ಒಟ್ಟು 8009 ಕಡೆಗಳಲ್ಲಿ , 129 ದಾಸರು , 4271 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಗನೆ ಬಾರೊ ಶ್ರೀ ಹರಿಯನೆ ತೊರೋ ಶ್ರೀ ಗುರುವೇ ದಯದಿ ಪ. ಬೇಗನೆ ಬಾರೊ ಯೊಗಿಗಳೊಡೆಯ ನಾಗಶಯನ ಪ್ರೀತ ತ್ವರಿತದಿ ಅ.ಪ. ಭಕ್ತರೆಲ್ಲರು ನಿಮ್ಮ ದಾರಿಯನೆ ನೋಡುತಾ- ಸಕ್ತಿಯಿಂದಿರುತಿಹರೊ ಮೋದ ಗುರುವೆ ನಿಮ್ಮ ಶಕ್ತಿಗೆ ಎದುರ್ಯಾರೊ ಧರೆಯೊಳು 1 ಕಾಣದೆ ಕಂಗಳು ಕಾತರಗೊಳ್ಳುತ ತ್ರಾಣಗೆಡುತಲಿಹವೊ ಪ್ರಾಣವ ರಕ್ಷಿಪ ಪ್ರಾಣಪತಿಯ ಪ್ರಿಯ ಕಾಣೆ ನಾನನ್ಯರನಾ ಜಗದೊಳು 2 ಪರಮಪ್ರಿಯರು ಎಂದು ಪರಮ ಬಿರುದು ಪೊಂದಿ ಪರಮಾತ್ಮನನು ಕಂಡು ಪರಮಾತ್ಮ ತತ್ವ ಪರಮಯೊಗ್ಯರಿಗರುಹಿ ದುರಿತ ತ್ವರಿತದಿ 3 ಕಮಲಾಕ್ಷನನು ಹೃತ್ಕಮಲದಲಿ ಕಾಂಬ ಕಮಲಾಪ್ತ ಅತಿ ಪ್ರೀತ ಕಮಲಸಂಭವಪಿತ ಕಮಲಾಕ್ಷ ಹರಿಯ ಹೃ ತ್ಕಮಲದಲಿ ತೋರೋ ಗುರುವರ 4 ಗೋಪಾಲಕೃಷ್ಣವಿಠ್ಠಲನ ಸೌಂದರ್ಯದ ರೂಪವೆನಗೆ ತೋರೊ ತಾಪವ ಹರಿಸುತ ಕಾಪಾಡಬೇಕೆಂದು ನಾ ಪ್ರಾರ್ಥಿಸುವೆ ಗುರುವೆ ತ್ವರಿತದಿ 5
--------------
ಅಂಬಾಬಾಯಿ
ಬೇಡ ಬೇಡ ಹೋಗೆಂದು ಕಾಡದಿರು ಕೃಪೆಯೊಂದ ಬೇಡದಿರಲಾರೆ ಮಾಂಗಿರಿಯರಂಗ ಪ ಬೇಡುವನ ಕೈ ಕೀಳು ನೀಡುವನ ಕೈ ಮೇಲು ಬೇಡಿದಲ್ಲದೆ ಕೃಪೆಯ ಮಾಡನೈರಂಗಾ ಅ.ಪ ಗಾನಕೆ ನಲಿಯುವೆಯೋ ಧ್ಯಾನಕೆ ಒಲಿಯುವೆಯೋ ಜ್ಞಾನಕೆ ಸಿಗುವೆಯೋ ನಾನರಿಯೆನು ಗಾನದರಿವೆನಗಿಲ್ಲ ಧ್ಯಾನಮಾಡುವನಲ್ಲ ಜ್ಞಾನಾನುಭವವಿಲ್ಲ ಆಧಾರವಿಲ್ಲ 1 ನೀನೆನ್ನ ಕಡೆಗಣಿಸಿ ಹೀನ ಹೋಗೆಂದೆನಲು ನಾನಳುವೆನನವರತ ಶ್ವಾನದಂತೆ ಸೂನು ಬಾ ಬಾರೆಂದು ಸಾನುರಾಗದಿ ರಮಾದೇವಿ ಸಂತೈಪಳು 2 ಎನ್ನಮ್ಮ ಕೃಪೆಯಿಂದ ನಿನ್ನ ಕಾಲ್ವಿಡಿಯೆಂದು ಎನ್ನ ಕಳುಹುತ ನಿನಗೆ ಎನ್ನ ತೋರ್ದು ಎನ್ನನತಿಕೃಪೆಯಿಂದ ಮನ್ನಿಸೆನ್ನುವಳಾಗ ನಿನ್ನ ಕೃಪೆ ಯೆನಗುಂಟು ಮಾಂಗಿರೀಶಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡವೋ ಸ್ತ್ರೀಯರ ವಶದಲಿಬಿದ್ದು ಭವಕೆ ಬೀಳಲಿ ಬೇಡ ಪ ಒನಪುಗಳ ಸುಳ್ಳು ವಾಲಿಗಲು ಸಟೆವೈಯ್ಯಾರ ನಚ್ಚಲಿ ಬೇಡ 1 ಮೋರೆ ಮುರುಕಿ ಪದಮೂಗನೇರಿಸುವುದು ಮುಸುಕನು ನೀ ನಚ್ಚಬೇಡಸೀರೆಯನೊಲೆಯುವುದು ಸೆರಗನು ಸಡಿಲಿಪನಾರಿಯ ನಂಬಲು ಬೇಡ 2 ನರಕದ ಕುಂಡವು ನಾರಿಯೆಂಬವಳು ಸತ್ಯ ನೋಡುತ ನೀ ಬೀಳಬೇಡಕರುಣಿ ಚಿದಾನಂದ ಕಟಾಕ್ಷವನು ಪಡೆ ಕಾಲಗೆ ನೀ ಸಿಕ್ಕಬೇಡ 3
--------------
ಚಿದಾನಂದ ಅವಧೂತರು
ಬೇಡವೋರಂಗ ಹೆಂಗಳ ತಳ್ಳಿ ಹೋಗ ಬೇಡವೋನಾ ಬೇಡಿ ಕೊಂಬೆನುದಮ್ಯಯ್ಯ ಪ ಊರೊಳಗೆಲ್ಲ ನಿನ್ನಯ ದೂರೇ ರಂಗ ಬಾರೋ ನಿನ್ನನು ಕಾಣದಿರಲಾರೆ ಯಾರಿಗೆಂಬೆನು ಗೋಕುಲದೊಳಗಿರ್ದ ನಾರಿಯರೆಲ್ಲರು ಕಿವಿಗೆಡಸಿದರೆನ್ನ 1 ಚಿಕ್ಕವನಾಗಿ ನೀನಿರುತಿರೆ ಹೆಣ್ಣು ಮಕ್ಕಳ ಮೇಲÉ ಕಣ್ಣಿಡುವರೆ ಪೊಕ್ಕು ಪಾಲ್‍ಬೆಣ್ಣೆಯ ಕದ್ದರೆ ಗೋಪರ ಮಕ್ಕಳು ಕಂಡರೆ ಪ್ರಾಣವ ತೆಗೆವರು 2 ಎಲ್ಲ ಜೀವರಿಗೂ ನೀಹಿತನಾಗಿ ಪ್ರೀತಿಯಲ್ಲಿರು ಭಾರಿ ಪುರುಷನಾಗಿ ಹಲ್ಲ ಕಡಿದಿಹರಂತೆ ಗೋಪರು ಮಾನಕೊಳ್ಳಲು ಯತ್ನವ ಮಾಡಿ ಕೊಂಡಿಹರಂತೆ 3 ಕಂಡರೆ ಹಿಡಿದು ಕಟ್ಟುವರಾಗಿ ಪುಂಡ ನಿಲ್ಲಿಸ ಬೇಕೆನುತ್ತೆಲ್ಲಿ ಗೋಪರು ಕಂಡಿ ಕಣೆವೆ ಕಟ್ಟಿಕೊಂಡು ಸಾಧಿಪರಂತೆ 4 ಪಾಲು ಬೆಣ್ಣೆಯ ಕದ್ದು ಮೆಲುವರೆ ಕೃಷ್ಣ ಬಾಲೆಯರನು ಗೋಳು ಹೊಯ್ವರೆ ನಿ ನ್ನಾಲಯದೊಳಗೇನು ಕಡಿಮೆಯಾಗಿದೆ ಲಕ್ಷ್ಮೀಲೋಲನ ದಯದಿಂದ ಸಕಲ ಸಂಪತ್ತಿದೆ 5
--------------
ಕವಿ ಪರಮದೇವದಾಸರು
ಬೇಡಿಕೆಗೆ ಮಿತಿಯಿಲ್ಲ ಬೇಡಿಕೆಗೆ ಕೊನೆಯಿಲ್ಲ ಬೇಡಿ ಬದುಕುವುದೊಂದು ರೋಗವಯ್ಯ ಪ ರೂಢಿಗೊಡೆಯನ ದಿವ್ಯನಾಮಗಳ ಕೊಂಡಾಡಿ ಹಾಡುವವಗೆ ರೋಗಭಯವಿಲ್ಲವಯ್ಯಾ ಅ.ಪ ಬೇಡುವವ ಮನೆಮನೆಗೆ ಓಡೋಡಿ ನಿಲಬೇಕು ನಾಡಿಗರ ನೋಡಿ ಕೈ ನೀಡಬೇಕು ನೋಡಿದರೆ ಕಟ್ಟಾಳು ಬೇಡುವೆ ಹೋಗತ್ತ ದುಡಿ ಗೇಡಿ ಎಂದಾಗ ಗೋಳಾಡಲೇಕಯ್ಯ 1 ಕಂಡ ಕಂಡವರಿಗೆಲ್ಲ ಕೈಮುಗಿದು ಮಂಡೆಯ ಬಾಗಿ ಭಂಡನೆಂದೆನಿಸುವುದು ಮಾನಭಂಗ ಪುಂಡರೀಕಾಕ್ಷ ಗೋವಿಂದ ನಾಮವ ಹಾಡಿ ಕೊಂಡಾಡಲೊದಗುವನು ಮಾಂಗಿರಿಯರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಿಕೊಂಬೆನೊ ಶ್ರೀಹರಿಯೆ ನಿಮ್ಮ ಅಡಿಯ ಮರೆಯೆನೊ ಪ ಬೇಡಿಕೊಂಬೆನಯ್ಯ ನಿಮ್ಮ ಅಡಿಯಪಿಡಿದು ಬಿಡದೆ ನಾನು ಗಡನೆ ಎನ್ನ ಕಡುದಾರಿದ್ರ್ಯ ಕಡಿದು ಬಯಲು ಮಾಡಿ ಹರಿಯೇ ಅ.ಪ ದೈತ್ಯಶಿಕ್ಷಕ ಚಿತ್ತಜತಾತ ಭಕ್ತರಕ್ಷಕ ಅ ನಾಥ ಪ್ರೀತ ಮುಕ್ತಿದಾಯಕ ಸತ್ಯಸಂಧನನ್ನು ಮಾಡಿ ಮತ್ರ್ಯಭೋಗದಾಸೆಬಿಡಿಸಿ ನಿತ್ಯನಿರ್ಮಲಾತ್ಮ ನಿಮ್ಮ ಭಕ್ತಿಯಿತ್ತು ಸಲಹೊ ಹರಿಯೆ 1 ಶ್ಯಾಮಸುಂದರ ಸ್ವಾಮಿ ಭಕ್ತಪ್ರೇಮ ಮಂದಿರ ರಮಾ ಸತ್ಯಭಾಮಾ ಮನೋಹರ ಪಾಮರತ್ವ ತಾಮಸ ದುಷ್ಕಾಮಿತಂಗಳ್ಹರಿಸಿ ನಿಮ್ಮ ನಾಮಜಪವು ತಪದೊಳಿರಿಸಿ ಪ್ರೇಮದಿಂದ ಸಲಹೊ ಹರಿಯೆ2 ಪದುಮನಾಭನೆ ಸದಮಲಾಂಗ ಒದಗುಬೇಗನೆ ಈ ವಿಧದಿ ಬೇಡ್ವೆ ಸುದಯವಂತನೆ ಸುದತಿ ಮಾಡಿದಂಥ ಪದದ ಕೃಪೆಯನಿತ್ತು ಎನ್ನ ಮುದದಿ ಸಲಹು ಸಿರಿಯರಾಮ 3
--------------
ರಾಮದಾಸರು
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಬೇಡುತಿರ್ದೆನು ಕರುಣದಿ ನೋಡು ವರವನು ನೀಡು ಪ ಅನ್ನಪೂರ್ಣೆ ಸುಗುಣಪೂರ್ಣೆ ನಿನ್ನನು ಹೊರತು ಅನ್ಯರ ಕಾಣೆ 1 ಶರ್ವಜಾಯೆ ಶುಭ್ರಕಾಯೆ ಸರ್ವಮಂಗಳೆ ಗುಹ ಗಣಪರ ತಾಯೆ 2 ಮಾರ ಜನನಿ ಪ್ರಿಯನ ಭಗಿನಿ ಸಾರಿದ ಶರಣರ ಪೊರೆವ ಭವಾನಿ 3
--------------
ಲಕ್ಷ್ಮೀನಾರಯಣರಾಯರು
ಬೇಡುವರೊ ಸುಖ ಬೇಡರೊ ದುಃಖವ | ಮಾಡಾರೋ ಅವರ ಉಪಾಯವ | ಜನ | ಬೇಡುವರೋ ಪ ಇಟ್ಟಿಕಲ್ಲನು ತಂದು ಕಿಟ್ಟಿ ಬೀಸುವರೊ | ಕುಟ್ಯಾರೋ ರಂಗವಲ್ಲಿಯಾ | ಜನ 1 ಸಾಲು ಸಾಲೆಮ್ಮೆಯ | ಸೋಲದೆ ತೊಳೆವರು | ಸಾಲಿಗ್ರಾಮಕ್ಕ ಹಾಲೆರೆಯರೊ | ಜನ | 2 ತ್ರಿಜಗವಂದಿತ ನಮ್ಮ ವಿಜಯವಿಠ್ಠಲನ | ಭಜನೆಯಾ ಮಾಡದೆ ಸೋಲ್ವರೋ | ಜನ | 3
--------------
ವಿಜಯದಾಸ
ಬೇಡುವರೋ ಬೇಡುಣುತಿಹ್ಯರೋ ಬೇಡಿ ಬೇಡದಂತೆ ನಾಡೊಳ್ಹರಿದಾಸರು ಪ ಕೊಟ್ಟರೆ ಶ್ಲಾಘನೆ ಮಾಡರೊ ಕೊಡದಿದ್ದರೆ ಸಿಟ್ಟಿಗೆ ಬಾರರೊ ಕೊಟ್ಟಕೊಡವದರೆಲ್ಲ ಅಷ್ಟೆಯೆಂದೆನ್ನುತ ಸೃಷ್ಟಿಗೀಶನ ಘಟ್ಟ ತಿಳಿದಿಹ್ಯರೂ 1 ಸಂಚಿತದಿಂ ಜನ್ಮ ತಾಳಿಹ್ಯರೂ ವಿ ರಂಚಿಪಿತಗೆ ಭಾರಹೊರಿಸಿಹ್ಯರೊ ಹಂಚಿಕಿಯಿಂದ ನಿರ್ವಂಚಿತರಾಗಿ ಬಂದ ಸಂಚಿತಾದಡಾಗಮ ಗೆಲಿಯುವರೊ 2 ಕಾಮಿತಗಳೆಲ್ಲ ಕಡೆದಿಹ್ಯರು ಈ ಭೂಮಿಸುಖಕೆ ಮನಮೋಹಿಸರೊ ನೇಮದಿಂದ ಮಹ ಕ್ಷೇಮವಾರಿಧಿ ಸ್ವಾಮಿ ಶ್ರೀರಾಮ ಪಾದಕ್ಹೊಂದಿಹ್ಯರೊ 3
--------------
ರಾಮದಾಸರು
ಬೇಡುವುದಿಲ್ಲನ್ಯ ನಾನೇನು ನಿನ್ನ ನೋಡಿ ಕರುಣದಿ ಬಾರೋ ಭಜಕನ ತ್ರಾಣ ಪ ಬೇಡುತಕ್ಕುದನೆ ನಾ ಬೇಡುವೆನೆಲೆ ಸ್ವಾಮಿ ನೀಡುತಕ್ಕುದನೆ ನೀ ನೀಡಿ ಕಾಪಾಡಯ್ಯ ಮೃಡಮಿತ್ರ ಜಡಜಾಕ್ಷ ಒಡೆಯ ವೈಕುಂಠ ಅ.ಪ ಎನ್ನಮನೆ ಬಾಗಿಲವ ಕಾಯೆನ್ನದಿಲ್ಲ ಎನ್ನುಳಿಸು ತಂದೆಯನು ತರಿದೆನ್ನದಿಲ್ಲ ಅಣ್ಣನ್ನ ಕೊಲ್ಲಿರಾಜ್ಯಕೊಡು ಎನ್ನದಿಲ್ಲ ಎನ್ನ ಮನೆಯಾಳಾಗಿ ದುಡಿಯೆನ್ನದಿಲ್ಲ ನಿನ್ನ ದಾಸರ ಸಂಗವನ್ನು ಕರುಣಿಸಿ ಎನ್ನನನ್ಯರಿಗೆ ಬಾಗಿಸೆ ಮನ್ನಿಸಿ ಸಲಹೆಂಬೆ ಭಿನ್ನವೇನಿದರೊಳು ಉನ್ನತಮಹಿಮ 1 ಲಲನೆಯಳ ಕೊಡಿಸಣ್ಣನ್ಹೊಡಿದೆನ್ನದಿಲ್ಲ ಬಲವಾಗೆನ್ನಯ್ಯ ಬಂಧುಗಳ ನಾಶಕೆನ್ನೊದಿಲ್ಲ ಬಲಿದೆನ್ನಿಂ ತವ ಭಕ್ತ ನೋಡಿಸೆನ್ನದಿಲ್ಲ ಸುಲಭದೆನ್ನಿಂದ್ಹೆಡಮುರಿ ಕಟ್ಟಿಸಿಕ್ಕೆನ್ನದಿಲ್ಲ ಎಲೆದೇವ ತವಪಾದನಳಿನ ನಿರ್ಮಲಧ್ಯಾನ ನಿಲಿಸು ಸ್ಥಿರವಾಗೆನ್ನ ನಾಲಗೆಯೊಳನುದಿನ ಇಳೆಭೋಗದಳಸದೆ ಸಲೆ ಸುಖದಿ ಸಲಹೆಂಬೆ 2 ಭಿನ್ನವಿಲ್ಲದೆ ಬಾ ನೀ ಕರೆದಲ್ಲಿಗೆನೆನು ಎನ್ನ ಹೊಡೆತದ ಪೆಟ್ಟು ಸೈರಿಸೆಂದೆನೆನು ಉನ್ನತ ಕುಲಗೆಡು ಎನ್ನೊಳುಂಡೆನೆನು ಅನ್ಯಮಾತೊಂದು ನಿನ್ನ ಬಯಸಿ ಬೇಡೆನು ನಾನು ಅನ್ಯರನು ಬೇಡದಂತುನ್ನತ ಪದ ನೀಡಿ ನಿನ್ನ ಮೂರುತಿಯೆನ್ನ ಕಣ್ಣೊಳು ನಿಲ್ಲಿಸಿ ಬನ್ನಬಡಿಸದೆ ಕಾಯೊ ಎನ್ನಯ ಶ್ರೀರಾಮ 3
