ಒಟ್ಟು 1539 ಕಡೆಗಳಲ್ಲಿ , 114 ದಾಸರು , 1270 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೇನು ಫಲವೊ ಪ ನೀನು ಮಾನಸ ವೃತ್ತಿ ತಿದ್ದುವತನಕ ಅ.ಪ ಪೂಜೆ ಮಾಡಿದರೇನು ತೇಜಸ್ವಿ ಇರಲೇನು ರಾಜಧಿರಾಜ ಸಂಪೂಜ್ಯನೆನಿಸಲೇನು ರಾಜತಾಸನದಲ್ಲಿ ಕುಳಿತರೂ ರಾಜಿಸದ ಮಾನಸದ ವೃತ್ತಿಯು ಜೂಜಿನಲಿ ಪಣ ಕಟ್ಟಿದಂತಿದೆ 1 ಭಾರಿ ಪಲ್ಲಕ್ಕಿಯ ಏರಿದ ಅನುಭವ ನೂರು ಜನರು ಸ್ತುತಿ ಕೇಳಿದ ಅನುಭವ ಕೀರುತಿಯ ಪರಮಾವಧಿಯನು ಸೇರಿದೆನು ನಾನಿನ್ನ ಕರುಣದಿ ತೂರುವಂದದಿ ತೂರುತಿಹುದೊ 2 ವರಗಳ ಕೊಟ್ಟಾಯ್ತು ಹಿರಿಯನೆಂದೆನಿಸ್ಯಾಯ್ತು ಅರಿತು ಶಾಸ್ತ್ರಾರ್ಥವ ಗುರುತನ ಪಡೆದಾಯ್ತು ಮನದಲಿ ತೋರುತಿಹುದೋ ಕರದಲಿರುವ ಪ್ರಸನ್ನನೇ ಹೃತ್ಸರಸಿಜದಿ ನೆಲಿಸೆಲೊ ನಿರಂತರ 3
--------------
ವಿದ್ಯಾಪ್ರಸನ್ನತೀರ್ಥರು
ಏನು ಸವಿಯೋ ಮಾತಿನ್ನೇನು ಸವಿಯೋ | ಶ್ರೀನಾಥನೆಚ್ಚರ ಪಡೆವಾ ಮಾನುಭಾವರ ಸ್ಥಿತಿ ಸಂಗತಿಯಾ ಪ ನುಡಿಸವಿಯೋ ವೇದಾಂತದಾ | ನಡಿಸವಿಯೋ ಸಿದ್ಧಾಂತದಾ | ದೃಢ ಸವಿಯೋ ನೈರಾಶ್ಯದಾ | ಕುಡ ಸವಿಯೋ ಉಪದೇಶವಾ 1 ನೋಟ ಸವಿಯೋ ಸಮಭಾವದಾ | ಧಾಟಿ ಸವಿಯೋ ಭಕ್ತಿ ಸುಖದಾ | ಮಾಟ ಸವಿಯೋ ಹರಿ ಪ್ರೇಮದಾ | ಊಟ ಸವಿಯೋ ನಾಮಾಮೃತದಾ 2 ತ್ಯಾಗ ಸವಿಯೋ ವಿವೇಕದಾ | ಭೋಗ ಸವಿಯೋ ನಿರ್ವಿಷಯದಾ | ಶ್ರೀ ಗುರು ಮಹಿಪತಿ ಸ್ವಾಮಿ | ಯೋಗ ಭೋಗವೆರಡಲ್ಲಿರುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನುಧನ್ಯನೊ ಇವನು ಎಂಥ ಪುಣ್ಯನೊ ದೀನದಯಾಳು ಜಾನಕೀಶನ ಧ್ಯಾನ ಮಾಳ್ಪ ಮಾನವನು ಪ ಜ್ಞಾನದಿಂದ ತಿಳಿದು ಜಗ ಶೂನ್ಯವೆಂದು ಊಹಿಸಿ ಮನದಿ ದಾನವಾಂತಕನಾದ ಹರಿಯ ಧ್ಯಾನವೊಂದೇ ಕಾರಣೆಂದು ಜ್ಞಾನಬೆಳಗಿನೊಳಗೆ ನೋಡಿ ಆನಂದಿಸುತಲ್ಹಿಗ್ಗುವವ 1 ಆಶಪಾಶಗಳನು ನೀಗಿ ಈ ಮೋಸಮಯ ಸಂಸಾರದೊಳು ವಾಸನಾರಹಿತನಾಗಿ ಸದಾ ದಾಸಸಂಗಸುಖಪಡೆದು ಈಶ ಭಜನೆಯೊಳ್ಮನವಿಟ್ಟು ಈಸಿಭವಾಂಬುಧಿ ಪಾರಾಗುವವ 2 ನಂಬಿಗಿಲ್ಲದ ದೇಹವಿದನು ನಂಬಿನೆಚ್ಚಿ ಸಂಭ್ರಮಿಸದೆ ಕಂಬುಕಂಧರ ಶಂಭುವಿನುತ ಅಂಬುಜಾಕ್ಷ ಶ್ರೀರಾಮನ ನಂಬಿ ಗಂಭೀರಸುಖದೊಳಿರುವವ 3
--------------
ರಾಮದಾಸರು
ಏನೆಂದು ಪೇಳಲಿ ಹರಿಶರಣರ ನಿಜ ಆನಂದ ಸೌಭಾಗ್ಯದಲಂಕಾರ ಪ ಆನಂದ ಪರಮ ಆನಂದ ಹರಿಧ್ಯಾ ನಾನಂದ ಸಂಪದ ಶೃಂಗಾರ ಅ.ಪ ಮಾಧವನ ನಾಮಮಕುಟಿಟ್ಟಹ್ಯರು ಮಧು ಸೂದನನ ಭಕ್ತಿ ಕವಚ ತೊಟ್ಟಿಹ್ಯರು ಯಾದವನ ಜಪಮಾಲ್ಯ್ಹಾಕಿಹ್ಯರು ಯ ಶೋದ ಬಾಲನ ದಯ ಪಡೆದಿಹ್ಯರು 1 ಶ್ರೀಶನ ಧ್ಯಾಸಶಸ್ತ್ರ ಧರಿಸಿಹ್ಯರು ದೋಷ ರಾಶಿಪರ್ವತ ತರಿದೊಟ್ಟಿಹ್ಯರು ಪಾಶ ಜೈಸಿ ನಿರ್ಭೀತಾಗಿಹ್ಯರು 2 ಸರಕು ತುಂಬಿಹ್ಯರು ನರ ಹರಿ ಪ್ರೇಮ ನೌಕೆ ಏರಿಹ್ಯರು ವರದ ಶ್ರೀರಾಮಮಂತ್ರ ಪಠಿಸುವರು ಭವ ಶರಧಿ ಸುಲಭದಿಂದ ದಾಂಟುವರು 3
--------------
ರಾಮದಾಸರು
ಏನೆಂದು ಬಣ್ಣಿಪೆನು-ಶ್ರೀಗುರುವರನ ನಾನಾಮಹಿಮೆಗಳನು ಪ ಸಾನುರಾಗದಿ ಸಕಲ ತೀರ್ಥಕ್ಷೇತ್ರವ ಚರಿಸಿ ಶ್ರೀನಿವಾಸನ ದಯದಿ ದೀನರನುದ್ಧರಿಸಿದ ಅ.ಪ ತೀರ್ಥಕ್ಷೇತ್ರದ ಮಹಿಮೆ ತೀರ್ಥಪ್ರಬಂಧದೊಳ್ ಕೀರ್ತಿಸಿ ಕವಿತಾ ಚಾತುರ್ಯವ ಪ್ರಕಟಿಸಿದ 1 ಕುಂಡಲೀಗಿರಿಯನು ಮಂಡಿಯಿಂದಲೇರಿ ಉ ದ್ದಂಡಗಂಡಕ ಶಿಲೆಯ ಹಾರ ಶ್ರೀಹರಿಗಿತ್ತ 2 ಕುಂಭಕೋಣೆಯಲಿದ್ದ ಡಾಂಭಿಕ ಪಂಡಿತ ಜಂಬೂಕಗಳ ಗೆದ್ದ ಕುಂಭಿಣೀಸುರ ಸಿಂಹ 3 ಮಾಘಕಾವ್ಯವ ಮೀರ್ದ ಆಮೋದ ಸುಂದರವಾದ ಶ್ಲಾಘ್ಯ ಶ್ರೀ ರುಕ್ಮಿಣೀಶ ವಿಜಯವೆಂದೆನಿಸಿದ 4 ಘನ ಕಾವ್ಯವ ರಚಿಸಿ ಪುಣ್ಯ ಪತ್ತನದಿ ವಿ ದ್ವನ್ಮಣಿಗಳಿಂದ ಮಾನ್ಯತೆ ಪಡೆದುದು 5 ತುಂಗ ಕರ್ಣಾಟಕ ನೃಪನ ಸಭೆಯೊಳು ಪ್ರ ಸಂಗಾಭರಣವೆಂಬ ಬಿರುದು ಪಡೆದ ಖ್ಯಾತಿ 6 ಪಾದ ಭೃಂಗ ಶ್ರೀ ಗುರುವಾದಿರಾಜರ ಪರಿಪರಿ ಚರಿತೆಯಾ 7
--------------
ವರಾವಾಣಿರಾಮರಾಯದಾಸರು
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು
ಏನೆಂದುಸರಲಿ ನಾ ನೆರೆ ಸಂತರಾ | ಸ್ವಾನುಭವಗಳನುವಾಗೀ ಮಾನಿಸಿರೋಳುಸಲೆ ಮಾನಿಸ ಸ್ಥಿತಿಯಲಿ ತಾನಿಹ ಉನ್ಮನಿಯಾಗಿ ಪ ಕಾಮವು ಹರಿಪದ ತಾಮರಸವ ನಿ | ಷ್ಕಾಮದ ಭಕುತಿಗಳಲ್ಲಿ | ಆ ಮಹಾ ಕೋಪವು ಈ ಮನಸಿನ ಗುಣ | ನೇಮಿಸಿ ಶೀಕ್ಷಿಸುವಲ್ಲಿ | ಆ ಮೋಹ ಲೋಭವು ಯಾಮವಳಿಯದಾ | ನಾಮ ಕೀರ್ತನೆಯಲ್ಲಿ | ತಾ ಮರೆಯದ ಅತಿ ವ್ಯಾಮೋಹ ತನ್ನಯ | ಪ್ರೇಮದ ಕಿಂಕರರಲ್ಲಿ 1 ಮದವತಿ ಇಂದ್ರಾದಿ ಪದಗಳ ಸಿದ್ದಿಗೆ | ಳಿದಿರಡೆ ಕಣ್ಣೆತ್ತೆ ಲೆಕ್ಕಿಸರು | ವದಗಿಹ ಮತ್ಸರ ಕುದಿವಹಂಕಾರದ | ಮೊದಲಿಗೆ ತಲೆಯತ್ತಿಸಗುಡರು | ಇದರೊಳು ಸುಖದು:ಖ ಉದಿಸಲು ಹರಿಯಾ | ಜ್ಞದೆಗತಿಗಡ ಸಮಗಂಡಿಹರು | ಉದಕದಲಿ ಕಮಲದ ಎಲೆಯಂದದಿ | ಚದುರತೆಯಿಂದಲಿ ವರ್ತಿಪರು 2 ಜಲದೊಳು ಕಬ್ಬಿಣಸಲೆ ಮುದ್ದಿಯ ನೆರೆ | ನಿಲಿಸದೆ ನಿಲ್ಲದೆ ಮುಣಗುವದು | ಪರಿ | ನಳನಳಿಸುತ ತೇಲುತಲಿಹುದು | ಕಳೆವರ ವೃತ್ತಿಯ ಕಳೆ ಸುವೃತ್ತಿಯ ಮಾಡಿ | ಬೆಳಗಿನ ಘನದೊಳು ಮನ ಬೆರೆದು | ನಲವರು ಮಹಿಪತಿ ವಲುಮೆಯ ಪಡೆಯದ | ಹುಲು ಮನುಜರಿಗಿದು ಭೇದಿಸದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏನೆಂದ್ಹೇಳಲಿ ಸ್ವಾನಂದ ಮಹಿಮೆಯು ಏನೆಂದ್ಹೇಳಲಿ ಮಾ ಧ್ರುವ ವೇದಲ್ಲ ವಾದಲ್ಲ ಭೇದಮಾಡುವದಲ್ಲ ಸಾಧಕರಿಗೆ ತಾ ಸಿಲುಕುದುಮಾ ಓದಲ್ಲ ಶೋಧಲ್ಲ ಗಾದಿಯ ಮಾತಲ್ಲ ಭೇದಿಸಿದರೆ ತಾನು ತಿಳಿವದು ಮಾ 1 ಧ್ಯಾನಲ್ಲ ಮೋನಲ್ಲ ಸ್ನಾನ ಸಂಧ್ಯಾನಲ್ಲ ಙÁ್ಞನಹೀನರಿಗಿದು ತಿಳಿಯದು ಮಾ ನಾನಲ್ಲ ನೀನಲ್ಲ ನಾನುಡಿದ ಮಾತಲ್ಲ ಅನುಭವ ಸಿದ್ಧನು ಬಲ್ಲನು ಮಾ 2 ಸೇವಲ್ಲ ಸೂತ್ರಲ್ಲ ಬಾಹ್ಯನೋಟಿಕೆ ಅಲ್ಲ ಮಹಿಪತಿ ನಿನ್ನೊಳು ತಿಳಿವದು ಮಾ ಕೌತುಕವನು ಕಂಡು ಮಹಾ ಗುರುಕೃಪೆಯಿಂದ ಸಾಯೋಜ್ಯ ಸದ್ಗತಿ ಪಡೆವದು ಮಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಏಳಯ್ಯ ಏಳಯ್ಯ ಬೆಳಗಾಯಿತೂ ಪ ಸುಳಿ | ನಾಭಿ ಸಂಭವ ಸುತನೆ ಅ.ಪ. ಸಾಮಜ ವರದ ಶ್ರೀರಾಮ ಬಂದಿಹನಯ್ಯ | ಭೂಮಿಜೆಯ ಪುಡುಕಲ್ಕೆ |ನೇಮದಿಂದಲಿ ನೀನು | ಶ್ಯಾಮಲಾಂಗನ ಕಂಡುಭೂಮ ಗುಣನಿಧಿ ಸು | ಪ್ರೇಮ ಪಡೆ ಹೊತ್ತಾಯಿತು 1 ತಾಲಸಪ್ತವ ಹಣಿಸು | ವಾಲಿ ಮಥನ ಗೈಸುನೀಲ ಜಾಂಬವ ಸುಷೇ | ಣಾದಿಗಳ ಕರೆ ಕಳಿಸು |ಶ್ರೀಲೋಲನಾಜ್ಞೆಯಲಿ | ಕಾಲಮೀರುವ ಮುನ್ನಲೋಲ ಲೋಚನೆ ವಾರ್ತೆ | ತಿಳುಹ ಬೇಕಯ್ಯಾ 2 ಬಿಂಕ ಮುರಿಯಲಿ ಬೇಕು |ಲಂಕಾಪುರದೊಳು ಮಾತೆ | ಗಂಕವೀಯಲಿ ಬೇಕುಅಂಕಕಾರನು ರಾಮ | ನಂಕೆ ಸಲಿಸಲಿ ಬೇಕು 3 ಶರಧಿ ಬಂಧಿಸಬೇಕು | ಧುರವ ಜೈಸಲು ಬೇಕುವರ ಭೂಮಿ ಜಾಕೃತಿಯ | ತ್ವರ ತರಲಿ ಬೇಕುವರ ವಿಭೀಷಣನಿಗೆ | ಅರಸುತನ ಕೊಡಬೇಕುಮರಳಿ ಅಯೋಧ್ಯಗೆ | ತೆರಳ ಬೇಕಯ್ಯಾ 4 ಉರ ರಕ್ತ ಕುಡಿಬೇಕುಧರಣಿ ಭಾರವ ನಿಳುಹಿ | ತರುಣಿ ಶಿಖೆ ಬಿಗಿಬೇಕು 5 ಅದ್ವೈತ ಗೆಲಬೇಕುಬುದ್ಧಿಪೂರ್ವಕವಾಗಿ | ಸಿದ್ದ ಮುನಿ ಜನರಿಂದಮುದ್ದುಕೃಷ್ಣನ ಪೂಜೆ | ವಿಧಿಸಲೀ ಬೇಕೂ 6 ಸಾರ ಗ್ರಂಥವ ರಚಿಸಿಮೂರ್ಮೂರು ಭಕುತಿಲಿ | ಹರಿಯ ಪೂಜಿಸಬೇಕು |ಮೂರ್ಲೋಕ ದೊರೆ ಗುರು | ಗೋವಿಂದ ವಿಠಲನಸಾರ್ವಕಧಿಪತಿಯೆಂದು | ಸಾರಲೀ ಬೇಕೂ 7
--------------
ಗುರುಗೋವಿಂದವಿಠಲರು
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು