ಒಟ್ಟು 4215 ಕಡೆಗಳಲ್ಲಿ , 121 ದಾಸರು , 2577 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛೀ ಛೀ ಛೀ ಛೀಕಂಡೆಯ ಮನವೇ ಇಂಥ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನೀಚ ವೃತ್ತಿಗಳನು ಬಿಡುಕಂಡೆಯಮನವೆಪ.ಕಿವಿಗೊಟ್ಟು ಮಧುರನಾದಕೆ ಹುಲ್ಲೆಯುರವದ ಬಲೆಗೆ ಸಿಕ್ಕಿಬಿದ್ದುದನರಿಯನವಮೋಹನಾಂಗಿಯರ ಕೋಕಿಲಾಪದಸವಿ ಕೇಳದಾತನ ಕಥೆ ಕೇಳು ಮನವೇ 1ನಲಿದೆದ್ದುಕರಿ ಎಳೆಯ ತೃಣ ಸ್ಪರುಷನಕಾಗಿಕುಳಿಗೆ ಬಿದ್ದಿರುವುದ ಕಂಡು ಕಂಡರಿಯನಳಿನಾಕ್ಷಿಯರಂಗಸಂಗವ ಮೆಟ್ಟಿ ಕೆಡದೆ ಶ್ರೀಲಲನೇಶನಂಘ್ರಿಯಾನಪಿವೇಕೋ ಮನವೇ 2ಗಾಣದ ತುದಿಯ ಮಾಂಸವ ಮೆಲುವ ಮತ್ಸ್ಯವುಪ್ರಾಣವ ಬಿಡುವುದ ಕಂಡು ಕಂಡರಿಯ ?ಮಾನಿನಿಯ ಬಯಸದೆ ಶ್ರೀ ನಾರಾಯಣನಧ್ಯಾನಾಮೃತವನು ಸವಿದುಣ್ಣೋ ಮನವೆ 3ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಕಣ್ಣುಗೆಡುವುದನು ಕಂಡು ಕಂಡರಿಯ ?ಬಣ್ಣರ ಬಾಲೆಯರ ರೂಪಕೆ ಮರುಳಾಗಿಮಣ್ಣು ತಿನ್ನದೆ ಮಾರನಯ್ಯನ ನೆನೆ ಮನವೆ 4ಅಳಿ ಪರಿಮಳನಾಗಿ ಕಮಲದೊಳಗೆ ಸಿಲುಕಿಅಳಿದು ಹೋಹುದನು ಕಂಡ ಕಂಡರಿಯ ?ಬಳಲದೆ ವರಪುರಂದರ ವಿಠಲನಂಘ್ರಿಯತುಳಸಿ ನಿರ್ಮಾಲ್ಯವಾಫ್ರಾಣಿಸು ಮನವೆ 5
--------------
ಪುರಂದರದಾಸರು
ಜಗಲಿಯ ಹಾಕಿದಳೆ ಬಗಳೆ ಜಗಲಿಯ ಹಾಕಿದಳೆಸೊಗಸೇನ ಹೇಳಲಿ ಶತ್ರುಗಳನೆ ತಂದುಝಗಿ ಝಗಿಸುತ ಎನ್ನಯ ಎದುರಿಗೆ ಕುಳಿತು ಕೊಳ್ಳಲುಪತಲೆಗಳು ಥರದ ಕಲ್ಲು ಒಳ್ಳೊಳ್ಳೆಯ ಎಲುವುಗಳು ಹಾಸುಗಲ್ಲುಬಲಿದ ಮಾಂಸದ ಕೆಸರನೆ ಹಾಕಿ ಮೆತ್ತಿಎಳೆದು ಹೆಣಗಳನು ತಂದು ಭರ್ತಿಯ ತುಂಬುತ1ಮೆದುಳನೆ ಮಲ್ಲವ ಮಾಡಿ ಮೇಲೆಯೆಪದರಂಗಾರವ ಮಾಡಿ ವಿಧವಿಧ ಚಿತ್ರವ ರಕ್ತದಿ ಬರೆದುತಿದಿಯ ಸುಲಿದು ಚರ್ಮವ ಹಾಸಿಗೆ ಹಾಕುತ2ಕತ್ತಿಯ ಹೆಗಲಲಿಟ್ಟು ಎನ್ನಯ ಸುತ್ತಮುತ್ತ ತಿರುಗಾಡುತ ಸತ್ಯ ಚಿದಾನಂದನ ರಾಣಿ ಬಗಳಾಮುಖಿಮತ್ತೆ ದುಷ್ಟರ ಕೊಂದು ವಿಶ್ರಾಂತಿ ಪಡೆಯಲು3
--------------
ಚಿದಾನಂದ ಅವಧೂತರು
ಜಯ ಜಯವೆಂದರುಸುರರುಇಂಥ ವೈಭವದಾಟ ಕಾಣುತಲೆಅಮರರುಪ.ಗಂಧದ ಓಕುಳಿಯನ್ನೇಕಲೆಸಿತಂದು ಮಂದಗಮನೆಯರೆಲ್ಲ ಜೀಕುಳಿತುಂಬಿಇಂದಿರೇಶನ ಮ್ಯಾಲೆ ಸುರಿಸಿಆನಂದ ದಿಂದಲೆ ಕೈ ಹೊಡೆದು ಚಪ್ಪಳಿಸಿ 1ಕೇಶರ ದೋಕುಳಿಯತುಂಬಿಸರ್ವೇಶನೀ ಚಿಮ್ಮುವ ಕುಚಗಳ ಅಪ್ಪಿಕೊಂಬೆಈ ಸುಖ ನೀ ಎಲ್ಲೆ ಕಾಂಬೆಆಭಾಸ ಮಾಡಲುಅದು ನೀ ಒಪ್ಪಿಕೊಂಬೆ 2ಬತ್ತಲೆ ಜಲವ ಪೊಕ್ಕಿಹರುಸೀರೆ ಎತ್ತಿಕೊಂಡ್ಹೋಗಿ ಪುಗಡೆನ್ಹಾಕುವರುಎತ್ತಿಕರವಜೋಡಿಸುವರುಮರವಸುತ್ತಿ ಚಪ್ಪಾಳೆಯನಿಕ್ಕಿ ಸಿದಿಯಲ್ಲೊ ನೀನು 3ಚಂದದ ಸೀರೆಯನುಟ್ಟುಗಂಧ ಕಸ್ತೂರಿ ಕುಂಕುಮ ಕೇದಗೆಯನಿಟ್ಟುಆನಂದವ ಬಟ್ಟರು ಅಷ್ಟುಗೋವಿಂದನಂಘ್ರಿ ಕಮಲದಿ ಮನಸಿಟ್ಟು 4ಅವರಒಲ್ಲಭರೆಲ್ಲ ಸೊಲ್ಲುಗಳೆತ್ತದ್ಹಾಂಗೆಚಲ್ವನ ಪ್ರಾರ್ಥಿಸಿದರೆಲ್ಲಹೀಂಗೆರಮಿನಲ್ಲನ ದಯದಿಂದ ಇದ್ದರು ಮೊದಲಿನ್ಹಾಂಗೆ 5
--------------
ಗಲಗಲಿಅವ್ವನವರು
ಜಯ ಪಾಂಡುರಂಗ - ನಾ ನಿನ್ನ ಮನಕೆ ಬಾರೆನೆ ಪನಾ ನಿನ್ನ ಮನಕೆ ಬಾರೆನೆ ಬಂದರೆ ಈ ಭವದಬಲೆಯೊಳು ಸಿಲುಕುವೆನೆ - ಜಯ ಪಾಂಡುರಂಗ ಅ.ಪಕೆಟ್ಟ ಕಿರಾತನ ಬೆಟ್ಟದಂಥ ಪಾಪವಸುಟ್ಟು ವಾಲ್ಮೀಕಿ ಮುನಿಯೆನಿಸಿದೆ 1ಅಂತ್ಯಸಮಯದಲ್ಲಿ ಅತಿ ಭ್ರಷ್ಟ ಅಜಾಮಿಳಗೆಅಂತಕನ ಬಾಧೆಯ ಬಿಡಿಸಿದೆಯೊ 2ತಂದೆ ತಾಯ್ಗಳನು ತೊರೆದ ಧ್ರುವನಿಗೆಚೆಂದದಿಂದ ಮಾರ್ಗವ ತೋರಿದೆಯೊ 3ಪಂಕಜನಾಭನೆ ಕುಬುಜೆಯ ಡೊಂಕ ತಿದ್ದಿಶಂಕೆಯಿಲ್ಲದೆ ಅವಳ ಕೂಡಿದೆಯೊ 4ತೊತ್ತಿನ ಮಗನ ಮನೆಯಕೂಡತೆಪಾಲನು ಸವಿದುಮತ್ತವಗೆ ಮುಕ್ತಿಯ ತೋರಿದೆಯೊ 5ಐದು ಮಂದಿಯ ಕೂಡ ಸರಸವು ದ್ರೌಪದಿಗೆಐದೆಲಜ್ಜೆಯ ಕಾಯ್ದೆಯೊ6ದೀನರನುದ್ಧರಿಪಪುರಂದರವಿಠಲಏನು ಕಾರಣ ನನ್ನ ಮರೆತೆಯೊ 7
