ಒಟ್ಟು 3226 ಕಡೆಗಳಲ್ಲಿ , 122 ದಾಸರು , 2221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
--------------
ಪುರಂದರದಾಸರು
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು
ಹರಿಯೆ ಅಚ್ಯುತಾನಂತ ಗೋವಿಂದದುರುಳಹಿರಣ್ಯಕ ಅಸುರ ಅವತರಿಸಿದರೆ ಎಲ್ಲಿಪರಿಪರಿಯ ಲೋಕ ಪಾತಾಳ ಸ್ವರ್ಗವ ಗೆದ್ದುಪಡೆದು ಅವನ ಸತಿಯ ಸುರಪತಿಯು ಎಳೆತರಲುಅಲ್ಲಿ ಗರ್ಭದಲಿ ಪ್ರಹ್ಲಾದನಿಹನೆಂದುಹರಿಯೆ ಚಂಡಹಿರಣ್ಯಕ ಅಸುರ ದಂಡಿಸುವದುಷ್ಟಮರ್ದನ ದೂರಾತಿದೂರ ಜಗ-ಪರಿಪರಿಯಿಂದ ತುತಿಸುತ್ತ ಕರಗಳ ಮುಗಿಯೆಇತ್ತ ಸುರರೆಲ್ಲ ತಮ್ಮ ತತ್ತಸ್ಥಾನಕೆ ಪೋಗೆಒರೆದೊರೆದು ಪೇಳಿ ಬಹು ಬಗೆ ಬಗೆಯಿಂದಲಿನಮ್ಮ ಅಂತರ ತತ್ವ ನಿಶ್ಚಯವೆ ಇದು ಸರಿಅನ್ಯರಲ್ಲವು ನಾವು ಹಿತವರೆ ನಿನಗಿನ್ನುಭಿನ್ನ ದೇಹ್ಯವುನೋಡುಮುನ್ನಿಂದಲಿ ಇನ್ನುಬಾಧ್ಯ ಬಾಧಕ ಹರಿಯೆ ಸಾಧ್ಯ ಸಾಧನಕೆಹರಿಚಂಡಮಾರ್ಯರು ತಾವು ಚೆಲುವ ಬಾಲಕಿ ಕೇಳುಆವ ವಿಪರೀತವನೆ ಅಲ್ಲದ್ದು ನುಡಿದನುಏಸುಬಗೆಯಿಂದ ಉಪಾಯದಲಿ ಕೇಳಿದರುಈಸು ದಿನ ಇವ ಎನ್ನ ಸುತನು ಎಂದರಿದಿದ್ದೆನಾನಾ ಬಗೆಯಿಂದ ವಧೆಗೇನೇನು ಉಪಾಯಎಲ್ಲಿ ಪ್ರಹ್ಲಾದ ನಿನ್ನೊಡೆಯನು ಇನ್ನುಭುಂಗಿ ಭುಂಗಿಗೆ ಬ್ರಹ್ಮಾಂಡವೆಲ್ಲ ಗದ್ದರಿಸಿನ್ನುಬಿರಬಿರನೆ ಕಣ್ಣುಗಳ ಬಿಡುವುತ್ತ ಹೂಂಕರಿಸಿಕೆಡಿಸದೆ ತಾನಿತ್ತವರಸತ್ಯವೆಂದೆನಿಸಿಪರಿಪರಿಯಿಂದ ಸಿರಿದೇವಿಗೆಇದೆ ಸಮಯವೆಂದುಸಿರಿಅಜಭವಾದಿಗಳೆಲ್ಲಪರಿಪರಿಯಿಂದಸುರ ಋಷಿಪಿತೃ ಗಂಧರ್ವಕಂದ ಪ್ರಹ್ಲಾದನ್ನ ಮುಂದಕ್ಕೆ ಕರೆದು ನಿಮ್ಮಮೆಚ್ಚಿದೆನು ಪ್ರಹ್ಲಾದ ವರವ ಬೇಡೆಂದೆನಲುಆಗ ಪ್ರಹಲ್ಲಾದಗೆ ಕರಕಮಲಗಳಿಂದಹರಿಯೆ ಜಗಕಿನ್ನು ಇರತೋರಿನ್ನು ಪ್ರಹಲ್ಲಾದಜಯ ಜಯತು ಪ್ರಹ್ಲಾದವರದ ಜಗದಾಧಾರ
