ಒಟ್ಟು 467 ಕಡೆಗಳಲ್ಲಿ , 78 ದಾಸರು , 403 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬುಗುರಿ ಆಡೋ ತಮ್ಮ ಬುಗುರಿ ಆಡೊ ಪ ಬಗೆ ಬಗೆ ಜನುಮದಿ ತಿರುಗಿ ತಿರುಗಿ ಬಂದೊದಗತನದನುಭವ ಪರಿಕಿಸಿ ನೋಡೊ ಅ.ಪ. ತನುವೆಂಬುದೆ ಕೊರಡಿನ ತುಂಡುದಿನದ ಕರ್ಮವೆ ಕೊನೇರು ದುಂಡುಮನವೆಂಬುವ ಮೊಳೆಯನು ಚುಚ್ಚಿಕೊಂಡುಘನ ಹರುಷದಿ ಕರದಲಿ ಕೊಂಡು 1 ಭವವೆಂಬುದೆ ನಿನ್ನ ಜಾಳಿಗೆ ನೋಡೋತವಕದಿ ಬಿಡದಲೆ ಬಿಗಿಗಿಸುತ್ತ್ಯಾಡೋಸವಿಯನುಂಡು ನೀ ಹರಿಯನು ಬೇಡೊಜವದಲಿ ಝಾಡಿಸಿ ಭರದಿ ಬೀಸಾಡೊ 2 ಧರೆಯ ಗದುಗಿನ ವೀರನಾರಾಯಣನಚರಣದಿ ಮೊಳೆಯೂರಿ ತಿರುಗುತಲಾಡೊಕರಣಗಳಳೆದು ಏಕ ಚಿತ್ತದಿಸ್ಮರಿಸುತ ನಿಂತು ನಿದ್ದೆಮಾಡೊ 3
--------------
ವೀರನಾರಾಯಣ
ಬೆಳಗಿರೆ ಹರುಷದಿ ಆರುತಿಬೇಗ | ಸತಿ ಮುದದಿ ಶಿರಿ ನಿಲಯನಿಗೀಗ ಪ ನಿರಂಜನ | ನಿರಾಮಯ | ನೀರೇರುಹದಳ ಲೋಚನ ನರಪ್ರಿಯ | ಸುಮಹಿತ ಸುಚರಿತ ಮರುತ ವಿನುತಗೆ 1 ದೀನಾಪ್ತಗೆ | ಶ್ರೀನಾಥಗೆ | ಆನಂದಾತಿಶಯದಲಿ ಸಭೆಯೊಳು ಮಾನಿನಿಯಳ ಅಭಿಮಾನ ಕಾಯ್ದವಗೆ 2 ಹೇಮಾಂಬರ | ಶ್ರೀಮಾವರ | ಪ್ರೇಮಾದರದಿ | ಸು ಶುಭಮೂರುತಿಗೀಗ ಆರುತಿ ಬೇಗ 3
--------------
ಶಾಮಸುಂದರ ವಿಠಲ
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮವೆಂಬಿರಿ ನಿಮ್ಮ ಬರಿದೆ ಮಾತಲ್ಲದೆಬ್ರಹ್ಮನಾದವನ ಬಗೆಯನು ಹೇಳುವೆ ಕೇಳಿ ಪ ಆಶಾಪಾಶಗಳಿಗೆ ವಶವಾಗದವ ಬ್ರಹ್ಮಮೋಸಹೋಗದೆ ಮಾಯೆಗೆ ಇರುವವ ಬ್ರಹ್ಮಕೂಸಿನಂದದಿ ಭಾವ ಕೂಡಿಹನವ ಬ್ರಹ್ಮಘಾಸಿಯಾಗನು ಮದನಗೆ ಅವನು ಬ್ರಹ್ಮ 1 ಸತಿಸುತರಿಚ್ಛೆಯ ಸಮನಿಸದವ ಬ್ರಹ್ಮಇತರರ ವಾಕ್ಯಕೆ ಕಿವಿಗೊಡದವ ಬ್ರಹ್ಮಗತಿ ಯಾವುದೆನಗೆಂದು ಗುಣಿಸುತಿಪ್ಪವ ಬ್ರಹ್ಮಅತಿ ಹರುಷದಿಂ ಬಾಳುತಿರುವವನು ಬ್ರಹ್ಮ2 ಸಕಲ ವಿಶ್ವವು ಎನ್ನ ಸರಿಯು ಎಂಬುವವ ಬ್ರಹ್ಮಸುಖ ದುಃಖವನು ಸಮದೃಷ್ಟಿಯಲಿ ನೋಡುವವ ಬ್ರಹ್ಮಭಕುತಿ ಭಾವನೆಯಿರುವ ಮಾನವನು ತಾ ಬ್ರಹ್ಮಮುಕುತಿ ಮರ್ಗದಲಿರುವ ಯೋಗಿಯವ ಬ್ರಹ್ಮ 3 ಹುಚ್ಚರಂದದಿ ನೋಡೆ ಹುದುಗಿಕೊಂಡಿಹ ಬ್ರಹ್ಮಅಚ್ಚರಿಯ ಅವನಾಟ ತಿಳಿವವನು ಬ್ರಹ್ಮನಿತ್ಯಕಾಲದಿ ಜ್ಞಾನ ಬೇಕೆನ್ನುವವ ಬ್ರಹ್ಮಕೊಚ್ಚಿತೆಂಬನು ಎಲ್ಲ ಕುಲಜ ಬ್ರಹ್ಮ4 ದಾಸದಾಸರ ದಾಸನಾದವನೆ ಬ್ರಹ್ಮಈ ದೇಹದಾ ಹಂಗ ತೊರೆದವನು ಬ್ರಹ್ಮಭಾಸುರ ಚಿದಾನಂದನ ಭಜಿಪ ಭಕ್ತನೆ ಬ್ರಹ್ಮವಾಸರಿಲ್ಲವೋ ಈ ವಾಕ್ಯಕೆಂಬುವವ ಬ್ರಹ್ಮ5
--------------
ಚಿದಾನಂದ ಅವಧೂತರು
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭವ ಕೃತ ಪಾಪ ನಿಷ್ಕøತಿ ನಿನ್ನಚರಣಾಂಬುವೆಂದರುಹುತಲಿದೆ ಶ್ರುತಿತತಿ 1ಮೊದಲು ಪಾತ್ರಾಂತರದಲಿ ಗ್ರಹಿಸಿಯೆ ಯಂತ್ರವಿಧಿುಂದ ಬರೆದು ಬೀಜಾಕ್ಷರಂಗಳನುಹದಿನಾರೆಂಟಾವರ್ತಿ ಜಪಿಸಿ ಮೂಲವನೆತ್ತಿವದನದಿಂ ಬಿಂದು ಸೂಸದವೋಲ್ಸೇವಿಪ ಹಾಗೆ 2ಮೂರಾವರ್ತಿಯೊಳಿಂತು ಸೇವಿಸಿ, ಶಿರದಲ್ಲಿಸೇರಿಸಿ, ಬೇರೆ ಹಸ್ತವ ಮಾರ್ಜಿಸಿಸಾರಿಸಿ ತಡವಿ ತನುವ ಧನ್ಯನಹೆನು ಸಂಸಾರಸಾಗುವ ದಾಂಟಿಸುವರೆ ಜಗದೀಶ 3ಚರಣದಂಗುಟದಿಂದ ಚಿಮ್ಮಿದ ತುಲಸಿಯುಬೆರೆದ ಪುಷ್ಪವು ಬಂತೆನ್ನೊರೆಗೆ ಸರ್ವೇಶಹರುಷದಿಂ ನಿನ್ನಡಿ ಸರಸಿಜಯುಗಳವಮರೆಯೊಕ್ಕ ದೀನನೊಳ್ಕರುಣ ಬಂದುದೆ ಕೃಷ್ಣಾ 4ತಿರುಪತಿನೆಲೆವಾಸ ವರದವೆಂಕಟೇಶಗುರು ವಾಸುದೇವಾರ್ಯನಾಗಿಯೆ ನೀನೆಅರುಹಿದ ಮತ ಪಿಡಿದಿರುವೆನು ತ್ವನ್ನಾಮಸ್ಮರಣೆ ಮಾತ್ರವನಿತ್ತು ಪೊರೆಯಬೇಕೆನ್ನನು 5ಓಂ ಜಿಷ್ಣವೇ ನಮಃ
--------------
ತಿಮ್ಮಪ್ಪದಾಸರು
ಭವ ಭಸಿ- ತಾಂಗನ ನೋಡಿದೆ ಪ. ರಂಗನ ತನ್ನಂಗದೊಳಗೆ ಇಟ್ಟು ಹಿಂಗದೆ ನೆನೆಯುವ ಮಂಗಳ ಮೂರುತಿ ಅ.ಪ. ತ್ಯಕ್ಷನ ನೋಡಿದೆ | ಕರುಣಕ- ಟಾಕ್ಷನ ನೋಡಿದೆ ವೀಕ್ಷಣದಿಂದ ಶ್ರೀ ವಕ್ಷನ ಸುತನನು ಶಿಕ್ಷಿಸಿದ ಫಾಲಾಕ್ಷನ ಶಿವನ 1 ಹರನನು ನೋಡಿದೆ | ಗಂಗಾ- ಧರನನು ನೋಡಿದೆ ಗಿರಿಜೆವಲ್ಲಭ ಭಾಸುರ ವಂದಿತನಾ ಸರಿತು ತುಂಗ ಪಂಪಾಪುರವಾಸನ 2 ಶೂಲಿಯ ನೋಡಿದೆ | ರುಂಡ ಮಾಲಿಯ ನೋಡಿದೆ ಕೈಲಾಸದಿ ಉಮೆ ಲೋಲನೆನಿಸಿ ಇಲ್ಲಿ ವ್ಯಾಳಭೂಷಣನಾಗಿ ಲೀಲೆಯೊಳ್ ಮೆರೆವನ 3 ಈಶನ ನೋಡಿದೆ | ನರಹರಿ ದಾಸನ ನೋಡಿದೆ ಪಾಶುಪತಾಸ್ತ್ರವ ವಾಸವಜನಿಗಿತ್ತ ಪೋಷಿಕಿರಾತನ ವೇಷನ ಹರುಷದಿ 4 ದಿಟ್ಟನ ನೋಡಿದೆ | ವೈಷ್ಣವ ಶ್ರೇಷ್ಠನ ನೋಡಿದೆ ವೃಷ್ಣೀಶ ಗೋಪಾಲಕೃಷ್ಣವಿಠ್ಠಲನಿಗೆ ಪುಟ್ಟ ಮೊಮ್ಮಗನಾಗಿ ತುಷ್ಟಿಪಡಿಸುವನ5
--------------
ಅಂಬಾಬಾಯಿ
ಭವ ಭಂಗ ಪ. ಥಳ ಥಳಿಸುತ ಗೆಳತಿಯರು ಸಹಿತಾಗಿಚಳತೆಂಬೊ ದಿವ್ಯ ಆಭರಣಚಳತೆಂಬೊ ದಿವ್ಯಾಭರಣ ಭೂಷಿತರಾಗಿಕುಳಿತ ನಾರಿಯರು ಕಡೆಯಿಲ್ಲ1 ಕುಂತಲ ಕದುಪಿನ ಕಾಂತೆಯರು ಹರುಷದಿಕಂತುನಯ್ಯನ ಮುಖನೋಡಿಕಂತುನಯ್ಯನ ಮುಖನೋಡಿಮೈಮರೆದು ನಿಂತ ನಾರಿಯರು ಕಡೆಯಿಲ್ಲ 2 ಅಂದುಗಿ ಅರಳೆಲೆ ಬಿಂದಲಿ ಭಾಪುರಿಅಂದವಾಗಿದ್ದ ಅಸಲಿಅಂದವಾಗಿದ್ದ ಅಸಲಿ ಕಟ್ಟಿದಕಂದರಿನ್ನೆಷ್ಟು ಕಡೆಯಿಲ್ಲ3 ಕಾಲಲಂದುಗೆ ಗೆಜ್ಜೆ ತೋಳಲಿ ತಾಯತಲಾವಳಿಗೆ ಮುತ್ತು ಅಲುಗುತಲಾವಳಿಗೆ ಮುತ್ತು ಅಲುಗುತಸುಳಿದಾಡೊ ಬಾಲರಿನ್ನೆಷ್ಟು ಕಡೆಯಿಲ್ಲ 4 ಹಸಿರು ಪಚ್ಚದ ಕಂಭ ಕುಸುರಾದ ಗಿಳಿಬೋದುಗೆಎಸಕೊ ಮಾಣಿಕದ ಜಗುಲಿಯ ಎಸಕೊ ಮಾಣಿಕದ ಜಗುಲಿ ಸಿಂಹಾಸನದಿ ವಸುದೇವ ತನಯ ಕುಳಿತಾನೆ 5 ಬಿಸÀಜನೇತ್ರಿಯರ ಮುಂದೆ ಕುಶಲದ ಮಾತ್ಹೇಳುತವಸುದೇವ ತಾನು ಕುಳಿತಾನವಸುದೇವ ತಾನು ಕುಳಿತಾನ ದೇವಕಿಯಸೊಸೆಯರ ಕಂಡು ಹರುಷಾಗಿ 6 ಚಲುವ ರಾಮೇಶನ ಬಲದ ಭಾಗದಿಬಂದು ಹಲವು ಮಾತುಗಳು ಕಿವಿಯೊಳುಹಲವು ಮಾತುಗಳು ಕಿವಿಯೊಳುಹೇಳುತ ಬಲರಾಮ ತಾನೆ ಕುಳಿತಾನೆ7
--------------
ಗಲಗಲಿಅವ್ವನವರು
ಭಾಗವತರಿಗೇ ನಮೋ ನಮೋ ಹರಿ | ಯೋಗವುಳ್ಳವರಿಗೆ ನಮೋ ನಮೋ ಪ ನಂದನದೊಳಗ ಅಳಿಕುಳಗಳು ಪುಳಕುತ | ನಲುವ ಪರಿಲಿ ಗುರುವಲುವಿನಲಿ | ಕಳವಳದಳಕವಗಳದುಳದಿಳೆಯೊಳು | ಹೊಳೆಯುತಲಿಹರಿಗೆ ನಮೋ ನಮೋ 1 ಸಿರಿ ಮದಜರಿದರಿಹರಿಯಂಕುರಮುರಿ | ದರಿಸಖರನು ಸರಿಯರಿದಿರುತಾ | ಪರಿಪರಿ ಮುಮ್ಮುಳಿ ತರುತರಿತರಿವುತ | ಚರಿಪರಿಗ್ಹರುಷದಿ ನಮೋ ನಮೋ | 2 ಸುಜನ ಕುಜನರೊಳಗ | ಘನವನು ಸಮತಿಳಿದನು ಭವದೀ | ಅನುದಿನ ಮಹಿಪತಿ ನಂದನ ಪ್ರಭುವಿನ | ನೆನೆಯುತಲಿಹರಿಗೆ ನಮೋ ನಮೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಾಳೆ ಗಾಬರಿಗೊಂಡಳು ಇಂದಿರಾದೇವಿಭಾಳೆ ಗಾಬರಿಗೊಂಡಳು ವ್ಯಾಲಾಶಯನನು ಇವಳ ಪೇಳಿದಂತಿರಲುಏನು ಬಾಳು ಯಾತಕೆ ಎಂದಳು ಪ. ಸಂಡಿಗೆ ಹಪ್ಪಳ ಮಂಡಗಿ ಗುಳ್ಳೋರಿಗೆ ದಿಂಡು ಸೂರಣವು ಮೊದಲಾಗಿದಿಂಡು ಸೂರಣವು ಮೊದಲಾಗಿ ಬಡಿಸೋರುದುಂಡು ಮುತ್ತುಗಳು ಉದುರುತ1 ಅಪಾರ ಮಹಿಮಗೆ ರೂಪಸುಂದರಿಯರು ಸೂಪ ಪರಮಾನ್ನ ಮೊದಲಾಗಿಸೂಪÀ ಪರಮಾನ್ನ ಮೊದಲಾಗಿ ಬಡಿಸುವವರಭಾಪುರಿ ಮುತ್ತು ಉದುರುತ 2 ಘೃತ ಘೃತ ಮೊದಲಾಗಿ ಬಡಿಸುವವರತೋರ ಮುತ್ತುಗಳು ಉದುರುತ 3 ನಗಧರನ ಪುರದೊಳಗೆ ಹಗಲು ರಾತ್ರಿಯು ಬಂದೆಝಗ ಝಗಿಸುವ ಮಣಿಯು ಖಚಿತದಝಗ ಝಗಿಸುವ ಮಣಿಯು ಖಚಿತವಾದುದರಿಂದಹಗಲು ರಾತ್ರಿಗಳು ತಿಳಿಯವು4 ಮಂದ ಗಮನೆಯರೆಲ್ಲ ಮಿಂದು ಮಡಿಯುಟ್ಟು ಇಂದಿರಾಪತಿಯ ಸರಿಯಾಗಿಇಂದಿರಾಪತಿಯ ಸರಿಯಾಗಿ ಊಟಕ್ಕೆ ಬಂದುಕುಳಿತವರು ಕಡೆಯಿಲ್ಲ5 