--------------
ಪುರಂದರದಾಸರು
ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ಜಯತು ಜಗದಾಧಾರ ಜಯತು ದೋಷ ವಿದೂರಕುಂದಕುಟ್ಮಲದಂತೆವದನಮಂದಹಾಸಇಂದಿರಾಲಯವಕ್ಷ ತುಲಸಿಮಾಲೆಸಿರಿಸ್ತಂಭ ಉರುಟುಕದಳಿಊರು ಜಾನುಜಂಘೆಶ್ರೀಪತಿ ಅನೇಕರೂಪನಾಗಿನಿಂದುಇಂದೀವರಾಕ್ಷಿಯರ ಮನದ ಹದನವನರಿತುಕೊಳ್ಳಲುಬಳಿಯಲೊಬ್ಬಳನೆ ನಿಲಿಸಿ ಹೆಗಲಲ್ಲಿಕರವಹಾಕಿಕುಳದಲ್ಲಿ (?) ಕೃಷ್ಣನ ಸ್ಥಳದಲ್ಲಿ ಹೆಜ್ಜೆಯೊಳುಘಲಕು ಘಲಕು ತಾಳಗತಿಗಳಿಂದಲಿ ಸುತ್ತಿದುಂದುಭಿವಾದ್ಯ ತಮ್ಮಿಂದ ತಾಂ ಬಾರಿಪವುಒಂದೊಂದು ದೋಷದಿಂದಿನ್ನು ಅಜಭವಸುರರುಶರಣು ಕರುಣಾನಿಧಿಯೆ ಶರಣು ಗುಣವಾರಿಧಿಯೆರಾಸಕ್ರೀಡೆಯಲಿ ತೋರಿಸಿದ ಗೋಪಿಯರ ಅಭಿ-
--------------
ಗೋಪಾಲದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ಗುರುಭಕ್ತಿಯೆಂತೆಂಬ ಗಮಕದೋಲೆಯನಿಟ್ಟುಹರಿಧ್ಯಾನವೆಂಬ ಆಭರಣವಿಟ್ಟು ||ಪರತತ್ತ್ವವೆಂತೆಂಬ ಪಾರಿಜಾತವ ಮುಡಿದುಪರಮಾತ್ಮ ಹರಿಗೆ ಆರತಿಯೆತ್ತಿರೆ 1ಆದಿ ಮೂರತಿಯೆಂಬ ಅಚ್ಚ ಅರಿಸಿಣ ಬಳೆದುವೇದ ಮುಖವೆಂಬ ಕುಂಕುಮವನಿಟ್ಟು ||ಸಾಧು - ಸಜ್ಜನ ಸೇವೆಯೆಂಬ ಸಂಪಿಗೆ ಮುಡಿದುಮೋದದಿಂ ಲಕ್ಷ್ಮೀಗಾರತಿಯೆತ್ತಿರೆ 2ತನುವೆಂಬ ತಟ್ಟಿಯಲಿ ಮನದ ಸೊಡರನು ಇಡಿಸಿಘನಶಾಂತಿಯೆಂಬ ಆಜ್ಯವನುತುಂಬಿ ||ಆನಂದವೆಂತೆಂಬ ಜ್ಯೋತಿಯನು ಹಚ್ಚಿತುಚಿನುಮಯ ಹರಿಗೆ ಆರತಿಯೆತ್ತಿರೆ 3ಕಾಮಾಂಧವಳಿದಂತ ಕಮಲದ ತಟ್ಟೆಯಲಿನೇಮವೆಂತೆಂಬ ಹರಿದ್ರವನು ಕದಡಿ ||ಆ ಮಹಾಸುಜ್ಞಾನವೆಂಬ ಸುಣ್ಣವ ಬೆರಸಿಸೋಮಧರವರದಗಾರತಿಯೆತ್ತಿರೆ 4ನಾರದವಂದ್ಯಗೆನವನೀತ ಚೋರಗೆನಾರಾಯಣಗೆ ಶ್ರೀ ವರಲಕ್ಷ್ಮೀಗೆ ||ಸಾರಿದವರನು ಪೊರೆವ ಪುರಂದರವಿಠಲಗೆನೀರಜಮುಖಿಯರಾರತಿಯೆತ್ತಿರೆ5