--------------
ಗೋಪಾಲದಾಸರು
ಹರಿಯೆ ಸರ್ವೋತ್ತಮ ಹರಿಯೆ ಪರದೈವತ |ಹರಿಯೆ ಸರ್ವಂ ವಿಷ್ಣುಮಯಂ ಜಗತು ಪ.ಹರಿಯಲ್ಲದನ್ಯತ್ರ ದೈವಗಳುಂಟೆಂದು |ಉರುಗನ ಮುಡಿಯನಾರಾದರೆತ್ತಲಿ ಅಪಜಗಂಗಳ ಪುಟ್ಟಿಸುವಬೊಮ್ಮ ನಿನ್ನ ಮಗ |ಜಗದ ಸಂಹಾರಕ ನಿನ್ನ ಮೊಮ್ಮಗನು ||ಜಗದ ಪಾವನೆ ಭಾಗೀರಥಿ ನಿನ್ನ ಮಗಳು |ಜಗದ ಜೀವನಮಾತೆ ನಿನ್ನರಸಿಯಲೆ ದೇವ 1ವಿಶ್ವತೋಮುಖ ನೀನೆ, ವಿಶ್ವತಶ್ಚಕ್ಷು ನೀನೆ |ವಿಶ್ವತೋಬಾಹುವಿಶ್ವ ಉದರ ನೀನೆ ||ವಿಶ್ವವ್ಯಾಪಾರ ವಿಶ್ವಸೂತ್ರಧಾರಕ ನೀನೆ |ವಿಶ್ವನಾಟಕ ವಿಶ್ವವಿಷ್ಣುವೇ ನಮೋ ನಮೋ 2ಆಗಮನಿಗಮ ಪೌರಾಣ ಶಾಸ್ತ್ರಂಗಳಿಗೆ |ಯೋಗಿಜನಕಗಮ್ಯಮೂರ್ತಿ ನೀನೆ ||ನಾಗಶಯನಸಿರಿ ಭೋಗಿಭೂಷಣವಿನುತ |ಭಾಗವತರ ಪ್ರಿಯ ಪುರಂದರವಿಠಲ 3
--------------
ಪುರಂದರದಾಸರು
ಹರಿಯೆಂಬ ನಾಮಮೃತ ರುಚಿಕರವೆಲ್ಲಪರಮಭಕ್ತರಿಗಲ್ಲದೆ - ಮಿಕ್ಕ -|ಅರಿಯದ ಕಡುಮೂರ್ಖ ಮನುಜರಿಗೆಲ್ಲತಾಹರುಷವಾಗಬಲ್ಲದೆ? ಪಅಂದುಗೆಅರಳೆಲೆಯಿಟ್ಟರೆಕೋಡಗಕಂದನಾಗಬಲ್ಲದೆ? |ಹಂದಿಗೆ ತುಪ್ಪ-ಸಕ್ಕರೆ ತಿನ್ನಿಸಲು ಗ-ಜೇಂದ್ರನಾಗಬಲ್ಲದೆ? ||ಇಂದುಪೂರ್ಣಕಳೆಯೊಳು ತಾನು ತೋರಲುಪರಿಪರಿ ಬಂಗಾರವಿಟ್ಟರೆ ದಾಸಿ ತಾಅರಸಿಯಾಗಬಲ್ಲಳೆ? |ಭರದಿಂದ ಶ್ವಾನನ ಬಾಲವ ತಿದ್ದಲುಸರಳವಾಗಬಲ್ಲದೆ? ||ಉರಗಗೆ ಕ್ಷೀರವನೆರೆಯಲು ಅದು ತನ್ನಗರಳವ ಬಿಡಬಲ್ಲದೆ? ||ಭರದಿಂದ ನೀಲಿಯ ಕರದಿಂದ ತೊಳೆಯಲುಕರಿದು ಹೋಗಬಲ್ಲದೆ? | 2ಮೋಡಕೆ ಮಯೂರ ಕುಣಿವಂತೆ ಕುಕ್ಕುಟನೋಡಿ ಕುಣಿಯಬಲ್ಲದೆ? |ಗೋಡೆಗೆ ಎದುರಾಗಿ ನಾಟ್ಯವಾಡಲುನೋಡಿ ಸುಖಿಸಬಲ್ಲದೆ? ||ಹಾಡಿನ ಕುಶಲತೆ ಬಧಿರನು ತಾ ಸವಿ-ಮಾಡಿ ಕೇಳಬಲ್ಲನೆ? |ರೂಢಿಗೊಡೆಯ ನಮ್ಮಪುರಂದರವಿಠಲಮೂಢಜಾÕನಿ ಬಲ್ಲನೆ3
--------------
ಪುರಂದರದಾಸರು
ಹಲವನು ಯೋಚಿಸಲೇನು ಫಲ ಬರಿ |ಜಲವನು ಮಥಿಸಲಿನ್ನೇನು ಫಲ ||ಕುಲಜನು ಶೂದ್ರನ ಲಲನೆಯ ಕೂಡುತ |ಸಲಿಲದಿ ಮುಳುಗಿದರೇನು ಫಲ ||ಜಲಜಾಕ್ಷನ ಪದದೊಲುಮೆಯಿಲ್ಲದೆನರ|ಬಲಯುತ ತಾನೆನಲೇನು ಫಲ1ಪರಸತಿ ಪರಧನದಾಸೆಯೊಳಿರ್ಪನು |ಸುರನದಿಮುಳುಗಿದರೇನು ಫಲ ||ಪರಮಾತ್ಮನ ತಮ್ಮ ಹೃದಯದಿ ಕಾಣದೇ |ಧರೆಯಲ್ಲರಸಿದರೇನು ಫಲ2ಕಾಣದೆ ಕುಣಿಯೊಳು ಬಿದ್ದಾನೆಯು ಬಲು |ತ್ರಾಣಿಯಂತಾದರಿನ್ನೇನು ಫಲ ||ಕ್ಷೋಣಿಯೊಳಗೆ ಹರಿದಾಸರ ಜರೆಯುತ |ಜ್ಞಾನಿಯು ತಾನೆನಲೇನು ಫಲ3ಧೂರ್ತತನದಿ ಹಣ ಗಳಿಸುತ ಲೋಭದಿಸ್ವಾರ್ಥವೆಂದೆನಿಸಿದರೇನು ಫಲ ||ಪಾತ್ರಾಪಾತ್ರವನೆಣಿಸದೆ ದಾನವ |ಅರ್ತಿಯೊಳೆಸಗಿದರೇನು ಫಲ4ಪತಿಯನು ವಂಚಿಸಿರೂಪಮಾರುವಸತಿ|ವ್ರತಗಳ ಮಾಡಿದರೇನು ಫಲ ||ರತಿಪತಿಪಿತಗೋವಿಂದನ ನೆನೆಯದೆ |ಗತಿಯನುಬಯಸಿದರೇನು ಫಲ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
--------------
ವಾದಿರಾಜ
ಹಸಿವು ಬಹಳಾಗುತ್ತಿದೆ ಕೇಳಮ್ಮಯ್ಯಹಸನಾಗಿ ಉಣಬಡಿಸೇ ಪಬಿಸಿ ಬಿಸಿ ಕಡುಬು ಕಜ್ಜಾಯ ದೋಸೆಯು ಹುಗ್ಗಿಹಸನಾಗಿ ಬಡಿಸಮ್ಮ ಬಿಸಿ ಬಿಸಿಪರಮಾನ್ನಅ.ಪನೀರೊಳು ಮುಳುಗಿ ಬಂದೆ ಭಾರವ ಪೊತ್ತುಕೋರೆಲಿ ಧರಣಿ ತಂದೆಪೋರನೊಡನೆ ವೈರಿಯಾದ ದೈತ್ಯನ ಕರು-ಳ್ಹಾರವ ಮಾಡುತ್ತಭಾಳಬಳಲಿ ಬಂದೆ1ಪೊಡವಿ ದಾನವ ಬೇಡಿದೆ ರಾಜರ ಗೆದ್ದುಕೊಡಲಿ ಕಯ್ಯಲಿ ಪಿಡಿದೆಮಡದಿಯನರಸುತ ಅಡವಿಗಳ ಚರಿಸಿದೆಬಿಡದೆ ದೈತ್ಯರ ಸದೆ ಬಡಿದು ದಣಿದು ಬಂದೆ 2ವಿಷವನುಣಿಸಿದ ದೈತ್ಯಳ ಅಸುವನೆ ಹೀರಿಅಸುರ ಶಕಟನ ಸೀಳಿದೆವಸುದೇವ ಸುತನು ಈ ಅಸುರ ಮರ್ದನನಾಗಿಬಸುರೊಳು ಬ್ರಹ್ಮಾಂಡ ಧರಿಸಿದ ಕಾರಣ 3ಕಿಚ್ಚನುಂಗಿದ ಕಾರಣ ಹೊಟ್ಟೆಯ ಹಸಿವುಹೆಚ್ಚುತಲಿದೆ ನೋಡಮ್ಮಾಕಚ್ಚ ಬರುತಿಹ ಕಾಳಿ ಸರ್ಪನ ಹೆಡೆ ಮೇಲೆನರ್ತನ ಮಾಡುತಭಾಳಬಳಲಿ ಬಂದೆ4ಬತ್ತಲೆ ತಿರುಗಿ ಬಂದೆ ತೇಜಿಯನೇರಿಸುತ್ತಿದೆ ಧರಣಿಯನುಕರ್ತೃ ಶ್ರೀಹರಿಕಮಲನಾಭ ವಿಠ್ಠಲನಿಗೆತೃಪ್ತಿಯ ಪಡಿಸಮ್ಮ ಮುಕ್ತಿಪಥವನೀವೇ 5
--------------
ನಿಡಗುರುಕಿ ಜೀವೂಬಾಯಿ
ಹಿರಿದು ಸಂಸಾರ ನೆಲೆಯದು ಕಲ್ಪತರುಕಾಮಧೇನುವದು ಸುಖವೋ ದುಃಖವೋಹೊನ್ನು ಸತಿಯು ಸುತರೆನ್ನವರೆನ್ನದೆಚಿನ್ಮಯರೂಪೆಂದು ತಿಳಿದುಉನ್ನತವಾಗಿಹ ಸಾಧುಗುಣದಿ ತಾಮುನ್ನ ನೋಡುವವನ ನರನೋ ಹರನೋ1ಮನೆಯು ಮಾತಾ ಪಿತ ಮನುಜವರ್ಗವನೆಲ್ಲಘನಮಹಿಮನ ವಿನೋದವೆಂದುಸನುಮತದಲಿ ತಾನಧಿಕಾರಿಯೆನಿಸಿಯೆಮನದಿ ಸೂಚಿಪುದು ಉರಿಯೋ ಸಿರಿಯೋ2ಬಂಧನದೊಳು ಮಹಾ ನಿಂದನೆಯನು ಕೇಳುತಲಿಕುಂದುಕೊರತೆಗೆಲ್ಲ ಹಿಗ್ಗುತಲಿಇಂದಿದು ಅತ್ಮನ ಲೀಲಾ ಚರಿತನೆಂದುಮುಂದೆ ತೋರುವದಿದು ಭಯವೋ ಜಯವೋ3ಜನನ ಮರಣ ಸುಟ್ಟುಮನುಜ ಜೀವನ ಕೆಟ್ಟುಕನಸಿನ ತೆರ ಸಂಸಾರ ಮೂಡಿದಿನಕರಜ್ಯೋತಿಯಲಿ ಬಹುಬೆಳಗುತಲಿ ತಾ ನಿಹುದುಗೆಲುವೋ ಒಲವೋ4ಕರುಣಕಟಾಕ್ಷಸುಕರುಣ ಶಾಂತತ್ವದಿಸರಸ ಸುಜ್ಞಾನವನಳವಡಿಸಿಗುರುಚಿದಾನಂದಾವಧೂತನೆ ತಾನಾಗಿಹರುಷಿಸಿ ಸುಖಿಪುದು ದೊರೆಯೋ ಚರಿಯೋ5
--------------
ಚಿದಾನಂದ ಅವಧೂತರು
ಹುಚ್ಚು ಹಿಡಿಯಿತೊ - ಎನಗೆ ಹುಚ್ಚು ಹಿಡಿಯಿತು ಪಅಚ್ಯುತನ ನಾಮವೆಂಬ ಮೆಚ್ಚು ಮದ್ದು ತಲೆಗೆ ಏರಿ ಅ.ಪವಾಸುದೇವನೆಂಬ ನಾಮ ವದನದಲಿ ಒದರುವೆ - ಮಾಯಪಾಶವೆಂಬ ಬಲೆಯ ಹರಿದು ಹರಿದು ಬಿಸುಡುವೆ ||ಕೇಶವನ ಹೂವ ಎನ್ನ ಮುಡಿಗೆ ಮುಡಿಸುವೆ - ಭವದಕ್ಲೇಶವೆಂಬ ಗೋಡೆಯನ್ನು ಕೆದರಿಕೆದರಿ ಬಿಸುಡುವಂಥ 1ಕೃಷ್ಣನಂಘ್ರಿ ಕಮಲಗಳಲಿ ನಲಿದು ನಲಿದು ಬೀಳುವೆ -ಭವಕಷ್ಟವೆಂಬ ಕುಂಭಗಳನು ಒಡೆದು ಒಡೆದು ಹಾಕುವೆ ||ನಿಷ್ಠರನ್ನು ಕಂಡವರ ಹಿಂದೆ ಹಿಂದೆ ತಿರುಗುವೆಭ್ರಷ್ಟ ಮನುಜರನ್ನು ಕಂಡು ಕಲ್ಲು ಕಲ್ಲಿಲಿಕ್ಕುವಂಥ 2ಮಂದಮತಿಗಳನು ಕಂಡರೆ ಮೂಕನಾಗುವೆನು - ಹರಿಯನಿಂದೆ ಮಡುವವರ ಮೇಲೆ ಮಣ್ಣ ಚೆಲ್ಲುವೆ ||ಮಂದರಾದ್ರಿಧರನ ದಿನದೊಳನಶನನಾಗುವೆ ಎನ್ನತಂದೆ ಪುರಂದರವಿಠಲನ ಪೊಗಳಿ ಪಾಡಿ ಆಡುವಂಥ 3
--------------
ಪುರಂದರದಾಸರು
ಹೇಗೆ ಮಾಡಲಿ ಮಗುವಿಗೇನಾಯಿತೊ - ಇದರ - |ಆಗಮವ ಬಲ್ಲವರು ತಿಳಿದೆಲ್ಲ ಪೇಳಿ ಪ.ತೂಗಿ ಮಲಗಿಸೆ ಕಣ್ಣ ಮುಚ್ಚಲೊಲ್ಲನು, ಬೆನ್ನ - |ಮೇಗೆ ಬುಗುಟಿಯು, ಎದೆಯು ಕಲ್ಲಾಗಿದೆ |ರೋಗವನೆ ಕಾಣೆ ದಾಡೆಯಲಿ ನೀರಿಳಿಯುತಿದೆ |ಕೂಗುವ ಧ್ವನಿಯೊಮ್ಮೆ ಕುಂದಲಿಲ್ಲ 1ಖಂಡಸಕ್ಕರೆ ಹಣ್ಣ ಕೊಟ್ಟರೊಲ್ಲದೆ ಮಣ್ಣ |ಹೆಂಡೆಯನು ಬೇಡಿ ತಾ ಪಿಡಿವ ಕೊಡಲಿ ||ಮಂಡೆ ಜಡೆಗಟ್ಟಿಹುದು ಮಾಡಲಿನ್ನೇನಿದಕೆ |ಹಿಂಡುಸತಿಯರ ದೃಷ್ಟಿ ಘುನವಾಯಿತೇನೊ2ಮೊಲೆಯನುಂಬಾಗ ಮೈಯಂಬರವನೊದೆಯುತಿದೆ |ಕಲಕಿತದಲಿ ಎನ್ನ ಕೊಲುವುದೇಕೋ ||ತಿಳಿದಿದರ ನೆಲೆಯನರಿತವರನೊಬ್ಬರ ಕಾಣೆ |ಚೆಲುವಸಿರಿಪುರಂದರವಿಠಲ ತಾ ಬಲ್ಲ3
--------------
ಪುರಂದರದಾಸರು
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು
ಹೇಳಿದ ಯಮಧರ್ಮ ತನ್ನಾಳಿಗೆ ಪ.ಹೇಳಿದ ಯಮ ತನ್ನೂಳಿಗದವರಿಗೆಖೂಳದುರಾತ್ಮರಾಗಿ ಬಾಳುವರನು ತರ1ಹರಿಸಂಕೀರ್ತನೆಯನರನಾರಿಯರು ಆದರದಲಿ ಮಾಡಿದವರ ನಿಂದಿಪನ ತರ 2ಹರಿದಾಸರಿಗೆ ಉಣಕರಿಯದೆ ಜನ್ಮಾಂತಒರಟುಮಾತಿನ ಲುಬ್ಧನರನ ನಿಲ್ಲದೆ ತರ 3ಹರಿಕಥಾಮೃತ ಉಪಚಾರಕಾಗಿ ಕೇಳುವಪರನಾರೇರಾಳುವ ದುರುಳನಕಟ್ಟಿತರ4ಗುರುಹಿರಿಯರೊಳು ನೀಚೋತ್ತರವನು ಕೊಡುವಮರುಳಾಗಿ ಮತಿಯ ಸತಿಯರಿಗಿತ್ತವನ ತರ 5ಅಂಬುಜಾಕ್ಷನ ಪೂಜೆ ಸಂಭ್ರಮದಿ ಮಾಡದೆರಂಭೆಯೊಡನಾಡುವ ಡಂಭಕನ ಹಿಡಿ ತರ 6ಒಳ್ಳಿದರ್ಹಳಿದು ತಾ ಬಲ್ಲವನೆನುವಚೆಲ್ವ ಪ್ರಸನ್ವೆಂಕಟ ವಲ್ಲಭನ ವೈರಿಯ ತರ 7
--------------
ಪ್ರಸನ್ನವೆಂಕಟದಾಸರು
ಹೊರ ಹೋಗಿ ಆಡದಿರೊ ಹರಿಯೆ-|ಎನ್ನ ದೊರೆಯೆ ಪಮನೆಯೊಳಗಾಡುವುದೆ ಚೆಂದ - ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ||ವನಿತೆಯರು ಮೋಹದಿಂದ - ನಿನ್ನ |ಮನವಸಹರಿಸಿಕೊಂಬುವರೋ ಗೋವಿಂದ 1ಏನು ಬೇಡಿದರೂ ನಾ ಕೊಡುವೆ-ಕೆನೆ-|ಬೆಣ್ಣೆ ಕಜ್ಜಾಯವ ಕೈಯೊಳಗಿಡುವೆ ||ನಿನ್ನ ಗುಣಗಳನು ಕೊಂಡಾಡುವೆ - ನಿನಗೆ |ಚಿನ್ನ ರನ್ನದ ಅಲಂಕಾರಗಳಿಡುವೆ 2ಹೊಲಸು ಮೈಯವನೆನ್ನುವರೊ-ದೊಡ್ಡ |ಕುಲಗಿರಿಯನ್ನು ಪೊತ್ತವನೆನ್ನುವರೊ ||ಬಲುಕೇಶದವನೆನ್ನುವರೊ-ಆ |ಎಳೆಯನನೆತ್ತಿದ ಕುರೂಪಿಯೆಂಬುವರೊ 3ಭಿಕ್ಷೆಬೇಡಿದೆ ಎಂಬುವರೊ-ಭೂಮಿ |ರಕ್ಷಿಪ ರಾಯರ ಕದಡಿದೆಯೆಂಬುವರೊ ||ಲಕ್ಷ್ಮಿಯ ಕಳೆದೆಯೆಂಬುವರೊ-------ವೈ-|ಲಕ್ಷಣ ಬೆಣ್ಣೆಯ ಕದ್ದೆಯೆಂಬುವರೊ 4ಮಾನಬಿಟ್ಟವನೆನ್ನುವರೊ-ಮಹಾ |ಹೀನರ ಬೆನ್ನಟ್ಟಿ ಹೋದನೆಂಬುವರೊ ||ದಾನವವೈರಿಯೆಂಬುವರೊ-ಸುರ-|ರಾನತ ಪುರಂದರವಿಠಲನೆಂಬುವರೊ 5
--------------
ಪುರಂದರದಾಸರು
ಹೊಲೆಯ ಹೊರಗಹನೆ ಊರೊಳಗಿಲ್ಲವೆಸಲೆ ಶಾಸ್ತ್ರವನು ತಿಳಿದು ಬಲ್ಲವರು ನೋಡಿ ಪ.ಭಾಳದಲಿ ಭಸಿತ ಭಂಡಾರವಿಡದವ ಹೊಲೆಯಕೇಳಿ ಸಲೆ ಶಾಸ್ತ್ರವನು ತಿಳಿಯದವ ಹೊಲೆಯಆಳಾಗಿ ಅರಸರಿಗೆ ಕೈಮುಗಿಯದವ ಹೊಲೆಯಸೂಳೆಯರ ಕೊಡುವಾತನೇ ಶುಧ್ಧ ಹೊಲೆಯ 1ಇದ್ದ ಧನ ದಾನ - ಧರ್ಮವ ಮಾಡದವ ಹೊಲೆಯಕದ್ದು ತನ್ನೊಡಲ ಹೊರೆವಾತನೇ ಹೊಲೆಯಬದ್ಧವಹ ನಡೆ - ನುಡಿಗಳಿಲ್ಲದಿದ್ದವ ಹೊಲೆಯಮದ್ಧಿಕ್ಕಿ ಕೊಲುವವನೆ ಮರಳು ಹೊಲೆಯ 2ಆಶೆಯನು ತೋರಿ ಭಾಷೆಗೆ ತಪ್ಪುವವ ಹೊಲೆಯಲೇಸು ಉಪಕಾರಗಳನರಿಯದವ ಹೊಲೆಯಮೋಸದಲಿ ಪ್ರಾಣಕ್ಕೆ ಮುನಿಯುವವನೇ ಹೊಲೆಯಹುಸಿಮಾತನಾಡುವವನೇ ಸಹಜ ಹೊಲೆಯ3ಕೊಂಡ ಋಣವನು ತಿರುಗಿ ಕೊಡಲರಿಯದವ ಹೊಲೆiÀುಭಂಡ ಮಾತುಳಾಡುವವನೆ ಹೊಲೆಯಗಂಡ - ಹೆಂಡಿರ ನಡುವೆ ಭೇದಗೈವವ ಹೊಲೆಯಹೆಂಡರಿಚ್ಚೆಗೆ ನಡೆವ ಹೇಡಿ ಹೊಲೆಯ 4ಪರಧನಕೆ ಪರಸತಿಗೆ ಅಳುಪಿದವನೇ ಹೊಲೆಯಗುರು ಹಿರಿಯರನು ಕಂಡು ಎರಗದಿದ್ದವ ಹೊಲೆಯಅರಿತು ಆಚಾರವನು ಮಾಡದಿದ್ದವ ಹೊಲೆಯಪುರಂದರವಿಠಲನನು ನೆನೆಯದವ ಹೊಲೆಯ 5
--------------
ಪುರಂದರದಾಸರು