ಒಟ್ಟು 582 ಕಡೆಗಳಲ್ಲಿ , 76 ದಾಸರು , 431 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗಾಯಿತು ಏಳಿ ಪಾದ ನಳಿನ ಸೇವಕರು ಪ ಉದಯ ಕಾಲದೊಳೆದ್ದು ಹೃದಯ ನಿರ್ಮಲರಾಗಿ ಮಧುಸೂದನನ ಪಾಡಿ ಸ್ತುತಿಸುತಲಿ ಮುದದಿಂದ ಮಾಧವನ ವಿಧವಿಧದಿ ಪೂಜಿಸಿ ಪದುಮನಾಭನ ಪಾಡಿ ಪೊಗಳುವ ಜನರು 1 ರಂಗನ ಮಹಾದ್ವಾರದ ಮುಂದೆ ಕಾಣುವ ಗಜ ಸಾಲುಗಳ ನೋಡುತ ಬಂಗಾರ ಕೋಡುಳ್ಳ ಗೋವ್ಗಳಿಗೆರಗುತ್ತ ಅಂಗಜ ಜನಕನ ಪಾಡಿ ಪೊಗಳುವರು2 ರಂಭೆ ಊರ್ವಶಿ ಮೇನಕೆಯರೆಲ್ಲರು ಕೂಡಿ ಸಂಭ್ರಮದಲಿ ನಾಟ್ಯವಾಡುತಿರೆ ಗಂಗೆ ಗೋದಾವರಿ ಕೃಷ್ಣ ತುಂಗಭದ್ರೆ ಯಮುನೆಯರು ಇಂಬಿಲ್ಲದೆ ಪಾಡುತಿಹರೊ ಶ್ರೀ ಹರಿಯ 3 ಅತ್ರಿ ವಸಿಷ್ಠ ಗೌತಮ ಭಾರದ್ವಾಜರು ಅರ್ಥಿಯಲ್ಲಿ ಜಮದಗ್ನಿ ಋಷಿಗಳೆಲ್ಲ ಸ್ತೋತ್ರಮಾಡುತ ಪುರುಷೋತ್ತಮನನು ಪಾಡಿ ವಿಶ್ವಾಮಿತ್ರರು ಬಹು ಭಕ್ತಿಯಲಿ 4 ಸುತ್ತ ಸನಕಾದಿ ನಾರದರೆಲ್ಲ ಪಾಡಲು ನೃತ್ಯಗಾಯನದಿಂದ ಶ್ರೀ ಕೃಷ್ಣನ ಅರ್ತಿಯಿಂದ ಅಜಭವ ಸುರರೆಲ್ಲ ಸ್ತುತಿಸಲು ಸ್ತೋತ್ರಮಾಡಲು ದುರ್ಗದೇವಿಯರು5 ಗಜರಾಜ ಗೋಮಾತೆ ಮೊದಲಾದವರು ಬಂದು ಮಧುಸೂದನನ ನೋಡೆ ನಿಂತಿಹರು ಮದಗಜಗÀಮನೇರು ಮುದದಿ ಕಲಶ ಕನ್ನಡಿಗಳ ಪಿಡಿದು ನಿಂತಿಹರು ಬೇಗದಲಿ 6 ಮುತ್ತಿನ ಕದಗಳು ತೆಗೆವ ವ್ಯಾಳ್ಯದಲಿ ನೌಬತ್ತು ನಗಾರಿ ವಾದ್ಯಗಳಾಗಲು ಸಪರ್Àನ್ಹಾಸಿಕೆಯಲ್ಲಿ ಮಲಗಿರುವ ದೇವನ ಅರ್ಥಿವೈಭವ ನೋಡೊ ವೇಳೆ ಮೀರುವದು7 ಗಂಗಾಜನಕನ ಚರಣಂಗಳು ನೋಡುವ ಬಂಗಾರ ಕಿರುಗಂಟೆಗಳ ನಡುವನು ನೋಡುವ ರಂಗು ಕೇಸರಿಯ ಪೀತಾಂಬರ ನೋಡುವ ಶೃಂಗಾರ ವೈಜಯಂತಿಯ ನೋಡುವ 8 ವಕ್ಷ ಸ್ಥಳದಲ್ಲಿ ಶ್ರೀ ಲಕ್ಷ್ಮಿಯ ನೋಡುವ ಹಸ್ತದ ಆಭರಣಂಗಳ ನೋಡುವ ಮುತ್ತಿನ ಭುಜ ಕೀರ್ತಿ ರತ್ನದ್ಹಾರಗಳಿಂದ ಒಪ್ಪುವ ಉರದಿ ಶ್ರೀವತ್ಸನ ಸ್ತುತಿಸೆ 9 ಕೋಟಿ ಸೂರ್ಯರ ಕಾಂತಿ ಸೋಲಿಪ ನಗುಮುಖ ಲಲಾಟದಿ ಕಸ್ತುರಿ ತಿಲಕ ಒಪ್ಪಿರಲು ಮಾಟದ ಕರ್ಣಕುಂಡಲಗಳು ಹೊಳೆಯುತ್ತ ನೋಟದಿ ಜಗವ ಮೋಹಿಪ ದೇವನನು ನೋಡೆ10 ಅಂದದ ಮುಗುಳು ನಗೆಯು ದಂತ ಪಂಙÉ್ತಯು ಪಾದ ಕದಪುಗಳಂದವು ಇಂದ್ರ ನೀಲದಮಣಿ ಖಚಿತ ಕಿರೀಟದ ಮಂದಹಾಸದ ನಗೆÀಮುಖ ನೋಡುವ 11 ಕಡೆಗಣ್ಣ ನೋಟದಿ ಜಗವ ಸೃಷ್ಟಿಪದೇವ ಖಗವಾಹನನು ಸಂರಕ್ಷಿಪ ಲೋಕವ ಅಗಣಿತ ಮಹಿಮ ಅತಿಶಯದಿ ಲಯವ ಮಾಳ್ಪ ಸುಗುಣ ಸುಂದರನ ಗುಣ ಪೊಗಳುವ ಜನರು12 ನಿಖಿಳ ವ್ಯಾಪಕ ಕೃಷ್ಣ ಶುಕಮುನಿ ವಂದಿತ ದಿವ್ಯ ಚರಣನ ರುಕುಮಿಣಿ ಅರಸನ ಭಕುತರ ಪೋಷನ ಸಖ್ಯದಿಂದ ಪ್ರಿಯನ ನೋಡುವ ಸುಜನರು13 ಅನಿರುದ್ಧ ದೇವ ಶ್ರೀ ಪ್ರದ್ಯುಮ್ನ ಮೂರ್ತಿಯ ಸಂಕರುಷಣ ವಾಸುದೇವೇಶನ ನವನೀತ ಚೋರನ ನಾರಾಯಣನ ನಾಮ ಸ್ಮರಿಸುವ ಸುಜನರು 14 ಕವಿಜನ ಪ್ರಿಯನ ಕಮನೀಯ ರೂಪನ ಕಮಲನಾಭವಿಠ್ಠಲನ ಪಾಡುವ ಕಮಲಸಖನ ಸೋಲಿಸುವ ಮುಖಕಾಂತಿಯಕಮಲಾಕ್ಷಿಯರಸನ ಪೊಗಳುವ ಸುಜನರು15
--------------
ನಿಡಗುರುಕಿ ಜೀವೂಬಾಯಿ
ಬೋಧರ ನೋಡಿರೈ ಸತ್ಯಬೋಧರ ಪಾಡಿರೈ ಪ ಚಂದ್ರಾ ಸದ್ಗುಣ ಸಾಂದ್ರಾ ಅ.ಪ. ಜವನೋಧರ್ಮ ಪ್ರಸ್ರವನೋ ಯತಿ ಪುಂಗವನೋ ರಾಮಾರ್ಚನ ಕೃತ ಪೂತ ಹಸ್ತ ಪಲ್ಲವನೋ ವಿದ್ವದ್ಧವನೋ ಕಾಮಿತೇಷ್ಟ ಪ್ರದ ಚಿಂತಾಮಣಿಗುಣಯುತನೋ ಜತಸನ್ನುತನೊ 1 ಪಚ್ಚದ್ಯತಿಯೋ ಸಜ್ಜನ ಕುನರೂಪ ಪ್ರೋನ್ನತಿಯೋ ಕವಿಜನ ಹರಿಸಮ್ಮತವೋ 2 ಹರಿಜನಧನವೋ ಅಭಯ ಸುಮನವೋ ಮದಮರ್ದನವೋ ದಾಸರ ವಶವೊ 3
--------------
ನರಸಿಂಹವಿಠಲರು
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಾಂಡನಾಯಕನ ಪ ಕೆಂಜೆಯ ಮೇಲÉೂಪ್ಪುವ ಶಶಿ ಹಸ್ತದ ಸದ್ಯೋಜಾತ ಸ್ವಯುಂಭುವ 1 ಬೆರಳುಕದೊಳಕ್ಷಮಾಲೆಯ ವಾಮ ದೇವನ2 ಭ್ರೂಕುಟಿ ಮುಖದ ಭಯವರದ ಜಪಮಾಲೆ ಪಾಶಾಂಕುಶ ಸರ್ಪಾಭರಣದ ಘೋರನ 3 ಉಗ್ರಾಸನ ಉರಿಗಣ್ಣಿಂದು ಮೌಳಿಯ ತುತ್ಪುರುಷನ 4 ಖಡ್ವಾಂಗ ಢಮರುಗ ಕರದ ಕಪಾಲೇಂದು ಮೌಳಿಯ ಈಶಾನ್ಯನ 5 ಕಂಡೆನು ಉತ್ತರದೊಳ್ ವಾಮದೇವನ ಕಂಡೆನು 6 ಫಣಿ ಬಂಧಿವಿದ್ದ ಕೆಳದಿ ರಾಮೇಶನ 7
--------------
ಕವಿ ಪರಮದೇವದಾಸರು
ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1 ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2 ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3 ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4
--------------
ಚಿದಾನಂದ ಅವಧೂತರು
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕ್ತರನ ನಂಬದಿರು ಭವದೂರನೆ ಮುಕ್ತಿಯನು ಬೇಡದಲೆ ನಿನ್ನೆ ಪೂಜಿಸುವರು ಪ ಪ್ರಸ್ತ ಮಾಡುವ ಸಾಧನಕ್ಕೆ ಪೋಗಿ ನಿಂದು ಬಲು ಹಸ್ತು ಬಂದವನು ತುತ್ತನ್ನ ಕೇಳೆ ಸ್ವಸ್ತವಾಗಿ ಕುಳಿತು ಭೋಜನ ಮಾಳ್ಪ ಆ ಗ್ರಹಸ್ತ ಪೊಟ್ಟಿ ತುಂಬದೆ ಬರಿದೆ ಏಳುವನೆ1 ಹಾದಿಕಾರನು ಬಂದು ವಸ್ತಿ ಮಾಡುವದಕ್ಕೆ ಆದರದಲಿ ಸ್ವಲ್ಪ ಸ್ಥಳವ ಕೇಳಿ ಪಾದ ಇಡುವನಿತರೊಳು ಕುಳಿತು ಆಮೇಲೆ ಸಂ ಪಾದಿಸುವ ತನ್ನ ತಕ್ಕಷ್ಟು ಧರಣಿಯನ್ನು2 ಆವದೊಲ್ಲೆವೆಂದು ಆಡುವರು ನಿತ್ಯದಲಿ ಕಾವ ಕರುಣಿ ನೀನೆಂದು ತಿಳಿದು ಸಿರಿ ವಿಜಯವಿಠ್ಠಲ ನಿನ್ನ ಇಂದು 3
