ಒಟ್ಟು 441 ಕಡೆಗಳಲ್ಲಿ , 70 ದಾಸರು , 387 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವರಾಯರ ಕರುಣ ಪಡೆಯದವ | ಧರೆಯೊಳಗೆ ಇದ್ದರೇನು ಇಲ್ಲದಿದ್ದರೇನು ಪ ಮಧ್ವಮತವೇ ಮತವು ಸಕಲ ಶ್ರುತಿ ಸಮ್ಮತವು | ಮಧ್ವರಾಯರ ಧ್ಯಾನ ಅಮೃತಪಾನ || ಮಧ್ವರಾಯರ ಲೀಲೆ ನವರತುನದಾ ಮಾಲೆ | ಮಧ್ವೇಶನಾ ಸ್ಮರಣೆ ಕುಲಕೋಟಿ ಉದ್ಧರಣೆ 1 ದುರಿತ ಹತ | ಮಧ್ವರಾಯರ ಭಕುತಿ ಮಾಡೆ ಮುಕುತಿ || ಸತ್ಪಾತ್ರ | ಮಧ್ವರಾಯರ ಭಜನೆ ದುಷ್ಕರ್ಮ ತ್ಯಜನೆ 2 ಮಧ್ವರಾಯರ ದಾಸನಾದವನೆ ನಿರ್ದೋಷ | ಬಂಟ ಜಗಕೆ ನೆಂಟ || ಮಧ್ವರಮಣಾ ನಮ್ಮ ವಿಜಯವಿಠ್ಠಲನಾದ |ಮಧ್ವೇಶನಾ ಕರುಣೆ ಪಡೆದವನೆ ಶರಣ 3
--------------
ವಿಜಯದಾಸ
ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತುಶುದ್ಧ ಶ್ರುತಿ ಪದ್ಧತಿ ನಡೆಸುವೆ ಮಧ್ವೇಶಾರ್ಪಣಮಸ್ತು 1 ವಂದಿಸುವೆನು ಗೋವಿಂದನ ಚರಣಕೆ ಮಧ್ವೇಶಾರ್ಪಣಮಸ್ತುನಿಂದು ಕರಂಗಳ ವಂದಿಸಿ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 2 ಅಂಬುಜನಾಭನ ನಿತಂಬಿನಿ ಕಮಲಕೆ ಮಧ್ವೇಶಾರ್ಪಣ ಮತ್ತುಡಿಂಗರಿಗನು ನಾಜಗದಂಟೆಯ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 3 ಸಂಧ್ಯಾದೇವಿಗೆ ವಂದಿಸುತಿರುವೆನು ಮಧ್ವೇಶಾರ್ಪಣಮಸ್ತುಒಂದಿನ ಬಿಡದೆ ತ್ರಿಕಾಲದಿ ಮಧ್ವೇಶಾರ್ಪಣಮಸ್ತು 4 ಚಾಮರ ಹಾಕುವೆ ಶ್ರೀಮನೋಹರಗೆ ಮಧ್ವೇಶಾರ್ಪಣಮಸ್ತುಕೋಮಲ ಶಯನದಿ ಮಲಗಿಸುವೆನು ಮಧ್ವೇಶಾರ್ಪಣಮಸ್ತು 5 ಕೃಷ್ಣನ ಮಲಗಿಸಿ ತೊಟ್ಟಿಲ ತೂಗುವೆ ಮಧ್ವೇಶಾರ್ಪಣಮಸ್ತುಬಿಟ್ಟು ಅಭಿಮತ ಘಟ್ಟಿಸಿ ಪಾಡುವೆ ಮಧ್ವೇಶಾರ್ಪಣಮಸ್ತು 6 ಪರಿ ತೂಗುವೆ ಮಧ್ವೇಶಾರ್ಪಣಮಸ್ತುಗುರು ಪುಷ್ಕರ ಮುನಿ ಸುರದ್ವಾರದಿ ಮಧ್ವೇಶಾರ್ಪಣಮಸ್ತು 7 ಕರ್ಮವು ಸಿರಿಯಂದು ಹರಿಗರ್ಪಿಸುವೆ ಮಧ್ವೇಶಾರ್ಪಣಮಸ್ತುದಾಸರ ಚರಣಕೆ ಶಿರಬಾಗುವೆ ನಾ ಮಧ್ವೇಶಾರ್ಪಣಮಸ್ತು 8 ಕೃತಿ ಇಂದಿರೇಶಗರ್ಪಿಸುವೆ ಮಧ್ವೇಶಾರ್ಪಣಮಸ್ತು ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತು 9
--------------
ಇಂದಿರೇಶರು
ಮನವೇ ನೀನೆಚ್ಚರಿಕೆ ಬಿಡದಿರು ಅನುದಿನವು ಹರಿಧ್ಯಾನದೊಳಗಿರು ಪ ವನಿತೆ ಧನಧಾರಿಣಿಯ ನೆಚ್ಚಿ ತನುವೆ ತಾನೆಂಬುದನುಚಿತವು ಅ.ಪ ಬರಿಯಕೈಯಲಿ ಭೂಮಿಗಳಿಸಿದೆ ದುರಿತಭಾರವ ಧರಿಸಿರ್ಪೆ ನರರೆ ಹರಿಸುವರಾರೋ ಕಾಣಿರ ಅರಿತುಕೊಂಡಿರೆ ತಿಳಿಸಿರೈ 1 ಕಾಯವಸ್ಥಿರ ಹೇಮಸಂಸ್ಕøತಿ ಮಾಯಾಪಾಶದ ಬಲೆಗೆ ಸಿಲ್ಕಿ ನಾಯಿನರಿಯಂದದಲಿ ತೊಳಲಿ ಸಾಯವರ ಕಂಡಳುವದೇಕೋ 2 ಜಾತಿಧನವಧಿಕಾರ ಖ್ಯಾತಿಗೆ ಆತುರದೊಳಭಿಮಾನ ಪಡುವೇ ಪಾತಕರೆ ಹಿಂಜರಿಯದಂತೇ ಪ್ರೀತಿಯಿಂ ಪರಪೀಡೆಗೈವೇ 3 ಪೊಡವಿಯೊಳ್ ಪೆಣ್ ಬಾಲ ವೃದ್ಧರು ಬಡವರಾರ್ತರು ಕುಂಟಕುರುಡರು ಎಡೆಯ ಜೀವಿಗಳನ್ನು ಕರುಣದಿ ಕಾಣೆಲೋ ಕಡುಜಾಣನೇ 4 ಸತ್ತಮೇಲೇನೆಂದು ಯೋಚಿಸು ಮುತ್ತಿ ಕತ್ತಿಯೊಳಿರಿವರೈ [ಮ]ತ್ತಕ್ಷಣದ ಫಲಕಾಶೆಪಡದಿರು ಸತ್ಯವಂ ಪಿಡಿ ನಿತ್ಯವೂ 5 ಯಮುನೆ ಹೊಕ್ಕರು ಯಮನು ಬಿಡನೂ ಅಮಮ ನರಕದೊಳಿಳಿಪರೈ ರಮಾರಮಣನ ಒಲುಮೆಗಾಗಿ ಶ್ರಮಿಸಿ ಪರರುಪಕಾರಿಯಾಗೋ6 ಪತಿತಪಾವನ ಜಾಜಿಕೇಶವ ನತಿಶಯದಿ ತಾ ಜಗವ ಪಾಲಿಪ ಚತುರ್ವೇದ ಶ್ರುತಿ ಪ್ರಮಾಣವ ಮತಿಯುತರು ಮೀರುವರೆ ಮರುಳೇ 7
