ಒಟ್ಟು 2922 ಕಡೆಗಳಲ್ಲಿ , 121 ದಾಸರು , 2167 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಳಾದಿಧ್ರುವತಾಳರಾಮ ರಘುಕುಲ ಸಾರ್ವಭೌಮ ಪೂರಣಕಾಮಜೀಮೂತಶಾಮ ಶ್ರೀಮೂಲರಾಮಕೋಮಲ ಶರೀರ ಸೀತಾ ಮುಖಾಂಬುಜಭ್ರಮರಪ್ರೇಮಸಾಗರ ಭಕ್ತಜನ ಮನೋಹರಸಾಮಜಾತಿಹರ ಸಾಮಗಾನಾದರ ನಿಸ್ಸೀಮ ಗುಣಗಂಭೀರ ಏಕವೀರಸ್ವಾಮಿ ಮಠದರಸ ಮುನಿಸ್ತೋಮ ಮಾನಸಹಂಸನೀ ಮನ್ನಿಸು ಪ್ರಸನ್ನವೆಂಕಟಾದ್ರೀಶ ರಘುರಾಮ 1ಮಠ್ಯತಾಳಪಿಂತೆ ಸಮೀರಜನ ಸೇವೆಗೆ ಮೆಚ್ಚತ್ಯಂತ ಪ್ರಸನ್ನನಾಗ್ಯವನ ಶುಭಕರಸಂತತಿಗಭಯವನಿತ್ತಪೆನೆಂದೀಶನಿಂತಿಹೆ ಪ್ರಸನ್ನವೆಂಕಟಪತಿರಾಮಕಂತುಜನಕನಿತ್ಯಾನಂದನೆ ನಿನ್ನಂತವರಿಯೆ ನಿಗಮಾಗಮಕಳವೆ 2ತ್ರಿಪುಟತಾಳನಿರುತ ವೈಕುಂಠ ಮಂದಿರವಿದ್ದುಪರಣ ಕುಟೀರವನಾಶ್ರಯಿಸುವ ಘನತೆಯೆತ್ತವರಪೀತಾಂಬರ ದಾಮವನು ಬಿಟ್ಟುವಲ್ಕಲಧರಿಸಿ ಕಾನನದಿ ಸಂಚರಿಪೋದೆತ್ತನರಲೀಲೆಗಿದು ಶ್ಲಾಘ್ಯವೆಂದು ತೋರಿದೆ ಜಗದೆರೆಯ ಪ್ರಸನ್ನವೆಂಕಟಾದ್ರಿ ರಘುರಾಮ 3ಅಟ್ಟತಾಳಹರವರದಲಿ ಬಲು ಮತ್ತಾದ ರಜನೀಚರವರ ಲಂಕೆಯಲಿ ಬಲಿದು ಗರ್ವದಿಸುರವರರನುರೆ ಬಾಧಿಸಲವರನುಪೊರೆವರು ದಾರಯ್ಯ ನಿನ್ನಿಂದಸ್ಥಿರವರದಾಯಕ ಪ್ರಸನ್ವೆಂಕಟಗಿರಿವರನಿಲಯ ಕೌಸಲ್ಯೆಯ ಕಂದ 4ಆದಿತಾಳಅಕಳಂಕ ಅಕುತೋತಂಕ ಅಕಳಂಕಮಕುಟಕುಂಡಲಕೌಸ್ತುಭಕೇಯೂರ ವಲಯಾಂಕಿತಕೋದಂಡಕಾರ್ಮುಕಪಾಣಿಅಕಳಂಕ ಸುಖತೀರ್ಥವಂದಿತ ಪಾದಕಮಲ ವಿಧಿನುತ ಮಖಪಾಲಕ ಪ್ರಸನ್ನವೆಂಕಟಾಧಿಪ ಅಕಳಂಕ 5ಜತೆಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿಬಂದು ನೀನಿಂತೆ ನಿಜರಮಣಿಯೊಡನೆಎಂದೆಂದು ಸತ್ಯಾನಭಿವ ತೀರ್ಥಗುರುಹೃದಯಮಂದಿರನೆ ಪ್ರಸನ್ನವೆಂಕಟವರದ ರಾಮ
