ಒಟ್ಟು 950 ಕಡೆಗಳಲ್ಲಿ , 95 ದಾಸರು , 716 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಮ್ಮ ಕೇಳಿದ್ಯಾ ಪರಬೊಮ್ಮ ನೀನಂತೊ ನಿತ್ಯ ತೃಪಿತನು ನೀನಂತಲ್ಲೊ ಕೃಷ್ಣಯ್ಯ ಸುತ್ತಿ ಬಂದೆನೆ ನಾಲಿಗಾರಿದೆ ಅಮ್ಮ ಹತ್ತು ಸಾವಿರ ಭಾನುಪ್ರಭೆಯುಳ್ಳವನಂತೊ ಕತ್ತಲೆಮನೆ ಪೋಗಲೊಬ್ಬನಂಜುವೆನೆ 1 ಪುರಾಣಪುರುಷ ನೀನಂತಲ್ಲೊ ಕೃಷ್ಣಯ್ಯ ಆರು ತಿಂಗಳು ಪೋದಾವಂದೆಲ್ಲ ಎನಗೆ ನಿರತಿಶಯ ಮಹಾ ಮಹಿಮೆ ಉಳ್ಳವನಂತೊ ಪೂರತಿ ಮನೆಯೊಳು ನಡೆಯಲಾರೆ 2 ಅಣ್ಣಾ ನೀ ಸರ್ವಜ್ಞನೆಂಬೋರೊ ಜಗವೆಲ್ಲ ಬೆಣ್ಣೆಯು ಸಿಗದಲ್ಲೆ ಪುಡುಕಿದರೆ ಸಣ್ಣವ ನೀನಲ್ಲವೆಂಬರೊ ಪಿರಿಯಾರು ಮಣ್ಣು ನಾ ಮೆದ್ದಾರೆ ಟೊಣದೆಲ್ಲವಮ್ಮ 3 ಜಗದುದರನು ನೀನಂತಲ್ಲೊ ಕೃಷ್ಣಯ್ಯ ನಗುಚಾಟಲು ಸಣ್ಣ ಪೊಟ್ಟಿ ನೋಡೆ ನಿಗಮಗಳು ನಿನ್ನ ತುತಿಯಂತೊ ಗೋವಿಂದ ನಗುವರಲ್ಲವೆ ಗೋಪ ನಾರಿಯರು 4 ಮೂಢ ದೈತ್ಯರಿಗೆಲ್ಲದಲ್ಲಣ ನೀನಂತೊ ಜಾಡ ಮೈಯನ ನೋಡಿ ಅಂಜುವೆನೆ ಬೇಡಿದ ಪುರುಷಾರ್ಥ ಕೊಡುವನು ನೀನಂತೊ ಬೇಡಿದೆ ನಮ್ಮಮ್ಮ ಅಮ್ಮೆ ಕೊಡೆಂದು 5 ಬೆಟ್ಟವ ನೀನೆತ್ತಿದಂತಲ್ಲೊ ಕೃಷ್ಣಯ್ಯ ಬಟ್ಟು ನಿನ್ನದು ನೋಡೆ ಎತ್ತಲಾರೆ ಘಟ್ಯಾಗಿ ವಿಪ್ರರು ಪೇಳೋದು ಪುಸಿ ಏನೊ ಹೊಟ್ಟಿಗೋಸುಗ ಸುಳ್ಳು ಪೇಳುವರೆ 6 ಏಸು ಲಕ್ಷ್ಮಣವಿವೆ ನೋಡಬೇಕೆಂದರೆ ಪುಸಿದ್ಯಾಕುಸರಾನು ನೋಡೆಂದನು ಪರಿ ಗೋಪಿಯ ಮೋಸಗೊಳಿಪ ಕೃಷ್ಣ ನಮ್ಮ ಸಲಹಲಿ 7
--------------
ವ್ಯಾಸತತ್ವಜ್ಞದಾಸರು
