ಒಟ್ಟು 388 ಕಡೆಗಳಲ್ಲಿ , 69 ದಾಸರು , 363 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಖ್ಯಪ್ರಾಣ ಮೂಲಗುರು ಅಹುದೊ ಪ. ಅಹುದೊ ಧರಣಿಯ ಮ್ಯಾಲೆ ದಿವಾಕರನ ಪ್ರಭೆಯಂತೆಅಹುದೊ ಮಧ್ವಮತಕೆ ಬಿರುದು ನೀ ಅಹುದೊಅ.ಪ. ಅಂಜನೆಯ ಗರ್ಭದಲಿ ಉದ್ಭವಿಸಿದ್ಯೊ ನೀನುಸಂಜೀವನವ ತಂದ್ಯೊ ಸಕಲ ಕಪಿಗಳಿಗೆಮಂಜುಭಾಷಣ ನೀನು ಶರಧಿಯನು ದಾಟಿದೆಯೊಕಂಜಾಕ್ಷಿ ಸೀತೆಗೆ ಉಂಗುರವನಿತ್ತೆ 1 ಕುಂತಿಯ ಗರ್ಭದಲಿ ಉದ್ಭವಿಸಿದ್ಯೊ ನೀನುಪಂಥವನಾಡಿ ದಾಯಾದ್ಯರೊಡನೆಕಂತುಪಿತನ ಕೂಡಿ ಕೌರವರ ಗೆಲಿದ್ಯೊಸಂತೋಷದಿಂದ ಸಾಮ್ರಾಜ್ಯ ಕೈಗೊಂಡೆ 2 ಮಧ್ವಾವತಾರದಲಿ ಮುನಿವೇಷವನು ತಾಳಿಅದ್ವೈತವೆಂಬೊ ಅರಣ್ಯವನು ತರಿದೆಮಧ್ವಶಾಸ್ತ್ರವೆಂಬೊ ಮತವ ನಿರ್ಣೈಸಿದೆಮುದ್ದು ಹಯವದನದಾಸ ನೀನಹುದೊ 3
--------------
ವಾದಿರಾಜ
ಮುಚ್ಚ್ಯಾಕೆ ಮರೆಯಾಕ್ಹೆಚ್ಚೀತನೆ ಅಚ್ಯುತ ಸಕಲಕ್ಕೆ ಅಧಿಕಿಹ್ಯನೆ ಪ ಬಚ್ಚಿಟ್ಟುಕೊಂಡು ವೇದ ಕುಚ್ಛಿತ ದೈತ್ಯರೊಯ್ಯೆ ಇಚ್ಛೆಗಾರ ಪಿತ ತಂದು ನಿಶ್ಚಯಗೈದ ಸೃಷ್ಟಿ ಅ.ಪ ಸವೆಯದ ವರವನ್ನು ಹಿರಣ್ಯಕಶ್ಯಪನಿಗೆ ಶಿವ ತಾನುಕೊಟ್ಟ ವೈಕುಂಠನ ಉದರ ಸೀಳಿ ಜವದಿ ತ್ರಿಭುವನವ ದಯದಿ ಸಲಹಿದ ಸಿರಿ ಧವ ನರಸಿಂಗನೆನಿಸಿ 1 ಕೇಳಿದ ವರವನ್ನು ದುರುಳರಾವಣನಿಗೆ ಪಾಲಿಸಿ ವರ ಶಂಭು ಹರಿಯನ್ನು ಅರ್ಚಿಸೆ ಕೀಳುದೈತ್ಯನ ಕುಲಮೂಲ ತರಿದು ಸುರರ ಪಾಲಿಸಿದನು ದಿವ್ಯ ಮೇಲುರೂಪವ ತಾಳಿ 2 ದುರುಳಗೊಲಿದು ಶಿವ ಉರಿಹಸ್ತ ಕರುಣಿಸಿ ಮರುಗುತ ಹರಿಯೆಂದು ಕರವೆತ್ತಿಕೂಗಲು ಭರದಿ ಒದಗಿಬಂದು ಮೆರೆವೀ ಅಸುರನನ್ನು ಉರಿಹಸ್ತ ಹರನಿಗೆ ವರವಿತ್ತ ಶ್ರೀರಾಮ 3
--------------
ರಾಮದಾಸರು