--------------
ಪ್ರಸನ್ನವೆಂಕಟದಾಸರು
ಸುಳ್ಳು ಮಾತಿನ ನಿನ್ನಾಚಾರವು ತಿಳಿವಿಕೆ ಏನೇನಿಲ್ಲಎಲ್ಲ ಡಂಭವು ನಡತೆಯ ವಿವರವು ಗತಿಗೆನೀ ದೂರಾದೆಯಲ್ಲಪಮಂಡೆಯ ಬೋಳಿಸಿ ಕಣ್ಣನೆ ಮುಚ್ಚುವಿಪಿಟಿಪಿಟಿ ಏನದು ಮಂತ್ರದಂಡವೇತಕೆ ಮನಸದು ಚಂಚಲಏತಕೆ ಮಾಡುವಿ ತಂತ್ರ1ಕೈಯಣ ಗಿಂಡಿಯ ಕಂಕುಳ ಪೆಟ್ಟಿಗೆಕಟ್ಟಿಯಿಹುದು ತಲೆಗಟ್ಟುಬೈಗಳೆಂಬುವು ಪರಿಪರಿ ನೋಡಲುಕೋತಿ ಹಾರಿಕೆಯಳವಟ್ಟು2ಜ್ಞಾನವದಿಲ್ಲವು ಪುಸ್ತಕ ಮನೆಯೊಳುಹೋಳಿಗೆ ತುಪ್ಪದ ಗಬಕುಧ್ಯಾನವಿಲ್ಲವು ಮೌನವಿಲ್ಲವು ಯಮನಕೈಯಿಂದ ದುಬುಕು3ನಿರಿವಿಡಿದುಟ್ಟಿಹ ಪಂಚೆಕಚ್ಚೆಯಧೋತ್ರನಾಮ ವಿಭೂತಿಯ ಬೆಳಕುಪರಮಾನ್ನವ ಸಕ್ಕರೆಯನು ಕಲಸಿನುಂಗುವೆ ಗುಳುಕು ಗುಳುಕು4ಮುಂದೆ ಹೇಳುವನ ಮೆಟ್ಟಿಕೊಂಡುಂಬುದುಇಂತಿದು ನಿನ್ನಯ ಬದುಕುಸುಂದರ ಚಿದಾನಂದ ಸ್ವರೂಪವ ತಿಳಿವುದುಎಂದುಎಂದಿಗೆ ಬಲುಧಡಕ5
--------------
ಚಿದಾನಂದ ಅವಧೂತರು
ಸೆರಗ ಬಿಡಯ್ಯ ಕೃಷ್ಣ - ಕರೆಯಲು ಪೋಪೆನು |ಕರುಗಳು ಹಸಿದಿವೆ ಕರುಣಿಗಳರಸನೆ ಪಕೆನೆಮೊಸರನೆ ಕಡೆದು ನಿನಗೀವೆ ಬೆಣ್ಣೆಯ |ಗೊನೆಯ ಬಾಳೆಯ ಹಣ್ಣ ತಿನಲು ಕೊಡುವೆ ||ನೆನೆಗಡಲೆ ಕೊಬ್ಬರಿ ನಿನಗೆ ಮೆಲಲಿಕ್ಕುವೆ |ತನಯರೊಡನೆ ಆಡಕಳುಹುವೆ ರಂಗಯ್ಯ 1ಗೋವಳರೆಲ್ಲ ಬಂದು ಬಾಗಿಲೊಳಗೆನಿಂದು|ಗೋವುಗಳನು ಬಿಡಲು ಸಾರುತಿಹರು ||ನೋವುಗೊಳಿಸಬೇಡ ಪರರ ಮಕ್ಕಳ ನೀನು |ಭಾವಜನಯ್ಯನೆ ಲಾಲಿಸೀ ನುಡಿಯನು 2ಶರಧಿಯ ತಡಿಯಲಿ ನೆರೆದಿಪ್ಪ ಸತಿಯರ |ಪರಿಪರಿ ವಸ್ತ್ರವ ಸೆಳೆಯಬೇಡ ||ನೆರೆಮನೆ ಹೊರೆಮನೆ ಕರುಗಳ ಬಿಡಬೇಡ |ಸುರರಿಗೊಡೆಯ ನಮ್ಮ ಪುರಂದರವಿಠಲ 3
--------------
ಪುರಂದರದಾಸರು
ಸೇವಕತನದ ರುಚಿಯೇನಳೆದೆಯೋ |ದೇವ ಹನುಮರಾಯ ನೀ ವೈರಾಗ್ಯ ಬೇಡಿ ಪಉದಧಿಯ ದಾಟಿ ಸೀತೆಯ ಕಂಡು ಬಂದಾಗಮದುವೆಯ ಮಾಡೆನ್ನಬಾರದಿತ್ತೆ ||ಪದದಿ ಪಾಷಾಣವ ಪೆಣ್ಣ ಮಾಡಿದನಿಗೆಇದು ಏನಾಶ್ಚರ್ಯವೊ ನೀ ಬಯಸಲೊಲ್ಲದೆ 1ಕ್ಷಣದೊಳು ಸಂಜೀವನ ಗಿರಿ ತಂದಾಗಧನವನು ಬೇಡಲು ಕೊಡದಿಹನೇ ||ವಿನಯದ ವಿಭೀಷಣಗೆ ರಾಜ್ಯಪದವನಿತ್ತವನಿಗೆನಾಶ್ಚರ್ಯವೊ ಹನುಮ ನೀನೊಲ್ಲದೆ 2ಸಾರ್ವಭೌಮನು ತಾನೆ ಮೆಚ್ಚಿ ಬಂದಾಗಲೆಉರ್ಪಿಯ ಬೇಡಲು ಕೊಡದಿಹನೇಸರ್ವವ ತೊರೆದು ಶ್ರೀ ಪುರಂದರವಿಠಲನನಿವ್ರ್ಯಾಜ ಭಕುತಿಯ ಬೇಡಿಕೊಂಡೆಯಲ್ಲದೆ 3
--------------
ಪುರಂದರದಾಸರು
ಸೈಸಲಾರೆನೆಗೋಪಿನಿನ್ನ ಮಗನ ಲೂಟಿ |ಏಸೆಂದು ಪೇಳಲಮ್ಮ ||ವಾಸುದೇವನು ಬಂದು ಮೋಸದಿಂದಲಿ ಎನ್ನ |ವಾಸವಸೆಳಕೊಂಡು ಓಡಿ ಪೋದನಮ್ಮಪದೇವರ ಪೆಟ್ಟಿಗೆ ತೆಗೆದು ಸಾಲಿಗ್ರಾಮ |ಸಾವಿರ ನುಂಗುವನೆ ||ಭಾವಜನಯ್ಯಇದೇನೆಂದರೆ ನಿಮ್ಮ |ಕಾಮದೇವರು ನಾನು ಕೇಳಿಕೊ ಎಂಬನೆ 1ಅಗ್ರೋದಕತಂದು ಜಗುಲಿ ಮೇಲಿಟ್ಟರೆ |ವೆಗ್ಗಳದಲಿ ಕುಡಿವ ||ಮಂಗಳ ಮಹಿಮನ ವಿೂಸಲೆಂದರೆ ನಿಮ್ಮ |ಮಂಗಳಮಹಿಮನ ಅಪ್ಪನಾನೆಂಬುವ 2ಅಟ್ಟಡಿಗೆಯನೆಲ್ಲ ಉಚ್ಛಿಷ್ಟವ ಮಾಡಿ |ಅಷ್ಟು ತಾ ಬಳಿದುಂಬನೆ ||ವಿಷ್ಣು ದೇವರ ನೈವೇದ್ಯವೆಂದರೆ ನಿಮ್ಮ |ಇಷ್ಟದೇವರು ತೃಪ್ತನಾದನೆಂತೆಂಬುವ 3ಋತುವಾದ ಬಾಲೆಯರು ಪತಿಯೆಡೆ ಪೋಪಾಗ |ಕೃತಕದಿಂದಡಗಿಹನೆ ||ಮತಿಗೆಟ್ಟ ಪೆಣ್ಣೆ ಸುಂಕವ ಕೊಡು ಎನುತಲಿ |ಪ್ರತಿಯಾಗಿ ಮಾರನ ಸೂರೆಗೊಂಬುವನೆ 4ಅಚ್ಚಪಾಲು-ಮೊಸರುನವನೀತಮಜ್ಜಿಗೆ |ರಚ್ಚೆಮಾಡಿ ಕುಡಿವ ||ಅಚ್ಚ ಪುರಂದರವಿಠಲರಾಯನ |ಇಚ್ಛೆಯಿಂದಲಿ ನಿಮ್ಮ ಮನೆಗೆ ಕರೆದುಕೊಳ್ಳಿ 5
