ಒಟ್ಟು 6705 ಕಡೆಗಳಲ್ಲಿ , 132 ದಾಸರು , 3679 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಕಾಂತೆಯರಸನ ತೋರೆನಗಮ್ಮ ಸಾಕುವ ಸರಸನ ತೋರೆ ಪ. ಕಣ್ಣೆರಡು ಸಾಸಿರುಳ್ಳವನಂಗದಿ ಕಣ್ಣಮುಚ್ಚಿ ಮಲಗಿಪ್ಪನ ಹೊನ್ನು ಮಣ್ಣಿನ ರಾಶಿಯಿಂದ ಕೂಡಿಪ್ಪನ ಮಣ್ಣ ಕೂಡಿದ ದಿವ್ಯಕಾಯನ 1 ಮಣ್ಣಿನ ದೇವರ ಮುಖದಿಂದ ಮಣ್ಣಿಗೆ ಸೆಣಸುವರ ಭುಜದಿಂದ ಮಣ್ಣ ಪಾ(ನಾ?)ಡುವರ ತೊಡೆಯಲ್ಲಿ ಮೂಡಿ ಮತ್ತೆ ಮಣ್ಣ ಚರಣದಿ ಪುಟ್ಟಿಸಿದನ 2 ಕಣ್ಣ ಮುಚ್ಚದನ ಕಣ್ಣ ತೋರದನ ಹೆಣ್ಣಾಳಿನುರುಬಿನಲಿ ಮುಕ್ಕಣ್ಣನ ಮಣ್ಣನಳೆದು ಮಣ್ಣಿನರಸನೊರೆಸಿದ ಮಣ್ಣಿನ ಮಗಳನಾಳಿದನ 3 ಮಣ್ಣ ಪೊತ್ತನಧರಿಸಿದ ಚಿಣ್ಣನ ಮಣ್ಣ ಮೆದ್ದ ಸಣ್ಣ ಬಾಯೊಳು ಮಣ್ಣನೆ ತೋರಿದ ನಂದನರಾಣಿಗೆ ತಲ್ಲಣ ಹಬ್ಬವ ಕೊಟ್ಟ ಧೀರ4 ಕನ್ನಗಳ್ಳರ ಕೊಂದು ಕಣ್ಣಿಲ್ಲದವರಿಗೆ ಕಣ್ಣ ತರಿಸಿಕೊಟ್ಟ ಚದುರನ ಕಣ್ಣಿಲ್ಲದವನಿಗೆ ಕಣ್ಣ ಕೊಟ್ಟನಂತ ಕಣ್ಣುಳ್ಳ ರೂಪವ ತೋರ್ದನ 5 ಹೆಣ್ಣ ಮೋಹಿಸುವನ ಸುಟ್ಟುರಿ- ಗಣ್ಣನ ಮರುಳು ಮಾಡಿದನ ಹೆಣ್ಣನುಂಗುಟದಿ ಪಡೆದು ತಮ್ಮಣ್ಣನ ಮಣ್ಣಿನೊಡೆಯ ಮಾಡಿಸಿದನ 6 ಮಣ್ಣಿಗಾಗಿ ಬಂದ ಮಣ್ಣನಾಳಿದ ದುರ್ಜನ ದಾನವರ ಕೊಂದನ ಹೆಣ್ಣು ಮಣ್ಣೊಲ್ಲದ ವಾದಿರಾಜನಿಗೆ ಪ್ರಸನ್ನನಾದ ಹಯವದನನ 7
--------------
ವಾದಿರಾಜ
ಮಾಡಲೋ ಹರಿಪಾದ ಭಜನಿ| ಮನವೇ ನೀ| ಪಾತಕ ಓಡಿಸಿ ಕಳೆವದು| ಕಾಡಿಗೆ ಕೊಂಡಾ ವಾಡಬನಂತೆ ಪ ಸಿಕ್ಕದು ನರದೇಹಲಿಂದು|ಜನಿಸಿ ಬಂದು| ಪುಕ್ಕಟೆ ನೀಗುವದು ಕುಂದು| ಅಕ್ಕರದಲಿ ವಿಷಯಕ್ಕೆಳಿಸುತಾ|ಭವ| ದಿಕ್ಕಲು ಸಾರುತ ಠಕ್ಕಿಸಿ ಕೊಂಬರೆ 