ಒಟ್ಟು 375 ಕಡೆಗಳಲ್ಲಿ , 68 ದಾಸರು , 285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರಾಮನಾ ಅಡಿವಿಡಿವೆನು ನಾ ಶ್ರೀರಾಮನಾ ಪ ನುಡಿಯಂತೆ ಮಾತೆಯಾ ಮಡದಿಯಿಂದೊಡಗೂಡಿ ಬಿಡದೆ ನಡೆದನವನಡವಿ ವಾಸಕೆ 1 ಕನಕಮೃಗವ ತೋರಿ ಸೊಣಕ ರಾವಣ ತಾನು ಜನಕ ಸುತೆಯ ನಿಜ ವನಕೆ ಕೊಂಡು ಪೋದಾ 2 ಕಾಣಾದೆ ಸತೀಯಳೇ ಮಾಣಾದೆ ಪುಡುರೆದಾ (?) ದಾನವನೆಡೆ ಪೇಳ್ದ ಮಾನಿಜಟಾಯು 3 ಲಂಕಾ ಪತ್ತನಕೆ ತಾ ಹುಂಕಾರಿಯುರಿ ಇರ್ಕೆ ಬಿಂಕದಿ ತಾ ರಾಮನಂಘ್ರಿಗೆರಗಿದಾ 4 ಶರಧಿ ಹಾದಿಯ ಮಾಡಿ ವರರಾಮನೊಡಗೂಡಿ ಲಂಕೆಗೆ ನಡೆದರು 5 ಜಗದೀಶ ರಾಮಾನೆಂದು ಮುಗುದಾ ಹನುಮ ಕರಾ ಜಗಜ್ಜನನಿಗೆ ಇತ್ತ ಸೊಗಲು ಪುಂಗುರಾ 6 ಶರಥಸುತನಿಗೆ ವಸುಧೆಯೊಳ್ಸಮರಾರು 7 ಅನಲಾಮುಖದಿ ತಾನು ವನಿತೇಯ ಕೂಡಿದಾ ಘನಮಹಿಮನ ಲೀಲೆ ಮನುಜರರಿವರೇ 8 ಮನಮುಟ್ಟಿ ಭಜಿಸೀದ ಮನುಜಗೊಲಿದ ನಿಜ ಘನಮಹಿಮನು ಶ್ರೀ ನರಸಿಂಹವಿಠ್ಠಲಾ 9
--------------
ನರಸಿಂಹವಿಠಲರು
ಶ್ರೀವರದ ವಿಠಲರ ಹಾಡು ದೋಷರಾಶಿಯ ಕಳೆದು ಪಾಲಿಸುವದು |ಶ್ರೀಶ ಪ್ರಾಣೇಶ ದಾಸಾರ್ಯನೇ ಒಲಿದು ಪ ಭಾರ ನಿನ್ನದುಯೆಂದೆ 1 ದಾಸಕುಲರತ್ನ ಗುರು ಪ್ರಾಣೇಶದಾಸರಲಿ |ವಾಸುದೇವನ ಸ್ಥಿರದಾಸ್ಯ ಪಡೆದು ||ಶ್ರೀಶ ಪ್ರಾಣೇಶ ವಿಠಲನ ಕುಣಿಸಿದ ಧೀರ |ಆಶಪಾಶವ ಬಿಡಿಸು ಎಂದು ನಾ ಬಂದೆ 2 ನಂದ ವತ್ಸರದ ಭಾದ್ರಪದ ಮಾಸದಲ್ಲಿ |ಚಂದ್ರಪಕ್ಷವು ಅಷ್ಟಮಿ ತಿಥಿ ಭೌಮ್ಯದಿನದಿ ||ಮುಂದ ಕಾಲದಿ ನರಹರಿಯ ಧೇನಿಸಿ ನಲಿದು |ಇಂದಿರಾಧವ ವರದ ವಿಠಲನೂರಿಗೆ ನಡೆದೆ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀಶನ ಸತಿಯರ ಹಾಸ್ಯವ ಮಾಡುತ ಸೋಸಿಲೆ ಕೋಲಹೊಯ್ದೇವ ಕೋಲ ಪ. ಧಿಟ್ಟೆ ನಾನೆಂಬೋದು ಸೃಷ್ಟಿಕರ್ತನೆ ಬಲ್ಲಗಟ್ಯಾಗಿ ನಿನ್ನ ಗುಣಗಳಗಟ್ಯಾಗಿ ನಿನ್ನ ಗುಣಗಳ ವರ್ಣಿಸಲು ಸಿಟ್ಟು ಬಂದಿತು ಸಭೆಯೊಳು1 ಗಂಡನ ಬಳಗವ ಕಂಡರೆ ನಿನಗಾಗದುಲೆಂಡರ ಮನೆಗೆ ನಡೆದ್ಹೋಗಿಲೆಂಡರ ಮನೆಗೆ ನಡೆದ್ಹೋಗಿ ಸೇರಿದ್ದುಪಂಡಿತರು ಕಂಡು ನಗುತಾರೆ 2 ಘಟ್ಯದೆಗಾರಳು ಪೆಟ್ಟಿಗಂಜುವಳಲ್ಲಎಷ್ಟು ಧೈರ್ಯವೆ ಎಲೆನಾರಿಎಷ್ಟು ಧೈರ್ಯವೆ ಎಲೆನಾರಿ ನಿನ್ನ ಕೂಡಕೃಷ್ಣ ಕಡಿ ಬೀಳೋ ತೆರನಂತೆ 3 ಮುದದಿಂದಲೆ ದ್ವಾರಕಾಸದನದೊಳಗ್ಹೋಗಿಕದನವ ಹೂಡಿ ಕೆಡಿಸುವೆಕದನವ ಹೂಡಿ ಕೆಡಿಸುವೆ ನಿನ್ನಗುಣಕೆಮದನನಯ್ಯನೆಂತು ಮನಸೋತ4 ಹಲವು ರಾಯರ ಗೆದ್ದ ಬಲುಧೀರರೆಲ್ಲನಿನ್ನ ಬಲೆಯೊಳು ಬಿದ್ದು ಬಳಲೋರುಬಲೆಯೊಳು ಬಿದ್ದು ಬಳಲೋರು ಇದ ಕಂಡುಬಲರಾಮ ತಾನು ನಗುತಾನ5 ಸುರರು ಜರಿದು ನಾರಿಹರಿಯು ಗುಣಪೂರ್ಣ ನೆನುತಲೆಹರಿಯು ಗುಣಪೂರ್ಣ ನೆನುತಲೆ ಮಲ್ಲಿಗೆಸರವ ಹಾಕಿದಿಯೆ ಕೊರಳಿಗೆ 6 ಕೇಳೆ ರುಕ್ಮಿಣಿ ನಿನ್ನ ಭಾಳ ಚಾಪಲ್ಯ ನೋಡಿಹೇಳ ಕೇಳದಲೆ ಹಿರಿಯರಹೇಳ ಕೇಳದಲೆ ಹಿರಿಯರ ಕೃಷ್ಣಯ್ಯಭೋಳೆ ತನದಿಂದ ಮದುವ್ಯಾದ 7 ಗಂಡನ ಎದುರಿಗೆ ಗಂಡುಗಚ್ಚಿಯ ಕಟ್ಟಿಗಂಡಸಿನಂತೆ ಧನುವೆತ್ತಿಗಂಡಸಿನಂತೆ ಧನುವೆತ್ತಿ ಕಾದಿದಬಂಡುಗಾರತಿಯೆನಿನ ತಂಗಿ8 ಅಕ್ಕ ತಂಗಿಯರ ಶೌರ್ಯ ಶಕ್ಯವೆ ವರ್ಣಿಸಲುನಕ್ಕು ನಾರಿ ಸರಿಯವರುನಕ್ಕು ನಾರಿ ಸರಿಯವರು ರಾಮೇಶಗೆತಕ್ಕವರೇನೆ ಮಡದಿಯರು ಕೋಲ9
--------------
ಗಲಗಲಿಅವ್ವನವರು
ಸಂಕ್ಷಿಪ್ತ ವಿರಾಟಪರ್ವ ಕೇಳು ಜನಮೇಜಯರಾಜ ಭೂಮಿ- ಪಾಲ ಪಾಂಡವರ ಸತ್ಕಥೆಯಪ. ಭೂರಿ ವ- ನಾಳಿಯನು ಸಂಚರಿಸಿ ಸಜ್ಜನ ಕೇಳಿಯಲಿ ವನವಾಸದವಧಿಯ ಕಾಲವನು ಕಳೆಕಳೆದು ಬಂದರುಅ.ಪ. ದರ್ವೀಧರಹಸ್ತನಾಗಿ ಮಹಾ ಪರ್ವತದಂತುರೆ ಮಸಗಿ ನಿರ್ವಹಿಸಿ ಸೂದತ್ವವನು ಸಲೆ ಗರ್ವಿತಾಧಮ ಕೀಚಕನ ಕುಲ ಸರ್ವವನು ಸಂಹರಿಪ ಭೀಮ ಪೆ- ಸರ್ವಡೆದ ಗುರುವರ್ಯ ಬಂದನು 1 ಕಡುಗಲಿ ಕಲಿಮಲಧ್ವಂಸ ಎದ್ದು ನಡೆದು ಬಂದನು ಪರಮಹಂಸ ನಿಡುಕಿ ಮನದಿ ವಿರಾಟರಾಯನ ಪೊಡವಿಗಿಡೆ ಪದ ಕೀಚಕಾಖ್ಯನ ಎಡದ ಭುಜ ಕಂಪಿಸಿತು ಮೂಜಗ ದೊಡೆಯನುಡುಪತಿಕುಲಶಿಖಾಮಣಿ2 ಗಂಗಾದಿ ನದಿಗಳ ತೀರ ಪಟ್ಟ ಣಂಗಳ ಗೈದ ಸಂಚಾರ ತುಂಗಬಲ ಮಲ್ಲರುಗಳನು ಸಲೆ ಸಂಘಟಿಸಿ ಜೀಮೂತವೀರಪ್ಪ ಸಂಗದಲಿ ವೈರಾಟಪುರ ರಾ ಜಾಂಗಣಕೆ ಭದ್ರಾಂಗ ಬಂದನು3 ಇಂತು ಮಲ್ಲರನೆಲ್ಲ ಸದೆದು ಬಲ ವಂತರಿರಲು ನೃಪಗೊಲಿದು ಸಂತಸವ ಬಡಿಸುತ್ತಲಿರಲ್ವಾ ಕುಂತಿತನಯರು ಹರಿಯ ನಾಮವ ಚಿಂತಿಸುತ ದಶಮಾಸ ಕಳೆದಾ ನಂತರದ ವೃತ್ತಾಂತವೆಲ್ಲವ4 ಕಥೆಯಂತೆ ಹಿಂದೆ ರಾವಣನ ಕೆಟ್ಟ ಗತಿಗನುಚರ ಕೀಚಕನ ಸ್ಥಿತಿಯು ದ್ರುಪದಜೆಗಾದ ಮಾನ ಚ್ಯುತಿಗೆ ಕಾರಣನಾದ ಜಡ ದು- ರ್ಮತಿ ಖಳಾಧಮನೊಂದು ದಿನ ನೃಪ ಸತಿಸಭೆಗೆ ಅತಿ ಹಿತದಿ ಬಂದನು5 ಪಾಪಿ ಕೀಚಕನಿಗಿಂತುಸುರಿ ದ್ರುಪದ ಭೂಪಾಲಕನ ಕಿಶೋರಿ ಶ್ರೀಪತಿಯ ನಾಮವನು ಸ್ಮರಿಸುತ- ಲಾ ಪತಿವ್ರತೆ ತೊಲಗಲಂಗಜ ತಾಪತಪ್ತಾಂತಃಕರಣ ನಾ ಪರಿಯ ಮತಿ ವ್ಯಾಪಿಸಿದನು6 ಲಾಲಿಸಿ ಮಾಲಿನಿವಚನ ತೋಷ ತಾಳಿದ ದುರ್ಗುಣಸದನ ಕಾಲಪಾಶದಿ ಬಿಗಿವಡೆದು ಹೇ- ರಾಳ ಮುದಕೀಲಾಲ ಸಲೆ ಕ- ಲ್ಲೋಲಜಾಲದಿ ಮುಳುಗಿ ನರ್ತನ ಶಾಲೆಗಾಗಿ ಕರಾಳ ಬಂದನು7 ಮಥಿಸಿ ಕೀಚಕನ ಮಂಟಪದಿ ದ್ರುಪದ ಸುತೆಗೆ ತೋರಿಸಲತಿ ಮುದದಿ ಸತಿಶಿರೋಮಣಿ ಕಂಡು ಮನದೊಳ- ಗತುಳ ಹರುಷವನಾಂತು ಸರ್ವೋ ನ್ನತಭುಜನ ಚುಂಬಿಸಿದಳು ಪತಿ ವ್ರತೆಯರ ಶಿರೋರತುನೆ ಪಾವನೆ8 ಇತ್ತ ವಿರಾಟನಗರದ ಸರ್ವ ವೃತ್ತಾಂತವೆಲ್ಲವ ತಿಳಿದ ಧೂರ್ತ ದುರ್ಯೋಧನ ದುರಾಗ್ರಹ ಚಿತ್ತಗ್ರಹಿಸಿದ ಕಾರ್ಯಕಾರಣ ವೃತ್ತಿಯಲ್ಲಿ ಪಾಂಡವರು ನಿಜವೆಂ- ದಾಪ್ತಜನರೊಳು ವಿಸ್ತರಿಸಿದನು9 ಕರ್ಣ ದ್ರೋಣ ಕೃಪಾ ದ್ಯರು ಕೂಡಿ ಕುಜನಪ್ರವೀಣ ಪೊರಟ ಪರಮೋತ್ಸಾಹ ಸಾಹಸ ಭರತಿ ಕೌರವರಾಯ ಮತ್ಸ್ಯನ ಪುರವರ ಸಮೀಪದಿ ಸುಶರ್ಮನ ಕರೆದೊರೆದ ಭೂವರ ನಿರ್ಧರ10 ನುಡಿಯ ಕೇಳುತಲಿ ಸುಶರ್ಮ ನಿಜ ಪಡೆಯ ನೆರಹಿ ವೈರಿವರ್ಮ ದೃಢಕರಿಸಿ ದಿನಮಣಿಯು ಪಶ್ಚಿಮ- ಕಡಲ ಸಾರುವ ಸಮಯ ಗೋವ್ಗಳ ಪಿಡಿದು ಗೋಪರ ಕೆಡಹಿ ಬೊಬ್ಬಿ- ಟ್ಟೊಡನೊಡನೆ ಪಡಿಬಲವನರಸಿದ11 ಹಾರಿಸಿದನು ರಥ ಪಾರ್ಥ ನರ ನಾರಿವೇಷದ ಪುರುಷಾರ್ಥ ತೋರಿಸುವೆನೆಂಬುತ್ಸಾಹದೊಳು ಬ್ಬೇರಿ ಮನದೊಳು ಕೃಷ್ಣನಂಘ್ರಿಸ- ರೋರುಹಕೆ ಮಣಿದುತ್ತರನ ಸಹ ಸೇರಿ ನಗರದ್ವಾರ ದಾಟಿದ12 ಭೀತಿಯ ಬಿಡು ಬಾರೆಂದು ಪುರು ಹೂತಸುತನು ಎಳತಂದು ಘಾತಿಸುವೆ ರಿಪುಬಲವನೆಂದು ವ- ರೂಥದಲಿ ಕುಳ್ಳಿರಿಸಿ ನೃಪತನು ಜಾತಸಹ ಪಿತೃವನದ ಮಧ್ಯ ಶ- ಮೀತರುವಿನೆಡೆಗೋತು ಬಂದರು13 ಇಂತು ತಿಳಿಸುತಲರ್ಜುನನು ಬಲ ವಂತನು ಧನುಶರಗಳನು ತಾಂ ತವಕದಿಂ ಧರಿಸಿ ವಿಜಯ ಮ- ಹಾಂತ ವೀರಾವೇಶಭೂಷಣ ವಾಂತು ಶಂಖನಿನಾದದಿಂ ರಿಪು ತಿಂಥಿಣಿಯ ಭಯಭ್ರಾಂತಗೊಳಿಸಿದ 14 ಹೂಡಿ ಬಾಣವನುರ್ಜುನನು ಚೆಂ- ಡಾಡಿದ ರಿಪುಬಲವನ್ನು ಮೂಢ ದುರ್ಯೋಧನನ ಕಣೆಗಳ ಜೋಡಣೆಗಳಿಂ ಬಿಗಿದು ತನ್ನೋಶ ಮಾಡಿಕೊಂಡನು ಗೋಪಗೋವ್ಗಳ ನಾಡಲೇನದ ಪ್ರೌಢತನವನು15
--------------
ತುಪಾಕಿ ವೆಂಕಟರಮಣಾಚಾರ್ಯ
ಸಖಿ ಬಾರೆ ಬಾರೆ ಬೆಡಗತೋರೆ ನಡೆದು ಬಾರೆಲೆ ಸುಖದ ಸುಗ್ಗಿಯಿದೆಂದು ಸಾರೆ ಭ್ರಮರಕುಂತಲೆ ಪ. ಜಲಜಮುಖಿಯೆ ನಲಿದುಬಾರೆ ಕೋಲವಾಡುವ ಕಲಕೀರಕಂಠದಿಂದ ನಾವು ನಲಿದು ಪಾಡುವ 1 ಇಳೆಯ ಸುಖದ ಗೆಳೆಯ ಬಂದ ಬಳಿರೆ ಬಾಪುರೆ ಬೆಳಗುತಿರ್ಪ ದೀಪಾವಳಿಯೆ ಬಲಿಯ ಕೀರ್ತಿಯೆ 2 ವಿಜಯಯಾತ್ರೆಗೆಂದು ಹರಕೆಯೆತ್ತಿ ಭರದಲಿ ಅಜಸುರಾರ್ಚಿತಾಂಘ್ರಿಯುಗನ ಭಜಿಸಿಮುದದಲಿ 3 ನೀರನೆಮಗೆ ಮಾರತಾತನೆಂದು ಸಾರುವಾ ಶಾರದಾಗಮ ಸಮಯವಿದನು ಸಾರಿಯಾಡುವಾ 4 ಶೇಷಶೈಲಶಿಖರ ಧಾಮನೆಮ್ಮ ಮೆಚ್ಚುವೋಲ್ ಮೀಸಲೆತ್ತಿಯೊಸಗೆ ಪೇಳಿ ಪೊಸತಿದೆನ್ನುವೋಲ್ 5
--------------
ನಂಜನಗೂಡು ತಿರುಮಲಾಂಬಾ
ಸಂಜೀವ ದೀಪ್ತಿಪೂರ್ಣ ಪ. ದೇವ ದೇವರದೇವ ನೀನಹುದೊದೇವಕಿಯೊಳವತರಿಸಿ ಗೋಕುಲವನ್ನುಪಾವನ ಮಾಡಿ ಮಡುಹಿಮಾವನ ಮಧುರಾವನಿಯ ಉಗ್ರಸೇನನಿಗಿತ್ತು ದೈ -ತ್ಯಾವಳಿಯ ಸವರಿಜೀವಸಖನಾಗಿ ಪಾಂಡವರೊಳ್ಪಾರ್ಥಸೇವೆ ಕೈಕೊಂಡು ತರಿದು ಕೌರವರ ದ್ವಾ-ರಾವತಿಯಿಂದ ಹಯಮೇಧಕ್ಕೆ ಬಂದದೇವ ನೀನಹುದೊ 1 ಧರ್ಮಾರ್ಜುನರೆಜ್ಞತುರಗರಕ್ಷಕ ಕೃತ-ವರ್ಮಾದ್ಯರುಗೂಡಿ ನಡೆದು ನಿಲ್ಲುತ್ತಮರ್ಮವರಿದು ಮುರಿದು ಹಂಸಧ್ವಜನಧರ್ಮವನು ತಡೆದುಕರ್ಮವಶದಿಂದ ಬಭ್ರುವಾಹನ ಕೈಯ್ಯಾದುರ್ಮರಣವಾದ ವಿಜಯ ಕರ್ಣಾತ್ಮಜಗೆಪೆರ್ಮೆಯಿಂದಸುವಿತ್ತು ಪೊರೆದ ನಿತ್ಯನಿರ್ಮಲಾತ್ಮನಹುದೊ2 ಪಿಂತೆಬಾಹರ್ಜುನರ ಕಂಡು ತಾಮ್ರಧ್ವ -ಜಂ ತಡೆಯೆ ಬಡದ್ವಿಜನಾಗಿ ಶಿಖಿಕೇತು-ವಂ ತಾನು ಬೇಡಿ ವೀರವರ್ಮನ ಗೆಲಿದುಕುಂತಳೇಂದ್ರಗೊಲಿದುದÀಂತಿಪುರಕ್ಕವರನು ತಂದು ಹಯಮೇಧವಂತು ಮಾಡಿಸಿ ಮೈದುನರ ಕಾಯ್ದಹೊಂತಕಾರಿ ಹಯವದನನೆ ಶ್ರೀ ಲಕ್ಷೀ -ಕಾಂತ ನೀನಹುದೊ 3
--------------
ವಾದಿರಾಜ
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸರ್ಪಭೂಷಣನ ಸುತನ ಭಕ್ತಿಯಿಂದ ಬಲಗೊಂಡು ಮತ್ತೆ ಅಜನಸತಿಯ ಪಾದಕ್ಕೆ ಎರಗುವೆ 1 ಎಲ್ಲ ದೇವತೆಗಳಿಗೆ ಎರಗಿ ಭಕ್ತಿಯಿಂದ ಲಕ್ಷ್ಮೀ- ವಲ್ಲಭನ ಕತೆಗಳ ವರ್ಣಿಸುವೆನು 2 ಸ್ವಾಮಿ ಶ್ರೀಕೃಷ್ಣನ ಪ್ರೇಮವನ್ನು ಪಡೆದ ಸು- ದಾಮನೆಂಬೊ ಭಕ್ತ ಬಡವ ಬ್ರಾಹ್ಮಣಿದ್ದನು 3 ಸ್ನಾನ ಹೋಮ ಜಪವಮಾಡಿ ನೇಮ ನಿಷ್ಠೆಲಿಂದ ಉಪ್ಪು ಕಾಲ ಕಳೆಯುತಿದ್ದನು 4 ಅಶನವಿಲ್ಲ ವಸನವಿಲ್ಲ ಹಸಿದ ಮಕ್ಕಳನ್ನು ನೋಡಿ ವ್ಯಸನದಿಂದ ಪತಿಯ ಪಾದಕ್ಕೆರಗಿ ನಿಂತಳು 5 ತಂದೆ ತಾಯಿಗಳ ಕಡೆಯ ಬಂಧು ಬಳಗ ಯಾರು ಹತ್ತಿ ದ್ಹೊಂದಿದವರುಯಿಲ್ಲೆ ನಿಮಗೆ ಎಂದು ನುಡಿದಳು 6 ಪತ್ನಿ ಮಾತು ಕೇಳಿ ಪರಮ ಭಕ್ತಿಯಿಂದ ನುಡಿದ ಧ- ರ್ಮಾರ್ಥ ಕಾಮ್ಯಗಳನೆ ಕೊಡುವೋ ಮೋಕ್ಷದಾಯಕ 7 ಆದಿಮೂರುತಿ ಕೃಷ್ಣ ಓದಿಕೊಂಡ ಗೆಳೆಯನೊಬ್ಬ ಮಾಧವನ ಬಿಟ್ಟು ಮತ್ತೊಬ್ಬರಿಲ್ಲವು8 ಆತನ ಕಂಡು ಬಂದರ್ಯಾತರ ದಾರಿದ್ರ್ಯ ನಮಗೆ ಪ್ರೀತಿಯಿಂದ ಹೋಗಿಬನ್ನಿರೆಂದು ನುಡಿದಳು 9 ವರಮಾಲಕ್ಷ್ಮಿ ಅರಸು ಕೃಷ್ಣನರಮನೆಗೆ ಪೋಗಲಿಕ್ಕೆ ನ- ದರ ಏನುವೊಯ್ಲೆ ನರಹರಿಗೆ ಎಂದನು 10 ಲಕ್ಕುಮೀಶನ್ನ ದರ್ಶನಕ್ಕೆ ಒಯ್ಯಲಿಕ್ಕೆ ಮೂರು ಮುಕ್ಕು ಅವಲಕ್ಕಿ ತಿರಿದು ತಂದುಕೊಟ್ಟಳು 11 ಅದನು ಗಂಟು ಕಟ್ಟಿ ತನ್ನ ಹೆಗಲಮ್ಯಾಲೆ ಇಟ್ಟುಕೊಂಡು ನ- ಗಧರನ್ನ ನಗರಕ್ಕಾಗ ಬರುತಲಿದ್ದನು 12 ಲಕ್ಷಣಾದ ಶಕುನವ ಆ ಕ್ಷಣದಿ ಕಂಡು ವಿಪ್ರ ಲಕ್ಷ್ಮೀಪತಿಯ ದಯವು ನಮಗೆ ಆಗೋದೆಂದನು 13 ಹಾದಿಲ್ಹರಿವೊ ಜಲವ ಕಂಡು ಸ್ನಾನವನ್ನು ಮಾಡಿಕೊಂಡು ವೇದ ಪುಸ್ತಕವ ಹಿಡಿದು ಓದಿಕೊಳುತಲಿ 14 ಮಲ್ಲೆ ಮಲ್ಲಿಗೆ ದವನ ಅಲ್ಲೆಯಿದ್ದ ಫಲಗಳು ಲಕ್ಷ್ಮೀ- ವಲ್ಲಭಗೆ ಅರ್ಪಿತವೆಂದು ನಡೆದನು 15 ಗೋಪುರವ ಕಂಡು ದ್ವಾರಕಾಪುರಕ್ಕೆ ಕೈಯಮುಗಿದು ಶ್ರೀಪತಿಯ ಬಾಗಿಲಲಿ ಬಂದು ನಿಂತನು 16 ದ್ವಾರದಲ್ಲಿ ನಿಂತವರು ದಾರುಯೆಂದ್ವಿಚಾರಿಸಲು ನಾರಾಯಣನ ಸಖನು ನಾನೆಂದ್ಹೇಳುತಿದ್ದನು 17 ನುಡಿದ ನುಡಿಯ ಕೇಳುತ ನಡೆದು ಬಂದು ಚಾರಕರು ಒಡೆಯ ನಿಮ್ಮ ಗೆಳೆಯನಂತೆ ಬಡವ ಬ್ರಾಹ್ಮಣ 18 ಹುಟ್ಟ ಮೊದಲೆ ಅನ್ನ ತನ್ನ ಹೊಟ್ಟೆಗುಂಡ ಮನುಜನಲ್ಲ ಗಟ್ಟಿಗಾಳಿ ಬರಲೀಗ್ಹಾರುವಂತೆ ತೋರುವ 19 ಅಸ್ಥಿ ಚರ್ಮ ಆತನಂಗಕ್ಹತ್ತಿಕೊಂಡ ಹೊಟ್ಟೆಬೆನ್ನು ಮತ್ತೆ ನಡೆಯಲಾರ ಮಾತನಾಡಲಾರನು 20 ಒಡೆದ ಗುಂಡುತಂಬಿಗೆ ಬಡಿದನದರ ಸುತ್ತ ಮ್ಯಾಣ ಹಿಡಿದ ಗಂಟ ಬಿಡದಲ್ಹೊತ್ತು ನಡೆದು ಬಂದನು 21 ಮರದ ಗುಂಡು ಸರದಗುದ್ದಿ ಕೊರಳೊಳಗೆ ಹಾಕಿಕೊಂಡು ಎರಳೆ ಚರ್ಮ ಸುತ್ತಿ ಎಡದ ಬಗಲಲ್ಲಿಟ್ಟನು22 ದೊಡ್ಡನಾಮ ಹಚ್ಚಿಕೊಂಡು ಮುದ್ರೆಮಯ್ಯಲೊತ್ತಿಕೊಂಡು ಶುದ್ಧ ಚಂದ್ರಮನ ಕಾಂತಿ ತೋರುತಿದ್ದನು 23 ಛಿದ್ರವಾದ ಬಟ್ಟೆನುಟ್ಟು ಚಿಗುರು ತುಳಸಿ ಕಿವಿಯಲ್ಲಿಟ್ಟು ಪದ್ಮನಾಭ ಪಾಲಿಸೆನುತ ಕೂಗುತಿದ್ದನು24 ನಾಮಾಂಕಿತÀವ ಕೇಳಲು ಸುದಾಮನೆಂದು ಹೇಳುವ ನಾನಾ ಪರಿಯಲ್ನಿಮ್ಮ ಸ್ತುತಿಯ ಮಾಡುತಿದ್ದನು 25 ಅಪ್ಪುಣಾದರಾತನ ಇತ್ತ ಕರೆದು ತಾವೆನೆನಲು ಭಕ್ತರೊಡೆಯ ಭಾಳ ಸಂಭ್ರಮದಿ ಎದ್ದನು 26 ಕರವ ಪಿಡಿದು ಕುಳ್ಳಿರಿಸಿ ದಿವ್ಯಾಸನದ ಮ್ಯಾಲೆ ತರಿಸಿ ಚಾಮರದ ಗಾಳಿ ಹಾಕುತಿದ್ದನು 27 ಪನ್ನೀರು ತಂದು ಪಾದತೊಳೆದು ದ್ರಾಕ್ಷಿ ಕಿತ್ತಳೆ- ಹಣ್ಣು ಎಳನೀರು ತಂದು ಮೆಲಲು ಕೊಟ್ಟನು 28 ಮದುವೆ ಆಯಿತೇನೊ ಸಖನೆ ಎಂದು ಕೇಳಿದ 29 ಸೋಳಸಾವಿರ ಸತಿಯರಾಳುವೊ ಶ್ರೀರಮಣ ಕೇಳೊ ರಾಣಿವೊಬ್ಬಳಿರುವೊಳಯ್ಯ ನಮಗೆಯೆಂದನು 30 ಇಷ್ಟುದಿವಸ ಇಲ್ಲಿಗೆ ಬಾರದಿದ್ದ ಕಾರಣೇನು ಚಿಕ್ಕಂದಿನ ಸ್ನೇಹವೆಲ್ಲ ಮರೆತ್ಯ ಎಂದನು 31 ಬರದಲಿದ್ದೆ ನಾನು ಪಾಮರನೂ ಆದಕಾರಣ ಕಳುಹಿಕೊಟ್ಟಳೆನ್ನ ಭಾರ್ಯಳೀಗ ಎಂದನು 32 ಅಣ್ಣ ನಮ್ಮತ್ತಿಗೆ ನಮಗೇನು ಕಳಿಸಿದಳು ನಿನ್ನ ಹೆಗಲ ಗಂಟು ಬಿಚ್ಚಿ ತೋರಿಸೆಂದನು 33 ವಿಪ್ರ ನಾಚಿ ನೆಲನ ನೋಡುತಿರಲು ಕೃಷ್ಣ ಸಲಿಗೆಲಿಂದ ಗಂಟನೆಳೆದು ಬಿಚ್ಚಿಸಿದನು 34 ಸುಜನ ಜನರು ಮಾಡುವಂಥ ಭಜನೆಯೊಂದೆ ಸಾಕುಯೆನೆಗೆ ಹೇಮ ರತ್ನಾಭರಣವ್ಯಾತಕೆಂದನು 35 ಕುಂದಣದ ಪಾತ್ರೆಯೊಳಗೆ ತಂದು ಸುರುವೆ ಪ್ರತಕವನ್ನು ಮಂದರೋದ್ಧರನು ಮುಷ್ಟಿ ತೆಗೆದುಕೊಂಡನು36 ಮುಷ್ಟ್ಟಿಗೊಂದು ಬಾರಿ ಶ್ರೀಕೃಷ್ಣ ತೆಗೆದು ಮೆಲ್ಲುತಿರಲು ಕಷ್ಟ ದಾರಿದ್ರ್ಯವೆಲ್ಲ ಹರಿದು ಹೋಯಿತು 37 ಎರಡನೇ ಮುಷ್ಟಿ ಪಾಲ್ಗಡಲಶಯನ ಮುಕ್ಕುತಿರಲು ಸಡ- ಸಡಗರ ವೈಕುಂಠಪದವಿ ಮುಕ್ತಿ ಆಯಿತು 38 ಮೂರನೇ ಮುಷ್ಟಿಗೆ ನಾರಿ ರುಕ್ಮಿಣಿ ಬಂದು ಕೃಷ್ಣಯೇನು ಕೊಡುವಿ ಕರವ ಪಿಡಿದಳು 39 ಭಾವನವರು ತಂದುಕೊಟ್ಟ ದೂರದ ಪದಾರ್ಥವನ್ನು ನೀವೆ ಸವಿಯ ನೋಡುವೋದು ದಾವ ನೀತಿಯು40 ಅಕ್ಕ ಕಳಿಸಿದ್ದು ಅವಲಕ್ಕಿ ನಮಗಿಲ್ಲದ್ಹಾಗೆ ಮುಕ್ಕಿ ಬಿಡುವರೇನೊ ಎಂದು ನÀಕ್ಕಳಾಗಲೆ41 ಇಷ್ಟು ಮಂದಿಯೊಳಗೆ ಎನ್ನ ಮುಷ್ಟಿ ಹಿಡಿದು ನಿಲ್ಲುವಂಥ ದಿಟ್ಟತನಗಳೆಲ್ಲ್ಲಿ ಕಲಿತೆ ಹೇಳೆಯೆಂದನು 42 ಚಿಕ್ಕ ಸತ್ಯಭಾಮೆ ನೋಡಿ ನಕ್ಕಾಳೆಂಬೊ ನಾಚಿಕಿಲ್ಲ ಮುಕ್ಕು ಅವಲಕ್ಕಿಗೆನ್ನ ಕÀರವ ಪಿಡಿವೋರೆ 43 ಸರ್ವರೊಳಗೆ ಅಧಿಕಳೆಂಬೊ ಗರುವಿನ ರುಕ್ಮಿಣಿಗೆ ಬುದ್ಧಿ ಕರೆದು ಹೇಳಬಾರೆ ಸತ್ಯಭಾಮೆಯೆಂದನು 44 ಎನ್ನ ಭಕ್ತರಲ್ಲಿ ಪ್ರೇಮ ನಿನಗೆ ಉಂಟಾದರೆ ಇನ್ನೂ ಒಂದು ಮುಕ್ಕು ನಿನಗೆ ಕೊಡುವೆನೆಂದನು45 ಅಕ್ಕಗಾಡೋ ಮಾತಕೇಳಿ ಚಿಕ್ಕ ಸತ್ಯಭಾಮೆ ತಾನು ಅಕ್ಕರದಿ ಬಂದು ಕೃಷ್ಣನೆದುರು ನಿಂತಳು 46 ರಂಗ ನಿನ್ನ ಪಟ್ಟದರ್ಧಾಂಗಿಯಾದ ರುಕ್ಮಿಣಿಗೆ ಮುಂಗೈ ಹಿಡಿವೋದಕ್ಕೆ ದಾರಭಯವೇನೆಂದಳು47 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸಾರತರದ ಮುರಳಿದನಿಯ ಕೇಳಿದೆ ಏನೆ ಪ ನಾರಿಮಣಿಯರುಲಿವದನಿಯ ಕೇಳಿದೆ ಏನೆ ಅ.ಪ ನಲಿದು ಕುಣಿವ ಲಲನೆಯರನು ನೋಡಿದೆ ಏನೆ ಝಣ ಝಣ ಝಣ ಕಿಣಿ ಕಿಣಿ [ಭರ್ತಾ] ರವವು ಕೇಳ್ವುದೇನೆ1 ಬಡನಡುವಿನ ಮಡದಿಯವನ ಅಡಿಯ ಪಿಡಿವೆ ಏನೆ ಕಡುಬೆಡಗಿನ ಹುಡುಗಿಯವನ ಅಡಿಯ ಪಿಡಿವೆ ಏನೆ ಸಡಗರದಲಿ ನಡೆದು ಮನವ ರಂಗಗೀವೆ ಏನೆ 2 ಮನದ ಕಲುಷವಳಿದು ಮುದವ ತಳೆದಿಹೆಯೇನೆ ಇನಿದುವಚನ ಕನಸು ನೆನಸ ತಳೆದಿಹೆಯೇನೆ ತನುಮನಧನ ಮಾಂಗಿರೀಶಗೊಪ್ಪಿಪೆಯೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ
ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸುಜನ ವಂದ್ಯನ ಪಕಾಮ ತಾಮಸಗಳಲಿ ಬಳಲುತ್ತ ಸೀಮೆ ಸೀಮೆಗಳನುಸುತ್ತುವೀಮನೋರಥಗಳಲೇನು ಗುರುವಿನನೇಮ ಕೀರ್ತನೆಯನಿರಾಮಯಾಮಲಾರ್ಥ ನಿಷ್ಕಾಮ ರಾಮಣೀಯಕವನು ಪ್ರೇಮದಿಂದ ಪೊಗಳುತ 1ಯೋಗ ರಾಗದಿಂದ ಮನವ ನಾಗಲಾಗಲಧಿಕ ಭಕ್ತಿಯೋಗ ವೇಗ ಜನಿತ ಸದನುರಾಗದಿಂದ ನಿಲ್ಲಿಸಿರಾಗ ರೋಗವೆಂಬ ತಮವ ನೀಗಿ ಸದ್ವಿರಾಗದಿಂದ ಆಗಮಾಗಮಾಂತ ವಚನದಾಗು ಪೋಗನರಿತು ನೀ 2ಕಾಲ ಕಾಲದಲ್ಲಿ ಬಾಲಲೀಲೆುಂದ ನಡೆದು ನುಡಿದುಶೀಲ ಲೋಲನಾಗಿ ಲೋಕ ಜಾಲ ಮೂಲವಾಮೇಲೆ ಮೇಲೆ ತಿಳಿದು ಬೆಳೆದು ನಲಿದು ಭಕ್ತಪಾಲ ಗೋಪಾಲಯತಿ ಕೃಪಾಲ ಸದ್ವಿಶಾಲಸುಖವ ತಳೆದು ನೀ 3
--------------
ಗೋಪಾಲಾರ್ಯರು
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಸುವ್ವಿ ಶ್ರೀ ಗುರುನಾಥ ಸುವ್ವಿ ಸದೋದಿತ ಸುವ್ವಿ ಸಾಯೋಜ್ಯದೊಡೆಯನೆ ಸಾಯೋಜ್ಯದೊಡಿಯ ಸದ್ಗುರು ನಮ್ಮಯ್ಯ ಸುವ್ವೆಂದು ಪಾಡಿ ಸಜ್ಜನರೆಲ್ಲ ಧ್ರುವ ಮನವ ಕಣಕವ ಮಾಡಿ ಗಣಪತಿಯ ಬಲಗೊಂಡು ಅನುಮಾನೆಂಬೆಳ್ಳ ಚಿಗಳಿಯ ಅನುಮಾನೆಳ್ಳ ಚಿಗಳಿ ನೆನವು ನೆನಗಡಲಿಯ ಗಣನಾಥಗಿಟ್ಟು ಬಲಗೊಂಡು 1 ಮನವೆಂಬ ಕಣಕವ ಘನವಾಗಿ ಕುಟ್ಟುತ ಜ್ಞಾನ ವೈರಾಗ್ಯದೊಡಗೂಡಿ ಒಡಗೂಡಿ ಕುಟ್ಟುತ ಪ್ರಾಣದ ಸಖಿಯರು ಅನಂದ ಘನವ ಬಲಗೊಂಡು 2 ನಿರ್ಗುಣಾನಂದನು ಸುಗುಣವ ತಾಳಿದ ಅಗಣಿತಗುಣ ಪರಿಪೂರ್ಣ ಪರಿಪೂರ್ಣವಾಗಿಹ ಅಗಮ್ಯನುಪಮ ನಿಗಮ ಗೋಚರನ ಬಲಗೊಳ್ಳಿ 3 ಉತ್ಪತ್ತಿ ಸ್ಥಿತಿ ಲಯ ವಿಸ್ತಾರದೋರಲು ಮತ್ತೆ ತ್ರಿಗುಣವ ತಾಳಿದ ತಾಳಿದ ಸತ್ವ ರಜ ತಮವು ತ್ರಿಮೂತ್ರ್ಯದ ನಿತ್ಯ ನಿರ್ಗುಣನ ಬಲಗೊಳ್ಳಿ 4 ಭಕ್ತರ ಹೊರಿಯಲು ಪೃಥ್ವಿಯೊಳಗಿನ್ನು ಹತ್ತವತಾರ ಧರಿಸಿದ ಭರಿಸಿ ಪೃಥ್ವಿಯೊಳು ಮುಕ್ತಿ ಸಾಧನವಿತ್ತು ಪತಿತಪಾವನನ ಬಲಗೊಳ್ಳಿ 5 ಅನಾಥಜನರ ದೈನ್ಯ ಹರಿಸಲಾಗಿ ಆನಂದದಿಂದ ಪುಟ್ಟಿಹ್ಯ ಪುಟ್ಟಹ್ಯಾನಂದದಿ ಘನ ಗುರುಮೂರ್ತಿಯ ಜ್ಞಾನದಲೊಮ್ಮೆ ಬಲಗೊಳ್ಳಿ 6 ಕುಸುವ ನಿಶ್ಚಯ ಒನಕಿಯ ಕುಸುವ ನಿಶ್ಚಯದ ಒನಕಿ ಹಸ್ತದಿ ಪಿಡಿದು ಹಸನಾಗಿ ಕಣಕ ಕುಟ್ಟುತ 7 ಹಸನದಿಂದ ಕುಟ್ಟಿ ನಾದಿ ಉರಳಿ ಮಾಡಿ ಮದನ ಮೋಹನಗ ಮದುವೀಗ ಮದುವಿಯ ಮನೆಯಲ್ಲಿ ಮುದದಿ ಮೂವತ್ತಾರು ಮೊದಲಾದ ಗುರಿಯ ಮುತ್ತೈದೇರು 8 ಚದುರತನದಲಿ ಒದಗಿ ಮುತ್ತೈದೇರು ಯದುಕುಲೋತ್ತಮನ ನೆನವುತ ನೆನವುತ ಹದನದಿಂದಲಿ ಮನವಿಡುತ ಆದಿ ತ್ರಿಮೂರ್ತಿ ಬಲಗೊಂಡು 9 ಅಸಿಯ ಕಲ್ಲಿ ಒನಕೆ ಉಸಲಾರಗೊಡದೆ ಹಸನಾಗಿ ಕಣಕ ಕುಟ್ಟುತ ಕುಟ್ಟುತ ಮನವೆಂಬ ಕಣಕ ಹಸನವು ಮಾಡಿ ವಿಶ್ವ ವ್ಯಾಪಕನ ಮದುವಿಗೆ 10 ಕುಟ್ಟಿದ ಕಣಕವು ಘಟ್ಟಿಸಿಹ ಮಾಡಿ ಒಟ್ಟಿ ಉನ್ಮನೆಯ ಮುದ್ರಿಯಲಿ ಮುದ್ರಿಲೆ ಒಟ್ಟಲು ದಿಟ್ಟ ಮುತ್ತೈದೇರು ಕೊಟ್ಟ ಸದ್ಗುರು ಹರುಷವ 11 ಜ್ಞಾನ ವೈರಾಗ್ಯವೆಂಬ ಅನಾದಿ ಶಕ್ತ್ಯರು ಕಣಕವ ಕುಟ್ಟಿ ದಣಿದರು ಮನವೆಂಬ ಕಣಕದ ಉರಳೆ ಉನ್ಮನಿಲಿಟ್ಟು ಮೌನ್ಯ ಮೋನದಲಿ ಮುಸುಕಿರೆ 12 ಹಸನಾದ ಕಣಕಲಿ ಹೊಸಪರಿ ಭಕ್ಷ್ಯವು ಹೆಸರಿಟ್ಟು ಏಸು ಪರಿಯಿಂದ ಪರಿಯಿಂದ ಮಾಡುತ ಬೀಸೋರಿಗಿಗಳು ವಾಸುದೇವನ ಮದುವಿಗೆ 13 ಅಡಿಗಿಯ ಮಾಡಿದ ಸಡಗರ ಪೇಳಲಿ ಪೊಡವಿಯೊಳಿನ್ನು ಅಳವಲ್ಲ ಅಳವಲ್ಲದಡಗಿಯ ಕೂಡಿ ಮುತ್ತೈದೇರು ಎಡಿಯು ಮಾಡಿದರು ತಡೆಯದೆ 14 ಒಂದೆ ಸಾಲದಲಿ ಕುಳಿತರು ಕುಳಿತು ಸಾಧು ಜನರ ಮುಂದೆ ಎಡಿ ಮಾಡಿ ಒಂದೊಂದು ಪರಿಯ ಬಡಿಸುತ 15 ಹಪ್ಪಳ ಸೊಂಡಿಗಿ ಉಪ್ಪು ಮೆಣಸುಗಳು ಒಪ್ಪದಿಂದ ಬಡಿಸುತ ಬಡಿಸುತ ತಪ್ಪದೆ ಉಪ್ಪಿನೆಸರಗಳು ಶ್ರೀಪತಿ ಪ್ರಸ್ತದೆಡಿಯಲಿ 16 ಪ್ರಸ್ತದ ಎಡಿಯಲಿ ಪತ್ರ ಶಾಖೆಗಳು ಮತ್ತೆ ಅನೇಕ ಪರಿಯಾದ ಪರಿಯಾದ ಶಾಖವು ಸುತ್ತ ಪಂಕ್ತಿಯಲಿ ಆತ್ಮದಿಂದ ಬಡಿಸುತ 17 ಪರಮಾನ್ನಗಳ ತಂದು ಹಿರಿಯ ಮುತ್ತೈದೇರು ಸರಿಯಾಗಿ ಎಡಿಯ ಬಡಿಸುತ್ತ ಬಡಿಸುತ ಅನ್ನ ಪರಮಾನ್ನ ಅನುಭವದ ಅನಂದದಿಂದ ಬಡಿಸಿದೆ 18 ಮನೋ ಅನುಮಿಷದ ಎಣ್ಣೋರಿಗಿಗಳು ಎಣಕಿಲ್ಲದಿಹ ಭಕ್ಷ್ಯವು ಭಕ್ಷ್ಯದ ಜಿನಸ ಅನೇಕ ಪರಿಯಲಿ ಘನದೊಲುವಿಂದ ಬಡಿಸುತ 1 9 ಸಖರಿ ತುಪ್ಪವು ಭಕ್ತಿಭಾವದಲಾದ ಬಡಿಸುತ ನಡೆದರು ಅಖರದಿಂದಲಿ ಏಕಶಾಂತನ ಮದುವಿಗೆ 20 ಮೊಸರು ಮಜ್ಜಿಗಿಯು ಸುವಾಸದಿಂದಾದ ಲೇಸಾಗಿ ದಣಿಯಬಡಿಸಿರೆ ಬಡಿಸಿದ ಷಡುರಸಾನ್ನವನುಂಡಿನ್ನು ಕಡುಬೇಗ ಪ್ರೇಮ ಉಕ್ಕಿತು 21 ಉಂಡುವೀಳೆಯುವ ಕೊಂಡು ಸಾಧುಸಭೆ ಮಂಡಲದೊಳು ಪೊಗಳಿತು ಪೊಗಳಿತಾ ಮಂಡಲದೊಳು ಪ್ರಚಂಡನ ಮದುವಿ ಅಖಂಡ ಹರುಷದಿ 22 ಗಂಧ ಕಸ್ತುರಿಯ ತಂದೆ ಗುರುಕೃಪೆಯ ಚಂದವಾಗಿಟ್ಟು ಮೆರೆದರು ಮೆರೆದು ಮೇದಿನಿಯೊಳು ಗುರುದಯ ಕರುಣಾದಿ ಪರಮ ಸುಪಥವ ಪಡೆದರು 23 ಮದುವಿ ಮುತ್ತೈದೇರು ಮುಕ್ತಿಸಾಧನ ಕಂಡು ಸುಖಸೂರೆಕೊಂಡಿನ್ನು ಶ್ರೀಮಂತಕರದೊಳು ಬೆರೆದು ಹರುಷವ ಪಡೆದರು24 ಸರಿ ಇಲ್ಲದ ಪ್ರಸ್ತ ಧರೆಯೊಳಗಾಯಿತು ಪರಮಾನಂದದ ಹರುಷಲಿ ಹರುಷವ ಕಂಡಿನ್ನು ಕರುಮುಗಿದು ಮಹಿಪತಿ ಹೃತ್ಕಮಲದಲ್ಲಿ ಸ್ತುತಿಸಿದ 25 ಶ್ರೀಪತಿ ಮದುವಿಯ ಸ್ತುತಿ ಪಾಡಿದವರಿಗೆ ಪಾತಕವಿಲ್ಲ ಭಯವಿಲ್ಲ ಭಯವಿಲ್ಲ ಕ್ಷಿತಿಯೊಳು ಗುರುಭಕ್ತಜನರಿಗೆ ಸಂತತ ಸುಖವ ಪಡೆವರು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು