ಒಟ್ಟು 296 ಕಡೆಗಳಲ್ಲಿ , 71 ದಾಸರು , 273 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊಡಿ ಜೈಭೇರಿ ಮ್ಯಾಲೆ ಕೈಯ ತಿವ್ರ್ಹೊಡಿ ಪ ಕಡಲೊಳು ಭೇದಿಸಿ ಅಡಗಿದ್ದ ್ಹಯಾಸುರ- ನ್ಹೊಡೆದು ವೇದವ ತಂದೊಡೆಯ ಶ್ರೀಕೃಷ್ಣನೆಂದ್ಹೊಡಿ 1 ಮಂದರೋದ್ಧರ ತಾ ಸುಂದರಿ ರೂಪದಿ ತಂದಮೃತೆರೆದ ಮುಕುಂದ ಶ್ರೀಹರಿಯೆಂದ್ಹೊಡಿ 2 ಖಳಹಿರಣ್ಯಾಕ್ಷನ ಸೆಳೆದಪ್ಪಳಿಸಿದ ಇಳೆಧಾರಕ ನಳಿನಾಕ್ಷ ಶ್ರೀಹರಿಯೆಂದ್ಹೊಡಿ3 ನಾಶ ಮಾಡಿದ ಲಕ್ಷ್ಮೀಶ ಶ್ರೀಹರಿಯೆಂದ್ಹೊಡಿ4 ತ್ರಿಚರಣದ ಇಳೆ ಬೇಡಿ ತ್ರಿವಿಕ್ರಮ- ರೂಪ ಧರಿಸಿದ ಉಪೇಂದ್ರ ಶ್ರೀಹರಿಯೆಂದ್ಹೊಡಿ 5 ಕೊಡಲಿ ಪಿಡಿದು ತಾ ಮಡುಹಿದ ದÉೂರೆಕುಲ ಕಡು ಮಾಋಷಿ ಪೊಡವ್ಯೇಶ ಶ್ರೀಹರಿಯೆಂದ್ಹೊಡಿ 6 ದಶಶಿರ ಹತ ಮಾಡಿದ ಸತಿ ಸೀತಾಂಗನೆ ಪತಿಯೆ ಶ್ರೀಹರಿಯೆಂದ್ಹೊಡಿ7 ಗೋಕುಲದೊಳಗಾನೇಕ ಸೂರ್ಯರಂ ತಾಕಳ ಕಾಯ್ದ ಗೋಪಾಲ ಶ್ರೀಹರಿಯೆಂದ್ಹೊಡಿ 8 ಮುದ್ದು ಸ್ತ್ರೀಯರ ವ್ರತ ಮೋಹಿಸಿ ಕೆಡಿಸಿದ ಶುದ್ಧ ವೈಷ್ಣವರಿಗೆ ಸುಲಭ ಶ್ರೀಹರಿಯೆಂದ್ಹೊಡಿ 9 ದುಷ್ಟ ಕಲಿಗಳಿಗೆ ಶಿಕ್ಷಕ ತಾ ನಿ- ರ್ದುಷ್ಟನು ಭೀಮೇಶಕೃಷ್ಣ ಶ್ರೀಹರಿಯೆಂದ್ಹೊಡಿ 10
--------------
ಹರಪನಹಳ್ಳಿಭೀಮವ್ವ
ಹ್ಯಾಗೆ ಒಲಿಯುವನೊ ಎನ್ನೊಡೆಯ ರಂಗ ಹ್ಯಾಗೆ ಒಲಿಯುವನೊ ಪ ಹ್ಯಾಗೆ ಒಲಿಯುವ ಜಾಣೆ ಪೇಳಮ್ಮ ನಾಗಶಾಯಿ ನಿಗಮಾಗಮೊಂದಿತ ರಾಘವೇಶನು ಬೇಗ ಒಲಿಯದಿರೆ ನೀಗುವೆನು ಪ್ರಾಣ ಕೇಳೆ ಸಖಿಯೆಅ.ಪ ಧಣಿಯು ಇಲ್ಲದ ದುರ್ದೈವ ಬಾಳು ಹೆಣನ ಸಮವಿದು ಮನ್ನಿಸೆ ಕೆಳದಿ ಗಣನೆಯಿಲ್ಲದ ಜನಮವ್ಯಾಕಿದು ಸನಕಸನಂದರೆಣಿಕೆಯಿಲ್ಲದೆ ಮಣಿದು ಆತಗೆ ಧನ್ಯರಾದದ್ದು ನೆನೆಸಿ ಮನದೊಂದು ದಿನಸುವಾಗುವುದು ಚಿನಮಯಾತ್ಮನ ಕಾಣದಿರಲಾರೆ 1 ನೀರೆ ಬೇಗಿನ್ನು ಕರೆತಂದು ತೋರೆ ಸಾರಸಾಕ್ಷನ್ನ ಅಗಲಿರಲಾರೆ ವಾರಿಧಿಶಾಯಿನ್ನ ಹರಣದೊಡೆಯನ್ನ ಮಾರ ಸುಂದರಪಾರ ಮಹಿಮನ ಬಾರಿಬಾರಿಗೆ ಸ್ಮರಿಸಿ ಮನ ಬಲು ಘೋರ ಬಡುತದೆ ವಾರಿಜಾಕ್ಷಿ ಕರೆ ತಾರೆ ಶೀಘ್ರದಿ ನಾರಸಿಂಹನ 2 ಕಡಲೊಳಿರುವನೋ ದೃಢದಿ ಕರೆಯಲು ಒಡನೆ ಬರುವನೋ ಜಡಜಾಕ್ಷಿ ಕೇಳೆ ಜಡಜನಾಭನೋ ದೃಢಕರೊಡೆಯನೋ ಬಿಡದೆ ಆತಗೆ ಮಿಡುಕಿ ಮಿಡುಕಿ ಹಿಡಿಕಿಯಾಯಿತು ದೇಹ ಸೊರಗಿ ಒಡೆಯ ಶ್ರೀರಾಮನಡಿಗೆ ಹೊಂದಿ ನಾ ತೊಡರಿನೊಳಗಿಂದ ಕಡೆಗೆ ನಿಲ್ಲುವೆ 3
--------------
ರಾಮದಾಸರು
ಹ್ಯಾಂಗೆ ನೀ ದಾಸನಾದೆ ಪ್ರಾಣಿ ಪ ಭವ ಭಂಗವ ಪಡುವವನು ಅ ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು 1 ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ 2 ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ3 ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ4 ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು 5 ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ6 ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ 7 ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ 8 ಭಾಗವತ ಕೇಳದೆ 9 ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು 10 ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ11 ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ 12 ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ 13 ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ14 ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ 15 ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ 16 ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ 17 ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು 18 ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ 19 ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ 20 ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ21
--------------
ಕನಕದಾಸ
(ಧರ್ಮಸ್ಥಳ ಮಂಜುನಾಥನನ್ನು ನೆನೆದು)ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥಲೋಕೇಶಮಾಡುನಿರ್ಭಯಪ.ಪಾಕಹಪ್ರಮುಖದಿವೌಕಸಮುನಿಜನಾ-ನೀಕವಂದಿತಪದಕೋಕನದಕೋವಿದಅ.ಪ.ಪಾಪಾತ್ಮಪಾಪಸಂಭವ ನಾನೆಂಬುವದಕಾ-ಕ್ಷೇಪವೇನಿಲ್ಲೋಮಾಧವಶ್ರೀಪರಮೇಶ್ವರ ಕೋಪಕಲುಷಹರತಾಪತ್ರಯಶಮನಾಪದ್ಭಾಂಧವಗೋಪತುರಂಗ ಮಹಾಪುರುಷ ಗಿರೀಶ 1ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ-ನಾಮ ಪಾಪವಿಮೋಚನವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮಕಾಮಾರಿ ನಿನ್ನ ನಾ ಮರೆಹೊಕ್ಕೆನುಹೇ ವiಹಾದೇವ ಸೋಮಚೂಡಾಮಣಿ 2ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ-ಬ್ರಹ್ಮ ಸುಜ್ಞಾನದಾಯಕನಿರ್ಮಲನಿತ್ಯಸತ್ಕರ್ಮಪ್ರೇರಕ ಗಜ-ಚರ್ಮಾಂಬರಧರ ದುರ್ಮತಿಪ್ರಹರಭರ್ಮಗರ್ಭಜಭವಾರ್ಣವತಾರಕ3ಕಪ್ಪಕಾಣಿಕೆಗಳನು ತರಿಸುವರ-ಣ್ಣಪ್ಪದೈವವೆ ದೂತನುತಪ್ಪದೆ ಚಂದಯ ಹೆಗ್ಗಡೆಯರ ಮನದೊಳಿಪ್ಪ ದಧಿಮಥನ ತುಪ್ಪದಂತೆಸೆವಕರ್ಪೂರಗೌರ ಸರ್ಪವಿಭೂಷಣ 4ಪೊಡವಿಗಧಿಕವಾಗಿಹ ಕುಡುಮಪುರ-ಕ್ಕೊಡೆಯ ಭಕ್ತಭಯಾಪಹಕಡಲಶಯನ ಲಕ್ಷ್ಮೀನಾರಾಯಣಗತಿ-ಬಿಡೆಯದವನು ನಿನ್ನಡಿಗೆರಗುವೆವರಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಪಡುಬಿದ್ರೆಯ ಗಣೇಶ)ಮಾಡೆನ್ನೊಳು ಕರುಣ ಗಜಾನನ ಪ.ಮೂರ್ಖನೆನ್ನುತಲೆನ್ನ ಧಿಕ್ಕರಿಸದಿರುಶಕ್ರವಿನುತಚರಣಗಜಾನನ1ಹರಿನಾಭೀ ಕಮಲಾಕಾಶಾತ್ಮನೆಗಿರಿಜಾಂಕಾಭರಣ ಗಜಾನನ 2ಭಾರತಾರ್ಥ ತತ್ವಾರ್ಥ ಪ್ರಬೋಧನೆಸೂರಿಜನೋದ್ಧರಣ ಗಜಾನನ 3ಕಡಲಶಯನ ಲಕ್ಷ್ಮೀನಾರಾಯಣಸಖಪಡುಬಿದ್ರೆನಿಕೇತನ ಗಜಾನನ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
211ಶೃಂಗಾರವಾಗಿದೆ ಸಿರಿರಂಗನ ಮಂಚಅಂಗನೆಮಹಲಕುಮಿಯರಸ ಮಲಗುವ ಮಂಚಪಬಡಿಗ ಮುಟ್ಟದ ಮಂಚ | ಮಡುವಿನೊಳಿಹ ಮಂಚ |ಮೃಡನ ತೋಳಲಿ ನೆಲಸಿಹ ಮಂಚ ||ಹೆಡೆಯುಳ್ಳ ಹೊಸಮಂಚ ಪೊಡವಿ ಹೊತ್ತಿಹ ಮಂಚ |ಕಡಲ ಶಯನ ಶ್ರೀ ರಂಗನ ಮಂಚ 1ಕಣ್ಣು-ಮೂಗಿನ ಮಂಚ ಬೆನ್ನು ಬಾಗಿದ ಮಂಚ |ಹುಣ್ಣಿಮೆಯ ಚಂದ್ರಮನ ಅಡ್ಡಗಟ್ಟುವ ಮಂಚ ||ಬಣ್ಣ ಬಿಳುಪಿನ ಮಂಚ ಹೊನ್ನು ಕಾದಿಹ ಮಂಚ |ಚೆನ್ನಿಗ ಪರೀಕ್ಷೀತನ ಪ್ರಾಣವಕೊಂಡಮಂಚ2ಕಾಲಿಲ್ಲದೋಡುವ ಮಂಚ | ಗಾಳಿ ನುಂಗುವ ಮಂಚ |ನಾಲಗೆಯೆರಡುಳ್ಳ ವಿಷದ ಮಂಚ ||ಏಳು ಹೆಡೆಯ ಮಂಚ | ಮೂಲೋಕದೊಡೆಯನ ಮಂಚ |ಕಾಳಗದಲಿ ಕಿರೀಟಿಯ ಮುಕುಟಕೊಂಡಮಂಚ3ಹಕ್ಕಿಗೆ ಹಗೆಯಾದ ಮಂಚ | ರೊಕ್ಕ ಮುಟ್ಟದ ಮಂಚ |ರಕ್ಕಸರೆದೆದಲ್ಲಣನ ಮಂಚ ||ಸೊಕ್ಕು ಪಿಡಿದ ಮಂಚ | ಘಕ್ಕನೆ ಪೋಗುವ ಮಂಚ |ಲಕ್ಕುಮಿ ರಮಣ ಶ್ರೀ ಹರಿಯ ಮಂಚ 4ಅಂಕುಡೊಂಕಿನ ಮಂಚ | ಅಕಲಂಕ ಮಹಿಮ ಮಂಚ |ಸಂಕರುಕ್ಷಣನೆಂಬ ಸುಖದ ಮಂಚ |ಶಂಕರನ ಕೊರಳಿಗೆ ಪದಕವಾಗಿಹ ಮಂಚ |ವೆಂಕಟಪುರಂದರವಿಠಲ ರಾಯನ ಮಂಚ5
--------------
ಪುರಂದರದಾಸರು
ಆರು ಒಲಿದರೇನು ನಮಗಿನ್ನಾರು ಮುನಿದರೇನುಕ್ಷೀರಸಾಗರ ಶೇಷಶಯನನ ಒಲುಮೆಯುಳ್ಳ ಹರಿದಾಸರಿಗೆಪ.ಪಡೆದ ತಾಯಿ - ತಂದೆ ನಮ್ಮೊಳು ಅಹಿತವ ಮಾಡಿದರೇನುಮಡದಿ ಮಕ್ಕಳು ನೆಂಟರಿಷ್ಟರುಮುನಿಸು ಮಾಡಿದರೇನುಒಡೆನೆ ತಿರುಗುವ ಗೆಳೆಯರು ನಮ್ಮೊಳು ವೈರವ ಬೆಳಸಿದರೇನುಕಡಲ ಶಯನನ ಕರುಣಾಂಬುಧಿಯ ಒಲುಮೆಯುಳ್ಳ ಹರಿದಾಸರಿಗೆ 1ಊರನಾಳುವ ದೊರೆಗಳು ನಮ್ಮನು ಹೊರಗೆ ನೂಕಿದರೇನುಮಾರಿಯಹಿಂಡು ಮುಸಲರ ದಂಡು ಮೈಗೆ ಮುತ್ತಿದರೇನು ||ಅರಣ್ಯದಿ ಹರಿದಾಡುವ ಮೃಗಗಳು ಅಡ್ಡಗಟ್ಟಿದರೇನುವಾರಿಜನಾಭನ ವಸುದೇವಸುತನ ಒಲುಮೆಯುಳ್ಳ ಹರಿದಾಸರಿಗೆ 2ಕಾನನದೊಳು ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನುಜೇನಿನಂದದಿ ಕ್ರೀಮಿಕೀಟಂಗಳು ಚರ್ಮಕೆ ಮುತ್ತಿದರೇನು ||ಭಾನು ಮಂಗಳಬುಧ ಶುಕ್ರಂಗಳ ಬಲುವು ತಪ್ಪಿದರೇನುಮಾಣದೆ ಭಜಿಸುವ ಪುರಂದರವಿಠಲನಒಲುಮೆಯುಳ್ಳ ಹರಿದಾಸರಿಗೆ 3
--------------
ಪುರಂದರದಾಸರು
ಆರು ಒಲಿದರೇನು ನಮಗಿನ್ನಾರು ಮುನಿದರೇನುಕ್ಷೀರಸಾಗರ ಶೇಷಶಯನನ ಒಲುಮೆಯುಳ್ಳ ಹರಿದಾಸರಿಗೆಪ.ಪಡೆದ ತಾಯಿ - ತಂದೆ ನಮ್ಮೊಳು ಅಹಿತವ ಮಾಡಿದರೇನುಮಡದಿ ಮಕ್ಕಳು ನೆಂಟರಿಷ್ಟರುಮುನಿಸು ಮಾಡಿದರೇನುಒಡೆನೆ ತಿರುಗುವ ಗೆಳೆಯರು ನಮ್ಮೊಳು ವೈರವ ಬೆಳಸಿದರೇನುಕಡಲ ಶಯನನ ಕರುಣಾಂಬುಧಿಯ ಒಲುಮೆಯುಳ್ಳ ಹರಿದಾಸರಿಗೆ 1ಊರನಾಳುವ ದೊರೆಗಳು ನಮ್ಮನು ಹೊರಗೆ ನೂಕಿದರೇನುಮಾರಿಯಹಿಂಡು ಮುಸಲರ ದಂಡು ಮೈಗೆ ಮುತ್ತಿದರೇನು ||ಅರಣ್ಯದಿ ಹರಿದಾಡುವ ಮೃಗಗಳು ಅಡ್ಡಗಟ್ಟಿದರೇನುವಾರಿಜನಾಭನ ವಸುದೇವಸುತನ ಒಲುಮೆಯುಳ್ಳ ಹರಿದಾಸರಿಗೆ 2ಕಾನನದೊಳು ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನುಜೇನಿನಂದದಿ ಕ್ರೀಮಿಕೀಟಂಗಳು ಚರ್ಮಕೆ ಮುತ್ತಿದರೇನು ||ಭಾನು ಮಂಗಳಬುಧ ಶುಕ್ರಂಗಳ ಬಲುವು ತಪ್ಪಿದರೇನುಮಾಣದೆಭಜಿಸುವ ಪುರಂದರವಿಠಲನ ಒಲುಮೆಯುಳ್ಳ ಹರಿದಾಸರಿಗೆ3
--------------
ಪುರಂದರದಾಸರು
ಈ ಸಮಯಕಲ್ಲದಿನ್ನೆಲ್ಲಿ ಕಾಯೊದೋಷರಹಿತ ವಸುದೇವ ನೀ ಕಾಯೊ ಕೃಷ್ಣ ಪನಿನ್ನಂಘ್ರಿಯನು ಭಜಿಸಿದವರ ಬಾಳ್ವೆಯ ಕಾಯೊ |ಎನ್ನಸತಿಸುತರು ನಿನ್ನವರೆ ಕಾಯೊ ||ನೀನಲ್ಲದನ್ಯರನು ಕಾಣೆ ಕವಳಿಯ ಕಾಯೊ |ಮುನ್ನ ಸ್ಥಿರವಾಗಿ ನೀನೆಂಬೆ ಕಾಯೊ 1ಪರವೆಣ್ಣುಗಳಿಗೆ ಎನ್ನ ಮನಸು ಕಾತರಿ ಕಾಯೊ |ದುರಿತದುಷ್ಕರ್ಮ ಮುಂಚಿಲ್ಲ ಕಾಯೊ ||ಕರೆಕರೆಯ ಸಂಸಾರಕಷ್ಟು ಕಡಲಿಯ ಕಾಯೊ |ದುರಿತಭವಶರಧಿಗೆ ತಾರೆ ಕಾಯೊ2ತ್ರಿವಿಧಪಾಪಂಗಳಿಗೆ ಪದವು ಉದ್ದಿನ ಕಾಯೊ|ಭವಸಾಗರದೊಳೀಸೆಂಬೆ ಕಾಯೊ ||ದಿವಿಜೇಂದ್ರ ಕೃಷ್ಣ ಕೈಪಿಡಿದು ಒಲಿದು ಕಾಯೊ |ನವ ಮುಕ್ತಿಪುರಂದರವಿಠಲ ನೀ ಬಿಡದೆ ಕಾಯೊ3
--------------
ಪುರಂದರದಾಸರು
ಉಡುಪಿಕೃಷ್ಣನ ನೋಡಿರಿ ಶ್ರೀಹರಿ ಚರಿತಸಡಗರವನು ಕೇಳಿರಿ ಪಪೊಡವಿಯೊಳು ಸಮರಿಲ್ಲ ಈತನಉಡುಪ ಮುಖ ಶ್ರೀ ಕೃಷ್ಟರಾಯನಕಡಲತಡಿಯಲಿ ನೆಲಸಿದಾತನಮೃಡಪುರಂದರೊಡೆಯ ದೇವನ 1ಮಧ್ವಸರೋವರ ಸ್ನಾನವ ಮಾಡುತ ಮನಶುದ್ದಭಾವದಿ ನಲಿದುಮಧ್ವಶಾಸ್ತ್ರÀವ ಸಾಧು ಸಜ್ಜನರಿಗೆ ಪೇಳ್ದಪದ್ಧತಿ ಮೀರದೆ ಶ್ರದ್ಧಾಭಕುತಿಯಿಂದ 2ಮಧ್ಯದಲ್ಲಿಹ ಅನಂತೇಶ್ವರನನುಶುದ್ಧ ಭಕುತಿಲಿ ನಮಿಸಿ ಸ್ತುತಿಸುತಮುದ್ದು ಕೃಷ್ಣನ ಹೆಜ್ಜೆ ಪಂಙ್ತಯಶ್ರದೆÀ್ಧ ಸಡಗರ ನೋಳ್ಪಸುಜನರು 3ಕಾಲಲಂದುಗೆ ಗೆಜ್ಜೆಯು ಕಯ್ಯೊಳು ಕಡ-ಗೋಲನೇಣನೆ ಪಿಡಿದುಬಾಲನಂದದಿ ಗೋಪಾಲರೂಪವ ತೋರ್ದಶ್ರೀ ಲಲಾಮನ ದಿವ್ಯ ಬಾಲಕೃಷ್ಣನರೂಪ4ಬಾಲಯತಿಗಳು ವೇಳೆ ವೇಳೆಗೆಬಾಲಕೃಷ್ಣನ ಪೂಜೆ ಮಾಡುತಬಾಲರೂಪವ ನೋಡಿ ಸುಖಿಪರುಶೀಲಗುಣಸುರವರನ ಸ್ತುತಿಪರು5ಮಧ್ವರಾಯರಿಗೊಲಿದು ಉಡುಪಿಯ ಮಣ್ಣ-ಗೆಡ್ಡೆಯೊಳಗೆ ಪೊಳೆದುಅದ್ವೈತಮತದ ಸದ್ದಡಗಿಸಿ ಮೆರೆದಂಥಮುದ್ದು ಸರ್ವಜÕರ ಆಜ್ಞಾಧಾರಕರೆಲ್ಲ 6ಶುದ್ಧ ತತ್ವಜÕರು ರಚಿಸಿದಪದ್ಧತಿಯ ಸಾಧಿಸುತ ಸಂತತಶ್ರದ್ಧೆಯೊಳು ಹರಿಕಾರ್ಯ ನಡೆಸುವಶುದ್ಧಯತಿಗಳ ಸೇವೆಗೊಲಿಯುವ 7ಪರಿಯಾಯದಿನ ಬರಲು ಶ್ರೀ ಹರಿಯನ್ನುಪರಿಪರಿವಿಧ ಪೂಜಿಸಿಪರಮವೈಭವದಿಂದ ಹರಿಯನ್ನುಕರತಂದುವರರಥÀವೇರಿ ಕುಳ್ಳಿರಿಸುವ ಭಕುತಿಯಲಿ 8ಪರಿಪರಿಯ ವಾದ್ಯಗಳು ಮೊಳಗಲುಸರುವ ಯತಿಗಳು ನೆರೆದು ಹರುಷದಿಪರಮಮಂಗಳಮೂರ್ತಿಕೃಷ್ಣನಹರುಷದಲಿ ಕೊಂಡಾಡಿ ಸುತ್ತಿಪರು 9ಕೊರಳಕೌಸ್ತುಭಮಾಲೆಯು ವೈಜಯಂತಿಯುಮುರುಡಿ ಸರಪಣಿ ಗೆಜ್ಜೆಯುಪರಿಪರಿ ರತ್ನಾಭರಣಗಳ್ಹೊಳೆಯುತಜರದ ಪೀತಾಂ¨Àರದಿಂದ ಶೋಭಿಪ ದಿವ್ಯ 10ಕನಕಕಸ್ತೂರಿ ತಿಲಕ ಫಣೆಯಲಿಮಿನುಗುತಿಹ ಸ್ತ್ರೀರೂಪಧರಿಸಿದಕನಕಪೀಠದಿ ಮೆರೆದ ಕಮಲ-ನಾಭವಿಠ್ಠಲನ ಸೇವಿಸುವ ಜನ11
