ಒಟ್ಟು 608 ಕಡೆಗಳಲ್ಲಿ , 90 ದಾಸರು , 520 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮನಸಿಗೆ ಬಂತೆ ಪ್ರಾಣನಾಥಾ ಚಿಣ್ಣನೆಂದು ನೋಡದಲೆ ಕರಿಯಲಟ್ಟಿದೆ ವೇಗ ಪ ಸಾಕಿದೆನು ನಿನ್ನ ದಾಸನೆಂದು ತಿಳಿದು ವಿ- | ವೇಕದಿಂದಲಿ ಉಪನಯನ ಮಾಡೀ | ಲೋಕದೊಳಗೆ ಬೆಳಸಿ ಮುದುವೆಯ ಮಾಡಿ ಅ- ನೇಕ ತೀರ್ಥಯಾತ್ರೆ ತಿರುಗಿದವನಾ ಇಂದೆ 1 ಉದ್ಧಾರವಾಗುವೆನು ಕುಲಕೋಟಿ ಸಹಿತೆಂದು ಪದ್ದಿಟ್ಟುಕೊಂಡಿವೈ ಈ ತರಳನ ಸುದ್ದಿ ತಿಳಿಯಗೊಡದೆ ವಿಯೋಗ ಮಾಡಿಸಿದೆ ಇಂದು 2 ಪಾದ ಭಜಿಸುವರಿಗೆ ಭಾಗ್ಯ ಹೆಚ್ಚುಗೊಡದಿಪ್ಪನೆಂದು ಬಿರುದು ಧರಿಸಿ ನಿಚ್ಚ ಮೆರೆವಾ ಮಹಿಮ ವಿಜಯವಿಠ್ಠಲರೇಯ ಅಚ್ಚ ಭಕುತರ ಪ್ರಿಯ ವೈಕುಂಠಕೆ ಇಂದೆ 3
--------------
ವಿಜಯದಾಸ
ನಿನ್ನ ಮರೆದಿಹ ಜನಕೆ ಮಂಗಳವು ಎಂತೋ ಪ ಶರಧಿ ಗೋಪಾಲ ಚಿನ್ಮಯನೆ ಅ.ಪ ಎದೆ ಭುಗಿಲು ಎನ್ನುವುದು ಮದದ ಮನುಜರ ನೋಡಿ ವಿಧಿ ಬರಹ ತಿಳಿಯದೆ ಸರ್ವಜ್ಞರಂತೆ ಮದ ಮತ್ಸರದಿಂದ ಆಯುವ ಕಳೆಯುತ ಮೋದ ಪದವಿ ಬಯಸುವ ಮನುಜ ಪಶುರಾಸಿ ನೋಡಯ್ಯ 1 ತನ್ನಾದಿ ಕೊನೆಗಾಣ ಘನ್ನ ಮೋಹದಿ ಮೆರೆವ ಭಿನ್ನ ಸುಖಮೂಲನ್ನ ಸ್ವಪ್ನದಲಿ ಅರಿಯ ತನ್ನ ವಶಮೀರಿ ಬಹು ಸುಪ್ತಿಯಲಿ ಪೊಂದುವ ಇನ್ನು ಮರಿಯನು ಮನುಜ ತನ್ನ ಸ್ವಾತಂತ್ರ್ಯವ 2 ನಿರುತ ಮೃತ್ಯೋವದನ ಸ್ಥಿತನಾಗಿ ಭೋಗಗಳ ಪರಿಪರಿ ಹಾರೈಪÀ ಸತತ ಬಿಡದೆ ಬರದು ಬಯಸಿದ ಸುಖವು ಒತ್ತಿ ಬರುವುದು ದುಃಖ ಮರತು ಈ ಪರಿಸ್ಥಿತಿಯ ಕರ್ತ ನಾನೆಂಬುವನು 3 ಅಜ್ಞಾನ ತಿಮಿರದಲಿ ಪ್ರಾಜ್ಞ ತಾನೆಂಬುವನು ಪಥ ಸುದ್ದಿ ಸ್ವಪ್ನದಲಿ ಅರಿಯ ಜಿಜ್ಞಾಸೆಗ್ಹೊತ್ತಿಲ್ಲ ಭವಪ್ರವಹ ಪೊಂದಿಹನು ಪ್ರಜ್ಞೆ ಇಲ್ಲದ ಪ್ರಾಜ್ಞಗೆಂತಹುದೊ ಶುಭಪ್ರಾಪ್ತಿ 4 ರೋಗರುಜಿನದಿ ಜೀವವಾಗರವೆ ವಿರೂಪಹುದು ಬಾಗನೊ ಭಗವಂತಗಂಜಿ ಮೂಢ ಯೋಗೀಶರೊಂದ್ಯ ಶ್ರೀ ಜಯೇಶವಿಠಲ ಹ್ಯಾಗಪ್ಪ ಈ ಜನಕೆ ಕಲ್ಯಾಣಸಂಪದವು 5
--------------
ಜಯೇಶವಿಠಲ
ನಿನ್ನ ಮೂರುತಿಯ ತೋರಸೋ | ರಂಗಯ್ಯಾ ಪ ನಿನ್ನ ಮೂರುತಿಯ ತೋರಿಸೆನ್ನ ಕಂಗಳಿಗೆ ದಯ | ವನ್ನು ಬೀರಿ ಭವಭಯ ಬನ್ನವನು ಬಿಡಸೋ ರಂಗಯ್ಯಾ ಅ.ಪ. ಅರುಣನಖಾಂಗುಲಿ ಹೊಳೆವಾ | ಕೋಮಲ ಪಾದಾ| ಎರಡು ಜಂಘೆ ಜಾನುರವಾ |ಕಟಿ ಜಗದು | ದರನಾಭಿ ಸಿರಿವತ್ಸವಾ | ಕಂಬುಗ್ರೀವದ | ಕರಚತುಷ್ಟಯ ಮೆರೆವಾ | ಕರುನಗೆದಂತಾ | ಧರಮಿರುಪಕದಪುಶೃತಿ | ಅರಗಂಗಳನಾಸಾ | ಪೆರೆ ನೋಸಳಲಳಕದಾ ರಂಗಯ್ಯಾ 1 ಕೌಸ್ತುಭ ಕೇಯೂ | ರನ್ನು ತೋಳಬಂದಿ ಸ್ಪುರದಾ | ಕಡಗ ಮುದ್ರಾಂ | ಅಂದುಗೆ ಗೆಜ್ಜೆ | ನೀಲ ಪರಿ ಮಂದ ಮತಿಯೆನ್ನದೆ ಕರುಣಿಸಿ ರಂಗಯ್ಯಾ2 ನಿನ್ನ ಕಳೆಗಳ ತೋರಿಸಿ | ಹಮ್ಮಮತೆಯಾ | ಮನ್ನೀನವಗುಣ ಬಿಡಸೆ | ಸಂತರ ಕೈಯಾ | ಅನುದಿನ ಒಪ್ಪಿಸಿ | ಸನ್ನುತ ಮಹಿಪತಿ | ಚಿನ್ನನೊಡೆಯನೇ ಬಹ | ಜನ್ಮ ಜನ್ಮಾಂತರದಲಿ ತನ್ನವನೆಂದೆನಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ ಪ ನಿನ್ನವನಲ್ಲವೆ ನೀ ನೆನ್ನೊಳಗಿಲ್ಲವೆನಿನ್ನ ಭಕುತುನೆಂದು ಮನ್ನಿಸಲೊಲ್ಲೇನೊ ಅ.ಪ. ಹೃದಯದೊಳೆಂಟುದಳ ಪದುಮವುಮುದದಿ ನೀನಿರುವ ಸ್ಥಳಹದನವನರಿತು ನಾ ಸದಾವಕಾಲದಿಸದಮಲ ಭಕುತಿಯನ್ನೊದವಿಸಿ ಸೇವಿಸೆ 1 ಎಂಭತ್ತುನಾಲ್ಕು ಲಕ್ಷ ಜೀವನರಾಶೀ-ಗಿಂಬಿತ್ತು ಕಾಯ್ವದ ಗೊಂಬೆಯ ಮಾಡುವಬಿಂಬ ಮೂರುತಿ ನಿನ್ನ ನಂಬಿದ ನನ್ನನ್ನುತುಂಬ ಮರೆತೆಯೇನೋ 2 ಗದುಗಿನನೊಳ್ಮೆರೆವ ವೀರನಾರಾಯಣಪದವ ನಂಬಿರುವೆ ಪೂರಾವಿಧವಿಧ ಪರಿಕಿಸು ಬದುಕಿಸು ಮುಳುಗಿಸುಬೆದರಿಸು ಕರುಣಿಸು ಕದಲಲೊಲ್ಲೆನು ದೇವಾ 3
--------------
ವೀರನಾರಾಯಣ
ನಿನ್ನೊರೆಗೆ ನಾ ತಿಳಿಯಲಾರೆ ಪ ಪನ್ನಗಾದ್ರಿವಾಸ ಶ್ರೀಹರೆ ಅ.ಪ. ಮಾನವ ನಾನು ಎನ್ನಿಂದ ಸಾಧ್ಯವಿರೆಇನ್ನೂ ಹೆಚ್ಚು ಹೆಚ್ಚು ಭಕುತಿಯನ್ನು ಬೇಡ ಬೇಡ 1 ಬೊಮ್ಮಾದಿ ದೇವತೆಗಳು ಅಮ್ಮ ಲಕುಮಿಯ ಸಹನಿಮ್ಮನ್ನು ತಿಳಿಯರಿನ್ನು ತಿಳಿವ ಹಮ್ಮು ನನಗೇಕೆ ಶೌರೇ 2 ಅನ್ಯಜೀವಿಯಂತರಂಗ ಎಂದೂ ತಿಳಿಯಲಾರೆ ನಾನುಇನ್ನು ಸರಸಿಜಾಮನೊಡಲ ನಿನ್ನ ತಿಳಿವುದೆಂತಹನೇ 3 ಇಷ್ಟೇ ಭಕುತಿಯಿಂದ ನೀನು ತುಷ್ಟನಾಗಿ ಸಲಹಬೇಕುಎಷ್ಟು ಕಷ್ಟಪಟ್ಟರೂ ನಿನ್ನಿಷ್ಟಕೆ ಸರಿ ಹೋಗುವದೆಷ್ಟು 4 ಭಕುತಿಯಲ್ಲಿ ಸತತವಿರಲು ಶಕುತಿಯನ್ನುನ್ನೀಯೊ ಎನಗೆಸಕಲ ಜಗದಿ ಮೆರೆವ ಗದುಗು ವೀರನಾರಾಯಣ5
--------------
ವೀರನಾರಾಯಣ
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನೆ ಕರುಣಿ ದೀನಪಾಲ ದಾನವಾಂತಕನಾಥಬಂಧು ಪ ಕಾಸಾರಕಿಳಿದು ಕರಿಯ ಕಾಯ್ದಿ ಹೇಸದೆ ತರುಣಿ ಮೊರೆಯ ಕೇಳ್ದಿ ಬೇಸರಿಲ್ಲದೆ ದಾಸಜನರ ಆಸೆ ಪೂರೈಸಿ ಪೊರೆದಿ ಪ್ರಭು 1 ಬಾಲಗೈದ ತಪಕೆ ಒಲಿದಿ ಮೇಲುಪದವಿ ಕರುಣಿಸಿದಿ ಕಾಲಗೆ ಕಾಲನಾಗಿ ಮೆರೆವ ಖೂಳರಕ್ಕಸನುದರ ಸೀಳ್ದಿ 2 ನಿಗಮ ತಂದಿ ಭಾರಬೆನ್ನಲಿ ಪೊತ್ತು ನಿಂದಿ ಹಾರೈಸಿ ಕರೆವ ಭಕುತ ಜನಕಾ ಧಾರ ಮಮಪ್ರಾಣೇಶ ಶ್ರೀರಾಮ 3
--------------
ರಾಮದಾಸರು
ನೀನೆ ದಯ ಸಂಪನ್ನನೆಲೋ ದೀನನಾಥ ಜಾಹ್ನವೀ ತಾತ ಪ ವಿಮಲಹೃದಯಭಕ್ತಿ ಜನಕೆ ನಮಿಪೆ ನಿನ್ನ ಪಾದಕಮಲ ವಿಮಲಸುಖದ ಪಥದೋರೋ 1 ಕೊಟ್ಟು ಎನಗೆ ಶಿಷ್ಟಸಂಗ ಇಟ್ಟು ನಿನ್ನ ಭಜನಾನಂದ ನಿಷ್ಠೆ ಭಕುತಿ ನಿನ್ನ ಪಾದ ದಿಟ್ಟ ದಾಸನೆನಿಸಿ ಕಾಯೋ 2 ರಾಕ್ಷಸಾರಿ ಎನ್ನ ಮನದ ಪೇಕ್ಷ ಪೂರ್ತಿಮಾಡಿ ಮೆರೆವ ಮೋಕ್ಷಪುರಿಗೆ ತಲ್ಪಿಸೆನ್ನ ಮೋಕ್ಷದಾಯಕ ಶ್ರೀರಾಮ ಪ್ರಭೋ 3
--------------
ರಾಮದಾಸರು
ನೀನೆ ಪಾಲಿಸೊ ಎನ್ನ ಮಾರುತಿರಾಯ ಪ ನೀನೆ ಪಾಲಿಸೊ ಮಹಾನುಭಾವನೆ ಸದಾ ಙÁ್ಞನ ಭಕುತಿನಿತ್ತು ಮಾನಾದಿ ನೀ ವೇಗ ಅ.ಪ ನಿನ್ನ ಆಧಾರ ಲೋಕಾ ಜನರು ಸದಾ ನಿನ್ನ ಭಜಿಸುವೊರೇಕಾ ಪ್ರಕಾರದಿ ನಿನ್ನ ಸೇವಿಪರನೀಕಾ ಸಂಗಾವಿತ್ತು ನಿನ್ನ ಧ್ಯಾನಿಪ ವಿವೇಕಾ ಮತಿಯನಿತ್ತು ಮನ್ನಿಸೊ ಮಜ್ಜನಕಾ ನಿನ್ನಾ ಭಜಿಪರಿಗೆ ಅನ್ಯಾಲೋಕಗಳುಂಟೆ ಘನ್ನಾ ಹರಿಯ ಲೋಕವನ್ನೆ ಸೇರುವರಯ್ಯಾ 1 ರಂತರ ದೊಳಗಿಹನು ಎಂದು ನಿನ್ನಾ ನಂತ ರೂಪಗಳನ್ನು ಭಜಿಸುವ ಗಂತು ಜ್ಞಾನವನ್ನು ನೀಡುತ ಜನ ರಂತರದಲಿ ನೀನು ನಿಂತು ಪಾಲಿಸಿ ಜೀವರಂತೆ ಗತಿಯನಿತ್ತು ಕಂತುºರಾದ್ಯರ ಸಂತತಿ ವಂದ್ಯನೆ 2 ಸೀತಾರಾಮನ ಪಾದವಾ ಸೇವಿಸಿ ನಿತ್ಯ ಪಾತಕಾಂಬುಧಿಗೆ ದಾವಾನಂತೆ ಜಗದಿ ಈ ತೆರದಲಿ ಮೆರೆವಾನೆಂದು ಈಗ ಸೋತು ನಾ ಬಂದೆ ದೇವಾ ನೀನೇ ಎನ್ನ ಮಾತು ಲಾಲಿಸೊ ದ್ಯುಧವಾ ಮಾತರಿಶ್ವ ನಿಜ ದೂತಾನು ನಾನಯ್ಯ ನೀತ ಗುರು ಜಗನ್ನಾಥವಿಠಲಪ್ರಿಯ 3
--------------
ಗುರುಜಗನ್ನಾಥದಾಸರು
ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ ಮೆಚ್ಚಿದ ಪ್ರಿಯರಾ ಪ ಪ್ರಲ್ಹಾದ ನಾರದ ಪರಾಶರ ಮುನಿ ವಲ್ಲಭ ರುಕ್ಮಾಂಗದಾ ಧ್ರುವರಾ ಉಲ್ಹಾಸದಿಂದಲಿ ಅಂಬರೀಷ ಗಜೇಂದ್ರನಾ ಬಲ್ಲಿದ ಬಲಿ ಗುಣ ಸಾಗರರಾ ಹನುಮ ವಿಭೀಷಣ ಜಾಂಬವ ಅಜಮಿಳ ಮುನಿ ಮುಚಕುಂದಾರ್ಜುನ ಮುಖ್ಯರಾ 1 ಉದ್ಧವ ಉಪಮಾನ್ಯನು ಜನÀದೋಳಧಿಕರಾದಾ ಪುಂಡಲೀಕ ಭೀಷ್ಮರಾ ಭಕುತಿ ವನಧಿಯೊಳು ಮೆರೆವರ ತನವಾದಾ 2 ಶುಕಶೌನಕ ಮುಖ್ಯ ಸಜ್ಜನರಾ | ಪ್ರಕಟದಿ ಮಹಿಪತಿ ನಂದನು ಸ್ತುತಿಸಿದ | ಮುಕುತಿಗೆ ಯೋಗ್ಯ-ನಾ ಮಾಡುವರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನೆಯಿರೋ ಜನರೆಲ್ಲ ಗುಣಯುತನ ಮೂರ್ತಿ ಮಧುಪುರದ ಗಣನಾಥನ ಪ ಫಣೆಯುದರದಿ ಸ್ತುತಿ ತಿರುಗುವನ ಕರದಿ ಪಾಶಾಂಕುಶ ಪಿಡಿದಿಹನ ಪಾದವ ನೆನೆವರ ಭಕ್ತರ ನೋಡಿ ಮರುಗುವನ 1 ಶಿಬ್ಬಲುಂಡಿಗೆಯ ಮೆಲುವವನ ಕಾಲ ಕೊಬ್ಬಿದ ರಕ್ಕಸರಹಲ್ಲ ಮುರಿದವನ ಜಗಕೊಬ್ಬನೇ ಸುರನರ ಸೇವಿತನ 2 ಭಾಸುರ ತೇಜದಿ ಮೆರೆವನ ಒಳ್ಳೆ ಮೂಷಿಕವನೇರಿ ನಲಿದವನ ಅನುದಿನ ಪೊರೆವವನ 3
--------------
ಕವಿ ಪರಮದೇವದಾಸರು
ನೆರೆನಂಬಿದವನೆ ಧನ್ಯಾ ಈ ಗುರುಪದ ಪ ನೆರೆನಂಬಿದವ ರಘತರಿವ ವೇದವ್ಯಾಸ ಕರ ಪಾದ ಅ.ಪ ವರಮಣಿಯೊಳು ಶಿರಿತನದಿಂದಲ್ಲಿ ಮೆರೆವ ನಾಯ ಕರ ಮಂದಿರದಿ ಜಾತರಾಗಿ ಪರಮ ಮಹಿಮರಾದ ಗುರು ರಘೋತ್ತಮರಿಂದ ಪರವಿದ್ಯೆಯನು ಪೊಂದಿ ಚರಿಸಿ ದಿಗಂತದಿ ವರವೇದ ವ್ಯಾಸರಿಂದ ತುರಿಯಾಶ್ರಮ ಪಡೆದು ಸಚ್ಚಿಷ್ಯರಿಂದÀ ಸಂತತ ಪ್ರವಚನ ಮಾಡುತಲಿ ಆನಂದ ತೀರ್ಥರ ಮತ ಶರಧಿಗೆ ಪೂರ್ಣ ಚಂದಿರನೆನಿ ಪರ ಪದ 1 ಯಾದವಾರ್ಯರಿಗೆ ಅಗಾಧ ಮಹಿಮರು ಈ ಪೂರ್ಣಬೋಧ ಗ್ರಂಥಾರ್ಥ ಗ್ರಂಥಗಳನ್ನು ಟೀಕಾ ಕೃ ಕೌವÀುುದಿಗಳನು ರಚಿಸಿದಂಥಾ ವಾದಿ ಮಾತಂಗ ಮೃಗಾಧಿಪರನ್ನು 2 ಕರೆದು ಶಿಷ್ಯರಿಗೆ ಹರಿ ಪಾದಂಗುಟದಿಂದ ಸುರನದಿಯನು ಸಾಕ್ಷಾ- ತ್ಕರಿಸಿ ತೋರಿಸಿದಂಥ ಗುರು ಕೃಷ್ಣದ್ವೈಪಾಯನ ತೀರ್ಥರಿಗೆ ಘನವಾದ ಮಹಿಮೆಯನಾ ಸುರತರು ಸಮ ಚರಣ 3 ವೃಂದಾವನದೆಡೆ ಒಂದು ಪ್ರದಕ್ಷಿಣಿ ವಂದನೆ ಮಾಡಲು ಮಂದನಾದರು ಪ್ರಾಜ್ಞನೆಂದು ಕರೆಸುವನು ವಂಧ್ಯೆಯಾದರು ಬಹುಕಂದರ ಪಡೆವಳುಸಂದೇಹವ್ಯಾಕಿಲ್ಲಿ ದೂರಮಾಡುತಲಿ ಆ ನಂದವ ಗರಿಯುವರ ಭಕ್ತರ ದುರಿತಾಂಧಕಾರಕ್ಕೆ ರವಿ ಯಂದದಲಿಪ್ಪರ 4 ವರಭೀಮಾತೀರದಿ ಪರಿಶೋಭಿಸುವ ಮಣಿ ಪುರದಿ ಪಂಡಿತ ಭೂಮಿ ಚರಣಾರಾಧಕರನು ಸುಮಂದಿರದಿ ಕುಳಿತು ನಿತ್ಯ ಮೂಲದಲಿ ಮೆರೆವ ಧೇನಿಸುತಿಪ್ಪ ಗುರುವೇದೇಶರ ಶುಭ ಚರಣ ಯುಗಲವ 5
--------------
ಕಾರ್ಪರ ನರಹರಿದಾಸರು
ನೋಡಯ್ಯಾ ಹರಿಯೆ ಪ ಪಂಡರಪುರ ನಿಲಯನೆ ಕುಂಡಲಿಶಯನನೆ ಅ.ಪ. ಪುಂಡರೀಕಗೊಲಿದವನೆ | ಅಂದು ಶುಂಡಾಲವ ಪೊರೆದವನೆ ಅಂಡಜ ವರ ವಾಹನನೆ | ಎನ್ನ ಮಂಡೆಯ ಮೇಲ್ಕರವಿಡುತಲಿ 1 ವಿಜಯಗೆ ಸಾರಥಿಯಾದಿ | ಅವನ ಭುಜಗ ಶರದಿಂದ ಪೊರೆದಿ ನಿಜ ಭಕುತಗೆ ನೀ ಒಲಿದ | ದೇವ ಕುಜನಮರ್ದನ ಹರಿ ಮುದದಿ 2 ಪಟುತರ ದೇಹ ಪ್ರಕಾಶ | ದಿಂದ ವಟುವಂತೆ ಮೆರೆವ ಶ್ರೀಶ ಕುಟಿಲ ರಹಿತ ರಂಗೇಶ | ವಿಠಲ ಹಟಮಾಡದೆ ಕಣ್ತೆರದು 3
--------------
ರಂಗೇಶವಿಠಲದಾಸರು
ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಪ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ 1 ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ 2 ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ ವಿಜಯವಿಠ್ಠಲ ವರಧೇನು ಎನಿಸುವನಾ3
--------------
ವಿಜಯದಾಸ