ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸಗೆ ಭಯವೆಲ್ಲಿ ದಾಸಗೆ ಭಯವೆಲ್ಲಿ ಪ ದಾಸನಾಗದವಗೆ ಭಯವೆಂದಿಗು ತಪ್ಪದು ದಾಸನಾಗಿಹಗೆ ಭಯವೆಂದಿಗು ಬಾರದು 1 ತರಳ ಪ್ರಹ್ಲಾದಗೆ ಭಯವೆಂದಿಗು ಸೋಂಕಲಿಲ್ಲ ತರಳನ ಪಿತಗೆ ಭಯವೆಂದಿಗು ತಪ್ಪಲಿಲ್ಲ 2 ಲಂಕೆಯೊಳಿದ್ದರೂ ದಶಕಂಠನಿಗತಿ ಭಯ ಲಂಕೆಯ ಬಿಟ್ಟ ವಿಭೀಷಣನಿಗಭಯ 3 ಹರನ ಪೀಡಿಸಿದಾ ಭಸ್ಮಾಸುರಗೆ ಭಯ ಹರಿಯ ಸ್ತುತಿಸಿದ ಮಹಾದೇವನಿಗಭಯ 4 ರಾಜೇಶ ಹಯಮುಖನೊಲಿದವನಿಗಭಯ 5
--------------
ವಿಶ್ವೇಂದ್ರತೀರ್ಥ
ದಾಸಜನಕೆ ಸಹಯನಾಗಬಾರದೆ ಪಾದ ಪ ಕಾಸಿನ ಋಣಕಂಜಿ ಆಶಿಸಿ ಪರರಿಂದಾ ಯಾಸದಿ ಬೇಡುವ ಭೋಗ ತಪ್ಪಿಸಲಿಕ್ಕೆ 1 ಎಂದಿಗಾದರಿದು ಒಂದಿನ ನಿಜವಾಗಿ ಕುಂದುವ ಈ ಭವಬಂಧ ತಪ್ಪಿಸಲಿಕ್ಕೆ 2 ಜ್ಞಾನಿಗಳಾಸ್ಪದ ಜ್ಞಾನಮೂರುತಿ ಮಮ ಪ್ರಾಣ ಶ್ರೀರಾಮ ನಿನ್ನ ಧ್ಯಾನ ನಿಲ್ಲಿಸಲಿಕ್ಕೆ 3
--------------
ರಾಮದಾಸರು
ದಾಸಜನರ ಪ್ರಾಣೇಶ ಬಾರೋ ಪ ಉರಗಶಯನ ಬಾರೋ ಗರುಡಗಮನ ಬಾರೋ ಶರಧಿಸುತೆಯ ಪ್ರಾಣದರಸ ಬಾರೋ 1 ಕಲುಷಹರಣ ಬಾರೋ ವಿಲಸಿತಮಹಿಮ ಬಾರೋ ತುಲಸೀಮಾಲನೇ ಸಿರಿಲೋಲ ಬಾರೋ 2 ತರಳನುದ್ಧರ ಬಾರೋ ಕರಿಯಪಾಲನೆ ಬಾರೋ ಮಾನವ ಕಾಯ್ದ ಕರುಣಿ ಬಾರೋ 3 ಭಾವಜನಯ್ಯ ಬಾರೋ ಸೇವಕಜನ ಜೀವದಾಪ್ತ ಬಾರೋ 4 ಭಕ್ತವತ್ಸಲ ಬಾರೋ ಮುಕ್ತಿದಾಯಕ ಬಾರೋ ಭಕ್ತಾಂತರಂಗ ಶ್ರೀರಾಮ ಬಾರೋ 5
--------------
ರಾಮದಾಸರು
