ಒಟ್ಟು 3274 ಕಡೆಗಳಲ್ಲಿ , 123 ದಾಸರು , 2242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ತ್ರೀಯ ತ್ಯಜಿಸಲು ಬೇಕು ಶಿವಧ್ಯಾನಕೆಬಯ್ಯಬೇಡಿರಿ ಬುದ್ಧಿ ಎಂದೆನ್ನಿರಯ್ಯಪಮಹಿಳೆಯ ಮೋಹದಲಿ ಮಗನು ತನ್ನವನೆಂಬೆಮಹಿಳೆಯು ತೆರಳೆ ಮಗನಿಗಾರೋಇಹುದು ಪ್ರಪಂಚವೆಲ್ಲ ಎಲ್ಲ ಸತಿಯಿಂದಲಿಮಹಾದೇವ ಚಿಂತನೆಗೆ ಮರೆವೆ ಸ್ತ್ರೀಯಯ್ಯಾ1ಮಗನು ಶಿಶುವಾಗಿರಲು ಮಾನಿನಿಯ ಬಡಿವನುಮಗ ಬಲಿಯೆ ಮುರಿವನು ನಿನ್ನೆಲುಬನುಮಗನು ಯಾರವ ಹೇಳು ಮನೆಯು ಯಾರದು ಹೇಳುನಗುವು ಅಲ್ಲದೆ ನನ್ನದೆಂತೆನಲಿಕಯ್ಯಾ2ಪತ್ನಿಯನು ಬಯ್ಯೆ ಮಗ ಬಡಿವನು ಎಂಬಹೆತ್ತಾಕೆ ಬಯ್ಯೆ ಹೇವಿಲ್ಲದಿಹನುತೊತ್ತಿನ ಮಗನಾಗಿ ನಿನ್ನ ತಳ್ಳುವನುಮಿತ್ರನಾಗಿಹನವನು ತಾಯಿಗಯ್ಯಾ3ಮನೆಯು ಸವತಿಯವಳದು ಮಕ್ಕಳೆಲ್ಲ ಸವತಿಯದುಎನಿತೆನಿತು ಭಾಗ್ಯ ಸೊದೆ ಎಲ್ಲ ಸವತಿಯಳದುಮನಕೆ ಹೇಸಿಗೆ ಹುಟ್ಟಿ ಮಹಾತ್ಮನಾಗಲುತನ್ನ ಹಿಂದೆ ತಿರುಗುವರೆ ತಿಳಿದು ನೋಡಯ್ಯ4ಸಂಗತಿಯ ಮೂಲದಲಿ ಸುತ್ತಿಹುದು ಪ್ರಪಂಚಕಂಗಳೊಳು ಕಸ ಚೆಲ್ಲಿದಂತೆ ಇಹುದುಮಂಗಳ ಚಿದಾನಂದಮುಕ್ತತಾನಾಗುವುದಕೆಅಂಗನೆಯ ಬಿಡಬೇಕು ಚಿಂತೆ ಯಾಕಯ್ಯಾ5
--------------
ಚಿದಾನಂದ ಅವಧೂತರು
ಸ್ಮರಿಸು ಮನವೆ ಸ್ಮರಿಸು ಸ್ಮರನ ಪಿತನದುರಿತಭವಭಯಸಮೂಹದೂರಮಾವರನಪ.ಒಬ್ಬ ಬಾಲನಯ್ಯನ ಒದೆದಒಬ್ಬ ಬಾಲಗಟವಿಲೊಲಿದಒಬ್ಬ ಬಾಲನ ಅಪ್ಪಿ ರಾಜ್ಯವ ಒಬ್ಬ ಬಾಲಗಿತ್ತುಒಬ್ಬ ಬಾಲೆಯುಂಗುಟದಿ ಪೆತ್ತಒಬ್ಬ ಬಾಲೆಯುಂಗುಟದಿ ಪೊತ್ತಒಬ್ಬ ಬಾಲೆಗಕ್ಷಯ್ಯೆಂದು ಕುಕ್ಷಿಲೊಬ್ಬ ಬಾಲಪನ 1ಇಬ್ಬರ ಮೂರುಸಾರೆಲಳಿದಇಬ್ಬರಿಹ ಭೂಜವ ಮುರಿದಇಬ್ಬರೊಗ್ಗೂಡಿ ಬೆಳೆದು