ತಾತ್ವಿಕ ಹಿನ್ನೆಲೆ ಅಗಣಿತಾಗಣಿತ ಮಹಿಮ ಜಗದೊಳು ನಿಮ್ಮ ಬಗೆ ತಿಳಿಯುವರಾರಮಮ ಪ ಮಗನ ಮಗನಿಗೆ ಒಲಿದು ಮಗಳಧಾರೆಯನೆರದಿ ಮಗಳಮಗನ್ವೈರಿಯ ನಿಗಯಿಟ್ಟು ಸಲಹಿದಿ ಅ.ಪ ಓಂಕಾರದಾಚೆಗಿರ್ದ ಅಮಲರೂಪ ಓಂಕಾರದೊಳು ನೆಲೆಸಿದಿ ಅಂಕುರಿಸಕ್ಷರ ತ್ರಯಲಂಕಾರದಿಂ ಸೃಷ್ಟಿ ಸಂಕಲ್ಪಗೈದು ನಿಷ್ಕಲಂಕನೆಂದೆನಿಸಿದಿ 1 ಸೃಷ್ಟಿ ಉತ್ಪತ್ತಿಗೈದಿ ಉದರದಿ ಇಟ್ಟು ರಕ್ಷಕನೆಂದೆನಿಸಿದಿ ಶಿಕ್ಷಕೆನಿಸಿ ಸರ್ವಸಾಕ್ಷಿನೀನೆಯಾಗಿ ಮೋಕ್ಷ ನೀಡುವ ಮದಧ್ಯಕ್ಷನೆಂದೆನಿಸಿದಿ 2 ಮೇದಿನಿಗೆ ಪತಿಯೆನಿಸಿದಿ ದಾಸರ ಪ್ರಿಯ ಮೇದಿನಿಸುತೆ ಮದುವ್ಯಾದಿ ವೇದಸಮ್ಮತಗೈದಿ ಸಾಧುಜನಕಹುದಾದಿ ಆದಿಶ್ರೀರಾಮ ಮಮ ಬೌದ್ಧದೇವನಾದಿ 3
--------------
ರಾಮದಾಸರು
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ತಾಪ ಬ್ರಹ್ಮೇತಿ ಶ್ರೀ ಪುರುಷ ಬಾಲ ಅಣುರೇಣುತ್ರಿಣಗಳಿಗೆಲ್ಲ ಪ ಸಿಂಧು ಕಾವೇರಿ ಕೃಷ್ಣವೇಣಿ ಗೋದೆ ತುಂಗೆ ನರ್ಮದಾ ಇಷ್ಟು ಮಹಾನದಿಯಲ್ಲಿ ಮುಣಗಿ ಮಿಂದರೇನು ಕಾಷ್ಟಕಭ್ಯಾಂಗವನು ಮಾಡಿ ನೀರೆರದಂತೆ1 ಭಕುತಿಯಲಿ ನಡೆದು ಭವಿಷೊತ್ತರ ಪೇಳಿದರೇನೊ ವಿಕಳಮತಿಯಲಿಟ್ಟು ವರನಾದರೇನು ಕಕುಲಾತಿ ತೊರೆದು ನಿಷ್ಕಳಂಕನಾದರೆ ಏನು ಶುಕಪಕ್ಷಿ ಅನುಗಾಲ ಓದಿ ತಿಳಿದಂತೆ 2 ಜ್ಞಾನದಲ್ಲಿ ಪರರಿಗೆ ನ್ಯಾಯ ಪೇಳಿದರೇನು ಹಾನಿ ನೆನೆಸಿ ಕೀರ್ತಿಯ ಪಡೆದರೇನು ಧ್ಯಾನದಲಿ ಮಾನಸ ಪೂಜೆ ಮಾಡಿದರೇನು ಶ್ವಾನದಲಿ ಬೂದಿಯೊಳಗೆ ವರಗಿ ಇದ್ದಂತೆ 3 ಯಾತ್ರೆ ತೀರ್ಥಂಗಳು ತೊಳಲಿ ತಿರುಗಿದರೇನು ಪಾತ್ರಾಪಾತ್ರನರಿದು ನಡೆದರೇನು ಗಾತ್ರವನು ಬಳಲಸಿ ನೇಮ ಮಾಡಿದರೇನು ಮೂತ್ರದಲಿ ತೊಳೆದು ಅಮೃತನ್ನ ಉಂಡಂತೆ 4 ವಡೆವ ಮಡಕಿಗೆ ಚಿಂತಾಮಣಿ ತಂದು ಹಚ್ಚಲು ಗಡಿಗಿ ಅಲ್ಲದೆ ಅದು ಪರುಶಾಗೋದೆ ಬಿಡದೆ ಕೋಪಿಷ್ಠನು ಬಲು ಶಾಂತನೆನೆಸಿದರೆ ಸಿರಿ ವಿಜಯವಿಠ್ಠಲನೊಲಿದು ಮೆಚ್ಚನಯ್ಯಾ 5