--------------
ಪುರಂದರದಾಸರು
ಸ್ಥಳವಿಲ್ಲವೈ ಭಾಗವತರೇ - ಈಗಒಳಗೆ ಹೊರಗೆಸಂದಣಿತುಂಬಿದೆ ನೋಡಿಪ.ಆಯ್ದೊಕ್ಕಲಿದರೊಳಗುಂಟು - ಮತ್ತೆಆಯ್ಕು ಮಂದಿಯ ಬೇರೆ ಉಂಟುಆಯ್ದು ನಾಲ್ಕು ಇದರೊಳಗುಂಟು - ನೀವುಬೈದರೆ ಏನು ತೆಗೆಯಿರಿ ನಿಮ್ಮ ಗುಂಟು 1ಆರುಮಂದಿ ಕಳ್ಳರುಂಟು - ಮತ್ತಾರು ಮಂದಿಗೆ ಮತ್ತೆ ಪ್ರೇರಕರುಂಟುಪ್ರೇರಕರಿಗೆ ಕರ್ತರುಂಟು - ವಿಚಾರಿಸುವುದಕೆ ನಿಮಗೇನುಂಟು ? 2ಅತ್ತೆಯವಳು ಬಲುಖೋಡಿ - ಎನ್ನಒತ್ತಿ ಆಳುವ ಪುರುಷನು ಬುಲುಹೇಡಿಮತ್ತೆ ಮಾವನು ಅಡನಾಡಿ - ಸರಿಹೊತ್ತಿಗೆಬರುವ ಮೈದುನ ಬಲುಕೇಡಿ3ನಗೆಹೆಣ್ಣು ಎಂಬುವಳು ಕೋಪಿ - ಮಲಮಗಳು ಕಂಡರೆ ಸೇರಳು ಬಲು ಪಾಪಿಹಗೆಗಾತಿಅತ್ತಿಗೆ ಶಾಪಿ - ಸುತ್ತಬೊಗಳುವಳು ತಾಳೆನು ನಾನು ಮುಂಗೋಪಿ 4ಎಷ್ಟು ಹೇಳಲಿ ನಿಮಗೆಲ್ಲ - ಈಕಷ್ಟ ಸಂಸಾರದೊಳಗೆ ಸುಖವಿಲ್ಲಸ್ಪಷ್ಟವಾಗಿ ಪೇಳ್ಪೆ ಸೊಲ್ಲ - ದೇವಸೃಷ್ಟೀಶ ಪುರಂದರವಿಠಲ ಬಲ್ಲ 5
--------------
ಪುರಂದರದಾಸರು
ಸ್ಥಾಣುಮಹೇಶ್ವರ ತ್ರಿನಯನ ||ಶಂಕರ||ಮಾಣದೆಸಲಹೋ ರುದ್ರಾಣಿ ಮನೋಹರ ಪಪೂರ್ಣ ಕೃಪೆಯೊಳ್ ನಿನ್ನ | ಶರಣನೆಂದೆನಿಸೆನ್ನ ಅಬಾಣನಿಗೊಲಿದಾತಣ್ಗದಿರನಿಶೇಖರ |ಭೂತನಾಥನೆಭವ| ಭೀತಿವಿನಾಶನೆ |ಪಾತಕಹರಸುರ | ವ್ರಾತಾನಮಿತನೆ ಚಭೂತಳದೊಳಗೆ ಸರ್ವಾರ್ಥರಕ್ಷಕನೆಂದು |ಖ್ಯಾತಿಯ ತಳೆದ ಕಾತ್ಯಾಯನಿ ರಮಣಾ 1ರುದ್ರಚಮಕಗಳಿಂದ | ಲಭಿಷೇಕವಗೈದು |ಶ್ರದ್ಧೆಯೊಳರ್ಚಿಸಲಾರೇ | ಪತ್ರೆಯ ಕೊಯ್ದು |ರುದ್ರಾಕ್ಷಿಯು ಭಸ್ಮಲೇಪನ ಧರಿಸುತ |ಪ್ರದೋಷದ ವ್ರತವರಿಯೆನ್ನುದ್ಧರಿಸೊ 2ಸುಗುಣಶರಧಿಲಿಂಗ | ಪೂಜೆ ವಿನೋದಿತ |ಮೃಗದ ನೆವದಿ ಪಾರ್ಥಗೊಲಿದಕೈರಾತ|ಜಗದೀಶ್ವರನೆ ಗೋವಿಂದನಸಖನಿನ್ನ |ಮೊಗವ ತೋರಿಸುದಾಸಗೊಲಿದು ನೀ ದಯದಿ 3
--------------
ಗೋವಿಂದದಾಸ
ಸ್ಮರಿಸು ಮನವೆ ಸ್ಮರಿಸು ಸ್ಮರನ ಪಿತನದುರಿತಭವಭಯಸಮೂಹದೂರಮಾವರನಪ.ಒಬ್ಬ ಬಾಲನಯ್ಯನ ಒದೆದಒಬ್ಬ ಬಾಲಗಟವಿಲೊಲಿದಒಬ್ಬ ಬಾಲನ ಅಪ್ಪಿ ರಾಜ್ಯವ ಒಬ್ಬ ಬಾಲಗಿತ್ತುಒಬ್ಬ ಬಾಲೆಯುಂಗುಟದಿ ಪೆತ್ತಒಬ್ಬ ಬಾಲೆಯುಂಗುಟದಿ ಪೊತ್ತಒಬ್ಬ ಬಾಲೆಗಕ್ಷಯ್ಯೆಂದು ಕುಕ್ಷಿಲೊಬ್ಬ ಬಾಲಪನ 1ಇಬ್ಬರ ಮೂರುಸಾರೆಲಳಿದಇಬ್ಬರಿಹ ಭೂಜವ ಮುರಿದಇಬ್ಬರೊಗ್ಗೂಡಿ ಬೆಳೆದು ಹನ್ನಿಬ್ಬರ ಬಡಿದಇಬ್ಬರ ಕಾರಾಗಾರ ತಗಿದಇಬ್ಬರುಪ್ಪು ಬೇಡಲಿ ಸದೆದಇಬ್ಬರಿಂದೈದಿ ಹೋಳಮಯ್ಯನ ನಿಬ್ಬರಿಸಿದನ 2ಮೂರು ಮನೆಯೊಳಗಿಹನಮೂರುಮಾತಿಗೆ ಹೊಂದದವನಮೂರು ಮೈಯನ ಕೃತ ಸೇವೆಗೆ ಮೂರು ರೂಪಾದನಮೂರು ಪೊಳಲ ಹಗೆಕಾರನಮೂರುವೆಂಬನುರುಹಿದನಮೂರಾಂತಕ ಪ್ರಸನ್ವೆಂಕಟ ಮೂರು ಲೋಕೇಶನ 3
--------------
ಪ್ರಸನ್ನವೆಂಕಟದಾಸರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು
ಹರಿತಾ ದೂರಿಲ್ಲ ದೂರಿಲ್ಲಒರಟು ಮಾತಿನ ಸರಕೆ ಸಲ್ಲ ಪ.ಹರಿದಾಸರ ಸಂಗಕೆ ಸರಿ ಇಲ್ಲ ಗುರುಕೃಪೆಯಿರಲಿ ನಿತ್ಯೆಲ್ಲತರತಮವಿರಹಿತಗೆಲ್ಲಿ ಕೈವಲ್ಯವು ಅ.ಪ.ಧರ್ಮಾಥರ್Àಕಾಮ ಮೋಕ್ಷವನಿಚ್ಛಿಸುವನಿರ್ಮಳ ಮತಿಗಳಿಗಾವಾಗಕರ್ಮದ ಮೋಡಿಗೆ ಸಿಲುಕದವನಗುಣಕರ್ಮನಾಮೋಚ್ಚರಣೆ ಸಾಧನ1ಜ್ಞಾನ ಭಕುತಿ ವೈರಾಗ್ಯ ಹೊಲಬಲಿನಾನಾ ವ್ರತವ ಮಾಡಲು ಬೇಕುಹೀನಕೇಳಿಕೆ ಕಾಳಿಕೆಯನುಳಿದುನಿತ್ಯಶ್ರೀನಿವಾಸನೆಗತಿಎನ್ನಲು2ಸಂತತ ಅಂಗದಿ ಬಲವಿರುವನಕಕಾಂತ ಪ್ರಸನ್ವೆಂಕಟಪತಿಯಅಂತರಂಗದಿ ಚಿಂತಿಸಿ ಕಳೇವರವನುಪ್ರಾಂತಯಾತ್ರೆಗೆ ತ್ಯಜಿಸುವಗೆ 3
--------------
ಪ್ರಸನ್ನವೆಂಕಟದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿನಾಮದರಗಿಣಿಯು ಹಾರುತಿದೆ ಜಗದಿ|ಪರಮಭಾಗವತರು ಬಲೆಯ ಬೀಸುವರು ಪಕೋಪವೆಂಬ ಮಾರ್ಜಾಲವು ಕಂಡರೆ ನುಂಗುವುದು |ತಾಪವೆಂಬ ಹುಲಿಯು ಕೊಂಡೊಯ್ವುದದನು ||ಕಾಪಾಡಿರದನು ಹೃದಯದೊಳಗಿಂಬಿಟ್ಟು |ಅಪತ್ತಿಗೊದಗುವುದು ಈ ಮುದ್ದು ಗಿಣಿಯು 1ದಾರಿಯ ನಡೆವಾಗ ಚೋರರ ಭಯವಿಲ್ಲ |ಮಾರಿಬಂದರದನು ಹೊಡೆದು ನೂಕುವುದು ||ಕ್ರೂರ ಯಮಭಟರನು ಮೂಗು ರೆಕ್ಕೆಯಲಿ ಬಡಿದು |ದಾರಿ ತೋರುವುದು ಮುರಾರಿಯ ಪಟ್ಟಣಕೆ 2ಎಷ್ಟೆಂದು ವರ್ಣಿಸಲಿ ಈ ಮುದ್ದು ಅರಗಿಣಿಯು |ಹೊಟ್ಟೆಯೊಳೀರೇಳು ಜಗವನಿಂಬಿಟ್ಟ ||ಸೃಷ್ಟೀಶ ಪುರಂದರವಿಠಲನ ನೆನೆ ನೆನೆದು |ಮುಟ್ಟಿ ಭಜಿಸುವುದು ಈ ಮುದ್ದು ಗಿಣಿಯು 3ಹರಿಯೆ................................................ ಪಹರಿನಿನ್ನ ಕೃಪೆಯೆನಗೆ ಚಂದ್ರ - ತಾರಾಬಲವು |ಹರಿನಿನ್ನ ಕರುಣವೇ ರವಿಯ ಬಲವು ||ಹರಿನಿನ್ನೊಲುಮೆಯೆನಗೆ ಗುರುಬಲವು ಭೃಗುಬಲವು |ಹರಿನಿನ್ನ ಮೋಹವೇ ಶನಿಯ ಬಲವು 1ಮಂಗಳಾತ್ಮಕ ನಿನ್ನ ಅಂಗದರುಶನವೆನಗೆ |ಮಂಗಳನ ಬಲವು ಎನ್ನಂಗಕೀಗ ||ರಂಗಯ್ಯ ನಿನ್ನ ಚರಣಾರವಿಂದವ ನೋಡೆ |ಹಿಂಗಿ ಪೋಪುದು ಅಘವು ಸೌಮ್ಯಬಲವು 2ಆದಿಪುರುಷನೆ ನಿನ್ನ ಅರಿಪುದೇ ಕೇತುಬಲ |ಅದಿಮೂಲನೆ ನಿನ್ನಗುಣಕಥನವ ||ಆದರಿಸಿ ಕೊಂಡಾಡುವುದೆ ಎನಗೆ ರಾಹುಬಲ |ಆದಿಮೂರುತಿ ಬ್ರಹ್ಮಪುರಂದರವಿಠಲ 3
--------------
ಪುರಂದರದಾಸರು