--------------
ನಿಡಗುರುಕಿ ಜೀವೂಬಾಯಿ
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಉಪಕಾರ ಮರೆವುದುಚಿತವಲ್ಲೋ |ತಪನಾಪ್ತಾಕ್ಷನೆ ನಮ್ಮ ಹಿರಿಯರಂದು ಮಾಡಿದಾ ಪಹರಿಯೆ ನಿನ್ನವರಿಗಮೃತವ ನೀಡುವೆನೆಂದು |ಭರದಿಂದ ಮಥÀನ ಮಾಡಿಸಿದೆ ಕಡಲ ||ಗರಳವುದ್ಭವಿಸಲು ದಿವಿಜರಂಜಲು ಆಗ |ತ್ವರದಿಂದದರಭಯ ಪರಿಹರಿಸಿದರಾರೊ 1ಆರಣ್ಯದೊಳು ನೀನಿರಲು ನಿನ್ನೊಲ್ಲಭಿಯ |ಆ ರಾವಣನೊಯ್ಯಲು ಕಪಿಗಳೆಲ್ಲ ||ಹಾರಲಾರೆವೊ ಸಮೂದ್ರಾ ಎನ್ನಲು ಬೇಗ |ಭಾರತೀ ರಮಣನೇ ಪೋಗಿ ವಾರ್ತೆಯ ತಂದ 2ಶರಧಿಕಟ್ಟುವುದಕ್ಕೆ ರೋಮ ರೋಮದಿ ಗುಡ್ಡ |ಧರಿಸಿ ತಂದನು ನೊಂದೆನೆನ್ನದಲೆ |ಹರಿಜಿತು ಶರದಿಂದ ಬಿಗಿಯೆ ಪ್ಲವಗರೆಲ್ಲಾ |ಧರಣಿ ಹೊಂದಲು ಸಂಜೀವನ ತಂದು ಉಳುಹಿದ 3ವಸುದೇವಜನಾಗಿ ನೀಂ ಜರಿಜನ ಭಯದಿಂದ |ವಸುಧೆಯೊಳಗೆ ನಿಲ್ಲಲಾರದಿದ್ದೆ ||ಶಶಿಕುಲದಲ್ಲಿವಾತಜನಿಸಿ ಅವನ ಕೊಂದು |ಕುಸುಮನಾಭನೆ ನಿನ್ನ ಭಯ ಬಿಡಿಸಿದನಲ್ಲೋ 4ಮಣಿಮಂತಜಗದೊಳು ನಿನ್ನ ಮಹಿಮೆಯನ್ನು |ಮುಣುಗಿಸಿದನು ತ್ವರಿತ ನಮ್ಮ ಗುರುವು ||ಘನಶಾಸ್ತ್ರಂಗಳ ರಚಿಸಿ ದುರ್ಮತವ ಸೋಲಿಸಿ |ಮನಸಿಜಪಿತನೇ ಪರನೆಂದು ಮೆರೆಸಿದ5ಇಷ್ಟು ಸೇವೆಯ ಮಾಡಿ ಮೆಚ್ಚಿಸಿದನು ಗೇಣು |ಬಟ್ಟೆಬೇಡಿದನೇನೋ ಆತ ನಿನ್ನ ||ಬಿಟ್ಟದ್ದಾನಾದಿತು ನಮ್ಮ ವಂಶಕರಿಗೆ |ಕೊಟ್ಟು ರಕ್ಷಿಸುವನು ಸ್ವಾಮಿ ಒಳ್ಳೆವನೆಂದು 6ಈಸು ಪರಿಯಿಂದ ನಮ್ಮ ಭಾರತೀಕಾಂತ |ತಾ ಸೋತಿರಲು ನಿನಗೆ ನಮ್ಮನೀಗ ||ಘಾಸಿಮಾಡದೆ ಸಲಹುವದುಚಿತವೋ ಶ್ರೀ ಪ್ರಾ- |ಣೇಶ ವಿಠ್ಠಲರೇಯ ಅಪಕೀರ್ತಿ ಕೊಳಬೇಡ7
--------------
ಪ್ರಾಣೇಶದಾಸರು
ಎಂದು ಕಾಂಬುವೆ ಎನ್ನ ಸಲಹುವತಂದೆ ಉಡುಪಿಯ ಜಾಣನಮಂದಹಾಸ ಪ್ರವೀಣನಇಂದಿರಾ ಭೂರಮಣನ ಪ.ಕಡಲ ತಡಿಯೊಳು ಎಸೆವ ರಂಗನಕಡೆಗೋಲ ನೇಣ ಪಿಡಿದನಮೃಡಪುರಂದರಅಜರೊಡೆಯನ ಈರಡಿಗಳಲಿ ಶಿರ ಇಡುವೆ ನಾ 1ದೇವಕಿಯ ಜಠರದಲ್ಲಿ ಬಂದನಆವಪಳ್ಳಿಯಲ್ಲಿ ನಿಂದನಮಾವ ಕಂಸನ ಕೊಂದನಕಾವನಯ್ಯಮುಕುಂದನ2ಪೂರ್ಣಪ್ರಜÕರಿಗೊಲಿದು ದ್ವಾರಕೆಯಮಣ್ಣಿನೊಳು ಪ್ರಕಟಿಸಿದನ ಭವಾರ್ಣವಕೆ ಪ್ಲವನಾದನ ಪ್ರಸನ್ನವೆಂಕಟ ಕೃಷ್ಣನ 3
--------------
ಪ್ರಸನ್ನವೆಂಕಟದಾಸರು
ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಎಷ್ಟು ಬಡಿವಾರೊ ನಿನ್ನಶ್ರೇಷ್ಠ ಸುಖಪೂರ್ಣ ಫನ್ನಅಷ್ಟ ಗುಣವನುಅತಿಗಳದ್ಯೊ ಯಾದವರನ್ನ ಪ.ಕುಕ್ಷಿಲೋಕನೆ ನಿನಗೆ ರಕ್ಷೆ ಇಟ್ಟಾಳೊಗೋಪಿವಕ್ಷ ಸ್ಥಳದಲ್ಲಿಹ ಲಕುಮಿಯುವಕ್ಷ ಸ್ಥಳದಲ್ಲಿಹ ಲಕುಮಿಯುಬೆರಗಾಗಿ ವೀಕ್ಷಿಸುತಲಿ ನಗತಾಳೊ 1ಅಂಧಕಾರದಿ ಜಲವೃಂದದಿ ದುಡುಕಿಸಿಒಂದೇ ಕೂಸಲ್ಲೊ ಪ್ರಳಯದಿಒಂದೇ ಕೂಸಲ್ಲೊ ಪ್ರಳಯದಿ ರಕ್ಷವತಂದು ಇಟ್ಟವರು ನಿನಗಾರೊ 2ಪುಟ್ಟ ಕೂಸೆಂದು ಸ್ತನ ಕೊಟ್ಟ ನಾರಿಯ ಕೊಂದೆಇಷ್ಟು ಕರುಣೆ ನಿನಗಿಲ್ಲೊಇಷ್ಟು ಕರುಣೆ ನಿನಗಿಲ್ಲೊ ದಯಾಬುದ್ದಿಕೆÀಟ್ಟು ಹೋಯಿತೇನೊ ಪ್ರಳಯದಿ 3ಕೃಷ್ಣ ಕೃಷ್ಣ ಎನುತ ಬಿಟ್ಟಳು ಪ್ರಾಣವದೃಷ್ಟಿಗೆ ಬೀಳೋದು ತಡವೇನೊದೃಷ್ಟಿಗೆ ಬೀಳೋದು ತಡವೇನೊ ನಿನ್ನವ್ಯಾಪ್ತಿ ಕೆಟ್ಟು ಹೋಯಿತೇನೊ ಪ್ರಳಯದಿ 4ಮಂದಮತಿಯರಗಂಡಮುಂದಕ್ಕೆ ಬಿಡಲೊಲ್ಲಇಂದಿರಾ ಪತಿಯೆ ಗತಿಯೆಂದಇಂದಿರಾ ಪತಿಯೆ ಗತಿಯೆಂದ ಭಕ್ತಳಕೊಂದೆಯಲ್ಲೊ ಪಾಪ ಬರಲಿಲ್ಲ 5ಕಡಲಶಾಯಿ ನಿನ್ನ ಬೆಡಗು ಎಷ್ಟು ಹೇಳಲಿಹಿಡ ಹಿಡಿದುಲಾಳಿಕೊಡುವಾಗಹಿಡ ಹಿಡಿದುಲಾಳಿಕೊಡುವಾಗ ಗೊಲ್ಲರಹುಡುಗರಿಗಿಂತ ಕಡೆಯೇನೊ 6ವೀರ ರಾಮೇಶ ನಿನ್ನಚಾರುಗುಣಗಳನೆಲ್ಲಸೂರಿಬಿಟ್ಟೇನೊ ಸುರರಿಗೆಸೂರಿಬಿಟ್ಟೇನೊ ಸುರರಿಗೆ ನಿನಗಿನ್ನುಯಾರೂ ಮನ್ನಿಸದ ಪರಿಯಂತ 7
--------------
ಗಲಗಲಿಅವ್ವನವರು