ಒಟ್ಟು 2882 ಕಡೆಗಳಲ್ಲಿ , 122 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉ. ತತ್ವ ವಿವೇಚನೆ ಹರಿಯಾದರೇನು ತಾ ಹರನಾದರೇನು ಮೂರ್ತಿ ದೊರಕಿ ಫಲವೇನು ಪ ಪಿತನೊಳಗೆ ಸೇರದಿಹ ಸುತನಿಂದ ಫಲವೇನು ಸತಿ ಇದ್ದರೇನು ಮತಿಹೀನ ಗುರು ತಾನು ಜೊತೆಯಾಗಿ ಇದ್ದರೇನು ಮತ ಮೀರಿ ನಡೆವಾತ ಯತಿಯಾದರೇನು 1 ಸಾಯವಿಲ್ಲದ ನ್ಯಾಯ ಸತ್ಯವಾದರೆ ಏನು ಬಾಯಸವಿಯಿಲ್ಲದ ರಸಾಯನದಲೇನು ಕಾಯ ಕುಂದಿದ ಮೇಲೆ ಜೀವದಾಶೆಯದೇನು ಮಾಯವಾದಿಯ ಮಾತು ಮತ್ತೆ ದೃಢವೇನು 2 ಋಣವ ಮಾಡಿದ ತಾತ ಗುಣವಂತನಾದರೇನು ಭಣಿತೆ ತಪ್ಪಿದ ತಾಯಿ ರಕ್ಷಿಣಿಯು ಆದರೇನು ಎಣಿಕೆ ಬಾರದ ಮನುಜ ಕರಣಿಕನಾದರೇನು ಫಣಿರಾಜನೊತ್ತಿನೊಳು ಹಣವಿದ್ದರೇನು 3 ವಿಪ್ರ ವೇದ ಓದಿದರೇನು ಮಾದಿಗನು ತಾ ಮಡಿಯನುಟ್ಟರೇನು ಬೂದಿಮುಚ್ಚಿದೆ ಕೆಂಡವಾದ ಸೋದರವೇನು ಸಾಧಿಸುವ ಊರೊಳಗೆ ಆದ ಫಲವೇನು 4 ಹರಿಯನರ್ಚಿಸದಿರ್ದ ಕರವಿರ್ದು ಫಲವೇನು ಹರಿಯ ಸ್ಮರಣೆಯ ಮಾಡದರಿಯದವನೇನು ಸಿರಿಯು ನಿಲ್ಲದ ಗೃಹದ ಪರಿಯ ಸೌಖ್ಯವದೇನು ಮರೆಯಾದ ಮನುಜನೊಳು ವ್ಯವಹಾರವೇನು 5 ವಾರಿಯಿಲ್ಲದ ಊರ ಸೇರಿರ್ದು ಫಲವೇನು ಚೋರನೊಡನೇ ದಾರಿ ನಡೆವುದೇನು ಬೇರು ಇಲ್ಲದ ವೃಕ್ಷ ಏರಿ ನೋಡುವುದೇನು ಮಾರಿ ಮನೆಯೊಳಗಿರಲು ಸಾಕಾರವೇನು 6 ಲಕ್ಷಣದ ಮೂರ್ತಿಯಿರಲಕ್ಷಯವ ತೋರುವುದು ಪಕ್ಷಿವಾಹನ ಲಕ್ಷ್ಮ್ಯಪೇಕ್ಷೆಯಾಗಿಹರು ಲಕ್ಷಣವಿರಹಿತ ನರ ಪ್ರದಕ್ಷಿಣದಿ ಬಳಲಿದರು ಭಿಕ್ಷುಕನೇ ಸರಿಯಾತನೀಕ್ಷಿಸರು ಜನರು 7 ಬುದ್ದಿವಂತರ ಕೈಯ ಶುದ್ಧವಾದೆರಕದಲಿ ತಿದ್ದಿರ್ದ ಮೂರ್ತಿಯನು ಕದ್ದುಕೊಂಡು ಹೊದ್ದಿ ಬಲವಂತನೊಳು ಬದ್ದವಾಗಿರುತಿರ್ದು ಎದ್ದು ಹೋಗದ ಸ್ಥಳದಿ ಮುದ್ದನಾಗಿಹುದು 8 ಕಾಮಿತಾರ್ಥನೀವ ಸೀಮೆಯಲಿ ಕೌರವನು ರಾಮರಾಜ್ಯದಿ ಬೇಡಿಕೊಳಲು ಕೊಡುತಿಹನು ಪ್ರೇಮದೊಳು ವರಾಹತಿಮ್ಮಪ್ಪ ಮನದಣಿಯೆ ಸೌಮನಸ್ಯವೀವ ಬರಿದೆ ಬಳಲದಿರು 9
--------------
ವರಹತಿಮ್ಮಪ್ಪ
ಉ. ಲಕ್ಷ್ಮೀದೇವಿ ಅಂಬಾಬಾಯೇ ನಂಬಿದೆ ಬಾ ಜನನೀ ಪ ಕೋಮಲಾಂಗಿಯೇ ಕಾಮಿತದಾಯಕೆಕರುಣಾವಾರಿಧಿಯೇ ತಾಯೇ 1 ಸಾರಸಾಕ್ಷಳೇ ತೋರಿಸು ಹರಿಯನ್ನುಪೋಷಿಸೆನ್ನ ಮನಸು ತಾಯೇ 2 ಇಂದಿರೇಶನಂಕವಿಹಾರಿಣೀಸುಂದರಾಂಗ ಸುಭಗೇ ತಾಯೇ 3
--------------
ಇಂದಿರೇಶರು
ಉಗಾಭೋಗ ಮಾಡಿದೆ ಯಾಕೆ ಫಲಗಳ ಮೆದ್ದೆಯಾಕೆ ಒಕ್ಕುಡಿತೆ ಪಾಲ ಕುಡಿದೆಯಾಕೆ ಅವಲ ಮೆದ್ದೆಯಾಕೆ ಕುರೂಪಿ ಕುಬುಜೆಗೆ ಮನಸೋತೆಯಾಕೆ ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದವ ಪಾಂಡವರೋಲೆಕಾರನಾದೆಯಾಕೆ ನಿನಗಾಗಿ ನೀನು ಬವಣೆಪಡಲಿಲ್ಲವೊ ದೇವ ನಿನ್ನ ಭಕುತರ ಪೊರೆಯಲೋಸುಗವೆಂಬುದ ನಾ ಬಲ್ಲೆ ನಿನ್ನ ದಯಕೆಣೆಯುಂಟೆ ಎನ್ನಪ್ಪ ರಂಗೇಶವಿಠಲ
--------------
ರಂಗೇಶವಿಠಲದಾಸರು
ಉಗಾಭೋಗ ವೈಕುಂಠಗಿರಿಯ ವಾಸ ಲೋಕೈಕನಾಥ ಶ್ರೀಶ ಏಕಮನಸು ನಿನ್ನ ಪಾದಧ್ಯಾನದಿ ಕೊಡು ನಾ ಕೇಳಲಿನ್ನೇನು ನಾಕ ಜನರ ನಾಥ ಬೇಕೊ ನಿನ್ನ ಭಕ್ತರ ಏಕಾಂತ ಸಹವಾಸ ನೀ ಕರುಣಿಸು ಇದನಾ- ನೇಕ ಜನ್ಮಗಳಲ್ಲಿ ಶ್ರೀಕಳತ್ರ ಶ್ರೀಶ ಗೋಪಾಲಕೃಷ್ಣವಿಠಲ
--------------
ಅಂಬಾಬಾಯಿ
