ಒಟ್ಟು 1713 ಕಡೆಗಳಲ್ಲಿ , 107 ದಾಸರು , 1282 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏಕನಾದ ಹರಿಗುರುಗಳ ಬಿಟ್ಟು ನರಸ್ತುತಿಗಳನು ಮಾಡಬಾರ್ದು ಪ ಸಿರಿವುರಿಯಲಿ ಸಿಕ್ಕಿ ನರಹರಿ ಚರಣವ ಬಿಡಬಾರ್ದು ಅ.ಪ. ಒಂಟಿಲಿ ಸತಿಯನು ಪತಿವ್ರತೆ ಎನ್ನುತ ಬಿಡಬಾರ್ದು ನೆಂಟೆಗೆ ಮಿತ್ರಗೆ ಸೂಳೆಗೆ ಸಾಲವ ಕೊಡಬಾರ್ದು ತುಂಟರ ಕುಡುಕರ ಜಾರರ ನೆರೆಹೊರೆ ಇರಬಾರ್ದು ಒಂಟಿಯ ಊಟವ ಪಯಣವ ಕಲಹವ ಬೆಳೆಸಬಾರ್ದು 1 ಮಾವನ ಮನೆಯಲಿ ದುಡಿಯದ ಅಳಿಯನು ನಿಲ್ಲಬಾರ್ದು ಕೋವಿದರಡಿಗಳ ಸುಜನರ ಸಂಗವ ಬಿಡಬಾರ್ದು ಜೀವರು ಹರಿ ಸಮ ಮಾಯವೆ ಜಗಸರಿ ಎನಬಾರ್ದು ದೇವನ ದೂಡುತ ವಿಷಯವ ಹರಿಸುತ ಕೆಡಬಾರ್ದು 2 ಮನೆಕದ ಮುಂದಿಲಿ ಪತಿವ್ರತೆ ತಾನು ನಿಲಬಾರ್ದು ತನುವನು ತೋರುತ ಸೆರೆಗನು ಬೀರುತ ನಡಿ ಬಾರ್ದು ವನಿತೆಯ ಸಂಗಡ ಗುಟ್ಟಿನ ವಿಷಯವ ನುಡಿಬಾರ್ದು ಮಣಿಯದೆಲೆಂದಿಗು ಹಿರಿಯರ ಚರಣಕೆ ನಡಿಬಾರ್ದು3 ನುಡಿಯುವ ತೆರೆದಲಿ ನಡೆಯದ ಮನುಜನ ನಂಬಬಾರ್ದು ತಡೆಯದೆ ಕೋಪವ ದುಡುಕುವ ನೆಡೆಯಲಿ ನಿಲ್ಲಬಾರ್ದು ಬೆಡಗನು ತೋರುವ ನಾರಿಯ ಕಡೆಯಲಿ ನೋಡಬಾರ್ದು ದುಡುಕುತ ಲೊಡನೆಯೆ ಯಾವುದು ನಿಶ್ಚಯ ಮಾಡಬಾರ್ದು 4 ಕೆಟ್ಟರೆ ನೆಂಟರನೆಂದಿಗು ಮಾನಿಯು ಸೇರಬಾರ್ದು ಕಷ್ಟವು ಬಂದೆಡೆ ಧೈರ್ಯವನೆಂದಿಗು ಬಿಡಬಾರ್ದು ಗುಟ್ಟಿನ ಮಂತ್ರವು ಘಟ್ಟಿಲಿ ಜಪಿಸುತ ಕೂಗಬಾರ್ದು ಶಿಷ್ಯರಿಗಲ್ಲದೆ ದುಷ್ಟಗೆ ಶಾಸ್ತ್ರವ ನುಡಿಬಾರ್ದು 5 ತಿಂಡಿಯ ಚಪಲವ ನರಹರಿ ತೊಂಡನು ಮಾಡಬಾರ್ದು ಹೆಂಡರ ಭಜಕನ ಜಾರನ ನುಡಿಗಳ ನಂಬಬಾರ್ದು ಸತಿ ಸಹ ಸರಸವ ಮಾಡಬಾರ್ದು ಮಂಡೆಲಿ ಚರಣದಿ ಬರಿತೆರ ವೆಂದಿಗು ಹೋಗಬಾರ್ದು 6 ಹುಡುಗರ ಶಾಲೆಗೆ ಕಲಿಯಲು