ಒಟ್ಟು 1012 ಕಡೆಗಳಲ್ಲಿ , 86 ದಾಸರು , 756 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಲೆ ಬೆಳಗಾಯಿತು ತಲೆ ಬೆಳಗಾಯಿತು ಎನ್ನ ಬೆಳಗದೊಳು ಕೂಡಿ ಧ್ರುವ ಹಿಂದೆ ಗೋವಿಂದನು ಮುಂದೆ ಮುಕುಂದನು ಅಂದಿಗಿಂದಿಗೆ ಅನಿರುದ್ಧ ತಂದೆ ತಾಯಿಯ ವೃಂದಾವನ ಪತಿಯು ಮಂದರಧರ ಬಂಧು ಬಳಗ 1 ಕುಂದ ನೋಡದೆ ಸಲಹುವ ಸಂಕರುಷಣಾ ನಂದ ಮೂರುತಿ ತ್ರಿ ವಿಕ್ರಮನ ದುರಿತ ದೂರಮಾಡಿ ದಾಮೋದರ ಚಂದ ಮಾಡುವ ಜನಾರ್ದನನು 2 ಎಡಕ ಯಾದವ ನಾರಾಯಣ ಕೃಷ್ಣನು ಬಲಕ ಬಾಲಮುಕುಂದ ಎತ್ತ ನೋಡಿದರತ್ತ ಸುತ್ತ ಪುರುಷೋತ್ತಮ ಚಿತ್ತ ಮನದೊಳು ಅಚ್ಯುತನು 3 ಪ್ರಾಣಪತಿಕರಿಸಿಹ್ಯ ಪ್ರದ್ಯುಮ್ನ ಆಭಯನಿತ್ತಿಹ ಪದ್ಮನಾಭ ಮಾಧವ ಮಧುಸೂದನ ಯದು ಕುಲೋತ್ತಮ ಶ್ರೀಧರನು 4 ತುಂಬಿ ಹೃಷಿಕೇಶ ದೃಷ್ಟಿಮೂರುತಿ ನರಸಿಂಹ ದೃಷ್ಟಿಯೊಳಗೆ ಹರಿ ವಿಷ್ಣು ವಾಸುದೇವ ಸೃಷ್ಟೇಶ ಗುರು ಕೇಶವನು 5 ಲಕ್ಷ್ಮಿಯೊಳಗೆ ಗುರು ಲಕ್ಷುಮಿಕಾಂತನು ರಕ್ಷಿಸುವ ಅಭೋಕ್ಷಜನು ಉಪೇಕ್ಷವಿಲ್ಲದೆ ಹೊರೆವ ಉಪೇಂದ್ರನು ಮೂರ್ತಿ ವಾಮನನು 6 ತುಂಬಿದ ಬಳಗವು ಕಂಡ ಮೇದಿನಿಯೊಳು ಕಂದ ಮಹಿಪತಿ ಸ್ತುತಿಸಿದನು ಬಂದ ಜನ್ಮವು ಕಡೆ ಆಯಿತೆಂದು ಮನದೊಳು ತ್ರಾಹಿ ತ್ರಾಹಿ ಎಂದ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾತ್ಸಾರಕಿದು ಕಾಲವಲ್ಲ ರಂಗಯ್ಯ ಶ್ರೀ- ವತ್ಸಲಾಂಛನ ಸುಖ ಚಿನ್ಮಯನೆ ವತ್ಸನ ಧ್ವನಿ ಕೇಳಿ ಒದಗುವ ಗೋವಂತೆ ಭೃತ್ಯರ ಸಲಹುವ ಬಿರುದುಳ್ಳ ನರಸಿಂಹ ಪ. ಹುಚ್ಚಾಗೆಲ್ಲರ ಕಚ್ಚುವ ನಾಯಂತೆ ತುಚ್ಛವಾದ ಬಗುಳುಚ್ಚರಿಸಿ ಇಚ್ಛಾನುಸಾರದಿಂದಿರುವ ಹೂಣನ ಬಾಯಿ ಮುಚ್ಚಿಸಿ ಮೂಲೆಯೊಳ್ಮುರಿದೊತ್ತು ಮುರಹರ 1 ನಿನ್ನ ಸೇವೆಯನ್ನು ನಿರುತದಿ ನಡೆಸುತ ಅನ್ಯರ ಲಕ್ಷಿಸದಿರಲೆನ್ನನು ಭಿನ್ನ ಭಾವದಿ ಭೀತಿ ಬಡಿಸುವ ದುಷ್ಟನ ಇನ್ನುಪೇಕ್ಷಿಸಿ ಸುಮ್ಮನಿರುವೆ ಯಾತಕೆ ಸ್ವಾಮಿ 2 ದುಷ್ಟ ಹಿರಣ್ಯಚರ್ಮಾದಿದಮನ ನಿನ- ಗೆಷ್ಟೆಂದು ಪೇಳಲಿ ವಿಧಿಜನಕ ಸೃಷ್ಟಿಗೊಡೆಯ ವೆಂಕಟೇಶನ ಹೂಣನ ಮಾಧವ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾರೆ ಆರುತಿ ಸಾರಸಾಂಬಕಿ ಭಾರತೀವರಗೆ ಬೆಳಗುವೆನು ಪ ನರಸಿಂಹಾರ್ಯ ಶೇವಿತಗೆ ಅ.ಪ ನೂರುಯೋಜನ ವಾರಿನಿಧಿಯನು ಹಾರಿ ಜಾನಕಿಗೆ ಚಾರು ಮುದ್ರಿಕೆಯನಿತ್ತು ಪುರದಿಭಯ ತೋರಿರಾಕ್ಷಸಗೆ ನಾರಿಮಣಿಯ ಶುಭವಾರುತಿಯ ರಘುವೀರಗರುಹಿದ ಮಾರುತಾತ್ಮಜಗೆ 1 ಇಂದು ಕುಲದಲಿ ಬಂದು ಕುಂತಿಯ ಕಂದನೆಂದೆನಿಸಿ ನಿಂದು ರಣದಿ ಖಳವೃಂದ ಸಹಿತ ಕುರುವೃಂದವನು ಮಥಿಸಿ ಛಂದದಲಿ ಪಡೆದಂಥ ಭೀಮಗೆ 2 ಭೂತಳದಿ ಸುಖತೀರ್ಥರೆನಿಸಿ ಸಚ್ಛಾಸ್ತ್ರವನು ರಚಿಸಿ ಭೀತಿ ಪುಟ್ಟಿಸುತ ಖ್ಯಾತಮಾಯ್ಗಳ ವ್ರಾತವನು ಜಯಿಸಿ ಪೂತ ಕಾರ್ಪರ ಕ್ಷೇತ್ರ ನರ ಮೃಗನಾಥನ ಪರಮಪ್ರೀತಿ ಪಾತ್ರನಿಗೆ 3
--------------
ಕಾರ್ಪರ ನರಹರಿದಾಸರು
ತಾಳಲಾರೆನೆ ಜಗದಿ ಬಾಳಲಾರೆನೆ ನಾಗೇಶಾಂಗಶಯನನ ಸುಖಭೋಗ ಪ ಎಂದಿಗೆ ಆಗದಿರ್ದೊಡೆ ತಾಳಲಾರೆನೆ ಜಗದಿ ಬಾಳಲಾರೆÀನೆ ಅ.ಪ ಸವತಿ ರುಗ್ಮಿಣಿ ಭವನದಿ ಮು ದವನೆ ತಾ ಮರೆತು ಕುಳಿತಾ 1 ಇಂದಿರೇಶ ನಂದಧೀಶ ಮಂದಿರದೀಗ ಬಾರದಿರಲು 2 ನರಸಿಂಹ ವಿಠಲನೀಗ ಭರದಿ ಮೊಗವ ತೋರದಿರಲು 3
--------------
ನರಸಿಂಹವಿಠಲರು
ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ ಪ ಪೊಳೆವ ನೀರೊಳು ಗೆಲುವ ಮೋರೆಯನೆಲವ ನೋಡುವ ಸುಳಿವ ಕಂಬದಿ |ಇಳೆಯನಳೆಯುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ಧ್ವನಿಗೆ ||ನಳಿನಮುಖಿಯರ ನಾಚಿಸುವ ಬಲು ಹಯದಳದ ಬಹು ಹವಣಿಗಾರನೆ ಅ .ಪ. ಬೊಮ್ಮ ಭಾರ ಬೆನ್ನಿಲಿಕೋರೆ ದಾಡೆಯ ನಾರಸಿಂಹನೆ |ಧರೆಯ ಬೇಡಿದ ಧೀರ ಪುರುಷನೆವಾರಿ ಬಂಧನ ಮಾರಜನಕನೆ ||ನಾರಿಯರ ವ್ರತವಳಿದು ಕುದುರೆಯನೇರಿ ಮೆರೆಯುವ ಸುಂದರಾಂಗನೆ 1 ಅಖಿಳ ಭೂಮಿಯ ತಂದ ನರಹರಿ |ಯುಕುತಿಯಲಿ ನೆಲನಳೆದ ಭಾರ್ಗವಮುಕುತಿಗೋಸುಗ ಫಲವ ಸವಿದನೆ ||ರುಕುಮನನುಜೆಯ ರಮಣ ಬೌದ್ಧನೆಲಕುಮಿ ರಮಣನೆ ಕಲ್ಕಿರೂಪಿಯೆ 2 ಬನ್ನ ಬಡುಕನೆ ||ಹೆಣ್ಣುಗಳ ವ್ರತ ಕೆಡಿಸಿ ತೇಜಿಯಬೆನ್ನನೇರಿದ ವ್ಯಾಸ ವಿಠ್ಠಲ* 3
--------------
ವ್ಯಾಸವಿಠ್ಠಲರು
ತೆರಳಿದರು ವೈಕುಂಠ ಪುರದರಸನ ಚರಣಾಬ್ಜ ಸೇವಿಸಲು ನರಸಿಂಹದಾಸರು ಪ ಜವಹರುಷದಿಂದ ಪಾರ್ಥಿವ ಮರುಷ ಮಾರ್ಗಶಿರ ಅಪರ ಪಕ್ಷದ ಪಪ್ಠಿ ಭೌಮವಾರ ದಿವದಿ ಪ್ರಾತಃಕಾಲ ಸಮಯದಲಿ ಶ್ರೀ ಲಕ್ಷ್ಮೀ ಕಮಲ ಧೇನಿಸುತ ಸಂತೋಷದಲಿ 1 ವರಹತನಯಾತೀರ ಪ್ರಾಚಿದಿಗ್ಬಾಗದಲಿ ಸುಕೃತ ಛಾಗಿಯೆಂಬಾ ಪುರವರದಿ ತತ್ವ ತತ್ವೇಶರೊಳು ಲಯವರಿತು ಪರಮ ಪುರುಷನ ದಿವ್ಯ ನಾಮಗಳ ಸ್ಮರಿಸುತಲಿ 2 ಭವ ಅನಂ ತರಸನ ಜಠರದಿ ಜನಿಸಿ ಬಂದೂ ಪುರಂದರ ದಾಸರಂಘ್ರಿಗಳ ಸ್ಮರಿಸುತ ಜಗನ್ನಾಥ ವಿಠಲನೊಲುಮೆಯ ಪಡೆದು 3
--------------
ಜಗನ್ನಾಥದಾಸರು
ತೊರವಿ ನರಸಿಂಹ ಕರವ ಪಿಡಿಯೊ ತೊರವಿ ನರಹರೆಆಹಾ ತೊರವಿ ನರಹರೆ ಪ ಸ್ತಂಭಜಾತ ನಂಬಿ ನಿನ್ನ ಅಂಬುಜಾತನೆಬಿಂಬದಂತೆ ಪಾಲಿಸೆನ್ನ ಸಾಂಬವಿನುತನೆ 1 ಛಟಿಛಟೆಂದು ಒಡೆದು ಕಂಬ ಪುಟಿದು ಸಭೆಯೊಳುಕಟಿಯ ತಟದೊಳಿಟ್ಟು ರಿಪುವ ಒಡಲ ಬಗೆದೆಯೊ 2 ಇಂದಿರೇಶ ಎನ್ನ ಹೃದಯ ಮಂದಿರದೊಳು ಬಂದು ತೋರೆ ಮುಖವ ನಿನ್ನ ವಂದಿಸುವೆನು 3
--------------
ಇಂದಿರೇಶರು
ತೊರವಿ ನರಸಿಂಹನ ಸ್ತೋತ್ರ ನರಹರೀ | ಪಾಲಿಸೊ ಎನ್ನ | ನರಹರೀ ಪ ನರಹರೀ | ನಮಿಸೂವೆ ನಿನ್ನ | ಚಾರುಚರಣ ಕಮಲಕ್ಕೆ ಮುನ್ನ | ಅಹತೊರವಿ ಕ್ಷೇತ್ರದಲ್ಲಿ | ಪರಿಪರಿ ಭಕುತರಮೊರೆಯ ಕೇಳ್ಕರುಣದಿ | ವರವ ನೀಡುತಲಿಹ ಅ.ಪ. ಪೂರ್ವ ಸಾಲಿಗ್ರಾಮ ರೂಪ | ದಲ್ಲಿದೂರ್ವಾಸ ಪೂಜಿತ | ರೂಪ | ಇದ್ದುಓರ್ವ ಭಕ್ತನಿಗೆ ಸಲ್ಲಾಪ | ತೇಜಗೈವದ ಕೇಳ್ವದು ಅಪರೂಪ | ಅಹಊರ್ವಿಯೊಳ್ ಚಿಮ್ಮಲಗಿ | ಸರ್ವಾಧಿಕವು ಕ್ಷೇತ್ರಇರ್ವೆ ನಾನಲ್ಲೀಗ | ತರ್ವೋದು ತೊರವೀಗೆ 1 ಸೊಲ್ಲ ಲಾಲಿಸಿ ಗಾಢ ಭಕ್ತ | ಎದ್ದುಚೆಲ್ಲೀದ ವಾರ್ತೆ ಸರ್ವತ್ರ | ಜನರಲ್ಲಸ ಗೊಳದೆ ಮುಂದತ್ತ | ಹಸಿಹುಲ್ಲನು ತೆಂಕದಿಶಿಯಿತ್ತ | ಅಹಚೆಲ್ಲುತ ಪೋಗುತಿರೆ | ಜ್ವಲೀಸಿತದುಚಿಮ್ಮಲ್ಲಿಗಿ ಊರ್ಬಳಿ | ಒಳ್ಳೆ ಕೃಷ್ಣಾತೀರ 2 ಸ್ವಪ್ನ ಸೂಚಿತ ತಾಣ ಬಗೆದು | ನೋಡೆಅಪ್ಪ ನೃಹರಿ ಕಂಡನಂದು | ಭಕ್ತರಪ್ಪಿ ಆನಂದಾಶ್ರು ಬಿಂಧು | ಕೈಚಪ್ಪಾಳೆ ಬಡಿದುಘೇಯೆಂದು | ಆಹಅಪ್ಪಾರ ಮಹಿಮನ | ಗೊಪ್ಪಾದ ಘನಮೂರ್ತಿಉಪ್ಪರಿ ತಂದಿಡುತ | ದರ್ಪದಿ ನಿಂತರು 3 ಶಿರಿ ಹಾಗೂ ಪ್ರಹ್ಲಾದರಾಯ | ಯುಕ್ತಹಿರಣ್ಯಕನ ತನ್ನ ತೊಡೆಯ | ಮೇಲೆಇರಿಸಿ ಉದರ ಸೀಳ್ದ ಬಗೆಯ | ಕೇಳಿಕರುಳನು ಮಾಲೆಯ ಪರಿಯ | ಆಹಧರಿಸುತ್ತ ತೋರ್ದನು | ಹಿರಣ್ಯಕಶಿಪೂಜತರಳ ಭಕ್ತನ ತೆರ | ತರಳನರಿದಿಷ್ಟೆಂದು 4 ಶಿಷ್ಟ ಮತ್ಸ್ಯಾವತಾರ | ಯುಕ್ತಶ್ರೇಷ್ಠ ಪ್ರಭಾವಳಿಹಾರ | ಸುವಿಶಿಷ್ಟದಿ ನರ ಮೃಗಾಕಾರ | ನಾಗಿಅಷ್ಟವು ಭುಜಯುಕ್ತಾಕಾರ | ಆಹಶಿಷ್ಟ ಭಕ್ತರಿಂದ ಕಷ್ಟವಿಲ್ಲದೆ ತೆರಳಿಶ್ರೇಷ್ಠ ತೊರವಿಯಲ್ಲಿ ಇಷ್ಟನಾಗಿ ನಿಂದ 5 ಮುನ್ನಿದ್ದ ನೃಹರಿಯ ಶಿಲೆಯ | ಕೊಂಡುಚೆನ್ನ ತೀರ್ಥದಿ ನರಹರಿಯ | ಇಡಲುಕೃಷ್ಣೆಗೆ ಪೋಗುವ ಪರಿಯ | ಪೇಳೆಘನ್ನ ಮೂರ್ತಿಯ ಒಯ್ದ ಬಗೆಯ | ಆಹ ಇನ್ನು ಮುನ್ನು ಪೇಳ್ವ | ನನ್ನೆಯ ಜನರಿಹರು ಮನ್ನಿಸುತೀವಾರ್ತೆ ಚಿನ್ಮಯನ ಕೊಂಡಾಡಿ 6 ಗುಪ್ತಾವು ಗಂಗಾ ಸನ್ನಿಹಿತ | ತೀರ್ಥಉತ್ತಮ ದಿಂದಭಿಷೇಚಿತ | ನಾಗಿನಿತ್ಯವು ಪವಮಾನ ಸೂಕ್ತ | ಪಂಚಯುಕ್ತವು ಪೂಜಾದಿ ಕೃತ | ಆಹಭಕ್ತಿ ಪೂರ್ವಕವಾದ | ಉತ್ತಮ ಸೇವೆಯನಿತ್ಯ ಕೈಗೊಳ್ಳುತ | ಭಕ್ತರಭೀಷ್ಟದ 7 ಮಾಸ | ಎರಡುಉತ್ಸವ ವೈಭವ ಘೋಷ | ಕೇಳಿ ಕುತ್ಸಿತ ಜನರೊಲ್ಲ ಈಶ | ಅಂತೆ ಸಚ್ಛಾಸ್ತ್ರ ಪ್ರವಚನ ಪೋಷ | ಆಹವತ್ಸಾರಿ ದುರುಳನ | ಕುತ್ಸಿತ ಉದರವವಿಸ್ತ್ರುತ ನಖದಿಂದ | ಕುತ್ತಿದ ಚಿಂತಿಸು 8 ನರಹರಿ ನಾಮಕ ಕವಿಯು | ಇಲ್ಲಿತೊರವಿಯ ನರಹರಿ ಸನಿಯ | ಚೆಲ್ವವರರಾಮ ಕಥೆಯನ್ನು ಬರೆಯು | ಅವ - ಕುವರ ವಾಲ್ಮೀಕಿಯೆ ಮೆರೆಯು | ಆಹತೊರವೆ ರಾಮಾಯಣ | ವಿರಚಿತ ವಾಯ್ತಿಲ್ಲಿಹರಿಯನುಗ್ರಹ ಜಾತ | ವರ ಕವಿತೆ ಉಲ್ಲಾಸ 9 ಹೃದಯ ಗುಹೆಯಲ್ಲಿ ವಾಸ | ಉಪನಿಷದು ಪೇಳ್ವದು ಅಂತೆಲೇಸ | ಬಲುಮುದದಿಂದ ಮಾಳ್ಪದ ವಾಸ | ಅಂಥಬುಧಜನಕಹುದು ಸಂತೋಷ | ಆಹವಿಧವು ಈ ಪರಿಯೆಂದು | ವಿಧಿಸಲು ಜಗತೀಗೆಹದುಳದಿ ತೊರವಿ ಸ | ನ್ನಿಧಿ ಗುಹೆಯೊಳುವಾಸ 10 ವಿಭವ | ದಿಂದಲೀವನು ಮುಕ್ತಿಯ ಸುಖವ | ಈತಕೈವಲ್ಯಾಕಧಿಪತಿ ಇರುವ | ಆಹತಾವಕನಾಗಿ ಗುರು | ಗೋವಿಂದ ವಿಠಲನಭಾವದಿ ನೆನೆವಂಗೆ | ತೀವರ ವರವೀವ11
--------------
ಗುರುಗೋವಿಂದವಿಠಲರು
ತೋರಮ್ಮಯ್ಯ ಯತಿಕುಲ ಸರ್ವಭೌಮನ್ನ ಪಮೂರವತಾರದ ಪುಣ್ಯರಾಶಿಯನು ತೂರಿಸುಜನರ ಪೊರೆವ ಉದಾರನ ಅ.ಪಅಸುರ ಬಾಲನಂತೆ ಹರಿಯಲಿ ಅಸಮ ಭಕ್ತಿಯಂತೆಅಸುರಾರಿಯ ನರಸಿಂಹರೂಪವನು ಅಸುರತಾತನಿಗೆ ತೋರ್ದನಂತೆ 1ಪರಮಹಂಸನಂತೆ ಪುರಂದರದಾಸರ ಗುರು ಅಂತೆಅರಸನ ರಕ್ಷಿಸಿ ಅರಸನಾಗಿ ಕ್ಷಣ ಉದ್ಗ್ರಂಥಗಳನು ರಚಿಸಿದನಂತೆ 2ಕಡುಬಡತನವಂತೆ ಸುದಾಮನ ಮರಸಿ ಬಿಟ್ಟಿತಂತೆಸಡಗರದಿಂದ ಸನ್ಯಾಸಿಯಾಗಿ ದರ್ಮಸಾಮ್ರಾಜ್ಯವನಾಳಿದನಂತೆ3ಕಾಮಧೇನುವಂತೆ ಕಲಿಯುಗ ಕಲ್ಪವೃಕ್ಷವಂತೆನೇಮದಿಂದ ಸೇವೆಯನು ಮಾಡಿದರೆ ಕಾ'ುತಾರ್ಥಗಳನೀಯ್ವನಂತೆ 4ಸಾಲವಪುರದಂತೆ ಭಕ್ತರಿಗೊಲಿದು ಬಂದನಂತೆಮೂಲಸ್ಥಾನ ಮಂತ್ರಾಲಯವಂತೆ ಭೂಪತಿ'ಠಲನ ತೋರುವನಂತೆ 5
--------------
ಭೂಪತಿ ವಿಠಲರು
ತ್ತಾತ್ವಿಕವಿವೇಚನೆ ಏಕ ಪಂಚಾಶದ್ವರ್ಣವಾಚ್ಯ ಶ್ರೀಕಳತÀ್ರನೆ ಸರ್ವಶಬ್ದಗೋಚರನಯ್ಯ ಪ ಕಾಯ ಕಾರ್ಯಕಾರಣವನನುಸರಿಸಿ ತ್ರಿಕರಣದೊಳಗಿದ್ದು ಕ್ರಿಯವ ನÀಡೆಸುವ ದೇವಅ.ಪ ಅಜಾನಂದೇಂದ್ರೇಶ ಶಿರ ಮುಖ ನೇತ್ರದೊಳು ನಿಜರೂಪ ಉಗ್ರ ಊರ್ಜ ಕರ್ಣದೊಳು ನಿಜ ಋತುಂಬರ ಋಘನಾಸದಲ್ಲಿ ಲೃಶಾ ಲೃಜ ವರ್ಣವಾಚ್ಯ ಗಂಡ ಸ್ಥಳದಲ್ಲಿಪ್ಪ 1 ಅನಂತಾರ್ಥಗರ್ಭನೆ ನೀ ವಾಚಿಯಲ್ಲಿ 2 ಕಪಿಲ ಖಪತಿ ಗರುಡ ಘರ್ಮ ದಕ್ಷಿಣಭುಜದೊಳ್ ಅಪರಿಚ್ಛಿನ್ನನೇ ನೀನು ಸಂಧಿಗಳಲಿ ಸುಫಲದಾತನೆ ಙಸಾರನಾಮದಲಿದ್ದು ಅಂಗುಲ್ಯಾಗ್ರದಲ್ಲಿ ನೀ ನಿರುತರಲಿ ನೆಲಸಿರ್ಪೆ 3 ಝೂಟಿತಾರ ವರ್ಣವಾಚ್ಯವ ಮಾಡಿ ನಿರುತದಲಿ ವಾಮಭುಜ ಸಂಧಿಗಳಲ್ಲಿರುವೆ ಬೆರಳ ಅಗ್ರದಿ ಞಮನಾಮದಲಿ ನೆಲೆಸಿರುವೆ 4 ಟಂಕ ಠಲಕ ಡರೌಕ ಢರಣಣಾಕ್ಮಕ ನೀ ನಾ ಟಂಕ ರಹಿತ ದಕ್ಷಿಣ ಪಾದದಲ್ಲಿ ಬಿಂಕವಿಲ್ಲದೆ ತಾರ ಥಪತಿ ದಂಡಿ ಧನ್ವೀ ನಮ್ಯನಾಮನೆ ವಾಮಪಾದ ಸಂಧಿಗಳಲ್ಲಿ 5 ಪರಫಲಿ ವರ್ಣವಾಚ್ಯ ದೇಹದಪಾಶ್ರ್ವ ಬಲಿ ಭಗನಾಮ ಪೃಷ್ಟ ಗುಹ್ಯದಲಿ ನಿರುತ ಮನ ವರ್ಣವಾಚ್ಯ ನೆನಿಸಿಹೆ ದೇವ ತುಂದಿ ಸ್ಥಾನದಲಿ ಎಂದೆಂದು ನಿಂದೆ6 ಯಜ್ಞ ಹೃದಯದಿ ರಾಮ ತ್ವಕ್‍ಲಕ್ಷ್ಮೀಪತಿ ರುಧಿರ ಶಾಂತಸಂವಿತ್ ಮಾಂಸದಲ್ಲಿ ಸುಜ್ಞ ಷಡ್ಗುಣ ಮಜ್ಜ ಸಾರತ್ಮ ಅಸ್ತಿಯು ಹಂಸ ಸ್ನಾಯುಳಾಳುಕ ನೀ ಪ್ರಾಣದಲ್ಲಿ 7 ಕ್ಷಕಾರವಾಚ್ಚ ಶ್ರೀ ಲಕ್ಷ್ಮೀ ನರಸಿಂಹ ಕ್ಷರ ಜೀವರಾ ದೇವ ಸರ್ವ ಸ್ಥಳದಲ್ಲಿಪ್ಪ ಶ್ರೀಕರಾರ್ಚಿತ ನಿನ್ನ ವಾಕ್ ಮನೋರೂಪಗಳು ಸಕಲ ಸಚ್ಛಾಸ್ತ್ರಾಗಮಗಳಾಗಿಹವೋ 8 ಸ್ವರವರ್ಣ ಸಂಯುಕ್ತ ಶಬ್ದವಾಕ್ಯದಿ ಸಕಲ ಪುರಾಣಾಗಮದಿ ಶಾಸ್ತ್ರ ಸರ್ವದಿ ನಿತ್ಯ ನಿರುತ ನಿನ್ನನುದಿನದಿ ಪೊಗಳುತಿಹವೋ 9 ಸ್ವಪ್ರಯೋಜನಕಾಗಿ ವರ್ಣ ಭೇದದಿ ವಾಕ್ಯ ಅಪ್ರಕೃತವಾಗೆಷ್ಟೋ ನಾನುಚ್ಚರಿಸಿದೆ ಸ್ವಪ್ರಯೋಜನ ರಹಿತ ಶ್ರೀವೇಂಕಟೇಶ ಶ್ರೀ ಉರಗಾದ್ರಿವಾಸ ವಿಠಲ ಜಗದೀಶ10
--------------
ಉರಗಾದ್ರಿವಾಸವಿಠಲದಾಸರು
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿಯೆನ್ನಿರೊ ತ್ರಾಹಿ ತಾರಕ ಬ್ರಹ್ಮಗೆನ್ನಿರೊ ಧ್ರುವ ತ್ರಾಹಿ ಮಚ್ಚ ಕೂರ್ಮಾವತಾರಗೆನ್ನಿರೊ ತ್ರಾಹಿ ವರಹ ನರಸಿಂಹಗೆನ್ನಿರೊ ತ್ರಾಹಿ ವಾಮನ ಭಾರ್ಗವಗೆನ್ನಿರೊ ತ್ರಾಹಿ ರಾಮಕೃಷ್ಣ ಗೋಪಾಲಗೆನ್ನಿರೊ 1 ತ್ರಾಹಿ ಭೌದ್ಧ ಕಲ್ಕ್ಯಾವತಾರಗೆನ್ನಿರೊ ತ್ರಾಹಿ ಸಗುಣ ನಿರ್ಗುಣಗೆನ್ನಿರೊ ತ್ರಾಹಿ ವಟಪತ್ರಶಯನಗೆನ್ನಿರೊ ತ್ರಾಹಿ ತ್ರೈಲೋಕ್ಯ ವಂದಿತಗೆನ್ನಿರೊ2 ತ್ರಾಹಿ ಹರಿಹರ ವಿರಂಚಿಗೆನ್ನಿರೊ ತ್ರಾಹಿ ಸುರವರ ನಿರಂಜನಗೆನ್ನಿರೊ ತ್ರಾಹಿ ಭಕ್ತಜನ ಸಹಕಾರಗೆನ್ನಿರೊ ತ್ರಾಹಿ ಮಹಿಪತಿ ಪಾಲಗೆನ್ನಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯಾನಿಧಿ ತೋರಿದ ಎನ್ನ ಜಿಹ್ವೆಯೊಳು ಪ ವಸುದೇವಾತ್ಮಜನಾದ ಕೇಶವ ದೇವಕಿ ಬಸುರೊಳಗುದಿಸಿದ ನಾರಾಯಣನು ಎಸೆದು ನಿಂದನು ಗೋಕುಲದೊಳು ಮಾಧವ ಕುಸುಮನಾಭನು ಗೋವಿಂದ ನಂದ ನಂದನಕಂದ 1 ದುಷ್ಟಪೂತನಿಯನ್ನು ವಿಷ್ಣುವೆ ಕೊಂದನು ತೊಟ್ಟಿಲ ಶಿಶುವಾಗಿ ಮಧುಸೂದನ ಮೆಟ್ಟಿ ಕೊಂದನು ತ್ರಿವಿಕ್ರಮ ಶಕಟನ ಕಟ್ಟಿಗೆ ಸಿಲುಕಿದನು ವಾಮನ ಯಶೋದೆಗೆ 2 ಬೆಣ್ಣೆಯ ಮೆದ್ದನು ಮಿಣ್ಣನೆ ಶ್ರೀಧರ ಕಣ್ಣಿಯ ಕರುವನು ಹೃಷಿಕೇಶನು ಉಣ್ಣಬಿಟ್ಟನು ತಾಯ ಮೊಲೆಯ ಪದ್ಮನಾಭ ಸಣ್ಣವ ಕ್ಷಣದೊಳು ದಾಮೋದರನಾದ 3 ವಾಸುದೇವನು ದ್ವಾರಾವತಿವಾಸನೆನಿಸಿದ ಸಾಸಿರ ನಾಮನು ಸಂಕರುಷಣನು ಆಸುರವಾಗಿಯೆ ಪ್ರದ್ಯುಮ್ನನೆಸೆದನು ದೋಷರಹಿತನಾದ ಅನಿರುದ್ಧನು 4 ಉತ್ತಮನಾಗಿ ಪುರುಷೋತ್ತಮನೆಸೆದನು ಅಧೋಕ್ಷಜ ನಾಮದಿ ಮೃತ್ಯುವಾದನು ದೈತ್ಯಕುಲಕೆಲ್ಲ ನರಸಿಂಹ ಮುಕ್ತಿದಾಯಕನಾದನಚ್ಯುತ ನಾಮದಿ 5 ಕಡಲ ನಡುವೆ ಜನಾರ್ದನನೆನಿಸಿ ತಾನು ಹಡಗನು ಸೇರಿಯೆ ಬಂದನುಪೇಂದ್ರನು ಉಡುಪಿಯ ಸ್ಥಳದೊಳು ಹರಿಯೆಂಬ ನಾಮದಿ ಕಡಗೋಲ ಕೈಯೊಳು ಹಿಡಿದು ನಿಂದಿಹ ಕೃಷ್ಣ 6 ಇಪ್ಪತ್ತು ನಾಲ್ಕು ನಾಮದ ಸ್ವಾಮಿಯು ತಪ್ಪದೆ ಒಂಬತ್ತು ಪೂಜೆಯಗೊಂಬನು ವರಾಹ ತಿಮ್ಮಪ್ಪರಾಯನು ಒಪ್ಪುಗೊಂಡನು ಮಧ್ವರಾಯನಾಗಮದೊಳು 7
--------------
ವರಹತಿಮ್ಮಪ್ಪ
ದಶಾವತಾರ ನೀರೊಳಗೆ ನಿಂತು ನಡುಗಿ ನಾರುವಂಗೆ ಗಂಬೂರಿಕಸ್ತೂರಿ ಲೇಪನದ ಮದುವೆಭಾರ ನಿನ್ನಲಿ ಪೊಳಲು ಕಲ್ಲು ಕೈ ಮುಸುಡಿದಂಗೆಧೀರ ಶೇಷನ ಶಯನದ ಮದವೋಮೋರೆಯಲ್ಲಿ ಯಲ್ಲಾ ಕೆದರಿ ಬೇರು ಮೆಲುವನಿಗೆಸಾರಷಡ್ರಸನ್ನ ಭೋಜನದ ಮದವೋಕರುಳ ವನಮಾಲೆ ಹಾಕಿದವಂಗೆ ಹಾರಪದಕ ಹಾಕಿದ ಮದವೋಮೂರಡಿಯ ಭೂದಾನ ಬೇಡಿದವನಿಗೆ ಸಾರಿದವಂಗಭೀಷ್ಟಗಳ ಪೂರೈಪ ಮದವೋಧರಣಿ ವಿಪ್ರರಿಗಿತ್ತು ಕುಳಿಪುದಕೆ ಸ್ಥಳವಿಲ್ಲವಗೆ ಭುವನಕೀಳುವ ಮದವೋಊರ ಬಿಟ್ಟು ವನ ಚರಿಸುವಂಗೆ ಮೂರು ಧಾಮದಮನೆಯ ಭೋಗದ ಮದವೋಪುರನಾರಿಯ ಬಯಸಿ ಕೊಂಬುವಂಗೆ ವಾರಿಜಭವ ಸುರರವಂದ್ಯಾನೆ ಮದವೋಘೋರ ತುರಗವನೇರಿ ಹಾರಿಸ್ಯಾಡುವಂಗೆ ವೀರಸಿಂಹಾಸನದಲ್ಲಿಕುಳಿತ ಮದವೋಮೂರು ದಿನ ಅರಸುತನ ಸ್ಥಿರವೆಂದು ನೆಚ್ಚಿ ಸಾರಿದವನ್ನಮರೆವದುಚಿತವೆಬಾರದೆ ತಪ್ಪದು ಹಿಂದಿನ ಭವಣೆ ನಿನಗೆ ದೂರ ವಿಚಾರಿಸಿನೋಡೊ ಕರುಣಾ ನಿಧಿಶ್ರೀರಂಗ ರಾಜಗೋಪಾಲ ವಿಠಲ ನಿನ್ನ ಪಾರಿದವರ ಪೊರೆದು ಕೀರ್ತಿಪಡಿಯೊ
--------------
ರಾಜಗೋಪಾಲದಾಸರು
ದಶಾವತಾರದ ಲೀಲೆಗಳು ಅಂಬುಜದಳಾಕ್ಷಗೆ ಮಂಗಳ ಪ ಸರ್ವ ಜೀವರಕ್ಷಕಗೆ ಮಂಗಳ ಅ ಜಲಧಿಯೊಳಾಮ್ನಾಯ ತಂದಗೆ ಮಂಗಳಕುಲಗಿರಿ ತಾಳ್ದಗೆ ಜಯಮಂಗಳನೆಲನ ಕದ್ದಸುರನ ಗೆಲಿದಗೆ ಮಂಗಳಚೆಲುವ ನರಸಿಂಹಗೆ ಶುಭಮಂಗಳ1 ಶುಭ ಮಂಗಳ 2 ಶುಭ ಮಂಗಳ 3
--------------
ಕನಕದಾಸ
ದಾವನಿಹನೈಯ್ಯಾ ಕೃಷ್ಣಾ ಎನ್ನ ಕಾವವನು ನೀನಲ್ಲದೆ ಪ ನಾರಿ ದ್ರೌಪದಿ ನೆನೆಯಲು ಸಭೆಯಲ್ಲಿ ಶೀರಿ ದಾನವ ಮಾಡಿದೀ ಕೃಷ್ಣಾ ಘೋರ ದೂರ್ವಾಸ ಮುನಿಯು ನಡುವಿರುಳೆ ಹಾರೈಸಿ ಬರೆಯನ್ನವಾ ದೇವಾ ನಾರಿ ದ್ರೌಪದಿಯ ಮೊರೆಯ ದೊರೆಯು ಆಲಿಸೇ ಆ ರಾತ್ರಿ ಕಾಯ್ದ್ಯೋಬಲೆಯಾ 1 ಪರಿವಾರದಿಂದ ಕೂಡಿ ಕರಿರಾಜನಂಗ ನಾಟಕಂದೈದಲು ಭರದಿನೆಗಳಿಯು ಪಿಡಿಯಲು ಕಾಲನು ಇರದೆ ನಿನ್ನನು ಸ್ಮರಿಸಲು ದೇವಾ ಗರುಡವಾಹನನಾಗಿ ನೀನೈತಂದು ಕರುಣಿಸಿದ್ಯೋ ಕೊನೆಯ ಗತಿಯ 2 ದುರುಳ ಹಿರಣ್ಯಕನ ಶೀಳಿ ನರಹರಿಯೆ ತರಳ ಪ್ರಲ್ಹಾದನ ಪೊರೆದ್ಯೋ ದೇವಾ ಮರೆಯದಜಮಿಳ ನೆನೆಯಲು ಕೇಳ್ದು ನೀ ಪರಿಹರಿಸಿದೆ ಯಮಬಾಧೆಯ ದೇವಾ ನರಸಿಂಹವಿಠಲ ಸ್ವಾಮಿ ಧ್ರುವನನ್ನು ಪೊರೆದಂತೆ ರಕ್ಷಿಸೆನ್ನಾ 3
--------------
ನರಸಿಂಹವಿಠಲರು