ಒಟ್ಟು 521 ಕಡೆಗಳಲ್ಲಿ , 79 ದಾಸರು , 400 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಡವರೆಲ್ಲ ಬದುಕಿ ಸುಖದಲಿ ಬಹುಕಾಲ ಪ ಬಡವರೆಲ್ಲ ಸುಖದಲಿ ಜಗ ಕಡುಕರುಣಕೆ ಪಾತ್ರರಾಗಿ ದೃಢದಿ ಬಾಳಿ ಸಡಗರದಲಿ ಅ.ಪ ಕುಕ್ಷಿಗಾಗಿ ಗೈದು ಬಂದುದು ಲಕ್ಷವೆಂದು ತಿಳಿದು ನಮ್ಮ ಲಕ್ಷ್ಮಣಾಗ್ರಜನಾಜ್ಞೆಯೆಂದು 1 ಮಾನರಕ್ಷಣೆಗೆ ವಸ್ತ್ರವುಟ್ಟು ನಾನು ಎಂಬ ಮಮತೆ ಬಿಟ್ಟು ಜ್ಞಾನರತ್ನವ ಸಂಗ್ರಹಿಸುತ 2 ಜಗದ ಜನಗಳಂತೆ ನಡೆಯದೆ 3 ಯೋಗಿಗಳನು ನೋಡಿ ಹಿಗ್ಗಿ ಭೋಗಿಗಳನು ನೋಡಿ ತಗ್ಗಿ ತ್ಯಾಗ ಬುದ್ಧಿಯುಳ್ಳವರಾಗಿ ಭಾಗವತರಾಚರಣ ಪಿಡಿದು 4 ಪರರ ಸ್ವತ್ತಿಗಾಸೆಪಡದೆ ಎರೆಡು ಸುಖವು ಕರಗತವೈ 5
--------------
ಗುರುರಾಮವಿಠಲ
ಬಣ್ಣಿಸಲಳವೆ ನಾನು ಬಣ್ಣಿಸಲಳವೆ ನಾ ಬಹುವೇಷವುಳ್ಳ ಲಾ-ವಣ್ಯದ ಕಣಿಯಾದ ಉಡುಪಿನ ಕೃಷ್ಣನ ಪ. ಕರಗುವ ಮಿಸುನಿಯ ಕಾಂತಿಯಿಂ ಗರುಡನಗರಿಗಳ ಇರವ ಧಿಕ್ಕರಿಪ ಪೀತಾಂಬರಎರಡು ಪಾಶ್ರ್ವಗಳಲ್ಲಿ ಶಿರದ ಕಿರೀಟವುಕೊರಳಹಾರದ ಜೋಡು ಇರಲು ಈ ಪರಿಯಿಂದಮರೆಯಲಬ್ಜದ ಕಂಕಣ ಭೂಮಿಗೈದುವವರ ಸೂರ್ಯನಾರಾಯಣ ಬಾಹುಗಳುಳ್ಳಮಕರಕುಂಡಲ ಬಾಹುಪುರಿಗಳಿಂದೆಸೆವನ1 ಪಾದ ಕಂಸೆಯಗಲಿ ಇಂದ್ರ ನೀಲದದಾಳ ದಿಕ್ಕುಗಳನೆಬೆಳಗುತಲೆ ಬಹಳ ಲೀಲೆಯ ತೋರ್ಪಖಳರೆದೆ ಶೂಲನ ಚೆಲುವ ಗೋಪಾಲನ 2 ಜಾತಿಮುತ್ತಿನ ಚುಂಗು ಖ್ಯಾತಿಯಿಂದೊಪ್ಪುವಚಾತುರ್ಯದಿ ವಾರೆಗೊಂಡೆಯ ಕಟ್ಟಿಆ ಜೂತದಿಂದಲಿ ಅತಿ ಮೈಜೋಡು ತೊಟ್ಟು ಈ-ರೀತಿಯಿಂದೆಡಗೈಯ ವಂಕಿ ಮಧ್ಯದೊಳಾನುಚ್ಚುತ ಖಡ್ಗದಿಂದೊಪ್ಪುವ ಭೂತಳದಿವಿಖ್ಯಾತಿ ಪಡೆದು ಮೆರೆವÀ ದುಷ್ಟಮೃಗವಘಾತಿಸಿ ಬಿಡುವ ಕಿರಾತÀ ಸ್ವರೂಪನ್ನ 3 ಮಿಸುನಿಯ ಮುಂಡಾಸು ಪೊಸರವಿಯಂತಿರೆಶಶಿಯ ಪ್ರಭೆಯಂತೆ ಪಸರಿಸಲಂಗಿಯುಹಸನಾದ ನವರಂಜು ವಶದಲ್ಲಿ ತುಂಬಿರೆಕುಸುಮನಂದದಿ ಧೋತ್ರವ ಉಟ್ಟುವೈರ್ವಸನವ ಸುತ್ತಿ ಗಾತ್ರದಿ ಕುಲಾಯಿ ಒಪ್ಪಿನಸುನಗೆಯಿಂದೊಪ್ಪುವ ನವವಿಪ್ರವೇಷನ್ನ 4 ಕಡೆದ ಬೊಗರಿಯಂತೆ ಕಡೆದು ಮಾಡಿದ ಬಾಹುದೃಢವಾದ ಕುಚಗಳು ದುರಿತದುನ್ನತವಾದಬಡನಡು ಬಳುಕಲು ಕಡೆಗಣ್ಣ ನೋಟದಿಮೃಡ ಮುಖ್ಯರ್ಮೋಹಿಸಿ ಒಡಲ ಮಾರದಿರಲುಮುಡಿಯ ನೋಡುತ ನವಿಲು ನಾಚಿ ಮೊಗಗೊಡದಡವಿಯ ಸೇರಲು ಭೂಷಣಗಳುಜಡಿವುತ್ತ ಜಗದೊಳು ಕಡುಮೋಹಿನೀ ಬಲು 5 ಕರ್ಮ ಕಿಂಕರರೊಳಗಾಗಿಟೊಂಕದಿ ಕೈಯಿಟ್ಟು ಶಂಕಿಸಲು ತನ್ನಂಘ್ರಿಪಂಕಜಂಗಳ ಬೇಡಿ ಪುರುಷಾರ್ಥ ಪಡೆಯಿರೊಶಂಕೆ ಬೇಡವೊ ಎಂದು ಲೆಂಕರಿಗೆ ಸೂಸಿಪ್ಪ-ಸಂಖ್ಯಾತ ಕರಯುಗಳದಿಂದೊಪ್ಪುವಶಂಖ ಚಕ್ರ ಆಯುಧಂಗಳ ಪಿಡಿದು ಸರ್ವಾಲಂಕಾರದಿಂ ವೆಂಕಟೇಶನ ರೂಪ6 ಈ ವಿಧ ತಪ್ಪದೆ ಏಳು ವಾರಗಳಲ್ಲಿಪಾವನಮತ ಗುರು ಬಳಿಗೆ ಬಂದವರೆಲ್ಲಶ್ರೀವರ ಹಯವದನನ ಸೇವೆಗೊಳ್ಳಿರೋ ನಿತ್ಯಆವಾವ ನಾಡಿನ ಆಶ್ರಿತ ಜನರನ್ನುಭಾವಶುದ್ಧಗಳರಿತು ಕೋರಿಕೆಗಳಈವ ಭಕ್ತರಿಗೊಲಿದು ಪಾಷಂಡಾದಿಶೈವರ ತರಿದ ಸದ್ವೈಷ್ಣವರ ದೇವÀನ್ನ7
--------------
ವಾದಿರಾಜ
ಬಂದರ್ನೋಡೀ ಸುಂದರ್ತುಲಶೀರಾಮದಾಸರ್ಬಂದರು ಪ ಅಂದದೆಮ್ಮಾಕಂದರ್ಪಾಲಿಸೆಂದರ್ ತಾವೇ ಚಂದಾದಿಂದಾ ಇಂದ್ರರ್ಪದವಿಗಾಗಿ ಬೇಗಾ 1 ಭಕ್ತಿ ಮುಕ್ತಿ ಯೆರಡಕ್ಕೊಂದೆಯುಕ್ತಿ ತೋರಿ ಮತ್ತೆ ತಾನ್ ಭಕ್ತಿಜ್ಞಾನ ಯೇತನ್ಮಧ್ಯೆ ಹೊಕ್ಕಿ ಶಕ್ತರಾಗಿ ಬೇಗಾ 2 ಆಟಾಪಟಾವೆಂಬಳ ಕಳ್ಳ ಬೂಟಕಂಗಳನ್ನು ಬಿಡಿಸಿ ಸಾಟಿಯಾಗದ ತ್ರಿಕೂಟಮೆಂಬಟರಾರ್ಭಟಾ ತೋರಲ್ ಬೇಗಾ3 ಪಕ್ಷೇಂದ್ರನೇರಿ ಬಂದ ಯಕ್ಷರಕ್ಷನಾಗಿ ನಿಂದಾ ಸಾಕ್ಷಿ ಕೇಳುವಂತಾ ಅಡಿಯರ್ಗಾಕ್ಷಣವೆ ಮೋಕ್ಷ ತೋರಲ್ 4 ಆಶಪಾಶವೆಂಬೊದನ್ನು ನಾಶಮಾಡೊ ಈಶನಾಮಾ ದಾಸನಾದವರ್ಗೆ ಸಾಶಿರಾಂಗಾವಾಗಿ ಬೇಗಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಬಯಗುತನಕ ಆಟ ಕೂಟ ಊಟದ ಕೆಲಸ ಉಂಡ ಮೇಲೆ ಶಯನ ಪ ಬಯಲಾಯಿತು ಈ ಒಗತನವೆಲ್ಲ ರಕ್ಷಿಸಯ್ಯ ರಘುಕುಲ ತಿಲಕ ಅ ಪುರಾಣವಿಲ್ಲ ಪುಣ್ಯಕತೆಯಿಲ್ಲ ಪಾರಾಯಣದಿ ಮನಸಿಲ್ಲತರೋಣ ಬರೋಣ ತಿನ್ನೋಣ ಮಲಗೋಣ ಮತ್ತೇಳೋಣ 1 ಕಣ್ಣಿಗೆ ಜೋಂಪು ಹತ್ತುವತನಕ ಅನ್ಯವಿಷಯ ಮಾತುಕತೆಯಾಟಹೆಣ್ಣು ಹೊನ್ನು ಮಣ್ಣು ಮಮಕಾರದಿ ಒಳಹೊರಗಿಣುಕಾಟ2 ಹೀಗಾಗಿ ನಿನ್ನಲ್ಲಿಗೆ ಬಂದೆ ಇನ್ನಾದರೂ ಸಲಹೊ ಸಿರಿಕಾಗಿನೆಲೆಯಾದಿಕೇಶವ ಶಿರಬಾಗಿ ಬೇಡಿಕೊಂಬೆ 3
--------------
ಕನಕದಾಸ
ಬರಬಾರದಾಗಿತ್ತು ಬಂದೆನಯ್ಯಾ ಪ ಕರೆತರಲು ಬಂದುದಕೆ ಫಲವೇನೊ ದೇವಾಅ.ಪ ತರಳತನದಲ್ಲಿ ಎನ್ನ ಕರಣಗಳು ಮಾಡಿದ ಪರಿಪರಿಯ ಕ್ರೀಡೆಗಳ ಫಲವೇನೊ ಎನಗೆ ದುರುಳ ಸಂಗದೊಳಿದ್ದು ಹರುಷದಿಂದಲಿ ಎನ್ನ ಆಯುವನು ಕಳೆದೆ1 ಸತಿಸುತರು ಹಿತರಿವರು ಎನಗೆಂದು ಉಬ್ಬುಬ್ಬಿ ಮಿತಿ ಇಲ್ಲದಾ ಕಾರ್ಯಗಳನೆ ಮಾಡೀ ಗತಿಯೇನು ಮುಂದು ಹಿತವು ಯಾವುದು ಎಂದು ಮತಿಗೆಟ್ಟಮೇಲೆನಗೆ ಗೊತ್ತಾಗುವುದೆಂತೋ 2 ಶ್ವಾನ ಸೂಕರಗಳು ಸ್ವೇಚ್ಛೆಯಿಂದಲಿ ಚರಿಸಿ ತನ್ನ ಪರಿವಾರವನೆ ತಾ ಪೊರೆಯುತಿಹವೋ ಎನ್ನ ಸತಿಸುತರುಗಳ ಉದರಪೋಷಣೆಗಾಗಿ ಹೀನಸೇವೆಯಿಂದ ಉಪಜೀವಿಸಲು ಬಹುದೆ 3 ತನುಬಲವು ಇದ್ದಾಗ ಕೋಣನಂದದಿ ತಿರುಗಿ ಜ್ಞಾನ ಕರ್ಮಗಳನ್ನು ಆಚರಿಸದೇವೆ ಧನ ವನಿತೆ ಮೋಹಕೆ ಕೊನೆಮೊದಲು ಇಲ್ಲದೆ ಮನವೆಲ್ಲವನು ನಾನು ಹೊಲೆಗೆಡಿಸಿದಮೇಲೆ4 ವಿಕಳಮತಿಯನು ಹರಿಪ ಅಕಳಂಕ ಹರಿಭಕ್ತ- ರಕುಟಿಲಾಂತಃತರಣ ದೊರೆತು ಎನ್ನ ಸಕಲಾಪರಾಧಗಳ ಕ್ಷಮಿಸುವರ ಸಂಗ ನೀ ಕರುಣಿಸದಿದ್ದ ಮೇಲೆ ಶ್ರೀ ವೇಂಕಟೇಶಾ 5
--------------
ಉರಗಾದ್ರಿವಾಸವಿಠಲದಾಸರು
ಬರಿದು ಬಂದಿಹೆನೀಗ ಹಿರಿಮೆಯನು ಕಂಡರಿತು ಹರಸು ಸಂಗವ ಕೊಟ್ಟು ದಡಹಾಯ್ದು ಬಂದಿಹೆನು ಪ ಹುಟ್ಟು ಸಾವಿನ ಗಂಟು ಕಡುಪಾಪಿಯಾಗಿಸಿದೆ ಮುಟ್ಟಿ ನಿನ್ನನು ನಾನು ಎಂತು ಕಾಣುವೆನಯ್ಯ ಅ.ಪ ದಣಿದು ಬಂದಿಹೆ ದೇವ ಗತಿಯ ಕಾಣದೆ ಮುಂದೆ ತಣಿದಬಾಳಿನ ನನ್ನ ಜೀವವ ಚಂದವಾಗಿಸು ರಂಗ ಕುಣಿದು ಬರುವನು ನೀನು ಸರಿದುಹೋಗುವೆ ನಾನು ಮಣಿಸಿ ಬಂಧವ ಬಂದು ತಡೆದು ಕಾಪಿಡೊ ರಂಗ 1 ಕಣ್ಣು ಹೋಗಿಸು ನಿನ್ನಲಿ ಮಣ್ಣು ಬಯಕೆಯ ತಪ್ಪಿಸು ಕಾ - ಮನ್ನ ಸೇರಿಸು ನಿನ್ನಲಿ ನಲಿದು ಹಾಡಿಸು ನನ್ನನು ಕಾ - ರುಣ್ಯ ತೋರೈ ನನ್ನಲಿ ಮನವು ನನ್ನದು ಆಗಲಿ ಅಣ್ಣ ಶೆಲ್ವದೇವ ನೀ ನನಗಾಗಿ ತೋರಿಸಿಕೋ 2
--------------
ಸಂಪತ್ತಯ್ಯಂಗಾರ್
ಬರಿದೆ ಹಾಳು ಶರೀರ ಬಾಳು ಅರಿದಡಿದು ಮಹ ಟೊಳ್ಳು ಟೊಳ್ಳು ಪ ನಾರಿಪುರುಷರು ಮಾರಕದನದಿಂ ಸೇರಿ ಸುಖಿಸಲು ಜಾರಿದಿಂದ್ರಿಯ ಕಾರಣಾಗಿ ಮೂರುದಿನದಿ ತೋರಿ ಪೋಗ್ವಸಾರಮಯ 1 ಮಿಡುಮಿಡುಕಿ ಒಡಲಿಗಾಗಿ ದುಡಿದು ಮೂಢರಡಿಯ ಪಿಡಿದು ಬಿಡದೆ ರೋಗದೊಡನೆ ನರಳಿ ಪಡುತಕಷ್ಟ ಕಡೆಗೆ ಸಾಯ್ವ 2 ಪರರಸೇವೆ ನಿರುತಗೈದು ಪರಕೆ ಇಹ್ಯಕೆ ತಿರುಗಿ ತಿರುಗಿ ಗರುವದಿಂದ ಚರಿಸಿ ನಮ್ಮ ಸಿರಿಯರಾಮನ ಚರಣಕ್ಹೊಂದದ 3
--------------
ರಾಮದಾಸರು
ಬಲ್ಲವನಾದರೀ ತಳ್ಳಿಬೇಡ ಅಲ್ಲದ ಪಥವಿದರಾಸೆಯ ಬಿಡು ನೀನು ಪ ಸರ್ಪನ ಪಣೆಯೊಳು ಜೇನುತುಪ್ಪವ ಕಂಡು ಅಪ್ಪನೆ ತಾರೆಂದು ಅಳುತಿರಲು ತುಪ್ಪದ ಸವಿಯನು ಜನರುಂಡು ತೀರಲು ಮುಪ್ಪಾಗಿಯಿರುವುದ ಕಂಡು ಮೂದಲಿಸುವ 1 ನಂಬಿದ ಮನುಜರ ಹಂಬಲ ಮರವದು ಡೊಂಬಿಯವರು ಕಂಡು ತಡೆಯಲಾಗಿ ಅಂಬರವನು ಕಂಡು ನಗುತಿಪ್ಪ ಮನುಜನ 2 ಅಂಬರವಡಗಿಯೆ ಕುಂಭಿನಿ ಜಾರಿಯೆ ನಂಬಿದ ಮನುಜರು ನಡೆವೆಡೆಯ ಕುಂಭದ ನೀರನು ಚೆಲ್ಲುತ್ತ ಮಗುಳಲ್ಲಿ ಕಂಭದ ಹಾಗೆಲ್ಲ ನಿಂತಿಹ ಜನರನು 3 ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ ದುಷ್ಟನೊಬ್ಬನು ಬಂದು ನಿಂತಿಹನು ಇಟ್ಟಿಹ ಬಾಗಿಲ ಕಾಣದೆ ತಾ ಬಂದು ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ 4 ಕಡಹದ ಪಲ್ಲಕ್ಕಿ ಬೆಡಗನ್ನು ಕಾಣುತ್ತ ಮೃಗ ಬಂದು ಕುಳಿತಿರ್ದುದ ಒಡನೆ ಕಟ್ಟಿದ ವಾಹಕರ್ಹದಿನಾರು ಮಂದಿಯು ಕಡಿಮೆಯ ಸಂಬಳ ಕಡವಿಡುವವರನ್ನು 5 ಅಕ್ಕಿಯ ರಾಶಿಯು ತೀರಲು ಕೊಳಗವು ಬೆಕ್ಕನೆ ಬೆರಗಾಗಿ ಕುಳಿತಿಪ್ಪುದು ಬಿಕ್ಕಿದ ಅಕ್ಕಿಯ ಹಕ್ಕಿಯು ಹೆಕ್ಕಿಯೆ ಗಕ್ಕನೆ ಹಾರುವ ಪಕ್ಷಿಯ ನೋಡುತ್ತ 6 ರವಿಶಶಿಯೊಂದಾಗಿ ಇರುತಿಹ ಗಣಿತದಿ ಧರೆಯೊಳು ಸಾವಿರಯೆಲೆ ಬೀಳ್ವುದು ಎರವಿನಾಭರಣವ ಅವರವರೊಯ್ಯಲು ವರಾಹತಿಮ್ಮಪ್ಪನ ಮರೆ ಬೀಳು ಕಂಡ್ಯ 7
--------------
ವರಹತಿಮ್ಮಪ್ಪ
ಬಾ ಬಾ ಬಾರೈ ಬಾ ಬಾ ಬಾ ಬಾರೈ ಬಾ ಬೇಗ ಬಾರೆಂದು ಭಕುತರು ಕರೆಯಲು ಹರಿ ಪ. ಶ್ರೀಸತಿಯಪ್ಪಿಕೊಂಡಿಪ್ಪನೆ ಬಾ ಶೇಷಶಯನ ಎನ್ನಪ್ಪನೆ ಬಾ 1 ಮತ್ಸ್ಯನಾಗಿ ಜಲದೊಳಾಡಿದವನೆ ಬಾ ಕಚ್ಛಪವತಾರವ ಮಾಳ್ದನೆ ಬಾ 2 ಧsÀರೆಗಾಗಿ ಜಲದೊಳಗಿಳಿದನೆ ಬಾ ಹಿರಣ್ಯಕನುದರವ ಸೀಳ್ದನೆ ಬಾ 3 ಶಕ್ರನ ಪೊರೆದ ಶ್ರೀ ವಾಮನನೆ ಬಾ ವಕ್ರನೃಪಾಲಕುಲಶಮನನೆ ಬಾ 4 ರಾವಣಾಂತಕ ರಘುರಾಮನೆ ಬಾ ದೇವಕಿ ನಿಜಸುತ ಪ್ರೇಮನೆ ಬಾ 5 ಸತಿಯರ ವ್ರತವ ಕೆಡಿಸಿದನೆ ಬಾ ಚತುರ ಕಲಿಯನೋಡಿಸಿದನೆ ಬಾ 6 ಹಯವದನಾಶ್ರಿತ ಶರಣನೆ ಬಾ ಪ್ರಿಯಸುರ ಸೇವಿತ ಚರಣನೆ ಬಾ 7
--------------
ವಾದಿರಾಜ
ಬಾದರಾಯಣನ ಪಾದವ ನಂಬದೆ ಪ ತುಂಬಿ ತುಳುಕುತಿರೆ ವದನದಿ ಮಂತ್ರವ ಪಠಿಸಿ ಫಲವೇನು ಉದರ ಪೋಷಣೆಗಾಗಿಯೆ ಮಾಡುವ ಕರ್ಮ ನೋಡಿ ನಗುವರು 1 ಕಂಣನು ಮುಚ್ಚಿ ಮೌನದಿ ಕುಳಿತು ಪರ ಹೆಂಣಿನ ರೂಪವ ಮನದೊಳು ನೆನೆದು ಚಿಂಣತನದಿ ಅವಳ ಬೆರೆಯಲು ಯೋಚಿಸಿ ಹೊನ್ನು ಕೂಡಿಸುವ ಪರಿಯದಲ್ಲದೆ 2 ಗುಟ್ಟಲಿ ಪೂಜಿಪ ಗುರುತನು ಅರಿಯದೆ ಪಟ್ಟೆ ನಾಮವ ಹಚ್ಚಿ ಮಡಿಗಳನು ದಿಟ್ಟ ರಂಗೇಶವಿಠಲನ ಮರೆದು 3
--------------
ರಂಗೇಶವಿಠಲದಾಸರು
ಬಾರೋ ನಲಿದಾಡೋ ಜಿಹ್ವೆಯಲಿ ಮೂರಧಿಕಾರೊಡೆಯನೆ ಬಾರೋ ನಲಿದಾಡೋ ಜಿಹ್ವೆಯಲಿ ಪ ದಾಸಾ ಬಹು ಮೋಸಕ್ಕೊಳಗಾಗಿಹೆನು ಶ್ರೀಶಾ ಕರಪಿಡಿಯೆನ್ನ ದೋಷ ಮಹದಾಶಾ ವಹಿಸಿರುವೇನು ಘಾಸಿಯಾದೇನು ಮಾಡೋ ಕರುಣಾರ್ಣವದಿ ಈಶಾ ಘನವೇಷಾ ಬಹುತೋಷ ದಾಸನ ಮಾಡಿಕೊ ಎನ್ನ 1 ಕಂದೀ ನಾ ಕುಂದೀ ಗೃಹದೊಳಗೆ ಮಂದಿಯಾ ಶೇರಿದೆ ನೊಂದೇ ಬಹು ಬೆಂದೇ ಮನದೊಳಗೆ ಬಂಧನದೊಳು ಶಿಲ್ಕಿ ಸುಂದರ ಮೂರುತಿ ಸಂದಣಿಯದೆ ನಾ ಹೊಂದಿದೆನಿನಭವ ಭವ ನಾಯಿಂದೂ ದ್ವಂದ್ವಾಪದವಿಡಿದಿದೆ 2 ಘೋರಾ ನಿಸ್ಸಾರ ಭವದೊಳಗೆ ದಾರಿಗಾಣೆನು ಮಾರಾ ಬಹುದೀ ರಾಮನದೊಳಗೆ ಶೇರಿ ಕುಣಿವಾನು ಮಾರಜನಕ ನಿನ್ ಹಾರೈಶನುದಿನ ಶೇರಿ ಭಜಿಸಿ ನಿನ್ನ ನರಸಿಂಹವಿಠ್ಠಲ ಸಾರಿ ನಿನ ಕೋರಿ ಪದಶೇರಿ ಆರಾಧಿಸುವೀಗಳೆ 3
--------------
ನರಸಿಂಹವಿಠಲರು
ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾರೋ ಬೇಗನೆ ರಾಮಾ ನೀ ಬಾ ಪ ಏಕೆ ಪಂತರ ಮನೆಯೊಳು ನೀರ ತಂದೆ | ಲೋಕದೊಳಗೆ ನಿನ್ನ ಮಹಿಮೆಗೆ ಕುಂದೇ1 ಅಂದು ಕಬೀರನ ಸತಿಗಾಗಿ ಹಿಂದೆ |ಛಂದಾಗಿ ಕೊತವಾಲನಾಗಿ ಬಂದೆ 2 ಗುರು ಭವತಾರಕ ಎನ್ನ ತಂದೆ |ಆರು ಮುನಿದರೂ ಏನಿಲ್ಲ ಮುಂದೆ 3
--------------
ಭಾವತರಕರು
ಬಾರೋ ಹೋಗುವ ನಡಿ ಮನೆಗೆ ಇಂದಿರೇಶ ಪ ಬಾರೋ ಎನ್ನ ಮನಸೆಂಬ ಮನೆಗೇ ಅ.ಪ. ಕಣ್ಣಾ ಬಿಡಲು ಬ್ಯಾಡ ಜಲ-ವನ್ನು ಹೊಗಲಿ ಬೇಡ |ಮಣ್ಣಿಗಾಗಿ ದೈತ್ಯನ ನೀಗಿಚಿನ್ನಗೊಲಿದು ಹೋಗುವರೇನೋ 1 ತಿರಿಕಿ ಬೇಡಿದವನೇ ತಾಯಿ-ಶಿರವಾ ತರಿದವನೇ |ಕರಡಿ ಕಪಿ ಅಳಲುತರುಣರೊಡನೆ ಹೋಗದಲಿರೋ 2 ಕರವ ಮುಗಿವೆ ಲೇಸೆಂದೂ 3
--------------
ಮೋಹನದಾಸರು
ಬಿಡಬೇಡ ರಂಗಯ್ಯ ಬಡವನೂ ಪಿಡಿಕಯ್ಯ ಒಡೆಯ ನಿನ್ನಡಿ ಪಿಡಿದೆ ದಯೆಮಾಡೊ ಜೀಯ ಪ ಕಡಲಣುಗಿಯಣ್ಮನೇ ಕಡೆಹಾಯ್ಸೊ ಕಷ್ಟದಿಂ ಕಡುಮುದದಿ ಕೊಂಡಾಡಿ ಬೇಡುವೆನೊ ದೊರೆಯೆ ಅ.ಪ ಸಪ್ತ ಋಷಿಗಳು ಸತತ ಗುಪ್ತದಿಂ ಧ್ಯಾನಿಸುತ ತೃಪ್ತರಪ್ಪರು ಅಪ್ತ ನಿನ್ನ ನುತಿಸಿ ಅಪ್ಪ ನೀನವರಿಂದೆ ವಿಪ್ರತ್ವವಂ ತೋರಿ ಅಪ್ರತಿಮ ತಾರಕ ಬ್ರಹ್ಮ ಬೋಧಿಸಿದೆ 1 ಉತ್ತರೆಯ ಬಸುರೊಳಗೆ ಬ್ರಹ್ಮಾಸ್ತ್ರ ಬಾಧಿಸಲು ಅತ್ಯಗತ್ಯದಿ ಪ್ರಭುವೆ ಚಕ್ರ ಪಿಡಿದು ಸುತ್ತೆತ್ತಲಾಶಿಶುವ ಸಂರಕ್ಷಣೆಯಗೈದೆ ಉತ್ತಮೋತ್ತಮ ದೈವ ನೀನೆ ಜಗದಯ್ಯ 2 ಅಂಬರೀಷನ ಮೇಲೆ ಜಂಭದಿಂ ಮುನಿ ಮುನಿಯೆ ಕಂಬುಧಾರಿಯೆನೀಂ ಸುನಾಭ ಕಳುಹಿ ಬೆಂಬಿಡದೆ ಸುತ್ತಿಸಲು ಇಂಬಿನಿಂ ಪದಪಡಿಯೆ ಸಂಭ್ರಮದಿ ಕಾಯ್ದಂಥ ಸದ್ಭಕ್ತ ಬಂಧು 3 ಗಜರಾಜನಂ ಸರದಿ ಮೊಸಳೆ ಪೀಡಿಸುತಿರಲು ನಿಜರಥಾಂಗವ ಕಳುಹಿ ನಕ್ರನಂ ಸೀಳಿ ಅಜಪಿತನೆ ನೀನವರ ವಕ್ರ ಹರಿಸುತ ಕಾಯ್ದೆ ತ್ರಿಜಗಾದಿ ನಾಥನೇ ಭಕ್ತಪಾಲ 4 ಶರಣ ರಕ್ಷಣೆಗಾಗಿ ನೀಂ ಸುದರ್ಶನ ಪಿಡಿದೆ ವರದ ವೇಂಕಟರಮಣ ವೈಷ್ಣವೋದ್ಧರಣ ಕರುಣಿ ನನ್ನಪರಾಧವಪರಿಮಿತವಿದೆ ಕ್ಷಮಿಸು ತರಳನಂ ಕಾಪಾಡು ಜಾಜೀಶ ನೋಡು 5
--------------
ಶಾಮಶರ್ಮರು