--------------
ವಿಜಯದಾಸ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುಳಸಿದೇವಿ ಪದಕೇ | ನಾರೇರು | ಬೆಳಗಿರಿ ಆರುತಿಯಾ ಪ ಬೆಳಗುವುದೂ ನಮ್ಮ | ಅಳಗಿರಿ ರಂಗನಲಲನೆ ಶ್ರೀ ತುಳಸಿಗೆ | ಕಲಿಮಲ ಹಾಗೆ ಅ.ಪ. ದಳಪ್ರತಿ ದಳದಲ್ಲಿ | ಶ್ರೀಹರಿ | ನೆಲಸಿಹ ತಾನಲ್ಲಿಒಲಿಮೆಲಿ ಭಕುತರ | ಹಲವು ಸೇವೆಗಳಿಗೊಲಿದು ಅಭೀಷ್ಟವ | ಸಲಿಸುವ ದೇವಿಗೆ 1 ಅಮೃತ | ಕಲಶವ | ಧರಿಸುತ ಧನ್ವಂತ್ರಿಬರಲು ನಯನದಿಂ | ಮರುಳೆ ಆನಂದಕೆವರ ಬಿಂದೋದ್ಭವೆ | ಹರಿ ಪ್ರಿಯೆ ತುಳಸೀ 2 ಇಂಬು ತೋರಿ ಇರಲುಅಂಬುಜಾಕ್ಷ | ಗುರು ಗೋವಿಂದ ವಿಠಲನ |ತುಂಬಿ ದ್ವೈಭವದಿ | ಸಂಭ್ರಮ ಸೇವಿಪ 3
--------------
ಗುರುಗೋವಿಂದವಿಠಲರು
ತೇನಮೋ ಜಗದೇಕನಾಥ ರಮಾ ಮಾನಸಾಂಬುಜರಾಜಹಂಸಾಯ ವಿಷ್ಣವೇ ಪ ಜಗದೇಕವೀರ ಜನನಾದಿ ದೂರಾ ಸುಗುಣ ವಿಸ್ತಾರ ಸುಖಮಯ ಶರೀರ 1 ಗಾನರಸಲೋಲ ಕನಕಮಯಚೇಲ ಆನತೋದ್ಧರಣ ಅಮೃತಾಬ್ಧಿಶಯನ 2 ಚಂದ್ರಾರ್ಕನಯನ ಚಾರುತರ ಕಥನ ಇಂದ್ರಾರಿ ಮಥನ ಇಭವೈರಿವದನ ಇಂದ್ರ ಸಂಕ್ರಮಣ ವೇಲಾಪುರಿಸದನ ವಂದ್ಯಾಖಿಲಜನ ವೈಕುಂಠ ರಮಣ3
--------------
ಬೇಲೂರು ವೈಕುಂಠದಾಸರು
ತೊರೆದು ಪೋಗುವುದುಚಿತವೇ | ಶ್ರೀ ಗುರುವರ ಹರಣ ನೀಗುವುದುಚಿತವೇ ಪ. ಕಮಲ ನಂಬಿ ಇರುವಂಥ ತರಳೆಯ ಜರಿದು ಮೋಸದಿ ಇಂತು ಅ.ಪ. ಆರನಾ ಪೂಜಿಸಲಿ | ಪರಿಪರಿಯಿಂದ ಆರನಾ ಸ್ತುತಿಗೈಯ್ಯಲಿ | ಪೇಳೆನ್ನ ಗುರುವೆ ತೋರದು ಮನಸಿಗೆ ಬೇರೊಂದು ಮತಿ ಇನ್ನು ಕಾರುಣ್ಯಮೂರ್ತಿ ಮತ್ತಾರ ಸೇವಿಸಲಿನ್ನು ಧಾರುಣಿಯೊಳ್ ನಿಮ್ಮ ಹೊರತಿ ನ್ನಾರು ಕಾಯುವರಿಲ್ಲವೆಂದು ಸೇರಿದವಳನು ಬಿಟ್ಟು ಶ್ರೀ ಗುರು ಮಾರನಯ್ಯನ ಪುರಕೆ ಪೋಪರೆ 1 ತುಪ್ಪ ಸಕ್ಕರೆ ಸವಿದಾ | ಶುಭತನುವಿನ್ನು ಒಪ್ಪವಾಯಿತೆ ಶಿಖಿಗೆ | ಕ್ಷಣ ಮಾತ್ರದಲ್ಲಿ ಅಪ್ಪಾವು ಅತಿರಸ ಮೆಲ್ಲುವ ಇಚ್ಛೆಯು ತೃಪ್ತಿಯಾಯಿತೆ ಪೇಳಿ ಅಪ್ಪಯ್ಯ ನಿಮಗಿನ್ನು ಅಪ್ಪ ಅಮ್ಮ ಸರ್ವಬಳಗವು ತಪ್ಪದಲೆ ನೀವೆಂದು ನಂಬಿದೆ ಒಪ್ಪಿಕೊಂಡೊಂಬತ್ತು ವರುಷವು ಇಪ್ಪ ರೀತಿಯ ಬಯಲು ಮಾಡಿ2 ಕಡುಕೃಪೆಯಿಂದಲಿ | ಪೇಳಿದ ಗೋಪ್ಯ ಒಡಲೊಳು ನೆನೆಯುತಲಿ | ಕುಣಿದಾಡುತಿದೆ ಒಡಲೊಳು ದೃಢಭಕ್ತಿಯೊಳ್ ನಂಬಿ ಬಿಡದೆ ನಿಮ್ಮಡಿಗಳು ನಡುವೆ ಬಂದೆಡರುಗಳ್ ಕಡೆಹಾಯ್ದು ಮಿಡುಕದೆ ಅಡಿಗಡಿಗೆ ಬೆಂಬಿಡದೆ ಚರಣವ ಪಿಡಿದು ಕೇಳಲು ಅಭಯವಿತ್ತ ನುಡಿಗಳೆಲ್ಲವು ಎತ್ತ ಪೋಯಿತೊ ಕಡಲಶಯನನ ಮಾಯವಕಟಾ 3 ಹಿಂದೊಬ್ಬರನು ಕಾಣೆನೊ | ನಿಮ್ಮಂದದಿ ಮುಂದೊಬ್ಬರನು ಕಾಣೆನೊ | ಈ ಕರುಣದವರ ಒಂದೊಂದು ಗುಣ ಗಣ ಬಂದು ಸ್ಮರಣೆ ಮನಕೆ ಕಂದಿ ಕುಂದಿಸುತಿದೆ ನೊಂದು ಬೆಂದು ಪೋದೆ ಚಂದವೇ ಇದು ಪೋಪ ತೆರವು ತಂದೆ ಸೈರಿಸಲಾರೆ ಗುರುವರ ತಂದೆ ಮುದ್ದುಮೋಹನರೆನಿಸಿದ ಸುಂದರಾತ್ಮಕ ಸುಗುಣಪೂರ್ಣ 4 ಎನ್ನಂತೆ ಬಳಲುವರು | ನಿಮ್ಮಯ ಶಿಷ್ಯ ರುನ್ನಂತೆ ಇರುತಿಹರೊ | ಬಹು ಭಕ್ತಿ ಉಳ್ಳವರು ಮನ್ನಿಸುತವರ ಸಂಪನ್ನ ಸಲಹಬೇಕು ಬಿನ್ನಪವಿದು ಕೇಳು ಮನ್ನಿಸು ಕೃಪಾಳು ಇನ್ನು ಸೈರಿಸೆ ಸೈರಿಸೆನು ನಿಮ್ಮ ಘನ್ನ ಮೂರ್ತಿಯ ಮನದಿ ತೋರೈ ಇನ್ನು ಗೋಪಾಲಕೃಷ್ಣವಿಠ್ಠಲನು ಭವ 5
--------------
ಅಂಬಾಬಾಯಿ
ತೋರು ನಿಮ್ಮ ಪಾದಕುಸುಮ ಮಾರನಯ್ಯಾಪಾರಮಹಿಮ ಪ ಧರೆಯ ಭೋಗದಾಸೆ ತೊರೆಸಿ ನಿರುತವಾದ ಮಾರ್ಗ ಹಿಡಿಸಿ ಕರುಣಿಸು ಎನ್ಹøದಯಕಮಲಕೆ ಕರೆ ತತ್ತ್ವಜ್ಞಾನ ಅಮೃತ1 ಕವಿದುಕೊಂಡಜ್ಞಾನಕತ್ತಲು ಜವದಿಹಾರಿಸಿ ಎನ್ನಯ ಭವದ ಬಂಧನ ದೂರಮಾಡಿ ಜವನಭಯನಿರ್ಬೈಲು ಎನಿಸು 2 ಮಯಾಮೋಹದೊಳಗೆ ಮುಳುಗಿ ಪೋಯಿತೆನ್ನಯ ಅರ್ಧವಯವು ಕಾಯಜಪಿತ ಸ್ವಾಮಿ ಶ್ರೀರಾಮ ನೋಯಿಸದೆ ನಿಜಪಥಕೆ ಹಚ್ಚೆನ್ನ 3
--------------
ರಾಮದಾಸರು
ಥಳ ಗುಟ್ಟೊಳುತೊಬ್ಬಳೆವಾಗೆದ ತಾ ವಳಗುಟ್ಟಲೆ ದಟ್ಟದ ಬೆಳಗು ತಾಂ ತಿಳಿಗೊಟ್ಟರೆ ಸದ್ಗುರು ಭಾಸುದು ತಾ ಕಳೆಮುಟ್ಟಿದು ನೋಡಲು ಶಾಶ್ವತ 1 ಅರಿಯೊ ಸುರಿಯೊ ಪರಮಾಮೃತ ಬೆರಿಯೊ ಗುರುವೆಂದು ನೀ ಸುಗುರುತಾ ಜರಿಯೊ ಮರಿಯೊ ಮದಗರ್ವನೆ ತಾ ನೆರಿಯೊ ಗುರುಪಾದಕೆ ನೀ ತ್ವರಿತ 2 ತಿಳಿ ಸರ್ಕನೆ ನಿನ್ನೊಳು ಬ್ಯಾಗ ತಾ ಅಳಿ ತರ್ಕದ ಮಾತಿನ ಗರ್ವನೆ ತಾ ತೊಳಿ ನರ್ಕಕೆ ಬೀಳುವ ತಾಮಸ ತಾ ಸುಳಿ ಗರ್ಕನೆ ಸದ್ಗುರು ಪಾದÀದಿ ತಾ 3 ಬಿಡು ಮರ್ಕಟ ಬುದ್ಧಿಯ ಭಾವನೆ ತಾ ಕೂಡು ಸರ್ಕನೆ ಸುಮ್ಮನೆ ಗುರುವಿಗೆ ತಾ ಸುಡು ನರ್ಕಕೆ ಬೀಳುವ ಪಾಶÀವ ತಾ ತೊಡು ಮರ್ಕಟವಾದ ಸದ್ಗುಣ ತಾ 4 ಹಿಡಿಯೊ ಪಡಿಯೊ ದೃಢಭಾವನೆ ತಾ ಜಡಿಯೊ ಒಡನೆ ಗುರುಪಾದನಿ ತಾ ಕಡಿಯೊ ಬಿಡದೆ ಭವಬಂಧನ ತಾ ಅಮೃತ 5 ನಡಿಯೊ ನುಡಿದಂತೆನೆ ಸನ್ನಮತ ಹಿಡಿಯೊ ಪಡೆದಂತೆನೆ ಪಾದವ ತಾ ಇಡದಂತೆನೆ ತುಂಬೆದ ಸದ್ಘನ ತಾ ಕಡೆಗಾಂಬುದು ನೋಡಿದು ಶಾಶ್ವತಾ 6 ತಿಳಿಯೊ ಬಳಿಯೊ ಒಳಗುಟ್ಟನೆ ತಾ ಹೊಳಿಯೊ ಸುಳಿಯೊ ನೆಲಿಗೊಂಡಿದು ತಾ ಕಳಿಯೊ ಅಳಿಯೊ ಅನುಮಾನವ ತಾ ಕಳೆಕಾಂತಿಯ ನಿನ್ನೊಳು ತುಂಬ್ಯದ ತಾ 7 ಒಳಗುಟ್ಟನೆ ಸಾಧಿಸಿ ನೋಡುವು ದೆಲ್ಲಾ ಥಳಗುಟ್ಟುದು ಸಾಸಿರ ಪದ್ಮ ದಳ ನೆಲೆಗೊಂಡರೆ ವಾಗುವ ತಾ ಸಫಲಾ ತಿಳಕೊಂಬುದು ಸದ್ಗುರು ಸ್ವಾಮಿ ಬಲ 8 ಬಿಡಬಾರದು ಸಂಗತಿ ಸಜ್ಜನರ ಹಿಡಿಬೇಕಿದು ಒಂದೇ ನೋಡಿ ಸ್ಥರ ಅಡಿ ಇಟ್ಟನೆ ಬಾಹುದು ಪುಣ್ಣಿದರಾ ಪಡಕೊಂಡರೆ ಅಹುದು ಇಹಪರ 9 ತಡಮಾಡದೆ ನೋಡುವುದೀ ಸುಪಥ ಪಡಿಬೇಕಿದು ಒಂದೇ ಸುಸ್ವಹಿತ ಒಡಗೂಡದೆ ಬಾರದು ಕೈಗೂಡಿ ತಾ ಎಡಬಲಕೆ ತುಂಬಿದೆ ತುಳುಕುತ 10 ಜಾಗರ ತಾ ಎಡಿಎಡಿಗೆ ಸಂದಿಸಿ ತುಂಬಿದೆ ತಾ ಬಡಿಸಿಟ್ಟೆದ ಭಾಗ್ಯದ ನಿಧಿಯು ತಾ ಪಡಕೊಳ್ಳೆಲೊ ಮಹಿಪತಿ ಪೂರ್ಣಹಿತ11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಂಡು ಬರುತಿದೆ ಆರೇರ ದಂಡು ಬರುತಿದೆ ಬಂದೆವು ನಾಲ್ಕು ಮಂದಿ ಪ ಅಮ್ಮ ಲಿಮ್ಮಿ ಬೊಮ್ಮಿ ನಾನು ಸುಮ್ಮನೊಂದು ಮರೆಯಲಿರಲು ಜಮ್ಮನವರು ಬಂದು ಹಿಡಿದು ಗುಮ್ಮಿಹೋದರು ನಮ್ಮನ್ನೆಲ್ಲ 1 ಅತ್ತೆಮಾವ ಮೈದುನರು ಎತ್ತಹೋದರೋ ಕಣ್ಣಲಿಕಾಣೆ ಕತ್ತೆ ಹೆಣ್ಣೆ ಹೋಗು ಎಂದು ಬತ್ತಲೆಬಿಟ್ಟರು ಎನ್ನ 2 ದಿಂಡ್ಯ ದಿಂಡ್ಯ ಜವ್ವನೆಯರು ಕಂಡ ಕಂಡೆಗೆ ಹೋಗಿ ಬೇಗ ದಂಡಿನವಗೆ ಸಿಕ್ಕಿ ಕೆಟ್ಟು ಕೊಂಡು ಬಾಳ್ವುದೊಳ್ಳಿತಲ್ಲ 3 ರಂಡೆ ಮುಂಡೆರೆಂದವರು ಬಿಡರು ಕಂಡಮಾತ ಹೇಳುತೇನೆ ಪೆಂಡಾರರಿಗೆ ಸಿಕ್ಕು ಕೆಟ್ಟು ಗಂಡು ಕೂಸು ಪಡೆಯದಿರಿ 4 ಮಾನವುಳ್ಳ ಹೆಣ್ಮಕ್ಕಳು ನಾನು ಪೇಳ್ವಮಾತಕೇಳಿ ತಾನೆ ಸೇರಿ ಲಕ್ಷ್ಮೀರಮಣ ಧ್ಯಾನವನ್ನು ಮಾಡುಕಂಡ್ಯಾ 5
--------------
ಕವಿ ಪರಮದೇವದಾಸರು
ದಯ ಬೀರೋ | ದಯಾ ನಿಧೆ | ದಯ ಬೀರೋ ಪ ದಯ ಬೀರೆ ದುರ್ಭವ | ಭಯ ಪರಿಹರ ನಿರ್‍ಭಯನಾಮಕ ಹರಿ | ಹಯಮುಖ ಕೃಷ್ಣಯ್ಯ ಅ.ಪ. ಪಾಪಿ ನಾನಹುದೋ | ಹೇ ಪಾವನ ಮೂರ್ತೇನೀ ಪೋಷಿಸದಿರೆ | ಕಾಪಾಡೋರ್ಯಾರೋ 1 ಮಣಿ ಅಮಿತಾಭ | ಘನ ಮಹಿಮನೆ ಕೃಷ್ಣ 2 ಕರ ಬಿಸಜ ಸಂಪೂಜ್ಯನೆಹಸಗೆಡಿಸುವ ದುರ್ | ವಿಷಯವ ಹರಿಸೀ 3 ಕರ್ಮ ನಾಮಕನೇ 4 ಕಡಗೋಲು ನೇಣನು | ಪಿಡಿದು ಭಕ್ತೀ ಎಂಬಮುಡುಪ ಕೊಳ್ಳುವ ಗುರು | ಗೋವಿಂದ ವಿಠಲಯ್ಯ 4
