ಒಟ್ಟು 337 ಕಡೆಗಳಲ್ಲಿ , 67 ದಾಸರು , 322 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಲಾಟದಲ್ಲಿ ಇಡುವನೋ ಕಾವನು ಅವನನು ನಮ್ಮ ಪವಮಾನನೊಡೆಯನು ವಾಮ ಉದರದಲ್ಲಿ ಯಾವಾನಲೂ ಇಟ್ಟು ಮೆರೆಯುವನೋ ಅವನ ಗೊವತ್ಸ ನ್ಯಾಯದಿ ಕರವನು ಪಿಡಿವನು ಗಧಾಧರನು ಹಾವನ್ನೆ ಹಾಸಿಗೆ ಮಾಡಿಕೊಂಡ ಶ್ರೀಧರನ ಸ್ಥಾನದ ಕೆಳೆಗೆ ಪವಮಾನಿಗುವ ಮತಾ ಎರಡು ಗಧಾಯುಧ ಧರಿಸಲು ಪಾವನನಂತಾದವನು ಅವರ ದುರಿತಕಾನನಕೆ ಸಾವು ಹುಟ್ಟಿಲ್ಲದ ಪರಮಪುರುಷನ ಈ ಆಯುಧವ ಅವನು ವಾಮಸ್ತನದಿ ತಾನೊಮ್ಮೆ ಇಕ್ಕುವನೋ ಸಾನು ಹುಟ್ಟುಗಳಿಂದ ದೂರಗೈಸುವ ಗುರು ಕಾಳೀಮರ್ಧನಕೃಷ್ಣ 4 ಪದ್ಮ ಮುದ್ರೆಯನ್ನು ಭಕುತಿ ಪೂರ್ವಕವಾಗಿ ಹೃತ್ ಪದ್ಮದಿ ಬಂದು ಧರಿಸಲುಬೇಕು ದಕ್ಷ ಭುಜದ ಕೆಳೆಗೆ ಪದ್ಮಂಗಳೆರಡನ್ನು ದಕ್ಷ ಉದರಕೆಳೆಗೆ ಪದ್ಮವೆ ಒಂದನ್ನು ವಕ್ಷಸ್ಥಾನದಿ ಒಂದು ಪದ್ಮವ ಧರಿಸಲು ಭಕ್ತವತ್ಸಲನಾದ ಪದ್ಮ ರಮಣಗುರು ಕಾಳಿಮರ್ಧನಕೃಷ್ಣ ಪೊಳೆವಾ 5
--------------
ಕಳಸದ ಸುಂದರಮ್ಮ
ಲಾಲಿ ಆಡಿದ ರಂಗ ಲಾಲಿ ಆಡಿದ ಪ. ಬಾಲೆ ರುಕ್ಮಿಣಿ ದೇವೇರೊಡನೆ ಮೂರು ಲೋಕನಾಳ್ವ ದೊರೆಯುಅ.ಪ. ಸಾಧು ಮಚ್ಚಕಚ್ಚಪರೂಪನಾಗಿ ಭೇದಿಸಿ ತಮನ ಕೊಂದುವೇದವನ್ನು ಮಗನಿಗಿತ್ತು ಭೂದೇವಿಯರೊಡನೆ ಕೃಷ್ಣ 1 ಅಮೃತ ಬಡಿಸಿ ಸತ್ಯಭಾಮೆಯರೊಡನೆ ಕೃಷ್ಣ2 ವರಾಹ ರೂಪನಾಗಿ ಆದಿ ಹಿರಣ್ಯಕನ ಕೊಂದುಮೇದಿನಿಯ ಮೇಲಕೆ ತಂದು ರಾಧೆಯೊಡನೆ ನಗುತ ಕೃಷ್ಣ 3 ಪುಟ್ಟಬಾಲನ ನುಡಿಯ ಕೇಳಿ ಕೆಟ್ಟ ಕಶ್ಯಪನುದರ ಸೀಳಿಅಷ್ಟಮಂಗಳವಾದ್ಯವಾಗಲು ಅಷ್ಟ ಸ್ತ್ರೀಯರೊಡನೆ ಕೃಷ್ಣ 4 ಸುರರು ಲಕುಮಿಯೊಡನೆ ನಗುತ ಕೃಷ್ಣ 5 ಯುದ್ಧದಲಿ ಕೊಡಲಿ ಪಿಡಿದು ಗುದ್ದಿ ಕ್ಷತ್ರೇರ ಶಿರವ ತರಿದುಗೆದ್ದ ಸಿಂಹನೆನಿಸಿಕೊಂಡು ಪದ್ಮಾವತಿಯ ಕೂಡೆ ಕೃಷ್ಣ 6 ಸೇತುಬಂಧನವನ್ನೆ ಮಾಡಿ ಧೂರ್ತರಾವಣನ್ನ ಕೊಂದುಖ್ಯಾತಿಪಡೆದು ಪುರಕೆ ಬಂದು ಸೀತೆಯೊಡನೆ ರಾಮಚಂದ್ರ 7 ಒಂದು ಏಳು ಎಂಟುಸಾವಿರ ಇಂದುಮುಖಿಯರನ್ನು ಕೂಡಿಮಂದಮಾರುತ ಚಂದ್ರ ಬರಲು ನಂದಗೋಕುಲದ ದೊರೆಯು 8 ಅಂಬರವ ತೊರೆದು ದಿಗಂಬರÀ ವೇಷವನ್ನೆ ಧರಿಸಿಮಂಗಳಾಂಗ ಮಾರಜನಕ ರಂಗನಾಯಕಿಯೊಡನೆ ಕೃಷ್ಣ9 ಅಚ್ಚಮುತ್ತಿನಾಭರಣವಿಟ್ಟು ಲಕ್ಷವಿಲ್ಲದೆ ಹಯವನೇರಿಭಕುತರಿಗೆ ಅಭಯಕೊಡುತ ಭಕ್ತವತ್ಸಲ ಹಯವದನ 10
--------------
ವಾದಿರಾಜ
ವಂದಿಸುವೆನು ನಾ ನರನಾರಯಣ ಭಕ್ತ ಪ- ರಾಧೀನ ನಾನಾರೂಪಿಯೆ ಪ ಈ ಜಗವನೆ ಎತ್ತಿದೆ ವರಾಹನಾಗಿ ಮೂಜಗವನೆ ಅಳೆದ ವಾಮನಮೂರ್ತಿ ಯಾಜಿಪರನು ಕಾಯೋ ಪ್ರಹ್ಲಾದ ಧ್ರುವರೊಲು ಹೇ ಜಗದೋದ್ಧಾರ ಭಕ್ತವತ್ಸಲ 1 ದೇವ ಶ್ರೀಪತಿಯಾಗಿ ಅಸುರರ ಕೊಂದೆ ದೇವಕಿಸುತನಾಗಿ ಕಂಸನ ವಧಿಸಿದೆ ದೇವಜರ ಮೈದುನನಾಗಿ ದೌರ್ಜನ್ಯ ಮುರಿದೆ ದೇವ ಜಾಜಿಪುರೀಶ ದಾಸೋತ್ತಮನೇ 2
--------------
ನಾರಾಯಣಶರ್ಮರು
ವರ್ಷ ವರ್ಧಂತಿಗಳು (ಆಚಾರ್ಯರ 21ನೇ ವರ್ಷದ ವರ್ಧಂತಿ ಸಮಯ) ನಿನ್ನ ನಂಬಿದೆ ಶರದಿಂದುವದನ ಎನ್ನ ಪಾಲಿಸು ವರಕುಂದರದನ ಮುನ್ನ ಪಾತಕಿಯಾದಜಾಮಿಳನು ತನ್ನ ಚಿಣ್ಣನ ಕರೆದರೆ ಮನ್ನಿಸಿದವನೆಂದು ಪ. ನರ ಧ್ರುವಾಂಬರೀಷ ಪ್ರಹ್ಲಾದ ಮುಖ್ಯರನ- ವರತ ನಿನ್ನನಾಧರಿಸಿದರವರ ಪೊರೆದನೆಂಬೀ ಮದಗರುವ ಭಾರದಲತಿ- ಕಿರಿದಾಗಿಹ ಎನ್ನ ಮರೆವುದುಚಿತವೆ 1 ಹತ್ಯ ಪ್ರಮುಖ ದುಷ್ಕøತ್ಯಗಳಿರಲಿ ನಿತ್ಯ ಪರಧನಾಸಕ್ತನಾಗಿರಲಿ ಭಕ್ತವತ್ಸಲ ನಿನ್ನ ಸ್ಮರಣೆ ಮಾತ್ರದಿ ಪಾಪ ಮುಕ್ತಿದೋರಲು ಪೂರ್ಣಶಕ್ತಿಯಾಗಿಹೆ ಎಂದು 2 ತುರುಗಳೆಣಿಸಿದಂತೆ ಕರುಗಳ ಗುಣವ ಮರೆದಂತೆ ಜನನಿ ತನ್ನಯ ಬಾಲನನುವ ಕರುಣಾಳು ನೀ ಮುನಿಸಿಂದ ಕರುಣಿಸದಿರೆ ಎನ್ನ ಪೊರೆವರಿನ್ಯಾರಿಹರುರಗಾದ್ರಿಯರಸ ಕೇಳ್ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸವನುತಾಬ್ಜ ಪಾದಾ | ಪ್ರಮ | ಥೇಶ ಭಕ್ತ ವರದಾ ಪ ಮೀಸಲಹುದು ಶೇಷ ಪದಾ | ಈಶ ಎನ್ನ ಪೊರೆಯೊ ಸದಾ ಅ.ಪ. ದುರಿತ ಸಾರಥಿ ಅಜ | ಮೇರುವೆ ಧ್ವಜ | ಧಾರುಣಿ ಧರ ಥೋರಾ ಧನು |ಶ್ರೀ ಹರಿ ಶರ | ಮೂರೂರುಗಳ್ | ದಾರಿತ ಹರ 1 ವ್ಯೋಮಕೇಶ | ಪ್ರಮಥ ಪೋಷ | ಭೀಮ ನಾ5 | ಮಶಣವಾಸಸ್ವಾಮಿ ತೀರ್ಥ ವಾಸ ದಾಸ | ಕಾಮಿತಾರ್ಥ ಸಲಿಸೊ ಈಶ ||ಭೂಮಿಜೆ ಪತಿನಾಮಮೃತ ಪ್ರೇಮದಸವಿ ನೆ5ುವು ತವಭೌಮನ ಹರ | ಭುಮ5 ಹರಿ | ನಾಮ ಸ್ಕøತಿ ನೇಮವಕೊಡು || ಮೋದ | ಕರುಣಿಸೂವುದು ಭಕ್ತವರದ |ನರಮೃಗ ಹರಿ | ಚರಣಾಬ್ಜವ | ನಿರಂತರ | ಸ್ಮರಿಸುತ್ತಿಹಗೌರೀವರ | ಚರಣಂಗಳಿ | ಗೆರಗುವೆನು | ಪಾಲಿಸು ಹರ 3
--------------
ಗುರುಗೋವಿಂದವಿಠಲರು
ವಾಸುದೇವ ಪ ವಾಸುದೇವ ಅ.ಪ ವಾಸುದೇವ 1 ವಾಸುದೇವ 2 ಮುರಹರ ಶರಣು ಹೊಕ್ಕೆನೊ ಕಾಯೊ ಶ್ರೀಕೃಷ್ಣ ವಾಸುದೇವಶರಣೆಂಬ ಜನರಿಗೆ ಕರುಣಿಪ ಶ್ರೀಕೃಷ್ಣ ವಾಸುದೇವ3 ವಾಸುದೇವ 4 ಶೇಷಶಯನ ನೀ ಪೋಷಿಸೊ ಶ್ರೀಕೃಷ್ಣ ವಾಸುದೇವಭಾಸುರಾಂಗನೆ ಭಕ್ತವತ್ಸಲ ಶ್ರೀಕೃಷ್ಣ ವಾಸುದೇವ5
