ಒಟ್ಟು 2786 ಕಡೆಗಳಲ್ಲಿ , 117 ದಾಸರು , 2021 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆಯರಸನಾಡಿದ ಆಟನೋಡಿ|ನಲಿದಾಡಿ| ಬಂದರಜಮುಖ್ಯರೋಡಿ|ಬಹುಜನ ಕೂಡಿ ಪ ಅರುಣ ತಳದಿರಂಜಿಪ ದ್ವಯ|ಚರಣದಿಂದ ಕಾಳಿ ಅಹಿ| ವರನಸಿರವ ಮೆಟ್ಟಿಸೂರ್ಯ|ಕಿರಣದಂತೆ ಪೊಳೆವಾ| ಸ್ಪುರಣಗೆಜ್ಜಯ ಝಣ ಝಣ|ಝಣಕು ಝಣಕೆಂಬ ತೆರದಿಂದ| ಕರುಣ ಧಿಗಿ ಧಿಗಿಯೆಂದು|ವಾರುಣದಲಿ ಕುಣಿಯೇ 1 ವೀಣೆಯಲಿತಾಸರಿಗ ಮಪಧನಿ|ಸೆಂಬಮೆಟ್ಟಿಕೆಯೊಳ| ತ್ರಾಣದಿಂದ ಝಿಂ ಝಿಂ ಝಿಂ ಝಿಂ ಕೆನಿಪ ದ್ವನಿಯಗಳನು| ಮಾಣುತಲಿ ಸಿರಿರಾಗ ಘನಮಲಾಹರ ಮೊದಲು| ವಾಣಿಪತಿಸುತ ಪಾಡಿದ ನಾನಾ ರಾಗದಲಿ 2 ಅಂಬುಜಾಕ್ಷಪ್ರಿಯನಾದ|ಅಂಬುಜಭವ ಪದ ಕರ್ತ| ಕುಂಭಿಯೊಳಹಸ್ತಿನಿಕು|ರಂಬಾರಿ ಕೋಟಿ ದ್ವನಿ| ವೆಂಬಂತೆ ಕಹಳೆಗಳು|ತುಂಬಿ ಪೂರೈಸಿದನು| ಭುಂ ಭುಂ ಭುಂ ಭುಂ|ಭುಂ ಮೆಂದು ಗಂಭೀರ ಸಪರದಿ 3 ತತ್ತಥೈಯ್ಯಾ ಥೈಯ್ಯಾ ಥರಿಕೆಂದು|ಧತ್ತೆರಿಕುಥಲಿ| ಒತ್ತಿ ಖಿಣಿ ಖಿಣಿ ಖಿಣಿಲೆಂಬ|ಮೊತ್ತತಾಳು ವಿಡಿದು| ಮತ್ತ ಏಕತಾಳ ಝಂಪೆ|ತಾಳ ಅಟ್ಟತಾಳಗಳು| ಉತ್ತುಮದಾ ಕರದಿ ಹರ ಅರ್ಥಿಯಲಿ ನಿಂದಾ 4 ಇಂದೀವರಜ ಮದ್ಯಸ್ಥಲ ಒಂದು ನೆಗೆದು ಜವದಿಂದಾ| ದಂ ದಂ ದಂ ದಂ ದಮುಕೆಂದು|ಛಂದದಿ ಮುಟ್ಟಿದನು| ಧಿಂಧಿಂಧಿಂಧಿಂಧಿಮಿಕೆಂದು|ದುಂಧುಂಪೊಡದರು ಸುರರು| ತಂದೆ ಮಹಿಪತಿ ನಂದನ ವಂದ್ಯನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರೇಶ ಭಾಗವತ ಎಂದು ಬರುವನು ಇಲ್ಲೆ ಮಂದಸೂನನುನಮಗೆ ಮುಂದೆ ಗತಿಯೇನುದ್ಧವಾಒಂದು ಕಾರ್ಯವು ಬಾರದಂದಿನಾದಿಈಶ ಸುರಸುಂದರನು ಪೋದನಲ್ಲೋ ಉದ್ಧವಾ ಪ ಪತಿ ಸುತರ ಪರಿಚರಿಸುತಿಹ ನಮ್ಮಮರುಳು ಮಾಡಿದನುದ್ಧವಾ 1 ತೊರೆದು ಮನೆ ಧನಗಳನೆ ಬರಲು ಬಳಿಯಲಿ ಭಾಳತರಲಿ ಮಾಡಿದನುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 2 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆತುರುಬಿನೊಳಗಿಟ್ಟುದ್ಧವಾಸರಸ ಸೌಂದರ್ಯಕ್ಕೆ ಮರುಳಾದನಿವನೆಂದುಗರುವ ಮಾಡಿದೆವುದ್ಧವಾಅಂತು ನಮ್ಮನು ಬಿಟ್ಟು ಮರೆಯಾಗಿ ರೋಧಿಸಲುಭರದಿ ಬಂದನುದ್ಧವಾ 3 ಕೋಲು ಕುದುರೆಯನೇರಿ ಬಾಲಕರಕೂಡಿ ತಾ ಕೇಳಿ ಮಾಡಿದನುದ್ಧವಾಲೀಲೆ ಚತುರರ ಸದೃಶ ಬಾಲೆಯರಕೂಡಿ ತಾ ಕೋಲನಾಡಿದನುದ್ಧವಾ4 ದಧಿ ಬೆಣ್ಣೆ ನಮ್ಮಾಲಯದೊಳುತಿಂದು ಭಾಳ ಮೋಹಿಸಿದನುದ್ಧವಾ 5 ಗರಳ ಹರಿಸಿನುದ್ಧವಾಉರಿಯ ನುಂಗುತ ಮುಖದಿ ಬೆರಳೊಂದುಹತ್ತೊಂದು ವರುಷ ಇಲ್ಲಿದ್ದುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 6 ಒಂದಿನಾದರೂ ಒಮ್ಮೆ ಮನದಿ ಗೋಕುಲದವರಇಂದು ಸ್ಮರಿಪನೆ ಉದ್ಧವಾಚಂದ್ರ ವದನೇರ ಸ್ನೇಹ ಕೂಡಿ ಪುರದೊಳು ನಮ್ಮನಿಂದು ಮರೆತನೆ ಉದ್ಧವಾ 7 ಬಂದು ಬಳಗವ ಬಿಟ್ಟು ಮಧುರೆಗೆಲ್ಲರುನಿನ್ನ ಹಿಂದೆ ಬರುವೆವೊ ಉದ್ಧವಾಕಂದರ್ಪ ಪಿತನಿವನ ಸ್ಮರಿಸುತಲೆ ದೇಹದಿಪ್ರಾಣವೊಂದೇ ಉಳಿದಿಹುದುದ್ಧವಾ8 ಪರಮ ವೈಕುಂಠನು ಸರತಿಯಲೆ ತೋರಿಸುತಮರುಳು ಮಾಡಿದನುದ್ಧವಾಗಿರಿಗಿರಿ ಝರಿಯೊಳಗೆ ಚರಿಸಿ ಚಿನ್ನದ ಚರಯಗುರುತು ಮಾಡಿದನುದ್ಧವಾಅರಿಯಲಿಲ್ಲವೋ ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 9
--------------
ಇಂದಿರೇಶರು
ಇಂದಿರೇಶನ ಪದದ್ವಂದ್ವಕಮಲ ಭಜಿಪ ಶ್ರೀ ಗುರುವರ ಭೂಪ ಪ. ಬಂದೆನು ನಿಮ್ಮ ಪದ ಸಂದರುಶನಕೀಗ ನೀಗಿರಿ ಭವರೋಗ ಅ.ಪ. ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು | ಕೃಪೆಗೈಯ್ಯಲಿ ಬೇಕಿಂದು 1 ಮುಖ ಕಮಲದಿ ಹೊರಡುವ ವಾಕ್ಸರಣಿಗಳು | ಗಂಗಾ ಪ್ರವಾಹಂಗಳು ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ | ಭವ ತುಂಡೆ ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುಜ್ಞಾನವ ನೀಡುವುದು 2 ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು ಪರಿ ಕರುಣಿಪುದು | ನ್ಯಾಯವೆ ನೂಕುವುದು ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3 ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4 ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು | ರಮಿಸುವ ನಿತ್ಯದೊಳು ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5
--------------
ಅಂಬಾಬಾಯಿ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಇಂದು ಶ್ರೀರೂಪವ ಛಂದಾದಿಂದಲಿ ನೋಡುವೆನು ಆನಂದ ಪಡುವೆನು ಪ. ಬಿಳಿಯ ಕುಪ್ಪುಸವಾ ತೊಟ್ಟಳು ನೋಟವ ನೋಡುವಳು 1 ಪಾದಾಕೊಪ್ಪುವ ಋಳಿ ಪೈಜಣಿ ಕಾಲುಂಗರದಂದಾ ಸಾಲಿನೊಳಗೆ ಅಘಾದ ಪರಿಪೂರ್ಣ 2 ಗಳದಿ ಕಠಾಣೆಯಕಟ್ಟಿ ಅದರ ಮೇಲ್ ಗೆಜ್ಜೆಯ ಟೀಕಿ ಪುಥಲಿಸರ ಚಂದ್ರಹಾರಗಳು ವೈಯಾರದಿ ಬರುವೋಳೂ 3 ಮುದ್ದು ಮುಖಕ್ಕೆ ತಕ್ಕ ಮುಖುರೆ ಬುಲಾಕು ದ್ರಾಕ್ಷಝೂಲರ ಬುಗುಡಿಯ ಬೆಳಕು ಆನಂದ ಸುರಿಯೋಳು ಇವಳು ಮನಕ 4 ಚವರಿ ಚಂದ್ರಾ ಜಡಿ ಭಂಗಾರದ ರಾಗುಟಿ ಬೈತಲ ಮುತ್ತನಿಟ್ಟ ಹೇಳ ಭಂಗಾರ ಗೊಂಡೆವ ಕಟ್ಟಿ ಇವಳ್ಯಾರು ಧಿಟ್ಟಿ 5 ಮಂದರ ಮಲ್ಲಗಿ ಸುಗಂಧಿಯು ತ್ಯಾದಿಗಿ ನೂತನದ ಪಾರಿಜಾತವನ್ನು ಇಂದು ತಾಂಬೂಲ ಮೆಲುವುತ ಮುಗುಳು ನೆಗಿಯು ನಗುತ 6 ತರುಣಿಯೆನ್ನದಿರು ಹರಿಯಾ ರೂಪಾವ ವ್ಹಾ ನೋಡು ಛಂದಾಮನ ಕಾನಂದಾ 7 ನೀನು ಶ್ರೀರಂಗನಾಯಕನೆ ಕಾಳಿಂಗಶಯನನೆ ನರಶಿಂಗನೋ 8 ಯೇಷ್ಟುನೋಡಿದರು ಈ ಧಿಟ್ಟ ಮೂರುತಿಯ ದೃಷ್ಟಿ ತಾಕುವ ದಯ್ಯ ಕಾಳಿಯ ಮರ್ಧನ ಕೃಷ್ಣರಾಯಾ 9
--------------
ಕಳಸದ ಸುಂದರಮ್ಮ
ಇಂದು ಆರತಿ ತಂದು ಬೆಳಗಿರೆ ಇಂದಿರಾವರಗೆ ಮಂದರಧರಗಿಂದು ಪ ಸಿಂಧು ಶಯನಗೆ ಕುಂದರದನೆ ಅ.ಪ ವಾಹನ ವಂದಿತ ದಶ ಕಂಧರಾಂತಗೆ ಕುಂದರದನೆ ವಂದಿಸುವರ ಬಂಧ ಬಿಡಿಶ್ಯಾ ನಂದಗರಿವಗೆ ಮಂದಗಮನೆ 1 ಅಂಗನೆಯರು ಶೃಂಗಾರದಲಿ ಸಂಗೀತ ಪ್ರಿಯಗೆ ಭೃಂಗಾಲಕಿ ಗಂಗಾಪಿತ ಮಂಗಳಾಂಗ ವಿ- ಹರಿಗ ವಾಹನಗೇ ತಿಂಗಳಮುಖಿ 2 ನಾರಿಯಳ ನುದ್ಧಾರ ಮಾಡಿದ ಚಾರು ಚರಣಗೆ ನಾರಿ ಮಣಿಯೆ ಸೇರಿದವರ ಪೊರೆವ ಕಾರ್ಪರ ನಾರಶಿಂಹಗೆ ಭೂರಿಮಹಿಮಗಿಂದು 3
--------------
ಕಾರ್ಪರ ನರಹರಿದಾಸರು
ಇಂದು ಇಂದು ಇಲ್ಲಿ ಚಂದ್ರವದನೆ ಇಂದಿರಾದೇ'ಗಂಡುಗಲಿಯ ವೇಶತಾಳಿ ಗೆಂಡಾಸುರನ ಕೊಂದು ನಗುತಅ.ಪಜಗದೀಶನ ಮಡದಿಯಂತೆ ಮಗಗೆ ನಾಲ್ಕು ಮುಖಗಳಂತೆಮಗನ ಮಗ ಬೈರಾಗಿಯಂತೆ ಅಗಜೆ ಅವಗೆ ಒಲಿದಳಂತೆ 1ಹರಿಯ ಹೃದಯದಲ್ಲಿ ಸದಾ ಅಗಲದೆ ತಾ ಇರುಳಂತೆಆದಿಮಾಯಾ ಶಕ್ತಿಯಾಗಿ ಜಗದ ವ್ಯಾಪಾರ ಮಾಡುವಳಂತೆ 2ಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರಸೇವೆಸಾಟಿಇಲ್ಲದೆ ಮೂಡಿ ಪೂರ್ಣ ನೋಟದಿಂದ ಸುಖಿಪಳಂತೆ 3ಛಕ್ರಚಾಮರ ವ್ಯಜನ ಪರ್ಯಂಕ ಪಾತ್ರರೂಪದಲ್ಲಿನಿಂತುಚಿತ್ತಚರಿತನಾದ ಹರಿಯ ನಿತ್ಯ ಸೇವೆ ಮಾಡುವಳಂತೆ4ಗಂಡ ಹೆಂಡಿರ ಜಗಳವಂತೆ ಕೊಲ್ಹಾಪುರದಿ ಇರುವಳಂತೆಗಂಡ ವೈಕುಂಠ ಮಂದಿರಬಿಟ್ಟು ವೆಂಕಟಗಿರಿಯಲಿ ಇರುವನಂತೆ5'ೀರಪುರುಷ ವೇಷವಂತೆ ಕ್ರೂರ ದೈತ್ಯನ ಸೀಳಿದಳಂತೆಯಾರಿಗು ಗೊತ್ತಾಗದಂತೆ ರಾತ್ರಿ ಊರೊಳಗೆ ಬರುವಳಂತೆ 6ಭಾರತಹುಣ್ಣಿಮೆ ಜಾತ್ರಿಯಂತೆ ಭಾರಿಜನರು ಕೂಡುವರಂತೆಭಾರಿ ಡೊಳ್ಳು ಹೊಡಿವರಂತೆ ಭೂಪತಿ'ಠ್ಠಲ ನಗುವನಂತೆ 7ಹನುಮಂತದೇವರು
--------------
ಭೂಪತಿ ವಿಠಲರು
ಇಂದು ನೀ ಕರೆದು ತಾರೆ ಬೇಗನೆ ಪೋಗಿ ಚನ್ನವೆಂಕಟರಾಯನ ಮೊನ್ನೆ ಆಡಿದ ಮಾತು ಒಂದೂ ನಿಜವಲ್ಲಾ ರನ್ನೆ ಈಗಲೆಪೋಗಿ ssssssಸನ್ನೆ ಮಾಡಿಬಾರೆ ಪ. ಅಂಗಜನಯ್ಯನ ಕಾಣದೆ ನಾನು ಹಿಂಗಿರಲಾರೆ ನಮ್ಮಾ ಕಂಬುಕುಚದ ಬಾಲೆ ರಂಗನಾ ಕರತಾರೆ ರಂಗು ಮಾಣಿಕದಹರಳುಂಗುರ ಕೊಡುವೆನು 1 ಕಾಲಿಗೆ ಎರಗುವೆನೆ ಕೋಮಲಮುಖಿ ಆಲಸ್ಯ ಮಾಡದೆಲೆ ನೀಲಕುಂತಳನೀರೆ | ಲೋಲನ ಕರತಾರೆ ವಾಲೆಮೂಗುತಿ ಕಂಠಮಾಲೆಯ ಕೊಡುವೆನು 2 ಮರದಿರಲಾರೆನಮ್ಮಾ ಬೇಗನೆಪೋಗಿ ನೆರವಂತೆ ಮಾಡು ನೀನು ಯರವುತನವುಬ್ಯಾಡಾಮರೆಯಲಾರೆನೆ ನಿಮ್ಮಕರವಪಿಡಿವೆ ಹೆಳವನ ಕಟ್ಟೆರಂಗೈಯ್ಯನ3
--------------
ಹೆಳವನಕಟ್ಟೆ ಗಿರಿಯಮ್ಮ
ಇಂದು ಭಕ್ತರು ಬಂದರೆಂದು ಗೋವಿಂದ ತಾ ನಲೆದಾಡಿದ ಗೋಪಾಲ ತಾ ನಲೆದಾಡಿದ ಪ. ಹರಿಯು ಆಡಿದ ಮಾತು ದೊರೆ ಧರ್ಮನು ಕೇಳಿಕರುಣಾಳು ನಿಮ್ಮ ಕೃಪೆಯಿಂದ ಕರುಣಾಳು ನಿಮ್ಮ ಕೃಪೆಯಿಂದಪರಮ ಆಶೀರ್ವಾದ ಇರಲುಂಟು1 ಮುತ್ತಿನ ಮಂಚದ ಹತ್ತಿಲೆ ಸಾಲಾಗಿಮತ್ತ ಪಾಂಡವರು ಕುಳಿತರುಮತ್ತ ಪಾಂಡವರು ಕುಳಿತರು ಹರುಷದಿಭಕ್ತವತ್ಸಲನ ಮುಖನೋಡಿ 2 ಹಸಿರು ಪಚ್ಚವ ಬಿಗಿದ ಕುಸುರು ಸಿಂಹಾಸನದೇಶಕೆಲ್ಲ ಬೆಳಕು ಎಸೆಯುತದೇಶಕೆಲ್ಲ ಬೆಳಕು ಎಸೆವೊ ಸಿಂಹಾಸನದಿವಸುಧಿಪಾಲಕರು ಕುಳಿತರು 3 ಇಂದ್ರಾದಿಗಳು ಮುನಿವೃಂದ ಸಹಿತಾಗಿ ಬಂದು ಒಂದೆ ಮನದಲೆ ಕುಳಿತರು ಒಂದೆ ಮನದಲೆ ಕುಳಿತರು ದೇವಕಿನಂದನ ನೋಡಿ ಹರುಷಾಗಿ 4 ರನ್ನ ಮಾಣಿಕ ಬಿಗಿದ ಹೊನ್ನಮಂಚಕೆಹೊಂದಿ ಕನಿ ಸುಭದ್ರೆ ದ್ರೌಪದಿಕನಿ ಸುಭದ್ರೆ ದ್ರೌಪದಿ ಕುಳಿತರುಚನ್ನ ಕೃಷ್ಣಯ್ಯನ ಮುಖನೋಡಿ5 ಚಿತ್ರ ವಿಚಿತ್ರದ ರತ್ನಗಂಬಳಿ ಮ್ಯಾಲೆಪುತ್ರರ ಸಹಿತ ಹರುಷದಿಪುತ್ರರ ಸಹಿತ ಹರುಷದಿ ಕುಳಿತರು ಭಕ್ತವತ್ಸಲನ ಮುಖ ನೋಡಿ 6 ಸಾಲು ದೀವಿಗೆಯಂತೆ ಬಾಲೆಯರುಕುಳಿತಾರೆ ಬಾಲರ ಸಹಿತ ಹರುಷದಿಬಾಲರ ಸಹಿತ ಹರುಷದಿ ರುಕ್ಮಿಣಿ ನಿಂತಿಹಳು ಲೋಲ ರಾಮೇಶನ ಮುಖನೋಡಿ7