--------------
ಶಾಮಶರ್ಮರು
ಮನ್ನಿಸೆನ್ನ ಮಧುಸೂದನ ಪ. ಮದನನಯ್ಯ ಮೋಹನಕಾಯಉನ್ನತಗುಣನಿಲಯ ಉಡುಪಿನ ಕೃಷ್ಣರಾಯ ಅ.ಪ. ಶ್ರುತಿಗಳ ತಂದೆ ಮುನ್ನ ಸುರಮುನಿಗಳ ಮನ-ಕತಿ ಹರುಷವ ಕೊಟ್ಟೆ ಅಗಣಿತಗುಣರನ್ನಯತಿಗಳ ಪಾಲಿಸಿದೆ ಮುಂದುವರಿವದಿತಿಜರ ಸೋಲಿಸಿದೆ ಈ ಮಹಿಯೊಳುಮತಿವಂತರ ಪೊರೆದೆ ಮಹಿಮೆಯಿಂದ ಮೆರೆದೆ1 ಅಚ್ಚಹಾರಶೋಭಿತ ಕಂಠ ಆಶ್ರಿತರಿಗೆ ನೀ ನಂಟಮೆಚ್ಚಿದ ಪಾರ್ಥನ ಮಿತ್ರನೆನಿಸಿದೆ ಸುಚರಿತ್ರಮೆಚ್ಚಿದ ನಿನ್ನಯ[ಭಕ್ತÀ್ತ]ವೈಕುಂಠದಮುಚ್ಚಳ ತೆಗೆಸಲು ಶಕ್ತ ಅಚ್ಚುತ ನಿನ್ನಅರ್ಚಿಸಿದವ ಕೃತಾರ್ಥ ಅವನೆ ಸರ್ವಸಮರ್ಥ2 ಎಂದೆಂದು ನಿನ್ನವರೊಳು ಎನ್ನ ಕೂಡಿಸೊ ಕೃಪಾಳುವಂದ್ಯ ಗರುಡನ ಸ್ಕಂಧವೇರಿ ಬಹ ಗೋವಿಂದತಂದೆ ನೀನೆ ತಾಯಿ ನೀನೆ ಹಯವದನಬಂಧು ನೀನೆ ಬಳಗ ನೀನೆ ಮತ್ತದರಿಂದಕುಂದುಮಾಡುವುದು ಬಿಡೋ ಕಂಡು ಕರುಣವ ಮಾಡೋ 3
--------------
ವಾದಿರಾಜ
ಮಹಾಲಕ್ಷ್ಮಿ ಇಂದಿರೇ ಪಾಲಿಸು ಕಮಲಮಂದಿರೆ ಪ ಇಂದಿರೆ ಇಂದುನಿಭಾಸ್ಯೆ - ಗುಣ - ವೃಂದ ಶೋಭಿತೆ ಶುಭಗಾತ್ರೆ - ಆಹಾ ಇಂದು ಶೇಖರಸುರವಂದಿತಪಾದ ದ್ವಂದಾರವಿಂದಳೆ ಮಂದಸ್ಮಿತಾನನೆ ಅ.ಪ ಅರುಣದಿಂದೊಪ್ಪುವ ಚರಣ ಯುಗಳಾ - ಭರಣ ಭೂಷಿತ ಯೋಗಿಶರಣಾ ನಿಜ ಶರಣರ್ಗೆ ರನ್ನದರ್ಪಣಾಭವ - ಅರಣತಾರಣಕಾರಣ - ಆಹಾ ಶರಣು ಪೊಕ್ಕೆನು ದೇವಿ ಚರಣಕಮಲಯುಗ ವರಣಿಸಲಳವಲ್ಲ ಕರುಣಿಸು ನೀ ಎನ್ನ 1 ಶ್ರುತಿನುತವಿತತಸÀಚ್ಚರಿಯೆ ಸದಾ- ನತÀರ ಸಂತೈಪೊದಾಶ್ಚರಿಯೆ ನಿನ್ನ ಸ್ತುತಿಸಿದವಗೆ ಮಹಾ ಶಿರಿಯೆ ಮತ್ತೆ ನಿರಯ ಅಹಾ ಸತತ ನಿನ್ನಲಿ ಮನೋರತಿನಿತ್ತು