--------------
ಗುರುಗೋವಿಂದವಿಠಲರು
ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯಮಾಡೋ ಹನುಮಾ ದಯಮಾಡೋ ಪ ಎನ್ನೊಡನಾಡೋ ಬೇಡಿದ ವರಗಳ ಎನಗೆ ನೀಡೋ ಅ.ಪ. ಅಂಜಾನಿಯ ಕಂದನೆ ಸಂಜೀವನ ತಂದನೆ ಅಂಜಾದೆ ರಕ್ಕಸರ ಕೊಂದಾನೆ 1 ಕೀಟಕಾಂತಕನೆ ಕಿರೀಟ ಸಖನೆ ಪಾಂಚಾಲಿ ಹೃತ್ಕುಮುದ ಚಂದ್ರನೆ 2 ಆನಂದತೀರ್ಥನೆ ಅಮ್ನಾಯಸ್ತುತನೆ ಮಾನಿಧಿವಿಠಲನ ದೂತನೆ 3
--------------
ಮಹಾನಿಥಿವಿಠಲ
ದಯವು ಏತಕೆ ಬಾರದೌ ದೇವಿ ಭಯವಿಮೋಚನೆ ಭಕ್ತ ಸಂಜೀವಿ ಪ ಚರಣಕಮಲಕ್ಕೆ ಶಿರವ ಬಾಗಿದೆನೆ ಸೆರಗನೊಡ್ಡಿ ಪರಮಭಕ್ತಿಲಿ ಬೇಡಿಕೊಂಡೆನೆ ಕರುಣಭರಿತ ಮೊರೆಯ ಕೇಳ ದಿರು ವಿಜಯವಾಣಿ ಪರಮಕಲ್ಯಾಣಿ ಸರಿಯೆ ನಿನಗಿದು ಶರಣಜನರ ಕರುಣಾಕರಿ ಅಂಬ ಪರತರ ಬಿರುದು ಇದೆಯೇನೆ 1 ಮಾರಮರ್ದನರಸಿ ಗಂಭೀರೆ ಶಾರದಾಂಬೆಯೆ ಮೂರುಲೋಕಂಗಳಿಗೆ ಆ ಧಾರಿ ಪಾರಮಹಿಮೆಯೆ ತೋರು ಕರುಣವ ಬೇಗ ವರಗೌರಿ ಮರೆಯದಿರು ಶೌರಿ ಚಾರು ಚರಿತವ ಪಾಡಿ ಬೇಡುವೆ ಸಾರಮನದಿಷ್ಟ ಪೂರೈಸಿದ ರೌದ್ರಿ 2 ಸ್ವಾಮಿ ರಾಮನನಾಮಮಹಿಮರತಿ ನೀ ಮನವ ಸೋತಿ ಪ್ರೇಮದಿಂದಲಿ ತ್ರಿಜ ಗನ್ಮಾತೆ ವಿಮಲಚರಿತೆ ಪ್ರೇಮಮಂದಿರೆ ಭಕ್ತ ವರದಾತೆ ಅಮರಾದಿವಿನುತೆ ಹೈಮವತಿ ನಿನ್ನ ನಂಬಿ ಭಜಿಸುವೆ ಕ್ಷೇಮಪಾಲಿಸೆನ್ವ್ಯಾಧಿ ಕಳೆದು ನಾಮರೂಪರಹಿತೆ ವಿಮಲೆ ಅಮಿತಮಹಿಮಳೆ ಮಮತೆದೋರೆ 3
--------------
ರಾಮದಾಸರು