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಲದನೀಲಗಾತ್ರ ಏತರ ಚೆಲುವ ರುಕ್ಮಿಣಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಳಿಯ ಜಡೆಯ ಮೈಯ ಜೋಗಿಗೊಲೆದ ಪಾರ್ವತಿ ಪ.ಉದಕದೊಳಗೆ ವಾಸವೇಕೆ ಸದನವಿಲ್ಲವೆ |ಸುದತಿಸುಡುವ ಕಾಡಿಗಿಂತ ಲೇಸು ಅಲ್ಲವೆ1ಶೃಂಗಿಯ ಬೆನ್ನಿಲೆತ್ತಿದವನ ಸೊಗಸು ನೋಡಿದೆ |ಗಂಗೆಯ ಶಿರದಿ ಪೊತ್ತವನ ಗುರುವ ಕೇಳಿದೆ 2ವಸುಧೆ ನೆಗಹಿ ಬೇರೆ ಮೆಲುವ ಅಶನವಿಲ್ಲವೆ |ಹಸಿದು ವಿಷವ ಕುಡಿದ ಎಂತು ಸ್ವಾದವಲ್ಲವೆ 3ಕರುಳ ಕೊರಳ ಸರವು ಏಕೆ ಸರವು ದೊರಕದೆ |ಕೊರಳ ರುಂಡಮಾಲೆ ಏಕೆ ಕಾಂಚನವಿಲ್ಲದೆ 4ಧರಣಿ ಮೂರಡಿ ಬೇಡಲಿಕ್ಕೆ ದೊರೆಯು ಅಲ್ಲವೆನರಕಪಾಲ ಪಿಡಿವ ಜಗದ ಕರ್ತೃವಲ್ಲವೆ 5ಮಾತೆಶಿರವ ಅಳಿದವನ ಮಾಲೆ ಕೇಳಿದೆಯಾ !ತಾತನಾಚಿ ಸುತನ ಕೊಂದು ನೀತಿ ನೋಡಿದೆಯಾ 6ಕೋತಿಗಳನು ಕೂಡಲಿಕ್ಕೆ ಜಾತಿ ತನ್ನದೆ |ಭೂತಗಣಗಳಾಳುವುದಕೆ ಭೀತಿ ಇಲ್ಲವೆ 7ಹತ್ತಿರಿದ್ದ ವಾಜಿಬಿಟ್ಟು ಹದ್ದನೇರ್ವರೆ |ಎತ್ತಿನ ಬೆನ್ನ ನೇರಿದವರು ಉತ್ತಮರಾಹರೆ 8ಸುತ್ತಲಿದ್ದಬಾಲೆಯರೊಳು ಬತ್ತಲಿರುವರೆ |............... ಶಾಪ ಹತ್ತಲಿಲ್ಲವೆ 9ಹರಿಹರರೊಳು ಭೇದವೇನು ಹೇಳೆ ರುಕ್ಮಿಣಿಪುರಂದರವಿಠಲ ತಾನೆ ಬಲ್ಲ ಕೇಳೆ ಪಾರ್ವತಿ 10
--------------
ಪುರಂದರದಾಸರು
ಜೀವನ ಕಳೆಗಳು ಮುಳುಗುವ ತನಕಜೀವನ್ಮುಕ್ತನು ತಾನಲ್ಲ || ಜೀವನಕಳೆತಾನೇತಾನಾದರೆ | ಜ್ಯೋತಿರ್ಮಯವೀ ಜಗವೆಲ್ಲಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಎಲ್ಲ ಪ್ರಪಂಚವು ಸೋಗಿನ ಪರಿಯಲಿ |ಪಸರಿಸಿ ತೋರುವದೆಲ್ಲಾ ||ಬೆಲ್ಲದ ಮೂಲವು ಕಬ್ಬಿನ ರಸವನು |ಅನುಭವ ಯೋಗಿಯೆ ತಾ ಬಲ್ಲಾ1ಮುತ್ತಿನ ಆಕೃತಿ ಬೇರೆ ಬೇರಾದರೆ |ತೇಜವೆ ತತ್ತ್ವಗಳೆಲ್ಲಾ ||ಮುತ್ತಿನ ಮೂಲವು ಸ್ವಾತಿ ಬಿಂದುವು |ಸಿಂಧುವಾದವನೆ ತಾ ಬಲ್ಲಾ2ಸುಮನ ಪರಾಗವು ಬೇರೆ ಬೇರಾದರೆ |ಘಮ ಘಮ ಮಕರಂದೆಲ್ಲಾ |ಸುಮನ ಪರಾಗವು ಭೃಂಗಾವಳಿ ಸುಖಸದ್ಗುರು ಶಂಕರ ತಾ ಬಲ್ಲಾ3