ಹುಡುಗಿಯ ಕಳಿಸಬಾರ್ದು ಮಡದಿಗೆ ಭಂಟಗೆ ಒಡನೆಯೆ ಸದರವ ನೀಡಬಾರ್ದು ಹುಡುಗಿಯ ಕಾಣದ ಜನರಿಗೆ ದೇಶಕೆ ಕೊಡಬಾರ್ದು ನಡೆನುಡಿ ನೋಟ ವಿಶೇಷದಿ ನೇಮವನಿಡದಲೆ ಇರಬಾರ್ದು 7 ಯಾಚಕ ಸವಿನುಡಿ ವಿನಯ ವಿವೇಕವ ಮರಿಬಾರ್ದು ಯೋಚನೆ ಗೈಯದೆ ನೆರೆಹೊರೆ ಹಗೆತನ ಗಳಿಸಬಾರ್ದು ಒಗೆತನ ಹುಳುಕನು ಹಾಕಬಾರ್ದು ಮೋಚಕ ನಿಜ ಸಖ ಹರಿತಾನೆಂಬುದ ಮರಿಬಾರ್ದು 8 ದೊಡ್ಡವರೆಡೆಯಲಿ ಹುಡುಗರು ಸರಸವ ಮಾಡಬಾರ್ದು ದುಡ್ಡಿನ ಜನಗಳನೆದುರಿಸಿ ಬಡವನು ನಿಲ್ಲಬಾರ್ದು ಸಡ್ಡೆಯ ಮಾಡದೆ ಅಡ್ಡಿಗಳೆಲ್ಲವ ಸರ್ವರಿಂ ದೊಡ್ಡವ ಶ್ರೀ ಕೃಷ್ಣವಿಠಲನ ಭಜನೆಯ ಬಿಡಬಾರ್ದು 9
--------------
ಕೃಷ್ಣವಿಠಲದಾಸರು
ಏಕೆ ಎನ್ನೊಳು ಮೂಕನಾದ್ಯೊತ್ರಿ ಲೋಕ ಜೀವಾಳುಪ ಪಿತ ಮಾತೃದ್ರೋಹಿಯೆಂದು ಅತಿಥಿಗಳನಾದರನುಯೆಂದು ಅತಿ ಪಾತಕಿಯಿವನುಯೆಂದಹಿತದಿ ಮುಖವೆತ್ತದಿರುವ್ಯೋ 1 ವಾಚಹೀನ ನೀಚನೆಂದು ಸಾಚಮನವಿಗಳ್ನಿಂದಕನೆಂದು ಆಚರಿಪನನಾಚಾರವೆಂದು ನೀಚಾರಿ ದಯಸೂಚಿಸದಿರುವ್ಯೋ 2 ಭಕ್ತರನ್ನು ಕ್ಷಮಿಸಿ ಪೊರೆದು ಭಕ್ತವತ್ಸಲನೆಂಬ ಬಿರುದು ಹೊತ್ತದ್ದೆಲ್ಲಡಗಿಸಿದ್ಯೋ ಮುಕ್ತಿದಾತೆನ್ನಯ್ಯ ರಾಮ 3
--------------
ರಾಮದಾಸರು
ಏಣನಯನೆ ಏಣಭೋಜ ಮಧ್ಯಳೆ ತೋರೆಏಣಾಂಕ ಬಿಂಬ ಮುಖಿಏಣವೈರಿಯ ವೈರಿಯ ಶಿರಕುಚಯುಗೆ ಕರೆತಾರೆಏಣಾಂಕಧರ ಸಖನ ಪ ಚಳಿಯ ಮಗಳ ತಾಯಳಿಯನ ತನಯನಇಳುಹದೆ ಪೊತ್ತಿಹನಬಳಿದುಣ್ಣಲೀಸದೆ ಸೆಳೆದುಂಡನಣ್ಣನಸಲಹಿದಾತನ ಸುತನಕಳದೊಳು ತಲೆ ಚೆಂಡಾಡಿದ ಧೀರನಬಳಿ ವಾಘೆಯನು ಪಿಡಿದನಇಳೆಯ ಮೊರೆಯನು ಕೇಳಿ ಖಳರುತ್ತಮಾಂಗವನಿಳುಹಿದಾತನ ತೋರೆಲೆ 1 ಇಪ್ಪತ್ತುನಾಲ್ಕು ನಾಮಗಳೊಳಗೇಳನುತಪ್ಪದೆಣಿಸಿ ಕಳೆದುಬಪ್ಪ ಎಂಟನೆಯ ನಾಮದ ಪೆಸರಿನೊಳ್‍ಇಪ್ಪ ಕಡೆಯ ಬೀಡಲಿಅಪ್ಪ ಜಯದರಸನ ಕೂಡೆ ಜನಿಸಿದಕಪ್ಪು ವರ್ಣದ ಮೈಯಳಅಪ್ಪನ ಮಿತ್ರನ ಮಗನೆಂಬ ಬೊಮ್ಮನಬೊಪ್ಪನ ತೋರೆನಗೆ2 ಬಿಡುಗಣ್ಣ ಬಾಲೆ ತನ್ನೊಡೆಯನ ನುಡಿಗೇಳಿದೃಢದಿಂದ ನಡೆದು ಬಂದುಜಡಿವ ಕೋಪಕೆ ಶಾಪ ಪಡೆದುಕೊಂಡಾಕ್ಷಣನುಡಿದ ದಿನವು ದಾಟಲುಪಡೆಯನೆಲ್ಲವ ನಡು ರಣದಲಿ ಸೋಲಿಸಿಜಡಿದು ಗೋವುಗಳನೆಲ್ಲಒಡನೆ ತನ್ನಯ ಪುರಕೆ ಹೊಡೆತಂದ ಧೀರನಒಡೆಯನ ತೋರೆನಗೆ 3
--------------
ಕನಕದಾಸ
ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ
ಏನಾಯಿತೇನಾಯಿತು ಮನವೆ ನಾನೆಂಬುದೇನಾಯಿತು ಧ್ರುವ ಕರಿಯ ನುಂಗಿದ ಬೆಳವಲಣ್ಣಿನಂತಾಯಿತು 1 ಅಪ್ಪಿನೊಳುಪ್ಪು ಬೆರದಂತಾಯಿತುಮನವೆ 2 ಕಪ್ಪರವ ಸುಟ್ಟರಹಿಟ್ಟಂತಾಯಿತು 3 ಮಹಿಪತಿಯ ಮನವೆ ಕೇಳೆನ್ನಾ ಮನವೆ 4 ಎನ್ನೊಳು ಘನ ಬ್ರಹ್ಮತಾನಾಯಿತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನಿದೇನಿದನ್ಯಾಯ ಕೇಳಲಾಗದಯ್ಯ ಧ್ಯಾನದಿಂದಾನೆಂಬ ಹೀನ ಜನರ್ವಚನ ಪ ಪರಮಪುರುಷರ ಚರಿತ ಪರಮ ಭಕ್ತಿಯಲಿಂದ ಬರೆದೋದಿಕೇಳಿದರೆ ಪರಮಪದವೆನುತ ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ ಬರೀಬಾರದೆನ್ನುವ ನರಗುರಿಗಳ ವಚನ 1 ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ ನೆನೆವರ್ಗೆ ಭವಬಂಧವಿನಿತಿಲ್ಲವೆನುತ ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು ಮನನ ಮಾಡಳಿವ ಬಿನಗುಜನರ್ವಚನ 2 ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ ಮೇಲು ಮಹಿಮೆಯ ಮನದಾಲಿಸಲು ಜವನ ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ ಕೇಳಿ ತಿಳಿಯದ ಮಹ ಕೀಳುಜನರ್ವಚನ 