ಉಡುಪಿ ದೃಷ್ಟಿ ಇದ್ಯಾತಕೆ ಉಡುಪಿ ಕೃಷ್ಣನ್ನ ನೋಡದ ಪ ಗೋಪಿಯರ ಪೂಜೆ ಗ್ರಹಿಸಿ ಗೋಪಿಚಂದನ ಸಹಿತವಾಗಿ ವ್ಯಾಪಾರದ ಹಡಗೀಲಿ ಬಂದ ಶ್ರೀಪತಿಯ ನೋಡದ 1 ಮಧ್ವರಾಯರಿಗೊಲಿದು ಬಂದು ಸಮುದ್ರತೀರದಲ್ಲಿ ನಿಂದು ಪದ್ಮನಾಭನಪುರದಿ ನೆಲಸಿದ ಮುದ್ದು ಶ್ರೀಕೃಷ್ಣನ್ನ ನೋಡದ 2 ದುಷ್ಟವಾದ ದೇಶವನೆಲ್ಲಾ ಶ್ರೇಷ್ಠ ಮಾಡಿದ ಕೃಷ್ಣನ್ನ ನೊಡದ 3 ಶುದ್ದವಾದ ಗೋವುಘೃತವು ಕ್ಷೀರ ಸಕ್ಕರೆ ಮಧುವು ದಧೀ ನಾರಿಕೇಳ ಫಲಗಳಿಂದ ಮಿಂದ ಶ್ರೀಕೃಷ್ಣನ್ನ ನೋಡದ 4 ಉದ್ದಂಡವಾದ ಉರನಲ್ಲಿ ಭೂಮಂಡಲನಾಳ್ವ ಶಿರವನಿಟ್ಟು ಕೊಂಡೆ ಮಕರಿತು ಚೆಂಡು ಧರಿಸಿದ ಪುಂಡರೀಕಾಕ್ಷನ್ನ ನೋಡದ 5 ಪಾನಪಟ್ಟಿ ಮುತ್ತಿನಬಟ್ಟು ಮೂಗುತಿಯನಳವಟ್ಟು ವಜ್ರದ ಕರ್ಣಕುಂಡಲವನಿಟ್ಟು ಅರ್ಜುನಸಾರಥಿಯ ನೋಡದ 6 ವೈಜಯಂತಿ [ನವ] ಹಾರಪದಕ ಸರಗಳಿಟ್ಟ ವಾರಿಜನಾಭನ ನೋಡದ 7 ಕಡೆಗೋಲ ಬಲದ ಕೈಲಿ ಎಡದ ಕೈಯ ತೊಡೆಯೊಳಿಟ್ಟು ಉಡುದಾರ ಗೆಜ್ಜೆಯನಿಟ್ಟ ಪೊಡವಿಗೀಶ್ವರನ್ನ ನೋಡದ 8 ಅಂದುಗೆ ಗೆಜ್ಜೆನಿಟ್ಟು ಕುಂದಣದಾವುಗೆಯ ಮೆಟ್ಟಿ ಆ ನಂದದಿಂದ ಗಂಗೆ ಪಡೆದ ಇಂದಿರೇಶನ ಪಾದವ ನೋಡದ 9 ಸಂಸಾರದಗ್ನಿಯಲ್ಲಿ ಬೆಂದು ನೊಂದುಬಂದ ಭಕ್ತರ ಚರಣವೆಂ ಬೊ ಶರಧಿಯಲ್ಲಿ ಭರದಲಿರುವ ಹರಿಯ ನೋಡದ 10 ದುರುಳ ಶಕಟನನ್ನು ತುಳಿದ ವರದ ವೆಂಕಟಕೃಷ್ಣನ್ನ ನೋಡದ 11
--------------
ಯದುಗಿರಿಯಮ್ಮ
ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಉಡುಪಿನಕೃಷ್ಣ ಸಕಲ ಜಗದೀಶಬಿಡದೆನ್ನ ಸಲಹೋ ಮಧ್ವಹೃದಯ ವಾಸ 1 ದಮನ 2 ತ್ರಿಕರಣ ಪರಿಯ ತ್ರಿವಿಧತಾಪ ಶಮನಸುಕುಮಾರರೂಪ ಮೋಹನ ರಮಾರಮಣ 3 ಎಸೆವ ಕಿರುಡೊಳ್ಳಿನ ಶುಭಾಕಾರ ಗಂಡಪಸುಳೆಯ ಭಾವದಿ ಮೆರೆವ ಪ್ರಚಂಡ 4 ಶಶಿಸಮವದನ ಕುಂಡಲಶೋಭಿಗಂಡಅಸುರಸಂಹಾರ ದೋರ್ಧೃತ ಪಾಶದಂಡ5 ಶ್ರುತಿಯರು ಸೇವೆಯರು ಬಿಡದೆ ಬಣ್ಣಿಸುವರುಪ್ರತಿಯಿಲ್ಲದದುಭುತ ಮಹಿಮನು ದಾವ 6 ಯತಿಕುಲಸೇವ್ಯ ಹಯವದನ ದೇವಪತಿಕರಿಸೊ ನಮ್ಮ ಭವವನದಾವ 7
--------------
ವಾದಿರಾಜ
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದೋ ಉದೋ ಉದೋ ಉದೋ ಉದೋ ಯನ್ನಲು ಉದ ಮುದೋ ಪ ತಮ್ಮನು ಪೊಗಳಿ ಪಾಲೆನೆ ಅಮ್ಮೊಮ್ಮಾ | ಮೊಮ್ಮನ ಪಡೆದಿಹ ಜಗದಯ್ಯಾ | ಸುಮ್ಮನ ಹೊಂದಿಹ ಬಾಲಕ ನಿಮ್ಮಾ | ಝಮ್ಮನೆ ಸ್ಮರಣೆಗೆ ಬಾನಮ್ಮಾ 1 ಛಂದ ವಿವೇಕದ ಚೌಡಕಿ ಹಿಡಿದು | ಒಂದೇ ನಿಷ್ಠೆಯ ತಂತಿಯ ಬಿಗಿದು | ಸುಂದರ ಭಕ್ತಿಯ ರಂಗಕ ಬಂದು | ಗೊಂದಳ ಹಾಕುವೆ ನಾನಿಂದು 2 ನಾಮಾವಳಿ ಕವಡೆಯ ಸರಥರಿಸಿ | ಪ್ರೇಮದ ಬಂಡಾರವ ಸುರಿಸಿ | ಆಮಹಾಜ್ಞಾನದ ಹೊತ್ತ ಪ್ರಜ್ವಲಿಸಿ | ನಾಮಗೆಜ್ಜಿಲಿ ಕುಣಿವೆನು ಘಲಿಸಿ 3 ಆವನಿಯ ಸುಜನರ ಮೊರೆಯನು ಕೇಳಿ | ಪರಿ ತಾಳಿ | ಭವ ಮಹಿಷಾಸುರ ನಸುವನು ಹೋಳಿ | ಜವದಲಿ ಮಾಡಿದೆ ತುನುಶೀಳಿ 4 ಮುನಿ ಮಾನಸ ತುಳಜಾಪೂರ ಗೇಹಿ | ಖೂನದೊರಿಸೀ ನಿಜ ಸೋಹೀ | ಏನೇ ನರಿಯದವನೆಂದರಿತು ಕಾಯೀ | ಘನಗುರು ಮಹಿಪತಿ ವರದಾಯಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉದ್ಧರಿಸೆನ್ನ ಶುದ್ಧ ಮಧ್ವಮತದ ಧೊರೆಯೆ ಬಿದ್ದು ಪೇಳುವೆ ಪ ಮಾನವ ಜನ್ಮವ ವಹಿಸಿ ಸಾನುರಾಗದಿ ನಿನ್ನ ಭಜಿಸಿ ಮಾನ್ಯನೆನಿಸಿದೇ 1 ಎಷ್ಟು ಕಷ್ಟ ಬರಲಿ ಇನ್ನು ದುಷ್ಟ ಮನಸು ಕಳೆದು ಮುನ್ನಾ ಸೃಷ್ಟಿಕರ್ತಾ ಭೃತ್ಯಘನ್ನ ತುಷ್ಟಿನೀಡ್ವುದೈ2 ಸ್ಮರಿಸಿ ನರಸಿಂಹವಿಠಲನ ಭರದಿ ನಿನಗೆ ಮರೆ ಇಡುವೆನಾಗಿ ದುರುಳ ನರರ ಸಂಗತಿಯನು ಮರಿಸಿ ಪೊರೆವುದೈ 3
--------------
ನರಸಿಂಹವಿಠಲರು
ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಉಪೇಂದ್ರ ವಿಠ್ಠಲನೆ ಕೃಪೆಯಿಂದ ಕೈಯ್ಯ ಪಿಡಿಯೊ ಪ ಅಪವರ್ಗ ಪ್ರದಹರಿಯೆ | ನಿಪುಣವೆನಿಸುತ ಶಿಶುವವಿಪುಲ ಮತಿಯನೆ ಕೊಟ್ಟು | ಕಾಪಾಡೊ ಹರಿಯೇ ಅ.ಪ. ವರುಷ ಕಾರಣವಲ್ಲ ಹರಿಭಜನೆಗೆಂಬುದನಪರಿಕಿಸುತ ಇವನಲ್ಲಿ| ಪ್ರಾರ್ಥಿಸುವೆ ನಿನಗೇ |ನಿರುತ ನಿನ್ನಯ ಪದದಿ | ಮೆರೆವ ಭಕುತಿ ಜ್ಞಾನಕರುಣಿಸುವುದೆಂದೆನುತ | ಪರಿಪರಿಯಲಿಂದ 1 ಕಾಕು ಮತ ದಿಕ್ಕರಿಪವಾಕು ವೈಖರಿಯಿತ್ತು | ತೋಕನ್ನ ಸಲಹೋ |ಲೌಕಿಕದಿ ಸತ್ಕೀರ್ತಿ | ಬೇಕಾದವರವಿತ್ತುನೀ ಕರುಣಿಸುವೆನೆಂದು | ನಾ ಕೇಳ್ವೆ ಹರಿಯೇ2 ದೇವದೇವೇಶ ತವ| ಪಾವನ್ನಸ್ಮøತಿಯಿತ್ತು ಗೋವತ್ವದ ನಿಗಾವು | ಧಾವಿಸುವ ತೆರದೀಕೋವಿದೋದ್ಗೀತ ಗುರು ಗೋವಿಂದ ವಿಠ್ಠಲನೆಭಾವುಕನ ನೀಪೊರೆಯೊ | ಗೋವಿದಾಂಪತಿಯೇ 3
--------------
ಗುರುಗೋವಿಂದವಿಠಲರು
ಉಮಾ ಹಿಮಗಿರಿ ಸಮಸ್ತ ಸಮಾನ ಸುಗುಣವಂದ್ಯೆ ಪ ಕಮಲಾಕ್ಷನÀ ಭಗಿನಿಯೆನ್ನಮಲನ ಮಾಡಿ ವಿಮ¯ ಮನಸು ಶಮದಮಗಳ ನೀಡಮ್ಮ ಅ.ಪ. ತ್ರಿಪುರ ಸುಂದರಿ ನಿನ್ನ ಅಪಾರ ರೂಪಕೆ ತ್ರಿಪುರಾರಿ ಮರುಳಾದನಮ್ಮ ಶಫರಾಕ್ಷಿ ಕೇಳೆನ್ನ ಬಿನ್ನಪವನು ಮನ ಚಪಲಾಕೆರಗದಂತೆ ಕೃಪೆ ಮಾಡಬೇಕಮ್ಮ 1 ಜಪವ ನಾನರಿಯೆನು ತಪವ ನಾನರಿಯೆನು ಎ ನ್ನಪರ ಬುದ್ಧಿಯ ಬಿಡಿಸಮ್ಮ ಕೃಪಣ ವತ್ಸಲೆ ಎನ್ನ ಕುಪಥಾವ ತಪ್ಪಿಸಿ ಅಪವರ್ಗ ಸೇರುವ ಸುಪಥವ ತೋರಮ್ಮ 2 ಅಪ್ಪ ರಂಗೇಶವಿಠಲ ಒಪ್ಪುವ ರೀತಿಲಿ ತಪ್ಪದೆ ಮತಿ ಪ್ರೇರಿಸಮ್ಮ ತಪ್ಪು ಒಪ್ಪುಗಳೆಲ್ಲ ಸರ್ಪಶಯನಗೆಅರ್ಪಿಸಿ ಎನ್ನ ನಿರ್ಲಿಪ್ತನ ಮಾಡಿಸಮ್ಮ 3
--------------
ರಂಗೇಶವಿಠಲದಾಸರು
ಉರಗಗಿರಿವಾಸ ವಿಠಲ | ಪೊರೆಯ ಬೇಕಿವಳಾ ಪ ಪರಮಕರುಣಾಮೂರ್ತಿ | ಪ್ರಾರ್ಥಿಸುವೆ ಹರಿಯೇ ಅ.ಪ. ನಿರತ ನಿನ ಸ್ಮರಿಪರಘ | ಪರಿಹರಿಪೆ ನೆಂಬನುಡಿಪರಮ ಸಾರ್ಥಕ ಗೊಳಿಸೊ | ತರಳೇ ಇವಳಲ್ಲಿಕರುಣ ಸಾಗರ ನಿನ್ನ | ಬೇರೊಂದಪೇಕ್ಷಿಸದೆ |ಸರಸದಲಿ ತವರೂಪ | ಚಿಂತೆಯಲ್ಲಿಹಳೋ 1 ಮರುತ ಮತವನೆ ಪೊಂದಿ | ತರತಮದ ಸುಜ್ಞಾನ ಪರಪಂಚಬೇಧಗಳ | ಅರಿತು ಭಜಿಸುವಳೋನೆರೆನಂಬಿ ತವಪಾದ | ಹಾರೈಸುತಿರುತಿಹಳವರ ಸುಸಾಧನವನ್ನೆ | ಅಭಿದೃದ್ಧಿಗೊಳಿಸೊ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀಹರಿಯೆಂಬಮತಿಯಿಂದ ಸೇವಿಸುತ | ದ್ರವ್ಯ ವಿಭಮನಾಹತಗೈದು ಕತೃಪ್ವ | ಅಂತಕಾರಕ ಭ್ರಮವಕ್ಷಿತಿರಮಣ ಪರಿಹರಿಸಿ | ಆರ್ತಳುದ್ಧರಿಸೋ3 ಜ್ಞಾನ ಸದ್ವೈರಾಗ್ಯ | ಅನುವಂಶಿಕವಾಗಿನೀನಾಗಿ ಕರುಣಿಸಿಹೆ | ಜ್ಞಾನಾತ್ಮಹರಿಯೆಮೌನಿಕುಲ ಸನ್ಮಾನ್ಯ | ಜ್ಞಾನಿ ಜನಸಂಗವನುನೀನಾಗಿ ಕೊಟ್ಟಿವಳ ಉದ್ಧರಿಸೋ ಹರಿಯೆ 4 ಸರ್ವಜ್ಞ ಸರ್ವೇಶ | ಸರ್ವಾಂತಾರಾತ್ಮಕನೆದರ್ವಿ ಜೀವಿಯ ಹೃದಯ | ಗಹ್ವರದಿ ನಿನ್ನಾಭವ್ಯರೂಪವ ತೋರಿ | ಉದ್ದಾರ ಗೈ ಇವಳಾಶರ್ವವಂದ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು