ಒಟ್ಟು 9343 ಕಡೆಗಳಲ್ಲಿ , 135 ದಾಸರು , 4870 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಪಾಲಿಸುವುದು ಎಮ್ಮನು ಪರಮಾತ್ಮನ ರಾಣಿ ಕರುಣಾಕರನ ಪಾದಸ್ಮರಣೆಯನೆ ಕೊಟ್ಟು ಪ ಅಮರೇಶ ವಂದ್ಯಳೆ ಕಮಲಾಲಯೆ ನೀಬಂದು ಶ್ರಮವಿಲ್ಲದೆಯನ್ನೆಯ ಮಮತೆಯನು ಬಿಡಿಸು 1 ವಸುದೇವಸುತನ ರಾಣಿ ಅಸುರ ಸಂಹಾರಳೇ ನಿನ್ನ ವಶವಾದ ಮೇಲೆ ಅಂಭ್ರಣಿಯೆ ನಸುನಗುತ ಈಗ 2 ಮಂದರೋದ್ಧಾರಎನ್ನ ಸಂದುಸಂದಲಿ ಕಾರ್ಯವ ನಿಂದುಮಾಡಿಸುವಂಥದನ್ನು ಚಂದದೀಬೋಧವಕೊಟ್ಟು 3 ಮಂಗಳಾಂಗಿಯೆ ನಿನ್ನ ಮುಂಗಾಣದೆಸೊರಗಿದೆ ಅಂಗಜಪಿತನ ಜಾಯೇ ಭಂಗಪಡಿಸದೆಬೇಗಾ 4 ಪದ್ಮಸಂಭವನಮಾತೆ ಮುದ್ದುಮೋಹನವಿಠಲ ಪದ ಪದ್ಮಗಳನೀನೊಲಿದು ಹೃತ್ಪದ್ಮದಲಿ ಕಾಣಿಸುತ 5
--------------
ಮುದ್ದುಮೋಹನವಿಠಲದಾಸರು
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಪರಿಪಾಹಿ ಪದ್ಮಸಂಭವ | ದೇವ ದೇವ ಪ ಕರುಣಾಂಬುನಿಧೆ ತವ ಚರಣವನ್ನು ನಂಬಿದವರ ಅ.ಪ ಸೃಷ್ಟಿಸ್ಥಿತಿಲಯವ ನಿನ್ನಿಷ್ಟದಂತೆ ಮಾಡಿ ಪರ- ಮೇಷ್ಟಿ ಪದದಲಿ ಬಹು ಶ್ರೇಷ್ಠನಾಗಿ ಶೋಭಿಸುವ 1 ಮೂರುಲೋಕಗಳಿಗೆ ಆಧಾರ ನೀನೆ ಎಂದು ನಿನ್ನ ಸಾರ ಸುಖವ ಕೊಡುವ ದೇವ 2 ಗುರುರಾಮವಿಠಲನ ಬಸುರೊಳು ಬಂದವನೆ3
--------------
ಗುರುರಾಮವಿಠಲ
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು
ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು
ಪವನಾಂತರ್ಗತ ಹರಿಯ ಸ್ಮರಣೆಯಮಾಡಿ ಪ ವಿವಿಧ ಭಕುತರು ಕೂಡಿ ಹರುಷದಿ ಪ್ಲವನಾಮ ಸಂವತ್ಸರದಲಿ ಸವಿನಯದಿ ಭಜನೆಗಳ ಮಾಳ್ಪರು ಹರಿಯ ಗುಣ ಕಾರ್ಯಗಳ ಸ್ಮರಣೆಯ ಅ.ಪ ಪಕ್ಷಿವಾಹನ ಹರಿಯು ಶ್ರೀ ಲಕುಮಿದೇವಿಯ ಲೆಕ್ಕಿಸದಿಹನಂತೆ ಹೀಗಿರಲು ಬ್ರಹ್ಮನ ಪೊಕ್ಕುಳಲಿ ಪಡೆದನಂತೆ ಸೊಕ್ಕಿದ ಅಸುರರನು ಬಡಿಯಲು ಮಿಕ್ಕ ಸುರರನು ಪೊರೆಯಲೋಸುಗ ರಕ್ಕಸಾಂತಕ ಹರುಷದಿಂದಲಿ ಚೊಕ್ಕ ಸ್ತ್ರೀ ರೂಪಾದನಂತೆ 1 ಇಂದುಶೇಖರ ಕೇಳಿದ ಸ್ತ್ರೀರೂಪ ನೋಡಲು ಬಂದು ಬೇಡಿದನಂತೆ ಅದು ಕೇಳಿ ಶ್ರೀಶನು ಸುಂದರ ಸ್ತ್ರೀಯಾದನಂತೆ ನಿಂದು ನೋಡುತ ಚಂದ್ರಶೇಖರ ಮಂದಹಾಸದಿ ಪಿಡಿಪೋದನಂತೆ ಮಂದಗಮನೆಯು ಸಿಗದೆ ದೂರದಿ ನಿಂದು ಕಣ್ಮರೆಯಾದಳಂತೆ2 ವಿಸ್ಮಯವಾದನಂತೇ ಪಶುಪತಿಯ ಸಿರದಲಿ ಹಸ್ತ ನೀಡಿದನಂತೇ ಮತ್ತೆ ರಕ್ಷಕರಿಲ್ಲವೆಂದು ತತ್ತರಿಸಿ ಭಯಪಟ್ಟನಂತೆ ತಕ್ಷಣದಿ ಶ್ರೀ ಕಮಲನಾಭ ವಿಠ್ಠಲ ರಕ್ಷಿಸಿ ಪೊರೆದನಂತೆ 3
--------------
ನಿಡಗುರುಕಿ ಜೀವೂಬಾಯಿ
ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪವಮಾನ ಪಾಲಿಸೆನ್ನ ಸದ್ಗುಣಘನ್ನ ಪ ಪವಮಾನ ಪೊರಿಯೆನ್ನ ಕವಿಭಿರೀಡಿತ ನಿನ್ನ ಸ್ತವನಗೈಯುವ ಮಾನವರೊಳಧಮ ನಾನು ಪವಮಾನ ಪಾಲಿಸೆನ್ನ ಅ.ಪ ಪತಿ ಶಿವ ಮುಖ ದಿತಿಜಾರಿತತಿನುತ ಶ್ರುತಿ ಪ್ರತಿಪಾದ್ಯ ಆ ನತ ಬಂಧು ತತ್ವಾಧಿ ಪತಿಗಳೊಳುತ್ತಮ ಪ್ರಥಮಾಂಗ ಹರಿ ಪ್ರೀಯ ದ್ವಿತಿಯುಗದಲಿ ಕಪಿ - ನೀರಜ ಪತಿಯಪಾದದ್ವಯ ಅತಿಹಿತದಲಿ ಸೇವಿಸಿ ಲವಣಾರ್ಣವ ಶತಯೋಜನವ ಲಂಘಿಸಿ ರಾಕ್ಷಸಕುಲ ಹತಗೈಸಿ ಪುರದಹಿಸಿ ದೇವಿಯ ಸುವಾರುತಿಯ ತಿಳಿಸಿ ಭಾವಿದ್ರುಹಿಣನೆಂದೆನಿಸಿ 1 ಕುರುಕುಲದಲಿ ಕುಂತಿ ತರುಳನೆನಿಸೆ ಯುಧಿ ಷ್ಟರನನುಜ ವೃಕೋದರ ನಾಮದಲಿಯವ ತರಿಸಿ ಬಕಾದಿ ದುಷ್ಟರ ಶಿಕ್ಷೆಯನು ಗೈಸಿ ಹರಿಇಚ್ಛೆಯಲಿ ವನಚರಿಸಿ ಕೀಚಕನ ಸಂ ಹರಿಸಿ ದುಶ್ಯಾಸÀನಾದ್ಯರನೆಲ್ಲರಣದೊಳು ದುರುಳದುರ್ಯೋಧನನಸಾನುಜಗಣ ತ್ವರಿತಗೈಸಿ ಹನನ ವಿಜಯನಾಗಿ ಪೊರೆದೆ ಧರ್ಮಾರ್ಜುನನ ತ್ರಿಭುವನದಿ ಸರಿಗಾಣೆ ದ್ವಿಜರಿಪು ಪದುಪಂಚಾನನ 2 ಮಣಿಮಂತ ಮೊದಲಾದದನುಜರು ಹರಿದ್ವೇಷ - ವನು ಮಾಡಲೋಸುಗವನಿಯೊಳುದ್ಭವಿಸಿ ನಿ - ರ್ಗುಣರೂಪ ಕ್ರೀಯ ಬ್ರಹ್ಮನೆನುತ ಹರಿಯತಾ ನೆನಿಪ ದುರ್ಮತವನ್ನು ಘನವಾಗಿ ಪ್ರಬಲಿಸಿ ದನುಜಾರಿಯಾಙÁ್ಞದಿ ಮುನಿಮಧ್ಯ ಸತಿಯಲ್ಲಿ ಮುನಿಮಧ್ವನೆಂದೆನಿಸಿ ಜನಿಸಿ ಕುಮತವನು ಶಾಸ್ತ್ರದಿ ಖಂಡಿಸಿ ಹರಿಯೆ ಪರನೆನಿಪ ಮತವಸ್ಥಾಪಿಸಿ ಮೆರೆದೆ ಈ ಧಾರುಣಿಯೊಳು ವರದೇಶ ವಿಠಲನ ವಲಿಸೆ 3
--------------
ವರದೇಶವಿಠಲ
ಪವಮಾನ-ಪಾವನಮೂರ್ತಿಯು ನೀನು ಕಾವುದೆಮ್ಮನು ಪ ಭುವನ ಚತುರ್ದಶದಲ್ಲಿಹ ಜೀವರ ಜೀವನ ನಿನ್ನದೋ ದೇವವರೇಣ್ಯಅ.ಪ ತೃಣಜೀವರಾದಿ ಸರ್ವರೊಳು ನಿಂತು ಗುಣಕಾಲಕರ್ಮಕ್ಕನುಗುಣನಾಗಿಹ ಫಲವ ನೀನಿತ್ತು ಕ್ಷಣ ಬಿಡದೆಲೆ ನೀನಗಣಿತ ಕಾರ್ಯವ ದಣಿಯದೆ ಮಾಡಿಸಿ ಧಣಿಗರ್ಪಿಸುವಿಯೊ1 ಶ್ರೀ ಜಗದ್ಗುರುವರೇಣ್ಯನೆ ನೀನು ಋಜುಸಾರ್ವಭೌಮ ನಿಜ ಪಾದಾಂಬುಜವ ತೋರಿಸೊ ಇನ್ನು ಈ ಜಗ ಕಾರ್ಯ ನಿವ್ರ್ಯಾಜದಿ ಮಾಡುತ ನೀ ಜಯಾಪತಿಗರ್ಪಿಸಿ ಅಜಪದ ಪಡೆದೆಯೊ2 ಕೋಟಿತ್ರಯರೂಪನೆ ಕಾಯುವುದಯ್ಯ ದಾಟಿಸು ಭವಶರಧಿಯಾ ಪಾಟುಪಟ್ಟದ್ದೆಲ್ಲ ನೀನರಿಯಾ ಸಾಟಿಯುಂಟೆ ಲಲಾಟನೇತ್ರ ಬೆ ನ್ನಟ್ಟಿ ಬರಲು ಕೇದಾರಕೆ ಅಟ್ಟಿದೆ 3 ಮರಣ ಜನುಮಂಗಳು ಬಂದರೆ ಬರಲಿ ಹರಿಗುರುಗಳಲಿ ಸ್ಮರಣೆಯು ತಪ್ಪದೆ ನಿಶ್ಚಲವಿರಲಿ ಉರುತರ ಹರಿಸರ್ವೋತ್ತಮವೆಂಬುವ ತರತಮ ಭೇದವು ನಿರುತವು ಇರಲಿ 4 ಶ್ರವಣ ಮನನಾದಿ ಭಕುತಿಯನ್ನು ಪವಮಾನ ನೀ ಕೊಡು ಅನುಮಾನಿಸಬೇಡವೋ ನೀ ಇದಕ್ಕಿನ್ನು ಭವಮೋಚಕ ಶ್ರೀ ವೇಂಕಟೇಶ ಇನ್ನೊಳಹೊರಗಿಹನೆಂಬುವುದನು ತೋರೋ 5
--------------
ಉರಗಾದ್ರಿವಾಸವಿಠಲದಾಸರು
ಪವಮಾನವಿಠಲ | ಕಾಪಾಡೊ ಇವನಾ ಪ ಭುವಿ ಭವ್ಯ ಮರುತಮತ | ದೀಕ್ಷೆಯುಳ್ಳವನಾ ಅ.ಪ. ಭಾವಿಮಾರುತರ ದಿವ್ಯ | ಪಾದಗಳನಾಶ್ರಯಿಸಿದೇವ ಗುಹ್ಯವು ಎಂಬ | ಆಖ್ಯಾನ ಪಠಿಸೀಭಾವಭಕ್ತಿಯಲಿಂದ | ಪೂರಿತನು ತಾನಾಗಿಧಾವಿಸಿ ಬಂದಿಹನೊ | ಎನ್ನ ಬಳಿಗಾಗಿ1 ಗುರುವನುಗ್ರಹ ಪಡೆದು | ಗುರುದತ್ತ ಅಂಕಿತವನೆರವಿನಾ ಸಾಧನವ | ವಿರಚಿಸಲು ಮಾರ್ಗಅರಿಯದಲೆ ಪ್ರಾರ್ಥಿಸುವ | ಕರುಣಪಯೋನಿಧಿಯೇಪೊರೆಯ ಬೇಕಿವನ ಪರಿಯ | ಮರುತಾಂತರಾತ್ಮ 2 ತರತಮಜ್ಞಾನವನು | ಹರಿಗುರು ಸದ್ಭಕ್ತಿಪರಿಪರಿಯಲಿಂ ವೃದ್ಧಿ | ಗೈಸಿವಗೆ ಹರಿಯೇಗುರು ಕರುಣ ಕವಚದಿಂ | ಹರಿಯ ಸರ್ವೊತ್ತಮತೆಅರಿವಾಗಲಿವಗೆಂದು | ಪ್ರಾರ್ಥಿಸುವೆ ಹರಿಯೆ 3 ಮೂರ್ತಿ | ಕೃತಿರಮಣ ದೇವ 4 ಮಧ್ವ ರಮಣನೆ ದೇವ | ಹೃದ್ಯ ಹರಿ ನಿನಕಾಂಬಹೃದ್ಯ ಸಾಧನ ಗೈಸಿ | ಉದ್ದರಿಸೊ ಇದನಾಶುದ್ಧ ಮೂರುತಿ ಗುರು | ಗೋವಿಂದ ವಿಠಲನೆಬುದ್ಧಿಯಲಿ ನೀನಿಂತು | ಶುದ್ಧ ಮತಿ ಈಯೋ 5
--------------
ಗುರುಗೋವಿಂದವಿಠಲರು
ಪವಮಾನಾ ಮದ್ಗುರವೆ ಪವಮಾನಾ ಪ ಪರಾಕು | ನಾನು | ವಾಕು || ಆಹಾ | ತವಕದಿಂದಲಿ ಸಂಭವಿಸುವ ಮತಿಯಿತ್ತು | ಭವದಿಂದ ಕಡೆಗಿತ್ತು ಅ.ಪ. ಆಶ್ರಿತಜನ ಕಲ್ಪವೃಕ್ಷಾ | ನಿನ್ನ | ಆಶೆಮಾಡಿದೆ ಬಲು ದೀಕ್ಷಾ | ಗುಣರಾಶಿವಿರಾಗ ಪ್ರತ್ಯಕ್ಷ | ವಾಗಿ | ದಾಸತ್ವ ಕೊಡು ಬಲುದೀಕ್ಷಾ || ಆಹಾ || ಏಸು ಜನ್ಮಗಳಿಂದ | ದೋಷವ ಕಳೆದು ಸಂ | ಕರ್ಣ | ಭೂಷಣ ಕೃಪೆ ಮಾಡೊ 1 ಜ್ಞಾನ ಪ್ರಾಣೋತ್ತಮ ರೂಪ | ನಿನ್ನ | ನಾನು ನಂಬಿದೆನೊ ಪ್ರತಾಪ | ಸುರ | ಧೇನು ಭಕ್ತರಿಗೆ ಸಮೀಪ | ಜಗ | ತ್ರಾಣ ಕಪಿಕುಲ ದೀಪ || ಆಹಾ || ಆನಾದಿಯಲಿ ಬಂದು | ಙÁ್ಞನವ ನೋಡಿಸಿ | ಮಾನಸದಲಿ ಭೇದ | ವನ್ನು ಕರುಣಿಸು ನಿತ್ಯಾ 2 ಹರಿದಾಸರೊಳು ಅಗ್ರಣಿಯೆ | ನೋಡು | ಸುರರೊಳು ನಿನಗಾರು ಯೆಣೆಯಾ | ಚಿಂತಿ | ಪರಿಗೆ ಆವಾವಾ ಹೊಣೆಯೇ | ಆಹಾ | ಕರವ ಮುಗಿವೆ ಸಂ | ತೈಸು ಸ್ವಧÀರ್ಮವ | ಮೊರೆ ಹೊಕ್ಕವರ ವಿ | ಸ್ತರವಾಗಿ ಪ್ರತಿದಿನ 3 ತತ್ವೇಶ ಜನರೆಲ್ಲ ನೆರೆದು | ಅಹಂ | ಮತಿಯಲ್ಲಿ ಸತ್ಕರ್ಮ ಮರೆದು | ನಿನ್ನ | ನುತಿಸದೆ ಅತಿಶಯ ಜರೆದು | ತಮ್ಮ | ಗತಿಯೆಲ್ಲ ಅಲ್ಲಲ್ಲೆ ಮರೆದು || ಆಹಾ || ಚತುರಾನನ ಶ್ರೀ | ಪತಿನೋಡುತಲಿರೆ | ಪ್ರತಿಕಕ್ಷಿಯಲ್ಲಿ ಸಂ | ತತಿಯೆನಿಸಿಕೊಂಡೇ 4 ಇಂದ್ರಿಯಂಗಳ ನಿಯಾಮಕನೇ | ಗುಣ | ನಿರ್ಜರ ನಾಯಕನೆ | ಪಾಪ | ಸಿಂಧು ಬತ್ತಿಪ ಪಾವಕನೆ | ನಿಜ | ಬಂಧು ಸಂಶ್ರಿತ ತಾರಕನೇ ||ಆಹಾ || ಇಂದು ಮಹಾದಯ | ಕರ | ತಂದು ಉದ್ದರಿಸಿದ | ಇಂದ್ರಪ್ರಸ್ತನೇ 5 ವಾಕು | ದೇವ | ಯೆನ್ನ ಕುತ್ಸಿತ ಮನ ನೂಕು | ಮುನ್ನೆ | ಘನ್ನ ಭಕುತಿಯ ನೀಡಬೇಕು | ಇಂತು | ಪುಣ್ಯಮಾಡಿಸಿ ಬಿಡದೆ ಸಾಕು ||ಆಹಾ || ಕಣ್ಣುಕಾಣದೆ ಘೋರಾ | ರಣ್ಯದಿ ಬಿದ್ದಿಹೆ | ಬನ್ನ ಬಡಿಸುವದು | ನಿನ್ನ ಧರ್ಮವಲ್ಲಾ 6 ಎಣೆಗಾಣೆನೊ ನಿನ್ನ ಪ್ರೇಮ | ಅನು | ಗುಣ್ಯವಾಗಲಿ ನಿಸ್ಸೀಮ | ಸುಪ್ರ | ಧಾಮ | ಗುಣ | ಪೂರ್ಣ ಮಧ್ವ ಹನುಮ ಭೀಮ ||ಆಹಾ|| ಪನ್ನಂಗಾರಿ ವಾ | ಹನ್ನ ವಿಜಯವಿಠ್ಠ | ಲನ್ನ ಮೂರುತಿಯನ್ನು |ನಿನ್ನೊಳು ತೋರಿಸೋ7
--------------
ವಿಜಯದಾಸ
ಪವಿತ್ರೋತ್ಸವ ಗೀತೆ ಪವಿತ್ರ ಉತ್ಸವವನ್ನು ನೋಡುವ ಬನ್ನಿ ಭಕ್ತರೆಲ್ಲಾ ಪ ವರಶುಕ್ಲಪಕ್ಷದ ಏಕಾದಶಿಯಲಿ ಅನೇಕಾ ಭರಣವ ಬಿಟ್ಟು ರಂಗ ವೈದೀಕನಂತೆ ವೈಜಯಂತಿ ಜನಿವಾರ ಕೌಸ್ತುಭಮಣಿಯು ಕೊರಳೊಳು ಹೊಳೆಯೆ ಓಲ್ಯಾಡುತಲೆ ಅರಳಿದಪುಷ್ಪದ ಮೇಲೆ ಯಾಗಶಾಲೆಗೆ ಬಂದರಂಗನ 1 ವೇದಘೋಷಗಳನ್ನು ವಿಪ್ರರು ಮೋದದಿಂ ಮಾಡುತಿರಲು ವೇದಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರುಅರವತ್ತು ಪೂಜೆಯನು ಮಾಡಿ ಮುದ್ದುರಂಗನಿಗೆ ಮಜ್ಜನವ ಮಾಡಿ ನಿಂದು ಹರುಷದಿ ಯಾಗಪೂರ್ತಿಯ ಮಾಡಿದ ರಂಗನ 2 ತಂದ ತಂಡುಲವರವಿಯೆ ಮಧ್ಯದಿ ಭಾಂಡಗಳ ತಂದಿರಿಸಿ ತಂಬಿ ಪವಿತ್ರವನು ಕಲ್ಪೋಕ್ತದಿಂದ ಪ್ರತಿಷ್ಠೆ ಮಾಡಿ ಒಂದು ಪವಿತ್ರವನು ಪ್ರದಕ್ಷಿಣೆಯಿಂದ ತಂದು ಧರಿಸಿ ಚಂದದಿಂ ವೈಯ್ಯಾರ ನಡೆ ಯಿಂದ ಮಂದಿರಕೆ ನಡೆತಂದ ರಂಗನ 3 ದ್ವಾದಶಿ ದಿವಸದಲಿ ಶ್ರೀರಂಗನ ಪೊಗಳೆ ವೇದಪಾಠಕರು ಅನಾದಿಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರು ಅರವತ್ತು ಮಂಗಳಾರತಿ ಮು ಕ್ತಿದಾಯಕಗೆತ್ತಿ ಪೂಜೆಗೊಂಡು ಪವಿತ್ರವನು ಧರಿಸಿ ವಿ ನೋದ ಸೇವೆಯ ತೋರಿದ ರಂಗನ 4 ಸಂಧ್ಯಾರಾಗದಿ ಇಂದಿರಾಪತಿ ಬಂದು ಮಂಟಪದಲಿ ಚಂದದಿಂದಲೆ ಪೂಜೆ ನೈವೇದ್ಯವ ಆ ನಂದದಿಂದ ಗ್ರಹಿಸಿ ದಿಂಧಿಮಿತೆಂಬ ವಾದ್ಯದಿ ಗೋ ವಿಂದ ತಾನೆ ಪೊರಟು ಚಂದದಿಂದ ಶಾರ್ದೂಲನಡೆ ಯಿಂದ ಮಂದಹಾಸದಿ ಬಂದ ರಂಗನ 5 ಸಪ್ತದಿವಸದಿ ಪವಿತ್ರದಾಭರಣವಿಟ್ಟು ಭಕ್ತವತ್ಸಲ ಕರ್ಪೂರದ ಚೂರ್ಣಾಭಿಷೇಕವ ಅರ್ಥಿಯಿಂದ ಗ್ರಹಿಸಿ ಪತ್ನಿಯರು ಸಹಜವಾಗಿ ಭತ್ತದಕೊಟ್ಟಿಗೆ ಎದುರೆ ಭತ್ತವಳಿಸಿಯೆ ನಿಂತ ಭಕ್ತವತ್ಸಲ ಮಿತ್ರರಎದುರಲಿ ನಿಂದ ರಂಗನ 6 ಒಂಭತ್ತು ದಿನದಲಿ ಅಂಬುಜನಾಭ ಆನಂದ ದಾಭರಣವಿಟ್ಟು ಕುಂದಣದ ಕೋಳಿಕೆಯನೇರಿ [ತುಂಬು ಚೆಲ್ವನಾ] ಚಂದ್ರಪುಷ್ಕರಿಣಿಯಲಿ ಶುಭ್ರತೀರ್ಥವ ಆನಂದದಿಂದಲಿತ್ತು ಬಂದು ಅವಭೃತ ಮಾಡಿಯೆನಿಂದ ಶ್ರೀನಿವಾಸರಂಗನ 7 ಉತ್ಸವದ ಮರುದಿನದಿ ಶ್ರೀರಂಗನು ತನ್ನ ಏಕಾಂತ ಭಕ್ತರಿಗೆ ಇತ್ತು ಪವಿತ್ರದಾಭರಣ ತೀರ್ಥಪ್ರಸಾದವನ್ನು ಮುಕ್ತಿದಾಯಕ ಮುನಿಗಳ ಮುಂದೆ ಚಂದ್ರನಂತೆ ಬ ರುತ್ತಿರಲು ಸುತ್ತ ತಾರಕೆಯಂತೆ ವೈಷ್ಣವರು ಒತ್ತಿ ಬರುವ ಅಂದಚಂದದ 8
--------------
ಯದುಗಿರಿಯಮ್ಮ
ಪಶುಪತಿ ಬಂದ ಆನಂದದಿಂದ ಪ ಶಶಿಧರ ಶಂಕರ ಸುರಗಂಗಾಧರ ಅಸಮ ಸುಶೋಭಿತ ಜಟಾಜೂಟಧರ ಅ.ಪ ಕರÀದಿ ಧರಿಸಿದ ಡಮರುಗ ತ್ರಿಶೂಲ | ಸುಂದರವಾದ ವರಸಾರಂಗ ಸರಸಿಜಭವ ಕಪಾಲ | ಕೊರಳಲಿ ನೋಡೆ ಧರಿಸಿದ ಬಹುಪರಿ ರುಂಡಮಾಲಾ | ಕಿಡಿಗಣ್ಣಿನ ಫಾಲಾ ಗರಳಕಂಠ ಕರಿವರ ಚರ್ಮಾಂಬರ ಸ್ಮರ ಮದಪರಿಹರ 1 ರಜತಾಚಲ ಮಂದಿರವಾಸ | ಮಹೇಶ ಶಿವಕೃತ್ತಿವಾಸ ಭುಜಗಭೂಷಣ ಶೋಭಿತ ವರವೇಷ | ಭಕ್ತರ ಪೋಷ ಗಜಮುಖ ಜನಕ ಭೂತ ಗಣೇಶ ಪಾಪೌಘ ವಿನಾಶ ಕುಜನಾವಳಿ ಮದಗಜ ಮೃಗರಾಜನು ಸುಜನಜಾಲ ಪಂಕಜಹಿತ ದಿನಮಣಿ 2 ಸುರವರನಮಿತಚರಣನು ಬಂದ | ಶೋಭಿತವಾದ ಪರಿಪರಿ ಚಿತ್ರ ಭೂಷಣನು ಬಂದ | ಕೋರಿದವರ ಕರೆದೀವ ಕರುಣಾಭರಣನು ಬಂದ | ತಾನೊಲವಿಂದ ಚರಣ ಶರಣರಘ ಪರಿಹರಗೈಸುವ ಪುರಹರ ಶಂಕರ 3
--------------
ವರಾವಾಣಿರಾಮರಾಯದಾಸರು
ಪಾಂಡವಪಕ್ಷ ಪಾರ್ಥಸಾರಥಿಗೆ ಆಂಡಾಳ್ ಮಾಲೆಯ ಧರಿಸಿದಳು ಪ ಸೃಷ್ಟಿಜಾತೆಯು ಶೃಂಗಾರವಾಗಿ ಬಂದು ಕೃಷ್ಣಮೂರುತಿಯೆದುರಲ್ಲಿ ನಿಂದು ಅಷ್ಟವಿಧದ ಪುಷ್ಟಮಾಲೆಗಳನ್ನು ತೆಗೆದು ತಟ್ಟೆಯೊಳಗೆ ಇಟ್ಟು ಕಳುಹಿದಳು 1 ಆದಿಮೂರುತಿ ಮಂಟಪದಲ್ಲಿ ಕುಳಿತಿರೆ ಶ್ರೀದೇವಿ ಭೂದೇವಿ ಸಹಿತವಾಗಿ ವೇದಮೂರುತಿಯನು ನೋಡಿ ಸಂತೋಷದಿ ಗೋದಾದೇವಿಯು ಮಾಲೆ ಧರಿಸಿದಳು 2 ಮರುಗ ಮಲ್ಲಿಗೆ ಜಾಜಿ ಸುರಗಿ ಶಾವಂತಿಗೆ ಇರುವಂತಿಗೆ ಪಚ್ಚೆ ಮುಡಿದಾಳ ಪರಿಪರಿ ಪುಪ್ಪದ ಸರಗಳ ಪಿಡಿದು ಧರಣಿದೇವಿಗೆ ಸ್ವಾಮಿ ಧರಿಸಿದಳು 3 ತಾಳೆ ಚಂಪಕ ವಕುಳಮಾಲೆ ಮಂದಾರಪುಷ್ಪ ಕಮಲ ಸುಗಂಧರಾಜ ನೀಲವರ್ಣನ ಮುಖ ನೋಡಿ ಸಂತೋಷದಿ ನೀಳಾದೇವಿಯು ಮಾಲೆ ಧರಿಸಿದಳು 4 ಕಮಲವ ಕರದಲ್ಲಿ ಪಿಡಿದಿಹ ಕಾಂತೆಗೆ ಕಮಲವದನೆಯೆಂದೆನಿಸಿದವಳಿಗೆ ಕಮಲಾಕ್ಷಿಗೆ ಶ್ರೀವೆಂಕಟಕೃಷ್ಣನು ಕಮಲನಾಭನು ಮಾಲೆ ಧರಿಸಿದನು 5
--------------
ಯದುಗಿರಿಯಮ್ಮ
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