--------------
ವ್ಯಾಸರಾಯರು
ವಾಸುದೇವ ವಾರಿಜಾಕ್ಷನಾ ಸ್ತುತಿಸು ಮನದಿ ಪ ಸಾಸಿರನಾಮದೊಡೆಯ ಸಕಲಲೋಕಕರ್ತನಾದ ಸುಜನ ಪೋಷಕ ಭಕ್ತವಿಲಾಸ ಅ.ಪ ಪಂಕಜೋದರ ಪರಮ ಪಾವನ ಸರ್ವಜಗವ ಬಿಂಕದಿಂದ ಪೊರೆವ ದೇವನಾ ಶಂಕೆಯಿಲ್ಲದ ದನುಜ ಮರ್ದನನಾದ ತನ್ನ ಕಿಂಕರರÀನು ಬಿಡದೆ ಕಾಯುವಾ ವೆಂಕಟಾದ್ರಿ----ದ ವೇಣುನಾದದಲಿ ಬುಧವಂದ್ಯ ಶಂಕರಾದಿ ದೇವ ದೇವ ಶರಧಿಶಯನ ಶಾಶ್ವತನಾದ 1 -----ಶ್ವ ರೂಪನಾ ಎಂದು ಎಂದಾನಂದ ದಿಂದ ಅನುದಿನ ಚಂದದಿಂದ ---ಸನಾ |----ಭವ ಬಂಧಕವನೆ ಪರಿಹರಿಸುವನಾ ಕಂದ ಕೂಗಲು ಕಂಭದಿಂದಾ ಬಂದ ನಾರಸಿಂಹನ ಮೂರ್ತಿ 2 ----------ಮಹಾನುಭಾವ ಕಂಡ ಮುನಿಗಳಂತರ್ಭಾವನಾ ಕುಂಡಲೀಶÀ ಭೂಷಣ ಪ್ರೀಯನಾಕರ ಘನಾ ಕೋದಂಡಧರ ಶ್ರೀರಾಮನಾದನಾ ಪುಂಡಲೀಕ ವರದಹರಿ-----ತನಾದ ವೇದವೇದ್ಯ ಅಂಡಜನ--------ಹರಿ 'ಹೊನ್ನಯ್ಯ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ವಿಮಲಮಹಿಮನೆ ದಾಸನಾಸೆಪೂರೈಸೊ ಅಮಿತ ನಿಮ್ಮಯ ಬಿರುದು ಸತ್ಯವೆಂದೆನಿಸೊ ಪ ಕಷ್ಟಹರ ನೀನಹುದೆ ದಿಟ್ಟತನ ಕೊಡುಯೆನಗೆ ಶಿಷ್ಟರೊಡೆಯ ನೀನಹುದೆ ಗಟ್ಟಿಮನವ ಪಾಲಿಸು ಇಷ್ಟಪೂರ್ಣ ನೀನಹುದೇ ಕೊಟ್ಟು ರಕ್ಷಿಸೆನ್ನ 1 ದೀನರಾಸ್ಪದನಹುದೇ ಧ್ಯಾನ ದಯೆ ಪಾಲಿಸೈ ಗಾನಲೋಲಹುದೆ ನೀ ಜ್ಞಾನವನು ನೀಡೊ ಮಾನರಕ್ಷ ನೀನಹುದೇ ಅಭಿಮಾನಯೆನದಿರೆನ್ನ ಧ್ಯಾನಿಕಧೇನಹುದೇ ಆನಂದ ನೀಡೊ 2 ನ್ಯಾಯವಂತ ನೀನಹುದೇ ಮಾಯೆಮೋಹವನು ಬಿಡಿಸು ಪಾವನಾತ್ಮ ನೀನಹುದೇ ಸಾವು