾಳಂಜಿಯ ಪಿಡಿವೆನೊ ಶ್ರೀನಿವಾಸ 2ಸತ್ತಿಗೆ ಚಾಮರ ಶ್ರೀನಿವಾಸ ನಾನೆತ್ತಿಕುಣಿವೆನೊ ಶ್ರೀನಿವಾಸ ನಿನ್ನರತ್ತುನ ಹಾವಿಗೆ ಶ್ರೀನಿವಾಸ ನಾಹೊತ್ತು ನಲಿವೆನೊ ಶ್ರೀನಿವಾಸ 3ಹೇಳಿದಂತಾಲಿಹೆ ಶ್ರೀನಿವಾಸ ನಿನ್ನಾಳಿಗಾಳಾಗಿಹೆ ಶ್ರೀನಿವಾಸ ಅವರೂಳಿಗವ ಮಾಳ್ಪೆ ಶ್ರೀನಿವಾಸ ನನ್ನಪಾಲಿಸೊ ಬಿಡದೆ ಶ್ರೀನಿವಾಸ 4ನಿನ್ನ ನಾಮ ಹೋಳಿಗೆ ಶ್ರೀನಿವಾಸ ಕಳ್ಳಕುನ್ನಿ ನಾನಾಗಿಹೆ ಶ್ರೀನಿವಾಸಕಟ್ಟಿನಿನ್ನವರೊದ್ದರೆ ಶ್ರೀನಿವಾಸ ನನಗಿನ್ನು ಲಜ್ಜ್ಯಾತಕೆ ಶ್ರೀನಿವಾಸ 5ಬೀಸಿ ಕೊಲ್ಲಲವರೆ ಶ್ರೀನಿವಾಸ ಮುದ್ರೆಕಾಸಿ ಚುಚ್ಚಲವರೆ ಶ್ರೀನಿವಾಸ ಮಿಕ್ಕಘಾಸಿಗಂಜೆನಯ್ಯ ಶ್ರೀನಿವಾಸ ಎಂಜಲಾಸೆಯಬಂಟನಾ ಶ್ರೀನಿವಾಸ6ಹೇಸಿ ನಾನಾದರೆ ಶ್ರೀನಿವಾಸಹರಿದಾಸರೊಳು ಪೊಕ್ಕೆ ಶ್ರೀನಿವಾಸಅವರಭಾಸೆಯ ಕೇಳಿಹೆ ಶ್ರೀನಿವಾಸ ಆವಾಶೆಯ ಸೈರಿಸೊ ಶ್ರೀನಿವಾಸ 7ತಿಂಗಳವನಲ್ಲ ಶ್ರೀನಿವಾಸವತ್ಸರಂಗಳವನಲ್ಲೊ ಶ್ರೀನಿವಾಸ ರಾಜಂಗಳ ಸವಡಿಪೆ ಶ್ರೀನಿವಾಸ ಭವಂಗಳ ದಾಟುವೆ ಶ್ರೀನಿವಾಸ 8ನಿನ್ನವ ನಿನ್ನವ ಶ್ರೀನಿವಾಸ ನಾನನ್ಯವನರಿಯೆನೊ ಶ್ರೀನಿವಾಸ ಅಯ್ಯಾಮನ್ನಿಸೊ ತಾಯ್ತಂದೆ ಶ್ರೀನಿವಾಸ ಪ್ರಸನ್ನ ವೆಂಕಟಾದ್ರಿ ಶ್ರೀನಿವಾಸ 9
--------------
ಪ್ರಸನ್ನವೆಂಕಟದಾಸರು
ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬುದ್ಧಿ ಧೃತಿಯೆಂಬ ನಾರೇರು ಶ್ರೀಮುದ್ದು ಕೃಷ್ಣನ ಒಲಿಸಿಕೊಂಡರು ಪ.ಅಕ್ಕ ಬುದ್ಧಿವಂತೆ ತಂಗಿಗೆ ಬಲುನಿಕ್ಕರದಲಿ ಹಿತವಾಡಿದಳುಚಿಕ್ಕವಳೆಂದಂಜದೆÉ ಧೃತಿಯು ತಮ್ಮಕ್ಕನೊಳು ಬಡಿದಾಡಿದಳು 1ಕಟ್ಟಲೆ ಮೀರಿ ಮಾತಾಡದಿರೆ ತಂಗಿಸಿಟ್ಟು ಬರುತಿದೆ ಕಾಡದಿರೆಕಟ್ಟಲೆ ಮೀರಿ ಮೊದಲೆ ನವೆದೆ ನಿನ್ನಕಟ್ಟಿನೊಳಗೆ ಸಿಕ್ಕಿ ಬಲು ದಣಿದೆ 2ಒಗತನ ದಾರದೆ ಸಣ್ಣವಳೆ ನೀಜಗಳಕ್ಕೆ ನಿಂತೆ ದೊಡ್ಡೆದೆಯವಳೆನಗೆಗೇಡು ಮಾಡಿಕೊಂಡೆಲೆಯಕ್ಕ ನಿನಗೊಗತನ ನನ್ನಿಂದ ತಗಲಕ್ಕ 3ಹರಿನಿನಗೆ ದಕ್ಕಿದನೆಂದು ಉಣ್ಣದುರಿಯಬೇಡೆಲೆ ತಂಗಿ ಹೋಗಿಂದುಅರಸ ದಕ್ಕುವನೆ ಇನ್ನಾರಿಗೆ ಅಕ್ಕಕಿರುಕುಳು ಮಾತ್ಯಾಕೆ ಹಿರಿಯಳಿಗೆ 4ನನ್ನ ಹಿರಿಯತನ ಕೆಣಕಿದ್ಯಲ್ಲೆನನ್ನ ಕಣ್ಣ ಮುಂದೆ ನಿನ್ನೆ ಬಂದವಳೆಹುಣ್ಣಿಮೆ ಚಂದ್ರ ದಿನಕೆ ಹಿರಿಯ ಜಗಮನ್ನಣೆಗೆ ಬಾಲಚಂದ್ರನಲ್ಲೆ 5ಪಟ್ಟ ನನ್ನದು ಮೊನ್ನೆ ಬಂದವಳೆ ನಿನ್ನದಿಟ್ಟತನವನೇನ ಹೇಳಲೆಕೃಷ್ಣ ನಿನಗೆ ದೂರನಲ್ಲೆ ಅಕ್ಕ ಹರಿಯಗುಟ್ಟಿನ ಮೋಹವೆ ನನಗೆ ಅಕ್ಕ 6ತಂಗಿ ಮನವ ನೋಯಿಸ್ಯಾಡದಿರೆ ಶ್ರೀರಂಗನೆನಗೆರವು ಮಾಡದಿರೆಮಂಗಳ ಮಹಿಮ ಮುರಾರಿಯ ಅರ್ಧಾಂಗಿಯೆ ನಾ ನಿನಗೆ ಸರಿಯೆ 7ಹಿರಿಯ ಕಿರಿಯಳಲ್ಲ ಸರಿ ಹೇಳೆಹರಿಗೆರವಿನ ಮಾತಿಲ್ಲಖರೆಕೇಳೆಪರಮಪುರುಷ ವಾಸುದೇವನೆ ಕೊಟ್ಟವರಕೆಂದು ತಪ್ಪದೆ ಕಾವನೆ 8ಕನ್ಯೆ ಲಕ್ಷುಮಿಯ ರಮಣನೆ ಸ್ವಾಮಿತನ್ನ ನಂಬಿದವರ ಹೊರೆವನೆಪುಣ್ಯ ಗೋಪೀಜನಜಾರನೆ ಪ್ರಸನ್ನವೆಂಕಟಪತಿ ಧೀರನೆ 9
--------------
ಪ್ರಸನ್ನವೆಂಕಟದಾಸರು