ಮುನಿದ ಭಾವುನದಂಡು ಕಂಡು ನಿನ್ನ ಮನೆಮಾರಿ ನಾಸೆಯನು ನೀಡಾಡು ಪ ಲಂಬಾಣಿ ಜನ ಬಂತು ನೋಡು ನೀನು ದಿಬ್ಬವ ಹತ್ತಿ ಕಾನಿಗೆ ಓಡು ತಂಬಿಗೆಗಳ ಜೊತೆಮಾಡು ತಲೆ ಚಂಬಿಗೆ ಬಂತು ಮಾನವರಿಗೆ ಕೇಡು 1 ಕಂಡ ಕಂಡವರನು ಹಿಡಿದು ಕರ ಚೆಂಡಾಡಿ ಹೊಯ್ದು ಕೆಡಹಿ ಮೆಟ್ಟಿ ತಿವಿದು ಖಂಡೆಯದೊಳು ಘಾಯ ಗರೆದು ಮೈ ರೊಂಡಿ ಮುರಿದು ಗಂಟಿಗೆ ನೀರನೆರೆದು 2 ಕತ್ತಿಯ ಕಿತ್ತು ಕೈಯೆತ್ತು ಗೋಣ ಕುತ್ತಿ ಹಸ್ತಕೆ ಹಸ್ತವನು ತರಿದೊತ್ತಿ ರಕ್ತ ಮಾಂಸದ ಕರುಳೊತ್ತಿ ಹಾ ರಿತು ಗೂಡಿಂದ ಜೀವನು ಕಣ್ಣ ಕುತ್ತಿ 3 ಹಂತಕಾರಿಗಳೊಂದೆ ರೂಪು ಪಾಪ ವಂತರಿಗಿನಜ ತೋರಿಸುವ ವಿದೂಪ ನರ ಕಂತೆಯ ಬಿಡದೆ ಸುಲಿಯಲಿಕೆ ಸಾಪು 4 ಶೀಲವಂತರು ಶೀಲಗೆಟ್ಟರು ದುಃ ಶೀಲರು ಶೀಲದಾಚಾರವ ಸೊಟ್ಟರು ಕೀಳು ಮೇಲೊಂದಾಯಿತಷ್ಟು ಲಕ್ಷ್ಮೀ ಲೋಲ ಮಾಡಿಸುವ ಕುಚೇಷ್ಟೆ ಇವಿಷ್ಟು 5
--------------
ಕವಿ ಪರಮದೇವದಾಸರು
ಮೂಲನಾರಾಯಣ ವಟಪತ್ರಶಾಯಿ ಕಾಲಕಾಲಕೆ ವೊದಗಿ ನೀಯೆನ್ನ ಕಾಯೋ ಪ. ಎಂದೆಂದಿಗೂ ಎನಗೆ ತಂದೆ ನೀ ದೇವಾ ಯಿಂದೆನ್ನ ಕರಪಿಡಿಯೋ ಬಿಂದುಮಾಧವಾ ಅ.ಪ. ಸ್ವಚ್ಛ ಮನವಮಾಡು ಮತ್ಸರೂಪಕನೆ ತುಚ್ಛ ಮನಕೊಂದ ವಿಶ್ವವ್ಯಾಪಕನೆ 1 ಮುಂದೆನ್ನ ಉದ್ಧರಿಸು ಮಂಧರೋದ್ದರನೆ ಇಂದ್ರಾದಿ ಸುರರಿಂದ ವಂದ್ಯಾಸುರವರನೆ 2 ಹಿರಣ್ಯಾಕ್ಷನ ತರಿದಂಥ ಧೀರ ಭರಧಿ ವೇದವ ತಂದ ಮಹಿಮೆ ಅಪಾರ 3 ತರಳ ಪ್ರಹ್ಲಾದನ ತಲೆಗಾಯ್ದ ರೂಪ ಸರಳ ಮತಿಯನಿತ್ತು ಪಾಲಿಸು ಶ್ರೀಶ 4 ಬಲಿಯ ಸಿಕ್ಕನು ಮುರಿದೆ ಪ್ರಬು ನಿನ್ನ ಕೀರ್ತಿ ಯೊಳ ಎನ್ನ ಮನವಿಡು ವಾಮನಮೂರ್ತಿ 5 ಕ್ಷತ್ರಿಯ ಕುಂಭವ ಸವರಿದ ರಾಮ ಶತಷಟ್ಯಂದರ ಬಡಿದ ದಿವ್ಯ ನಾಮ 6 ದಾನವ ಕುಲಕುಟಾರ ಶ್ರೀ ರಾಮ ಮಾನಾಭಿಮಾನವು ನಿನ್ನದೋ ರಮ 7 ಮಲ್ಲರ ಗೆದ್ದಂಥ ದೂಕುಳ ವೈರಿ ಗೊಲ್ಲಬಾಲಕರ ಕೂಡಾಡಿದ ಶೌರಿ ಶೌರಿ 8 ತ್ರಿಪುರರ ಸ್ತ್ರೀಯರ ವ್ರತ ಕೆಡಿಸಿದ ಜಾಣ ಉಪಗಮನ ವೀಯೋ ವಿಶ್ವೇಶ ಸುಜ್ಞಾನ 9 ಕಲಿಮುಖದೈತ್ಯರ ಅಳಿಯುವ ಕಲ್ಕಿ ಸಲಹೋ ಬಳಲುವೆ ನಾನು ಭವದಿಂ ಶಿಲ್ಕಿ10 ಗುರು ಕಾಳೀಮರ್ಧನಕೃಷ್ಣ ಯಾವಾಗ್ಯು ಶರಣುಜನರಪಾಲ ಏನು ಬಂದಾಗ್ಯು 11
--------------
ಕಳಸದ ಸುಂದರಮ್ಮ
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಯತಿಗಳ ಸ್ತುತಿ ಮಧ್ವಮುನಿಯೆ ಎನ್ನ ಉದ್ಧರಿಸಿನ್ನ ಪ. ಸದ್ಗುರುವೆ ನಿನ್ನ ಪದ್ಮಪಾದಗಳಿಗೆ ಕರ ಮಣಿ ಅ.ಪ. ವರಕಲ್ಪ ಕಲ್ಪದಲಿ ಹರಿಯ ಮೆಚ್ಚಿಸಿ ಸಿರಿವರನಲಿ ಜನಿಸಿ ವಾಯುವೆಂದೆನಿಸಿ ಸುರರೆಲ್ಲ ಮೊರೆಯಿಡೆ ಹರಿಯವತರಿಸಿ ಹರಿಯ ಸೇವೆಗೆ ನೀ ಮಾರುತಿ ಎನಿಸಿ ಶರಧಿ ಲಂಘಿಸಿ ಉಂಗುರ ಸೀತೆಗೆ ಇತ್ತು ದುರುಳನ ಪುರ ಸುರಮುಖನಿಗರ್ಪಿಸಿದೆ 1 ಚಂದ್ರವಂಶದಲಿ ಬಂದ್ಯೊ ಬಲಶಾಲಿ ನಂದಕಂದನ ಲೀಲೆ ಅಂದ ಪಾಡುತಲಿ ಬಂದಿತು ಕಲಹ ಅಲ್ಲಿ ದ್ವಂದ್ವ ಭಾಗದಲಿ ಅಂದು ಕೌರವರಲಿ ನಿಂದ್ಯೊ ದ್ವೇಷದಲಿ ಇಂದುಮುಖಿಗೆ ಸೌಗಂಧಿಕ ಇತ್ತು ಕುರು ನಂದನ ವಂಶವನಂದು ಛೇದಿಸಿದೆ 2 ದುರುಳರೆಲ್ಲರು ಬಂದು ಕಲಿಯುಗದಿ ನಿಂದು ಹರಿಯು ನರನು ಒಂದು ಅರುಹಲಿಂತೆಂದು ಸುರರೆಲ್ಲ ಬಲುನೊಂದು ಕ್ಷೀರಾಬ್ಧಿಗೆ ಬಂದು ಸಿರಿವರ ಪೊರೆಯೆಂದು ಮೊರೆಯಿಡಲಂದು ಹರಿ ನಿನಗರುಹಲು ಧರೆಯಲ್ಲಿಗೆ ಬಂದು ಸುರ ಭೂ ಶ್ರೇಷ್ಠನುದರದಲಿ ಜನಿಸಿದೆ 3 ಪರಮಾಯಿಗಳ ಮತ ತರಿದು ಕೆಡಹುತ್ತ ಹರಿ ಸರ್ವೋತ್ತಮೆನುತ ಧರೆಯೊಳ್ ಸಾರುತ್ತ ತರತಮ್ಯ ಸತ್ಯವೆನುತ ಪಂಚಭೇದೆನುತ ಸಿರಿರಮಣಗೆ ನರಭೃತ್ಯನೆನ್ನುತ್ತ ಪರಿ ಬೋಧಿüಸಿ ದುರುಳರ ಛೇಡಿಸಿ ಸರಸಿಜಾಕ್ಷಗೆ ಬಲು ಸಮ್ಮತನೆನಿಸಿ 4 ವೈಷ್ಣವಾಗ್ರಣೀ ಲೀಲೆ ಪೇಳಲಳವಲ್ಲ ಜಿಷ್ಣುಸಖನ ಲೀಲೆ ನುಡಿಸೆನಗೆ ಸೊಲ್ಲ ಕಷ್ಟಪಡುತಿಹೆನಲ್ಲ ಕರುಣವೇಕಿಲ್ಲ ಶ್ರೇಷ್ಠನೆ ಗೋಪಾಲಕೃಷ್ಣವಿಠಲ ಇಷ್ಟು ತಿಳಿಸುತ ಅಷ್ಟದಳದಲಿ ಶ್ರೇಷ್ಠದಿ ಪೂಜಿಪ ಗುಟ್ಟು ತೋರೆನಗೆ 5
--------------
ಅಂಬಾಬಾಯಿ
ಯತಿರಾಜಾ - ಪಾಲಿಸೊ ಎನ್ನ - ಯತಿರಾಜಾ ಪ ಯತಿರಾಜಾ ಪಾಲಿಸೊ ಎನ್ನ - ಅಹಂಮತಿಯ ಕಳೆದು ಗುರುವರೇಣ್ಯ | ಆಹ ಸತತದಿ ಹರಿ ಧ್ಯಾನ | ರತನನ ಮಾಡಿ ಸದ್ ಗತಿಯ ಸೇರುವಂಥ | ಪಥದಲ್ಲಿರಿಸೊ ರಾಜಅ.ಪ. ವೀಣಾ ವೆಂಕಟ ನಾಮಾಭಿಧ | ಕುಂಭಕೋಣ ಪುರದೊಳು ಮೆರೆದಾ | ಓವಿಜ್ಞಾನಿ ಸುಧೀಂದ್ರರೊಲಿಸಿದಾ | ಬಹುಮಾನವಾಗಿ ಶಾಲು ಪಡೆದಾ | ಆಹಏನು ಇದಾಶ್ಚರ್ಯ | ಮಾನ ಉಳಿವದೆಂತುನಾನೊಂದು ಕಾಣೆ | ನೆನುತಾವಸನ ಮುಂದಿಟ್ಟ 1 ಅಂದಿನಂದಿನ ಪಾಠಕ್ಕೆಲ್ಲ | ಟೀಕೆಛಂದಾಗಿ ಬರೆದಿರುವಲ್ಲ | ನಮ್ಮಹಿಂದಿನ ಸಂಶಯವೆಲ್ಲ | ನೀಗಿಮುಂದೆ ಜರುಗಿತು ಪಾಠವೆಲ್ಲ | ಆಹಎಂದು ನಮ್ಮ ವಸನ | ಕಂದ ನಿನ್ನಯ ಮೇಲೆಹೊಂದಿಸಿ ಮುದದಿಂದ | ಬಂದೆವೆಂದರ ಶಿಷ್ಯ 2 ಗುರುವು ಪಟ್ಟರು ಬಲು ಮೋದಾ | ಸುಧಾಪರಿಮಳಾರ್ಯರೆಂಬ ಬಿರುದಾ | ಪೊಂದಿಇರಲು ಕಾಲಾಂತರದಿಂದಾ | ಪಡೆದೆವರ ಯತ್ಯಾಶ್ರಮವವರಿಂದಾ | ಆಹಮೆರೆಸಿದೆ ರಾಮರ | ವರ ವೈಭವದಿಂದದುರುಳ ಮಾಯ್ಗಳಮತ | ತರಿದಿಟ್ಟೆ ವಾದದಿ 3 ಬೇಗೆಯಿಂದಳುತಿದ್ದ ಶಿಶುವಿಗೆ | ಚೈಲಆಗಸದೊಳು ನೀನು ನಿಲಿಸಿದೆ | ಹಾಂಗೆಮಾರ್ಗದಿ ಪ್ರಸವಿಸದವಳೀಗೆ | ನೀರನುಗಮಿಸುತ ನೀನು ಪೊರೆದೇ | ಆಹನಿಗಮಾಲಯ ವಾಸ | ರಾಘವೇಂದ್ರ ಗುರುವೆಬಗೆ ಬಗೆ ಗ್ರಂಥವ | ಮಿಗಿಲಾಗಿ ರಚಿಸೀದೆ 4 ಪಂಗು ಬಧಿರ ಮೂಕ ಜನರು | ನಿಮ್ಮಹಿಂಗದೆ ಬಂದು ಸೇವಿಪರು | ಬಂದಭಂಗಗಳೆಲ್ಲ ನೀಗುವರು | ಯತಿಪುಂಗನೆ ನಿನಗೆ ಸರಿಯಾರು | ಆಹಗಂಗಾ ಜನಕ ರೂ | ಪರಿಗಳು ನಾಲ್ಕರಿಂಅಂಗಲಾಚಿಪ ಜ | ನಂಗಳ ಪೊರೆಯುವ 5 ಅಘ ಪತಿ ಗೋ | ವಿಂದನ ಮಂದಿರಬಂದು ಸೇರುವುದಕ್ಕೆ | ಅಂದ ಸೋಪಾನವು 6 ವರಹಸುತೆ ತೀರ ವಾಸಾ | ಭಕ್ತಸುರತರುವೆ ನಿನ್ನ ದಾಸಾ | ನಾಗಿಇರಿಸೊ ಭೂ ತಳಾಧೀಶ | ಬೇಡ್ವೆವರ ಒಂದ ನಾನಿನ್ನ ಅನಿಶ | ಆಹಗುರುಗೋವಿಂದ ವಿಠಲನ | ಚರಣಾರವಿಂದವನಿರುತ ಭಜಿಸುವಂಥ ವರಮತಿ ಕೊಟ್ಟನ್ನ7
--------------
ಗುರುಗೋವಿಂದವಿಠಲರು
ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ - ಜಗ ಪ ದೇಕ ವಿಖ್ಯಾತ ಪಶ್ಚಿಮ ರಂಗಧಾಮ ಅ ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತುರಮಣಿ ಭೂಮಿಯನು ತಂದಾಯಾಸವೂಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊಕ್ಷಮೆಯನಳೆದೀ ಪಾದಕಮಲ ನೊಂದವೊ 1 ಪೊಡವಿಪಾಲಕರ ವಂಶವನು ವಪನ ಮಾಡಿಕೊಡಲಿಯನು ಬಿಸುಟು ಮಲಗಿದ ಭಾವವೊಮಡದಿಯನು ಕದ್ದೊಯ್ದವನ ಶಿರವನೆ ತರಿದುಒಡಲಿನಾಯಾಸದಲಿ ಪವಡಿಸಿದ ಪರಿಯೋ 2 ವಾಲಿ ಮೊದಲಾದ ಎದುರಾಂತ ವೀರರ ಕೊಂದುಕಾಳಿಯ ಹೆಡೆಯ ತುಳಿತುಳಿದು ಮೈಯಲಸಿತೊಲೀಲೆಗೋಸುಗ ಬಂದು ನಿರ್ವಾಣದಲಿ ನಿಂದುಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ 3 ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊಸಾಕಾರಿಯಾಗಿ ಗೌತಮ ಮುನೀಶ್ವರನಿಗೆಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ 4 ಕಾಲ ನೀನಿಲ್ಲಿ ಮಲಗಿದ್ದರೂನಿನ್ನನೆಬ್ಬಿಸುವವರನೊಬ್ಬರನು ಕಾಣೆಉನ್ನಂತ ಕಾಗಿನೆಲೆಯಾದಿಕೇಶವರಾಯಚೆನ್ನ ಶ್ರೀರಂಗಪಟ್ಟಣದ ರಂಗಧಾಮ 5
--------------
ಕನಕದಾಸ
ಯಾಕೆ ಪುಟ್ಟಿಸಿದ್ಯೊ ಭೂಲೋಕದೊಳು ಎನ್ನಂಥ ಪಾಪಿಷ್ಠರ ಕಾಣೆನೋ ಕೃಷ್ಣಾ ಪ ಪಾತಗಳ ತರಿದು ಕೃಷ್ಣಾ ಅ.ಪ. ಬೆಳಸಿದದಕೆ ಕೃಷ್ಣಾ ಕಲಿಸಿದಕೆÉ ಕೃಷ್ಣಾ ಧನ ತರುವ ಕಾಲದಲಿ ವನಿತೆ ಸುತರಿಗೆ ಮೆಚ್ಚಿ ಜನನಿ ಜನಕರ ಬಿಟ್ಟೆನೋ ಕೃಷ್ಣಾ 1 ಮಾಡಿದ ಕೃಷ್ಣಾ ಬಾಳಿದೆ ಕೃಷ್ಣಾ ಬುದ್ಧಿ ಹೋಯಿತು ಎನಗೆ ಕದ್ದುಂಡು ಕಾಯವನು ಉದ್ದಾಗಿ ಬೆಳೆಸಿ ಮೆರೆದೆ ಕೃಷ್ಣಾ 2 ಕಡೆಯಾದೆನೋ ಕೃಷ್ಣಾ ಮಾಡಿದೆ ಕೃಷ್ಣಾ ಗಣನೆ ಇಲ್ಲದೆ ಪರರ ಹಣವನ್ನು ಅಪಹರಿಸಿ ಬಣಗ ಲೆಕ್ಕಸನಾದೆನೋ ಕೃಷ್ಣಾ 3 ಮಾಡಿಸಿದೆನೋ ಕೃಷ್ಣಾ ಸೃಷ್ಟೀಶನವತರಿಸಿದುತ್ಕøಷ್ಟ ದಿವಸಲಿ ಬಿಟ್ಟಿಬೇಸರ ಮಾಡಿದೆ ಕೃಷ್ಣಾ ಇಷ್ಟು ದಿನಗಳು ದುಷ್ಟಕೃತಿಯಲಿ ಮನಸ್ಹಾಕಿ ಪುಟ್ಟಿಸಿದ ನಿನ್ನ ಮರೆತೆ ಕೃಷ್ಣಾ 4 ನೀ ಪಾಲಿಸುವುದು ಕೃಷ್ಣಾ ತೋರಿಸುವುದು ಕೃಷ್ಣಾ ಬಂಧು ಬಳಗವು ನೀನೆ ಮುಂದಿನಾ ಗತಿ ನೀನೆ ತಂದೆ ಹನುಮೇಶವಿಠಲರಾ ಕೃಷ್ಣಾ 5
--------------
ಹನುಮೇಶವಿಠಲ
ಯಾಕೆ ಮನದಲಿ ಶೋಕಿಸುತ್ತಿರುವೆ ಜಗ ದೇಕನಾಥನು ಸಾಕುತಿರುವನು ನೀ ತಿಳಿಯದಿರುವೆ ಪ ಲೋಕನಾಥನ ವಿವೇಕದಿ ಸ್ತುತಿಸದೆ ವ್ಯಾಕುಲದಿಂ ಮನ ಕಳವಳಗೊಳುತಲಿ ಅ.ಪ ಸೃಷ್ಟಿಕರ್ತನು ರಕ್ಷಿಸುತ್ತಿರುವ ದುರಿತಂಗಳ ರಾಸಿಯ ಬೆಟ್ಟಗಳ ತರಿದೊಟ್ಟು ತಿರುವ ಅದು ತಿಳಿಯದು ನೀ ಬಲು ಕಷ್ಟಗಳ ಪಡುತಿರ್ಪ ವಿಷಯಗಳ ನೋಡುತ ನಗುತಿರುವ ಇಷ್ಟು ಈತನ ಪ್ರಭಾವವು ತಿಳಿಯದೆ ಲಕ್ಷ್ಮಿರಮಣ ರಕ್ಷಿಸೆನ್ನುತ ಸ್ಮರಿಸದೆ 1 ನಾನು ನನ್ನದು ಎಂಬ ಅಭಿಮಾನ ಅದು ಪೋಗುವ ತನಕ ಜ್ಞಾನ ಮಾರ್ಗಕೆ ಇಲ್ಲ ಸಾಧನ- ವೆಂದರಿಯುತ ಮನದಲಿ ಧ್ಯಾನಿಸುತ್ತಿರು ಶ್ರೀನಿಧಿ ಗುಣಗಳನು ಹೀಗಿರುವುದೆ ಪ್ರಧಾನ ಧ್ಯಾನ ಗಾನ ಮೌನಾದಿ ವ್ರತಗಳನು ಶ್ರೀನಿಧಿಗರ್ಪಿಸಿ ಮನ ಹರುಷಿಸದಲೆ2 ತಂದೆ ಶ್ರೀ ವೆಂಕಟೇಶ ವಿಠ್ಠಲನು ಹರಿಭಕುತರ ಮೊರೆಯನು ಛಂದದಿಂದಲಿ ಕೇಳಿ ಪೋಷಿಪನು ಮುಕುಂದನಲಿ ಭಕುತಿ ಎಂದೆಂದಿಗೂ ತಪ್ಪದೆ ಉದ್ಧರಿಸುವನು ನಿಜವೆಂದರಿ ಇದನು ಮುಂದೆ ಕಮಲನಾಭ ವಿಠ್ಠಲ ಭಕುತರ ಸಂದಣಿ ಪೊರೆದು ಸಂತೈಸುತಲಿರೆ ವೃಥ 3
--------------
ನಿಡಗುರುಕಿ ಜೀವೂಬಾಯಿ
ಯಾಕೆಲೋ ರಂಗಾ | ನಿನ್ನರಸಿಯೊಳುಮುನಿದಿರುವೆ | ಲೋಕವೀರೇಳು ರಕ್ಷಿಪ ಮುದ್ದು ರಂಗಾ ಪ ನಾಲ್ಕನೆಯ ಅವತಾರದಲಿ ಉಗ್ರವಾಗಿರೆ | ಆ ಕಮಲಜ ಮುಖ್ಯ ಬೆದರುತಿರಲು | ಲಕುಮಿ ತಾಕಂಡು ತೊಡೆಮೇಲೆ ಕುಳ್ಳಿರಲು | ಈ ಲೋಕದೊಳು ಶಾಂತನೆನಿಸಿದಳೊ ನಿನ್ನರಿಸಿ 1 ಗುಂಜೆಯಮಾಲೆ ಕೊರಳಿಗೆ ಹಾಕಿ ಗೋವಳರ | ಎಂಜಲ ತಿನುತ ಗೋಗಳ ಕಾಯುತಿರಲು | ಕಂಜನಯನೆಯು ಬಂದು ಸಕಲ ಶಿರಿಯಿಂದಲಿ | ರಂಜಿಸಿದಳೊ ಜಗದೊಳಗೆ ನಿನ್ನ ಅರಿಸಿ 2 ಇಂತರಿದು ನಾನಾಪರಿಯಿಂದ ನಿನ್ನ ಮೇಲೇ | ಸಂತತ ಉಪಕಾರ ಮಾಡಿರೆ ನೀನು | ಕಂತುಮಾತೆಯ ತಪ್ಪು ನೋಡುವರೇನೋ | ಆ- ನಂತನೇ ಏಳು ಮಹೀಪತಿನಂದನೊಡೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯೋಗಿ ನಿತ್ಯಾನಂದ ಭೋಗಿನಾದದಿ ಮಲಗ್ಯಾನೆ ಯೋಗಿನಾದಂ ಝಣಂ ಝಣನಾದಂ ಭಿಣಿಂಭಿಣಿನಾದಸಲೆಯ ವೀಣಾನಾದವ ಕೇಳುತ ಪ ಈಷಣತ್ರಯ ಪಾಪಾತ್ಮರಿರಾ ಎಬ್ಬಿಸಲು ಬ್ಯಾಡಿವಾಸನವೆಂಬ ಆಷ್ಟಕರ್ಮಿಗಳೇ ಒದರ ಬ್ಯಾಡಿಪಾಶವ ಹರಿವುತ ಪಂಚಕ್ಲೇಶದಈಸು ಉಳಿಯದಂತೆ ತರಿದಾಯಾಸದಿ 1 ಅಂತರ ಎಂಬ ಘಾತಕರಿರಾ ಅತ್ತ ಹೋಗಲು ಬ್ಯಾಡಿಭ್ರಾಂತುಯಂದೆಂಬ ಬ್ರಷ್ಟರಿರ ಜಗಳಾಡಲಿ ಬ್ಯಾಡಿಅಂತರಿಸದೆ ಆರು ಶತ್ರುವ ಛೇದಿಸಿಅಂತಿಂತೆನ್ನದೆ ಆಯಾಸದಿಂದಲಿ 2 ಸಂಕಲ್ಪವೆಂಬೋ ಖೋಡಿಗಳಿರಾ ಸದ್ದು ಮಾಡಲಿ ಬ್ಯಾಡಿಮಂಕು ಎಂದೆಂಬ ಮಾಂದ್ಯಗಳಿರ ಮುಂದಕ್ಕಡ್ಡಾಡಬೇಡಿಬಿಂಕದಹಂಕಾರ ಬೇರ ಕಿತ್ತುಓಂಕಾರ ಚಿದಾನಂದ ವಸ್ತು ಆಯಾಸದಿ 3
--------------
ಚಿದಾನಂದ ಅವಧೂತರು
ರಕ್ಷಿಸು ಗುರುನಾಥಾ ಕೇಶವ ನೀನೇ ರಕ್ಷಿಸು ಸಿರಿನಾಥಾ ಪ ಅಕ್ಷಯ ದ್ರೌಪದಿಗಿತ್ತ ಶ್ರೀಕಾಂತನೇ ಶಿಕ್ಷಕ ನೀನೇ ಕನಕ ವಂದಿತನೇ ಅ.ಪ. ತರಳ ಪ್ರಲ್ಹಾದನಿಗೊಲಿದು ಧಾರುಣಿಯಲ್ಲಿ ಮೆರೆದ ಕಶ್ಯಪುವನ್ನು ಕೆಡಹಿದ ಹರಿಯೇ ದುರುಳ ಕಂಸನು ತನ್ನ ಪ್ರಜೆಗಳ ಹಿಂಸಿಸೆ ತರಿದು ಸಜ್ಜನರನ್ನು ಪೊರೆದ ಶ್ರೀಧರನೇ 1 ಭಜಿಸಲು ಕನಕನು ಉಡುಪಿ ಗ್ರಾಮದಲಾಗ ರಜನಿ ಮಧ್ಯದಿ ದಾಸಗೊಲಿದ ಶ್ರೀ ಹರಿಯೇ ಗಜವನ್ನು ರಕ್ಷಿಸಿ ಬಿರುದನು ತೋರಿದ ಭಜಕರ ಲೋಲನೆ ನೆರೆ ನಾರಾಯಣನೇ2 ಕಷ್ಟವ ನೀಗಿ ತಾ ಶಿಷ್ಟರ ಸಲಹಲು ಶ್ರೇಷ್ಠ ಮೂರುತಿ ರಂಗ ಬಹರೂಪವೆತ್ತೀ ಶಿಷ್ಟರ ರಕ್ಷಿಸಿ ಭ್ರಷ್ಟರ ಕೆಡಹಿದ ಸೃಷ್ಟಿಗೀಶನೆ ರಂಗ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಜನೆಂಬೋನಾಮವು ನೆಲಿಗೆ | ತಿಹುದು ಜಗದೊಳಗೆ 1 ಸಾಧನದಳ ಚತುರಂಗಗಳು | ಊದುವ ಬೋಧದ ಕಹಳೆಗಳು 2 ಗಜ ಸೆರೆ ವಿಡಿಯುತ ದುರಿತವ ತರಿದಾ 3 ಕೊನರುವ ದೇಹಾಭಿಮಾನಿಗಳ | ವನನಿಜ ಸ್ಥಳವನು ಬಿಡಿಸಿದನು 4 ಮೆರೆವ ಸಿಂಹಾಸನವೇರಿದನು | ಹರುಷದಿ ಕೀರ್ತಿಯ ಪಾಡಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು