ಒಟ್ಟು 432 ಕಡೆಗಳಲ್ಲಿ , 66 ದಾಸರು , 392 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರು ಜಗವ ಕುಣಿಸುವಂಥ ಗಾರುಡಿಗ ಇವ ದಾರಕ್ಕ ನಾರಾಯಣನಲ್ಲವೇನೆ ನಾರಿ ಕೇಳೆ ತಂಗಿ ಪ. ಧೀರ ಬಲುಗಂಭೀರ ಮತ್ಸ್ಯವತಾರ ಕಾಣೆ ತಂಗಿ 1 ಹತ್ತೂ ನಾಲ್ಕು ರತ್ನವ ತೆಗೆದು ಮತ್ತೆ ಇವ ದಾರಕ್ಕ ಕೂರ್ಮ ಕಾಣೆ ತಂಗಿ 2 ಧರಣಿಯ ಸುರುಳಿ ಸುತ್ತಿದಂಥ ಅರಸ ಇವ ದಾರಕ್ಕ ವರಾಹ ಕಾಣೆ ತಂಗಿ 3 ನಂಬಿದವರ ಕಂಬದೊಳು ಎಂಬೆ ಇವ ದಾರಕ್ಕ ರಂಭೆ ಹೇಮದ ಬೊಂಬೆ ನರಸಿಂಹ ಕಾಣೆ ತಂಗಿ 4 ಕದ್ದು ಅಡ್ಡ ಬಿದ್ದನ ಕಣ್ಣ ಇರಿದ ಇವ ದಾರಕ್ಕ ಮುದ್ದು ಮುಖದ ಪ್ರಸನ್ನನಾದ ವಾಮನ ಕಾಣೆ ತಂಗಿ 5 ಆ ಮಾತೃ ದ್ರೋಹವ ಮಾಡಿದವ ಇವ ದಾರಕ್ಕ ಶಾಮ ಸಾರ್ವಭೌಮ ಪರಶುರಾಮ ಕಾಣೆ ತಂಗಿ 6 ಕಾಮಿನಿಯ ಪೋಗಿ ತಂದ ಭೀಮ ಇವ ದಾರಕ್ಕ ಕಾಮಿತಾರ್ಥವನೀವ ಶ್ರೀ ರಾಮ ಕಾಣೆ ತಂಗಿ 7 ಗೊಲ್ಲತೇರ ಗಲ್ಲವ ಪಿಡಿದ ಚೆಲುವ ಇವ ದಾರಕ್ಕ ಬಲ್ಲಿದ ಮಲ್ಲರ ಮರ್ದಿಸಿದಂಥ ಕಳ್ಳ ಕೃಷ್ಣ ಕಾಣೆ ತಂಗಿ 8 ತ್ರಿಪುರದೊಳು ಚಪಲಾಕ್ಷಿಯರ ವಿಪರೀತವ ಮಾಡಿದನಕ್ಕ ಅಪರಿಮಿತ ಮಹಿಮನಿವ ಚಪಲ ಬೌದ್ಧ ಕಾಣೆ ತಂಗಿ 9 ಕುದುರೆಯೇರಿ ಎದುರಿಗೆ ಬರುವ ಚದುರ ಇವ ದಾರಕ್ಕ ಮಧುವನಿಕ್ಕಿದ ಮಧುರಾಪುರದ ಚದುರ ಕಲ್ಕಿ ತಂಗಿ 10 ಮೂರ್ತಿ ಗೋವಿಂದ ಇವ ದಾರಕ್ಕ ನಂದನ ಕಂದ ಹೆಳವನಕಟ್ಟೆ ರಂಗ ಕಾಣೆ ತಂಗಿ11