ಹನ್ನಿಬ್ಬರ ಬಡಿದಇಬ್ಬರ ಕಾರಾಗಾರ ತಗಿದಇಬ್ಬರುಪ್ಪು ಬೇಡಲಿ ಸದೆದಇಬ್ಬರಿಂದೈದಿ ಹೋಳಮಯ್ಯನ ನಿಬ್ಬರಿಸಿದನ 2ಮೂರು ಮನೆಯೊಳಗಿಹನಮೂರುಮಾತಿಗೆ ಹೊಂದದವನಮೂರು ಮೈಯನ ಕೃತ ಸೇವೆಗೆ ಮೂರು ರೂಪಾದನಮೂರು ಪೊಳಲ ಹಗೆಕಾರನಮೂರುವೆಂಬನುರುಹಿದನಮೂರಾಂತಕ ಪ್ರಸನ್ವೆಂಕಟ ಮೂರು ಲೋಕೇಶನ 3
--------------
ಪ್ರಸನ್ನವೆಂಕಟದಾಸರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು
ಹಂಗಿಗನಾಗಬೇಡಾ | ಏ ಮನವೇ | ಹಂಗಿಗನಾಗಬೇಡಾ |ಆ ಯಮನಿಗೆ ಹಂಗಿಗನಾಗಬೇಡಾಪಕಾಮಕ್ರೋಧವು ಲೋಭಮದ ಮಾತ್ಸರ್ಯಗಳೆಂಬ |ವ್ಯಾಮೋಹಾದಿಗಳಿಗೆ ಸಿಲುಕಿ ಸುಮ್ಮನೆ ನೀನು1ಪರದಾರಾಂಶದಿ ಮನ | ವಿರಿಸಿ ಕಾಮಾದಿ ವ್ಯರ್ಥ |ಗುರುಹಿರಿಯರಜರೆ| ದಾಡಿ ಗರ್ವದಿ ನೀನು2ಸತಿಸುತರೆಂದೆಂಬ | ಮೋಹಪಾಶಕೆ ಸಿಕ್ಕಿ |ಅತಿಥಿ ಸತ್ಕಾರ ಮಾಡದೆ | ಲೋಭತ್ವದಿ ನೀನು3ಧರಣಿ ದಾನಾದಿಗಳ | ತನು ಶಕ್ತಿ ಮದದಿಂದ |ಪರರಿಗೆ ಕೇಡನ್ನೆ ಬಗೆವ ಮತ್ಸರದಿ ನೀ4ನೆಂಟರಿಷ್ಟರು ಸರ್ವ | ಮಂದಿ ಸೇವಕರೆಂದು |ತುಂಟತನದಿ ಗೋ|ವಿಂದನಾ ಪಾದಮರತು ನೀ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹಂಚು ಬಲ್ಲುದೆ ಹಲ್ಲ ತೆಗೆದರಪಕಾರವನುಮಿಂಚುಳ್ಳ ಕಂಚು - ಕನ್ನಡಿಯಲ್ಲದೆ ಪ.ಕಳ್ಳ ಬಲ್ಲನೆ ತನ್ನ ಕರುಣದುಪಕಾರವನು ?ಕೊಳ್ಳಿ ಬಲ್ಲುದೆ ತನ್ನ ಮನೆಯೆಂಬುದ ?ಸುಳ್ಳಿ ಬಲ್ಲನೆ ಗ್ರಾಮದೊಳಗಣಾ ಸುದ್ದಿಯನು ?ಬಳ್ಳಿಬಲೆ ಬಲ್ಲುದೇ ತನ್ನ ವನವೆಂಬುದನು ? 1ಬಾಳಬಲ್ಲುದೆ ತಾನು ಮೇಲೊಗೆವ ಫಲಗಳನು ?ಸೂಳೆ ಬಲ್ಲುಳೆ ಮನೆಯ ಬಡತನಗಳ ?ಖೂಳ ಬಲ್ಲನೆ ಜಾಣರೊಳಗೊಂದು ಸವಿನುಡಿಯ ?ಕೇಳಬಲ್ಲನೆ ಕಿವುಡ ಏಕಾಂತವ ? 2ಯೋಗಿ ಬಲ್ಲನೆ ಭೋಗದೊಳಗಣಾ ಸುದ್ದಿಯನು ?ಭೋಗಿ ಬಲ್ಲನೆ ಕೆಲಸ - ಉದ್ಯೋಗವ ?ಕಾಗೆಬಲ್ಲುದೆ ಕೋಗಿಲಂತೆ ಸ್ವರಗೈವುದನು ?ಗೂಗೆ ಬಲ್ಲುದೆ ಹಗಲ ಹರಿದಾಟವ ? 3ಕೋಣ ಬಲ್ಲುದೆ ಕುದುರೆಯಂತೆ ವೈಹಾಳಿಯನು ?ಕಾಣಬಲ್ಲನೆ ಕುರುಡ ಕನ್ನಡಿಯನು ?ದೀನವತ್ಸಲ ನಮ್ಮ ಪುರಂದರವಿಠಲನನುಕಾಣಬಲ್ಲನೆ ಜಾÕನವಿಲ್ಲದವನು ? 4
--------------
ಪುರಂದರದಾಸರು
ಹರಿ ಕೊಟ್ಟಕಾಲಕ್ಕೆ ಉಣಲಿಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹರಿಕೊಡದ ಕಾಲಕ್ಕೆ ಬಾಯಿಬಿಡುವೆಯೊ ಪ್ರಾಣಿಪ.ಉಡಲಿಲ್ಲ ಉಣಲಿಲ್ಲ ಕೊಡಲಿಲ್ಲ ಧರ್ಮವ |ಅಡಗಿಸಿ ಇಟ್ಟಿಹೆ ಮಣ್ಣೊಳಗೆ ||ಬಡತನ ಬಂದು ಕಂಬಳಿ ಹೊದೆವಾಗ |ತುಡುಗು ನಿನ್ನ ಜನ್ಮ ಸುಡು ಕಾಣೊಖೋಡಿ1ಹುಗ್ಗಿಯು ತುಪ್ಪವು ಮನೆಯೊಳಗಿರಲಿಕ್ಕೆ |ಗುಗ್ಗರಿಯನು ಮಾಡಿ ತಿನ್ನುವಿಯೊ ||ವೆಗ್ಗಳವಾದ ಯಮಧೂತರು ಎಳೆವಾಗ |ಬುಗ್ಗೆಯ ಹೊಯ್ಕೊಂಡು ಹೋದೆಯೊ ಖೋಡಿ 2ನಂಟರು - ಬಂಧುಗಳೂರೊಳಗಿರಲಿಕ್ಕೆ |ಕುಂಟು ಸುದ್ದಿಗಳನು ಆಡುವೆ ನೀ ||ಕಂಟಕರಾದ ಯಮದೂತರು ಎಳೆವಾಗ |ನಂಟ ಪುರಂದರವಿಠಲನ ದ್ರೋಹಿ 3
--------------
ಪುರಂದರದಾಸರು
ಹರಿಕೃಷ್ಣಾಚ್ಯುತ ಗೋವಿಂದ -ವಾಸುದೇವ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಹರಿ ಎನಬಾರದೆ ? ಪ.ಉದಯಕಾಲದಿ ಏಳುತ - ಸಿರಿಯರಸನ |ಒದಗಿ ಸೇವೆಯ ಮಾಡುತ ||ತದನಂತರ ಭೋಜನದಲಿ ಸ್ಮರಿಸುತ |ಮದಗಜಗಮನೆಯೊಳ್ ಸರಸÀವಾಡುತಲೊಮ್ಮೆ 1ಸಿರಿ ಬಂದಡಸಿದಾಗ - ಮೆರೆಯದಿರು |ಹಿರಿ ಹಿರಿ ಹಿಗ್ಗದಿರು ||ನೆರೆ ಬಡತನಕೆ ಜರ್ಜರಿತನಾದೆ ನೀನು ?ಹರಿನಾಮಸ್ಮರಣೆಯ ಮರೆಯದಿರೆಲೊ ಮನುಜ 2ದುಷ್ಟರುಪದ್ರದೊಳಾಗಲಿ - ರಣರಂಗದ |ದಿಟ್ಟ ಸಮರದೊಳಾಗಲಿ ||ಕಟ್ಟಾರಣ್ಯದೊಳು ಹುಲಿಯು ಬಾಧಿಸುತಿರೆ |ಸೃಷ್ಟಿಗೊಡೆಯ ಪುರಂದರವಿಠಲ ಕಾಯ್ವ 3
--------------
ಪುರಂದರದಾಸರು
ಹರಿನಮ್ಮೊಗತನ ಮಾಡಲೀಸನೆ ಕೇಳಮ್ಮ ಇವನಚರಿಯವಾರ ಮುಂಧೇಳುವನೆ ಗೋಪ್ಯಮ್ಮ ಪತನ್ನೊಳು ತಾನೇ ರುದಿಸುತ ಬಂದ ಕಾಣಮ್ಮ | ಯಾಕೆನೆಕಣ್ಣಿನ ಬೇನೆ ಅತಿ ಕಠಿಣೆಂದಾ ಅವನಮ್ಮ |ಸಣ್ಣನಳುವಳೆ ಮೊಲೆ ಹಾಲ್ತಾ ಎಂದನಮ್ಮ | ನಿನ ಕ-ಯ್ಯನ್ನು ಮುಟ್ಟಿದಿರೆಂದುಮಾನಕೊಂಡನಮ್ಮ 1ತರುಗಳ ಬಾಲಕೆ ತರಳರ ಕೈ ಕಟ್ಟುವನಮ್ಮ | ಯನ್ನಕರದಲ್ಲಿ ಹಿಡಿ ಹಿಡಿಯೆಂದು ತೇಳಿಕ್ಕುವನಮ್ಮ ||ವರಗುವುದೆಲ್ಲಿ ನೀವೆಂದು ಕೇಳುವನಮ್ಮ | ನಿಮ್ಮಪುರುಷರು ಕಾಂಬುವಯಿಲ್ಲ ಎಲ್ಲೆಂಬುವನಮ್ಮ 2ಜೋಗೀ ರೂಪವ ತಾಳಿ ಮನೆಗೆ ಬಂದನಮ್ಮ | ನಾನುಬಾಗಿ ಸುತರಿಲ್ಲೆಂದವನ ಕೇಳಿದೆನಮ್ಮ ||ಹೋಗಲಿ ಎಲ್ಲರೂ ಮಂತ್ರವ ಕೊಡುವೆನೆಂದಮ್ಮಾ | ಕೃಷ್ಣನಾಗಿ ಇದುರಿಗೆ ನಿಂತ ಭಂಡು ಕೇಳಮ್ಮ3ನಾಕು ಬೆರಳ ತೋರಿ ತಲೆದೂಗುವನಮ್ಮ | ಇಂಥ-ದ್ಯಾಕೊ ಎಂದರೆ ಯೀಸೆ ಹಾಲ್ಕೊಡೆಂದನಮ್ಮ ||ಕಾಕುಬುದ್ಧಿಯೊಂದೆರಡೆ ಮೂರೇನಮ್ಮ | ಶ್ರೀ ಪಿ-ನಾಕಿಯಾಣೆ ಕರೆದು ಕೇಳೆ ಗೋಪ್ಯಮ್ಮ4ಮತಿಗೆಠ್ಠೆಣ್ಹುಡುಗರ ಕರೆದೊಯ್ದೋಣ್ಯೊಳಗಮ್ಮಾ | ನಾವುಸತಿಪುರುಷಾಗ್ಯಾಡುವ ಬಾ ಎಂಬೊನಲ್ಲಮ್ಮ ||ಪೃಥಿವಿಯ ಹುಡುಗರ ತೆರದರೆ ಚಿಂತಿಲ್ಲಮ್ಮ | ಇವನುಸುತರನು ಪಡೆವದು ಬಲ್ಲನೇ ಸುಳ್ಳಮ್ಮ 5ನವನೀತವ ಕೊಳ್ಳೆಂದೊದರುತ ಬಂದನಮ್ಮ | ನಾನುಹವರನ ಕಾಶಿಗೆ ಎಷ್ಟೆಂದು ಕೇಳಿದೆನೆಮ್ಮ ||ಖವ ಖವ ನಗುತಲಿ ಬದಿಬದಿಗೆ ಬಂದನಮ್ಮ | ತಕ್ಕೊಯುವತಿ ಇದರಷ್ಟೆಂದು ಕುಚ ಮುಟ್ಟುವನಮ್ಮ 6ಹಿತ್ತಲ ಕದಕೆ ಶೀ(ಕೀ)ಲ್ಯುಂಟೋ ಇಲ್ಲೆಂಬುವನಮ್ಮ | ನಮ್ಮ-ಅತ್ತೆಯ ಕಣ್ಣು ಹೋಗಲಿ ಎನಬೇಕೇನಮ್ಮ ||ಉತ್ತರ ಕೊಡದಿರೆ ಒಪ್ಪಿದೆ ಇದಕೆಂಬುವನಮ್ಮ | ಇಷ್ಟೊಂ-ದರ್ಥೆ ಪ್ರಾಣೇಶ ವಿಠಲಗೆ ಯಶೋದೆಯಮ್ಮ 7
--------------
ಪ್ರಾಣೇಶದಾಸರು
ಹರಿಪದಯುಗಲವನಿತ್ಯ ನೆನೆದವೆಗೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಮಪದವಿಯೇ ಸಾಕ್ಷಿ ||ಹರಿ -ಗುರು ದೂಷಣ ಮಾಡಿದ ಮನುಜಗೆ |ನರಕರೌರವವೆ ಸಾಕ್ಷಿ ಪ.ಕಡುಭಕ್ತಿಯಲಿ ಕೃಷ್ಣನÀ ನೆನೆದರೆ |ನಡೆಯಲಿ ಸತ್ಯವೆ ಸಾಕ್ಷಿ ||ದೃಡ ಭಕುತಿಯಿಂದ ಉಣಬಡಿಸಿದವಗೆ |ಷಡುರಸಾನ್ನವೇ ಸಾಕ್ಷಿ 1ತಾನೊಂದುಂಡು ಪರರಿಗೊಂದಿಕ್ಕುವಗೆ |ಗುಲ್ಮರೋಗವೇ ಸಾಕ್ಷಿ ||ಹೀನನಾಗಿ ಹಿರಿಯರನು ದೂಷಿಪಗೆ |ಹೀನ ನರಕವೇ ಸಾಕ್ಷಿ 2ಕನ್ಯಾದಾನವ ಮಾಡಿದವಗೆ ದಿವ್ಯ |ಹೆಣ್ಣಿನ ಭೋಗವೆ ಸಾಕ್ಷಿ ||ಕನ್ಯಾದಾನವ ಮಾಡದ ಮನುಜಗೆ |ಹೆಣ್ಣಿನ ದೈನ್ಯವೇ ಸಾಕ್ಷಿ 3ಅನ್ನದಾನ ಮಾಡಿದ ಮನುಜಗೆ ದಿ - |ವ್ಯಾನ್ನವನುಂಬುದೆ ಸಾಕ್ಷಿ ||ಅನ್ನದಾನ ಮಾಡದ ಮನುಜಗೆ ತಿರಿ -ದುಣ್ಣುತಿರುವುದೇ ಸಾಕ್ಷಿ 4ಕ್ಷೇತ್ರದಾನ ಮಾಡಿದ ಮನುಜಗೆ ಏತ - |ಛತ್ರವನಾಳ್ವುವದೆ ಸಾಕ್ಷಿ ||ಪಾತ್ರವರಿತು ಧರ್ಮಮಾಡಿದವಗೆ ಸತ್ -ಪುತ್ರರಾಗುವುದೆ ಸಾಕ್ಷಿ 5ಕಂಡ ಪುರುಷರಿಗೆ ಕಣ್ಣಿಡುವ ನಾರಿಗೆ |ಗಂಡನು ಕೇಳುವುದೆ ಸಾಕ್ಷಿ ||ಪುಂಡನಾಗಿ ಪರಸ್ತ್ರೀಯರ ಸೇರುವಗೆ |ಹೆಂಡಿರ ಕಳೆವುದೆ ಸಾಕ್ಷಿ 6ಭಕ್ತಿಯರಿಯದ ಅಧಮನಿಗೊಂದು |ಕತ್ತಲಮನೆಯೇ ಸಾಕ್ಷಿ ||ಮುಕ್ತಿಪಡೆವುದಕೆ ಪುರಂದರವಿಠಲನ |ಭಕ್ತನಾಗುವದೆ ಸಾಕ್ಷಿ 7
--------------
