ಒಟ್ಟು 11458 ಕಡೆಗಳಲ್ಲಿ , 137 ದಾಸರು , 6242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನು ನಿನ್ನ ಏನು ಅಂದೆನೊ ರಂಗರಾಯಾ ನಾನು ನಿನ್ನ ಏನು ಅಂದೆ ನಾಲ್ಕು ದಿಕ್ಕಿನೊಳಗೆ ನಿಮ್ಮ ಧ್ಯಾನಪಥವು ದೊಡ್ಡದೆಂದು ದೃಢವು ಮಾಡಿ ಹೇಳ್ದೆನಲ್ಲದೆ ಪ ಕುಂಡಲೀಶ ಶಯನನಾದ ಪುಂಡಲೀಕವರದ ಬ್ರ ಹ್ಮಾಂಡವೆಲ್ಲ ನಿಮ್ಮ ಉದರ ಅಂಡದಲ್ಲಿ ಇರುವುದೆಂದೆ ಮಂಡಿಗೊರಳನು ಇದೆವೆಂದನೆ ಮತ್ತೆ ಮತ್ತೆ ಕುಂಡಗೊಳರ [ಪುಂಡಗೊಲ್ಲರ] ಕುಲದೈವವೆಂದೆನೆ ಹಿಂಡುಲೋಕಗಳಿಗೆಲ್ಲ ಹಿರಿಯ ನೀನೆಯಂದೆನಲ್ಲದೆ 1 ಸಕಲಯೋಗಿ ಜನರ ಹೃದಯ ನಿಖರವಾಗಿ ನಿಂತು ಎಲ್ಲ ಭಕುತರನ್ನು ರಕ್ಷಿಸುವ ಲಕುಮಿರಮಣಾನಂದೆ ನಲ್ಲದೆ ಕಕುಲಾತಿಯ ಮಾಡೆನೆಂದೆನೆ ಅಕಳಂಕ ಮಹಿಮನಾದ ಆದಿ ಮೂರುತಿ ಎಂದೆನಲ್ಲದೆ 2 ಬೊಟ್ಟಿನಿಂದ ಧರೆಯನೆತ್ತಿ ಚೇಷ್ಟೆಜನರ ಉರಳಿಸಿದ ಕೃಷ್ಣ ಮೂರುತಿನೀನೆಯೆಂದು ಇಷ್ಟದಿಂದ ಪಾಡುವೆನಲ್ಲದೆ ಸೃಷ್ಟಿನೀಟಗೊಲ್ಲನೆಂದೆನೆ ನಿನ್ನ ಮಗನ ಸುಟ್ಟು ಅವನ ಮಿತ್ರನೆಂದೆನೆ ಸೃಷ್ಟಿಗಧಿಕವಾದ `ಹೊನ್ನವಿಠ್ಠಲ' ರಾಯನಂದೆನಲ್ಲದೆ 3
--------------
ಹೆನ್ನೆರಂಗದಾಸರು
ನಾನು ಸಜ್ಜನನಾದೊಡೆಹೀನವಿಷಯಂಗಳಿಗೆ ಎರಗುವೆನೇನಯ್ಯ ಪ. ಚಿತ್ತವÀ ಪುರುಷೋತ್ತಮನಲ್ಲಿಡದೆಉತ್ತಮರಾದವರೊಡನಾಡದೆತತ್ವವಿಚಾರವೊಂದರಿಯದೆ ನಾನು-ನ್ಮತ್ತರಸಂಗವ ಮಾಡುವೆನೇನಯ್ಯ1 ನಿರುತವು ಪರನಿಂದೆಗಳ ಮಾಡುತಲಿಗುರುಹಿರಿಯರನು ವಿಚಾರಿಸದೆಗುರುವೆ ದೈವವೆಂದರಿಯದೆ ನಾನುಪರರ ಒಡವೆಯನು ಬಯಸುವೆನೇನಯ್ಯ 2 ಹೇಯಶರೀರವ ಪೋಷಿಸುವೆನೆಂದು-ಪಾಯವನು ಮಾಡಿ ನಾ ಬಳಲುತಿಹೆರಾಯರು ಮಾಡಿದ ಶರಣರ ಹೊರೆವಹಯವದನ ನಿನ್ನ ನಾ ಮರೆತಿಹೆನೇನಯ್ಯ 3
--------------
ವಾದಿರಾಜ
ನಾನೆ ಭ್ರಮಿಸಿದೆನೊ ವಿಷಯದಿ ಮಮತೆ ನೀನೆ ಸೃಜಿಸಿದೆಯೊ ಪ. ಅನಾದಿ ನಿಧಾನ ನೀನೆ ತಿಳಿದು ನೋಡೊ ಅ.ಪ. ಬನ್ನ ಬಡಿಸುತಿದೆಕೈವಲ್ಯದರಸನೆ ನೀ ವಿಚಾರಿಸಿ ಕಾಯೊ 1 ಸ್ವತಂತ್ರ ನೀನು ಅಸ್ವತಂತ್ರ ನಾನು ದೂತನ್ನ ಈ ತೆರಕಾತುರಗೊಳಿಪುದು ಏತರಘನವೊ ಇದರಿಂದಖ್ಯಾತೇನುಫಲವೊ ಎನ್ನೊಳು ನಿನಗೇತಕೀ ಛಲವೊ ಭವದಿ ಕೈ-ಸೋತು ಬಿನ್ನೈಸುವೆ ಮಾತುಮನ್ನಿಸಿ ಕಾಯೊ2 ಕಕ್ಕಸ ಭವದೊಳು ಠಕ್ಕಿಸಿ ಸಿಗಹಾಕಿ ಸಿಕ್ಕುಬಿಡಿಸದೆ ನೀ-ನಕ್ಕು ಸುಮ್ಮನಿರಲು ದಿಕ್ಕ್ಯಾರೊ ಎನಗೆ ದಣಿದು ಮೊರೆ-ಯಿಕ್ಕುವೆ ನಿನಗೆ ಬಂದು ಬೇಗ ನೀ ತಕ್ಕೊನೀ ಕೈಗೆ ಎನ್ನವಗುಣ ಲೆಕ್ಕಿಸದಲೆ ಕಾಯ್ಯಬೇಕಯ್ಯ ಕೊನೆಗೆ 3 ಪ್ರಿಯ ನೀನೆನಗೆಂದು ಅಯ್ಯ ನಿನ್ನ ನಂಬಲು ಮಯ್ಯ ಮರೆಸಿ ವಿ-ಷಯದುಯ್ಯಾಲೆಗೊಪ್ಪಿಸಿದೆ ಸಯ್ಯಲೊ ದೊರೆಯೆ ಇಂಥವನೆಂದುಅಯ್ಯೊ ಮುನ್ನರಿಯೆ ಕರುಣಿ ಎಂಬೊ ಹಿಯ್ಯಳಿ ಸರಿಯೆ ಇನ್ನಾದರುಕಯ್ಯ ಪಿಡಿಯಲು ಕೀರ್ತಿ ನಿನಗೆಲೊ ಹರಿಯೆ4 ಮೊದಲೆಮ್ಮಾರ್ಯರು ನಿನ್ನ ಪದನಂಬಲವರಘ ಸದೆದು ಸಮ್ಮುದದಿಸಂ-ಪದವ ನೀಡಿದೆಯಂತೆ ಅದನು ಮರೆದೆಯೊ ಶಕುತಿಯು ಸಾಲದಲೆ ಜ-ರಿದೆಯೊ ಜನರು ಪೇಳಿದ ಮಾತು ಪುಸಿಯೊ ನಿಜ ತೋರಲು ಬುಧನುತ ಗೋಪಾಲವಿಠಲ ಕೀರುತಿಯೊ 5
--------------
ಗೋಪಾಲದಾಸರು
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು
ನಾನೇನ ಮಾಡಿದೆ ತಪ್ಪುಗಳನ್ನ ನಾನೇನ ಮಾಡಿದೆ ದೇವರದೇವ ಪ ನಿನ್ನ ದಾಸರ ತಪ್ಪನೆಣಿಸದೆ ಪೊರೆಯುವೆ ನಾನೊಬ್ಬ ದಾಸನೆಂದರಿದು ನೀ ಪೊರೆಯೊ 1 ಭೃಗುವಂತೆ ನಿನ್ನಯ ಎದೆಗೆ ತುಳಿಯಲಿಲ್ಲ ನಗವೈರಿಯಂತೆ ಯುದ್ಧವ ಮಾಡಲಿಲ್ಲ 2 ಅಂಗಾಧಿಪತಿಯಂತೆ ಕೊಂದೆನೆಂದರಿತಿಲ್ಲ ಗಂಗೆಯ ಸುತನಂತೆ ಫಣಿಗೆ ಹೊಡೆಯಲಿಲ್ಲ 3 ನಿನ್ನ ಬಿಟ್ಟನ್ಯ ದೇಶಕೆ ಪೋಗಲಿಲ್ಲಾ 4 ಭಾವದಿ ನುಡಿದಂತೆ ನಿನಗೇನು ಪೇಳಿಲ್ಲ 5 ನಿನ್ನಾ ಕುವರರು ಸುಭದ್ರೆಯ ಮದುವೆಯ ಚೆನ್ನಾಗಿ ತಡೆದಂತೆ ತಡೆಯಲಿಲ್ಲವೊ ನಾನು6 ವಸುದೇವ ದೇವಕಿ ಮುಖ್ಯರಂತೆ ನಿನ್ನ ಮಾ- ನುಷನೆಂದು ನಾನೇನು ತಿಳಿದುಕೊಂಡಿಲ್ಲ 7 ಮೌಲಿಯ ಕದ್ದಂತೆ ಕದ್ದುಕೊಂಡಿಲ್ಲ8 ರಾಜೇಶಹಯಮುಖ ಭಜಕರೊಳಗೆ ಮತ್ತೆ ನಿತ್ಯ ಭಕ್ತರಾರಿಹರು 9
--------------
ವಿಶ್ವೇಂದ್ರತೀರ್ಥ
ನಾನೇನಂದನೆ ಭಾವಕಿ ಒಳ್ಳೆಆನಂದಮಯ ಹರಿಹರ ಮುನಿದಿತ್ತಬಾರ ಪ ರಮಣಿ ಕುಚ ಕುಂಕುಮಾಂಕಿತ ವಕ್ಷವಾರಿಧಿಶಯನ ಶ್ರೀವಾಸವಾರ್ಚಿತನಾರದನುತ ಪಂಕಜದೈತ್ಯ ಸಂ-ಹಾರ ಶ್ರೀ ಹರಿಹರನೆಂದೆನಲ್ಲದೆಮಾರಮರ್ಧನನೆಂದೆನೆ ಮೆರೆವ ಸರ್ಪಹಾರ ಕುಂಡಲನೆಂದೆನೆ ಶೋಭಿಸುವ ವೈಯ್ಯಾರ ವಿಭೂಷಣ ಶಂಕರನೆಂದೆನಲ್ಲದೆ 1 ಮಡದಿಯೋರ್ವಳ ನುಡಿ ಕಳ್ಳನೆಂದೆನಲ್ಲದೆ ಮಿಗೆಜಡೆದಲೆಯವನೆಂದನೆ ಪುಲಿದೊಗಲದೃಢದಿ ಹೊದ್ದಿಹನೆಂದೆನೆ ತ್ರೈಲೋಕ್ಯದೊಡೆಯ ಮುರಾರಿ ಮಹದೇವನೆಂದೆನಲ್ಲದೆಧರೆಯನಳೆದು ಕ್ಷತ್ರಿಯರ ಕೊಂದು ಶರಧಿಯನಿರದೆ ಕಟ್ಟಿದ ಕೃಷ್ಣ ಬಹುರೂಪವರಕವಿಗುರುವ ಕರದಿ ಪಿಡಿದು ರಕ್ಷಿಪಬಿರುದಿನ ರಾಯ ರಾವುತನೆಂದೆನಲ್ಲದೆ2 ಗಿರಿಜಾರಮಣನೆಂದೆನೆ ಗುಹಾರಣ್ಯವಾಸಎರಡು ರೂಪದಲಿರುವ ಮೂರುತಿಯೆಂದೆ ನಾ ನಂಬಿದ-ವರಪೊರೆವ ಶ್ರೀಹರಿಹರಲಿಂಗನೆಂದನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಾನೇನಿನಗಂದೆನೋ ಬಿಡದೆ ಪವ ಮಾನ ಪಾಲಿಸೋ ಎನ್ನನು ಪ ದೀನರ ಪಾಲಿಪ ದಾನವಾಂತಕ ಎನ್ನ ಜ್ಞಾನಾನಂದದ ನಾಮ ಧ್ಯಾನವಗೈದೆನೊ ಅ.ಪ ಶರಧಿ ಲಂಘಿಸಿ ರಘು ವರನ ಕುಶಲವಾರ್ತೆಧರೆಜಾತೆಗೆ ಅರುಹಿ ದಶಾಶ್ಯನ ಪುರವ ದಹಿಸಿದಂಥ ಪರಮಸಮರ್ಥನೆಂದರಿತ ಕೊಂಡಾಡಿದೆನಲ್ಲದೆ || ತರು ಚರುವರನೆಂದಿನೆ | ಶಿರದಿ ಕಲ್ಲು ಧರಿಸಿ ತಂದವನೆಂದಿನೆ | ಬ್ರಹ್ಮಾಸ್ತ್ರಕೆ ಭರದಿ ಸಿಲ್ಕಿದಿ ಎಂದೆನೆ ಭಕ್ತೀಲಿ ಭಾವಿ ಸರಸಿಜಾಸ್ರನನೆಂದು ಸ್ಮರಿಸಿದೆನಲ್ಲದೆ 1 ಕೃತಯುಗದಲಿ ಕುಂತಿಸುತನಾಗಿ ಜನಿಸುತ ಪತಿ ಪಿತನಂಘ್ರಿ ಭಜಿಸುತಲಿ ಕ್ಷಿತಿ ಭಾರಕೆ ಖಳ ತತಿಯ ಸಂಹರಿಸಿದಾ ಪ್ರತಿಮಲ್ಲ ನೀನೆಂದು ಸ್ತುತಿಸಿದೆ ನಲ್ಲದೆ ಖತಿವಂತ ನೀನೆಂದಿನೆ ದುನುಜಾತೆಗೆ ಪತಿಯಾದವನೆಂದಿನೆ ಅವಳ ಕೂಡಿ ಸುತನ ಪೆತ್ತವನೆಂದನೆ ಯಾಮಿನಿಯಲಿ ಸತಿಯೆನಿನದವ ನೆಂದೆನೇ ನಿನ್ನನು ಬಿಟ್ಟು ಗತಿನಮಗಿಲ್ಲೆಂದು | ನುತಿಸಿದೆ ನಲ್ಲದೆ 2 ನಡುಮನಿಸುತನಾ ಪೊಡವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸಂದರನ ಧೃಡವಾಗಿ ಸ್ಥಾವಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿಸುತನಾಗಿ ಪೊಡೆವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸುಂದರನ ಧೃಡವಾಗಿ ಸ್ಥಾಪಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿ ಎಂದು ನುಡಿದೆನಲ್ಲದೆ ಹುರಳಿಮೆದ್ದ ಬಡದ್ವಿಜ ಶಿಶುವೇದಿನೆ | ಎತ್ತಿನ ಬಾಲ ಪಿಡಿದೋಡಿ ದವನೆಂದಿನೆ | ಬೆಸರದಿಂದ ಮಡದಿ ಬಿಟ್ಟವ ನೆಂದಿನೆ ಕಡಿಗೆ ಬೋರಿ ಗಿಡವ ಸೇರಿದಿ ತೋರೆಂದು ಅಡಿಗಳಿಗೆರಗಿದೆ ನಲ್ಲದೆ 3
--------------
ಶಾಮಸುಂದರ ವಿಠಲ
ನಾನ್ಯಾರೋ | ಶ್ರೀಹರಿ ಪೇಳೋ ನಾನ್ಯಾರೋ ಪ ನಾನ್ಯಾರೆಂಬುದ ಪೇಳಿ ನೀನ್ಯಾರೆಂಬುದ ತಿಳುಹಿ ಸಾನುರಾಗದಿ ಪೊರೆವ ಪ್ರಭು ನೀನೆ ಬೇರಿಲ್ಲಅ.ಪ. ಎಲ್ಲಿಂದ ಬಂದೆ ನಾನಿಲ್ಲಿಗೆ ಮುಂದೆಲ್ಲಿಗೆ ಪಯಣ ಕೊಂಡೊಯ್ಯುವುದೇನೆಂಬುದರಿಯೆ1 ಜನನಗೊಂಡು ಮಾನುಷ ದೇಹ ತಳೆದನಾ ನೆನಗೆ ಹಿತವಹ ಕಾರ್ಯವನೇನನೆಸಗಿದೆ 2 ದೇಹವೆ ಮನಸೆ ಬುದ್ಧಿಯೇ ನಾನೆಂಬುದನಾರೆಂದರಿಯೆ ನೇಹದಿಂದಿರುವಂತರಾತ್ಮ ತೊಲಗಲು ಮುಂದೀ ದೇಹವು ಕಸಕಿಂತ ಕಡೆಯೆನಿಪುದ ಬಲ್ಲೆ 3 ಕರ್ಮಿ ಜೀವನು ನೀ ಸಾಕ್ಷಿ ನಿರ್ಲಿಪ್ತನು 4 ಏನರಿಯದಲ್ಪನ ಕೈಬಿಡದಿರು ನೀನೆ ಗತಿ ರಘುರಾಮವಿಠಲ ತಂದೆ 5
--------------
ರಘುರಾಮವಿಠಲದಾಸರು
ನಾಮ ಮುದ್ರೆಯ ಧರಿಸೋ ಶ್ರೀಹರಿಯ ದಿವ್ಯ ಪ ನಾಮ ಮುದ್ರೆಯ ಧರಿಸೆ ಆ ಯಮನಾಳುಗಳ ಭೀಮವಿಕ್ರಮದ ಭಯ ಲೇಶವಿಲ್ಲವೋ ಅ.ಪ ಚಕ್ರದೊಳು ಹೀಂಕಾರನಾಮಕನಾಗಿ ನಕ್ರವೈರಿಯ ಕಾಯ್ವ ತಮವನ್ನು ಹರಿಸಿ ವಿಕ್ರಮ ಕೃಧ್ಧೋಲ್ಕ ತಮಲೋಕದೊಳು ಇದ್ದು ಚಕ್ರಧರಿಸದ ಜೀವರ ಕ್ರೂರತನದಲಿ ಶಿಕ್ಷಿಪಾ 1 ಶಂಕಿಸುವವನ ಪಾಪಪಂಕದೊಳಿಟ್ಟು ಮಂಕುಕವಿಸಿ ಮಹೋಲ್ಕ ಶಿಕ್ಷಿಪನಯ್ಯ 2 ಗದೆಯೊಳು ನಿಧನನಾಮಕ ಹರಿಯು ತಾನಿದ್ದೂ ಮುದದಿ ಮರೆಯುವವರನಾ ವೀರೋಲ್ಕ ತಾ ನಿತ್ಯ 3 ಪದುಮನೊಳು ಪ್ರಸ್ತಾವನಾಮದಿ ಪದ್ಮರಹಿತ ಮಾನವರ ದ್ಯುಲ್ಕರೂಪದಿ ನಿತ್ಯ 4 ನಾರಾಯಣ ಮುದ್ರೆಯೊಳು ಉದ್ಗೀಥನು ಹರಿಭಕುತರ ಅಂಧತಾಮಿಶ್ರ ಕಳೆವನು ದುರುಳ ಕಲ್ಯಾದ್ಯರ ಸಹಸ್ರೋಲ್ಕ ರೂಪದಿ ಕ್ರೂರತನದಿ ಅಂಧಂತಮದೊಳಿಡುವನು 5 ನೇಮದಿ ದ್ವಾದಶ ಊಧ್ರ್ವಪುಂಡ್ರಗಳು ಕಮಲ ತುಲಸಿಮಣಿಮಾಲೆಗಳ ಕೊರಳೊಳು ಯಮನಾಳುಗಳ ಭಯ ಲೇಶವಿಲ್ಲೆಂದಿಗೂ 6 ಪಂಚ ಪಂಚ ಕರಣಗಳ ಕಾರ್ಯ ಒಪ್ಪಿಸೇ ಪಂಚನರಕಬಾಧೆ ಕಿಂಚಿತ್ತ್ತಾದರು ಇಲ್ಲ ಪಂಚಾನನನುತ ಶ್ರೀ ವೇಂಕಟೇಶನ ದಿವÀ್ಯ7
--------------
ಉರಗಾದ್ರಿವಾಸವಿಠಲದಾಸರು
ನಾಮಕೆಣೆ ಕಾಣೆ ಮುಕುಂದನ ಪ ಶ್ರೀ ಮನೋರಮ ಸುರಸ್ತೋಮವಿನುತ ನಾಮ ಕಾಮಿತಪ್ರದ ನಾಮ ಮುಕುಂದನ 1 ಕೆಟ್ಟ ಕಿರಾತನು ಮುಟ್ಟಿ ಭಜಿಸಿ ತಾನು ಉ- ತ್ಕøಷ್ಟ ಮುನಿಯಾದನು ಮುಕುಂದನ 2 ಘೋರ ನಾರಕಿಗಳು ನಾರಾಯಣನೆಂದು ಸೂರೆಗೊಂಡರು ಸ್ವರ್ಗವ ಮುಕುಂದನ 3 ನಾರಣ ಬಾರೆಂದು ಚೀರಲು ಅಜಾಮಿಳ ಸೇರಿದನಾಪುವರ್ಗವ ಮುಕುಂದನ 4 ಲಕ್ಷ್ಮೀಕಾಂತನ ನಾಮೋಚ್ಚಾರದಿ ದ್ರೌಪದಿ ರಕ್ಷಿತೆಯಾದಳಿಂದು ಮುಕುಂದನ 5
--------------
ಲಕ್ಷ್ಮೀನಾರಯಣರಾಯರು
ನಾಯಿ ಕಚ್ಚೀತೆಚ್ಚರಿಕೆ ಎಲೋ ಡಾವಿಟ್ಟು ಬರುತಾದೆಚ್ಚರಿಕೆ ಪ ನೋವು ತೀರದೀ ನಾಯಿ ಕಚ್ಚಲು ಕೇವಲ ವಿಷವುಳ್ಳ ಹೇಯನಾಯಿ ಅ.ಪ ಮೆಚ್ಚು ಮದ್ದಿಕ್ಕುವುದು ಅಚ್ಚರೋಗದ ನಾಯಿ ಮುಚ್ಚುಮನೆ ಮುರಿವುದು ಲುಚ್ಚನಾಯಿ ಸಾಚ್ಯನೆಂದು ನಂಬಿ ನೆಚ್ಚಿದವರ ಮೇಲೆ ಕಚ್ಚಿ ಬಿಚ್ಚುವುದೊಂದ್ಹುಚ್ಚು ನಾಯಿ 1 ಸೂಳೆನ್ನ ಹೋಗುವುದು ಮೂಳನಾಯಿ ಶೀಲ ತೊರೆವುದೊಂದು ಜೂಲುನಾಯಿ ಕೀಳರಿಂ ತಲೆಗೂಡಿ ಹಾಳ್ಹರಟ್ಹೊಡೆವುದು ಕೂಳ ಕಾಣದಂಥ ಹಾಳೂರನಾಯಿ 2 ಉಂಡುಂಡು ಮಲಗ್ವುದು ಸುಂಡಿನಾಯಿ ಕಂಡಂತೆ ತಿರಗುವ ದಂಡನಾಯಿ ಹೆಂಡ್ತಿನ್ನ ಬಿಟ್ಟು ಪರರ್ಹೆಂಡರಿಗೊಲಿವುದು ಉಂಡೊಗೆದೆಂಜಲ ನೆಕ್ಕುವ ನಾಯಿ 3 ಬಡವರ ಬಡಿವುದು ಬಡಕನಾಯಿ ಕಡುಗರ್ವದಿರುವುದು ತುಡುಗ ನಾಯಿ ದೃಢಯುತರನು ಕಂಡು ಬಿಡುನುಡಿಯಾಡ್ವುದು ಸುಡುಗಾಡೋಳ್ಬಿದ್ದಸ್ತಿ ಕಡಿಯುವ ನಾಯಿ 4 ವಿಚಾರನರಿಯದ್ದು ಬೇಬಿಟ್ಟಿನಾಯಿ ಅಚಾರಮನವಿಲ್ಲದ್ಹರಕುನಾಯಿ ಊಚಸ್ಥಾನದಿ ಕೂತು ನಾಚದೆ ಮೋರಿಚ್ಛೆ ವಾಚ ಪೇಳ್ವುದೊಂದು ನೀಚನಾಯಿ 5 ಆಸೆ ಪೇಳುವುದೊಂದು ಮೋಸದ ನಾಯಿ ಶಾಶ್ವತ ತಿಳಿಯದ್ದು ಪಾಶದ ನಾಯಿ ಈಶನ ದಾಸರ ದೂಷಿಪುದು ಹೊಲೆ ದಾಸರಮನೆಮುಂದಿನ್ಹೇಸಿನಾಯಿ6 ಕೋಪವ ತೊರೆಯದ್ದು ತಿರುಕನಾಯಿ ಪಾಪಕ್ಕೆ ಅಂಜದ್ದೀ ನರಕಿನಾಯಿ ಭೂಪ ಶ್ರೀರಾಮನ ಜ್ಞಾಪಕಕೆ ತರುವೆನು ಕೂಪದಿ ಉರುಳುವ ಪಾಪಿನಾಯಿ 7
--------------
ರಾಮದಾಸರು
ನಾರಗಾ ಎನುತಂದು ಸಾರಲಾ ನುಡಿಕೇಳಿ ಆರಯ್ದು ಕಯ್ವಿಡಿದು ಕಾಯ್ದೆ ದ್ವಿಜನ ಗೋವಿಂದ ಪೊರೆ ಎಂದು ಗೋಳಿಟ್ರಗಜರಾಜಗಾ ದಿವ್ಯದರ್ಶನಾನಂದಮಾಯ್ತು ಅಕ್ಷಯನೆ ಕಾಪಿಡೆಂದಾಕ್ಷಣವೆ ಪಾಂಚಾಲಿ ಗಕ್ಷಯಾಂಬರಗಳಿಂ ರಕ್ಷೆಯಾಯ್ತು ಪಾರ್ಥಸೂತನೆ ನಿನ್ನನರ್ಥಿಯಿಂ ಕೆಲಸಾರ್ದು ಪ್ರಾರ್ಥಿಸುತ್ತಿರ್ಪೆನೈ ಪರಮಪುರುಷ ವರಶೇಷಗಿರಿನಿಲಯ ಸುಗುಣವಲಯ ಶರದಿಂದು ನಿಭವದನ ಚತುರವಚನ ದಮನ ಗರುಡಗಮನ ಪರಿಪಾಹಿ ಮಮದೇವ ಸುಪ್ರಭಾವ
--------------
ನಂಜನಗೂಡು ತಿರುಮಲಾಂಬಾ
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರದ ಮುನಿಯೇ ಎನ್ನೊಳು ನಮ್ಮನೀರಜಾಕ್ಷನ ಮುಖವನು ತೋರೋ ಪ ಧ್ರುವತಾಯಿ ಮಾತಿಗೆ ನೊಂದಾನು ತನ್ನಭವನದಾಸೆಯ ಬಿಟ್ಟು ಬಂದಾನುಶ್ರವಣ ಮಾಡುತ ಮಂತ್ರ ಅಂದಾನು ಹರಿನವನವ ಮಹಿಮೆಯ ತಿಳಿದಾನು 1 ಮಧುವನದೊಳು ತಪಮಾಡಿದ ಹೃದಯದೊಳುಮಧುಸೂದನ ಮುಖನೋಡಿದಾಮುದದಿಂದ ಹರಿಯನ್ನು ಸ್ತುತಿಸಿದಾ ಮುಕ್ತಸದನ ಶ್ರೀ ಹರಿಪುರ ಸೇರಿದಾ 2 ವರ ಪ್ರಹ್ಲಾದಗೆ ಗರ್ಭದಿ ಕೊಟ್ಟಸುರಮುನಿ ನಿನ್ನುಪದೇಶದಿಹರಿಯನು ಭಜಿಸಿದ ಧೈರ್ಯದಿ ಶಾಲೆತರುಳರಿಗೆಲ್ಲ ಹೇಳಿದ ಬೋಧಿ 3 ಶ್ರೇಷ್ಠ ನಿನ್ನುಪದೇಶ ಕೇಳುತ ಹೀಗೆಎಷ್ಟೋ ಜನರು ಹರಿ ಕಾಣುತಮೆಟ್ಟಿದರು ಹರಿಪುರ ಸುಖಿಸುತ ಎನ-ಗಷ್ಟುಪದೇಶ ಮಾಡೆಲೋ ತಾತ 4 ಕವಿ ಕರುಣಾಳು 5
--------------
ಇಂದಿರೇಶರು
ನಾರದ ಮುನಿವರರೆ | ಸದ್ಗುರುವರ ನಾರಾಯಣ ಪ್ರಿಯಶ್ರೀ ಪ ನಾರದ ಮುನಿವರರೆ ನಿಮ್ಮಯ ಚಾರುಚರಣಕೆ ನಮಿಪೆನು ಆ ದ್ವಾರಕಾಪುರನಿಲಯ ಕೃಷ್ಣನ- ಸಾರ ಪೇಳ್ದಿರಿ ಅ.ಪ. ಪರಮ ಸುಂದರ ರೂಪನು | ಆ ಕೃಷ್ಣನು ಪರತರ ಪರಮಾತ್ಮನು ಶರಣಜನ ಮಂದಾರನಾತನು ಕರುಣಶರಧಿಯು ಕಾಮಜನಕನು ಸರಸಿಜೋದ್ಭವ ಸುರರಿಗಧಿಕನು ಹರಿಯು ಇವನೆಂದರುಹಿದಿರಿ ಗುರು 1 ಲೋಕಮೋಹಕನಯ್ಯನು | ಶ್ರೀಕೃಷ್ಣನು ಲೋಕ ವಿಲಕ್ಷಣನು ಲೋಕ ಕಂಟಕರನ್ನು ಶಿಕ್ಷಿಸಿ ನಾಕ ನಿಲಯರ ಭರದಿ ರಕ್ಷಿಸಿ ಲೋಕ ಕಲ್ಯಾಣವನ್ನು ಗೈದ ತ್ರಿ ಲೋಕದೊಡೆಯನೆಂದರುಹಿದಿರಿ ಗುರು 2 ವಿಧಿ ಶುಭರೂಪನ | ಶ್ರೀಕೃಷ್ಣನ ದೇವಾದಿದೇವೇಶನ ಪಾವನಾಂಘ್ರಿಗಳನ್ನು ಪೂಜಿಸಿ ಸೇವಿಸುವ ಸೌಭಾಗ್ಯವೆಂದಿಗೆ ದೇವ ಕರಿಗಿರಿನಿಲಯ ನರಹರಿ ಯಿವನೆಂಬುದನೆನಗೆ ತಿಳುಹಿರಿ 3
--------------
ವರಾವಾಣಿರಾಮರಾಯದಾಸರು