ಪುಂಡರಿಕಾಕ್ಷÀನು ಉಂಡು ಕೈತೊಳೆದನು ದುಂಡುಮಲ್ಲಿಗೆಯ ಸೆಳಿಮಂಚದುಂಡು ಮಲ್ಲಿಗೆಯ ಸೆಳಿ ಮಂಚವನೇರಿದ ಪಾಡವಪ್ರಿಯ ಹರುಷದಿ 6 ಹದಿನಾರುಸಾವಿರ ಚದುರೆಯರು ಒಂದಾಗಿಚಲುವ ರಾಮೇಶನ ಉಪಚಾರಚಲುವ ರಾಮೇಶನ ಉಪಚಾರ ಮಾಡುವ ಸುದತೆಯರ ಸುಖಕೆ ಎಣೆಗಾಣೆ7
--------------
ಗಲಗಲಿಅವ್ವನವರು
ಭುವನೇಂದ್ರತೀರ್ಥರ ಸ್ತೋತ್ರ ಭುವನೇಂದ್ರ ಯತಿ ರನ್ನ ಭುವನ ಪಾವನ್ನತವಕದಿಂ ವ್ಯಾಸರಾಯರ ಭಜಿಪ ಘನ್ನ ಪ ಅದ್ವೈತ ಮತ ಕೋಲಾಹಲ ಸುಜ-ನಾಬ್ಧಿ ಸಮೃದ್ಧಿ ಎಂದೆನಿಪ ಮುನಿಪ ||ಸದ್ಧರ್ಮ ಸತ್ತಾಪಸ ಸಕಲ ವಿದ್ಯಾಲಾಪಅದ್ವೈತ ತ್ರಯ ವರ ಪ್ರವರ್ತಕನೇ1 ತಂತ್ರ ಸಾರಾಂತ ಆದ್ಯಂತಗಳ ಅರ್ಥವ ನಿ-ರಂತರದಲಿ ಪೇಳಿ ಹರುಷದಿಂ ||ಮಂತ್ರೋಪದೇಶವಂ ಮಾಡಿ ಮುದ್ರೆಯನಿತ್ತುಯಂತ್ರವಾಹಕನ ತೀರ್ಥವನೆರೆದ ಧೀರ 2 ಮುನಿ ಕುಲೋತ್ತಮ ಶ್ರೀ ವರದೇಂದ್ರ ತೀರ್ಥಕರಕಮಲ ಸಂಜಾತ ಭುವನ ವಿಖ್ಯಾತ ||ಅನಿಮಿತ್ತ ಬಂಧು ಗುರು ಮೋಹನ್ನ ವಿಠಲನ್ನಕ್ಷಣ ಬಿಡದೆ ಧೇನಿಸುವ ಗುರುವೇ ಸುರತರುವೇ 3
--------------
ಮೋಹನದಾಸರು
ಮಂಗಳಂ ಜಯ ಸುಂದರ ಮೂರುತಿಗೆ ಮಾ ಮನೋಹರನಿಗೆ ಪ ಮಂಗಳ ಮಧುಸೂದನನಿಗೆ ಮಂಗಳ ಮುರಮರ್ದನನಿಗೆ ಮಂಗಳಾಂಗ ಶ್ರೀ ಮದನಂತ- ರಂಗನಿಗೆ ಶುಭಾಂಗ ಹರಿಗೆ 1 ರಂತಿದೇವನನ್ನು ಪೊರೆದ ಚಿಂತಿತಾರ್ಥ ಪ್ರದಾತನಿಗೆ ಸಂತತವು ಭಕುತರನು ಸಂತೋಷದಿ ಪೊರೆವ ಹರಿಗೆ2 ಪಾಂಡವರನು ಪೊರೆದÀಗೆ ಪುಂಡರೀಕಗೆ ಒಲಿದಗೆ ತಂಡತಂಡದ ಭಕ್ತರನ್ನು ಕಂಡುಪೊರೆವ ಮಹಮಹಿಮಗೆ3 ನಾರಿ ರುಕ್ಮಿಣಿ ಭಾಮೆ ಸಹಿತದಿ ದ್ವಾರಕಾಪುರ ವಾಸನಿಗೆ ಸೌಳಸಾಸಿರ ಸತಿಯರಾಳ್ದ ಸಾರಸಾಕ್ಷ ಹರಿಗೆ ಬೇಗ4 ಕಡಲೊಡೆಯಗೆ ಮೃಡಸಖನಿಗೆ ಕಡುಹರುಷದಿ ಕಾಮಿನಿಯರು ಸಡಗರದಲಿ ಕಮಲನಾಭ ವಿಠ್ಠಲನಂಘ್ರಿ ಭಜಿಸಿನಲಿದು5
--------------
ನಿಡಗುರುಕಿ ಜೀವೂಬಾಯಿ
ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ ಶೋಣಿತ ಪುರಧೀಶÀಗೆ ಮಂಗಳ ಗುರುವರಗೆ ಪ ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು ಹರುಷದಿ ಶ್ರೀ ನರಹರಿಯನು ಖಂಬದಿ ತ್ವರದಲಿ ಕರೆದವಗೆ 1 ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ 2 ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ 3 ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೇ ಕಾಯ್ವವಗೆ 4 ವರಧೀರ ಹನುಮೇಶವಿಠಲನಾ ನಿಜದಾಸಾ ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ 5
--------------
ಹನುಮೇಶವಿಠಲ
ಮಂಗಳಂ ಶ್ರೀರಾಮಚಂದ್ರಗೆ ಜಯ ಮಂಗಳಂ ಸೀತಾಸಮೇತನಿಗೆ ಪ. ಮಚ್ಛಾವತಾರಗೆ ವೇದವ ತಂದಗೆ ಕೂರ್ಮರೂಪದಿ ಜಲದೊಳು ಪೊಕ್ಕವಗೆ ಹಿರಣ್ಯಾಕ್ಷಸುರನ ಗೆಲಿಯೆ ಬಂದು ಮೆಚ್ಚೆ ವರಹರೂಪ ತೋರಿದಗೆ 1 ಛತ್ರಿಯ ಪಿಡಿದು ಭರತ ನಿಂದಿರಲಾಗ ಶತ್ರುಘ್ನ ಚಾಮರವನು ಬೀಸಲು ಮತ್ತೆ ಲಕ್ಷ್ಮಣ ಮಡುದೆಲೆ ಕೊಡುತಿರಲಾಗಿ ವಿಸ್ತಾರ ವೈಭೋಗ ರಘುರಾಮಗೆ 2 ತಮ್ಮ ಲಕ್ಷ್ಮಣ ಸಹ ಒಲ್ಮೆಯಿಂದಲಿ ಬಂದ ನಮ್ಮ ಶ್ರೀರಘುರಾಮಚಂದ್ರನಿಗೆ ಸನ್ಮಾನದಲಿ ರಾಮ ಸಾಗರಶಯನಾಗೆ ಚೆನ್ನ ಚುಂಚನಕಟ್ಟೆಸ್ಥಿರವಾಸಿಗೆ 3 ಎಡದ ಕರದಿ ಬಿಲ್ಲು ಬಲದ ಕರದಿ ಬಾಣ ಕರದ ಕಮಲದೊಳಗಿಪ್ಪವನಿಗೆ ಸಿರಿ ಸೀತೆಯ ಧರಿಸಿದ ಚದುರ ಶ್ರೀ ಕಲ್ಯಾಣ ಚಂದ್ರನಿಗೆ 4 ಹರುಷದಿ ದೇವತೆಗಳಿಗೊರವಿತ್ತಗೆ ದುರುಳ ರಕ್ಕಸರ ಸಂಹರಿಸಿದಗೆ ಪರಮ ಭಕ್ತನಿಗೆ ಸ್ಥಿರರಾಜ್ಯವನೆ ಕೊಟ್ಟ ಹಯವದನಮೂರ್ತಿ ಎಂದೆನಿಸಿದಗೆ 5
--------------
ವಾದಿರಾಜ