--------------
ಗಲಗಲಿಅವ್ವನವರು
ಇದು ಮುಖ್ಯಸಾರ ಮನುಜರಿಗೆ ಪ ಇದು ಮುಖ್ಯಸಾರವೆಂದೊದರುತಿಹುದು ವೇದ ಸದುಮಲಾತ್ಮಕನಾದ ಪದುಮಾಕ್ಷನಲಿ ಭಕ್ತಿ ಅ.ಪ ಕೇಳಿಪೇಳುತಮನದಿ ತಾಳಿ ಸೇವಿಸಿ ಪೂಜಿ- ಸೋಲಾಡುತೊಂದಿಸಿ ಕಾಲವ ಕಳೆಯುವ 1 ದಾಸ್ಯಸಖ್ಯಾತ್ಮನಿವೇದನಗಳಿಂದ ಆ- ಲಸ್ಯವಿಲ್ಲದೆ ಪರಮಾತ್ಮನ ತಿಳಿಯುವ 2 ತೃಟಿಕಾಲವಾದರು ನಟಿಸದೆ ಮಾಯದಿಹಟದಿ ಶ್ರೀಗುರುರಾಮವಿಠಲನ ಭಜಿಸುವ 3
--------------
ಗುರುರಾಮವಿಠಲ
ಇಂದು ವನಜದಳಾಂಬಕ ದೊರೆಯ ಪ. ಕನಸಿನಲೆ ಕಂಡೆನು ಮನಸಿಜನಯ್ಯನ ದನುಜಸಂಕುಲವನೆಲ್ಲವ ಕ್ಷಣದಿಸವರಿದ ಕಡುಗಲಿರಾಮನ ಅ.ಪ. ವರ ರನ್ನಹಾರ ಕಿರೀಟ ಕೋಟಿತರಣಿಸನ್ನಿಭಸಂಕಾಶ ಕೌಸ್ತುಭ ಶ್ರೀವತ್ಸ ಲಾಂಚಿತವಕ್ಷ | ಕೊರಳೊಳು ಧರಿಸಿರ್ಪ ವರರತ್ನ ಹಾರಂಗಳ್ | ತರುಣಿ ಶ್ರೀ ತುಳಸೀ ವನಮಾಲೆಯಿಂದೊಲಿಯಲ್ | ಪರಮ ಮಂಗಳಮೂರ್ತಿವರದ ಹಸ್ತವನೆತ್ತಿ | ಶರಣಜನ ಮೋಹಿಪ ದುರುಳ ರಕ್ಕಸರ ಬೇರಸವರಿದ ಪಾರಕೀರ್ತಿ | ಅರಿತೆನಾ ತರಳ ಪ್ರಹ್ಲಾದನಂ ಪೊರೆದ ಕರುಣಾಮೂರ್ತಿ 1 ವೇದಪಾರಾಯಣಗೈವ ವರದ್ವಾದಶನಾಮದಿ ಮೆರೆವ ಕೀರ್ತನದಿಂ ಮೈಮರೆವ | ಸಾಧುಸಜ್ಜನವೃಂದ ಭಕ್ತಿಭಾವದಿ ಕೈಕಟ್ಟಿ | ಶ್ರೀಧರಾಚ್ಯುತ ಪಾದ ಸಮ್ಮುಖದಿ ನಿಂದು ಭಜಿಪರ ಪರಮಾದರದೆನೋಡಿ | ಶ್ರೀದೇವಿ ಕೆಲದೋಳ್ ನೆಲಸಿರಲ್ ಮನದಿ ಸಂತಸವು ಮೂಡಿ | ಸಾದರದಿ ಕರೆದಾದರಿಸಿ ಕಾಂಕ್ಷಿತಾರ್ಥವನೀಡಿ | ಮೋದಗೊಳ್ಳುತಿಹ ಶ್ರೀಧರನ ಕಂಡು ಮೈಮರೆದೆನೇನಿವನ ನೋಡಿ 2 ಕನಕಖಚಿತ ರತ್ನಮಂಟಪದ ಮಧ್ಯೆ | ಮಿನುಗುವ ಮಣಿಪೀಠದಿ ವೈದೇಹಿ | ವನಜಾಕ್ಷಿ ಕುಳಿತಿರಲು ಕೆಲದೊಳ್ ಮರುತಾತ್ಮಜ | [ನುನಮಿಸ] (ರ)ಲು ಪರಮಸಂಭ್ರಮದಿ ಸೋದರರು ಸಂಸೇವಿಸೆ | [ವÀನ] ತರಣಿಸುತ ಸಪರಿವಾರ ಸಂಭ್ರಮಿಸೆ, ಶರಣ ವಿಭೀಷ | ಣನು ಜಯಘೋಷವೆಬ್ಬಿಸೆ ವರವಸಿಷ್ಟಾದೈಖಿಲ | ಮುನಿವರ ರಾಶೀರ್ವಚಿಸೆ ಸರಸವಚನವೆರಸಿ ರಘುವರ ವರನೆ ತಾನೆಂದು ತೋರೆ 3
--------------
ನಂಜನಗೂಡು ತಿರುಮಲಾಂಬಾ
ಇದು ಸಮಯ ಜಗದೀಶ ಯಾಕೆ ಸಾವಕಾಶ ಮದಮುಖರ ಮುರಿದೊತ್ತು ಮಾಕಮಲಜೇಶ ಪ. ಕ್ಷೀರಾಬ್ಧಿ ಸುಧೆ ಸುರರ ಸೇರಿತೆಂದಸುರೇಶ ರಾರುಭಟಿಗೊಳೆ ಶಂಬರಾರಿ ಕೆಂಗೆಡಲು ಕಾರುಣ್ಯವಾರ್ಧಿ ಖಗವೇರಿ ಬಂದ ಭಯಕರ ದೋರಿದವನೆಂದರಿದು ಚೀರುವೆನು ನಿನ್ನಿದಿರು 1 ಎಷ್ಟೋ ಪರಿಯಿಂದ ಪರಮೇಷ್ಠಿವಂದ್ಯನೆ ಕೃಪಾ- ದೃಷ್ಟಿಯೆನ್ನಲಿ ನೀನಿಟ್ಟು ಸಲಹುವುದು ಅಷ್ಟಮದಮೋಹದಿಂದೆಷ್ಟಾದರೂ ಬೇಸರದೆ ನಿಷ್ಠೂರ ನುಡಿವ ಮತಿಭ್ರಷ್ಟರ ಮನದಪ್ಪದಕೆ2 ನಿನ್ನ ದಾಸರ ನಿಂದೆ ನೀ ಸಹಿಸದವನೆಂದು ಮುನ್ನ ಮುನಿಗಳು ಪೇಳ್ದ ಮುಖ್ಯ ತತ್ವವನು ಪನ್ನಗಾಚಲನಾಥ ಪಾಲಿಸುವುದುಚಿತ ಸುರ ಮಾನ್ಯ ಮಾನವಕಾವರನ್ಯರನು ನಾ ಕಾಣೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇಂದೆ ಕುಂದುಗಳನು ಹರಿಸು ಪ ಕಂದನಮುಂದಕೆ ಬರುತಲಿ ಚಂದವಾದ ನಿನ್ನಯ ಮುಖ ಚಂದ್ರಮನಂ ತೋರಿ ನೇತ್ರೇಂದ್ರಿಯಕಾನಂದ ಬೀರೈ ಅ.ಪ ಶ್ರೀವರ ನಿನ್ನ ಭಕ್ತರ ಭಾವಿಸುತ್ತ ತಪ್ಪ ಕ್ಷಮಿಸಿ ನೋವಕೊಡದೆ ರಕ್ಷಿಸುವ ಕೃಪಾಳುವು ನೀನೈ ದೇವಕಿನಂದನ ನಿನ್ನಯ ಪಾವನತರ ಪದಪದ್ಮಕೆ ನಾ ವಿನಯದಿ ನಮಿಸಿ ತಳಿವೆ ಹೆಜ್ಜಾಜಿಕೇಶವಾ ಓ ವಿಭೀಷಣಹಿತಕರ ಸಾವಕಾಶ ಮಾಡದೆ ನೀ ಕಾವುದೆನ್ನ ಸಮಯವರಿತು ಸಾಮಗಾನಸನ್ನುತ 1 ಚಿಟ್ಟೆಸ್ವರಕ್ಕೆ ಭವ ಭಯ ಭಂಗ ವರಭಕ್ತೇಷ್ಟ ದಾತಾರ ದೈತ್ಯಾರಿ ವೈಕುಂಠ ಪುರಹರನುತ ಶುಭಗುಣಯುತ ಪರಮಚರಿತ ನಿರುಪಮಪದ ಕು ವರ ಧ್ರುವನಿಗೊಲಿದ ದ್ವಿಜನ ಪೊರೆದ ಕರುಣಾ ಧರಣೀ ಭರಹರಣಾ ಪಾವನಚರಣ ಜಾಜಿಕೇಳುವ 2
--------------
ಶಾಮಶರ್ಮರು