ಪುರಂದರದಾಸರು
ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
--------------
ಪುರಂದರದಾಸರು
ಹರಿಯೆ, ಕುಣಿಯೆನುತ -ನರ -ಹರಿಯೆ, ಕುಣಿಯೆಂದು ಕುಣಿಸಿದರಯ್ಯ ಪಲೋಕವ ತಾಳ್ದನ ಮನೆಯಲಿ ಪುಟ್ಟಿ |ತೂಕದ ನುಡಿಗಳ ಕದ್ದವನ ||ನಾಕರಿಸಲು ನಿಜ ಗೋಪರೂಪದಿಂದ |ಆಕರಿಸಿದನಾ ಕುಣಿಸಿದರಯ್ಯ 1ಎಡೆಯಿಲ್ಲದೆ ನಡೆವನ ಕೂಡಿರುವವನ |ಹಿಡಿಲೆಂಬನ ಒಡಹುಟ್ಟಿದನ ||ಒಡೆಯನ ಕಂದನ ವೈರಿಯ ಬಂಡಿಯ |ಹೊಡೆದ ಮಹಾತ್ಮನ ಕುಣಿಸಿದರಯ್ಯ 2ಒಣಗಿದ ಮರ ಎಲೆಯಿಲ್ಲದ ಬಳ್ಳಿ |ಬಣತಿಗೆ ಪುಟ್ಟಿದ ವನದಲ್ಲಿ ||ಕ್ಷಣ ಮುನ್ನರಿಯದೆ ಅದರ ಆಹಾರಕೆ |ಫಣಿಯ ಮೆಟ್ಟಿದನ ಕುಣಿಸಿದರಯ್ಯ 3ಮಾವನೊಡನೆ ಮನೆಮಾಡಿ ಗೋಕರ್ಣದಿ |ಆ ವುರಗನ ಮೇಲ್ಮಲಗಿದನ ||ಮೂವರ ಮೊಲೆಯುಂಡ ಮೂಲೋಕವರಿಯದ |ಮೂವರಣ್ಣನೆಂದು ಕುಣಿಸಿದರಯ್ಯ 4ಗೋಕುಲದೊಳಗಿನ ಗೋಪಿಯರೆಲ್ಲ |ಏಕಾಂತದಿ ತಮ್ಮೊಳು ತಾವು ||ಶ್ರೀಕಾಂತನ ನಮ್ಮ ಪುರಂದರವಿಠಲನ |ಏಕ ಮೂರುತಿಯೆಂದು ಕುಣಿಸಿದರಯ್ಯ 5
--------------
ಪುರಂದರದಾಸರು
ಹಿಡಿರಂಗ ಜವಳಿಕೊಡು ಉಡುಗೊರೆಪಾಲ್ಗಡಲ ಶಯನಭೂಪತಿ ಗುಡುಗೊರೆ ಪ.ತಟಿತ್ತಾ ಸರಸವುಳ್ಳಪಟ್ಟಾವಳಿಧೋತರದಟ್ಟಿತ ವಾಗಿದ್ದ ಬಿಡಿಮುತ್ತುದಟ್ಟಿತವಾಗಿದ್ದ ಬಿಡಿ ಮುತ್ತು ಮುತ್ತಿನಕಂಠಿಮಠದವರಿಗೆ ಕೊಟ್ಟ ಉಡುಗೊರೆ 1ಬಟ್ಟು ಗೋಲಂಚಿನಧಿಟ್ಟಾದ ಧೋತರಬಟ್ಟಿಗುಂಗುರ ಉಡದಾರಬಟ್ಟಿಗುಂಗುರ ಉಡದಾರ ಶೂರಪಾಲಿಕಟ್ಟಿಯವರಿಗೆ ಕೊಟ್ಟ ಉಡುಗೊರೆ 2ಹತ್ತು ಬಟ್ಟಿಗೆ ತಕ್ಕಮುತ್ತಿನ ಉಂಗುರಮತ್ತೆ ಎಲೆ ಅಡಕೆ ನಡುವಿಟ್ಟುಎಲೆ ಅಡಕೆ ನಡುವಿಟ್ಟು ಇವರಮನೆಜೋಯಿಸರಿಗೆ ಕೊಟ್ಟ ಉಡುಗೊರೆ 3ಅಕ್ಕ ಕೊಲ್ಹಾಪುರಮುಖ್ಯ ಪಂಢರಾಪುರಚಿಕ್ಕ ಸಾತಾರೆ ಪುಣೆಯವಚಿಕ್ಕ ಸಾತಾರೆ ಪುಣೆಯವ ಪೈಠಣ ಶಾಲುಮುಖ್ಯ ಗಲಗಲಿಯವರಿಗೆ ಉಡುಗೊರೆ 4ಕಂಕಣವಾಡಿ ಮುಂದೆಡೊಂಕಾಗಿ ಹರಿದಾಳುವಂಶಿಯ ಜೋಡು ನಡುವಿಟ್ಟುವಂಶಿಯ ಜೋಡು ನಡುವಿಟ್ಟು ಗಲಗಲಿಯಮುತೈದೆಯರಿಗೆಲ್ಲ ಉಡುಗೊರೆ 5ಅಧ್ಯಾಪಕ ಜನರೊಳುವಿದ್ವಾಂಸರಿಗೆಲ್ಲಶುದ್ಧ ರತ್ನದಲಿ ರಚಿಸಿದಶುದ್ಧ ರತ್ನದಲಿ ರಚಿಸಿದ ಉಂಗುರವಿದ್ವಾಂಸರಿಗೆಲ್ಲ ಉಡುಗೊರೆ 6ನಾಲ್ಕು ಸಾವಿರ ಉಂಗುರಅನೇಕ ಬಗೆ ಶಾಲುಈ ಕಾಲದಲೆ ತರಿಸೇವಈ ಕಾಲದಲೆ ತರಿಸೇವ ರಮಿಯರಸುಕೊಟ್ಟ ಅನೇಕ ಜನರಿಗೆ ಉಡುಗೊರೆ 7
--------------
ಗಲಗಲಿಅವ್ವನವರು
ಹಿಡಿಸುವೆ ಹುಚ್ಚನೆ ಹಿಡಿಸುವೆರಂಗನರಸಿಯರ ಪಾಟ ಬಡಿಸುವೆ ಪ.ತಮವೆಂಬ ಭಂಗಿಯ ಕುಡಿಸುವೆಬುದ್ಧಿಭ್ರಮೆಗೊಂಡ ಮಾತು ನುಡಿಸುವೆಸುಮನಸರಿಗೆ ಹೆಂಡ ಕುಡಿಸುವೆಯಾರೂ ನಮಿಸದಂತೆ ದೂರ ಇಡಿಸುವೆ 1ರಜವೆಂಬೋದ್ರವ್ಯ ಬಚ್ಚಿಡಿಸುವೆಇವರ ರಾಜ ಲಕ್ಷಣಕಟ್ಟಿಇಡಿಸುವೆಗಜಗಮನೆಯರ ಗರ್ವ ಮುರಿಸುವೆನಮ್ಮತ್ರಿಜಗವಂದನ ಹಾಸ್ಯ ಮಾಡಿಸುವೆ2ಸತ್ಯ ಸಾಮಿತ್ಯವತೆಗೆಸುವೆಉನ್ಮತ್ತೆಯರ ಮಾಡಿ ಮೆರೆಸುವೆಕತ್ತಲೆ ಮನೆÀಯೊಳಗೆ ಹೊಗಿಸುವೆಇನ್ನೆತ್ತ ಹೋಗಲೆಂದು ಎನಿಸುವೆ 3ಯಾರೂ ಇಲ್ಲದಲಿ ಇಡಿಸುವೆಇವರ ನೀರು ಕಂಡು ಭಯಬಡಿಸುವೆಓರೆಂದು ಗಾಬರಿಗೆಡಿಸುವೆಕಾಯೋ ಶ್ರೀನಿವಾಸಾನೆಂದೆನಿಸುವೆ 4ಒಬ್ಬರಿÉಲ್ಲದಲಿ ಇಡಿಸುವೆಇವರನು ಗುಬ್ಬಿಯ ಹಾಂಗೆ ಭಯ ಪಡಿಸುವೆತಬ್ಬಿಬ್ಬುಗೊಂಡು ತಳವೆಳಸುವೆಅರ್ಥಿಲೊಬ್ಬ ರಾಮೇಶನ ನೋಡಿಸುವೆ 5
--------------
ಗಲಗಲಿಅವ್ವನವರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು