ಒಟ್ಟು 4950 ಕಡೆಗಳಲ್ಲಿ , 127 ದಾಸರು , 3086 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇಂಕಟೇಶನೆ ಎನ್ನಾ ಪಾಲಿಪುದೊ ಹರಣ ಪ ಪಂಕಜೋದ್ಭವ ಹರ ವಂದ್ಯ ಪರಾತ್ಪರ ನಿಖಿಲಾಗಮೈಕವಿಜ್ಞೇಯ ಲೋಕೋದ್ಧಾರ ಅ.ಪ ವತ್ಸರ ಬ- ಹುಧಾನ್ಯ ಸಂದ ಶುಕ್ಲ ದ್ವಿತೀಯ ಸಂಧ್ಯಾಸವನ ಬಂದು ಕೀರ್ತನ ಸೇವಾ- ನಂತರದಿ ಎನ್ನಾ ಮಂದಿರದೊಳು ಸುಪ್ತಾವಸ್ಥೆ ಯಿಂದಿರಲಾಗ ಅಂದು ಕಡೆಯ ಯಾ- ಮದಿ ತೈಜಸನೆ ನೀ ಹಂಸರಿಂದೆನ್ನ ಮನಸಂಶಯ ಹರಿಸಿದೆ1 ಅರುಣೋದಯಲೆದ್ದು ಮುದದಿ ಕರಣಶುಧ್ದನಾಗಿ ತ್ವರಿತದಿ ಸ್ವಪನದ ವಿ- ವರಕಾಗಿ ಹರುಷದಿ ಹರಿಪೂಜಾಕಾಲದಿ ಅರುಹಿದ ಮರುತ ಮೂರುತಿಯಾ ಉರುತರ ಚರಿತೆಯ ನಿರುತಪೊಗಳಲಾಯತವಿತ್ತ ತಿರುಪತಿಶೈಲಾಧಿಪ ಮಮಕುಲಸ್ವಾಮಿ2 ಹರಿಗುರುಸೇವೆಯನು ಸರ್ವಸದ್ಯೋಗ್ಯಸಾಧನವನ್ನು ಪರಮಹಂಸರು ಇತ್ತವೇಂಕಟೇಶಾಂಕಿತ ಮೂರುತಿಯ ನುತಿಪಾ ನಿಜ ಹರಿಭಕುತರ ಚರಣಕಮಲಬಂಡುಣಿಯೆನಿಸಿ ಇವನನಿರುತ ರಕ್ಷಿಸೋ ಉರಗಾದ್ರಿವಾಸವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ವೇಣು ಗೋಪಾಲವಿಠ್ಠಲರೇಯ ನಿನ್ನ ಪದ ರೇಣು ನಂಬಿದ ಮಾನವ ಏನು ಅರಿಯದಲಿಪ್ಪ ನೀನೊಲಿದು ಕರುಣದಲಿ ಜ್ಞಾನ ಭಕುತಿಯ ಕೊಡುವುದು ಸ್ವಾಮಿ ಪ ಪರದೈವ ನೀನೆಂದು ಮೂಢಮತಿಯಾದವನು | ಪರಿಪೂರ್ಣವಾಗಿ ನಿರುತ | ನೆರೆ ನಂಬಿದೆನು ನಾನಾ ಪ್ರಕಾರದಲಿ ಸ್ಮರಣೆ ಮಾಡುತ ಮನದಲಿ | ತರತಮ್ಯ ಭಾವದಲಿ ಮಾರ್ಗವನೆ ತೋರಿ ವಿ ಸ್ತರ ಮಾಡು ಇವನ ಕೀರ್ತಿ ಕರುಣಾಕರನೆ ನಿನ್ನ ಮೊರೆಹೊಕ್ಕ ಶರಣನ್ನ ಕರಪಿಡಿದು ಪಾಲಿಸುವುದು ಸ್ವಾಮಿ1 ಲೌಕಿಕವೆಲ್ಲಿನಗೆ ವೈದಿಕವೆಂದೆನಿಸಿ | ಸಾಕುವುದು ಸಾಕಾರನೆ ನೂಕು ದುರಳದಿಂದ ಬಂದ ವಿಪತ್ತುಗಳ ತಾಕಗೊಡದಂತೆ ವೇಗ ಶುಭ | ವಾಕು ನೇಮಿಪುದು ಸತತ ನಾಕಜನ ಬಲವಾಗಿ ರಕ್ಷಿಸಲಿ ಸುರತರುವೆ ಶ್ರೀ ಕಾಂತ ನಿನ್ನಿಂದಲಿ ಸ್ವಾಮಿ 2 ಓರ್ವನ ಪೆಸರುಗೊಂಡು ಪೇಳಲೇತಕೆ ಇನ್ನು | ಸರ್ವರನು ಈ ವಿಧದಲಿ | ಊರ್ವಿಯೊಳಗೆ ಇಟ್ಟು ಉದ್ಧರಿಸಿ ಉರುಕಾಲ ನಿವ್ರ್ಯಾಜದವನ ಮಾಡಿ ಸರ್ವರಗೋಸುಗ ತುತಿಸುತಲಿ ಯೋಗ್ಯರಿಗೆ ಸರ್ವದಾ ಕೃಪೆಮಾಡು ಎಂಬೆ ಸಿರಿ ವಿಜಯವಿಠ್ಠಲ ನಿನ್ನ ಶರ್ವ ತುತಿಸಿ ಕಾಣ ನಾನೊಬ್ಬ ಪೊಗಳುವನೆ 3
--------------
ವಿಜಯದಾಸ
ವೇದನಿಧಿ ಹರಿ ವಿಠಲ | ಕಾದುಕೋ ಇವಳಾ ಪ ಮೋದತೀರ್ಥರ ಮತದಿ | ರಾಜಿಸುತ್ತಿಹಳಾ ಅ.ಪ. ವಾದೀಭ ಕೇಸರಿಯು | ವಾದಿರಾಜರು ಮತ್ತೆವೇದವೇದ್ಯರ ಕಂಡು | ಶುಭಸ್ವಪ್ನದೊಳಗೇಭೋದವಗದೆ ಸಾಗಿ | ವೇದನಿಧಿಗಳ ಹಸ್ತಸಾದರದಿ ಅಕ್ಷತೆಯು | ಪುಷ್ವ ಸ್ವೀಕಾರವು 1 ಯತಿವರೇಣ್ಯರ ಕರುಣಾ | ಸತತವಿರಲೀಕೇಗೇಪತಿಸುತರು ಹಿರಿಯಾ | ಹಿತಸೇವೆಯಲ್ಲೀಮತಿಯ ಕರುಣಿಸಿ ನಿನ್ನ | ವ್ಯಾಪ್ತತ್ವ ತಿಳಿಸೀಅತಿಶಯದ ಸೇವೆಯಿಂ | ಉದ್ದಿರಿಸೊ ಇವಳಾ 2 ಸುರರು ನರರೊಳಗೆಲ್ಲ | ತರತಮಾತ್ಮಕರೆಂಬ ವರಸುಜ್ಞಾನವ ಕೊಟ್ಟುಕಾಪಾಡೊ ಹರಿಯೇಗುರು ಭಕ್ತಿ ಹರಿಭಕ್ತಿ | ಪರಮ ಸಾದನವೆಂಬಅರಿವನೇ ನೀಡುವುದು | ಗರುಡ ಧ್ವಜಾತ್ಮ 3 ಧರ್ಮಮಾರ್ಗದಲಿರಿಸಿ | ಪೇರ್ಮೆಯಲಿ ಪೊರೆ ಇವಳಾಭರ್ಮಗರ್ಭನ ಪಿತನೆ | ನಿರ್ಮಾತೃ ಜಗಕೇನಿರ್ಮಮದ ಸಾದನೆಯ | ಮರ್ಮವನೆ ಅರುಹುತ್ತಕರ್ಮನಾಮಕ ಹರಿಯೆ | ಕಾಪಾಡೊ ಇವಳಾ 4 ಭವ ಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೇದವನಿದನವಧರಿಸು ಮಂತ್ರಭೇದವಾದರು ಮತ ಬೇರಲ್ಲವೆನಿಸು ಪಆದಿಯೊಳ್ ಋಗ್ವೇದದಲ್ಲಿ ಅಗ್ನಿಯಾದನು ದೇವತೆಯಾ ಯಜ್ಞದಲ್ಲಿಈದೇವ ಋತ್ವಿಕ್ಕಿನಲ್ಲಿ ಹೊಂದಲಾದರಿಸುತಲಾಗ ಹೊಗಳ್ವರೆಂಬಲ್ಲಿ 1ಹೋತೃತ್ವದಲ್ಲಿಯು ನಿಂದು ಸ್ವರ್ಣಧಾತುವು ತಾನಾದ ದಕ್ಷಿಣೆಗೆಂದುಈ ತೆರದಲಿ ದೇವ ಬಂದು ವಿಪ್ರವ್ರಾತಸ್ತೋತ್ರಕೆ ುೀತ ನೋಡಲಾದನೆಂದು 2ಸುರರಿಗೀತನು ಮುಖ್ಯ ಸಖನು ದ್ವಿಜವರರ್ಕೊಟ್ಟಾಹುತಿಯವರ್ಗಿತ್ತು ವ್ಟೃಯನುಬರಿಸುವನೆಂದೀತನನ್ನು ನೀನೆಇರಿಸಿದೆ ತಿರುಪತಿಯಾಳ್ವ ವೆಂಕಟನು 3ಓಂ ಮುಚುಕುಂದಪ್ರಸಾದಕಾಯ ನಮಃ
--------------
ತಿಮ್ಮಪ್ಪದಾಸರು
ವೇದವೇದ್ಯರ ವಂದಿಸುವೆನು ವಾದಿರಾಜರ ಪ್ರಿಯ ಶಿಷ್ಯರ ವೇದವೇದ್ಯರ ವಂದಿಸುವೆನು ಪ ವಾದಿರಾಜರ ಪಾಶ್ರ್ವದಲ್ಲಿಹ ಮಧ್ವಶಾಸ್ತ್ರವನುದ್ಧರಿಸಿದ ವೇದನಿಧಿಗಳ ತಾತರಾಗಿಹ 1 ರೂಪ್ಯಪೀಠದಿ ಕೃಷ್ಣಮಂದಿರ ರೂಪಳಿದುದನುದ್ಧಾರ ಮಾಡಿದ ಪಾಪರಹಿತರ ಕೋಪಶೂನ್ಯ ಸೋ- ದಾಪುರದೊಳಗೆ ಇರ್ಪ ಯತಿಗಳ 2 ಯಾದವೇಶ ರಾಜೇಶ ಹಯಮುಖ ಸಾಧುಜನರಿಗಾಧಾರರಾಗಿಹ ವಾದಿರಾಜರ ಪದದೊಳಿರ್ಪರ 3
--------------
ವಿಶ್ವೇಂದ್ರತೀರ್ಥ
ವೇದವ್ಯಾಸ ದೇವರ ಸ್ತೋತ್ರ ಏನೋ ಈ ವೇಷ ವೇದವ್ಯಾಸ ಏನೋ ಈ ವೇಷ ಪ ಭಾನುಕೋಟಿ ಪ್ರಕಾಶ ಬದರೀ ನಿವಾಸ ಅ.ಪ. ದ್ರೌಪದಿ ಕರೆಯಲಪಾರ ವಸ್ತ್ರವನಿತ್ತೆಕೌಪೀನ ಧರಿಸಿದ ಕೌತುಕವೇನಯ್ಯ 1 ಮುತ್ತು ಮಾಣಿಕ್ಯ ನವರತ್ನ ಮಕುಟವಿರೆನೆತ್ತಿಲಿ ಕೆಂಜೆಡೆ ಪೊತ್ತುಕೊಂಡಿಪ್ಪುದು 2 ವರ ವೈಕುಂಠವ ಬಿಟ್ಟು ಮೋಹನ ವಿಠ್ಠಲಧರೆಯಾಳು ಬೋರೆಯ ಮರದಡಿಯಲಿರುವುದು 3
--------------
ಮೋಹನದಾಸರು
ವೇದವ್ಯಾಸರ ದಿವ್ಯಪಾದ ಪದುಮಯುಗಲ ಆರಾಧಿಸುತಿರು ಮನುಜಾ ಪ ವೇದಗಳಿಗೆ ಸಮ್ಮತವಾದ ಪುರಾಣಗಳ ಸಾದರದಲಿ ರಚಿಸಿ ಮೋದವ ಬೀರಿದ ಅ.ಪ ಧರಿಯೊಳು ಸುಜನರಿಗೆ ವರಧರ್ಮ ತಿಳಿಸೆಂದು ಸುರಮುನಿ ಪ್ರಾರ್ಥನದಿ ಭಾಗವತ ಗ್ರಂಥ ವಿರಚಿಸಿ ಶುಕಮುನಿಗೆ ಕರುಣದಿಂದರುಹಿದ 1 ವಾಸಿಪ ಮುನಿಗುಣ ಭೂಷಿತ ಬದರಿಯೋಳ್ ತೋಷ ತೀರ್ಥರ ಕರೆದು ಭೂಸುರ ಜನರಿಗೆ ಮೋಕ್ಷದಾಯಕ ಸೂತ್ರ ಭಾಷ್ಯವರಚಿಸೆಂದಾದೇಶವ ನೀಡಿದ2 ಅರಿದರಾದ್ಯಯುಧ ಧರಿಸಿ ಷೋಡಶಸಂಖ್ಯ ಕರಗಳಿಂದಲಿ ಶೋಭಿತ ಸುರತರು ವೆನಿಸಿ ಧರೆಯೊಳು ಮೆರೆವ ಕಾರ್ಪರ ನರಹರಿ ರೂಪಾತ್ಮಕನಾದ 3
--------------
ಕಾರ್ಪರ ನರಹರಿದಾಸರು
ವೇದವ್ಯಾಸಾ ಶ್ರೀ ಹರೇ | ನಿನ್ನ ಶ್ರೀಪಾದಉದಕೇಜ - ತೋರಿಸೋ ಪ ಹರಣ ಪ್ರಬೋಧ ಮುದ್ರಾಂಕನ ಅ.ಪ. ಕಾಲ | ಸಕಲ ಸದ್ಗುಣಧಾಮ - ಶ್ರೀ ಭೂಮಿ ದುರ್ಗೆ ಲೋಲ ||ಧೃತ - ಕಾಮ ಜನಕ ನಿಸ್ಸೀಮ ಮಹಿಮ - ತ್ರಿಧಾಮದಲಿ ಭಕ್ತಸ್ತೋಮ ವಿರಿಸಿದೆ - ಶ್ರೀರಾಮಾ - ಸುಧಾಮ - ರಿಪು ಭೀಮಾ | ಸುರಸಾರ್ವಭೌಮ 1 ವಿಧಿ ಪುತ್ರಾನ್ವಿತಗೋತ್ರಾರಿ ಪ್ರಿಯ ಸತ್ಯಾವಲ್ಲಭಚಿತ್ರಾ - ಸುವಿಚಿತ್ರಾ - ಸಮಗಾತ್ರಾ | ತೋರಿಸುತವಗಾತ್ರ 2 ಚಿನುಮಯಗುಣ ವಪುಷಾ | ಅನಂತ ಶೀರ್ಷಾಅನಿಲ ಹೃದಯಾಂತರ್ಗತ ||ಧೃತ - ಮನಸಿಜ ಪಿತ ಗುರುಗೋವಿಂದ ವಿಠಲನೆತನುಮನಧನವೆಲ್ಲ ನಿನದಾಗಿರುವುದೊಮುನಿವಂದ್ಯಾ - ಮುಕುಂದ - ಗೋವಿಂದ | ಕೊಡು ಎನಗಾನಂದ3
--------------
ಗುರುಗೋವಿಂದವಿಠಲರು
ವೈಕುಂಠ ವಿಠ್ಠಲನೆ ನೀನಿವನ ಸಾಕಬೇಕಯ್ಯ ಶ್ರೀ ಹರಿಯೆ ಪ ನಾಕಪತಿಯೆ ನಿನ್ನ ತೋಕನೆಂದೆನಿಸಿ ಕೃಪಾಕರುಣೆ ಕಾಪಾಡ ಬೇಕೊ ಹರಿಯೆ ಅ.ಪ. ಪುಂಡಲೀಕ ವರದ ಪಾಂಡುರಂಗನೆ ನಿನ್ನತೊಂಡನಾಗಿಹನ ಕೈಗೊಂಡು ಕಾಪಾಡೊ ಹರಿಯೆ |ಅಂಡಜಸುವಾಹನನೆ ಮಾರ್ತಾಂಡ ಶತತೇಜಭಾಂಡ ಕಾರಕ ಭೀಮ ಗೊಲಿದಂತೆ ಒಲಿಯಬೇಕು 1 ಇಹಪರಗಳೆರಡಕ್ಕೂ ಅಹಿಶಯ್ಯ ನಿನ ಪಾದವಹಿಸೆ ಸೇವಿಪನಯ್ಯ ಸಹಜ ಭಕ್ತಿಯಲಿವಿಹಗೇಂದ್ರ ವಾಹನನೆ ಐಹಿಕದ ಭಯಹರಿಸಿವಿಹಿತ (ಕರುಣ)ದಿಂದಿವನ ಕಾಪಾಡು ಬೇಕು ಹರಿಯೇ 2 ವಿಘ್ನಹರ ನಿನ್ನಲ್ಲಿ | ಲಗ್ನ ಗೈಸಿಹಮನವ ನಿ-ರ್ವಿಘ್ನತೆಯ ನೀಡಯ್ಯ ಸರ್ವಕಾಲದಲಿಯಜ್ಞೇಶ ಯಜ್ಞ ಭುಗ್ ಯಜ್ಞಸಾಧನ ಯಜ್ಞಯಜ್ಞಾನು ಸಂಧಾನ ಸರ್ವಕಾರ್ಯದಲೀಯೊ 3 ವೃಂದಾರ ಕೇಂದ್ರ ರಿಂ | ವಂದ್ಯ ಹಯಮುಖ ಪಾದಭೃಂಗರೆಂದೆನಿಸುವ ಭಾವಿ ಮರುತರ ಚರಣದೀಸಂಧಿಸುತ ಧೃಡಭಕ್ತಿ ವೃಂದಾವನಾಖ್ಯಾನಸಂದೋಹ ಸುಜ್ಞಾನ ನೀನಿತ್ತು ಸಲಹೊ ಹರಿಯೇ 4 ಪತಿ ನಿನ್ನ ಹಂಬಲಿಸಿ ಬೇಡುವೆನುಇಂಬಿಟ್ಟು ತವ ಪಾದದ್ಹಂಬಲವ ನೀಯೋಉಂಬುಡುವ ಕ್ರಿಯೆಗಳಲಿ ಬಿಂಬ ಕ್ರಿಯೆಗಳ ತಿಳಿಸಿಬಿಂಬ ತವರೂಪ ಹೃದಯಾಂಬರದಿ ತೋರಿ ಸಲಹೋ 5 ಪಂಚಪಂಚಸುತತ್ವ | ಪಂಚ ಭೇದದಜ್ಞಾನಸಂಚಿಂತೆಯ ನೀಯೋ ವಾಂಛಿತಾರ್ಥದನೇಪಂಚ ಅವಿದ್ಯೆಯ ಕಳೆದು ಪಂಚಸು ಪರ್ವದಲಿಪಂಚಾಸ್ಯನಲಿ ನಿನ್ನ ಪಂಚರೂಪವ ತೋರಿಸೋ 6 ದಿವಿಜ ವಂದ್ಯಮಧ್ವಾಂತರಾತ್ಮ ಗುರು ಗೋವಿಂದ ವಿಠಲ ತವದಿವ್ಯ ರೂಪವ ತೋರಿ ಕಾಪಾಡೊ ಹರಿಯೆ 7
--------------
ಗುರುಗೋವಿಂದವಿಠಲರು
ವೈಚಾರಿಕತೆ ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ ಪ ಸತ್ತವನು ಎತ್ತ ಪೋದಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದುನಿತ್ಯ ಪಿಂಡವಿಕ್ಕುತೀರಿ1 ಎಳ್ಳು ದರ್ಭೆ ಕೈಲಿ ಪಿಡಿದುಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತುದರ್ಭೆ ನೀರೊಳು ಹರಿದು ಹೋಯಿತು 2 ಎಡಕೆ ಒಂದು ಬಲಕೆ ಒಂದುಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿಕಟಿಯ ಹಸ್ತದೊಳಗೆ ಪಿಡಿಸುತೀರಿ 3 ಮಂತ್ರಾಕ್ಷತೆಯ ಕೈಗೆ ಕೊಟ್ಟುಮೋಕ್ಷವನ್ನು ಹಾರೈಸುವಿರಿಮಂತ್ರವೆಲ್ಲೊ ಅಕ್ಷತೆಯೆಲ್ಲೊಮೋಕ್ಷವೆಲ್ಲೊ ಮತ್ರ್ಯವೆಲ್ಲೊ4 ಹೇಳುವವನು ಅವಿವೇಕಿಕೇಳುವವನು ಅಜ್ಞಾನಿಹೇಳುವ ಕೇಳುವ ಇಬ್ಬರ ಸೊಲ್ಲಆದಿಕೇಶವಮೂರ್ತಿ ಬಲ್ಲ5
--------------
ಕನಕದಾಸ
ವೈದೇಹಿ ಪಾಲಿಸೆನ್ನಂ ನಂಬಿದೆ ನಿನ್ನಂ ಪ. ವೇದವಿದಿತೇ ತವಪಾದವ ಸ್ಮರಿಸುವ ಕರವ ಅ.ಪ. ಕಾಮಿತಾರ್ಥವ ನೀಡುವಳೆಂಬುವ ಬಿರುದಾಂಕಿತೆಯಾಗಿರುವ ಕಾಮಜನನೀ ನಿನ್ನ ನಾಮ ಮಂತ್ರಗಳನ್ನು ನೇಮನಿಷ್ಠೆಯೋಳ್ ಜಪಿಸುವಂದದಿ ಸು ಪ್ರೇಮದಿಂದಲಿ ವಿಮಲಮತಿಕೊಡು 1 ಜಾನಕಿನಾಮವ ಧರಿಸಿ ದಾನವಕುಲವೆಂಬ ಕಾನನಂಗಳಿಗಂತು ಹವ್ಯ ವಾಹನನೆನಿಪ ರಾಮನ ಕೈಯಪಿಡಿದ ಪರಮಪಾವನೆ 2 ಶಮದಮಾದಿಗಳಿಂದ ಮೆರೆಯುತಲಿರ್ಪ ಕ್ಷಮೆಗೆ ನೀ ನೆಲೆಯೆಂದು ಯಮಿಕುಲವರ್ಯರು ನಮಿಸಿ ಸ್ತುತಿಸುತ್ತಿಹರು ವಿಮಲ ಶೇಷಾದ್ರಿನಾಥನ ರಮಣಿ ನಿನ್ನಡಿ ಮಣಿದು ಬೇಡುವೆ 3
--------------
ನಂಜನಗೂಡು ತಿರುಮಲಾಂಬಾ
ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ವೈಷ್ಣವನಾರೆಂದು ದೃಷ್ಟಿಸಿ ಸೃಷ್ಟಿಯೊಳು ವಿಷ್ಣುನರಿತವನೆ ವೈಷ್ಣವನು| 1 ಭಕ್ತಿರಸದೊಳು ಮುಣುಗಿ ಭಕ್ತಿಗೈದುವ ಗತಿಯ ಯುಕ್ತಿ ತಿಳಿದವನೆ ವೈಷ್ಣವನು 2 ಹರಿ ಪರಂದೈವೆಂದು ಹರಿಯ ಕೊಂಡಾಡುತಲಿ ಹರಿಯ ನೆನೆಯುವನೆ ವೈಷ್ಣವನು 3 ಹರಿ:ಓಂ ತತ್ಸದಿತಿಯೆಂಬ ಹರಿವಾಕ್ಯವನು ಅರಿತವನೆ ಪರಮ ವೈಷ್ಣವನು 4 ಹರಿಧ್ಯಾನ ನೆಲೆಗೊಂಡು ಹರಿನಾಮ ಬಲಗೊಂಡು ಹರಿಯ ಸ್ಮರಿಸುವವನೆ ವೈಷ್ಣವನು 5 ಪರದೆ ಇಲ್ಲದೆ ಪಾರ ಬ್ರಹ್ಮಸ್ವರೂಪನು ಗುರುತ ಕಂಡವನೇ ಪರಮ ವೈಷ್ಣವನು6 ಗುರುಕೃಪೆಯಿಂದ ಪರಗತಿ ಸಾಧನವು ಮುಟ್ಟಿ ಅರಿತು ಬೆರೆದನೆ ಪರಮ ವೈಷ್ಣವನು 7 ಮೂಲ ಮೂರುತಿಗ್ಯಾಗಿ ಮೇಲಗಿರಿಯನೇರುವ ಕೀಲ ತಿಳಿದವನೆ ವೈಷ್ಣವನು 8 ಉಂಟಾಗಿ ಇರುಳ್ಹಗಲಿ ಗಂಟ್ಹಾಕಿ ಹರಿಪಾದ ಬಂಟನಾದವನೆ ವೈಷ್ಣವನು 9 ಕಂಟಕ ನೀಗಿ ಮೂರು ಬಲೆಯನು ದಾಟಿ ಮೀರಿ ನಿಂದವನೇ ವೈಷ್ಣವನು 10 ಆಶಿಯನೆ ಜರಿದು ನಿರಾಶೆಯನು ಬಲಿದು ಹರಿದಾಸನಾದವನೆ ವೈಷ್ಣವನು 11 ದ್ವಾದಶನಾದವನು ಸಾಧಿಸಿ ಕೇಳುತಲಿ ಭೇದಿಸಿದವನೆ ವೈಷ್ಣವನು 11 ಅನುದಿನ ಘನಸುಖವು ಅನುಭವಿಸುವನೆ ವೈಷ್ಣವನು 12 ವಿಷ್ಣುಭಕ್ತಿಯ ಸುಖವು ಮುಟ್ಟಿ ಮುದ್ರಿಸಿ ಪುಷ್ಟವಾಗಿದೋರುವನೆ ವೈಷ್ಣವನು 13 ವಿಷ್ಣುಮೂರ್ತಿಯ ಧ್ಯಾನ ದೃಷ್ಟಾಂತ ಮಹಿಪತಿಗೆ ಕೊಟ್ಟಾ ಗುರು ಪರಮ ವೈಷ್ಣವನು 14
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವ್ಯರ್ಥ ಕೆಟ್ಟರು ಯಿಂದು ನರಮನುಜರು ಸಾರ್ಥಕ ಮಾಡಿಕೊಳ್ಳರು ಶರೀರವುಳ್ಳವರು ಪ ಮರುಳಾಟ ಪರ ಬುದ್ಧಿಯೊಳು ಮುಳುಗಿ ವಿಷಯವ ಭೋಗಿಸಿ ಮದ್ದು ತಿಂದಂತೆ ಇದ್ದಾದರು ಉದಯದಲಿ ಎದ್ದು ಕುಳಿತು ಒಮ್ಮೆ ಹರಿಯಂದು ನುಡಿಯದೆ 1 ಹರಿವ ಜಲವ ಮಿಂದು ಹರಿಗೆ ಅರ್ಪಿಸುತೇವೆಂದು ಬರಿದೆ ಬಾರದೆ ಬಿಂದು ಜಲ ತಂದು ಅರಘಳಿಗೆ ಅಚ್ಯುತಗೆ ಭಕುತಿಯಲಿ ಅಭಿಷೇಕ ಯರದು ಯಮಬಾಧೆ ಕಳೆಯಲರಿಯದ ಮಂಕು 2 ಅಡವಿಯಿಂದಲಿ ಒಂದು ತುಳಸಿದಳವನೆ ತಂದು ತಡಿಯದಲೆ ತಾವರೆದಳನಯನನ ಕರವ ಮುಗಿದು ಮುಕುತಿ ಪಡಿಯಲೊಲ್ಲದ ಪರಮ ಪಾಪಿಷ್ಟ ಜನರಯ್ಯಾ3 ಪತ್ರ ಫಲ ಪುಷ್ಪ ತೋಯ ಮುಂದಿರಿಸಿ ನೀಲ ಗಾತ್ರಗೆ ನೈವೇದ್ಯವೆಂದು ಬಗೆದು ಸ್ತೋತ್ರವನೆ ಮಾಡಿ ಪ್ರದಕ್ಷಿಣೆ ನಮಸ್ಕಾರ ನಿತ್ಯ ಒಂದೊಂದು ಮಾಡದೆ ಕರ್ಮಿಗಳು4 ಇಂದಿನ ಹಮ್ಮು ನಾಳಿಗೆಯಿಲ್ಲ ಈ ದೇಹ ಇಂದು ಬಂದದೆ ನಾಳೆ ಬರಲರಿಯದೂ ಸಿಂಧುಶಯನ ನಮ್ಮ ವಿಜಯವಿಠ್ಠಲನ ಮನ ಬಂದಾಗ ನೆನೆದು ಭವವನದಿ ಉತ್ತರಿಸದೆ 5
--------------
ವಿಜಯದಾಸ
ವ್ಯರ್ಥ ಹೋರಾಟವಲ್ಲದೆ ಇದು ನಿಜವಲ್ಲಾ ಕರ್ತೃ ಶ್ರೀಹರಿ ಮಾಡಿದರ್ಥವೆ ಸರಿ ಅಲ್ಲದೆ ಪ ಪುರಾಕೃತ ಸಂಚಿತಾರ್ಥ ಪುಣ್ಯ ಪಾಪಗಳಿಂದ ಪರಿ ಅನುಭವ ಬಡುತಾ ಇನ್ನೂ ಇರುವೆಯಲ್ಲದೆ ಘಣಿಯಲಿ ವಿರಂಚಿ ಬರೆದ ಭಂಗ ಬಡುತಲಿಷ್ಟು 1 ಎಂದೆಂದೂ ನಿನ್ನ ಹಿಂದೆ ಒಂದೂ ಬರುವುದಿಲ್ಲ ಮುಂದುಗಾಣದೆ ಇನ್ನು ಮೋಹಕೆ ಸಿಲುಕಿ ನಂದೆಂದು ಪರಿಯಿಂದ ಘಳಿಸಿದ ದ್ರವ್ಯದ ಬಿಂದಿಗೆ ದಾರೋ ನೀದಾರೋ ಪಾಮರ ಮೂಢಾ 2 ನನ್ನ ಹೆಂಡತಿ ಮಕ್ಕಳು ನನ್ನ ಮನೆ ಬಾಗಿಲು ನನ್ನ----ಯು ವೃತ್ತಿ ನನ್ನದೆಂದೂ ನಿತ್ಯ ಒಂದಾಡುವೆ ನೀದಾರೋ ಮೂಢಾ 3 ತಂದೆ ತಾಯಿಯ ಗರ್ಭದಿಂದ ಪುಟ್ಟಿರುವಂದೇ ತಂದೆಲ್ಲೊ ತಾಯೆಲ್ಲೊ ತಾನೆಲ್ಲೊ ಮರುಳೆ ಹಿಂದೆ ಆದವರ ಚರ್ಯವ ವಿವರಿಸಿ ನೋಡಿನೋಡಿ ಕುಂದು ಇಲ್ಲದೆ ಮುಕ್ಕುಂದನ ಸ್ಮರಿಸು ಗಾಢಾ 4 ಮಾಯಾ ಪ್ರಪಂಚದೋಳ್ ಮಗ್ನನಾಗಿ ಇನ್ನು ಕಾಯಾ ಅಸ್ಥಿರವೆಂದು ಕಾಣೋ----- ಶ್ರೀಯರಸ 'ಹೆನ್ನ ವಿಠ್ಠಲ’ರಾಯನ ಕರ್ಮ ಧ್ಯಾನವು ಬಿಟ್ಟು 5
--------------
ಹೆನ್ನೆರಂಗದಾಸರು