ಒಟ್ಟು 2936 ಕಡೆಗಳಲ್ಲಿ , 122 ದಾಸರು , 2125 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯ ನೆನೆಯದ - ನರಜನ್ಮವೇಕೆ ? ಶ್ರೀಹರಿಯ ಕೊಂಡಾಡದ ನಾಲಿಗೆಯಿನ್ನೇಕೆ ಪ.ಸತ್ಯ - ಶೌಚವಿಲ್ಲದ ಆಚಾರವೇಕೆ ?ಚಿತ್ತ ಶುದ್ಧಿಯಿಲ್ಲದ ಜ್ಞಾನವೇಕೆ ?ಭಕ್ತಿ - ಭಾನವಿಲ್ಲದ ದೇವಪೂಜೆ ಏಕೆ ?ಉತ್ತಮರಿಲ್ಲದ ಸಭೆಯು ಇನ್ನೇಕೆ ? 1ಕ್ರೋಧವ ಬಿಡದಿಹ ಸಂನ್ಯಾಸವೇಕೆ ?ಆದರವಿಲ್ಲದ ಅಮೃತಾನ್ನವೇಕೆ ?||ವೇದ - ಶಾಸ್ತ್ರವಿಲ್ಲದ ವಿಪ್ರತನವೇಕೆಕಾದಲಂಜುವನಿಗೆ ಕ್ಷಾತ್ರ ತಾನೇಕೆ ? 2ಸಾಲದಟ್ಟುಳಿಯೆಂಬ ಸಂಸಾರವೇಕೆ ?ಬಾಲಕರಿಲ್ಲದ ಭಾಗ್ಯವಿನ್ನೇಕೆ ?ವೇಳೆಗೆ ಒದಗದ ನೆಂಟರಿನ್ನೇಕೆ ? ಅನುಕೂಲವಿಲ್ಲದ - ಸತಿಯ ಸಂಗವೇಕೆ 3ಮಾತೆ - ಪಿತರ ತೊರೆದ ಮಕ್ಕಳಿನ್ನೇಕೆ ?ಮಾತು ಕೇಳದ ಮಗನಗೊಡವೆ ಇನ್ನೇಕೆ ||ನೀತಿ ತಪ್ಪಿದ ದೊರೆಯ ಸೇವೆ ಇನ್ನೇಕೆ ? ಅನಾಥನಾಗಿರುವಗೆ ಕೋಪವಿನ್ನೇಕೆ ? 4ಅಳಿದುಳಿದಿಹ ಮಕ್ಕಳುಗಳಿನ್ನೇಕೆ ?ತಿಳಿದು ಬುಧ್ಧಿಯ ಹೇಳಿದ ಗುರುತನವೇಕೆ ?ನಳಿನನಾಭ ಶ್ರೀ ಪುರಂದರವಿಠಲನಚೆಲುವ ಮೂರುತಿಯ ಕಾಣದ ಕಂಗಳೇಕೆ 5
--------------
ಪುರಂದರದಾಸರು
ಹರಿಯೆ ಗತಿಯೆನ್ನಿರೈ ಶ್ರೀನರಹರಿಯೆ ಶರಣೆನ್ನಿರೈ ಪ.ಹರಿಪಾದಕಮಲವ ನಂಬದ ಮೂಢನು ಮನುಜನಲ್ಲದನುಜಶ್ರೀಹರಿಚರಿತಾಮೃತ ಕೇಳದೆ ಗರ್ವಿಪ ನರನು ಪಾಮರನÀು 1ಹರಿಯ ಬಂಟರ ಅನುಸರಣೆಗಳ ಪರಿತ್ಯಾಗಿ ವೃದ್ಧಗೂಗಿಹರಿಮಹಿಮೆಯ ಹೊಗಳಾಡದ ಮಾತಿನ ಮುಖನು ಮಂಡೂಕನು 2ಕೃಷ್ಣಗೆ ಪ್ರಿಯವ್ರತ ದಾನಕೆ ವಿಮುಖಾದ ಧನಪನವ ಕುಣಪಕೃಷ್ಣಾಕೃತಿಯ ಬಹಿರಂತದಿ ನೋಡದ ಜಾಣನವ ಕೋಣ 3ಕೃಷ್ಣಗೆ ನಮಿಸದೆಸತಿಸುತರೊಳು ಭೂರಿತುಷ್ಟ ಹಿತನಷ್ಟ ಶ್ರೀಕೃಷ್ಣನವರ ಕಂಡೆರಗದ ವಿಷಯದಭೋಗಿಭವರೋಗಿ4ಗೋವಿಂದ ಸರ್ವೋತ್ತಮನಿರೆ ಬೇರೆಂಬಜ್ಞಾನಿ ಮದ್ಯಪಾನಿಗೋವಿಂದನೊಳು ವಿಶ್ವಾಸಿಲ್ಲದ ಭಕ್ತಿಯ ಧೀರ ಶುದ್ಧಜಾರ5ಗೋವಿಂದ ತೀರ್ಥ ಪ್ರಸಾದÀವ ನರಿಯದ ಬಲ್ಲನೆ ಕಳ್ಳನುಗೋವಿಂದನೊಪ್ಪದ ಮತವಿಡಿದವ ಮಹಿಗೆಕಕ್ಕಸರಕ್ಕಸ6ಪ್ರಸನ್ನ ಮೂರುತಿ ವಿಧಿಭವವಂದ್ಯನ ಅರ್ಚಕ ಧನ್ಯರೆ ಮಾನ್ಯರುಪ್ರಸನ್ನವೆಂಕಟಪತಿ ಕಂಡುಂಡಾ ಭಕ್ತಿಯಾಸಕ್ತರೆ ಮುಕ್ತರು 7
--------------
ಪ್ರಸನ್ನವೆಂಕಟದಾಸರು
ಹರಿಯೆ, ಕುಣಿಯೆನುತ -ನರ -ಹರಿಯೆ, ಕುಣಿಯೆಂದು ಕುಣಿಸಿದರಯ್ಯ ಪಲೋಕವ ತಾಳ್ದನ ಮನೆಯಲಿ ಪುಟ್ಟಿ |ತೂಕದ ನುಡಿಗಳ ಕದ್ದವನ ||ನಾಕರಿಸಲು ನಿಜ ಗೋಪರೂಪದಿಂದ |ಆಕರಿಸಿದನಾ ಕುಣಿಸಿದರಯ್ಯ 1ಎಡೆಯಿಲ್ಲದೆ ನಡೆವನ ಕೂಡಿರುವವನ |ಹಿಡಿಲೆಂಬನ ಒಡಹುಟ್ಟಿದನ ||ಒಡೆಯನ ಕಂದನ ವೈರಿಯ ಬಂಡಿಯ |ಹೊಡೆದ ಮಹಾತ್ಮನ ಕುಣಿಸಿದರಯ್ಯ 2ಒಣಗಿದ ಮರ ಎಲೆಯಿಲ್ಲದ ಬಳ್ಳಿ |ಬಣತಿಗೆ ಪುಟ್ಟಿದ ವನದಲ್ಲಿ ||ಕ್ಷಣ ಮುನ್ನರಿಯದೆ ಅದರ ಆಹಾರಕೆ |ಫಣಿಯ ಮೆಟ್ಟಿದನ ಕುಣಿಸಿದರಯ್ಯ 3ಮಾವನೊಡನೆ ಮನೆಮಾಡಿ ಗೋಕರ್ಣದಿ |ಆ ವುರಗನ ಮೇಲ್ಮಲಗಿದನ ||ಮೂವರ ಮೊಲೆಯುಂಡ ಮೂಲೋಕವರಿಯದ |ಮೂವರಣ್ಣನೆಂದು ಕುಣಿಸಿದರಯ್ಯ 4ಗೋಕುಲದೊಳಗಿನ ಗೋಪಿಯರೆಲ್ಲ |ಏಕಾಂತದಿ ತಮ್ಮೊಳು ತಾವು ||ಶ್ರೀಕಾಂತನ ನಮ್ಮ ಪುರಂದರವಿಠಲನ |ಏಕ ಮೂರುತಿಯೆಂದು ಕುಣಿಸಿದರಯ್ಯ 5
--------------
ಪುರಂದರದಾಸರು
ಹರಿಯೆಂದು ಮನದಲ್ಲಿ ಮರೆದೊಮ್ಮೆ ನೆನೆದರೆ |ದುರಿತಪರ್ವತ ಖಂಡಿಪುದು ವಜ್ರದಂತೆ ಪ.ಮೇರು ಸುವರ್ಣದಾನವ ಮಾಡಲು ಪುಣ್ಯ |ನೂರು ಕನ್ಯಾದಾನವ ಮಾಡಲು ||ಧಾರಿಣಿಯೆಲ್ಲವ ಧಾರೆಯ ನೆರೆಯಲು ||ನಾರಾಯಣ ಸ್ಮರಣೆಗೆ ಸರಿಬಹುದೆ ? 1ಹತ್ತುಲಕ್ಷ ಗೋದಾನ ಮಾಡಲು ಪುಣ್ಯ - |ವ್ರತಗಳಅನುದಿನ ಆಚರಿಸಲು ||ಶತಕೋಟಿ ಯಜÕನ ಮಾಡಲು ಲಕ್ಷ್ಮೀ - |ಪತಿನಾಮ ಸ್ಮರಣೆಗೆ ಸರಿಯೆನ್ನಬಹುದೆ 2ಗಂಗೆ ಕಾಳಿಂದಿ ಗೋದಾವರಿ ಕಾವೇರಿ |ತುಂಗಭದ್ರೆಯಲಿ ಸ್ನಾನವ ಮಾಡೆ ||ಮಂಗಳಮೂರುತಿ ಪುರಂದರವಿಠಲ |ರಂಗನ ಸ್ಮರಣೆಗೆ ಸರಿಯೆನ್ನಬಹುದೆ ? 3
--------------
ಪುರಂದರದಾಸರು
ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು
ಹಸಿವು ಬಹಳಾಗುತ್ತಿದೆ ಕೇಳಮ್ಮಯ್ಯಹಸನಾಗಿ ಉಣಬಡಿಸೇ ಪಬಿಸಿ ಬಿಸಿ ಕಡುಬು ಕಜ್ಜಾಯ ದೋಸೆಯು ಹುಗ್ಗಿಹಸನಾಗಿ ಬಡಿಸಮ್ಮ ಬಿಸಿ ಬಿಸಿಪರಮಾನ್ನಅ.ಪನೀರೊಳು ಮುಳುಗಿ ಬಂದೆ ಭಾರವ ಪೊತ್ತುಕೋರೆಲಿ ಧರಣಿ ತಂದೆಪೋರನೊಡನೆ ವೈರಿಯಾದ ದೈತ್ಯನ ಕರು-ಳ್ಹಾರವ ಮಾಡುತ್ತಭಾಳಬಳಲಿ ಬಂದೆ1ಪೊಡವಿ ದಾನವ ಬೇಡಿದೆ ರಾಜರ ಗೆದ್ದುಕೊಡಲಿ ಕಯ್ಯಲಿ ಪಿಡಿದೆಮಡದಿಯನರಸುತ ಅಡವಿಗಳ ಚರಿಸಿದೆಬಿಡದೆ ದೈತ್ಯರ ಸದೆ ಬಡಿದು ದಣಿದು ಬಂದೆ 2ವಿಷವನುಣಿಸಿದ ದೈತ್ಯಳ ಅಸುವನೆ ಹೀರಿಅಸುರ ಶಕಟನ ಸೀಳಿದೆವಸುದೇವ ಸುತನು ಈ ಅಸುರ ಮರ್ದನನಾಗಿಬಸುರೊಳು ಬ್ರಹ್ಮಾಂಡ ಧರಿಸಿದ ಕಾರಣ 3ಕಿಚ್ಚನುಂಗಿದ ಕಾರಣ ಹೊಟ್ಟೆಯ ಹಸಿವುಹೆಚ್ಚುತಲಿದೆ ನೋಡಮ್ಮಾಕಚ್ಚ ಬರುತಿಹ ಕಾಳಿ ಸರ್ಪನ ಹೆಡೆ ಮೇಲೆನರ್ತನ ಮಾಡುತಭಾಳಬಳಲಿ ಬಂದೆ4ಬತ್ತಲೆ ತಿರುಗಿ ಬಂದೆ ತೇಜಿಯನೇರಿಸುತ್ತಿದೆ ಧರಣಿಯನುಕರ್ತೃ ಶ್ರೀಹರಿಕಮಲನಾಭ ವಿಠ್ಠಲನಿಗೆತೃಪ್ತಿಯ ಪಡಿಸಮ್ಮ ಮುಕ್ತಿಪಥವನೀವೇ 5
--------------
ನಿಡಗುರುಕಿ ಜೀವೂಬಾಯಿ
ಹಿಗ್ಗುವೆಯೇಕೊ - ಏ ಮನುಜಾಹಿಗ್ಗುವೆಯೇಕೊ ಅಹಿಗ್ಗುವ ತಗ್ಗುವ ಮುಗ್ಗುವ ಕುಗ್ಗುವಅಗ್ನಿಯೊಳಗೆ ದಗ್ಧವಾಗುವ ದೇಹಕೆ ಅಪಸತಿ ಪುರುಷರು ತಮ್ಮ ರತಿಕ್ರೀಡೆಗಳ ಮಾಡೆಪತವಾದಿಂದ್ರಿಯ ಪ್ರತಿಮೆಯ ದೇಹಕೆ 1ತೋರುವುದೊಂಬತ್ತು ದಾರಿಯ ಮಲವಾದನೀರಿಲ್ಲದಿದ್ದರೆ ನಾರುವ ದೇಹಕೆ 2ಆಗದ ಭೋಗದ ಆಗು ಮಾಡುತಲಿಪ್ಪರೋಗಬಂದರೆ ಬಿದ್ದು ಹೋಗುವ ದೇಹಕೆ 3ನರರ ಸೇವೆಯಮಾಡಿ ನರಕ ಭಾಜನನಾಗಿಮರಳಿ ಮರಳಿ ಹುಟ್ಟಿ ನರಳುವ ದೇಹಕೆ 4ಪುರಂದರವಿಠಲನಚರಣ ಕಮಲಕೆಎರಗದೆ ಇರುತಿಪ್ಪ ಗುರುವಿನ ದೇಹಕೆ 5
--------------
ಪುರಂದರದಾಸರು
ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು
ಹೇಳಲಾಗದು ತತ್ವ ಹೇಳಲಾಗದು ಜ್ಞಾನಖೂಳಮೂಳರಾದ ಕುಹಕಿಗಳಿಗೆಪನಾರುತಿಹ ತೊಗಲನು ಕಡಿದನಾಯಿ ಮುಖದ ಮುಂದೆದಾರವಟ್ಟದಲಿ ತುಪ್ಪವ ನೀಡಲು ಅರಿವುದೆಘೋರಸಂಸಾರ ವಿಷಗಟ್ಟಾಗಿ ಹಿಡಿದವಗೆಸಾರಬೋಧೆಯನರಿಯಲು ತಿಳಿಯುವುದೇ1ಗೊಜ್ಜಲ ತೃಣವನು ತಿಂಬ ಗಾರ್ಧಭನ ಮುಂದೆಸಜ್ಜಿಗೆಯ ತಂದಿಡಲಿಕೆ ಅದನರಿವುದೆಲಜ್ಜೆಯಹ ನಾನಾ ಮೋಹ ಪಾಶಲಿಪ್ಪರಿಗೆಸಜ್ಜನ ಶಾಸ್ತ್ರವನೊರೆಯಲದು ತಿಳಿವುದೇ2ದೊಡ್ಡಕ್ಕಚ್ಚನೆ ಕುಡಿವ ಗೊಡ್ಡೆಮ್ಮೆಯ ಮುಂದಕೆಲಡ್ಡುಗೆಯ ತಂದಿಡಲಿಕೆ ಅದನು ತಿಳಿವುದೇದಡ್ಡ ಬುದ್ಧಿಯು ಬಲಿತು ದೊಡ್ಡನಾದವಗೆದೊಡ್ಡ ಚಿದಾನಂದ ಬ್ರಹ್ಮವು ತಿಳಿವುದೇ3
--------------
ಚಿದಾನಂದ ಅವಧೂತರು
ಹ್ಯಾಂಗೆ ಶೋಭಿಸುವ ನೋಡೆ ಯಾದವ ಕೃಷ್ಣಹ್ಯಾಂಗೆ ಶೋಭಿಸುವ ನೋಡೆ ಪಮಂಗಳ ಮಹಿಮ ಶ್ರೀರಂಗ ತನ್ನವರಿಗೆ ಅ.ಪಘಲುಘಲು ಘಲುರೆನ್ನುತ ಕಾಲ್ಗಡಗ ನೂ-ಪುರಗೆಜ್ಜೆ ಸರಪಣಿಯುಸರಿಗೆಳೆಯರ ಕೂಡಿ ಮುರಳಿಯ ಧರಿಸುತಹರುಷದಿಂದಲಿ ಸಪ್ತಸ್ವರಗಳ ನುಡಿಸುತ್ತ 1ಉಟ್ಟ ಪೀತಾಂಬರವು ನಡುವಿಗೆ ಜರದಪಟ್ಟೆಯ ಚಲ್ಲಣವುಗಟ್ಟಿ ಕಂಕಣ ಕೈಗಳಿಟ್ಟು ಕಟಿಯ ಮೇಲೆಭಕ್ತವತ್ಸಲ ಸ್ವಾಮಿ ಸೃಷ್ಟಿಪಾಲಕ ಕೃಷ್ಣ 2ಎಳೆ ತುಳಸಿಯ ಮಾಲೆಯು ಕಂಠದಿ ಮೆರೆವಪದಕಕೌಸ್ತುಭಮಣಿಯುನಳಿನಲೋಚನೆಯ ಉರದಲ್ಲಿ ಧರಿಸಿಕೊಂಡುಚಲುವ ಚನ್ನಿಗನಾಗಿ ಹೊಳೆಯುವ ದೇವನು 3ಕೋಟಿ ಸೂರ್ಯರ ಸೋಲಿಪ ಮುಖಕಾಂತಿಯಸಾಟಿಯಾರುಂಟವಗೆನೀಟಾಗಿ ಕರ್ನಕುಂಡಲ ಕಿರೀಟವು ಹೊಳೆಯೆಲಲಾಟದಿ ಕಸ್ತೂರಿ ತಿಲುಕವು ಹೊಳೆಯುತ್ತ 4ಕಂಗಳ ಕುಡಿನೋಟದಿ ಸಜ್ಜನರ ಪಾ-ಪಂಗಳ ಪರಿಹರಿಸಿಮಂಗಳ ಮಹಿಮ ಶ್ರೀರಂಗ ಮೂರುತಿ ಸಾಧುಸಂಗ ವಂದಿತಸಿರಿಕಮಲನಾಭ ವಿಠ್ಠಲ5
--------------
ನಿಡಗುರುಕಿ ಜೀವೂಬಾಯಿ