ಹುಟ್ಟು ಗೆಲಿಸು ಜಯವಂತ ನೀನಹುದೇ ದೇಹಿಯೆನಿಸದಿರಲ್ಪರಿಗೆ ಕಾವದೇವ ನೀನಹುದೇ ಭಾವದ್ವಾಸಿಸೆನ್ನ 3 ಪೃಥ್ವಿ ವ್ಯಾಪಕನಹುದೇ ಚಿತ್ತಶುದ್ಧಮಾಡೆನ್ನ ಸತ್ ಚಿತ್ತ ನೀನಹುದೇ ಸತ್ಸಂಗ ನೀಡೊ ಭಕ್ತವತ್ಸಲನಹುದೇ ಅನಿತ್ಯಗುಣ ಬಿಡಿಸೆನ್ನ ಕರ್ತನು ನೀನಹದೇ ಸತ್ಪಥದೆನ್ನಿರಿಸೊ 4 ಅಸಮಕರುಣಹುದೇ ನೀ ಪುಸಿಗೊಲಿಸಿದಿರು ಎನ್ನ ದೋಷಹರ ನೀನಹುದೇ ಹಸನೆನಿಸು ಎನ್ನ ದಾಸರಭಿಮಾನ್ಯಹುದೇ ಪೋಷಿಸೆಲೊ ತವಪಾದ ಧ್ಯಾನದಿರಿಸೆನ್ನ ಶ್ರೀಶ ಶ್ರೀರಾಮ5
--------------
ರಾಮದಾಸರು
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವೆಂಕಟಪತೇಧೀರ | ಮಾಡೋಯನ್ನ ಸಂಕಟ ಪರಿಹಾರ || ಶಂಕರನ ವರ ಬಿಂಕರಕ್ಕಸಂ ಕಳೆದು ನಿ:ಶ್ಯಂಕನಾದ ಪ ನಿಜಾಂಕ ಗುಣಪೂರ್ಣಾಂಕ ನಿನ್ನಯ ಕಿಂಕರರ ಕಿಂಕರನು ನಾನು | ವರದ ಕೋಮಲ ಶುಭಾಂಗ| ಪಾವನಗಂಗ | ಬೆರಳಲಿಪಡೆದರಂಗ ಉರಗಾದ್ರಿ ಸ್ಥಿರನಿವಾಸ || ಶಿರೆಯೆರಗುತಿರುವರು ಮಹಿಮ ನಿನ್ನದು 1 ಅಂಡಜವಾಹನ ಧೋರೆ | ಪುಂಡಲೀಕವರದನೆ | ಗೋಪಾಲನೇ | ಪಾಂಡವರಕ್ಷಕನೆ | ಹಿಂಡು ದೈವರ ಗಂಡ | ವೀರ ಪ್ರಚಂಡ | ಜಗದುದ್ದಂಡ ಮಂಡಲಾಧಿಪ ದೇವ ದೇವ 2 ಪಾಲಸಾಗರ ಶಯನ | ಪಾವನ್ನ | ಪಾಲಿಸೋ ದಾಸರನ್ನ | ಜ್ವಾಲಾ ಹೆನ್ನೆವಿಠಲ | ಭಕ್ತವತ್ಸಲ | ಲಾಲಿತ ಗುಣಶೀಲ | ಪಾಲಿತಾಮರ ಲÉೂೀಲಗೋಪಿ ಬಾಲಾ ಲೀಲಾ ವಿಶಾಲನಾಯಕ | ಮಂಗಮನೋಹರ3
--------------
ಹೆನ್ನೆರಂಗದಾಸರು
ವೆಂಕಟಾ ಹರಿವಿಠಲ | ಪಂಕಕಳೆದಿವನಾ ಪ ಪಂಕಜಾಕ್ಷನೆ ದೇವ | ಕಾಪಾಡ ಬೇಕೋ ಅ.ಪ. ಅಂಧಕಾರದಲಿಪ್ಪ | ಮಂದಮತಿಯುದ್ಧರವಮಂದರೋದ್ಧಾರಿ ಹರಿ | ಮಾಡಿ ಪೊರೆಯಿವನಾ |ನಂದಮುನಿ ಮತ ತಿಳಿಸಿ | ಸಂದೇಹಗಳ ಕಳೆದುಸಂದೋಹ ಸಂಸ್ಥಿತನ | ಉದ್ಧರಿಸೊ ಬೇಕೋ 1 ಸೃಷ್ಟ್ಯಾದಿ ತವ ಮಹಿಮೆ | ನಿಷ್ಠೆಯಿಂದಲಿ ಭಜಿಪಸುಷ್ಠುಮನವನೆಯಿತ್ತು | ಕಾಪಾಡೊ ಹರಿಯೇಕೃಷ್ಣಮಾರುತಿ ಇವನ | ಕಷ್ಟ ಸಂಚಯ ಕಳೆದುಶ್ರೇಷ್ಠ ತವದಾಸ್ಯದಲಿ | ಇಟ್ಟು ಪೊರೆ ಇವನಾ 2 ಸತ್ಸಂಗ ಸದ್ವ್ಯಸನ | ಸನ್ಮಾರ್ಗದಲಿ ಇಟ್ಟುಕುತ್ಸಿತರ ಸಂಗವನು | ದೊರಗೈ ಹರಿಯೇ ಮತ್ಸ ಕೇತನ ಜನಕ | ಭಕ್ತವತ್ಸಲನಾಗಿವತ್ಸನ್ನ ಪೊರೆವವರು | ಮತ್ತಾರು ಇಹರೋ 3 ಹರಿಗುರುಗಳಾ ಸೇವಾ | ಪರಮ ಪ್ರೀತಿಲಿ ಮಾಳ್ವವರಮತಿಯನೇ ಕೊಟ್ಟು | ಪೊರೆಯ ಬೇಕಿವನಾ |ಹರಿಯ ನಾಮಾಮೃತವ | ನಿರುತದಲಿ ಸವಿದುಂಬಪರಮ ಸೌಭಾಗ್ಯವನೆ | ಕರುಣಿಸೋ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವ ಸ್ವಾತಂತ್ರನೇಭವವನದಿ ಉತ್ತರಿಸಿ | ಪೊರೆಯ ಬೇಕಿವನಾ |ದುರ್ವಿಭಾವ್ಯನೆ ಗುರು | ಗೋವಿಂದ ವಿಠಲನೇದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ವ್ರತವನಲ್ಲದೆ ಅನುವ್ರತ ಮಾಡಬಹುದೇಶತಮುಖ ಸ್ಥಿತನಾದ ದಿವಿಜಪತಿಯ ಪ ದಾನಶೀಲನೆನಿಸಿ ವಿಬುಧರಿಗೆ ಮೃಷ್ಟಾನ್ನಪಾನಗಳುಂಬೋ ಪಂಕ್ತಿಯಲ್ಲಿ ||ದೀನನೊಬ್ಬನು ಬರಲು ದೋಷಿಯಾದವನೆಂದು ಆನನವ ತಿರುಹುವನೇ ಅವನಿಯೊಳಗೇ 1 ಅನ್ನ ಕಾರಣವಾದ ಪರ್ಜನ್ಯದಿಂದಲಿ ಸಕಲಜನರನು ಪರಿತೋಷ ಬಡಿಸಿ ಕೃಪದಿ ||ಚೆನ್ನಿಗನೆ ಈ ಅಲ್ಪ ಪ್ರಾದೇಶಸ್ಥಿತರನ್ನುಬನ್ನ ಬಡಿಸುವರೇನೊ ಘನ್ನ ಮಹಿಮಾ 2 ಭಕ್ತವತ್ಸಲನೆಂಬೊ ಬಿರುದು ನಿನಗೆ ಉಂಟೆಸಖತನದಿ ಬಿನ್ನೈಪೆ ಸಾರ್ವಭೌಮ ||ಭಕುತ ಸುರಧೇನು ಗುರು ವಿಜಯ ವಿಠಲರೇಯಉಕುತಿ ಲಾಲಿಸಿ ವೃಷ್ಟಿಗರಿವುದು ಕರುಣದಲಿ 3
--------------
ಗುರುವಿಜಯವಿಠ್ಠಲರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶೋಭಾನ | ಶೋಭಾನವೆನ್ನಿರೆ ಸುರರಂಗನಿಯರೆಲ್ಲ ಶೋಭಾನವೆನ್ನಿ ಶುಭವೆನ್ನಿ ಪ ಶೃಂಗಾರದ ಗುಣನಿಧಿಯೆ ಬಾ | ಅಂಗಜಜನಕ ಅರವಿಂದದಾಳಾಕ್ಷನೆ ರಂಗಾ ಬಾ || ಭವಭವ ಭಂಗಾ ಬಾ | ದೇವೋತ್ತುಂಗಾ ಬಾ | ಜಗದಂತರಂಗಾ ಬಾ ಹಸೆಯ ಜಗುಲಿಗೆ1 ಪಂಕಜ ಸಂಭವನಯ್ಯ ಬಾ | ಕುಂಕುಮಾಂಕಿತನೆ ಭಕುತ ಕುಮುದ ಮೃಗಾಂಕ ಬಾ || ನಿಷ್ಕಳಂಕಾ ಬಾ ಶಂಖಚಕ್ರಾಂಕ ಬಾ | ಅಹಿಪರಿಯಂಕÀ ಬಾ ಹಸೆಯ ಜಗುಲಿಗೆ 2 ಸಾಮಜರಾಜಾ ವರದಾ ಬಾ | ಸಾಮವಿಲೋಲನೆ ಸದ್ಗುಣ ಶೀಲನೆ ರಾಮಾ ಬಾ || ರಣರಂಗಭೀಮಾ ಬಾ ಹಸೆಯಾ ಜಗುಲಿಗೆ 3 ಅಚ್ಯುತ ಉನ್ನತ ಮಹಿಮನೆ ಯಾದವ ಬಾ | ಘನ್ನ ಮೂರುತಿಯೆ ಸುಪ್ರಸನ್ನಾ ಬಾ ಸಚ್ಚರಿತಾ ಬಾ | ಭಾಗ್ಯ ಸಂಪನ್ನಾ ಬಾ ಜೀವರ ಭಿನ್ನಾ ಬಾ ಹಸೆಯಾ ಜಗುಲಿಗೆ 4 ನಾರಾಯಣ ದಶರೂಪಾ ಬಾ | ಚಾರುಚರಿತಾ ಪ್ರತಾಪ ಬಾ | ಶೌರಿ ಮುರಾರಿಯೆ ನಿಟಿಲ ಕಸ್ತೂರಿಯ ಲೇಪಾ ಬಾ || ನಿತ್ಯ ಸಲ್ಲಾಪಾ ಬಾ ನಮ್ಮ ಸಮೀಪ ಬಾ ಹಸೆಯಾ ಜಗುಲಿಗೆ 5 ವಾಸುದೇವ ಮುಕುಂದಾ ಬಾ | ಸಾಸಿರನಾಮ ಗೋವಿಂದಾ ಬಾ | ಕೇಶವ ಪುರುಷೋತ್ತಮ ನರಸಿಂಹ ಉಪೇಂದ್ರ ಬಾ || ಗೋಪಿಕಂದಾ ಬಾ | ಬಹುಬಲ ವೃಂದಾ ಬಾ | ಅತಿಜವದಿಂದಾ ಬಾ ಹಸೆಯಾ ಜಗುಲಿಗೆ 6 ಪರತತ್ವದಿ ಅತಿ ಚಿಂತಾ ಬಾ | ಪರಬೊಮ್ಮನೆ ಅತಿ ಶಾಂತಾ ಬಾ | ಪರಮಾತ್ಮನೆ ಪರಿಪೂರ್ಣ ವಿಭೂತಿವಂತಾ ಬಾ || ಅಖಿಳ ವೇದಾಂತಾ ಬಾ | ರುಕ್ಮಿಣಿಕಾಂತಾ ಬಾ | ಸದ್ಗುಣವಂತಾ ಬಾ ಹಸೆಯಾ ಜಗುಲಿಗೆ7 ತ್ರಿದಶಗುಣನುತ ವಿಲಾಸಾ ಬಾ | ಮಾಧವ ಶ್ರೀಧರನೆ ಸುನಾಸಾ ಬಾ || ಸಿರಿಮಂದಹಾಸಾ ಬಾ | ಭಕುತ ಉಲ್ಲಾಸಾ ಬಾ | ಶ್ರೀ ಶ್ರೀನಿವಾಸಾ ಬಾ ಹಸೆಯಾ ಜಗುಲಿಗೆ8 ಕೃಷ್ಣವೇಣಿಯ ಪಡೆದವನೆ ಬಾ | ರಥ ಹೊಡೆದವನೆ ಬಾ | ಕೃಷ್ಣೆಯ ಕಷ್ಟವ ನಷ್ಟ ಮಾಡಿದ ಕೃಷ್ಣಾ ಬಾ || ಯದುಕುಲ ಶ್ರೇಷ್ಠ ಬಾ | ಸತತ ಸಂತುಷ್ಟ ಬಾ | ಉಡುಪಿಯ ಕೃಷ್ಣ ಬಾ ಹಸೆಯಾ ಜಗುಲಿಗೆ 9 ಎಲ್ಲರೊಳಗೆ ವ್ಯಾಪಕನೆ ಬಾ ಬಲ್ಲಿದ ದೊರೆಗಳ ಅರಸನೆ ಬಾ | ನಾ ಎಲ್ಲಿ ನೋಡಲು ಪ್ರತಿಗಾಣೆ ನಿನಗೆ ಸಿರಿನಲ್ಲಾ ಬಾ || ಅಪ್ರತಿಮಲ್ಲ ಬಾ ಭಕ್ತವತ್ಸಲಾ ಬಾ | ವಿಜಯವಿಠ್ಠಲ ಬಾ ಹಸೆಯ ಜಗುಲಿಗೆ10
--------------
ವಿಜಯದಾಸ
ಶೌರಿ ನೀನು ಪಾದ್ಯ ಶುಕ ಬಿಂಬ ಪ ನಿತ್ಯ ವಸ್ತುವು ನೀನು ನಿತ್ಯರಲಿ ನೀ ನಿತ್ಯ ನಿತ್ಯಸುಖ ಪರಿಪೂರ್ಣ ಸತ್ಯ ಕೃತ್ಯ ಭೃತ್ಯಪಾಲಕರಲ್ಲಿ ಸಮರಿಲ್ಲ ನಿನಗಿನ್ನು ಭಕ್ತವತ್ಸಲ ಎನ್ನ ಯುಕ್ತಿಯಲಿ ಕೈಪಿಡಿಯೊ 1 ಕರ ಪೊಂದಿ ದುಮ್ಮನವ ಬೆಳೆಸಿದೆನೊ ಅವಶನಾಗಿ ನಿರ್ಮಮರದೇವ | ತ್ವದಾಸ್ಯ ಪಾಲಿಸು ಎನಗೆ ಕರ್ಮನಾಮಕ ನೀನೆ ಸದ್ಧರ್ಮಕಾರಕನೆ 2 ಎನ್ನಲ್ಲಿ ನಿನ್ನ ಕ್ರಿಯ ಅನುಭವದಿ ತಿಳಿಸೆನಗೆ ಅನ್ಯುಪಾಯವು ಇಲ್ಲ ಅಭಯಪದಕೆ ಪೂರ್ಣಪ್ರಜ್ಞರ ಗುರುವೆ ಜಯೇಶವಿಠಲ ಎನ್ನ ಮನ ಒಡಲಲ್ಲಿ ನಿನ್ನ ಮೂರ್ತಿಯ ತೋರೊ 3
--------------
ಜಯೇಶವಿಠಲ