ಒಟ್ಟು 298 ಕಡೆಗಳಲ್ಲಿ , 69 ದಾಸರು , 275 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಕಲಕಾರ್ಯಾಂತರ್ಗತನಾಗಿ ಹರಿ ಭಕುತರ ಹೃದಯದಲಿ ನೆಲಸಿ ಭಕುತರ ಮನ ಬಂದಂತೆ ಕುಣಿಸೆ ಅವರನು ಹರಿ ಸಕಲಕಾಲದಲ್ಲೂ ಕಾದು ಕೊಂಡಿದ್ದು ಸಲಹುವ ಶ್ರೀ ಶ್ರೀನಿವಾಸ ಪ. ಯಾವಾಗ ಬರುವನೋ ಭಕ್ತರೆಡೆಗೆ ಹರಿ ಹರಿ ಆವಾಗಲಾಗಮಿಸುವುದೇ ಪರ್ವಕಾಲ ಹರಿಯ ಆವಾಗಲೇ ನೆನದು ಮಿಂದು ಧ್ಯಾನಿಸೆ ಆವಾಗಲೇ ಸಂಧ್ಯಾಸಕಲ ಕರ್ಮವ ನಡೆಸೆ ಯಾವಾಗಲೂ ಹರಿ ತಾ ತನ್ನ ಭಕ್ತರ ಕೈ ಬಿಡ ಯಾವ ಕಾಲದಲ್ಲೂ ಶ್ರೀ ಶ್ರೀನಿವಾಸ 1 ನಾನು ದೊಡ್ಡವ ನೀನು ದೊಡ್ಡವನೆಂದು ಹೊಡೆದಾಡದೇ ನಿಮಗೂ ನಮಗೂ ಮತ್ತೊಬ್ಬನಿಹನು ಹರಿ ನಿಮಗ್ಯಾತಕೀ ಛಲದ ವಾದ ಮನುಜರೇ ಅನುದಿನವೂ ನೆನೆಯಿರಿ ಶ್ರೀಹರಿ ಶ್ರೀ ಶ್ರೀನಿವಾಸನ್ನ ಸಕಲರಿಗೂ ದೊಡ್ಡವನವನೇ ಕೇಳಿ ಸಜ್ಜನರೇ 2 ಕಾಲ ಆ ಕಾಲವೆಂದಿಲ್ಲ ಹರಿಗೆ ತನ್ನ ಭಕ್ತರ ಸಾಕಲು ಈ ಸಮಯ ಆ ಸಮಯವೆಂದು ನೋಡನು ಹರಿ ಇಂಥಾ ಈ ಕರುಣದೊರೆಯೆಲ್ಲಾದರುಂಟೆ ಜಗದಿ ಈ ತನುವಿರುವ ತನಕ ಈ ಪರಮ ಪುರುಷನನು ಬೇಕಾದ ಕಾಲದಲಿ ಈ ಮನುಜ ಜಪಿಸುತಿರೆ ಕಮಲನಾಭ ಶ್ರೀ ಶ್ರೀನಿವಾಸ ಸಲಹದಿರನೇ ನಿನ್ನ ಆಪತ್ತಿಗಾಹ ಶ್ರೀಶ ಶ್ರೀ ವೆಂಕಟೇಶಾ 3 ಜಾಗರದಲೂ ಹರಿ ಕಾವ ನಿದ್ರೆಯಲೂ ಹರಿಕಾವ ಜಾಗರ ಸುಷುಪ್ತಿಯಲಿ ಹರಿ ಜಾಗರಮೂರುತಿ ನಿನ್ನ ಕಾವ ಜಾಗು ಮಾಡದೆ ಭಜಿಸು ಜಾನಕಿರಮಣ ಶ್ರೀ ರಾಮಚಂದ್ರನ್ನ ನಿತ್ಯ ಶ್ರೀ ಶ್ರೀನಿವಾಸನ್ನ ಮನವೆ 4 ಬುದ್ಧಿ ಬಂದಿದ್ದು ಅವನಿಂದ ಬುದ್ಧಿ ಅರಿವುದು ಅವನಿಂದ ಅಪ್ರಬುದ್ಧನಾಗದೇ ಬುದ್ಧಿ ಪೂರ್ವಕ ನೀ ನೆನೆದರೆ ಹರಿ ಬದ್ಧಕಂಕಣ ತೊಟ್ಟಿಹನು ಭಕ್ತರ ಕಾಯೆ ಆ ಶ್ರೀ ಶ್ರೀನಿವಾಸನ ಶುದ್ಧ ಮನದಿ ನೆನೆಮನವೆ 5 ವೈರಿ ಗೆಲ್ಲು ಮೊದಲು ನೀನವರ ವಶವಾಗದೆ ನಿನ್ನ ಮನ ಶುದ್ಧಮಾಡಿಕೊ ಮೊದಲು ನಿನ್ನ ಮನಸಿನಶ್ವಕ್ಕೆ ಬುದ್ಧಿಲಗಾಮು ಹಾಕು ನಿನ್ನ ಬುದ್ಧಿಯಲಿ ಮೊದಲನೆ ಕಾರ್ಯವಿದು ಎಂದರಿ ಈ ಮೊದಲು ನನಿಕಾರ್ಯ ನೋಡಿ ಶ್ರೀ ಶ್ರೀನಿವಾಸ ಒಲಿವ ನಿನಗೆಂದೆಂದು ಮನವೆ6 ಈ ತನವು ಈ ನುಡಿ ಈ ಕಾರ್ಯ ಈ ವಾರ್ತೆ ಈ ಕೃಪೆಯು ಶ್ರೀ ಶ್ರೀನಿವಾಸಗಲದೆ ಅನ್ಯತ್ರವಿಲ್ಲ ಹರಿ ಭಕ್ತರ ಸುಳಾದಿ ಭಕ್ತವತ್ಸಲ ಶ್ರೀ ಶ್ರೀನಿವಾಸಗರ್ಪಿತವೆಂದು ತಿಳಿ ಮನವೆ 7
--------------
ಸರಸ್ವತಿ ಬಾಯಿ
ಸಕಲವೆಲ್ಲವು ಹರಿಸೇವೆ ಎನ್ನಿ ಯಕುತಿವಂತರು ಹರಿಭಕುತಿ ಯೆನ್ನಿ ಧ್ರುವ ಹುಟ್ಟಿ ಬಂದಿಹ್ಯದೆ ವಿಠ್ಠಲನ ಸುಸೇವೆಗೆನ್ನಿ ಸೃಷ್ಟಿಯೊಳಿಹ್ಯದೆ ಶ್ರೀ ವಿಷ್ಣು ಸಹವಾಸವೆನ್ನಿ 1 ಬದುಕಿ ಬಾಳುದೇ ಇದು ಶ್ರೀಧರ ಉದ್ದೇಶವೆನ್ನಿ ಸಾಧನ ಸಂಪತ್ತು ಶ್ರೀ ಮಾಧವನದು ಎನ್ನಿ 2 ಉಂಬುಂತಿಂಬುದೆಲ್ಲ ಅಂಬುಜಾಕ್ಷನ ನೈವೇದ್ಯವೆನ್ನಿ ಕೊಂಬುಕೊಡುವ ಹಂಬಲ ಶ್ರೀ ಹರಿಯದೆನ್ನಿ 3 ಇಡುವ ತೊಡುವದೆಲ್ಲ ಪೊಡವಿಧರನಾಭರಣವೆನ್ನಿ ಉಡುವ ಮುಡಿವದೆಲ್ಲ ಹರಿಯ ಸಡಗರವೆನ್ನಿ 4 ನುಡಿವ ನುಡಿಗಳೇ ಹರಿಬಿಡದೆ ಕೊಂಡಾಡುದೆನ್ನಿ ಬಡುವ ಹರುಷವೆಲ್ಲ ವಸ್ತುದೇ ಎನ್ನಿ 5 ನಡೆವ ನಡಿಗೆಯಿಲ್ಲ ಹರಿಯ ಪ್ರದಕ್ಷಿಣಿ ಎನ್ನಿ ಎಡವಿ ಬೀಳುದು ಹರಿನಮವೆನ್ನಿ 6 ಏಳುವ ಕೂಡುವದೆಲ್ಲ ಹರಿಯ ಊಳಿಗವೆನ್ನಿ ಹೇಳಿ ಕೇಳುದೆಲ್ಲ ಹರಿಪುರಾಣವೆನ್ನಿ 7 ನೋಡುವ ನೋಟಗಳೆಲ್ಲ ಹರಿ ಸುಲಕ್ಷಣವೆನ್ನಿ ಮಾಡುವ ಮಾಟಗಳೆಲ್ಲ ಹರಿಯದೆನ್ನಿ 8 ಮಲಗಿ ನಿದ್ರೆಗೈವದೇ ಹರಿಯ ಕಾಲಿಗೆರಗುದೆನ್ನಿ ಬಲಕ ಎಡಕ ಹೊರಳುದೇ ಲೋಟಾಂಗಣ(?) ವೆನ್ನಿ 9 ವನಿತೇರ ಸಂಗವೇ ತಾ ಹರಿಯ ಲೀಲೆಯು ಎನ್ನಿ ತನುಮನವೆಲ್ಲಾ ಹರಿಸ್ಥಾನವೆ ಎನ್ನಿ 10 ಸತಿಸುತ ಮಿತ್ರರೆಲ್ಲ ಹರಿಸೇವೆ ದೂತರೆನ್ನಿ ಮತ್ತೆ ಬಂಧುಬಳಗೆಲ್ಲ ಹರಿಯದೆನ್ನಿ11 ಸುಖದು:ಖವೆಂಬುದೇ ಶ್ರೀಹರಿಯ ಸಂಕಲ್ಪವೆನ್ನಿ ನಕ್ಕು ನುಡುವುದೆಲ್ಲ ಹರಿ ಆಖರವೆನ್ನಿ 12 ಹೆಣ್ಣು ಹೊನ್ನಾರ್ಜಿತವೆಲ್ಲ ಹರಿಯ ಕಾಣಿಕೆ ಎನ್ನಿ ನಾನೀನೆಂಬುದೆಲ್ಲ ಹರಿಚೇತನವೆನ್ನಿ 13 ಸ್ವಾರ್ಥ ಹಿಡಿವದೆಲ್ಲ ಪಾರ್ಥನ ಸ್ವಾಮಿಗೆ ಎನ್ನಿ ಅರ್ತು ಮರ್ತು ನಡೆವ ಹರಿಕರ್ತೃತ್ವವೆನ್ನಿ 14 ಅಂತ್ರಬಾಹ್ಯವೆಲ್ಲ ಹರಿಗುರು ಮಾತೃಪಿತೃವೆನ್ನಿ ಗುರ್ತುವಾದದ್ದೆಲ್ಲ ತೀರ್ಥಕ್ಷೇತ್ರವೆನ್ನಿ 15 ಲಾಭಾಲಾಭವೆಲ್ಲ ಹರಿಪಾದಕರ್ಪಿತವೆನ್ನಿ ಶುಭಾ ಶುಭವೆಲ್ಲ ಹರಿಶೋಭೆಯು ಎನ್ನಿ 16 ಕನಸು ಮನಸುಗಳೆಲ್ಲ ಹರಿಯ ನೆನೆವ ಸೇವೆನ್ನಿ ಧೇನಿಸಿ ಬಯಸುದೇ ಹರಿಧ್ಯಾನವೆನ್ನಿ 17 ನಿತ್ಯಕರ್ಮವೆಲ್ಲ ಹರಿಪಾದಕ ಸಮರ್ಪಣವೆನ್ನಿ ಸತ್ಯಾಸತ್ಯವೆಲ್ಲ ಹರಿ ಅಗತ್ಯವೆನ್ನಿ 18 ಹೆಜ್ಜೆಗೊಮ್ಮೆ ಬೆಜ್ಜರ್ಹಿಡಿದು ರಾಜೀವನಯನನೆನ್ನಿ ಸಜ್ಜನರೊಡೆಯ ಗಜವರದ ಎನ್ನಿ 19 ಸೋಹ್ಯ ಸೂತ್ರವೆಲ್ಲ ಹರಿಯ ಮಹಾಮಹಿಮೆ ಎನ್ನಿ ಗುಹ್ಯಗೂಢವೆಲ್ಲ ಹರಿಯಗುರುತ ಎನ್ನಿ 20 ಇಹಪವೆಲ್ಲ ಹರಿಸೇವೆಗನುಕೂಲ ವೆನ್ನಿ ಸೋಹ್ಯ ಮಾಡುದೆಲ್ಲ ಹರಿಯ ದಯವೆನ್ನಿ 21 ಸಕಲ ಧರ್ಮಗಳೆಲ್ಲ ಹರಿಯ ಶಿಖಾಮಣಿಯೆನ್ನಿ ಪ್ರಕಟವಾಗಿ ದೋರುದೇ ಪ್ರತ್ಯಕ್ಷವೆನ್ನಿ 22 ನೇಮನಿತ್ಯ ಇದೇ ಮಹಿಪತಿಯ ಸ್ವಾಮಿಯದೆನ್ನಿ ಪ್ರೇಮದಿಂದ ಒಪ್ಪಿಸಿಕೊಂಬ ದಯಾಳುವೆನ್ನಿ 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಖ್ಯವ್ಯಾಕೆ ಮುಖ್ಯ ಸ್ವಹಿತ ಹೇಳದನಕ |ಮಕ್ಕಳು ಯಾಕೆ ಪಿತೃಗಳ ಆಜ್ಞೆಯ ನಡೆಸದನಕ ಪ ದಾತನ್ಯಾಕೆ ಬಯಕೆ ಪೂರ್ಣ ಮಾಡದನಕ | ಬರಿ |ಮಾತು ಯಾಕೆ ಸ್ಥಿತಿಯ ಲೇಶ ಇಲ್ಲದನಕ 1 ಸಂತನ್ಯಾಕೆ ಶಾಂತಿ ನೆರಳು ಹಿಡಿಯದನಕ | ತನು |ಕಂಥೆಯಾಕೆ ಶಿವಪದಕ್ಕೆರಗೋ ತನಕ 2 ನೇಮವ್ಯಾಕೆ ಹೃದಯ ಶುದ್ಧವಾಗದ ತನಕ | ಶಿವನ |ನಾಮವ್ಯಾಕೆ ನಾಮರೂಪ ಅಳಿಯದ ತನಕ 3 ತುಂಬಿ ತುಳುಕದ ತನಕ 4 ಜಾಣನ್ಯಾಕೆ ಸಮಯ ಉಚಿತ ಅರಿಯದ ತನಕ | ಬರಿಗಾನವ್ಯಾಕೆ ಸ್ವರದ ಲಯವ ಧರಿಸದ ತನಕ 5 ಧರ್ಮವ್ಯಾಕೆ ಸಮಯ ಕಾಲಕ ಒದಗದ ತನಕ | ಸ- |ತ್ಕರ್ಮವ್ಯಾಕೆ ದಂಭತನವು ದಹಿಸದನಕ 6 ಧನ ವಿದ್ದ್ಯಾತಕೆ ಶರಣರಡಿಗೆ ತರದನ್ನಕ | ಈಮನ ವಿದ್ದ್ಯಾಕೆ ತನ್ನ ಉಗಮ ಸೇರದನ್ನಕ7 ಶಿಷ್ಯನ್ಯಾತಕೆ ಗುರುಗಳ ಹೃದಯ ತಿಳಿಯದನ್ನಕ | ಸರಸಭಾಷ್ಯವ್ಯಾತಕೆ ಶ್ರುತಿಯ ಗರ್ಭ ಉಸುರದನ್ನಕ 8 ಜ್ಞಾನವ್ಯಾಕೆ ಜ್ಞೇಯಗುರಿತವರಿಯದನಕ | ಬರಿ |ಧ್ಯಾನವ್ಯಾಕೆ ಚಿತ್ತವೃತ್ತಿ ಮರೆಯ ದನಕ 9 ಆರಾಮವ್ಯಾಕೆ ದುಃಖಸೀಮಿ ದಾಂಟದನಕ | ಶಿ- |ವರಾಮನ್ಯಾಕೆ ಪೂರ್ಣ ಸುಖದೊಳಾಡದ ತನಕ 10
--------------
ಶಿವರಾಮರು
ಸಂಚಿತ ಕರ್ಮವಂತೆ ಕಂತೆ ಮುಂಗಡ ಪ ಬರೆದ ಬರೆಹ ತೊಡೆದ ಮೇಲೆ ಕರೆದರಾಗ ಹೋಗಬೇಕುನೆರೆದು ಸುತ್ತಮುತ್ತ ಕುಳಿತ ಪರಮ ಬಂಧುವರ್ಗವೆಲ್ಲಇರಿಸಬೇಡಿ ಸುಡುಸುಡೆಂಬರು ಸುಟ್ಟಬಳಿಕಭರದಿ ಬಂದು ಮನೆಯೊಳೆಂಬರು ಪಾಪಿ ಸತ್ತತರುಣಿ ಕೆಟ್ಟಳೆಂದುಕೊಂಬರು ಆತ್ಮ1 ಸತಿಯು ಸುತರು ಪುತ್ರಿ ಮಿತ್ರರತಿಶಯದೊಳು ತಂದೆ ತಾಯಿಅತಿ ವಿನೋದಗೈಯುವ ಭಾವ ಜತನವೆಂಬೊ ಅತ್ತೆ ಮಾವಜೊತೆಗೆ ಹುಟ್ಟಿದಣ್ಣ ತಮ್ಮ ಈ ದೇಹ ತಾನುಸತ್ತ ಗಳಿಗೆ ಮುಟ್ಟಲಮ್ಮರು ಬರಿದೆ ನಾವುವ್ಯಥೆಗೆ ಸಿಕ್ಕಿದೆವೆಂಬರು ಆತ್ಮ 2 ಕಟ್ಟಿದರ್ಧ ಕರೆವ ಎಮ್ಮೆ ಕೊಂಡುಕೊಂಡ ಸಾಲಕದನುಪೋಟು ಮಾಡಿ ಮಕ್ಕಳೊಡನೆ ಅಷ್ಟು ಹೇಳಿ ಸಾವತನಕದುಷ್ಟ ಜನರು ಸುಮ್ಮನಿರುವರೆ ಕೈಯಲೊದಗಿದಷ್ಟು ಧರ್ಮವನ್ನು ಮರೆವರೆ ಆದಿಕೇಶವನ್ನಮುಟ್ಟಿ ಭಜಿಸಿ ಕಡೆಗೆ ಬಿಡುವರೆ ಆತ್ಮ 3
--------------
ಕನಕದಾಸ
ಸಂಚಿತ ಪ್ರಾರಬ್ಧ ಕ್ರಿಯಮಾಣಾ | ಪ್ರಪಂಚದಿ ಈಡ್ಯಾಡೋ ಪ ಸ್ಥೂಲಕೆ ಭೋಗಕೆ ಸಾಕ್ಷಿಯು ಸೂಕ್ಷ್ಮವು | ಕಾರಣದಲಿ ಸಾಕ್ಷೀ || ಭೋಗಾಪೇಕ್ಷೆಯು ಸೂಕ್ಷ್ಮವು ನೀನಿತುದುಹ ಕಾರಣ ಲಕ್ಷೀ 1 ಸ್ಪರ್ಶದಿ ಶಬ್ದವು ಶಬ್ದಾಸ್ಪರ್ಶವಿದು | ರೂಪವು ತೋರಿತು ರೂಪವು ರಸದಲಿ || ಗಂಧದಿ ಕಾಣಿಸಿತೊ 2 ಕರ್ಮದಿ ರೂಪವು ರೂಪದಿ ಕರ್ಮವು | ಕರ್ಮರೂಪಕ್ಕೇ ||ವ್ಯಾಪಕ ಭವತಾರಕನೆಂದರಿಯದೆ ಕಲಾಪವ್ಯಾಕೀ ಮನಕೆ 3
--------------
ಭಾವತರಕರು
ಸಂಜೀವ ದೀಪ್ತಿಪೂರ್ಣ ಪ. ದೇವ ದೇವರದೇವ ನೀನಹುದೊದೇವಕಿಯೊಳವತರಿಸಿ ಗೋಕುಲವನ್ನುಪಾವನ ಮಾಡಿ ಮಡುಹಿಮಾವನ ಮಧುರಾವನಿಯ ಉಗ್ರಸೇನನಿಗಿತ್ತು ದೈ -ತ್ಯಾವಳಿಯ ಸವರಿಜೀವಸಖನಾಗಿ ಪಾಂಡವರೊಳ್ಪಾರ್ಥಸೇವೆ ಕೈಕೊಂಡು ತರಿದು ಕೌರವರ ದ್ವಾ-ರಾವತಿಯಿಂದ ಹಯಮೇಧಕ್ಕೆ ಬಂದದೇವ ನೀನಹುದೊ 1 ಧರ್ಮಾರ್ಜುನರೆಜ್ಞತುರಗರಕ್ಷಕ ಕೃತ-ವರ್ಮಾದ್ಯರುಗೂಡಿ ನಡೆದು ನಿಲ್ಲುತ್ತಮರ್ಮವರಿದು ಮುರಿದು ಹಂಸಧ್ವಜನಧರ್ಮವನು ತಡೆದುಕರ್ಮವಶದಿಂದ ಬಭ್ರುವಾಹನ ಕೈಯ್ಯಾದುರ್ಮರಣವಾದ ವಿಜಯ ಕರ್ಣಾತ್ಮಜಗೆಪೆರ್ಮೆಯಿಂದಸುವಿತ್ತು ಪೊರೆದ ನಿತ್ಯನಿರ್ಮಲಾತ್ಮನಹುದೊ2 ಪಿಂತೆಬಾಹರ್ಜುನರ ಕಂಡು ತಾಮ್ರಧ್ವ -ಜಂ ತಡೆಯೆ ಬಡದ್ವಿಜನಾಗಿ ಶಿಖಿಕೇತು-ವಂ ತಾನು ಬೇಡಿ ವೀರವರ್ಮನ ಗೆಲಿದುಕುಂತಳೇಂದ್ರಗೊಲಿದುದÀಂತಿಪುರಕ್ಕವರನು ತಂದು ಹಯಮೇಧವಂತು ಮಾಡಿಸಿ ಮೈದುನರ ಕಾಯ್ದಹೊಂತಕಾರಿ ಹಯವದನನೆ ಶ್ರೀ ಲಕ್ಷೀ -ಕಾಂತ ನೀನಹುದೊ 3
--------------
ವಾದಿರಾಜ
ಸತ್ಯ ಸಂಕಲ್ಪ ನೀನಹುದೆಲೊ ಜಗದೊಳು ಭೃತ್ಯವತ್ಸಲ ಹರಿಯೆ ಪ. ನಿತ್ಯ ತೃಪ್ತನೆ ವ್ಯಾಪ್ತ ಜಗದಿ ಹರಿಯೆ ದೊರೆಯೆ ಅ.ಪ. ಜನನ ಮರಣ ವಿದೂರನೆ ದೇವಕಿ ತನಯ ರುಕ್ಮಿಣೀಶ ಘನಭವ ವನಧಿಯ ದಾಟಿಸಿ ಸಲಹೋ ವನಜ ನಯನ ದೇವ ಸತತದಿ 1 ಕಮಲಾಕ್ಷ ಕಮಲೇಶ ಕಮಲಪಾಣಿ ಪದ ಕಮಲವೆನಗೆ ತೋರೊ ಕಮಲನಾಭ ಹೃತ್ಕಮಲದಿ ನಿಲ್ಲೊ ಕಮಲಮುಖನೆ ದೇವ ಶ್ರೀಹರಿ 2 ಭಕ್ತಕಮಲ ಬಂಧು ವ್ಯಾಪ್ತ ದಯಾಸಿಂಧು ಉತ್ತಮನೆ ನೀನೆಂದು ಎತ್ತ ನೋಡಲು ಸುರರೆತ್ತಿ ಕೈ ಪೊಗಳಲು ಮತ್ತೆ ನಿನಗೆ ಸರಿಯೆ ಜಗದೊಳು 3 ಶ್ರೀನಿವಾಸನೆ ಕಾಯೊ ಮಾನನಿಧಿಯೆ ಎನ್ನ ಹೀನ ಕರ್ಮವ ಕಳೆಯೊ ಶ್ರೀನಿಧಿ ದ್ರೌಪದಿ ಮಾನ ಕಾಯ್ದನೆ ಗಾನಲೋಲ ಕೃಷ್ಣ ನರಹರಿ 4 ಸಂಕರ್ಷಣನೆ ಮನ ಪಂಕಜದಲಿ ನಿಂತು ಶಂಕಿಸದಲೆ ಕಾಯೊ ಪಂಕಜಮುಖ ಹರಿ ಗೋಪಾ- ಲಕೃಷ್ಣವಿಠ್ಠಲ ಶಂಖ ಚಕ್ರಧರನೆ ಪೊರೆಯೊ ನೀ5
--------------
ಅಂಬಾಬಾಯಿ
ಸಮಿಪ ಸದ್ಗುರುರಾಯಾ ಆ ನಿನ್ನ ದಯದಿ ಪುನೀತವಾದುದು ಕಾಯಾ ಅರಿವಾಯ್ತು ಎನ್ನ ಸ್ವರೂಪದನುಭವ ಜೀಯಾ ಮಾಯಾ ಘೋರಕರ್ಮವ ನೀಗಿದೆನು ನಾ ಪಾರಮಾರ್ಥಿಕ ಸತ್ಯವರಿಯುತ ಮೀರಿದಾನಂದದಲಿ ಮುಳುಗತ ಸೇರಿ ಒಂದಗಿಹೆನು ನಿನ್ನೊಳು ಸರಸ ನಿನ್ನಯ ಬೋಧಾ ಈ ಮರುಳು ಮಾನವರೇನು ಬಲ್ಲರು ಮೋದ ಮಾತೆನಲುಬೇಗನೇ ಸಚ್ಚಿದಾತ್ಮನ ಶೋಧಾ ಮರುಳುಮತಿಗಳು ಅರಿದರೆಂತೋ ಪರಮತತ್ವವ ಪರವಿಚಾರದಿ ದುರುಳರಾ ಮಾತೇಕೆ ನಿನ್ನಯಕರುಣೆಯಿಂದಲಿ ಪಾರುಗಂಡÉನು
--------------
ಶಂಕರಭಟ್ಟ ಅಗ್ನಿಹೋತ್ರಿ
ಸರಸಿಜಾಕ್ಷಿಯರೆಲ್ಲ ಹರುಷದಿ ಬೆಳಗಿರೆಕರ್ಮಾಭಿಮಾನಿ ಪುಷ್ಕರನಿಗಾರುತಿಯಾ ಪ ಮಾಡಿದ ಕರ್ಮವ ನೀಡಿ ಹರಿಗೆ ಅಂಗಗೂಡು ತೊಪ್ಪಿಸೋ ನಿನ್ನ ಪಾಡಿ ಪೊಗಳುವೆ 1 ನಿತ್ಯ ಮಾಡುತ ಹರಿಇಚ್ಛಿತ ಕರ್ಮವ ಪಠ್ಯ ಸಾಧಿಸಿದೆ 2 ಏಸು ಜನುಮದಿ ನಾನು ಮೋಸ ಹೋದೆನೊ ಇಂದಿ-ರೇಶಗರ್ಪಿಸೋ ಕೃಪಾಧೀಶ ಮರಿಯದೆ 3
--------------
ಇಂದಿರೇಶರು
ಸರ್ವವು ಹರಿಗೊಪ್ಪಿಸಿದರೆ ನಿಶ್ಚಿಂತೆ ಗರ್ವದಿಂದಲಿ ವ್ಯರ್ಥ ಕೆಡದಿರು ಭ್ರಾಂತೆ ಪ. ಲೇಶ ಸ್ವತಂತ್ರವನಿತ್ತದ ನಂಬೀ ಶಾಭಿಮಾನದಿ ಮಾಡುವ ಡೊಂಬಿ ದೋಷಗಳಿಂದಾಹ ಫಲವೆ ನೀನುಂಬಿ ವಾಸುದೇವನ ಮೂರ್ತಿಯನೆಂತು ಕಾಂಬಿ 1 ಹಸುತೃಷೆ ನಿದ್ರೆ ತಡೆಯಲೊಲ್ಲಿ ಯಾಕೆ ದಶಕರಣಗಳು ದುರ್ವಿಷಯದಿ ನೂಕೆ ವಶವಿಲ್ಲದಲೆ ಬಿದ್ದು ಬಳಲುವಿ ಯಾಕೆ ವಸುದೇವ ಸುತನ ಮರೆಯದಿರು ಜೋಕೆ 2 ಸತ್ಯ ಸಂಕಲ್ಪನಲ್ಲದೆ ಕರ್ತನಾವ ತತ್ವೇಶರರಿತು ಕರ್ಮವ ಮಾಳ್ಪ ಸೋವ ನಿತ್ಯ ನೀ ವರಿತ ಹಮ್ಮಮತೆಯ ಭಾವ ಹತ್ತದಂತಿರೆ ಕಾವ ಕರುಣಾಳು ದೇವ 3 ಒಡೆಯರಿಲ್ಲದೆ ಪೋದ ವೃಕ್ಷದ ಫಲವ ಬಡಿದು ತಿಂಬುವರು ಕಂಡವರೆಲ್ಲ ನೋಡು ಕರ್ಮ ಮಡದಿ ಮೊದಲುಗೊಂಡು ಕಡಲಶಯನಗರ್ಪಿಸುತ ಕಷ್ಟ ದೂಡು 4 ವಹಿಸು ಭಾರವ ಲಕ್ಷ್ಮೀಕಾಂತನ ಮೇಲೆ ಇಹರಹರಾದರದಿಂದ ತಲ್ಲೀಲೆ ಮಹಿಮೆಯ ಪೊಗಳಿ ತೂಗಾತನೂಯ್ಯಾಲೆ ಅಹಿಪತಿ ಗಿರಿರಾಜ ಎತ್ತುವ ಮೇಲೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಸಾಕು ಸಡಗರವ ಬಿಟ್ಟು ಹರಿಯ ನೆನೆ ಬೇಗ ನೂಕು ಭವದ ಬೇಸರ ದುಷ್ಕರ್ಮವನೀಗ ಪ. ವೇದವ ಗಿರಿಯ ಧರೆಯನುದ್ಧರಿಸಿದವನ್ಯಾರು ಬಾಧಿಪ ಖಳನುದರ ಸೀಳ್ದಗೆ ಸರಿದೋರು ಪಾದನಖದಿ ಬೊಮ್ಮಾಂಡವನೊಡೆದನ ಸಾರು ಕ್ರೋಧದಿ ನೃಪರನು ಕೊಂದವನ ಮಹಿಮೆಯ ಬೀರು 1 ಸೇತುವೆಗಟ್ಟಿದ ರಾಮನಿಂದಿಷ್ಟವ ಬೇಡು ಭೂತರುಣಿಗೆ ಸುಖವಿತ್ತನ ಪೂಜೆಯ ಮಾಡು ಖ್ಯಾತ ದಿಗಂಬರದೇವನ ಕುಶಲವ ನೋಡು ಭೀತಿಯ ಬಿಡುತಲಿ ಭಜನದಿ ಲೋಲ್ಯಾಡು 2 ಮನೆಮನೆವಾರ್ತೆಯ ಬಿಟ್ಟು ಧೇನಿಸುವುದು ಗಳಿಗೆ ಕನಸಿನೊಳಾದರು ಪೋಗದಿರಧಮರ ಬಳಿಗೆ ಗು- ಣನಿಧಿ ಹಯವದನನ ನಿಲಿಸಿಕೊ ಮನದೊಳಗೆ 3
--------------
ವಾದಿರಾಜ
ಸಾಂಬ ಶಿವ ಶರಣರಿಗೊಂದು ಶರಣಾರ್ಥಿ ಪ ನರಲೋಕದೊಳಗೆ ಸಂಚಾರವ ಮಾಡುವ ಪರಮಾತ್ಮ ಪರಿಪೂರ್ಣ ಎಲ್ಲ ಜೀವದೊಳೆಂದು ಅರಿತಂಥವನಿಗೊಂದು ಶರಣಾರ್ಥಿ ಮರೆಹೊಕ್ಕ ದೀನರನು ರಕ್ಷಿಪ ಪುಣ್ಯ ಪುರು ಪುರುಷ ಪ್ರಯತ್ನದಿಂದುದ್ಯೋಗವನು ಮಾಳ್ಪ ಸರಿವಂಥವರಿಗೊಂದು ಶರಣಾರ್ಥಿ 1 ಧಾರಣಿಯೊಳು ಪೆಸರೊಡೆದು ರಂಜಿಸುವಂಥ ಕಾರುಣಿಕರಿಗೊಂದು ಶರಣಾರ್ಥಿ ದವರಿಗೊಂದು ಶರಣಾರ್ಥಿ ನಿತ್ಯ ಕರ್ಮವ ರಚಿಸುವ ಚಾರು ಶೀಲರಿಗೊಂದು ಶರಣಾರ್ಥಿ ಸ್ಸಾರ ಮಾಡಿದಗೊಂದು ಶರಣಾರ್ಥಿ 2 ಕೆರೆಭಾವಿ ದೇವಾಲಯಗಳ ಕಟ್ಟಿಸಿ ದೇವರುತ್ಸವವನು ಬರಿಸುವಗೆ ದ್ಧರಿಸಿ ಭುಂಜಿಪಗೊಂದು ಶರಣಾರ್ಥಿ ಪರದಾರ ಪರದ್ರವ್ಯ ಪರದ್ರೋಹವಿಲ್ಲದ ಮಹಾ ಪುರುಷರಿಗೊಂದು ಶರಣಾರ್ಥಿ ಹರಿಹರರೊಳಗೆ ಭೇದವ ಮಾಡಿ ನಡೆಯದ ದುರಿತ ದೂರರಿಗೊಂದು ಶರಣಾರ್ಥಿ 3 ಸತ್ತು ಹುಟ್ಟುವ ಭವಶರಧಿಯ ಗೆಲುವಂಥ ಉತ್ತಮರಿಗೊಂದು ಶರಣಾರ್ಥಿ ನಿತ್ಯ ಸಾಲಿಗ್ರಾಮಂಗಳನು ಪೂಜಿಸಿ ಹರಿ ತೀರ್ಥಗೊಂಬನಿಗೊಂದು ಶರಣಾರ್ಥಿ ಕೃತ್ತಿ ವಾಸನ ಆಗಮೋಕ್ತದಿ ಪೂಜಿಪ ಭಕ್ತಿವಂತರಿಗೊಂದು ಶರಣಾರ್ಥಿ ತತ್ವ ವಿಚಾರ ವೇದಾಂತದ ಅರ್ಥವ ಯಾ ವತ್ತರಿದವಗೊಂದು ಶರಣಾರ್ಥಿ 4 ಅರವಟ್ಟಿಗೆಯನು ಚೈತ್ರದೊಳಿಕ್ಕಿ ಜನರಿಗೆ ನೀರೆರಸಿದವರಿಗೊಂದು ಶರಣಾರ್ಥಿ ಸಿರಿ ತುಳಸಿಯನ್ನು ನೇಮದಲಿ ಪೂಜಿಸುವಂಥ ಹರಿ ಶರಣರಿಗೊಂದು ಶರಣಾರ್ಥಿ ತರಣಿಯೆ ತ್ರಿಗುಣಾತ್ಮಕನೆಂದು ಹೃದಯದೊಳರಿ ದೆರಗುವಗೊಂದು ಶರಣಾರ್ಥಿ ಮರುಸುತನ ಕೋಣೆ ವಾಸ ಲಕ್ಷ್ಮೀಶನ ಚರಣ ಪಂಕಜಕೊಂದು ಶರಣಾರ್ಥಿ 5
--------------
ಕವಿ ಪರಮದೇವದಾಸರು
ಸಾಮಗಾಯನ ಲೋಲ ವಿಠ್ಠಲನೆ ಸಲಹೋ ಪ ಕಾಮಿತಾರ್ಥಗಳಿವಗೆ ಪ್ರೇಮದಲಿ ಕೊಡುತಲಿಶ್ರೀ ಮನೋಹರ ಹರಿಯೆ ಕಾಪಾಡೊ ಇವನಾ ಅ.ಪ. ಹರಿಗುರೂ ಸದ್ಭಕ್ತಿ | ತರತಮದ ಸುಜ್ಞಾನನಿರುತ ಕರುಣಿಸಿ ಅರಿಪು | ಮೂರೆರಡು ಭೇದಾಹರುಷ ಕ್ಷೇಶಾದಿಗಳು | ಹರಿಯಧೀನಗಳೆಂಬಅರಿವಿನಿಂದಲಿ ದ್ವಂದ್ವ | ಸಹನೆಗಳನೀಯೊ 1 ಲೌಕಿಕದಿ ನಿನ್ನಾನೇಕ ಬಗೆ ವ್ಯಾಪ್ತಿಗಳ ತೋಕನಿಗೆ ತಿಳಿಸುತ್ತ ಸಾಕಬೇಕಿವನಾಪ್ರಾಕ್ಕು ಕರ್ಮವ ಕಳೆದು ಗೋಕುಲಾನಂದ ಹರಿನೀಕೊಡು ಸತ್ಸಂಗ | ಏಕಾಂತಿಕರ ಪ್ರಿಯನೆ 2 ಎಲ್ಲ ಬಲ್ಲವಗಿನ್ನು ಸೊಲ್ಲುಂಟೆ ನಾಪೇಳಿಮಲ್ಲ ಮರ್ಧನ ದೇವ | ಪ್ರಹ್ಲಾದ ವರದಾಕ್ಷುಲ್ಲಕನ ಕರಪಿಡಿದು | ಬಲ್ಲಿದನ ಮಾಡೆಂದುಚೆಲ್ವ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ಸುಖವಿಲ್ಲ ಆತ್ಮಕೆ ಈ ದೇಹದಿಂದ |ಸುಖವ ಪಡೆವುದು ದೇಹ ಈ ಆತ್ಮದಿಂದ ಪ ಕರ್ಮದೊಳು ಜನಿಸಿ ಬಂದದ್ದು ಈ ದೇಹ |ಕರ್ಮಕ್ಕೆ ಅನುಕೂಲವಾಗುವದು ಈ ದೇಹ |ಕರ್ಮವನು ಕಡೆ ತನಕ ಮಾಡುತಿರುವದು ದೇಹ 1 ನಾಮರೂಪದಲ್ಲಿ ನಿಲಿಸಿಹುದು ಈ ದೇಹ |ನೇಮನೀತಿಯನ್ನು ನಡೆಸುವದು ಈ ದೇಹ ||ಕಾಮ ಕ್ರೋಧದಲ್ಲಿ ಕುಂದಿ ಕುಂದಿ ಬೆಂದು |ಪ್ರೇಮದಲಿ ವೈರಾಗ್ಯ ತೊರೆ ತೊರೆದು 2 ಹಿಂದೆ ಬಂದಿದ್ದು ಈ ದೇಹ ಮುಂದೆ ನಿಂತಿದ್ದು ಈ ದೇಹ |ಎಂದೆಂದೂ ಬಿಡನು ಜೀವನು ಈ ದೇಹ ||ತಂದೆ ಗುರು ಭವತಾರಕನ ಪಾದಾರವಿಂದವ |ಹೊಂದಿದವರಿಗೆ ಇಲ್ಲೋ ಈ ನಾಲ್ಕು ದೇಹ 3
--------------
ಭಾವತರಕರು
ಸುಳಾದಿ ಧ್ರುವತಾಳ ಜಿಹ್ವೆ ಸಿರಿ ಗೋಪಾಲವಿಠಲಮೂರ್ತಿಮಂತನಾಗಿ ಇಪ್ಪ ಎಲ್ಲ ಸ್ಥಳದಿ 1 ಮಠ್ಯತಾಳ ಧನವೋದನವು ಇನ್ನು ಧನದೊಳಗಿಪ್ಪನ್ನನೆನೆದು ತೆಗೆದುಕೊ ಶೋಧನಮಾಡಿ ನೋಡಿತನುವಿಗೆ ಕೆಲಸವಿಡು ತನುಬಂಧುಗಳ ನೋಡುಎಣಿಕೆಗೆ ತಂದು ಭಾಗವನು ಮಾಡು ನಾಲ್ಕುಎಣಿಸುತಲ್ಲಲ್ಲಿ ನೆನೆ ಎಲ್ಲ ಸ್ಥಳದಿಗುಣ ಹರಿಯದೆಂದು ಗುಪ್ತನಾಗಿ ಇನ್ನುಅಣುಘನಪರಿಪೂರ್ಣ ಗೋಪಾಲವಿಠಲಅನಿಮಿತ್ತ ಬಂಧ್ವೆಂಬ ಗುಣವುಂಟವನಿಗೆ2 ರೂಪಕತಾಳ ಒಂದು ಅರ್ಥವು ನಿನಗೆ ದೊರಕಿದಡಾಯಿತೆಚಂದದಿ ಚಿಂತಿಸು ಅನಂತಪರಿಯಲ್ಲಿಒಂದುಭಾಗ ದೇವಸಮುದಾಯಕ್ಕೆ ಕೊಡುಒಂದುಭಾಗ ಪಿತೃಗಳಿಗೆ ಇನ್ನು ಮಾಡುಒಂದುಭಾಗ ಪರಿವಾರ ಬಂಧುಗಳಿಗೆಚಂದದಿ ಕೊಟ್ಟು ಆನಂದ ಉಣುಕಂಡ್ಯನಂದಗೋಪನ್ನ ಕಂದ ಗೋಪಾಲವಿಠಲನ್ನಚಂದದಿ ನಿನ್ನ ಮನಮಂದಿರದೊಳು ತಿಳಿ 3 ಝಂಪೆತಾಳ ಜ್ಞಾನವೆ ಮುಖ್ಯಸಾಧನ ನಿನಗೆ ನೋಡುಏನು ಧನದಿಂದಾಗೊ ಕರ್ಮವದರೊಳಗುಂಟುಪ್ರಾಣಹಿಂಸರಹಿತಕರ್ಮ ಮಾಡು ನಿತ್ಯಶ್ರೀನಿವಾಸನು ಅದಕೆ ಮೆಚ್ಚುವನುಜ್ಞಾನಮಯಕಾಯ ಗೋಪಾಲವಿಠಲರೇಯಕಾಣಿಸುವ ನಿನಗೆ ಕರುಣವಮಾಡಿ ನಿರುತ 4 ತ್ರಿಪುಟತಾಳ ತನುವು ಮಂಟಪಮಾಡು ಮನವೆ ಪೀಠವ ಇಡುನೆನೆದು ಕುಳ್ಳಿರಿಸು ನಿನ್ನ ಒಳಗಿದ್ದ ಮೂರ್ತಿಯಧ್ಯಾನ ಆವಾಹನಾದಿಗಳ ನೆನೆದು ಅಲ್ಲಿಪ್ಪಅಣುಮಹಾಮೂರ್ತಿಗೆ ಅಭಿಷೇಕ ಮಾಡಿಸುಗುಣಮೂರರೊಳಗಿದ್ದ ಹರಿಯ ನೆನೆದುಜಿನಸು ವಸನಾಭರಣ ಧೂಪದೀಪವ ಮಾಡಿನೆನಸು ಗಂಧ ಪುಷ್ಪವನು ಮಿಕ್ಕಾದದ್ದೆಲ್ಲಗುಣ ಮೂರುವಿಧದ ಪದಾರ್ಥಗಳನ್ನೆಲ್ಲನಿನಗೆ ಒಂದು ಉದಕಮಾತ್ರ ದೊರಕಿದರೆಇನಿತು ಪರಿಯು ಎಲ್ಲ ಅದರಿಂದ ಚಿಂತಿಸೊಧನದ ಪೂಜೆಗೆ ಅತ್ಯಾಯಾಸಪಡಲಿಬೇಡಘನದೈವ ನಮ್ಮ ಗೋಪಾಲವಿಠಲರೇಯನಿನಗೆಷ್ಟುಪರಿಯಲ್ಲಿ ಪೊರೆವನವನ ತಿಳಿ 5 ಅಟ್ಟತಾಳ ಒಳಗೆ ಬಂದರೆ ನಿನ್ನ ಒಳಗೆ ಇರುತಲಿಪ್ಪಸುಳಿಯುತಿಪ್ಪ ನಿನ್ನ ಸುತ್ತ ಬಿಡದೆ ಬೆನ್ನಹಲವುಪರಿಕರ್ಮ ನಿನಗಾಗಿ ಮಾಡುತ್ತಚೆಲುವ ನಿರ್ಲಿಪ್ತನ್ನ ತಿಳಿಯದೆ ಕೆಡುವಿ ಯಾಕೆಸುಲಭವಾಗಿ ಕರತಳದಲ್ಲಿದ್ದಂಥಫಲವ ನೀ ಕಾಣದೆ ಬಲು ದಣಿಸುವುದೇನೊಗೆಳೆಯನಾಗಿ ಪಾರ್ಥಗೊಲಿದ ನಮ್ಮ ಸ್ವಾಮಿಚೆಲುವ ಗೋಪಾಲವಿಠಲರೇಯನ ನೀನುಗಳಿಗೆ ಮರೆಯಬೇಡ ಬಲುಪ್ರಿಯಾ ಬಲುಪ್ರಿಯಾ 6 ಆದಿತಾಳ ಸೂರ್ಯ ಅಧಿಷ್ಠಾನದಲ್ಲಿದ್ದುದೇವನ ಸ್ಮರಣೆಯು ಬರುತಿರಲಿ ಕಂಡ್ಯಾಕಾವನು ಬಿಡನಿನ್ನು ಗೋಪಾಲವಿಠಲ 7 ಜತೆ ಗೃಹಮೇಧಿ ಮಾಡಿ ನಿನ್ನ ಗೃಹದೊಳಗಿಪ್ಪಂಥಶ್ರೀಹರಿ ಗೋಪಾಲವಿಠಲನ್ನ ನೆನೆಕಂಡ್ಯಾ
--------------
ಗೋಪಾಲದಾಸರು