ಶೋಕದ ವ್ರತತಿ ಖಂಡಿಸಿ ಸುಖತತಿಯ ಪಾಲಿಸು ದೇವೀ 2 ಜಗಕೆ ಸೃಷ್ಟಿಸ್ಥಿತಿನಾಶಕಾರಿ ಬಗೆ ಬಗೆ ಭವನದಲ್ಲಿ ಕ್ಲೇಶ-ಹರಸಿ ಸುಗಮದಿಂದ ಪರಿತೋಷ-ಬಡಿಸಿ ನಗಿಸುವಿ ಎನ್ನಭಿಲಾಷಾ ಅಹಾ ನಗೆಮುಖದಲಿ ಗುರು ಜಗನ್ನಾಥ ವಿಠಲನ್ನ ನಿತ್ಯ ಸೊಗಸಾಗಿ ಇರುತಿಪ್ಪಿ 3
--------------
ಗುರುಜಗನ್ನಾಥದಾಸರು
ಮಹಿಮೆಯನಾರು ಬಲ್ಲರುನಹಿಪ್ರತಿಯೆಂದು ನಿನ್ನ ಪಾಡುವರಲ್ಲದೆ ರಂಗ ನಿನ್ನ ಪ. ವಾಮನನಾಗಿ ಬಂದು ಬಲೀಂದ್ರನಿಗೆ ಸಂದಸೀಮೆಯನೆಲ್ಲವ ಸಲೆವಿಟ್ಟ ತ್ರಿವಿಕ್ರಮ ನಿನ್ನಸಾಮಥ್ರ್ಯವ ಶ್ರುತಿಗಳು ಪೇಳೆ ಉಗುರ್ಗೊನೆಆ ಮಹಾ ಬೊಮ್ಮಾಂಡವ ಸೀಳೆ ದೇವೇಂದ್ರನುಸಾಮ್ರಾಜ್ಯದಿ ಸುಖದಿಂ ಬಾಳೆ ಕೃಷ್ಣ ನಿನ್ನ1 ಇಂದ್ರ ಕೋಪಿಸಿ ಮಳೆಗರೆಯಲು ನಿನ್ನತಂದೆ ತಾಯಿ ಬಂಧು ಬಳಗಂಗಳೆಲ್ಲ ಕಂಗೆಡಲುಅಂದು ಬಲುಗಿರಿಯನೆತ್ತಿ ಗೋ ಗೋಪಾಲರವೃಂದದ ಭಯವ ನುಗ್ಗೊತ್ತಿ ಪಾಲಿಸಿದೆಚೆಂದದಿ ನಿನ್ನಯ ಸಂಪತ್ತಿ ಕೃಷ್ಣ ನಿನ್ನ2 ಇಂದು ಮಧ್ವಮುನೀಂದ್ರಗೊಲಿದು ಕಡುಕೃಪೆಯಿಂದತÀಂದೆ ಹಯವದನ ಮುಕುಂದ ಉಡುಪಿನೊಳಗೆನಿಂದು ಸದಾ ಪೂಜಿಸಿಕೊಂಡೆ ನಿನ್ನ ಮುಂದೆನಂದಾದೀಪಗಳನು ಕಂಡೆ ಭಕ್ಷ್ಯಭೋಜ್ಯಕಂದಮೂಲ ಫಲಂಗಳುಂಡೆ ಕೃಷ್ಣ ನಿನ್ನ 3
--------------
ವಾದಿರಾಜ
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ಮಾರುತಿ ಪ್ರಾಣ ಮೂರುತಿಪ ಸಾರುವೆ ತವಶ್ರುತಿ ಧೀರ ಭಾರತೀಪತಿ ಅ.ಪ ಭರದಿ ಸಾಗರ ಹಾರಿ ದುರುಳನ ಪುರ ಸೇರಿ ವರಮಾತೆಗುಂಗುರ ತೋರಿ ವನಗೈದಿ ಸೆರೆ ಶೂರ 1 ಸೊಕ್ಕಿನಿಂದ ಮೆರೆವಂಥ ರಕ್ಕಸರನು ಪಂಥ ಇಕ್ಕಿ ನೀ ಗೆಲಿದಂಥ ಅಃಭಾಪುರೆ ಹನುಮಂತ 2 ಸಿರಿಯ ರಾಮನಿಗಿತ್ತ ವರ ಸೀತಾವೃತ್ತಾಂತ ವರ ಸದ್ಭಕ್ತರ ಪ್ರೀತ ಪಾಲಿಸೊ ವಿಖ್ಯಾತ 3
--------------
ರಾಮದಾಸರು
ಮುಚುಕುಂದ ವರದ ವಿಠಲ | ಕಾಪಾಡೊ ಇವಳಾ ಪ ಖಚರಾರಿವಹ ಸವ್ಯ | ಸಾಚಿಸಖ ದೇವ ಅ.ಪ. ಕೃತಿ ರಮಣದೇವಾ |ಮತಿಮತಾಂ ವರರಂಘ್ರಿ | ಹಿತ ಸೇವೆ ಕೈಕೊಂಡುಅತಿಶಯದ ಸಾಧನದಿ | ಸಂಪನ್ನಳೆನಿಸೊ 1 ಗುರುವೆ ತಾರಕನೆಂಬ | ವರಮತಿಯ ಕರುಣಿಸುತಹರಿಗುರು ಸೇವೆಯಲಿ | ಪರಮ ಸದ್ಯಕ್ತೀಕರುಣಿಸಿ ಪೊರೆಯುವುದು | ಸರ್ವಾಂತರಾತ್ಮಕನೆಸರ್ವಸುರ ಸಂಸೇವ್ಯ | ಮರುತಂತರಾತ್ಮ 2 ಹರಿಯೆ ಸರ್ವೊತ್ತಮನು | ಶಿರಿವಾಯು ಮೊದಲಾದಸುರರೆಲ್ಲ ಹರಿಯ ಕಿಂ | ಕರರೆಂಬ ಮತಿಯಾಕರುಣಿಸುತ ಸಾಧನವ | ಪರಿಪೂರ್ತಿ ಗೈಸೊಹರಿಸುರಮುನಿಯ ಸಂಸೇವ್ಯ | ಕಾರುಣ್ಯ ಮೂರ್ತೇ 3 ಕರಿವರದ ಜಾಮಿಳನ | ವರದನೆಂದೆನುತ ಶ್ರುತಿಓರಲುತಿವೆ ಹೇ ಸ್ವಾಮಿ | ಗರುಡ ಧ್ವಜಾತ್ಮಾದುರಿತ ದುಷ್ಕತ ಕಳೆದು | ಪರಿಪರಿಯ ಸೌಖ್ಯಗಳಕರುಣಿಸಿ ಪೊರೆಯುವುದು | ಸುರಸಾರ್ವಭೌಮ 4 ಭವ | ನೋವ ಕಳೆಯಲ್ಕೇನೀವೊಲಿದು ಇವಳೀಗೆ | ಪಾವನ ಸ್ಮøತಿಯಿತ್ತುಕಾವುದೆನೆ ಬೇಡ್ವೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೊರೆ ಕೇಳು ನೀನೆನ್ನ ಕರುಣದಿ ತವಪಾದ ಪರಮಭಕ್ತಗಗೊಲಿಸದಿರು ದೇವ ಚರಣದಾಸರ ಕಾವ ಸಿರಿಯ ಸಖಜೀವ ಪ ಕ್ಷಿತಿಯೊಳು ಸತಿಸುತರತಿ ಮೋಹರತಿಯೊಳು ಮತಿಶೂನ್ಯನೆನಿಸಧೋಗತಿಗೆಳೆಸದೆ ಪತಿತಪಾವನ ನಿಮ್ಮ ಶ್ರುತಿಭೋದ್ವ್ಯಾಕ್ಯದಭಿ ರತಿಯನೆನ್ನೊಡಲೊಳು ನೆಲೆಸೀಶಾ ಹತಕಂಸ ಸುರತೋಷಾದ್ವಿತಿ ಪಂಚಶಿರ ನಾಶ 1 ವಿಷಯ ವಾಸನದೇಳಸ್ವಿಷಮ ಸಂಸಾರವೆಂಬ ಮುಸುಕಿದ ಮಡುವಿನೊಳ್ಮುಳುಗಿಸಿದೆ ವಸುಧೆಯೊಳಸೆವ ಆ ಅಸಮಹಿಮನ ಪಾದ ದಾಸರ ಸಂಗ ನೀಡ್ವಿಮಲಾಂಗ ಭಂಗ ಕುಸುಮಾಕ್ಷ ಕೃಪಾಂಗ 2 ಮದನಕದನದಿ ಮುದಸುಖವಿಧಿಸಗ ಲ್ಹೋದ ಸುದತಿಯಳ ನೆನೆವಂತೆ ಪಾದ ಸದುಭಕ್ತಿ ಹಂಬಲ ಅಗ ಲದಿರಿಸು ರಘುಕುಲಸೋಮ ಸದುಭಕ್ತರ ಪ್ರೇಮ ಸುದಯನೆ ಶ್ರೀರಾಮ3
--------------
ರಾಮದಾಸರು
ಮೋಹ ಬೇಡಣ್ಣಾ ಸಂಸಾರದೊಳು ಪ ಎರವಿನ ಕಂಗಳು ಎರವಿನ ಶ್ರುತಿಯೊಳು | ನಾಸಿಕ ಎರವಿನ ನಾಲಿಗೆ | ಎರವಿನ ಕರಗಳು ಎರವಿನ ಪಾದವು | ಎರವಿನ ಬುಧ್ಯರವಿನ ಬದುಕು 1 ಎರವಿನ ಹಣಗಳು ಎರವಿನ ಭೂಷಣ | ವಾಹನ ಎರವಿನ ಸಿರಿಸುಖ | ಎರವಿನ ತರುಣಿಮದ್ಯೆರವಿನ ಸುತರು | ಎರವಿನ ಬಂಧು ಎರವಿನ ಬಳಗಾ 2 ಹರಿಯೇ ಕರ್ತನು ಹರಿ ಸೂತ್ರಾತ್ಮನು | ಗುರುಮಹಿಪತಿ ಪ್ರಭು ಹರಿ ಪರವೆಂದು | ಹರಿಯನೆ ಸ್ಮರಿಸಿ ಹರಿಯನೇ ಧ್ಯಾನಿಸಿ | ಹರಿಯನೆ ಪೂಜಿಸಿ ಹರಿ ಪದಹೊಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಥಾದೇವೊ ತಥಾ ಗುರೌ ಶ್ರುತಿ ಹೇಳಿದ ಸನ್ಮತಲಿರ್ಯೊ ಧ್ರುವ ವೃಥಾ ಅಭಾವ ನೀ ಹಿಡುವರೆ ಸ್ವತ:ಸಿದ್ಧವ ತಾಂ ಬಿಡುವರೆ ಸತ್ಸಂಗದಲಿ ನೋಡಿನ್ನಾರೆ ಚಿತ್ಸುಖ ಹೊಳೆವರು ಕಣ್ಣಾರೆ 1 ಮುಗಿಲಿಗೆ ಮತ್ತೆ ಮುಗಿಲುಂಟೆ ಹಗಲಿಗೆ ಹಗಲಾಗುದುಂಟೆ ಜಗ ಇಹುದಕೆ ಜಗಮುಂಟೆ ಹೀಗಾದ ಮ್ಯಾಲೆ ವಸ್ತು ಎರಡುಂಟೆ 2 ಅನುಭವಕಿದರಿಟ್ಟು ಬಾಹುದು ಖೂನ ಹೇಳವ್ಯಾವು ನೋಡು ವೇದ ದೀನ ಮಹಿಪತಿಗಿದೆ ಬೋಧ ಭಾನುಕೋಟಿತೇಜನೊಂದೇ ತಾನಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