ದಾಸನ ಮೇಲಿಷ್ಟು ಬೇಸರವ್ಯಾಕೋ ಶೇಷಶಯನನೆ ನಿನ್ನ ಧ್ಯಾಸದೊಳಿರುವ ಪ ನಶಿಸಿಹೋಗುವ ಕಾಯದ್ವ್ಯಸನವನು ಪರಿಹರಿಸಿ ಹಸನಾದ ಮತಿಯೆನಗೆ ಒಸೆದು ನೀಡೆಂದು ನಿಶಿದಿವದಿ ನಿನ್ನಡಿಕುಸುಮಗಳನಂಬಿ ಮಾ ನಸದಿ ಭಜಿಸಲು ಎನಗೊಶನಾಗದಿರುವಿ1 ಜಡತನದ ಸಂಸಾರ ತೊಡರೆಡರು ಕಡಿದು ಗಡ ಜಡಮತಿಯ ತೊಡೆದೆನಗೆ ದೃಢ ನಿಶ್ಚಯವನು ಕೊಡುಯೆಂದು ದೃಢದಿ ನಿನ್ನಡಿಗೆರಗಿ ಬೇಡಿದರೆ ಒಡಲೊಳಗೆ ನಿಂದೆನ್ನ ಜಡತನಳಿವಲ್ಲಿ 2 ಶ್ರೀಶ ಶ್ರೀರಾಮ ನಿನ್ನ ಧ್ಯಾನಮಾಡಲು ಒಮ್ಮೆ ಅಘ ನಾಶನಲ್ಲೇನು ದಾಸಜನಕರುಣಾಬ್ಧಿ ದಾಸನೊಳ್ದಯವಾಗಿ ಪೋಷಿಸೈ ತವಪಾದ ನಿಜಧ್ಯಾಸವಿತ್ತು 3
--------------
ರಾಮದಾಸರು
ದಾಸನಾಗಬೇಕು ಮನದಲಿ ಆಸೆಯಿಂಗಬೇಕು ಪ ಮೋಸಮೆಂಬುದಂಕುರಿಸದ ಅದರ ವಾಸನೆಯಂಟದ ಮಾನಸದಲಿ ಹರಿಅ.ಪ ಅತಿಮಾತಾಡುವ ಸತಿಯಿರಬೇಕು ಖತಿಯಿಂತೆರಳುವ ನೆಂಟರು ಬೇಕು ಹಿತವನು ಬಯಸದ ಸುತರೂ ಬೇಕು ಸತತಮಿವೆಲ್ಲರ ಸಹಿಸಿ ಭಜನೆಗೈವ 1 ತಣಿವಿಲ್ಲದೆ ತಿಂಬ ಅಣುಗರು ಬೇಕು ಹಣವ ಕೊಡೆಂಬುವ ಅಳಿಯರು ಬೇಕು ಋಣಬಾಧೆಗಳೊಳು ಕೊರಗಲು ಬೇಕು [ಅಣು ಅಣು ಕಾಡುವ ಸಂಸಾರಕಂಟದೆ] 2 ಮಾನಸವ ಬಿಗಿಹಿಡಿದಿರಬೇಕು ಧ್ಯಾನದೊಳಾತ್ಮಶಾಂತಿಯು ಬರಬೇಕು ಶ್ರೀನಿವಾಸನೇ ಶರಣೆನಬೇಕು ಜ್ಞಾನದಿ ಮಾಂಗಿರಿರಂಗನ ಪಾದದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾಸನಾಗಬೇಕು ರಂಗಸ್ವಾ'ುೀಗುರು ನಿಮ್ಮ ದಾಸನಾಗಬೇಕು ಪದಾಸನಾಗಬೇಕು ಕ್ಲೇಶಪಂಚಕವಳಿದು ಆಸೆಯಲ್ಲಿ ಮನಸೂಸದೆ ಸರ್ವದಾ ಅ.ಪಮನದ ಕಲ್ಮಷ ಕಳೆದು ಮಹಾ ರಾಮಕೋಟಿಗಳ ಮ'ಮೆಗಳನು ತಿಳಿದು ಇನಿತು ಈ ಜಗವೆಲ್ಲ ಶ್ರೀರಾಮಮಯವೆಂದು ಘನವಾದ ಮೋಹದಾ ಗಡಿಯನು ದಾಂಟುತ್ತಾ 1ತನುವು ಅಸ್ಥಿರವೆನ್ನುತಾ ತಿಳಿದು ಈ ದುವ್ರ್ಯಾಧಿಪ್ಲೇಗು ಭಯವಬಿಡುತಾ ಘನವಾದ ರಾಮಕೋಟಿಯಲಿ ನೆಲೆಸುತಾಬಿನಗು ಸಂಸಾರದ ಮಮತೆಯ ಬಿಡುತಾ 2ಆರುಚಕ್ರದಿಮೆರೆವ ಅಖಂಡನಾ ಮೂರುಗುಣವತಿಳಿಪ ಆರುಮೂರದಿನಾರು ತತ್ವಾತೀತನಿಜತೋರಿ ರಾಮಕೃಷ್ಣಾದಾಸನುದ್ಧರಿಸಿದರು 3
--------------
ಮಳಿಗೆ ರಂಗಸ್ವಾಮಿದಾಸರು
ದಾಸನಾಗು ಹರಿಯ ದಾಸನಾಗು ಮೋಸಹೋಗದೆ ಭವಕೆ ಬ್ಯಾಸರಾಗು ಪ ಭಾನುಮಂಡಲ ಕಂಡು ಶ್ವಾನನುಬ್ಬರಿಪಂತೆ ಭೂನಾಥನಡಿವಿಡಿದು ಬಾಳ್ವೆ ನಿನಗೆ ಹೀನಮಾನವ ಕಂಡಣಕೆ ನುಡಿದರು ಸರಿಯೆ ಜ್ಞಾನನಿಧಿ ಹರಿಭಕುತಿಯ ಲೆಕ್ಕಿಸದೆ ಮಾಡು1 ಕಾಳುವೆಗ್ಗಳವಾಗೆ ಸುಮತಿ ಸಂಗ್ರಹಿಪಂತೆ ಬಾಳುವೆಯೊಳ್ಹರಿಸೇವೆ ಬಲು ಅಗ್ಗವಂತೆ ಕೀಳು ಜನರಲ್ಲಿ ಲೌಕಿಕತೆ ಮರುಳಾಗಿ ಸಂತೆ ಕೇಳುವವರಾರು ಹರಿಭಕುತಿ ಮಾಡುವವರು2 ಮಾರಿಗಾಹುತಿಯಾಗ್ವ ಕುರಿಮೇಕೆ ತೆರನಂತೆ ಘೊರ ಜವನನು ಮರೆತು ಕೊಬ್ಬುವವರಂತೆ ಶೇರು ನರಸಿಂಹವಿಠ್ಠಲನಂಘ್ರಿಕಮಲವಾ ಆರಾರು ಬಾಧೆಯಿಲ್ಲದೆ ಗತಿಯ ಕೊಡುವಾ 3
--------------
ನರಸಿಂಹವಿಠಲರು
ದಾಸನಾಗೋ ಭವಪಾಶನೀಗೋ - ವಿಶೇಷನಾಗೋ ಪ ಏಸೊ ಕಾಯಂಗಳ ಕಳೆದು ಎಂಬತ್ತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದೆ ಈ ಶರೀರ ತಾನಲ್ಲ ತನ್ನದಲ್ಲಆಶೆಯು ತರವಲ್ಲ ಸ್ಥಿರವಲ್ಲ ಮುಂದೆ ಬಾಹೋದಲ್ಲಆಶಾಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗೊ - ಸಂತೋಷಿಯಾಗೊಅ ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೊ - ಅಲ್ಲಿ ಆಹೋದೇನೊದೋಷನಾಶೆ ಕೃಷ್ಣವೇಣಿ ಗಂಗೆ ಗೋದಾವರಿ ಭವನಾಶಿ ತುಂಗಭದ್ರೆ ಯಮುನೆ ವಾಸದಲ್ಲಿ - ಉಪವಾಸದಲ್ಲಿಮೀಸಲಾಗಿ ಮಿಂದು ಜಪತಪ ಹೋಮನೇಮಗಳಏಸು ಬಾರಿ ಮಾಡಿದರೂ ಫಲವೇನೊ - ಇದು ಚೆಲುವೇನೊವಾಸುದೇವನೆಂಬ ಒಳಗಿಹ ಹಂಸನ ಸೇರಿಲೇಸನುಂಡು ಮೋಸಗೊಳದೆ ಮುಕ್ತನಾಗೊ - ನೀ ಶಕ್ತನಾಗೊ1 ಅತ್ತಲೋ ಇತ್ತಲೋ - ಎತ್ತಲೋ ಈ ಸಂಸಾರಬತ್ತಲೆಗೆ ಬತ್ತಲೆ ನಿತ್ಯವಲ್ಲ - ಪರಿಮಿತಿ ಇಲ್ಲಕತ್ತಲೆ ಕಾವಳದೊಳು ಕಾಣಲಾರದೆ ನೀನುಸತ್ಯವೆಂಬ ದಾರಿಯನು ಸೇರಲಿಲ್ಲ - ಲೇಸು ತೋರಲಿಲ್ಲಉತ್ತಮ ಅ ಉ ಮ ಎಂಬ ಓಂಕಾರ ಬೀಜಾಕ್ಷರಚಿತ್ತದಲಿ ಗ್ರಹಿಸು ನೀ ಬಿಡಬೇಡ - ಬಿಟ್ಟು ಕೆಡಬೇಡಹೊತ್ತಾರೆಯಲೊ ಬೈಗಿನಲೊ ಆಗಲೊ ಈಗಲೊ ಕಾಯನಿತ್ಯವೆಂದು ಸ್ಥಿರವೆಂದು ನಂಬಬೇಡ - ನಿನಗೆ ಡಂಬ ಬೇಡ 2 ಆಯಿತೊ ಹೋಯಿತೊ ಏನಾಯಿತೊ ಈ ದೇಹಕ್ಕೆತಾಯಿ ಯಾರೊ ತಂದೆ ಯಾರೊ ಮಡದಿ ಯಾರೊ ಮಕ್ಕಳ್ಯಾರೊಮಾಯದೊಳು ಸಿಲುಕಿ ಬಲು ಕಾಲದಿಂದ ಶ್ರೀರಘುರಾಯನೆಂಬ ವಸ್ತುವಿನ ಸ್ಮರಣೆ ಬಿಟ್ಟು - ಭವದಿ ಮಮತೆ ಇಟ್ಟುನಾಯ ಬಾಯ ಅರಿವೆಯಂತೆ ನಾನಾ ಕೋಟಲೆಯಲಿ ಬಿದ್ದುಬಾಯಿ ಬಾಯಿ ಬಿಡುತಲಿ ಸಾವುದೇನೊ - ನೀ ನೋವುದೇನೊತ್ರಾಯಿ ತ್ರಾಯಿ ತ್ರಾಯಿಯೆಂದು ತ್ರೈಲೋಕ್ಯದೊಡೆಯ ಪುಣ್ಯದಾಯಕನ ಹೊಂದಿ ನೀ ಧನ್ಯನಾಗೊ - ಮುಕ್ತ ಮಾನ್ಯನಾಗೊ 3 ಸಿರಿ ಕಮಲೇಶನನ್ನುಒಂದು ಬಾರಿ ಅರುಹಿಂದ ನೆನೆಯಲಿಲ್ಲ - ಮನ ತಣಿಯಲಿಲ್ಲಬಂದು ಬಂದು ಭ್ರಮೆಗೊಂಡು ಮಾಯಾಮೋಹಕೆ ಸಿಕ್ಕಿನೊಂದು ಬೆಂದು ಒಂದರಿಂದ ಉಳಿಯಲಿಲ್ಲ - ಬಂಧ ಕಳೆಯಲಿಲ್ಲಸಂದೇಹವ ಮಾಡದಿರು ಅರಿವು ಎಂಬ ದೀಪ ಹಿಡಿದುಇಂದು ಕಾಣು ದೇಹದಲಿ ಪಿಂಡಾಂಡ - ಹಾಗೆ ಬ್ರಹ್ಮಾಂಡಇಂದಿರಾ ರಮಣನ ಧ್ಯಾನವನ್ನು ಮಾಡಿ ವಿವೇಕದಿ ಮುಕುಂದನಿಂದ ಮುಕುತಿಯ ಬೇಡು ಕಂಡ್ಯ - ನೀ ನೋಡು ಕಂಡ್ಯ 4 ತುಂಬಿ ಲಂಡ
--------------
ಕನಕದಾಸ
ದಾಸನಾದರರೂ ಆದ ಘಟಿಕನಾದ ಸೋಜಿಗಾ ವಾಸುದೇವನ ಬಿಡದೆ ಭಜಿಸಿ ಸುಖಿಪ ಮತ್ತೀಗಾ ಪ ಮಂದಿ ಒಳಗೆ ಶೇರದಾಗಿ ನೊಂದು ಬಳಲಿದಾ ಭವ ತಾಪಂಗಳ ಹೊಂದಿ ಅಳಲಿದಾ ಮಂದಿರವೆಲ್ಲೆ ಗೃಹಿಣಿ ಸುತರೆಲ್ಲೆಂದ್ಹಲುಬಿದಾ ಪಾದ ಪಿಡಿದಾನಂದ ತಾಳಿದಾ 1 ಪಿಡಿದ ಕಾರ್ಯ ಬಿಡದೆ ... ಒಡನೆ ಪೀಡೆ ರಾಶಿಯಾಗಿ ಒಡಲ ಮುಸುಕಿತು ಕಡು ಬಡತನದುರಿಯು ಅಡರಿ ಒಡಲ ಸುತ್ತಿತು ಜಡಜನಾಭನೊಲುಮೆಯಿಂದ ಎಡರು ಪೋಯಿತು 2 ಭರದಿ ಸತೀ ಸುತರು ದುಃಖ ಶರದಿ ವಿಹ್ವಲಾ ಇರದೆ ವ್ಯಾಧಿ ಜಲಂಗಳಾ ಉರಿಯ ಉಮ್ಮಳಾ ತೆರೆಯ ಕಂಗಳಿಲ್ಲಾ ಗತಿಯು ಧರೆಯ ಕತ್ತಲಾ ಪೊರೆದ ನರಸಿಂಹವಿಠಲಾ ನಿರುತ ನಿರ್ಮಲಾ 3
--------------
ನರಸಿಂಹವಿಠಲರು
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದಾಸರ ದೂಷಿಪರೊ ಕುಜನರು ಹರಿ- ದಾಸರ ನಿಂದಿಪರೊ ಪ ಏಸೇಸು ಜನುಮದ ದೋಷರಾಶಿಗಳೆಲ್ಲ ನಾಶವಗೈÀವ ಶ್ರೀಕೇಶವನಣುಗರ ಅ.ಪ ಮಂದಮತಿಗಳೆಲ್ಲರೂ ಸಜ್ಜನರ ನಿಂದನೆಯೊಳಗಿಹರೊ ಮುಂದಿನ ಬವಣೆಗಳೊಂದೆಣಿಸದಲೆ ಮು- ಕುಂದನ ಭಕುತರ ಸಂದಣಿ ಸೇವಿಪ 1 ಇಂದಿರೇಶನ ಗುಣವ ಪಾಡುತಲಿ ಆ- ನಂದದೊಳೋಲ್ಯಾಡುವ ನಂದಕಂದನ ಲೀಲೆಯಿಂದ ಹಗಲಿರುಳು ಮು- ಕುಂದನ ಕುಣಿಸುವರೊ ದಣಿಯುವರೊ 2 ಆರು ಮಂದಿಗಳ ಗೆದ್ದು ಹೃದಯದಲ್ಲಿ ಶ್ರೀ- ಮಾಧವನನು ಕಾಂಬರ ಶ್ರೀಧರನಂಘ್ರಿಗಳಾದರದಿಂ ಭಜಿಸಲು ಸಾಧು ಗುರುಗಳು ಇವರು ಸುಂದರರು 3 ಸುರಮುನಿವರ ಪ್ರಿಯನ ಭಕ್ತರಿಗೆಲ್ಲ ವರಗಳ ಕೊಡುತಿಹನ ಪರಮಪಾವನ ಮೂರುತಿಯನೆ ಕೊಂಡಾಡುತ ದುರಿತಗಳಳಿಯುವರ ಪಾವನರ 4 ಕರೆದು ಭಕ್ತರ ಸಲಹುವ ಕರುಣದೊಳು ಮೂ- ಪರಮ ಗುರುಗಳ ಮುಖ್ಯ ಕಾರಣವು ಪಡೆದವರು ಶ್ರೀ-ಕಮಲನಾಭ ವಿಠ್ಠಲನೆನ್ನುವರು5
--------------
ನಿಡಗುರುಕಿ ಜೀವೂಬಾಯಿ
ದಾಸರ ನೆರೆನಂಬಿರೊ ಚಲುವ ವಿಜಯದಾಸರ ನೆರೆನಂಬಿರೊ ಪ ದಾಸರ ನೆರೆನಂಬಿ ಯೇಸು ಜನ್ಮದ ಭವಪಾಶವ ಹರಿಸಿ ರಮೇಶನ್ನ ಮಹಿಮೆಯಲೇಸಾಗಿ ವಿರಚಿಸಿ ಪರಮೋಲ್ಹಾಸದಲಿ ಜೀ-ವೇಶ ಭೇದವ ಯೇಸು ಬಗೆಯಲಿ ತಿಳಿಯುತಲೆ ನೆರೆ-ದೋಷ ಬುದ್ಧಿಯ ನಾಶಗೈವರ ಅ.ಪ. ಇಂದು ನಿಜವು ಕಂದುಗೊರಳಮ-ರೇಂದ್ರವಂದ್ಯ ಮುಕುಂದನನು ಬಿಡ-ದಂದು ಭಜಿಪ ಪುರಂದರನ ಪದದ್ವಂದ್ವಯುಗಳರವಿಂದ ಮಧುಪರ ನಂದದಲಿ 1 ಕಂಟಕ ಬಂಧಹರವೆಂದು ಮನದಲ್ಲಿ ನೆರೆ ತಿಳಿದರಿಂದ || (ದುಡುಕು) ಪರಮ ಧನ್ಯರು ಧರಿಗೆ ಯಾದವ-ರರಸೆ ಪೊರೆವನು ಕರುಣದಲಿ ಭೂಸುರರಗುರುದೊರೆ ಮರುತ ಪೊರೆವನುಸುರರವರ ಕಾದಿಹರು ಯೆನಿಪರ2 ಸಿರಿ ಮಾ-ಧವ ಮೋಹನ ವಿಠಲರೇಯನಅವಸರದ ಕಿಂಕರರ ಭಜಕರು 3
--------------
ಮೋಹನದಾಸರು
ದಾಸರ ಭಾಗ್ಯವಿದು ಪ ತಂದೆ ಮುದ್ದು ಮೋಹನ ದಾಸರ ಭಾಗ್ಯವಿದು ಅ.ಪ. ಕರಿಗಿರಿ ನರಹರಿ ಸಂದರ್ಶನವು | ನರಹರಿ ಭಕುತರ ವಿಹಿತದಸೇವೆ |ಪರಿಪರಿ ಗೈಯ್ಯುತ ಹಿಗ್ಗುತ ನಾನು | ಧರಿಸಿರುವಂಕಿತ ಭಾಗ್ಯವು ಎಲ್ಲಾ 1 ಉರುಗಾದ್ರಿವಾಸನ ಶರಣರ ಕೂಡೆ | ಸರಸದಿ ಕೇಳುತ ಹರಿ ಮಹಿಮೆಯನುಉರುತರ ಸುಖಸಂತೋಷದಿ ಕೀರ್ತನೆ | ಹಿರಿದಾಗಿ ಪಾಡುತ ನರ್ತಿಪುದೆಲ್ಲ2 ಭವನಿಧಿ ದಾಟಿಪ ಹವಣೆಯು ಎನಿಸುವ | ಭುವನ ಮೋಹನನ | ಗುಣರೂಪಗಳನವನವ ಕೀರ್ತನೆ ಸ್ತವನದಲಿ ಗುರು | ಗೋವಿಂದ ವಿಠಲ ನುಡಿಸುವುದೆಲ್ಲಾ 3
--------------
ಗುರುಗೋವಿಂದವಿಠಲರು
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