--------------
ವಿಜಯದಾಸ
ಭಗವಂತನ ಸಂಕೀರ್ತನೆ ಅನುದಿನ ನೆನೆಯಲೊ ಹನುಮನಿಗತಿ ಪ್ರಿಯ ಪರಮ ಪಾವನ ರಾಮನಾಮ ಪ ಇನಕುಲ ಭೂಷಣ ಮುನಿಜನ ತೋಷಣ ಜಾನಕಿರಮಣನ ನಾಮ ಅ.ಪ ಗೌತಮ ಸತಿಯೆ ಪುನೀತಳ ಮಾಡಿ ಪ್ರ- ಖ್ಯಾತಿ ಪೊಂದಿದ ದಿವ್ಯನಾಮ ಶೀತಲ ಕಿರಣ ಭೂಷಣನ ಧನುವ ಮುರಿದು ಸೀತೆಯ ಪೊಂದಿದ ನಾಮ 1 ಜನಕನ ವಚನವನುಳಿಸುವ ನೆವದಲಿ ವನವಾಸ ಮಾಡಿದನ ನಾಮ ವನದಲಿ ಖರದೂಷಣ ಮುಖ ದನುಜರ ಹನನ ಮಾಡಿದ ದಿವ್ಯನಾಮ2 ಶರಭಂಗಮುನಿಗೆ ಪರಮ ಪದವನಿತ್ತ ಪರಮ ಪವಿತ್ರನ ನಾಮ ನಾಸಿಕ ಕರ್ಣ ಮುರಿಸಿದವನ ಶುದ್ಧ ನಾಮ 3 ಭೂಮಿಜೆಯನು ಮೋಸದಿಂದ ಅಗಲಿಸಿದ ಮಾರೀಚನ ಕೊಂದ ನಾಮ ಸ್ವಾಮಿಯ ಪ್ರೇಮಕ್ಕೆ ಮಡಿದ ಜಟಾಯುಗೆ ಅಭಯ ಹಸ್ತವನಿತ್ತ ನಾಮ 4 ಆ ಮಹಾ ಹನುಮನ ಕಾಮಿತದಂತೆ ಮಹೇಂದ್ರ ಸುತನ ಕೊಂದ ನಾಮ ಕಮಲ ಸುಹೃದತನಯನಿಗೆ ಸಾಮ್ರಾಜ್ಯವನಿತ್ತ ನಾಮ 5 ಪರಿಪರಿವಾರದಿಂ ಶರಧಿಯೊಳ್ ಸೇತು ಬಂಧನವ ಮಾಡಿದ ರಾಮನಾಮ ದುರುಳ ರಾವಣ ಮುಖ ರಕ್ಕಸರನೆ ಕೊಂದು ಧರಣಿ ಸುತೆಯ ಕಂಡ ನಾಮ6 ಶರಣವ ಪೊಂದಿದ ಭಕುತ ವಿಭೀಷಣಗೆ ತರುಣಿ ಸೀತೆ ಲಕ್ಷ್ಮಣರಿಂದ ಕೂಡಿ ಪು ಷ್ಪಕವನೇರಿದ ಸಾಧು ನಾಮ 7 ಉರುತರ ತಪದಲಿ ನಿರತನಾದ ತಮ್ಮ ಭರತನ ಉಳಿಸಿದ ನಾಮ ದೊರೆತನವೊಂದಿ ಸಕಲ ಸುಜನರುಗಳಿಗೆ ಪರತರ ಸುಖವಿತ್ತ ನಾಮ 8 ತನ್ನ ಭಕುತರೊಳು ಉನ್ನತನೆನಿಸಿದ ಘನ್ನಮಾರುತಿಗೊಲಿದ ನಾಮ ಪ್ರ ಸನ್ನನಾಗಿ ಸಂತತ ಇವನಿಗೆ ತನ್ನ ಸಹ ಭೋಗ ಸುಖವಿತ್ತ ನಾಮ 9
--------------
ವಿದ್ಯಾಪ್ರಸನ್ನತೀರ್ಥರು
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭವ ಕೃತ ಪಾಪ ನಿಷ್ಕøತಿ ನಿನ್ನಚರಣಾಂಬುವೆಂದರುಹುತಲಿದೆ ಶ್ರುತಿತತಿ 1ಮೊದಲು ಪಾತ್ರಾಂತರದಲಿ ಗ್ರಹಿಸಿಯೆ ಯಂತ್ರವಿಧಿುಂದ ಬರೆದು ಬೀಜಾಕ್ಷರಂಗಳನುಹದಿನಾರೆಂಟಾವರ್ತಿ ಜಪಿಸಿ ಮೂಲವನೆತ್ತಿವದನದಿಂ ಬಿಂದು ಸೂಸದವೋಲ್ಸೇವಿಪ ಹಾಗೆ 2ಮೂರಾವರ್ತಿಯೊಳಿಂತು ಸೇವಿಸಿ, ಶಿರದಲ್ಲಿಸೇರಿಸಿ, ಬೇರೆ ಹಸ್ತವ ಮಾರ್ಜಿಸಿಸಾರಿಸಿ ತಡವಿ ತನುವ ಧನ್ಯನಹೆನು ಸಂಸಾರಸಾಗುವ ದಾಂಟಿಸುವರೆ ಜಗದೀಶ 3ಚರಣದಂಗುಟದಿಂದ ಚಿಮ್ಮಿದ ತುಲಸಿಯುಬೆರೆದ ಪುಷ್ಪವು ಬಂತೆನ್ನೊರೆಗೆ ಸರ್ವೇಶಹರುಷದಿಂ ನಿನ್ನಡಿ ಸರಸಿಜಯುಗಳವಮರೆಯೊಕ್ಕ ದೀನನೊಳ್ಕರುಣ ಬಂದುದೆ ಕೃಷ್ಣಾ 4ತಿರುಪತಿನೆಲೆವಾಸ ವರದವೆಂಕಟೇಶಗುರು ವಾಸುದೇವಾರ್ಯನಾಗಿಯೆ ನೀನೆಅರುಹಿದ ಮತ ಪಿಡಿದಿರುವೆನು ತ್ವನ್ನಾಮಸ್ಮರಣೆ ಮಾತ್ರವನಿತ್ತು ಪೊರೆಯಬೇಕೆನ್ನನು 5ಓಂ ಜಿಷ್ಣವೇ ನಮಃ
--------------
ತಿಮ್ಮಪ್ಪದಾಸರು
ಭಾರ ನಮ್ಮಪ್ಪನಿಗೀ ಸಂಸಾರ ಉಪ್ಪಿನ ಹೇರಂತಿದು ಬಹುಕ್ಷಾರ ಕೈ- ತಪ್ಪಿದರೆ ಬಾರದು ಸಣ್ಣ ಚೂರಾ ಪ. ಅಗಳಿನಾಶೆಗೆ ಪೋಗಿ ನಿಗಳ ಕಂಠಗೆ ಸಿಲುಕಿ ನೆಗೆದು ಬೀಳ್ವ ಮಚ್ಛ್ಯಗಳಂದದಿ ಬಹು ಹಗರಣಗೊಳ್ಳುತ ಮರುಳಾಗಿಹೆನು 1 ಬಾಲಬುದ್ಧಿಯೊಳೆರಡು ಶಾಲೆ ಕೊಂಡರೆ ಪರರ ಮೇಲೊಡ್ಡುತ ಬಹು ಸಾಲಗಾರನೋಲೆ ಕೋಳುಗೊಂಬನು ಪಂಚಗೋಲ ಸುಖತಿಯಲಿ 2 ಪುಣ್ಯಕರ್ಮವ ಮಾಡಿ ತನ್ನದೆಂದರೆ ನಿಲದು ದಾನವರೊಯ್ವರು ಘನಪಾತಕಗಳು ಬೆನ್ನ ಬಿಡವು ಮಕ್ಷಿಕಾನ್ನದಂತಿಹವು 3 ಕರ್ಮಶಾಸ್ತ್ರವ ಗಹನ ಮರ್ಮವ ತಾಳದ ನರನಾ ನಿರ್ಮಲ ಮಾಡಲು ಚವರ್i ತೊಳಿಯೆ ದು- ಷ್ಕರ್ಮ ಕಲುಷವನು ನಿರ್ಮೂಲಗೊಳಿಸದೆ 4 ಹೇಸಿಕೆ ಜೊಲ್ಲಿನ ಮುಸುಡಾ ಹಾಸಿಕೆಯಿಂದೆತ್ತುತಲಿ ದೂಷಿಸುತನ್ಯರ ಮೀಸೆಯ ತಿರುಹುತ ಲೇಸಗಾಣದೆ ಬಹು ಮೋಸಗೊಂಡಿಹೆನು 5 ಹಸ್ತಪಾದಾದಿಗಳ ಮೃತ್ತಿಕೆಯಿಂದಲಿ ತೊಳೆವ ತತ್ವ ನೋಡಲು ಕಣ್ಣು ಕತ್ತಲೆ ಬರುವುದು ಕತ್ತೆಗೆ ಷಡ್ರಸವೆತ್ತಲು ದೊರೆಯದು 6 ಸ್ನಾನದ ರೀತಿಯನಿನ್ನೇನೆಂದು ವರ್ಣಿಪೆನು ಮಾನವರಿದಿರು ನಿಧಾನದಿ ನಡೆವುದು ಮಾನಸ ವೈಶಿಕಧಾನಿಯಾಗಿಹುದು 7 ಮಡಿಯೆಂದು ಕೂತಿರಲು ಮಡದಿ ಹತ್ತಿರ ಬರಲು ಒಡವೆಯ ನೋಡುತ ಅಡಿಗೆಯ ಪಣ್ಕೆಯ ನುಡಿಯಲ್ಲದೆ ಜಪಗೊಡವೆಯೇನಿರದು 8 ಪಾಕ ಪೂರಣವಾಗೆ ಈಗ ಸಾಕೆಂಬೆ ಹರಿಪೂಜೆ ಶಾಕಾದಿಗಳು ವಿವೇಕವಾಗದಿರೆ ಭೀಕರಿಸುತ ಅವಿವೇಕನಾಗುವೆನು 9 ತದನಂತರದಿ ಪರರ ಕದನವನೆಬ್ಬಿಸುತಲಿ ಒದಗುತ ನಾನಾ ವಿಧದಲಿ ಎನ್ನಯ ವದನ ತುಂಬುವ ಮಾರ್ಗದಿ ದಿನ ಕಳೆವೆನು 10 ಇಂತು ದಿವಾಯುಷವನ್ನು ಸಂತರಿಸುತ ನಿಶೆಯೊಳ್ ಕಂತು ಕಲಾಪದ ಭ್ರಾಂತಿಗೊಂಡು ಮರ ದಂತೆ ಬೀಳಲು ನಿಮಿಷಾಂತರ ದೊರೆಯದು 11 ಪಾರಾವಾರದಕಿಂತ ಘೋರವಾಗಿರುವೀ ಸಂ- ಸಾರದಿ ಸಿಲುಕಿದರ್ಯಾರು ಕಾವರಿಲ್ಲ ಶ್ರೀರಮಾಪತಿ ಚರಣಾರವಿಂದವೆ ಗತಿ 12 ಈ ವಿಧ ದುಷ್ಕøತದಿಂದ ಕಾವನು ನೀ ಗೋವಿಂದ ಪಾವನಾತ್ಮಕ ಶೇಷಾವತಾರ ಗಿರಿ ಭವ ನಾವ ಮುಕುಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೂಷಣಕೆ ಭೂಷಣ ಇದು ಭೂಷಣಶೇಷಗಿರಿವಾಸ ಶ್ರೀವರ ವೆಂಕಟೇಶ ಪ ನಾಲಿಗೆಗೆ ಭೂಷಣ ನಾರಾಯಣ ನಾಮಕಾಲಿಗೆ ಭೂಷಣ ಹರಿಯಾತ್ರೆಯುಆಲಯಕೆ ಭೂಷಣ ತುಲಸಿ ವೃಂದಾವನ ವಿಶಾಲ ಕರ್ಣಕೆ ಭೂಷಣ ವಿಷ್ಣು ಕಥೆಯು 1 ದಾನವೇ ಭೂಷಣ ಇರುವ ಹಸ್ತಂಗಳಿಗೆಮಾನವೇ ಭೂಷಣ ಮಾನವರಿಗೆಜ್ಞಾನವೇ ಭೂಷಣ ಮುನಿಯೋಗಿವರರಿಗೆಮಾನಿನಿಗೆ ಭೂಷಣ ಪತಿಭಕ್ತಿಯು 2 ಮಣಿ ಕೊರಳಿಗೆ ಭೂಷಣರಂಗವಿಠಲ ನಿಮ್ಮ ನಾಮ ಅತಿ ಭೂಷಣ 3
--------------
ಶ್ರೀಪಾದರಾಜರು
ಭೂಷಣವಿದು ಭೂಷಣ ಕೇಶವಧ್ಯಾನ ಪಭೂಷಣವದನಾ ವಿಭೀಷಣ ಧರಿಸುತೆನಾಶರಹಿತ ಪೌರುಷವಾಂತ ಧರಣಿಯೊಳು ಅ.ಪಶೇಷಶಯನನಾಮ ಭೂಷಣದೋಷರಹಿತ ಶಿರೋಧಿ ಭೂಷಣಶ್ರೀಶ ವಿಠ್ಠಲನಾಮ ಭೂಷಣಶೇಷಫಣಿಮಣಿಧೃತ ಭೂಷಣ1 ಕರಯುಗಗಳ ಭೂಷಣ ಹರಿಪೂಜೆಯುಶಿರಕೆ ವಂದನೆ ಭೂಷಣಹರಿಪಾದದರ್ಶನ ವರನೇತ್ರಭೂಷಣವರಕ್ಷೇತ್ರಸಂಚಾರ ಚರಣಕೆ ಭೂಷಣ 2 ಹರಿಯ ಚರಿತೆಯು ಕರ್ಣಭೂಷಣಹರಿತುಳಸಿ ನಾಸಿಕಕೆ ಭೂಷಣಹರಿಯ ಕೊಂಡಾಡುವುದೆ ರಸನೆಗೆ ಭೂಷಣಹರಿಯ ಭಜನೆಯು [ಜಿಹ್ವಾಭೂಷಣ] 3 ಧರೆಯೊಳು ಜನಿಸಿದ ಮಾನವರಿಗೆಹರಿನಾಮವೆ ಭೂಷಣಾಸಿರಿರಮಣನಾಮ ಕಿರೀಟವಯ್ಯವರದನೆಂಬುವನಾಮ ವರಕರ್ಣಾಭರಣವು 4 ಗಂಗಾಜನಕನೆಂಬ ನಾಮವೆ ಅಂತರಂಗಕೆ ಮಣಿಭೂಷಣಾರಂಗನೆಂಬುವ ನಾಮ ಹಸ್ತಸಿಂಗರದ ಪೀತಾಂಬರವು ತಾಮಾಂಗಿರೀಶನ ನಾಮ ಮಂಗಳಕರ ಭೂಷಣವೈ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮ'ಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸ'ಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮ'ಮನೆ 2ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿ'ಠ್ಠಲನ ಒಲಿಸಿದ ಹರಿದಾಸ ಸುಮಣಿ 3
--------------
ಭೂಪತಿ ವಿಠಲರು