--------------
ರಾಮದಾಸರು
ಬೇಡುವುದೂ ಬಲು ಕಷ್ಟ ಪ ನೀಡದಿದ್ದವನೇ ನಷ್ಟ ಅ.ಪ. ನಾಚಿಕೆ ಎಲ್ಲನು ತೊರೆದು ಮಹಾ ನೀಚರಿಗೆ ಬಾಯ್ತೆರದು 1 ಕೊಟ್ಟಾರೆಂಬ ದುರಾಶಾ ಕ್ರಿಯಾ ಭ್ರಷ್ಟರರಿಯರೂ ಕ್ಲೇಶಾ 2 ಚಿತ್ತವೃತ್ತಿಯನು ಕಂಡೂ ಅಧಮರ ಹೊತ್ತುಹೊತ್ತಿಗೆ ಕಾಣಿಸಿಕೊಂಡು 3 ಗುಣಹೀನರ ಕೊಂಡಾಡೀ ಬಂದು ಕ್ಷಣಕ್ಷಣಕವರನು ನೋಡೀ 4 ಶ್ರೀದವಿಠಲನ ಬಿಟ್ಟೂ ಅಧಮಾಧಮರಿಗೆ ದೈನಬಟ್ಟು 5
--------------
ಶ್ರೀದವಿಠಲರು
ಬೇಡುವೆನೋ ಗೋವಿಂದಾ ಬೇಡಬೇಡವೀ ಬಂಧ ಪ ಪಾಡಿಪಾಡಲಾನಂದಾ ನೋಡಿ ನೋಡಲತ್ಯಾನಂದ ಅ.ಪ ಕಡವರವೀಯಬೇಡ ಪೊಡವಿಯ ಸುಖಬೇಡ ಕಡುಲೋಭ ಮೋಹಬೇಡ ದೃಢ ಭಕ್ತಿಯನು ಮಾತ್ರ 1 ನರಕದ ಬಾಧೆಯು ಪರಿಹರಿಸಲು ಬೇಡ ನಿರುತ ನಿಮ್ಮಯ ನಾಮ ಸ್ಮರಣೆ ಸುಖವು ಮಾತ್ರ 2 ಜನನ ಮರಣಗಳ ಕೊನೆಗಾಣಿಸಲಿ ಬೇಡ ಅನಿತು ಜನುಮದಿ ನಿನ್ನ ನೆನೆವ ಬುದ್ಧಿಯು ಮಾತ್ರ 3 ಮಾಂಗಿರಿಯರಸನೆ ತುಂಗ ಕೃಪಾಂಗನೆ ಹಿಂಗದೆ ನೀನೆನ್ನಂತರಂಗದೊಳಿರುವುದ ಮಾತ್ರ4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಸಾಯ ಮಾಡಬೇಕು ಬೇಸಾಯ ಮಾಡಬೇಕು ಪ ಹೃದಯವೆಂಬ ಕ್ಷೇತ್ರದಲಿ ಬೇಸಾಯ ಮಾಡಬೇಕು ಅ.ಪ ಮಧ್ವಾಚಾರ್ಯರವರ ಗ್ರಂಥಗಳೆಂಬ ಸರೋವರ ತುಂಬಿಹುದು ಬುದ್ಧಿ ಜಲವ ವರಗುರುಗಳೆಂಬ ತೂಬಿನಲಿ ತರಲಿಬೇಕು ಶುದ್ಧ ಧರ್ಮದಾಚರಣೆಗಳೆಂಬ ನೇಗಿಲ ಪಿಡಿಬೇಕು ಪರಿ ನೆಲವನುಳಲಿಬೇಕು 1 ತತ್ವಜಲವು ಹರಿದೋಡದ ಪರಿಯಲಿ ತೆವರಿ ಹಾಕಬೇಕು ಸುತ್ತಲು ದುರ್ಜನ ನರಿಗಳ ತಡಿಯಲು ಬೇಲಿ ಹಾಕಬೇಕು ಉತ್ತಮ ರೀತಿಯ ಭಕುತಿ ಪೈರುಗಳ ನಾಟಿ ಮಾಡಬೇಕು ಮತ್ತೆ ಪೈರುಗಳು ಒಣಗದಂತೆ ಜಲವನು ಹಾಯಿಸುತಿರಬೇಕು 2 ಬೆಳೆಯುವ ವಿಷಯದ ಅನುಭವದಾಸೆಯ ಕಳೆಯು ಕೀಳಬೇಕು ಕೊಳೆವೆಯ ರೋಗಕೆ ಸಜ್ಜನ ಸಂಘದ ಔಷಧಿ ಕೊಡಬೇಕು ಕಲಿಪುರುಷನ ತಲೆಯೆಂಬ ಗೊಬ್ಬರವ ತುಳಿಯುತಲಿರಬೇಕು ಕುಳಿತೆಡೆಯಲಿ ವರಭಕುತ ಪ್ರಸನ್ನನು ಕೊಡುವ ಮುಕುತಿ ದವಸ 3
--------------
ವಿದ್ಯಾಪ್ರಸನ್ನತೀರ್ಥರು
ಬೈಯದವನಿಗಿಂತಲೂ ಬೈಯುವವನೇ ಮೇಲು ಹೊಯ್ಯದವಗಿಂತಲೂ ಹೊಯ್ಯುವವನೆ ಮೇಲು ಪ ಬಾಯೆನಲು ಬರಲೊಲ್ಲೆ ಮಾಯಾಕಾರ ನಿನ್ನಅ.ಪ ಒಬ್ಬ ಧರಣಿಯನೊಯ್ದ ಒಬ್ಬ ಖಡ್ಗವ ಹಿಡಿದ ಒಬ್ಬ ಧರಣಿಯನೆ ಕದ್ದ ಒಬ್ಬ ಬೈದಾ ಉಬ್ಬಿ ನೀ ಸಂತಸದಿ ಅಬ್ಬರಿಸಿ ಪರಿದೈದೆ ಒಬ್ಬೊಬ್ಬರಿಗೂ ದಿವ್ಯ ದರ್ಶನವನು 1 ಜಾರನೆಂದರು ಕೆಲರು ಚೋರನೆಂದರು ಕೆಲರು ಪೋರನಿವನೆಂದರು ನಾರಿಯರು ಪಲರು ಆರೇನ ಬೈದರೂ ದೂರಿ ನಿಂದಿಸಿದರೂ ಸ್ಮರಿಸಿದಾ ನಿಮಿಷಾರ್ಧ ಹರಿ ನಿನ್ನ ಭಕ್ತರ 2 ಇರಬಹುದು ಹಸಿವು ಬಾಯಾರಿಕೆಗಳಿಂದ ಅರಿವು ನಿದ್ರಾ ನೀರಡಿಕೆಗಳ ತೊರೆದು ಅರಸುವಾ ಸಮಯದಲಿ ಬರುವೆ ನೀನದರಿಂದ 3 ಇಳೆಯನೇ ತೆತ್ತವನ ತುಳಿದು ಕೈಸೆರೆ [ಮಾಡ್ದೆ] ಹಳಿದು ನಿಂದಿಸಿದವನ ಬಳಿಗೆ ಹೋದೆ ಮುಳಿಸಿನಿಂದೊದ್ದವನ ಕಾಲುಗಳ ನೀತೊಳೆದೆ ಹಳಿವು ಬೈಗಳು ನಿನಗೆ ಹಿತವು ಮಾಂಗಿರಿಯ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್