ಒಟ್ಟು 979 ಕಡೆಗಳಲ್ಲಿ , 103 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೌರೀಕರಪಂಜರಕೀರ ಜೋ ಜೋ ಶೌರಿ ದಯಾರಸಪೂರನೆ ಜೋ ಜೋ ಧೀರ ಮುಕ್ಕಣ್ಣ ಕುಮಾರನೆ ಜೋ ಜೋ ದಾರಿದ್ರ್ಯ ದುಃಖ ಪ್ರಭಂಜನ ಜೋ ಜೋ 1 ಸಾವಿರನಯನ ತುರಂಗನೆ ಜೋ ಜೋ ದೇವರಾಜಸಂಭಾವಿತ ಜೋ ಜೋ ತಾವರೆನಯನ ಸನ್ಮೋಹನ ಜೋ ಜೋ ಸೇವಕವಿಬುಧಸಂಜೀವನ ಜೋ ಜೋ 2 ಪೃಥ್ವಿಯೊಳ್ವಾವಂಜೆ ಕ್ಷೇತ್ರಾಧಿವಾಸ ಕರ್ತ ಲಕ್ಷ್ಮೀನಾರಾಯಣಪಾದ ದಾಸ ಭೃತ್ಯವರ್ಗವ ಕಾವ ಭವಹರ ಜೋ ಜೋ ಕಾರ್ತಿಕೇಯ ಕೃತಕೃತ್ಯನೆ ಜೋ ಜೋ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೌರೀಕರಪಂಜರಕೀರ ಜೋ ಜೋ ಶೌರಿ ದಯಾರಸಪೂರನೆ ಜೋ ಜೋ ಧೀರ ಮುಕ್ಕಣ್ಣ ಕುಮಾರನೆ ಜೋ ಜೋ ದಾರಿದ್ರ್ಯ ದುಃಖ ಪ್ರಭಂಜನ ಜೋ ಜೋ 1 ಸಾವಿರನಯನ ತುರಂಗನೆ ಜೋ ಜೋ ದೇವರಾಜಸಂಭಾವಿತ ಜೋ ಜೋ ತಾವರೆನಯನ ಸನ್ಮೋಹನ ಜೋ ಜೋ ಸೇವಕವಿಬುಧಸಂಜೀವನ ಜೋ ಜೋ 2 ಪೃಥ್ವಿಯೊಳ್ವಾವಂಜೆ ಕ್ಷೇತ್ರಾಧಿವಾಸ ಕರ್ತ ಲಕ್ಷ್ಮೀನಾರಾಯಣಪಾದ ದಾಸ ಭೃತ್ಯವರ್ಗವ ಕಾವ ಭವಹರ ಜೋ ಜೋ ಕಾರ್ತಿಕೇಯ ಕೃತಕೃತ್ಯನೆ ಜೋ ಜೋ 3
--------------
ತುಪಾಕಿ ವೆಂಕಟರಮಣಾಚಾರ್ಯ
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚಂದ್ರಭಾಗ ಹರಿ ವಿಠಲ | ಸಲಹ ಬೇಕಿವಳಾ ಪ ಇಂದೀವರಾಕ್ಷ ಹರಿ | ಮಂದರೋದ್ಧಾರೀ ಅ.ಪ. ಮೋದ ಬಡಿಸುವ ಭಾರಮೋದ ಮಯ ನಿನಗಲ್ಲ | ದಧಾರಿಸಿಹುದೋಆದಿ ಮೂರುತಿ ಹರಿಯೆ | ಸಾಧನ ಸಾಧ್ಯವಾಗಿಕಾದುಕೋ ಬಿಡದಿವಳ | ಮಾಧವನೆ ದೇವಾ 1 ತರತಮಾತ್ಮಕ ಜ್ಞಾನ | ಅರುಹುತಿವಳಿಗೆ ಭೇದಎರಡು ಮೂರರ ಅರಿವು | ನೆರೆ ಕೈಗೂಡಲೀಹರಿಯೆ ಸರ್ವೋತ್ತಮನು | ಸುರಪಾದಿ ಸುರರೆಲ್ಲಹರಿಯ ಕಿಂಕರರೆಂಬ | ವರಜ್ಞಾನ ವಿರಲಿ 2 ಆಗು ಹೋಗುಗಳಲ್ಲಿ | ವೇಗ ಸಮತೆಯು ಬರಲಿಜಾಗು ಮಾಡದೆ ದ್ವಂದ್ವ | ಸಹನೆ ಬರುತಿರಲೀನಾಗಾರಿ ವಾಹನನ | ನಾಮ ಸುಧೆ ಸರ್ವದಾಸಾಗಿ ಮನ ಸವಿವಂತೆ | ಹಗಲಿರುಳು ಇರಲೀ 3 ಕಾಲ | ಮೋದದಿಂ ಕಳೆವಂತೆನೀ ದಯದಿ ಪಾಲಿಸುತ | ಕಾದುಕೋ ಇವಳಾಬೋಧ ಮೂರುತಿಯಾಗಿ | ಹೇ ದಯಾಕರ ಕೃಷ್ಣಾಆದರದಿ ಸುಜ್ಞಾನ | ಭಕ್ತಿಯನ್ನೀಯೋ 4 ಭವ ಬಂಧ ಬಿಡಿಸುವುದುಶ್ರೀವರನೆ ಶ್ರೀಗುರೂ | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಚರಣಯುಗವ ತೋರೋ ಪ ಶರಣರ ಪೊರೆಯುವ ಕರುಣಿಗಳರಸನೆ ನಿರುತವು ನಿನ್ನನೆ ನೆರೆನಂಬಿದೆ ಹರಿ ಅ.ಪ ದಿಕ್ಕು ನೀನೆ ಎಂದು ನಂಬಿದೆನಕ್ಕರಿಂದ ಬಂದು ತಕ್ಕುದೇನು ಘನ ರಕ್ಕಸವೈರಿಯೆ 1 ಇಷ್ಟದೇವನಾರೋ ಮನಸಾಭೀಷ್ಟವ ಕೊಡುಬಾರೋ ಕೃಷ್ಣಮೂರ್ತಿ ನೀಂ ದೃಷ್ಟಿಸು ನಮ್ಮನು2 ಕೇಣವ್ಯಾಕೋ ಹರಿಯೆ ಕಣ್ಣಲಿ ಕಾಣು ಬಾರೋ ದೊರೆಯೇ ಕಾಣೆನಿನಗೆ ಸರಿ ಜಾಣತನದಿ ಹರಿ 3 ವಾರಿಧಿಕೃತಶಯನ ವಿಕಸಿತ ವಾರಿಜದಳನಯನ ಕ್ಷೀರದೊಳದ್ದುನೀ ನೀರೊಳಗದ್ದು ಕಂ ಸಾರಿ ನಿನ್ನನೆ ಸಾರಿದೆ ನರಹರಿ 4 ಧರೆಯೊಳಧಿಕವಾದ ಶ್ರೀ ಪುಲಿಗಿರಿಯೊಳು ನೆಲೆಯಾದ ವರದವಿಠಲ ದೊರೆ ದಯಾನಿಧೆ 5
--------------
ವೆಂಕಟವರದಾರ್ಯರು
ಚಿಂತಯಾಮಿ ರಾಮಮಮಿತಮಹಿಮಂ ಶಾಂತದಾಂತ ಮಾಕಾಂತ ಧೀಮಂತ ಪ ಅಂತರಾತ್ಮಮಮಲ ಸುಗುಣ ಭರಿತಂ ಸಂತ ಹನೂಮಂತನಮಿತ ಚರಿತಂಅ.ಪ ಮೌನಿಯಾಗ ಪಾಲಮತುಳ ಶೂರಂ 1 ಮಾನಿನೀಮಣಿ ಶಾಪಭಂಗ ಚತುರಂ 2 ಜಾನಕೀ ಹೃದಯಾಪಹಾರ ಧೀರಂ 3 ಸಾನುಜ ಭರತೇಷ್ಟದಾತಮುದಾರಂ 4 ದಾನವ ಖರದೂಷಣ ಸಂಹಾರಂ 5 ಆನತ ಖಚರೇಂದ್ರ ಮೋಕ್ಷದಾತಾರಂ6 ಕಾನನ ಸತ್ಪಾವನಕರ ಸಂಚಾರಂ 7 ವಾನರಪತಿ ಸೇವಿತ ಪರಿವಾರಂ 8 ದಾನವ ರಾವಣ ಮರ್ದನ ಶೂರಂ9 ದೀನಪಾಲ ಮಾಂಗಿರಿಪತಿ ಗಂಭೀರಂ 10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚಿಂತಿಸೋ ಭಾರತವ ನೀ ಚಿಂತಿಸೊ ಪ. ಚಿಂತಿಸೊ ಭಾರತ ಮಹಿಮಾ | ಸಿರಿಕಾಂತನೆ ಉತ್ತಮೋತ್ತಮಾ | ಆಹಪಂಕ್ತಿಪಂಕ್ತಿಯೊಳಂತೆ | ಚಿಂತಿತ ಫಲದನಸಂಗ್ತಿ ಪೇಳುವ ಶ್ರುತಿ | ಅರ್ಥ ಭೋಧಿಪುದೆಂದು ಅ.ಪ. ಕಾಳಗ ಸರ್ವ | ಧೀಶನ ಮಹಿಮೆಯ 1 ಅಧಿಭೂತ ಅಧ್ಯಾತ್ಮ ಉಂಟು | ಮತ್ತೆಅಧಿದೈವವೆಂಬುದು ಉಂಟು | ಕೇಳುವಿದಿತವಾಗುವುದಲ್ಲ ಗಂಟು | ಗುರುಮುದದಿಂದ ಬಿಡಿಸಲೀ | ಗಂಟು | ಆಹಅದುಭುತಾರ್ಥಗಳೆಲ್ಲ | ವಿದಿತವಾಗುತ ಹರಿಹೃದಯಾಂತರಂಗನ | ನಿಧಿಧ್ಯಾಸನಕ್ಕವಕಾಶ 2 ಮೂರ್ಬಗೆ ಭಾಷೆಗಳಲ್ಲಿ | ಉಕ್ತಸಾರ ಪ್ರಮೆಯಂಗಳಲ್ಲಿ | ಹರಿ ಉ-ದಾರ ಗುಣಂಗಳು ಅಲ್ಲಿ | ಉಕ್ತಮೀರದೆ ಸ್ಪಷ್ಟತ್ವದಲ್ಲಿ | ಆಹನೇರವಾಗಿಯೆ ಪೇಳ್ದ | ಕಾರಣ ಕರೆವರುಮೂರರೊಳ ಗೊಂದು | ಸಾರಸಮಾಧ್ಯೆಂದು 3 ದರ್ಶನಾಂತರ ಸಿದ್ಧವಾದ | ವೈಷ್ಣ್ವದರ್ಶನ ಪ್ರತ್ಯುಕ್ತವಾದ | ಶೈವದರ್ಶನಾದಿ ಸಿದ್ಧವಾದ | ವಸ್ತುದರ್ಶಿತ ಶಿವನರ್ಚಿಸೀದ | ಆಹ ವಿ-ಮರ್ಶನ ಯೋಗ್ಯ ಸ | ದೃರ್ಶನ ದಿಂದಲಿದರ್ಶನ ಭಾಷೆ ದಿ | ಗ್ದರ್ಶನ ವಿದು ತಿಳಿ 4 ಶೂಲಾಟ್ಟ ಜನಪದವೆಂಬ | ಶಿವಶೂಲವು ಚತುಷ್ಪಥವೆಂಬ | ಕೇಶಶೂಲಿಗಳ್ಪ್ರಮದೇರು ಎಂಬ | ಯುಗಕಲಿಯೊಳಗಿಹರು ಎಂಬೆಂಬ | ಆಹಮೇಲಾದ ಗೂಢಾರ್ಥ | ಜಾಲಗಳೆಲ್ಲವುಓಲೈಸು ಗುಹ್ಯದ | ಭಾಷೆ ಎಂದೆನುತಲಿ 5 ಪರ ಪಾಂಡವಾದಿಗಳ್ಪೆಸರೆಂದು 6 ಸ್ವರವರ್ಣ ವಾಕ್ಯ ಭಾರತ | ಗ್ರಂಥಸರ್ವವು ಮುಖ್ಯ ಪ್ರವೃತ್ತ | ಹರಿಸರ್ವೋತ್ತಮನೆಂಬ ತತ್ವ | ಪೇಳೆಸಿರಿ ವೇದವ್ಯಾಸ ವಿರಚಿತ | ಆಹಪರಮ ಭಕ್ತರು ಪೃಥೆ | ವರ ಉದರೋದ್ಭವಧರ್ಮಾದ್ಯರ ಚರಿತೆ | ಅರುಹುವುದೆನುತಲಿ 7 ಗುಣಗಳು ಭಕ್ತ್ಯಾದಿ ದಶವು | ಇನ್ನುಕರ್ಣದಿಂ ಕೇಳ್ವುದೆಲ್ಲವು | ಹಾಗೆಗುಣಗಳು ಶೀಲ ವಿನಿಯಾವು | ಮತ್ತೆಗುಣಸುವುದು ಮೂರು ವೇದವು | ಆಹಮನು ಪದ ವಾಚ್ಯಗ | ಳೆನಿಸುವುದೀ ಪಂಚಗುಣಧರ್ಮ ವಾಚ್ಯರು | ಪಾಂಡವರೆನಿಪರು 8 ಅಭಿಮಾನಿ ಧರ್ಮಕ್ಕೆ ಎಂದು | ಮನುಅಭಿಧನು ಧರ್ಮಜನೆಂದು | ಇನ್ನುಅಭಿಮಾನಿ ಭಕ್ತ್ಯಾದಿಗೆಂದು | ಭೀಮನಭಿಧನಾಗಿಹನವ ಎಂದು | ಆಹಅಭಿಧನರ್ಜುನ ಶ್ರುತ | ಕಭಿಮಾನ ಎನುತಲಿಶುಭ ಶೀಲ ವಿನಯಕ್ಕೆ | ಅಭಿಮಾನಿಯಮಳರು 9 ಪರಿ ಪತಿ ಪರಿ ಜ್ಞಾನುಳ್ಳ | ಆ ಪೃಥೆ ಸುತರೆಲ್ಲನೀ ಪರಿಭಾವಿಸು | ಆಸ್ತೀಕರೆನುತಲಿ 10 ದ್ರುಪದಜೆ ಧರ್ಮಾದಿ ಐದು | ಜನಸುಪುಣ್ಯ ಶ್ಲೋಕರ ಕಥೆ ಇದು | ಇನ್ನುಉಪರಿಚರಾಭಿಧನೆಂದು | ವಿಷ್ಣುಸುಪ್ರತಿಪಾಧ್ಯನು ಎಂದು | ಆಹಇಪ್ಪರಿ ಮಹಿಮೆಯು | ಪೇತವು ಭಾರತಸುಪ್ರತಿಷ್ಠಿತವಿದು | ಅಬ್ಜಜಾಂಡದಲೆಂದು11 ಭಕ್ತಿವೈರಾಗ್ಯವು ಜ್ಞಾನಾ | ಮತ್ತೆಧೃತಿಯು ಸುಮೇಧಾ ಸುಪ್ರಜ್ಞಾ | ಇನ್ನುಸ್ಥಿತಿ ಬಲಯೋಗವು ಪ್ರಾಣಾ | ಭೀಮಹತ್ತು ಗುಣಾತ್ಮಕ ಮಾನಾ | ಆಹಉತ್ತಮ ಗುಣಿಪರ | ನಾತ್ಮನಾ ಅದರಿಂದತತ್ತನು ಎನಿಸೀಹ | ಪೃಥ್ವಿಪ ಭೀಮನು 12 ಮೂರ್ತಿ ಮೂರ್ತಿ | ಆಹಕರೆಸಿಹ ಶಕುನಿಯು | ಮೂರುತಿ ನಾಸ್ತಿಕ್ಯಸರ್ವದೋಷಾತ್ಮಕ | ರೆನಿಪರಂಧಜರೆಲ್ಲಾ 13 ಹರವನಾತರನು ಎಂದು | ದ್ರೌಣಿಕರೆಸುವನಹಂಕಾರನೆಂದು | ಇನ್ನುಕರಣಗಳ್ಪ್ರಾಣಾದಿ ಎಂದು | ಮತ್ತೆವರ ಸೈನ್ಯ ಪಾಪಗಳೆಂದು | ಆಹಅರಿವುದರ ಪುಣ್ಯ | ಪರವೆಂದು ಪಾಂಡವರಇರುತಿಹ ವಿಷ್ಣುವು | ಅವರ ನಿಯೋಜಕ 14 ಸರ್ವವು ಅಧ್ಯಾತ್ಮನಿಷ್ಟ | ಗ್ರಂಥದುರ್ವಿಜ್ಞೇಯ ಸರ್ವರ್ಗೆ ಎನುತ | ವ್ಯಾಸಸರ್ವಜ್ಞ ತಾನೆಲ್ಲ ಜ್ಞಾತ | ನಿಹಪೂರ್ವ ಮಾರುತ ಹರಿದೂತ | ಆಹಅರಿವ ಗುರು ಗೋವಿಂದ | ವಿಠಲಾನುಗ್ರಹದಿಂದಮರುತಾನುಗ್ರಹದಿಂದ | ಅರಿವರು ಇತರರು 15
--------------
ಗುರುಗೋವಿಂದವಿಠಲರು
ಚಿಂತೆ ಪರಿಹರ ಮಾಡೋ ಎನ್ನಯ್ಯ ಸಜ್ಜನರ ಪ್ರಿಯ ಪ ಚಿಂತೆ ಪರಿಹರ ಮಾಡೊ ಎನ್ನಯ ಚಿಂತೆ ಪರಿಹರ ಮಾಡಿ ಎನ್ನ ಅಂತರಂಗದಿ ನಿಮ್ಮ ನಿರ್ಮ ಲಂತ:ಕರುಣದ ಚರಣವಿರಿಸಿ ಸಂತಸದಿ ಪೊರೆ ಸಂತರೊಡೆಯ ಅ.ಪ ನಿಮ್ಮ ಪಾದವ ನಂಬಿಕೊಂಡಿರುವ ಈ ಬಡವನನ್ನು ಕಮ್ಮಿ ದೃಷ್ಟಿಯಿಂ ನೋಡದಿರು ದೇವ ನಿನ್ನ ಬಿಟ್ಟೆನ ಗ್ಹಿಮ್ಮತನ್ಯರದಿಲ್ಲ ಜಗಜೀವ ಭಜಕಜನ ಕಾವ ಮೂಡಿಮುಳುಗುತಿಹ್ಯದೈ ಸಮ್ಮತದಿ ಸಲಹೆನ್ನ ದಯಾನಿಧಿ ಬ್ರಹ್ಮಬ್ರಹ್ಮಾದಿಗಳ ವಂದ್ಯನೇ 1 ಆರುಮೂರರಿಕ್ಕಟ್ಟಿನೊಳು ಗೆಲಿಸೋ ಘನಪಿಂಡಾಕಾರ ಆರು ಎರಡರ ಸಂಗ ತಪ್ಪಿಸೋ ಮಹಬಂಧ ಬಡಿಪ ಘೋರ ಸಪ್ತಶರಧಿ ದಾಂಟಿಸೋ ತವದಾಸನೆನಿಸೊ ಗಾರುಮಾಡಿ ಕೊಲ್ಲುತಿರ್ಪ ದೂರಮಾಡೆನ್ನ ದುರಿತದುರ್ಗುಣ ಸೇರಿಸು ತ್ವರ ದಾಸಸಂಗದಿ ನಾರಸಿಂಹ ನಾರದವಿನುತ 2 ಪಾಮರತ್ವ ತಾಮಸವ ಬಿಡಿಸೋ ವಿಷಯಲಂಪಟ ಪ್ರೇಮ ಮೋಹ ಕಾಮ ಖಂಡ್ರಿಸೋ ಹರಲಿರುಳು ನಿಮ್ಮ ಭಜನಾನಂದ ಕರುಣಿಸೊ ಸುಚಿಂತದಿರಿಸೊ ಕಾಮಿತಜನಕಾಮಪೂರಿತ ನಾಮರೂಪರಹಿತಮಹಿಮ ಸ್ವಾಮಿ ಅಮಿತಲೀಲ ವರ ಶ್ರೀರಾಮ ಪ್ರಭು ತ್ರಿಜಗದ ಮೋಹ 3
--------------
ರಾಮದಾಸರು
ಚಿಂತೆ ಬಿಡಲಿಲ್ಲಾ ಎನ್ನಂತ ತಿಳಿಯಲಿಲ್ಲಾ ಪಾದ ಕಾಣದೇ ವ್ಯರ್ಥ ಸತ್ತೆನಲ್ಲಾ ಪ ನೀರಮೇಲಣಗುಳ್ಳೆ ಸಂಸಾರವೆಂಬುವ ಬಳ್ಳಿ ತೋರಿ ಯಡಗೋದಿಲ್ಲ ಆಧಾರ ಗತಿಗೆ ಅಲ್ಲಿ ನೀರಜದೆನೆ ನೀರಿನ ಸಂಗ ಪರಿ ಇರುತಿಹೆ 1 ಹೆಣ್ಣು ಹೊನ್ನು ಮಣ್ಣು ಜೀವ ಭವ ಪೆಣ್ಣು ಫಣಿಗಣ್ಣಗೆ ಬಿಡದಿನ್ನು ಬೆಣ್ಣೆ ಜಲವ ಉಣ್ಣದ ಪರಿ ಕುನ್ನಿ ವಿಷಯಗಣ್ಣಿಸದಿಹೇ 2 ಶುಭಗುಣಗಣ ಹೃದಯ ಎನಗಭಯವೀಯೋ ಸದಯಾ ಪ್ರಭು ನರಸಿಂಹ ವಿಠಲಯ್ಯಾ ನಿನ- ಗಭಿನಮಿಸುವೆನಯ್ಯಾ ಸುಭಗ ನಿನ್ನ ಪಿಡಿದೆನಯ್ಯಾ ಶುಭಕರ ಸಿರಿಮೊಗ ತೋರಯ್ಯಾ 3
--------------
ನರಸಿಂಹವಿಠಲರು
ಚಿನ್ಮನೆಂದುಪೇಕ್ಷಿಸದೇ ದತ್ತಾತ್ರೇಯಾ ಪ ಸರಸಿರುಹ ಸಖ ಶತಕೋಟಿ ತೇಜಾ ಪರಭಕ್ತ ಜನ ಸುರ ಭೂಜಾ ಕರುಣಾ ಸಾಗರ ಅತ್ರಿ ತನುಜಾ ಮೊರೆ ಹೊಕ್ಕವರ ರಾಜಾಧೀರಾಜಾ 1 ಪತಿತ ಜನರ ಮಾಡುತಿಹೆ ಉದ್ಧಾರಾ ಚತುರ್ದಶ ಭುವನಾಧಾರ ಅತಿಕೀರ್ತಿ ಸು ಶೋಭಿತ ದಿಗಂಬರಾ ನುತಗುಣ ಮಂಡಿತ ಮುನಿ ಮನೋಹರಾ 2 ಪರಮ ಪುರುಷ ಸದ್ಗುರು ಸಿರಿಲೋಲಾ ಸರಸಿಜ ನೇತ್ರ ದಯಾಳಾ ಧರಿಯೊಳನೇಕ ರೂಪವ ದೋರ್ಪೆ ಘನಲೀಲಾ ಗುರುವರ ಮಹಿಪತಿ ನಂದನ ಪಾಲಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗದಾದಿಮಾತೆಯೆ ಪ ಮೊರೆಯ ಕೇಳಮ್ಮ ಪರಮ ಪಾವನೆಯೆ ಕರುಣ ಹಸ್ತವ ಶಿರದಿ ಇಡು ದಯೆ ಭರಿತೆ ಜಗನ್ಮಯೆ ಅ.ಪ ಕಮಲಜಾತನ ಪ್ರೇಮ ಸುಂದರಿಯೆ ಅಮರ ವಿನುತೆಯೆ ಕಮಲನೇತ್ರೆ ಸಾವಿತ್ರಿ ಶಾರದೆಯೆ ವಿಮಲಚರಿತಳೆ ದಮೆ ದಯಾನ್ವಿತೆಯ ಶಮೆ ಶಾಂತಿನಿಲಯೆ ಕುಮುದಬಾಂಧವಕೋಟಿಪ್ರಭಾಮಯೆ 1 ವರ ಸುವಿದ್ಯ ಸಂಗೀತ ಶರ್ವಾಣೆ ಪರಮಕಲ್ಯಾಣೆ ಶರಣ ಜನಪ್ರಿಯೆ ವೀಣಾಧರಪಾಣಿ ಸ್ಮರಿಪ ಜನ ಮನದಿಷ್ಟ ಪರಿಪೂರ್ಣ ದುರಿತದೂರಿಣೆ ಪೊರೆದೆ ಮನುಗಳ ಜ್ಞಾನದಿಂ ವಾಣಿ 2 ಚರಣದಡಿಲೆನ್ನ ಶಿರವನಿಕ್ಕಿ ಬೇಡಿಕೊಂಬುವೆ ನಾ ಮರೆವ ಹರಿಸಿ ಭರದಿಂ ಕೊಡು ಜ್ಞಾನ ಸ್ಥಿರಮತಿಯ ಮುನ್ನ ನಿರುತದ್ಹೊಗಳುವೆ ನಿಮ್ಮ ಚರಿತವನು 3
--------------
ರಾಮದಾಸರು
ಜಯ ಜಯ ಕರುಣಾಕರ ಕೃಪಾಲ ಜಯ ಜಯ ಗುರುಮುನಿಜನ ಪ್ರತಿಪಾಲ ಧ್ರುವ ರಾಜತೇಜೋನಿಧಿ ರಾಜ ರಾಜೇಂದ್ರ ಮಣಿ ಸುರೇಂದ್ರ ಮಣಿ ಸಾಂದ್ರ ಅಜಸುರ ಸೇವಿತ ಸುಜ್ಞಾನ ಸುಮೋದ 1 ಅಗಣಿತ ಗುಣ ಅಗಾಧ ಅಪಾರ ನಿಗಮಗೋಚರ ನಿರುಪಮ ನಿರ್ಧಾರ ಸಗುಣ ನಿರ್ಗುಣನಹುದೊ ಸಾಕ್ಷಾತ್ಕಾರ ಭಕ್ತವತ್ಸಲ ಮುನಿಜನ ಮಂದಾರ 2 ಧೀರ ಉದಾರ ದಯಾನಿಧಿ ಪೂರ್ಣ ತಾರಕ ಸ್ವಾಮಿ ಸದ್ಗುರು ನಿಧಾನ ತರಳ ಮಹಿಪತಿ ಜನ್ಮೋದ್ಧರಣ ಚರಣ ಸ್ಮರಣಿ ನಿಮ್ಮ ಸಕಲಾಭರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಕರುಣಾಕರ ಗುರುದೇವ ವಾಸುದೇವ ಧ್ರುವ ಮುನಿಜನ ಪಾಲಕ ದೀನ ದಯಾಳ ಅನಾಥ ಬಂಧು ಶರಣಾಗತ ವತ್ಸಲ ಸನಕಾದಿಗಳೊಂದಿತ ಸಿರಿಸುಖಲೋಲ ಅನುದಿನ ಅಣುರೇಣುಕ ನೀನೆ ಸುಕಾಲ 1 ಪತಿತ ಪಾವನ ಪರಮ ಉದಾರ ಭಕ್ತವತ್ಸಲ ಮಾಮನೋಹರ ಅತಿಶಯಾನಂದ ಸುಜ್ಞಾನಸಾಗರ ಚತುರ್ದಶ ಭುವನಕೆ ನೀ ಸಹಕಾರ 2 ದೇಶಿಕರಿಗೆ ದೇವ ನೀನೇ ನಿಧಾನ ವಿಶ್ವಪಾಲಕ ಸ್ವಾಮಿ ನೀ ಸುಗುಣ ಭಾಸ್ಕರ ಕೋಟಿ ತೇಜ ನೀನೇ ಪೂರ್ಣ ಲೇಸಾಗ್ಹೊರಿಯೊ ದಾಸ ಮಹಿಪತಿ ಪ್ರಾಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ದಯಾಮಯ ಚಿನ್ಮಯ ಜಯ ಜಯ ನಿರಾಮಯ ಶ್ರೀಜಯ ಪ ಶ್ರೀರಮಣೀ ಮನಮೋಹನ ಪಾವನ ಸಾರಸಲೋಚನ ಪಾಪವಿಮೋಚನ ಸರ್ವ ಭುವನಪಾಲಾ ಭಕ್ತಬೃಂದಾನುಕೂಲಾ 1 ದುರಿತ ತಿಮಿರಕಾಲಾ ಶುದ್ಧಸತ್ವಾದಿ ಮೂಲಾ ಉರುತರ ಶುಭಲೀಲಾ ನಿತ್ಯಕಾರುಣ್ಯ ಶೀಲಾ 2 ಮಂಗಳದಾಯಕ ಮಾಂಗಿರಿನಾಯಕ ತುಂಗಕೃಪಾಂಬಕ ದುರುಳಕುಲಾಂತಕ ರಂಗ [ಶರಣ್ಯಕ ಭಕ್ತಜನ ಪಾಲಕ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು