ಒಟ್ಟು 2021 ಕಡೆಗಳಲ್ಲಿ , 110 ದಾಸರು , 1501 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉತ್ಸವದಲಾಹ್ನಿಕವ ಕಡು ಜನರು ಕೇಳಿರಯ್ಯ ಪ. ಅರುಣ ಉದಯದೊಳೆದ್ದು ಆ ದ್ವಾರಪಾಲಕರುಭರದೆ ಘಂಟೆ ಸುವಿಘ್ನ ಮಾಡೆತರತರದ ಹರಿದಾಸರು ತಾಳ ಮೇಳಗಳಿಂದಪರಿಪರಿಯ ಗಾನ ಪಾಡೆ ತ್ವರಿತ ವಾದ್ಯಗಳಿಂದ ತರುವಾಯ ಭೋರಿಡೆ ಮುರಹರನುಪ್ಪವಡಿಸೆತರುಣ ಯತಿಗಳು ಎದ್ದು ಸ್ನಾನ ಜಪಗಳ ಮಾಡಿನಿರುತ ಶಂಖ ಭ್ರಮಣೆ ಮಾಡೆ ನೀಟಾಗಿಒಪ್ಪುತಿಹ ಉಡುಪಿಯ ಶ್ರೀಕೃಷ್ಣನ 1 ಘೃತ ನೆನೆಕಡಲೆಯುಶುದ್ಧಾದ ಪಾಲ್ಮೊಸರು ಶುಂಠಿ ಸಕ್ಕರೆಲಡ್ಡಿಗೆತಂದ ನೈವೇದ್ಯವ ಸವಿದು ತಾ ಪೂಜೆ ಮಾಡಿಸಿಕೊಂಬ 2 ಪದ್ಮನಾಭಗೆ ಬೇಗ ಪುರುಷಸೂಕ್ತದಭಿಷೇಕಮುದದಿಂದ ಮಾಡಿದ ಬಳಿಕವಿಧಿಯ ಪೂರ್ವಕವಾಗಿ ಅಗಿಲು ಗಂಧ ತುಲಸಿಮಾಲೆಅಧಿಕವಾಗಿ ಸಮರ್ಪಿಸಿ ಒದಗಿದ್ದ ಶುಂಠಿ ಬೆಲ್ಲ ಒಳಿತಾದ ಅನ್ನ ಸೂಪದಧಿ ಕ್ಷೀರ ಕದಳಿಫಲವು ಮುರಮರ್ದನನುಚೆಲುವ ತಾ ಹಂಸಪೂಜೆಯ ಕೊಂಬ ತದನಂತರದಲಿ ಮೃತ್ತಿಕೆಯ ತಾ ಗಣಿಯಕಟ್ಟಿಸಿಕೊಂಬ 3 ದಧಿ ದಿವ್ಯ ಮಧು ಸಕ್ಕರೆ ಸೀಯಾಳವು ಇಂ-ದಿರೇಶಗೆ ಬೇಗ ಶಿರದ ಮೇಲ-ಭಿಷೇಕ ಮುದದಿಂದ ಮಾಡಿದ ಬಳಿಕತಿರುಗಿ ನೈವೇದ್ಯವನು ತೀವ್ರದಿಂದಲೆ ಸ-ಮರ್ಪಿಸಿ ಚೆಲುವ ಮಂಗಳಾರತಿಯಿಂದಪಂಚಾಮೃತದ ಪೂಜೆಗೊಂಬ 4 ಜಲಜನಾಭಗೆ ಉಷ್ಣಜಲವ ತಂದ್ಹದ ಮಾಡಿಲಲಿತವಾಗಿ ಎರೆಯುತಒಳಿತಾದ ಹೆಸರ್ಹಿಟ್ಟಿನಲಿ ಒರೆಸಿ ಮೈಯನೆತೊಳೆದು ಸುಲಭಗೆ ಪಾಲನುಣಿಸಿ ಬಳಿಕಬಾಲಉಡಿಗೆಯಿಟ್ಟು ಬಹುನೈವೇದ್ಯವನರ್ಪಿಸಿಚೆಲುವ ಉದ್ವಾರ್ಚನೆ ಪೂಜೆಚೆಂದಾಗಿ ಮಾಡಿಸಿಕೊಂಬ 5 ಮಧ್ವ ಸರೋವರಜಲವು ಹೊಳೆವÀ ಚಿನ್ನ ಕಲಶÀದಲಿಶುದ್ಧದಲಿ ಶೋಧಿಸಿ ತುಂಬಿಸಿಬದ್ಧ ಘಂಟೆನಾದದಲಿ ಬಹುಬೇಗದಲಿಬಂದು ಸನ್ನಿಧಿಯಲಿ ಪೂಜಿಸಿವಿಧುರಥನೆ ಶಂಕರಥನೆ ಪುರುಷಸೂಕ್ತÀದಭಿಷೇಕಮುದದಿಂದ ಮಾಡಿದ ಬಳಿಕ ಸಜ್ಜಿ ಘೃತದೋಸೆ ಬೆಣ್ಣೆ ಸಾರು ನೈವೇದ್ಯವ ಸವಿದು ಚೆಲುವಮಂಗಳಾರತಿಯಿಂದ ಮುದದಿ ತೀರ್ಥಪೂಜೆಗೊಂಬ 6 ಉರು ಪದಕಾಭರಂಣಗಳು ಉನ್ನಂತತೋಳ್ಬಂದಿಕರಮುದ್ರೆ ಕಂಕಣಗಳು ಚರಣಾರವಿಂದಗಳಿಗೆ ಚಾರುಚಿನ್ನದ್ಹಾವಿಗೆಕಿರುಗೆಜ್ಜೆ ಕಾಲಲಂದುಗೆವರ ಪೀತಾಂಬರ ಕಟಿಗೆ ವಡ್ಯಾಣ ನೇವಳ ಇಟ್ಟುನಿರುತ ಸುವರ್ಣದ ಕವಚವುಕೊರಳ ಕೌಸ್ತುಭಹಾರ ಕೋಮಲ ಸುವರ್ಣಕುಂಡಲಸಿರಿಮೂರುತಿ ಸಣ್ಣ ನಾಮ ಶಿರದ ಜಾವಳ ಜಡೆ ಕಡಗೋಲು ನೇಣುಸಹಿತ7 ದಧಿ ಶುಂಠಿ ನಿಂಬೆರಸ ತಕ್ರಜಗದೇಕ ಸವಿದ ಪರಿಯ 8 ಬಗೆಬಗೆಯ ಮಂಗಳಾರತಿ ಬಾರಿಬಾರಿಗೆ ಮಾಡಿ ಚಾ-ಮರ ದರ್ಪಣಗಳೆಸೆಯೆ ನಗೆಮುಖದ ಕೃಷ್ಣ-ನಂಘ್ರಿಗೆ ಷೋಡಶ ಪೂಜೆಯ ಮಾಡಿಮುಗಿಸಿ ಗುರುರಾಯ ಬರಲುಹನುಮಂತದೇವರಿಗೆ ಹಸನಾದ ಭಕ್ಷ್ಯಭೋಜ್ಯಅನುದಿನದಲರ್ಪಿಸಿ ಪೂಜಿಸಿಮುನಿ ಮಧ್ವರಾಯರಿಗೆ ಮುದದಿಂದಲರ್ಪಿಸಿ9 ಅರಳು ಆರಚ್ಚು ಬೆಲ್ಲವುಆ ಕಾಲದಲರ್ಪಿಸಿ ಪೂಜಿಸಿ ಕರಣದಲಿ ನೋಡಿ ನಗುವ 10 ಪುಟ್ಟ ಕೃಷ್ಣರಾಯರಿಗೆ ಹೊನ್ನ ಕವಚವ ತೊಡಿಸಿಇಟ್ಟ ರನ್ನದ ಕಿರೀಟವುದಿಟ್ಟಾದ ಪದಕಂಗಳು ದಿವ್ಯಮುತ್ತಿನ ಸರಕಟ್ಟಿದ್ದ ಪೂಮಾಲೆ ಎಸೆಯೆಶ್ರೇಷ್ಠವಾದ ಧೂಪದೀಪ ಶ್ರೀಪತಿಗೆ ದೋಸೆ ಬೆಣ್ಣೆಗಟ್ಟುರುಳಿ ನೈವೇದ್ಯವು ಕಟಕಟನೆಶುಂಠೀಕಷಾಯುಂಡು ಬಾಯಿ ತೊಳೆದುತಟ್ಟನೆ ರಾತ್ರಿ ಪೂಜೆಯಗೊಂಡು ತಾ ಪಲ್ಲಕ್ಕಿಯೇರಿ ಬರುವ11 ಅರಳು ಬಹುಕೊಬರಿ ಚೂರುಗಳು ಆ ಕಾಲದಲಿ ಸೂಸಿ ಪೂಜಿಸೆ ಕರುಣದಲಿ ನೋಡಿ ನಗುವ 12 ಧೀರನಿಗೆ ಚತುರ್ವೇದ ದಿವ್ಯಶಾಸ್ತ್ರಪುರಾಣ ಚೆಲುವಗಷ್ಟಕ ಗೀತವುಭೇರಿಮೌಳಿ ಮೌಳಿವಾದ್ಯಮೌಳಿಮೌಳಿ ಚಕ್ರವಾದ್ಯತಾರತಮ್ಯದ ಸರ್ವವಾದ್ಯಗಳೆಸೆಯೆತಾರಿ ಸೇವೆಯ ಮಾಡಿ ಸ್ವಾಮಿ ವೀಳ್ಯ ಮಂತ್ರಾಕ್ಷತೆ ಕಾರುಣ್ಯದಲಿಬೆರೆಸಿ ಮಾರಜನಕಗೆ ಏಕಾಂತ ಸೇವೆಯ ಮಾಡಿ ನವಮಾರಜನಕನ ಹಂಪೂಜೆಯ ಜಾಗ್ರತೆಯಲಿ ನೋಡಿ ನಗುವ 13 ಹಡಗಿನಿಂದಲಿ ಬಂದು ಕಡಲ ತಡಿಯಲಿ ನಿಂದುಬಿಡದೆ ಯತಿಗಳ ಕೈಯ ಬಿಂಕದಿ ಪೂಜೆಗೊಂಬಆದಿ ಕೃಷ್ಣನ ಆಹ್ನಿಕವನು ಆಧಾರದಲಿಓದಿವಿನೋದದಲಿ ಪಠಿಪ ಜನರಿಗೆಆಧಿವ್ಯಾಧಿಗಳಟ್ಟಿ ಬಹು ಭಾಗ್ಯಗಳ ಕೊಡುವಮಾಧವನ ಕೃಪೆಯಿಂದಲಿವಾದಿರಾಜರಿಗೊಲಿದು ವಚನ ಶುದ್ಧೋಕ್ತದಲಿ ಹೇಳುವ ಜನರಿಗೆಬರುವ ದುರಿತವ ಕಳೆದು ಮೇಲಾಗಿ ರಕ್ಷಿಸಿಕೊಂಬ ಹಯವದನ 14
--------------
ವಾದಿರಾಜ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದಯವಾಯಿತು ಹೃದಯ ಕಮಲದೊಳಗೆ ಧ್ರುವ ಗುರುಕರುಣಾನಂದಬೋಧ ಅರುಣೋದಯವಾಯಿತು ಸ್ಮರಣಿಗರವು ದೊರೆಯಿತು ಹರಿಯ ಚರಣದ 1 ಸಮ್ಯಜ್ಞಾನದ ಪ್ರಭೆ ಸಮ್ಯವಾಗಿದೋರಿತು ತಾಮಸನಿದ್ರೆ ಹರಿಯಿತು ತಿಮಿರಾಂಧದ 2 ಥಳಥಳಿಸುವ ರವಿಕೋಟಿ ಬೆಳಗಾಯಿತು ಹೊಳೆಯುತ ತೇಜೋನ್ಮಯವು ಒಳಗೊರಗೆಲ್ಲ 3 ಒದಗಿ ಬಂತೆದುರಿಟ್ಟು ಮೊದಲೆ ಪುಣ್ಯದ ಘಲ ಉದಯವಾಯಿತದೃಷ್ಟವು ಸದೃಷ್ಟವಾಗಿ 4 ಸದ್ಗತಿ ಸುಖವಿದು ಸದೋದಿತವಾಯಿತು ಸಾಧಿಸಿ ಮಹಿಪತಿಗೆ ಸದ್ಗರು ಕೃಪೆಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಉದ್ದಂಡ ಚಿದಾನಂದ ಪ ಅವರಿಗೆ ನಾ ಮರುಳಾಗಿ ತನಯರೈವರ ಬಿಟ್ಟೆ ನಾಲ್ವರು ಭಾವಂದಿರನು ಬಿಟ್ಟೆ ಸನುಮ-ತವಾಗಿದ್ದ ಸರಿವರ್ಗತನವ ಬಿಟ್ಟೆನಿನಗೆ ಮಾಡಿದ ಲೇಸ ಎನ್ನಲೇಸನು ನೀನು1 ಅರಸನೊಳ್ಳಿದನೆಂದು ಆರಣ್ಣರ ಬಿಟ್ಟೆಹಿರಿಯ ಮಮತೆಯಲ್ಲಿದ್ದ ಅಕ್ಕಂದಿರನು ಬಿಟ್ಟೆಸರಿಹೋಗಿ ಎನಗಿಷ್ಟದ ಸವತಿ ಮೂವರ ಬಿಟ್ಟೆಕರುಣಾಕರನು ಕೈ ವಿಡಿಯ ಲಂತಾದುದಾ2 ಅತಿಮೋಹ ಮಾಡುವ ಅಷ್ಟಾಪ್ತರನು ಬಿಟ್ಟೆಪಿತರೀರ್ವರನು ನಾನು ಹೇವರಿಸಿ ಬಿಟ್ಟೆಸತತ ಚಿಂತಿಪ ಹತ್ತು ಸಖಿಯರನು ನಾ ಬಿಟ್ಟೆಮತಿ ಎನಗಿನ್ನೇನೆ ಮಂದಗಮನೆ ಹೇಳೆ 3 ನಿತ್ಯ ಕಾಲದಿ ಅವನ ನಿಜಸೇವೆ ಮಾಡುತಿಹೆಸತ್ಯ ಸತ್ಯವೆ ಎಂಬ ತೆರದಿಂದಲಿಪ್ರತ್ಯಗಾತ್ಮನು ತನ್ನ ಕೀರ್ತಿವಾರ್ತೆಯ ನೆಲ್ಲಕೂರ್ತು ಮರೆಯಾದಂತೆ ಎನಗೆ ಮಾಡಿದುದ ನೀನು4 ಎನ್ನ ಸುಖದುಃಖ ಫಲ ಎನ್ನ ಕೈ ಮೇಲುಂಟೆನೆಚೆನ್ನ ಚಿದಾನಂದ ಗುರುವಿನಿಂದಉನ್ನತ ನಂಬುಗೆ ಎಂಬುದಿಂತಾಯಿತೇಬಣ್ಣಿಸಲೇನವ್ವ ಬಯಲ ಕೂಡಿಸಿ ಬಿಟ್ಟ 5
--------------
ಚಿದಾನಂದ ಅವಧೂತರು
ಉದ್ದರುಸುವದೆನ್ನ ಉದಧಿಶಯನ | ಪಾದ | ಪದ್ಮದ್ವಯಕೆಯಿಂದು ಪ ಅಂದು ನೀ ಪೇಳಿದಂದಲಿ ತೀರ್ಥಯಾತ್ರೆ | ನಿಂದರದೆ ಸಂಚರಿಸಿ ಪುಣ್ಯವೆಲ್ಲಾ | ತಂದು ನಿನಗರ್ಪಿಸಿದೆ ಕೈ ಕೊಂಡು | ತೋರು ತಡಮಾಡದಲೆ ದೇವಾ 1 ಯಾತರವ ನಾನು ನರಮನೆ ಗಾಯಕರ ದೂತರೆಂಜಲನುಂಡು ಬೆಳದ ನರನೋ || ನೋತ ಫಲವಾವದೊ ನೀನೆ ಬಲ್ಲೆಯಾ ಜೀಯಾ | ಮಾತು ಮಾತಿಗೆ ಹಿಗ್ಗಿ ನಗುವ ಚನ್ನಿಗರಾಯಾ2 ಇಷ್ಟೆನ್ನ ಮನದ ಭೀಷ್ಟೆ ಒಂದೆ ವುಂಟು | ಕೃಷ್ಣಾ ಸ್ನಾನ ಕೃಷ್ಣ ಸಂದರುಶನಾ | ಕೊಟ್ಟು ಕೇವಲವಾಗಿ ನಿನ್ನಂಘ್ರಿಯಲಿ ರತಿ | ಇಟ್ಟು ಭಜಿಸುವಂತೆ ಭಾಗ್ಯವನು ಕೊಡೊವೇಗಾ3 ಏನು ಕಡಿಮೆ ನೀನು ಒಲಿದರಾದಡೆ ರಾಮ | ಧೇನು ತರುಮಣಿ ಬಾರದೆ ನಿಲ್ಲವೇ || ಶ್ರೀನಿವಾಸನೆ ನಿನ್ನ | ಲೇಶ ಸುಖವು ತೋರದು ದೇವಾ 4 ವೆಂಕಟಗಿರವಾಸಾ ವೇದ ವಂದಿತ ಚರಣಾ | ಶಂಖ ಚಕ್ರಪಾಣಿ ಕರುಣಾಕರಾ | ಶಂಖಾಣ ನೃಪವರದ ವಿಜಯವಿಠ್ಠಲ ತಿಮ್ಮ ಅಂಕದ ಮೇಲಾಡುವ ಬಾಲನೆಂದು ಬಿಡದೆ 5
--------------
ವಿಜಯದಾಸ
ಉದ್ದಾಳಿಕನ ಕಥೆ ಪಾಶಾಂಕುಶ ಧರನೆ ಕರಿಣಿಸೊ ಮತಿಯ 1 ಮಾನಿನಿಕುಲಕೆ ಕಟ್ಟಾಣಿ ಕರುಣಿಸೆ ಮತಿಯ2 ಮನೋಹರನೆ ನಿಜಮತಿಯ 3 ಅಂಬರ ಮೇಲಾದಷ್ಟದಿಕ್ಪಾಲಕರು ಪುಣ್ಯಕಥೆಯ 4 ಓಣ್ಯೊಳು ಚೆಲ್ಲಿದ ಅಣಿ ಮುತ್ತಾರಿಸಿ ನೂಲಿಗೆ ಪೋಣಿಸಿದಂತೆ ಯೋಗಿಗಳರಸುದ್ದಾಳಿಕನ ಕಥೆಯನು ಹೇಳುವೆ ಚರಿತೆಯ ಮಾಡಿ5 ವೇದವೇದಾಂತ ಪಾರಗನು ಧರ್ಮ ಪತ್ನಿ 6 ಸುತಜನಿಸಿದ ಉದ್ದಾಳಿಕ ಮಾಡಿದ ಕ್ರಮದಿಂದ 7 ಮೌಂಜಿಯ ಕಟ್ಟಿ ನಡೆದರು ಪರಗತಿಗೆ 8 ನಾಲ್ಕು ವೇದಗಳ ಘನತಪವನಕಾಗಿ ನಡೆದ 9 ನಿಂದು ಬೆಳಗುವ ಜ್ಯೋತಿಯಂತೆ ಸಂದವರುವತ್ತು ಸಾವಿರವು 10 ಪಟ್ಟಣದಿ ರಾಜ್ಯವಾಳುವನು 11 ಕನ್ಯಾದಾನವು ಭೂದಾನ ರಾಜ್ಯವಾಳುವನು 12 ಹೆತ್ತ ತಾಯಿ ಮಕ್ಕಳಗಲರೆಂದೆದಿಗು ಬತ್ತದೆ ಕರೆವ ಧೇನುಗಳು ದೇಶದೊಳಗೆ 13 ಪುಣ್ಯಸಾಧನರು ಸಜ್ಜನರು ಧರ್ಮಗಳಾ ದೇಶದೊಳಗೆ 14 ಬಡವರಿಲ್ಲಿ ಚಾರರುಂಟು ದೇಶದೊಳಗೆ 15 ಧರ್ಮವ ನಡೆಸಿ ರಾಜ್ಯವಾಳುವನು 16 ಮಕುಟವೆಂದೆನಿಸಿ ಪಟ್ಟದರಸಿಯಲ್ಲದನ್ಯತ್ರ ನೋಡೇಕ ಪತ್ನಿಯ ವ್ರತವ ನಡೆಸಿದನು17 ಸಂತೋಷದೋರಲು ಹುಟ್ಟಿದಳ್ ಚಂದ್ರಾವತಿಯು 18 ಹೊನ್ನಿನ ರಾಸಿ ಸುವರ್ಣದ ಬೆಟ್ಟವು ಕನ್ಯಾದಾನದ ಹೆಬ್ಬೆಳಸು ಮಾಣಿಕವೆ ಸಂತಾನ 19 ನಡೆಯೋಳು ದಟ್ಟಡಿಯಿಡುತ ಕಡುಲಾಲಿಕೆ ಬಾಲಲೀಲೆ 20 ಬಡವಾದಾಳೆಂದು ಕಡುಹರುಷದಲಿ ಹಿಗ್ಗಿದರು 21 ಅಕ್ಷರಾಭ್ಯಾಸವ ಮಾಡಿಸಿ ಕುಮಾರಿಗೆ ನರ್ತನ ಗೀತವ ಕಲಿಸಿ ಪುತ್ರಿಗಭ್ಯಾಸ ಮಾಡಿಸಿದ 22 ಯೌವನವು ತೋರಿದವು ಆಲಯವನೆ ಕಟ್ಟಿಸಿದ 23 ಪುತ್ರಿಯ ಸೇವೆಗೆ ಇಟ್ಟನೆ ಭೂಪಾಲ ಹತ್ತುಸಾವಿರ ಕೆಳದಿಯರ ಸುತ್ತಲು ಪ್ರಾಕಾರ ಎಸೆದವು ರಕ್ಷೆಗೆ ಇಟ್ಟನೆ ದ್ವಾರಪಾಲಕರ24 ಮುನಿಕೌಶಿಕನು ನೋಡುತಲಿ 25 ಸತ್ಯಲೋಕ ತಪೋಲೋಕವ ಚರಿಸುತ್ತ ಹೊಕ್ಕ[ನೆ] ಯಮ ಲೋಕವನು ಜೀವಿಗಳ ತಾಕಂಡ 26 ತೃಣದ ಮೂಲಾಗ್ರದಿ ನಡುಗುತಿಪ್ಪರ ಕಂಡು ಬ[ಳಿ] ಯಲ್ಲಿ ನಿಂತು ಮಾತಾಡಿ ತಿಳಿದು ಹೇಳುವುದು ಎನ್ನೊಡನೆ 27 ಜಗದೊಳಗೆ ಎಮಗೆ ಪತನಕ್ಕೆ ಬಿದ್ದೆವೆಂದೆನಲು 28 ಕಾಣಿಸುವ ದೌಹಿತ್ರರು ಮುನಿಯು ಕೇಳಿದನು 29 ಹೆಣ್ಣನೊಲ್ಲದೆ ಅರಣ್ಯವ ಚರಿಸುವ ಉನ್ನಂತ ತಪಸೀಲಿದ್ದ ತಿಳಿದು ಹೇಳುವುದು 30 ಪುತ್ರಸಂತಾನವ ಪಡೆದು ವಿಸ್ತಾರವಾಗಿ ಹೇಳುವುದು 31 ಭೋರನಲ್ಲಿಂದ ತೆರಳಿದನಾಗಲೆ ಮುನಿ ಅರಣ್ಯವ ಚರಿಸುತಲೆ ತಪೋವನವ 32 ಕರವಿಡಿದು ಕರೆ ತಂದನಾಗ ಬರವೇನೆಂದು ಕೇಳಿದನು 33 ಯಮ ಲೋಕವನು ಅತ್ಯಂತ ನರಕಕೈದುವರು 34 ಆಲಸÀ್ಯವಿಲ್ಲದೆ ಬೀಳ್ಪರು ಪತನಕ್ಕೆ º
--------------
ಹೆಳವನಕಟ್ಟೆ ಗಿರಿಯಮ್ಮ
ಉದ್ಧರಿಸಿರೋ ನೀವು ನಿಮ್ಮ ತಿಳಿಯಬೇಕು ಪರಬೊಮ್ಮ ಪ ಮನುಜ ಜನ್ಮಕೆ ಬಂದು ಮರೆತರೆ ಕಷ್ಟವು ಮುಂದುಇನಿತು ವಿಚಾರವಿಲ್ಲ ಇದುವೆ ವಿವೇಕವದಲ್ಲ 1 ಕೊನಬುಗಳೆಲ್ಲವ ಬಿಡಿರೋ ಕೋಪವನೆಲ್ಲವ ಸುಡಿರೋತನು ಸುಖವಾಗಿಹುದಲ್ಲ ತಪ್ಪಿದರೆ ಬಳಿಕೆಲ್ಲ 2 ಭ್ರಮೆಯೆಲ್ಲವ ಬಿಡಬೇಕು ಬಂಧನ ಹರಿಯಲು ಬೇಕುನಮಗಿದು ನೀತಿಯಿದಲ್ಲ ನಾಚಿಕೆ ಕಿಂಚಿತ್ತು ಇಲ್ಲ 3 ತನ್ನ ತಿಳಿದರೆ ತಾ ಬಂಧು ತನ್ನ ಮರೆತರೆ ಶತ್ರುವಹಸನ್ನುತವಚನವಿದೀಗ ಸಾಧಿಸುವುದು ಬಹುಬೇಗ4 ಚೆನ್ನಾಗಿ ಶ್ರವಣದ ಕೇಳಿ ಚಿತ್ತ ಶುದ್ಧಿಯ ತಾಳಿಚಿನ್ಮಯನನು ನೀವು ಧರಿಸಿ ಚಿದಾನಂದ ತಾವೆಂದು ಸ್ಮರಿಸಿ5
--------------
ಚಿದಾನಂದ ಅವಧೂತರು
ಉಪಾಧಿ ಬೇಡಆತ್ಮನೆಂಬುದೇ ಕಾಂಬುದು ನಿಮ್ಮ ಮಹಾತ್ಮರಾದವರು ಪ ಕುಂಭಗಳು ಇರುತಲಿರೆ ಅಂಬರದ ಚಂದ್ರನುಕುಂಭಗಳೊಳಗೆ ಹಲವಾಗಿ ಬಿಂಬಿಸುವ ತೆರದಿಅಂಬುಜಾಸನ ಮೊದಲು ಜೀವ ಕಂಬದೊಳು ದೃಷ್ಟಿಯಿಟ್ಟು ಇಂಬಾಗಿ ಇರುವನೊಬ್ಬ ಚೇತನಾತ್ಮಕನು1 ಕನ್ನಡಿ ಪಳುಕಿನ ಗೃಹದಿ ಸನ್ನಿಧಿಯಲೊಂದು ದೀಪವಿಡೆಕನ್ನಡಿಯೊಳಗೆ ದೀಪ ಹಲವಾದ ತೆರದಿಉನ್ನತ ಜೀವರಾಶಿಯ ತನ್ನ ಛಾಯೆ ಹೊಳೆ ಹೊಳೆದುತನ್ನ ತಾನೇ ಇರುವನೊಬ್ಬ ಚೇತನಾತ್ಮಕನು2 ಒಬ್ಬನಾ ಕಾಂತಿಯಿಂ ಹಬ್ಬಿಕೊಂಡಿದೆ ಲೋಕಒಬ್ಬನೆಂದೇ ತಿಳಿದಡೆ ತಾನೊಬ್ಬನೇ ಇಹನೀಹರನುಒಬ್ಬನನೊಯ್ದು ನೀವು ಹಾಗಿಬ್ಬರ ಮಾಡಲಾಗದುಒಬ್ಬನೇ ಚಿದಾನಂದನು ಚೇತನಾತ್ಮಕನು3
--------------
ಚಿದಾನಂದ ಅವಧೂತರು
ಉರಗಗಿರಿವಾಸ ವಿಠಲ | ಪೊರೆಯ ಬೇಕಿವಳಾ ಪ ಪರಮಕರುಣಾಮೂರ್ತಿ | ಪ್ರಾರ್ಥಿಸುವೆ ಹರಿಯೇ ಅ.ಪ. ನಿರತ ನಿನ ಸ್ಮರಿಪರಘ | ಪರಿಹರಿಪೆ ನೆಂಬನುಡಿಪರಮ ಸಾರ್ಥಕ ಗೊಳಿಸೊ | ತರಳೇ ಇವಳಲ್ಲಿಕರುಣ ಸಾಗರ ನಿನ್ನ | ಬೇರೊಂದಪೇಕ್ಷಿಸದೆ |ಸರಸದಲಿ ತವರೂಪ | ಚಿಂತೆಯಲ್ಲಿಹಳೋ 1 ಮರುತ ಮತವನೆ ಪೊಂದಿ | ತರತಮದ ಸುಜ್ಞಾನ ಪರಪಂಚಬೇಧಗಳ | ಅರಿತು ಭಜಿಸುವಳೋನೆರೆನಂಬಿ ತವಪಾದ | ಹಾರೈಸುತಿರುತಿಹಳವರ ಸುಸಾಧನವನ್ನೆ | ಅಭಿದೃದ್ಧಿಗೊಳಿಸೊ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀಹರಿಯೆಂಬಮತಿಯಿಂದ ಸೇವಿಸುತ | ದ್ರವ್ಯ ವಿಭಮನಾಹತಗೈದು ಕತೃಪ್ವ | ಅಂತಕಾರಕ ಭ್ರಮವಕ್ಷಿತಿರಮಣ ಪರಿಹರಿಸಿ | ಆರ್ತಳುದ್ಧರಿಸೋ3 ಜ್ಞಾನ ಸದ್ವೈರಾಗ್ಯ | ಅನುವಂಶಿಕವಾಗಿನೀನಾಗಿ ಕರುಣಿಸಿಹೆ | ಜ್ಞಾನಾತ್ಮಹರಿಯೆಮೌನಿಕುಲ ಸನ್ಮಾನ್ಯ | ಜ್ಞಾನಿ ಜನಸಂಗವನುನೀನಾಗಿ ಕೊಟ್ಟಿವಳ ಉದ್ಧರಿಸೋ ಹರಿಯೆ 4 ಸರ್ವಜ್ಞ ಸರ್ವೇಶ | ಸರ್ವಾಂತಾರಾತ್ಮಕನೆದರ್ವಿ ಜೀವಿಯ ಹೃದಯ | ಗಹ್ವರದಿ ನಿನ್ನಾಭವ್ಯರೂಪವ ತೋರಿ | ಉದ್ದಾರ ಗೈ ಇವಳಾಶರ್ವವಂದ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಊ. ವಿಶಿಷ್ಟ ಹಾಡುಗಳು ಅಂಗಡಿ ಗೋವಿಂದನ್ಹಣ ವಿಂಗಡಿಸಿರೊ ಸಂಗಡಿಕ್ಕ ಬೇಡ ನೀವು ಭಂಗಬಡುವಿರಿ ಪ ಮುಂಗಡದ ಬಡ್ಡಿಯನು ಮುಂದೆ ಕಳುಹಿಸಿ ಅಂಗಡಿ ಗೋವಿಂದನ್ಹಣ ವಿಂಗಡಿಸಿರೊ ಅ.ಪ ಕೋಲುಗಾರನೊಬ್ಬನಲ್ಲಿ ಹೊರಟನಂತೆ ಬೇಳುವ ಶಂಖದ ಧ್ವನಿಯ ತೋರ್ಪನಂತೆ ಹೀಲಿಯ ಕುಂಚವು ಕಯ್ಯೊಳಿಪ್ಪುದಂತೆ ಮೇಲೆ ಮೂರು ನಾಮ ಧರಿಸಿ ಬಪ್ಪನಂತೆ 1 ಮೂರುಗಡುಬ ಸುಳ್ಳನಾಡಿ ಮೀರಿ ಹೋಯಿತೀ ಸಾರಿ ಬಂದ ದೂತರಿಂಗೆ ಲಂಚ ನಡೆಯದು ಭಾರಿಯಿಕ್ಕಿ ಕೈಗೆ ಚಿಪ್ಪಳೇರಿಸುವರು ಸಾರಿ ಕಂಡು ಬದುಕುವರೆ ದಾರಿವೊಳ್ಳೆದು 2 ಮೊದಲ ಪತ್ರದ್ಹಣವ ಕೊಟ್ಟು ಬದಲು ಪತ್ರವ ಸದರ ಬಡ್ಡಿಯಿಂದ ಬರೆದು ಚದುರತನದಲಿ ಇದಿರು ಬಿದ್ದು ಕೈಯ ಮುಗಿದುವೊದಗಿನಿಂದಲೆ ಗದರಬೇಡ ಬನ್ನಿ ಚಿನ್ನ ವರದನಲ್ಲಿಗೆ 3 ದುಡ್ಡು ಕೊಟ್ಟು ಮಡ್ಡಿಯನ್ನು ತೆಗೆದು ಉಂಬೆವು ಅಡ್ಡಕೊಂಡು ಅತಿರಸವ ತೆಗೆದುಕೊಂಬೆವು ದೊಡ್ಡ ದೋಸೆ ವ್ಯವಹಾರವ ಮಾಡಿಕೊಂಬೆವು ಕಡ್ಡಾಯದ ಸರಕನೆಲ್ಲ ಕಂಡು ಬಿಡುವೆವು 4 ಗಂಧಿಕಾರನಂಗಡಿ ಗೋವಿಂದನಲ್ಲಿ ಚಂದದ ಔಷಧವನ್ನು ತಿಂಬೆವಲ್ಲಿ ಬಂದ ಭವದ ರೋಗ ಕೊಂದೆವಲ್ಲಿ ಆತ ಮಿಂದ ತೀರ್ಥವನ್ನು ಊರಿಗೆಂದೆವಲ್ಲಿ 5 ಸಾಲವನ್ನು ತಿದ್ದಿ ಮುದದ ಸಾಲವನ್ನು ನಾಲಿಗೆಯ ಪತ್ರದಿಂದ ತಂದೆವಿನ್ನು ನೀಲದ ಮಣಿಯನೊಂದ ಕದ್ದುದನ್ನು ಆಲಿಯೊಳಗಿಟ್ಟುಕೊಂಡು ಬಂದುದನ್ನು 6 ಅಂಗಡಿ ಗೋವಿಂದ ಬಹಳ ಅಂಗವುಳ್ಳವ ಮಂಗಳವ ಮಾರುವಲ್ಲಿ ಶೃಂಗಾರವುಳ್ಳವ ಬಂಗಾರ ವ್ಯಾಪಾರದಲ್ಲಿ ತುಂಗ ವಿಕ್ರಮ ಮುಂಗುಡಿಯ ಜನಕೆ ಅಂತರಂಗ ಕೊಡುವವ 7 ದಾಸರಿಗೆ ಧರ್ಮವನ್ನು ಕೊಡುವನಲ್ಲದೆ ಕಾಸು ಹೊರತು ಮೀಸಲನ್ನ ನೀಡಲರಿಯನು ಶೇಷಗಿರಿಯವಾಸನೆಂದು ಹಾಸಿಕೊಂಬನು ಬೇಸರನ್ನು ಕಂಡು ಸಂತೋಷವೀವನು 8 ಸ್ವಾಮಿಯೆಂಬ ತೀರ್ಥದೊಳಗೆ ಮಿಂದೆವಲ್ಲಿ ಭೂಮಿ ವರಾಹತಿಮ್ಮಪ್ಪನ ಧ್ಯಾನದಿಂದಲಿ ಕಾಮಿತ ವ್ಯಾಪಾರವನ್ನು ತಂದೆವಿಲ್ಲಿ ಆ ಮಹಾ ಚಂದ್ರಾರ್ಕವಾಗಿ ಬಾಳುವಲ್ಲಿ 9
--------------
ವರಹತಿಮ್ಮಪ್ಪ
ಊಟವನು ಮಾಡು ಬಾ ಉದಧಿಶಯನಾ | ಆಟವನು ಸಾಕುಮಾಡಿ ಅತಿ ವೇಗದಿಂದಲಿ ಪ ಪರಿ | ತೋಯ ಸಂಡಿಗೆ ಪಳದೆ ಹುಳಿ ಸಾರು || ಪಾಯಸ ನೊರೆಹಾಲು ಸಕ್ಕರೆಗೂಡಿಸಿ | ತಾಯಿ ದೇವಕಿಯು ಎಡೆಯ ಮಾಡಿದಳು ತಂದು 1 ಯಾಲಕ್ಕಿ ಹಾಕಿದ ಹೋಳಿಗೆಯು ಪರಿಮಳ | ಸಲೆ ಶಾಲ್ಯೋದನ ಕರಿದ ಭಕ್ಷ್ಯಾ || ಮೇಲಾದ ಇಂಗು ಜೀರಿಗೆ ಮೆಣಸಿನ ಹುಗ್ಗಿ | ಶ್ರೀ ಲಕುಮಿದೇವಿ ಎಡೆ ಮಾಡಿದಳು ತಂದು 2 ಕಸಕಸಿ ಎಳ್ಳು ಲಡ್ಡಿಗೆಯು ಅಪ್ಪಾಲು ಅರೆ-| ರಸ ದೋಸೆ ಬೆಣ್ಣೆ ಸೂಸಲುಕಡಬು || ಹಸನಾಗಿ ಕರಿದ ಹಪ್ಪಳ ಸಂಡಿಗೆ ನಿನ್ನ ಸೊಸೆ ಸರಸ್ವತಿ ಎಡೆ ಮಾಡಿದಳು ತಂದು 3 ಕಾದಾಕಳ ತುಪ್ಪ ಅಳಗಳಗ ತಿಳಿತುಪ್ಪ | ಮಾಧುರ್ಯವಾಗಿದ್ದ ಜೇನು ಘೃತವು || ಕಾದಾರಿದ ಪಾಲು ಕಟ್ಟುಸುರು ಕೆನೆಮೊಸರು | ಭೂದೇವಿ ನಲಿನಲಿದು ಎಡೆ ಮಾಡಿದಳೊ ತಂದು4 ಸರಳಿಗೆ ಗೌಲಿ ಬಟಿವೆ ಪರಡಿ ಸಜ್ಜಿಗೆ | ಸರಸವಾಗಿದ್ದ ಚಿತ್ರಾನ್ನಂಗಳು || ಪರಿ ಫಲ ಪಕ್ವಾನ್ನ ಸೋಪಚಾರದಿ | ಗಿರಿಜಾದಿಗಳು ತಾವು ಎಡೆ ಮಾಡಿದರೊ ತಂದು5 ಖಾರುಳ್ಳ ಪಚ್ಚಡಿ ಹಚ್ಚಗೆ ಹಸಿರು ವರ್ಣದ | ವಾರುಣದಿ ಉಪ್ಪಿನಕಾಯಿ ಕೂಟಾ || ನೀರು ಮಜ್ಜಿಗೆ ನಿಂಬೆÀಹಣ್ಣನೆ ಹಿಂಡಿ | ಭಾರತೀದೇವಿ ಎಡೆಮಾಡಿದಳೊ ತಂದು 6 ಉಂಡ ತರುವಾಯದಲಿ ಹರಿಯೇ ಪೀಠದಿ ಕುಳಿತು | ಕೊಂಡು ಬಂದ ಗಂಧ ತಾಂಬೂಲವ || ಸಿರಿ ವಿಜಯವಿಠ್ಠಲ | ಕೊಂಡನಾದ ಪುರಂದರಗೆ ಒಲಿದು ಒಲಿದು 7
--------------
ವಿಜಯದಾಸ