ಹರಿನೀ ಪಿಡಿದ ಕಲ್ಲವೆ ರತುನಹರಿನಿನ್ನಡಿಗಲ್ಲದವನೆ ಯವನಪ.ಹರಿನೀನೊಲಿದ ಕಪಿರಾಜ ವಿಧಿಯುಹರಿನೀನೊಲಿಯದಿರೆ ಕಪಿಗೆ ವಧೆಯುಹರಿನೀ ಗೆಲಿಸೆ ಪಾರ್ಥನಿಗೆ ಗೆಲುವುಹರಿನಿನ್ನ ಛಲದಿ ಕೌರವರಿಗಳಿವು1ಹರಿನೀ ಮೆಚ್ಚಿದರ್ಭಕರಾರ್ಯರುಹರಿನೀ ಮೆಚ್ಚದಾರ್ಯರೆ ಕಿರಿಯರುಹರಿನಿನ್ನುಚ್ಚರಿಪರು ಮಾನ್ಯರುಹರಿನಿನ್ನೆಚ್ಚರಿಲ್ಲದ ಜನರ್ಹುಚ್ಚರು2ಹರಿನೀ ಕನಕಗಿರಿಗಣುಕಲ್ಲೆನಿಪೆಹರಿನೀ ತೃಣವೆಟ್ಟ ಮಾಡುತಲಿಪ್ಪೆಹರಿನೀ ಘನಕೆ ಘನತರ ಮಹಿಮಹರಿನೀ ಪ್ರಸನ್ವೆಂಕಟಪ ಹೊರೆಯೆಮ್ಮ3
--------------
ಪ್ರಸನ್ನವೆಂಕಟದಾಸರು
ಹರಿನೀನೇ ಗತಿಯೆಂದು ನೆರೆನಂಬಿದವರನುಮರೆತಿರುವುದು ನ್ಯಾಯವೆ? ಪಗರುಡಗಮನ ನೀ ಸಿರಿಲೋಲನಾರಿಗೆ |ಅರಸಿ ಎನ್ನನು ಕಾಯ್ವ ದೊರೆಗಳಿನ್ನಾರಯ್ಯ ಅ.ಪಮುಟ್ಟಿ ಪೂಜಿಸಿ ನಿನ್ನ ಇಷ್ಟವ ಬೇಡುವದೃಷ್ಟಿಯೆನ್ನೊಳಗಿದೆಯೆ?ಕಷ್ಟವ ಪಡಲಾರೆ ಸೃಷ್ಟಿಯೊಳಗೆ ಎನ್ನದುಷ್ಟ ಕರ್ಮವ ಬಿಡಿಸಿ ದಿಟ್ಟನೆಂದೆಣಿಸೊ 1ಭುಜಗಶಯನ ನಿನ್ನ ಭಜಕರ ಹೃದಯದಿನಿಜವಾಗಿ ನೀನಿಲ್ಲವೇ?ಅಜನ ಪಿತನೆ ಕೇಳು ತ್ರಿಜಗವೆಲ್ಲವು ನಿನ್ನಸುಜನಪಾಲಕನೆಂದು ಭಜನೆ ಮಾಳ್ಪುದ ಕಂಡು 2ಭಾಗವತರರಸನೆ ಯೋಗಿಗಳೊಡೆಯನೆಬಾಗಿ ಬಿನ್ನಯಿಪೆ ನಿನ್ನಸಾಗರ ಶಯನನೆ ನೀಗಿಸಿ ಶ್ರಮವನುಜಾಗುಮಾಡದೆ ಎನ್ನ ಬೇಗದಿ ಕಾಯಯ್ಯ3ತುಂಟರೈವರ ತುಳಿದು ಕಂಟಕನೊಬ್ಬನ ಕಳೆದು |ಎಂಟು ಮಂದಿಯ ಗರುವವನಳಿದು ||ನಂಟ ನೀ ಬಂದೆನ್ನ ಕಂಟಕವನೆ ಬಿಡಿಸಿ |ಉಂಟಾದ ವೈಕುಂಠ ಬಂಟನೆಂದೆನಿಸೊ 4ಧರಣಿಯೊಳಗೆ ನೀ ಸುಜನರ ಸಲಹುವಬಿರುದು ಪಡೆದವನಲ್ಲವೆ? ||ಸಿರಿರಮಣನೆ ಎನ್ನ ಕರುಣದಿಂದಲಿ ಕಾಯೊ |ಪರಮಪುರುಷಸಿರಿಪುರಂದರವಿಠಲ5
--------------
ಪುರಂದರದಾಸರು