--------------
ಜಕ್ಕಪ್ಪಯ್ಯನವರು
ಜೋ ಜೋ ಶ್ರೀ ಕೃಷ್ಣ ಪರಮಾನಂದಜೋ ಜೋ ಗೋಪಿಯ ಕಂದ ಮುಕುಂದ ಪ.ಪಾಲುಗಡಲೊಳು ಪವಡಿಸಿದವನೆ ಒಂದಾಲದೆಲೆಯ ಮೇಲೆ ಮಲಗಿದ ಶಿಶುವೇ ||ಶ್ರೀ ಲತಾಂಗಿಯರ ಚಿತ್ತವಲ್ಲಭನೇಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋ ಜೋ 1ಹೊಳೆಯುವ ರನ್ನದ ತೊಟ್ಟಿಲ ಮೇಲೆಢಳಿ ಢಳಿಸುವ ಗುಲಗುಂಜಿಯ ಮಾಲೆ ||ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋ ಜೋ 2ಆರ ಕಂದ ನೀನಾರ ನಿಧಾನಿಆರ ರತ್ನವೊ ನೀನಾರ ಮಾಣಿಕವೋ ||ಸೇರಿತು ಎನಗೊಂದು ಚಿಂತಾಮಣಿಯು - ಎಂದುಪೋರನಿನ್ನನು ಪಾಡಿ ತೂಗುವೆನಯ್ಯ - ಜೋ ಜೋ3ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆಮನೆಯ ಕೆಲಸವಾರು ಮಾಡುವರಯ್ಯ ||ಮನಸಿಗೆ ಸುಖನಿದ್ರೆ ತಂದುಕೊ ಬೇಗಫಣಿಶಯನನೆ ನಿನ್ನ ಪಾಡಿ ತೂಗುವೆನು - ಜೋ ಜೋ 4ಅಂಡಜವಾಹನ ಅನಂತ ಮಹಿಮಪುಂಡರೀಕಾಕ್ಷ -ಪರಮ ಪಾವನ ||ಹಿಂಡು ದೈವದಗಂಡ ಉದ್ಧಂಢ ದೇವನಪಾಂಡುರಂಗ ಶ್ರೀ ಪುರಂದರವಿಠಲ - ಜೋ ಜೋ 5
--------------
ಪುರಂದರದಾಸರು
ತಂದೆ ತಾಯಿಮಿತ್ರನೀನೆ ಬಾಂಧವ ನೀನೆ ನಿನ್ನಿಂದ ಬಳಗಿಲ್ಲೆನಗೆ ಇಂದಿರಾಧವನೆ ಕಾಯೊ ಪ.ಹೊಲೆಯ ರಕ್ತದಿ ರೇತ ನಿಲಿಸಿದನೊರ್ವ ಪಿತನೆಲೆಸಿ ಗರ್ಭದೊಳು ರಕ್ಷಿಸಿದೆ ನೀನುಹಲವು ಯೋನಿಯ ತೋರಿ ತೊಳಲಿಸಿ ತುದಿಯಲ್ಲಿನೆಲೆಗೆ ನಿಲ್ಲಿಸುವಂಥ ಸುಲಭ ಜನಕನಲ್ಲೆ 1ನವಮಾಸ ಧರಿಸಿ ಸ್ತನ್ಯವನುಣಲಿತ್ತಳವ್ವೆತವಕದಿ ನಡೆ ನುಡಿಸುವೆಯೊ ನೀನುಆವ ಕಾಲಕಾಲದಲ್ಲಿ ತವಗರ್ಭದಲ್ಲಿ ಪೊತ್ತುಜೀವಕೆ ಚೈತನ್ಯಾಶನವೀವ ತಾಯಿ ನೀನಲ್ಲವೆ 2ಶ್ರೇಯಸನಾದರಿಸುವ ಪ್ರಿಯಸಖರೆಲ್ಲರು ನಿ:ಶ್ರೇಯಸದಿ ಸುಖಮುದದಾಯಕ ನೀನೆಮಾಯಪಾಶ ಬಂಧನದಿ ನೋಯುವರವರ್ಗಾಬಾಧೆಯನಟ್ಟಿ ಕಳೆವ ಚಿನ್ಮಯಮಿತ್ರನೀನಲ್ಲವೆ3ವಿತ್ತವಿರೆ ಸಹೋದರರಿತ್ತ ಬನ್ನಿ ಕೂಡ್ಯೆಂಬರುವಿತ್ತಶೂನ್ಯನಾದರೆ ನೀನುಪೇಕ್ಷಿಸೆ ಅಯ್ಯಒತ್ತಿ ಬಹದುರಿತವಿಪತ್ತುಗಳ ಸವರಿ ಸುಮುಕ್ತಿಯ ಪದವೀವಾನಿಮಿತ್ತ ಬಂಧು ನೀನಲ್ಲವೆ 4ಸಿರಿಯು ಪೋಗೆ ನಿಲ್ಲರು ಶರೀರ ಸಂಬಂಧಿಗಳಾತುರದ ದಾರಿದ್ರ್ಯ ಪಾಪಹರನು ನೀನೆಕರುಣಿ ಪ್ರಸನ್ನ ವೆಂಕಟರಮಣ ನಿನ್ನ ನಾಮಸ್ಮರಣೆ ಎನ್ನ ಜಿಹ್ವೆಗೆ ಮರೆಯದಿರಲಿ ಕಂಡ್ಯ 5
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲ ಪರಿಹರಿಸುವ ನಮ್ಮಪ್ಪನಲ್ಲವೆ ನೀನುಒಪ್ಪಿದ ಬಳಿಕವಗುಣ ನೋಡದ ತಿಮ್ಮಪ್ಪನಲ್ಲವೆ ನೀನು ಪ.ಬೆಳಗಿನ ಜಾವದಿಹರಿನಿನ್ನ ಸ್ಮರಣೆಗೆಹಳವಿಗೆಗೊಳ್ಳದ ತಪ್ಪುಮಲಮೂತ್ರವಿಸರ್ಜನೆಯ ಮೃತ್ತಿಕೆಯಲಿಮಲಿನವ ತೊಳೆಯದ ತಪ್ಪುತುಲಸಿ ವೃಂದಾವನ ಗೋಸೇವೆಗೆಅಲಸಿಕೆ ಮಾಡುವ ತಪ್ಪುನಳಿನಸಖೋದಯಕಘ್ರ್ಯವ ನೀಡದಕಲಿವ್ಯಾಸಂಗದ ತಪ್ಪು 1ದಿನದಿನ ಉದಯದಿ ಸ್ನಾನವ ಮಾಡದತನುವಂಚನೆಯ ತಪ್ಪುಕ್ಷಣ ಶ್ರೀ ಹರಿಗುಣ ಜಿಜ್ಞಾಸಿಲ್ಲದಮನವಂಚನೆಯ ತಪ್ಪುಮುನಿಸುರ ಭೂಸುರರಾರಾಧಿಸದಧನ ವಂಚನೆಯ ತಪ್ಪುವನಜಾಕ್ಷನೆ ನಿನ್ನಪಾದವಿಮುಖ ದುರ್ಜನ ಸಂಸರ್ಗದ ತಪ್ಪು 2ಕಣ್ಣಲಿ ಕೃಷ್ಣಾಕೃತಿ ನೋಡದೆಪರಹೆಣ್ಣಿನ ನೋಟದ ತಪ್ಪುನಿನ್ನ ಕಥಾಮೃತ ಒಲ್ಲದೆ ಹರಟೆಯಮನ್ನಿಸುವ ಕಿವಿ ತಪ್ಪುಅನ್ನವ ನಿನಗರ್ಪಿಸದಲೆ ಹರುಷದಿಉಣ್ಣುವ ನಾಲಿಗೆ ತಪ್ಪುಚಿನ್ಮಯ ಚರಣಕ್ಕೆರಗದೆಉನ್ಮತ್ತರ ನಮಿಸುವ ತಲೆ ತಪ್ಪು 3ಶ್ರೀ ನಿರ್ಮಾಲ್ಯದ ವಿರಹಿತ ಸುರಭಿಯಘ್ರಾಣಿಪನಾಸಿಕತಪ್ಪುಆನಂದದಿ ಸಂಕೀರ್ತನೆ ಮಾಡದಹೀನವಿವಾದದ ಬಾಯ ತಪ್ಪುಶ್ರೀನಾಥಾರ್ಚನೆ ಇಲ್ಲದೂಳಿಗಮಾಣದಿರುವ ಕೈ ತಪ್ಪುಶ್ರೀನಾರಾಯಣ ವೇಶ್ಮನಿಗೈದದನಾನಾಟನಪಾದತಪ್ಪು4ಯಜ್ಞಾತ್ಮಗೆ ಯಜ್ಞಾರ್ಪಿಸದೆ ಸುಖಮಗ್ನಾದ ಮೇಢ್ರದ ತಪ್ಪುಅಗ್ರದ ಕರ್ಮವ ಶೌಚವ ಜರಿದ ಸಮಗ್ರ ಗುಹ್ಯಕೃತ ತಪ್ಪುಅಜ್ಞಾನ ಜ್ಞಾನದಿ ಕ್ಷಣಲವಶತವೆಗ್ಗಳಘ ಗಳಿಸುವ ತಪ್ಪುಯಜೆÕೀಶ ಪ್ರಸನ್ವೆಂಕಟ ಕೃಷ್ಣ ನಾಮಾಗ್ನಿಗೆ ತೃಣವೀ ತಪ್ಪು 5
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀಚಪ್ಪರ ಶ್ರೀನಿವಾಸ ಪ.ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆದರ್ಪಕತಾತನೆ ತಾ ಸಜ್ಜನಪ್ರೀತ ಅ.ಪ.ಮಾಧವನಿನ್ನಯ ಮಹಿಮೆ ತಿಳಿಯದಪ-ರಾಧವ ಮಾಡಿದೆ ದಾರಿದ್ರ್ಯದಬಾಧೆಯಿಂದ ತವಪಾದದರುಶನದಗಾದಿಯ ಕಾಣದಾದೆ ನಾ ದ್ರೋಹಿಯಾದೆ 1ತ್ರಾಣವಿರುವಾಗಕಾಣಿಕೆಹಾಕಿದೆದೀನದಾರಿದ್ರ್ಯದ ಹೊತ್ತಿನಲಿಮೇಣದರಿಂದಲಿ ತೆಗೆದು ತೆಗೆದು ಪಂಚಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ 2ಮಂದವಾರದಿಕ್ಕೊಂದೂಟವ ಸತ್ತ್ವದಿಂದಿರುವಾಗ ನಾ ನೇಮಗೈದೆಮಂದಭಾಗ್ಯ ಜ್ವರದಿಂದ ಪೀಡಿತನಾದ-ರಿಂದೆರಡೂಟವನೂ ಮಾಡಿದೆ ನಾನು 3ಶನಿವಾರಕ್ಕೊಂದಾಣೆಕಾಣಿಕೆಹಾಕುತ್ತಮಿನುಗುವ ಡಬ್ಬಿಯ ನಾ ಮಾಡಿದೆಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದಹಣವೆಲ್ಲಗುಣನುಂಗಿತು ಪಾದಕೆ ಗೊತ್ತು4ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣಗುಡ್ಡೆಯ ಮೇಲಿರುವ ಮಹಾನುಭಾವ 5ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯುಮಂಡೆಯೊಳುರಿವುದು ಖಂಡಿತದಿಪುಂಡರೀಕಾಕ್ಷನೆ ಕರುಣಾಮೃತರಸಕುಂಡದೊಳ್ ಮೀಯಿಸಯ್ಯ ವೆಂಕಟರಾಯ 6ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆಕೆಡುಕು ಮಾಡುವುದೇನುಜಡಜನಾಭಕಡಲಶಯನ ಲಕ್ಷ್ಮೀನಾರಾಯಣ ನ-ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