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾದವರಾಯ ಮಾರಬೇಕು ಮೊಸರಾಬಾರೆ ಗೊಲ್ಲ ಮೊಸರು ಮೊಸರೆನುತಲಿ ಮೇಲು-ಗೇರಿಗೆ ಬರುತಿರೆ ಕಂಡು ನೀಲವರ್ಣದ ಗೋವಳಸೆರಗು ಪಿಡಿದು ಲತಾಂಗಿಯ ತಡೆದಾ 1 ಮೊಸರ ಮಾರಬಂದವಳಲಿ ಸೆಣಸದಿರುಶಶಿನೀರೆ ಎಲ್ಲೆಂದಡತನವೆ ಬೇಡ ಈವಸುಧೆಯೊಳರಸಿಲ್ಲವೆ ನೀ ದೂರಸಾರಲೋಪಶುಗಾಹಿ ಬಿಡು ಎನ್ನ 2 ಲಂಡತನವು ನಮ್ಮೊಡನೆ ಕೊಳ್ಳವು ಹೋಗುಕಂಡ ಕಂಡವರಿಗಂಜುವುದ ಬಿಟ್ಟು ನನ್ನದಂಡೆಯ ಪಿಡಿಯದಿರೋ ನಾ ಸಸಾರಲ್ಲೊಗಂಡನುಳ್ಳವಳು ಕಾಣೋ 3 ಉಟ್ಟ ಸೀರೆಯ ಪಿಡಿದೆಳೆಯದಿರೆಲವೋಪಟ್ಟಣ ಕೊಡೆಯರಿಲ್ಲವೆ ಹೇಳಾಪಟ್ಟಗಟ್ಟಿತೆ ನಿನಗೆ ನಾ ಹೇಳುವೆಕಟ್ಟೆಯ ತಳವಾರಗೆ 4 ಶಂಕಶೂರರುಹನ ಪಂಕಜಗಜನಿಮ್ಮಡೊಂಕ ದುರುಬಿಗೆ ಅಂಜುವಳಲ್ಲಬೋಂಕನೆ ಒಳಗಾದರೆ ಕಡೆಗೆ ನಮ್ಮಮಂಕುಮಾಡಿತು ಗೋವಳಾ 5 ಇತ್ತಿತ್ತ ಬಾರೆಲೆ ಸಖಿಮುತ್ತಿನ ಹಾರವನೀವೆ ಎನ್ನಒತ್ತಾರೆ ಕುಳಿತರೆ ಪದಕವನೀವೆ ಎನ್ನಅರ್ತಿಯ ಸಲಿಸಿದರೆ ನಾ ನಿನಗೆಮುತ್ತಿನೋಲೆಯನೀವೆನೆ6 ಅಣಿ ಮುತ್ತಿನ ಕಂಠಮಾಲೆಯ ನಿನಗೀವೆಜಾಣಿಗೊಲ್ಲತಿ ಬಾಲೆ ಎಲೆ ಬಾಲೆ ನಿನ್ನಜಾಣ ಜಡೆ ಲಕ್ಷ್ಮೀನಾರಾಯಣನ ನೆನೆವುತ7
--------------
ಕೆಳದಿ ವೆಂಕಣ್ಣ ಕವಿ
ಯಾಯಾ ವರವ ನೀಡಿ ಶ್ರೀ |ಮಾಯಾ ರಮಣನ ಭಕುತರಿಗೆ ಪ ಅರುಣೋದಯ ಕಾಲದಲೆದ್ದು ಶ್ರೀ |ಹರಿಸ್ಮರಣೆ ಮಾಡುತಲಿದ್ದು ||ಕರಚರಣಾದ್ಯವಯವ ಶುದ್ಧಿ |ವಿರಚಿಸಿ ನಿರ್ಮಲ ಮನವಿ 1 ಆದ್ಯಂತ ಗುರುವಾದ |ಮಧ್ವರಾಯರ ಮತವಪೊದ್ದಿದ ಭಗವದ್ದಾಸರು ಬಂದರೆಇದ್ದಿಲ್ಲವು ಎಂದೆನ ಬ್ಯಾಡಿ2 ಘನ ಮಹಿಮ ನಾರಾಯಣನು ಇವ |ರನು ಕರತಂದಿಹನೆಂದರಿದೂ ||ಮನದಲಿ ಯೋಚಿಸಿ |ಸನುಮಾನವನು ಪಡುತಲಿ 3 ವಾಹನ ಪ್ರಿಯರು ಶು- |ದ್ಧಾಚರಣೆಯವರೆಂದು 4 ನರರಂತೆ ಇವರಲ್ಲಗುರು ಪ್ರಾಣೇಶ ವಿಠಲನಂಘ್ರಿ ||ಸರಸೀಜ ಧೇನಿಸುತ ಯಮ್ಮರ ಸುತ ಬಂದಿಹರೆಂದೂ 5
--------------
ಗುರುಪ್ರಾಣೇಶವಿಠಲರು
ಯಾರ ಪಾಡಿದರೇನು ಯಾರ ಬೇಡಿದರೇನು ಯಾರು ಕೈಹಿಡಿದೆತ್ತಿ ಪಾಲಿಸುವನು ಪ ನೀರಜಾಸನ ನೊಂದು ನೂರುವರ್ಷ ಬಾಳೆಂದ ಕರ್ಮ ಕಳೆಯಲೆಂದು ಅ.ಪ ವೀರಪಾರ್ಥನು ಧುರದಿ ಹೊರಾಡಬೇಕೆಂದ ಮಾರುತಿಯಶ್ರೀರಾಮ ಕರುಣೆ ಬರಲೆಂದ ನಾರದನು ನಾರಾಯಣನ ಮಂತ್ರ ಭಜಿಸೆಂದ ಕಾರಣದಿ ಮಣಿವೆ ಮಾಂಗಿರಿಯರಂಗ ಗೋವಿಂದ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾರಿಗೆ ಯಾರು | ಯಾರಿಗು ಯಾರು ಯಾರಿಲ್ಲಾ | ಯಾರಿಲ್ಲ ಪ ನಾರಾಯಣನೊಬ್ಬ | ಸಾರುವ ಸಮಯಕೆ ಬೇರೊಬ್ಬರಿಲ್ಲ ಕಂಡ್ಯಾ ಜೀವವೇ ಅ.ಪ. ತಂದೆ ತಾಯಿ ಸುತ | ಬಂಧು ಬಳಗ ಜನಮಂದಿಯೊಬ್ಬರು ಬರರೊ ||ಸಂದೋಹದಿಂದ ಜೀವ | ನೊಂದು ಪೋಗುವ ವೇಳೆಬಂಧು ಬಳಗ ರೋದನಾ | ಬಲು ರೋದನ 1 ಅಂದಾದರವನ್ಹಿಂದೆ | ಪೋಗೋರೊಬ್ಬರ ಕಾಣೆಸಂದೋಹ ಸುಟ್ಟು ಬರುವರೋ ||ಬಂದು ಮಶಣದಿಂದ | ಮಿಂದು ಮೆಲ್ಲದೆ ಇರುವಮಂದಿಯೊಬ್ಬರ ಕಾಣೆನೋ | ಎಲ್ಲು ಕಾಣೆನೊ 2 ಕಾಲ ಕಳೆಯುತ ಬರೆ | ಮೇಲಾದ ದುಃಖ ಮರೆಕಾಲಾ ನಾಮಕ ಲೀಲೆಯೋ ||ವ್ಯಾಳಾ ವ್ಯಾಳಕೆ ಮೆದ್ದು | ಜೋಲು ಮುಖವ ಬಿಟ್ಟುಲೀಲಾ ವಿನೋದ ಮಾಡರೇ | ಅದ ಬಿಡುವರೇ 3 ಪಥ ಸೇರೋ | ಅದ ಸೇರೋ 4 ಬಂದದ್ದು ಹೋದದ್ದು | ಮುಂದೆ ಬರುವುದನುದ್ವಂದ್ವಕರ್ಮಗಳೆಲ್ಲವಾ ||ಸುಂದರ ಗುರು ಗೋ | ವಿಂದ ವಿಠಲ ಪಾದದ್ವಂದ್ವ ಕರ್ಪಿಸೊ ಬಿಡದೇ | ಮರೆಯದೇ 5
--------------
ಗುರುಗೋವಿಂದವಿಠಲರು
ಯಾವ ಹೆಸರಿನಿಂದೆ ಕರೆದರೇನುಪಾವನಾತ್ಮನೆ ಬರನೆಸ್ವಾ ಸರ್ವೋತ್ತಮನುಪ ಸಾವಿರ ಹೆಸರುಳ್ಳ ಅವನಿಗೆ ಹೆಸರಿಂದೇನುದೇವನೊಬ್ಬನೆ ಜಗಕೆ ಎಂಬ ನುಡಿ ಸುಳ್ಳೇನುಭಾವಭಕುತಿಗಳಿಂದ ಕರೆದೊಡನೆ ಬರುವನುಠಾವು ಕಾಲಗಳಿಲ್ಲಿ ಆತನಿಗೆ ಬಹಳೇನು 1 ಅಲ್ಲಾ ಎಂದರೆ ಬರುವ ಶಿವನೇ ಎಂದರೂ ಬರುವಾಗೊಲ್ಲ ಕೃಷ್ಣನೆ ಬಾರ ಎಂದರಾತನೆ ಬರುವಅಲ್ಲಿ ಇವ ಇಲ್ಲಿ ಅವ ಎಂದು ಬಡಿದಾಡಿದರೆಖುಲ್ಲರೆಂದರೇನು ಬಲ್ಲವರು ಮರುಳಾ 2 ವಿಧವಿಧ ನುಡಿಗಳಲಿ ಬೇರೆ ಶಬುದಗಳಿರಲುಅದು ಪರಾರ್ಥವೆ ಬೇರೆ ತಾನಾಗುವದೇನುಹದಿನಾರು ಪಥಗಳನೆ ಹಿಡಿದೊಂದು ಹೋದೊಡನೆ ಅದರಿಂದಲಾ ಊರು ಸೇರಿಸುವುದಿಲ್ಲವೇನು 3 ಹೃದಯದಲಿ ನಿಜವಾದ ಭಕುತಿಯನು ಬೇಡುವನುಇದನರಿತು ಪ್ರತಿದಿನದಿ ಭಜಿಸುವರು ಮುನಿಜನರುಗದುಗಿನಲಿ ವಾಸಿಸುವ ಶ್ರೀ ವೀರನಾರಾಯಣನುಮುದದಿಂದ ಸಲಹುವನು ಸಂದೇಹವೇನು 4
--------------
ವೀರನಾರಾಯಣ
ಯುಕ್ತ ಕರ್ಮಮಾಡುವರಿಗೆ ಮುಕ್ತಿಯೇ ಫಲ ಪ ಶಕ್ತರಾದ ಸಜ್ಜನರಿಗೆ ಶಾಂತಿಯೆ ಬಲ ಅ.ಪ ಪಥ ಪಿಡಿದು ಕಾರ್ಯಕಾರಣವರಿದು ಸೂರ್ಯ ಮಂಡಲದಲಿ ಮೆರೆವ ನಾರಾಯಣನಂ ಭಜಿಸುತ್ತ 1 ವೇದ ಶಾಸ್ತ್ರಗಳ ನೋಡಿ ಮಾಯಾವಾದಗಳೀಡ್ಯಾಡಿ ಖೇದ ಮೋಹ ಸಮವೆಂದರಿತು ಸಾಧನಾನುಷ್ಠಾನದಿಂದ 2 ನಿತ್ಯ ನೇಮದಿ ಮನವಿಟ್ಟು ತಾಮಸ ಗುಣವಿಲ್ಲದ ಗುರುರಾಮವಿಠಲನ ನಂಬಿ 3
--------------
ಗುರುರಾಮವಿಠಲ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ರಕ್ಷಿಸು ಗುರುನಾಥಾ ಕೇಶವ ನೀನೇ ರಕ್ಷಿಸು ಸಿರಿನಾಥಾ ಪ ಅಕ್ಷಯ ದ್ರೌಪದಿಗಿತ್ತ ಶ್ರೀಕಾಂತನೇ ಶಿಕ್ಷಕ ನೀನೇ ಕನಕ ವಂದಿತನೇ ಅ.ಪ. ತರಳ ಪ್ರಲ್ಹಾದನಿಗೊಲಿದು ಧಾರುಣಿಯಲ್ಲಿ ಮೆರೆದ ಕಶ್ಯಪುವನ್ನು ಕೆಡಹಿದ ಹರಿಯೇ ದುರುಳ ಕಂಸನು ತನ್ನ ಪ್ರಜೆಗಳ ಹಿಂಸಿಸೆ ತರಿದು ಸಜ್ಜನರನ್ನು ಪೊರೆದ ಶ್ರೀಧರನೇ 1 ಭಜಿಸಲು ಕನಕನು ಉಡುಪಿ ಗ್ರಾಮದಲಾಗ ರಜನಿ ಮಧ್ಯದಿ ದಾಸಗೊಲಿದ ಶ್ರೀ ಹರಿಯೇ ಗಜವನ್ನು ರಕ್ಷಿಸಿ ಬಿರುದನು ತೋರಿದ ಭಜಕರ ಲೋಲನೆ ನೆರೆ ನಾರಾಯಣನೇ2 ಕಷ್ಟವ ನೀಗಿ ತಾ ಶಿಷ್ಟರ ಸಲಹಲು ಶ್ರೇಷ್ಠ ಮೂರುತಿ ರಂಗ ಬಹರೂಪವೆತ್ತೀ ಶಿಷ್ಟರ ರಕ್ಷಿಸಿ ಭ್ರಷ್ಟರ ಕೆಡಹಿದ ಸೃಷ್ಟಿಗೀಶನೆ ರಂಗ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ರಕ್ಷಿಸೋ ಜಗನ್ನಾಥದಾಸ ರಕ್ಷಿಸೋ ರಕ್ಷಿಸು ಗುರು ಜಗನ್ನಾಥದಾಸ ಪಕ್ಷಿವಾಹನನ ನಿಜದಾಸ ಮು ಮುಕ್ಷು ಮಾರ್ಗವ ತೋರ್ದಧೀಶ ನೀನೆ ಪ್ರ ತ್ಯಕ್ಷ ಪ್ರಹ್ಲಾದನನುಜ- ||ಅಹಾ|| ಈ ಕ್ಷಿತಿಯೊಳು ಸುರಶ್ರೇಷ್ಠನೆನಿಸಿ ವಿ ಶಿಷ್ಟರ ಮನೋಭೀಷ್ಟವನಿತ್ತ ಹರಿದಾಸ 1 ವೇದವಂದ್ಯನ ನಿಜತತ್ತ್ವ ನಿಜ ನಿತ್ಯ (ಸತ್ಯ) ಪೂರ್ಣ ಬೋಧರ ಗ್ರಂಥ ತತ್ತ್ವ ನೀತಿ ತ ಪ್ಪದೆ ಪೇಳ್ದೆ ಮಹತ್ವ ||ಅಹಾ|| ಮೋದಪಡಿಸಿ ಮೋದತೀರ್ಥರ ಮತ ದು ಗ್ಧಾಬ್ಧಿಸುಧೆಯನಿತ್ತ ಬಾದರಾಯಣನ ದಾಸ 2 ಪ್ರಕೃತಿಬಂಧಕರಾದ ಜನರು ನಿನ್ನ ಪ್ರಾಕೃತಗ್ರಂಥನೊಡಿ ಮೋದಿಪರು ಸತತಾ ಪ್ರಾಕೃತನ ತಾ ವಂದಿಪರು ಜನ್ಮ ಸುಕೃತಕ್ಕೆ ತಾವು ಸಾಧಿಪರು ||ಅಹಾ|| ಸಂಸ್ಕøತ ಭಾಷೆಯ ಪ್ರಕರಣಗಳನೆಲ್ಲ ಪ ರಿಷ್ಕøತ ಪಡಿಸಿ ನೀ ಪ್ರಾಕೃತದೊಳು ತೋರ್ದೆ3 ವಿಪ್ರವರೇಣ್ಯನೆ ನೀನು ಜಗದಿ ಅಪ್ರಮೇಯನ ಪ್ರಮೇಯವನ್ನೂ ಅದಕ್ಕೆ ಸಪ್ರಮಾಣಗಳೆಲ್ಲವನ್ನೂ ತೋರಿ ದಿ ಕ್ ಪ್ರದರ್ಶನ ಮಾಡಿ ಇನ್ನೂ ||ಅಹಾ|| ಸ್ವಪ್ರಯೋಜನ ರಹಿತ ಅಪ್ರಮೇಯನ ಮಹಿಮೆ ಕ್ಷಿಪ್ರ ಭೋಧೆಯಾಗಲ್ ತ್ವತ್ಪ್ರಸಾದವನಿತ್ತೆ4 ನಿನ್ನುಪಕಾರದ ಪರಿಯಾ ನಾನು ಜನ್ಮಜನ್ಮಾಂತರಕೆ ಮರೆಯೆ ನೀನೆ ಘನ್ನ ಶ್ರೀಹರಿದಾಸಾಗ್ರಣಿಯೇ ಇನ್ನು ನಿನ್ನ ಹರಿಕಥಾಮೃತಸಾರಕ್ಕೆಣೆಯೇ ||ಅಹಾ|| ಇನ್ನಿಲ್ಲ ನಿನ್ನಂಥ ಘನ್ನ ಕವಿಗಳ ಕಾಣೆ ಪನ್ನಂಗಶಯನ ಶ್ರೀ ವೆಂಕಟೇಶನ ದಾಸಾ 5
--------------
ಉರಗಾದ್ರಿವಾಸವಿಠಲದಾಸರು
ರಘುಪತಿಯೆ ನಿನ್ನನ್ನೆ ಪೊಗಳುವ ಪದಗಳನುಸೊಗಸಾಗಿ ರಚಿಪಂತೆ ಬಗೆಯನ್ನು ನೀಡೋ ಪ ಪರರ ಪೊಗಳಿಕೆ ಬೇಡ ಪರರ ತೆಗಳಿಕೆ ಬೇಡಪರಮಪಾವನ ನಿನ್ನ ಮಹಿಮೆಯನು ಬಣ್ಣಿಸುವಸರಸ ನುಡಿಗಳು ಬಾಯೆ ಬರುವಂತೆ ಮಾಡೊ 1 ಒಂದು ಲಕ್ಷದ ನಾಮದೊಂದು ಮಣಿಮಾಡಿಕುಂದದಿಹ ಭಕ್ತಿಗುಣದಿಂದ ಪೋಣಿಸಿ ಪದ್ಯದಂಥ ಹಾರವ ಮಾಡಿ ನಿನ್ನೆಡೆಗೆ ಅರ್ಪಿಸಲುಮಂದ ಬುದ್ಧಿಯ ನನಗೆ ಶಕ್ತಿಯನೀಡೋ 2 ರಾಗ ನಿನಗೆಯೆ ತಾಳ ನಿನಗೆಯೆ ಗೊತ್ತುರಾಗ ತಾಳಗಳ ಮೇಳ ನನಗೇನು ಗೊತ್ತುರಾಗತಾಳಗಳಲ್ಲಿ ಹಗುರಾಗಿ ಹಾಡಲಿಕೆತೂಗಿ ಶಬ್ದಗಳಿಡಲು ಸನ್ಮತಿಯ ನೀಡೋ 3 ಸುರವರನೆ ಬೇಕಯ್ಯ ನಿನ್ನ ಪ್ರೇರಣೆ ಇದಕೆವರಕವಿಯು ಸು ಕುಮಾರವ್ಯಾಸನಿಗೆ ವರವಿತ್ತುಉರುತರದ ಕನ್ನಡದಿ ಭಾರತವ ಬರೆಯಿಸಿದತೆರದಿ ಗದುಗಿನ ವೀರನಾರಾಯಣನೆ ಸಲಹೊ 4
--------------
ವೀರನಾರಾಯಣ
ರತ್ನವ ದೊರಕಿಸಿರೊ ಬಹಳ ಪ್ರಯತ್ನದಿಂದ ರಕ್ಷಿಸಿರೊಪ ಕತ್ತಲೆ ತುಂಬಿದ ಕತ್ತಲೆಗೂಡೊಳುಸುತ್ತಲು ಬೆಳಗಿಸಿ ಝಗಝಗಝಗಿಸುವ ಅ.ಪ. ಜ್ಞಾನದ ಖಣಿಯಿಂದಲಗೆದು ಮನಸಿನಹೀನ ಕಸವನೆಲ್ಲ ತೆಗೆದುಧ್ಯಾನ ಕುಂದಣದಿಂದ ಘಟ್ಯಾಗಿ ಬಿಗಿದುಮಾನಸ ಭಾಂಢಾರದೊಳಗಿಡಲು ಬಗೆದು 1 ಬೆಲೆ ಇದಕೆ ಒಂದೇ ಲಕ್ಷ ಕೊಟ್ಟರೆಸುಲಭವೊ ನಿಮಗೆ ಪರೋಕ್ಷಒಲಿದೊಗೆವುದು ತಾನು ಕಿರಣಕಟಾಕ್ಷನಿಲುವಿಗೆ ಬೇಕಾದ ಅಳತೆಗೆ ಬರುವ2 ತೇಜದಿ ಕೋಟಿಸೂರ್ಯರ ಮಿಕ್ಕುವ ನಿತ್ಯಭಾಜಕ ಜನರಘರಾಶಿಯ ಮುಕ್ಕುವಓಜದೆ ಮನಕಾನಂದವನಿಕ್ಕುವಗದುಗಿನ ವೀರ ನಾರಾಯಣನೆಂಬುವ 3
--------------
ವೀರನಾರಾಯಣ
ರಾಮ ರಾಮ ರಾಮ ಶ್ರೀರಾಮನೆನ್ನಿರೊ ಪ್ರೇಮದಿಂದ ಶ್ರೀ ಜಾನಕಿ ಪ್ರೇಮನನೆನೆಯಿರೊ ಪ ಅಂದದಿಂದ ಈ ದಶರಥನಂದನೆಂದು ---- ಚಂದದಿಂದ ಚಲನೆಯಿಲ್ಲದೆ ಚಿತ್ತಸ್ವಸ್ಥದಿ ಕಾಲ ಕಳೆಯ ಹೊಂದಿ ದೇವರ ಚರಣ ಕಮಲಾ ನಂದ ಅರ್ಚಿಸುವ ಮಂದಿರದಿ ಭಜಿಸಿರೊ 1 ಕಾಮನಯ್ಯನ ಕಡಲೊಳಾಳ್ದÀ್ದನ ಕೂರ್ಮರೂಪ ವರಾಹನಾದನ ಸ್ವಾಮಿ ನರಹರಿ ವಾಮನ ಪರಶುರಾಮನಾದನಾ ರಾಮಕೃಷ್ನ ಬೌದ್ಧಕಲ್ಕಿ ನಾಮವುಳ್ಳ ನಾರಾಯಣನ ನೇಮದಿಂದ ನಿತ್ಯದಲ್ಲಿ ನಾಮ ಸ್ಮರಿಸಿರೊ 2 ಪಿತೃವಾಕ್ಯ ಪಾಲಿಸಿದವನು ಸತತ ಭಕ್ತರ ಸಲಹುತಿಹನು ಕ್ಷಿತಿಗೆ ಒಡೆಯನಾದ ದೇವನು 'ಶ್ರೀ ಹೊನ್ನ ವಿಠ್ಠಲಾ’ ನತಿಶಯದಿಂದಲಿ ಹೃದಯನಂಬಿ ಇರುವ ನರರಿಗೆ--------ಸದ್ಗತಿಯ ತೋರುವನಧಿಕ ಸಂಪನ್ನ 3
--------------
ಹೆನ್ನೆರಂಗದಾಸರು
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