3 ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4 ಪರಮ ಶ್ರೀಗುರುರೂಪ ವರದ ಶ್ರೀರಾಮನಂ ನೆರೆನಂಬಿ ಒಲಿಸದೆ ಗುರುವಾಗಿ ಜಗದಿ ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ ಪರತರದ ಮೋಕ್ಷಮಂ ಕರುಣಿಸುಯೆಂತು 5
--------------
ರಾಮದಾಸರು
ಏನು ಕಾರಣ ವೆನ್ನ ಮನೆಗಿಂದು ಬಾರನು | ಮಾನಿನಿತಂದು ತೋರಮ್ಮಾ ರಂಗನ ಪ ದೀನ ವತ್ಸಲನೆಂಬ ನಾನ್ನುಡಿ ಮಾತಿಗೆ | ನಾನೆರೆ ಮರುಳಾದೆನಮ್ಮಾ ರಂಗಗೆ 1 ಇಂದು ಜರಿದು ತನ್ನ| ಹೊಂದಿದೆ ಚರಣ ನೋಡಮ್ಮಾ ರಂಗನೆ 2 ತಾನೆ ದಯಾಂಬುಧಿ ನಾನೆವೆ ಅಪರಾಧಿ | ನ್ಯೂನಾರಿಸುವ - ರೇನಮ್ಮಾ ರಂಗನು 3 ತನ್ನ ಹಂಬಲಿಸುವ ಕಣ್ಣಿಗೆ ಮೈದೋರಿ | ಧನ್ಯಳ ಮಾಡನೇನಮ್ಮಾ ರಂಗನು 4 ಸಾರಥಿ | ಒಂದು ನೆರದಪುಣ್ಯಲೆಮ್ಮಾ ರಂಗನು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನು ಕೊಟ್ಟನೆ ಮಗಳಾ ಉದಾ | ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ ಪ ಹೆತ್ತವಳಿಲ್ಲಾ ಸೀ ಹುಟ್ಟತ ಪರದೇಶೀ | ನೆತ್ತಿಗೆ ಎಣ್ಣಿಲ್ಲಾ ನೆರೆಬಿಸಿ ನೀರಿಲ್ಲಾ | ದೊತ್ತಿದ ಕೂದಲು ದುರ್ಜಟಿ ಯಾಗಲು | ಹೊತ್ತಿದ ತಲೆಯಿಂದ ಹಣೆ ಉರಿಗಣ್ಣಾದ | ಇತ್ತಿ ಹೊದಿಯಲಿಲ್ಲಾದೀ ಭಸ್ಮ ಲೇಪನಾ | ಮೆತ್ತಿದ ಗುಣದಿಂದ ಮೈ ಯಲ್ಲ ಬೆಳ್ಚಾದಾ | ಎತ್ತ ನೇವುವನು ಭೂತ ಗಣಾ | ಯೋಗಿ - ಕು | ಲೋತ್ತ ಮನೆನಿಸಿದನು ಇಂಥ | ಹತ್ತು ಭುಜವ ತಾಳಿ ದೈದು ಮೊರೆಯುಗವ 1 ಶರಥಿ ಮಥನದಲ್ಲಿ ಸಲೆ ವಿಷ ಹೊರಡಲಿ | ಸುರರ ಮಾತು ಕೇಳಿ ಶೀಘ್ರದಿ ಸುರಿಯಲಿ | ಉರಿಹೆಚ್ಚಿ- ಮೈಯ್ಯಲಿ ಉಬ್ಬಸ ಗೊಳುತಲಿ | ಸುರಗಂಗಿಯ ಹೊತ್ತ ಸೀತಾಂಶು ಕಳೆವತ್ತ | ಮರುಳವೆ ತಿರುಗುವ ಮತ್ತೆ ಭೋಳಾದೇವ | ತ್ವರಿತವ ಕೋಪದಯ ಮನಿಯೊಳು ಹಿಡಿದಿಹ | ಸುರರಿಗೆ ವಲಿದಿಹನು ಬೇಡಿದ | ವರಗಳನ್ನು ಕೊಡತಿಹನು ಬೆನ್ನಟ್ಟಿ | ಬರೆ ದುಷ್ಟ ಓಡಿದನು ಶ್ರೀ ವಿಷ್ಣು | ಕರುಣದಿ ಶರೆಯ ಬಿಡಿಸೆ ಕೊಂಡವನಿಗೆ 2 ಕರಿಚರ್ಮ ತಾಳಿದಾ ಕಾಡೊಳು ಸೇರಿದಾ | ಉರಗ ಭೂಷಣನಿವ ಊಧ್ರ್ವರೇತಾದವ | ಹೊರೆ ಹುಲಿದೊಗಲಾ ಹಾಸಿಗೆ ಮಾಡಿದಾ | ಕೊರಳಳು ರುಂಡಮಾಲಾ ಕರದೊಳು ಕಪಾಲಾ | ಧರಿಸಿದ ನೀತನು ದೊರೆಯಲ್ಲದಾತನು | ನೆರೆದುಣ - ಲುಡಿಲಿಲ್ಲಾ ನರಸುರ ರೊಳಗಲ್ಲಾ | ಪರಕ ಪರೆನಿಸುವರು ಸ್ಮರಿಸಿದಾ ಆ ಗುರುವರ ಮಹಿಪತಿ ಪ್ರಭು ಸಾಂಬನೆಂಬವನಿಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು 4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು5
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ನಿನ್ನ ಹಿತವಾ ಪಡೆದ್ಕೋ ಯಲೆ ಜೀವವೇ | ಶ್ರೀನಾಥನಂಘ್ರಿ ನಂಬಿ ಸುಖಿಸಲಾರೆಯಾ ಪ ಶ್ವಾನ ಸೂಕರಾದಾ ನಾನಾ ಯೋನಿಯಲ್ಲಿ ತೊಳಲಿ ಬಂದು | ಮಾನವ ಜನ್ಮ ಪುಣ್ಯದಿಂದ ಬಂದುದಾ | ಭವ | ಕಾನನದ ಮಾರ್ಗವನು ಜರೆಯಲಾಪೆಯಾ 1 ಕಾಮ ಕ್ರೋಧ ಲೋಭವೆಂಬಾ ತಾಮಸದ ಬಲಿಗೆ ಸಿಲುಕಿ | ನೇಮಗೆಟ್ಟಾ ವ್ಯರ್ಥನಾದೆ ಹರಿಯ ನಾಮವಾ | ಪ್ರೇಮದಿಂದ ಸ್ಮರಿಸಿ ಭಕ್ತಿ ಸೀಮೆಯೊಳು ಪಡೆದು ಮುಕ್ತಿ | ಸಾಮರಾಜ್ಯ ಪದವಿಯನು ಸಾರಲಾಪೆಯಾ 2 ಮರದು ತನ್ನ ನಿದ್ರೆಯೊಳು ಅರಸು ರಂಕನಾಗಿವಂತೆ | ಶರೀರ ತಾನೆಂಬ ವಿದ್ಯಾವಳಿದು ಜಾಗಿಸೀ | ಗುರು ಮಹಿಪತಿಸ್ವಾಮಿ ಕಿರಣವೆಲ್ಲರೊಳು ಕಂಡು | ಶರಣರಾ ವೃತ್ತಿಯೊಳು ಬರಸಲಾಪೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