1 ಸಂತರ ಸಹವಾಸ ಮಾಡೀ|ಕರುಣ ಬೇಡಿ| ಅಂತರ ಸುಖವನು ಕೂಡಿ| ತಂತು ವಿಡಿದು ನಿಶ್ಚಿಂತದಿ ಘನ|ವಿ| ಶ್ರಾಂತಿ ಪಡೆದು ಅನಂತನ ಪಾಡುತ2 ಭಕುತಿಯ ಸವಿಸಾರವೆಲ್ಲಾ|ಬಲ್ಲವನೇ ಬಲ್ಲಾ| ಮುಕುತಿಯೊಳಗೆ ಸುಖವಲ್ಲಾ| ಪ್ರಕಟದಿ ಮಹಿಪತಿ ಮಗುವಿಗೆ ಭೋಧಿಸಿ| ತಗಬಗಿ ಬಿಡಿಸಿದ ನಗೆ ಮೊಗದಿಂದ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಡು ಮನವನು ಬರಮಾಡು ಹರಿಯನು ಸ್ಥಿರ ಮಾಡು ಮನವನು ಪ ಜೋಡಿಸಿ ಕರಗಳ ಕರೆದರೆ ಓಡುತ ಓಡುತಲಿವ ಬರುವನುಅ.ಪ ನಾಳೆ ನಾಳೆ ಎನ್ನಬೇಡ ಕಾಲ ನಿನ್ನಧೀನವಲ್ಲ ಕೇಳಿದರಾಕ್ಷಣ ಕರುಣಾಶೀಲನು ಆಲಯಕಿವ ಬರುವನು 1 ಕಾಮಧೇನು ಕಲ್ಪವೃಕ್ಷ ಈ ಮಹಾಮಹಿಮಗೆ ಸಮವೇ ಪ್ರೇಮದಿ ಪೂಜಿಸಿದಾತಗೆ ಕ್ಷೇಮವ ಭಾಮೆಯ ಪ್ರಿಯ ಕೊಡುವನು 2 ಮನಗೆÉ ಬಂದರೀತನೊಮ್ಮೆ ಜನಕೆ ಬಂದುದೆಂಥ ಹೆಮ್ಮೆ ಪ್ರಣಯ ಸುಧೆಯ ಸವಿರಸವನು ಮನೆಯಲಿ ತುಂಬುವನು ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ಮಾತನಾಡಲೆ ಜಾಣೆ ಮೋಹನಿಭಿ ಮದಯಾನೆ| ರೀತಿ ನಿನಗುಚಿತವೇನೇ|ಯಾತಕಿದು ಮನ ಮುನಿಸು| ಎನ್ನೊಳು ಸುಖಬೆರೆಸು ಪ್ರೀತಿ ರತಿಸೊಬಗು ದೊರೆನಾರೀ ಪ ತಿಂಗಳಾನನೆ ನಿನ್ನ ತೋಳಿಂಬವಿಲ್ಲದಿರೆ| ಕಂಗಳಿವೆ ಗೊಡವಲ್ಲೆ ನಲ್ಲೆ| ಅಂಗ ದವಯವವು ತಮ್ಮ ಅರ್ಥಿಯನೆ ಜರಿದವಾ| ಲಿಂಗನವ ಬಯಸಿ ನೋಡೆ ನೀಡೇ1 ಮುಂದಕಡಿಯಿಡಲಾರೆ ಮನಸೋತವಗೆ ದಯ| ದಿಂದಕರ ಪಲ್ಲವಾರೆ ದೋರೆ| ಬಂದ ನಿನ್ನಯ ವಿರಹ ಬಹಳ ತಾಪಕ ಸರಸಾ| ನಂದ ಮಳೆಯಗರಿಯೇ ವೆರಿಯೇ 2 ಏಣಾಕ್ಷಿ ಕೇಳಿನ್ನಯ ದೇವನೀಗ ಯಾಚಕನು| ತಾನಾಗಿಬಂದೆನಲ್ಲೆ ನಿಲ್ಲೆ| ತಾ ನೊಲಿದು ಅಧರಾಮೃತ ಫಲವೇ ಸೂರೆಯನು| ಮೌನದಲಿ ಕೊಡಲಿಬಾರೇ ನೀರೇ 3 ಕಾಂತೆ ನಿನ್ನ ವಿಯೋಗ ಕೇಳು ಜನವನ ವಾಗೆ| ಎಂತಶನ ಶುಚಿ ಹೇಳೆ ಕೇಳೆ| ಕಂತುವಿನ ಶರಗಳರಕಂ ಮಡುವಂ ಪೊಕ್ಕೆಗುಣ| ವಂತೆ ಫಣೀ ವೇಣಿ ಪಿಡಿಯೇ ಜಡಿಯೆ4 ಮಂದಗಮನೆ ಬುದ್ದಿಮೋಹಿಸುವದೇನು|ನಿಜ| ಛಂದ ವಾಜಿಯಲಿ ಕೂಡೆ ನೋಡೇ| ಎಂದ ವಚನನಲಿದು ಎರಗಿ ಗಿರಿ ಮಹಿಪತಿ|ನಂದ ನೊಡೆಯನ ನೆರದಳೇ ತರಳೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾತನಾಡೈ ಮನ್ನಾರಿ ಕೃಷ್ಣ ಮಾತನಾಡೈ ಪ ದಾತನು ನೀನೆಂದು ಬಯಸಿ ಬಂದೆನು ಮಾತನಾಡೈಅ.ಪ. ಸಿರಿ ಪೊಂಗೊಳಲೊ ಜಗ-| ದಾಧಾರದ ನಿಜ ಹೊಳೆಯೋ || ಪಾದದ ಪೊಂಗೆಜ್ಜೆ ಥಳಿಲೊ ಸರ್ವ | ವೇದಗಳರಸುವ ಕಲ್ಪಕ ಸೆಳಲೊ 1 ಕಸ್ತೂರಿ ತಿಲಕದ ಮದವೊ ಮ- ಕುಟ ಮಸ್ತಕದಿ ಝಗಝಗವೊ || ವಿಸ್ತರದಿ ಪೊತ್ತ ಜಗವೊ ಪರ- | ವಸ್ತುವು ನಂದ ಯಶೋದೆಯ ಮಗುವೊ 2 ನವನೀತವ ಪಿಡಿದ ಕರವೊ ನವ-| ನವ ಮೋಹನ ಶೃಂಗಾರವೊ || ಅವತರಿಸಿದ ಸುರತರುವೊ ಶತ- ರವಿಯಂದದಿ ಉಂಗುರವಿಟ್ಟ ಭರವೊ 3 ಆನಂದ ಜ್ಞಾನದ ಹೃದವೊ ಶುಭ-| ಮಾನವರಿಗೆ ಬಲು ಮೃದುವೊ || ಆನನ ಛವಿಯೊಳು ಮಿದುವೊ ಪಾಪ-| ಪಾವಕ ಪದವೊ 4 ತ್ರಿಜಗದಧಿಕ ಪಾವನನೊ ಪಂ-| ಕಜ ನೇತ್ರೆಯ ನಾಯಕನೊ || ಅಜಭವಾದಿಗಳ ಜನಕನೊ ನಮ್ಮ |ವಿಜಯವಿಠ್ಠಲ ಯದುಕುಮಾರಕನೊ 5
--------------
ವಿಜಯದಾಸ
ಮಾಧವ ನಮ್ಮ ಹೆ ಜ್ಜಾಜಿಯ ಚೆನ್ನಕೇಶವಾ ಪ ಸಾಜದಿ ಶರಣರಿಗೊಲಿವಾ ಸುರ ಭೂಜನು ಪರವಾಸುದೇವಾ ಅ.ಪ ಮರೆತವರಿಗೆ ಮತ್ತೂ ದೂರನು ಇವ ಮರೆಹೊಕ್ಕವರ ಮುಂದಿರುವನು ದುರಿತಗಳಡಗಿಸಿ ದಾಸರ ಪೊರೆವಾ ಪರಮದಯಾಳುವು ಪ್ರಭು ಶ್ರೀನಿಭವ 1 ನಿರ್ಜರ ಮುನಿಗಣ ಲೋಲಾ ಶೀಲಾ ಸಾರಥಿ ಲೀಲಾ ಪರ್ಜನ್ಯ ಪ್ರಭುಪರಿಪಾಲ ನೀಲಾ ದುರ್ಜನ ವಂಶಕ್ಕೆ ಕಾಲಾ 2 ನಿತ್ಯತಂದೆಯು ತಾಯಿಯು ಶ್ರೀರಂಗಾ ಸತ್ಯಸಹೋದರನು ವೆಂಕಟರಂಗಾ ಸ್ತುತ್ಯ ಬಂಧುವು ತಾನೆ ನರಸಿಂಗಾ ಇವ ಪ್ರತ್ಯಕ್ಷನೊ ಅಂತರಂಗ 3 ವೆಂಕಟವರದನೆ ಸದಯಾ ಗುರು ಸಂಕಟಹರ ಬಹುವಿನಯಾ ರಂಗ ಪಂಕಜಸಂಭವ ತನಯಾ 4 ಯಾದವ ಯದುಶೈಲಶೃಂಗಾ ಸಾಂಗ ಮಣಿ ಉತ್ತಮಾಂಗ [ವೇದ] ವೇದ್ಯನೆ ಗರುಡತುರಂಗಾ ಗಂಗಾ ಬಾದರಾಯಣ ಗೀತೋತ್ತುಂಗ 5 ಸಂಪಿಗೆ ಕಂಪಿನ ಸುಂದರ ಸಂಪೂರ್ಣ ಸಂಪತ್ಕುಮಾರ ಶ್ರೀ ಭೂನೀಳ ರಮಣ ತಂಪಿನ ಹೃದಯದ ಪ್ರಾಣಸೂತ್ರಾದಿ ಪೆಂಪಿನಗುರು ಶ್ರೀನಿವಾಸ ಕಲ್ಯಾಣ6 ರಾಘವಜಯ ಸೀತಾರಾಮಾ ಸ್ವಾಮಿ ರವಿಕುಲ ಸುಂದರಸೋಮ ಯೋಗಿ ಜನಾನಂದ ಧಾಮಾ ಪ್ರೇಮಪ್ರಿಯ ಶ್ರೀಶ್ಯಾಮ ಭಾಗವತಾನಂದಪ್ರಿಯ ಪುಣ್ಯನಾಮಾ ಚತು ಸಾಗರಾಂತ ಸಾರ್ವಭೌಮ 7 ಭಕ್ತಮಂಡಲಿ ಕಾಮಧೇನು ಜೇನು ವಿ ರಕ್ತ ಜನರ ಹೃದಯಭಾನು ಮುಕ್ತಿ ಬಯಸಿ ಬಂದೆ ನಾನು ಪ್ರೇಮಾ ಸಕ್ತಿ ಸಿದ್ದಿಯ ನೀಡು ನೀನು 8 ಸಕಲದೇವರೊಳೆಲ್ಲ ನೀನೇ ಹೆಚ್ಚು ಅಕಳಂಕ ಸಾಧುಗಳ ಸವಿಬೆಲ್ಲದಚ್ಚು ನಿಖಿಳಜೀವರೊಳೆಲ್ಲ ಪರಮಾತ್ಮನಚ್ಚು ಸುಕರದಿ ನೆನೆಯುವ ನನಗೆ ನಿನ್ನಯ ಹುಚ್ಚು 9 ಪರಿಪರಿ ಭವಸಂಸಾರಾ ಸಾರಾ ಹೊರಲಾಲೆ ದೂಡುವೆ ದೂರಾ ಪರಮಾತ್ಮಾ ಪದಗಳ ಸೇರಾ ಸಾರಿ ಕರೆಯಲು ಕರಗಳ ತೋರಾ 10 ರಾಜ ಜನಾರ್ಧನ ದಿವ್ಯಂ ದಿವ್ಯಂ ಜಾಜಿ ತುಲಸೀ ಮಾಲ ಭವ್ಯಂ ಯಾಜಿ ಕಮಂಡಲ ದ್ರವ್ಯಂ ಸ್ತವ್ಯಂ ಜನಗಾನ ಶ್ರೋತವ್ಯಂ 11 ಸರ್ವಲೋಕ ಶರಣ್ಯ ಗಣ್ಯ ಉರ್ವಿ ದೇವ ವರೇಣ್ಯ ಹಿರಣ್ಯ ಸ್ವರ್ಣ ವಿರ್ವತ ದರಶ್ಯಾಮ ಪುಣ್ಯ 12
--------------
ಶಾಮಶರ್ಮರು
ಮಾಧವ ನಿಮ್ಮ ಪಾದಾ ದೋರೋ| ಸಾರಭಕುತಜನ ಸುರತರುವಾಗಿಹ ಪಾದಾದೋರೋ ಪ ಚಕೋರ ಚಂದಿರವಾದ ಪಾದಾದೋರೋ| ಪಾದ ದೋರೊ 1 ಕುಣಿದಾಡಿದ ಪಾದಾ ದೋರೋ| ಆಫಣಿಯಂಗವ ನಿರ್ವಿಷ ಮಾಡಿದ ಪಾದಾ ದೋರೊ2 ಸರಸಿಜ ಭವಭವರೊಂದಿತ ಪಾವನ ಪಾದಾ ದೋರೋ| ಗುರುಮಹಿಪತಿ ಪ್ರಭು ಕಂದಗೊಲಿದು ಬಂದು ಪಾದಾದೋರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಧವ ಪ ದುರುಳ ತಿರುಕನು ನಾನು 1 ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು2 ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು 3 ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನುಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು4 ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನುಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು 5
--------------
ಕನಕದಾಸ
ಮಾಧವ ಮಾಯ ಜಾಲಗಳ್ ಜಾಣÀ ನೀನೆಲೈ ಮಧುರ ನುಡಿಯೊಳು ಮಾನವಳಿದ ಮೇಲ್ ಪ್ರಾಣವೇತಕೆ ಕಾಣಬಂದಿತು ನಿನ್ನ ಕಪಟವು 1 ಶೋಕ ಕಾರಣವರಿಯದಂತೆ ನೀ ನೇಕೆ ಪೇಳುವೆ ಬರಿದೆ ಎನ್ನನು ಸಾಕು ಸಾಕು ಈ ಸರಸವಾಕ್ಕುಗಳ್ ಶೋಕವಹ್ನಿಗೆ ಆಜ್ಯ ಸುರಿವರೆ 2 ಭಾಮೆ ಕೃಷ್ಣನ ಪ್ರೇಮ ಪುತ್ಥಳಿ ಸಾಮ್ಯರಹಿತವೀ ಸ್ನೇಹವೆನ್ನುತ ಭೂಮಿಯೊಳ್ ಜನ ಪೊಗಳುತ್ತಿದ್ದರು ಈ ಮಹಾಭ್ರಮೆ ಪೋಯಿತೀಗಲೆ 3 ಚಾರುನುಡಿಗಳಾಪಾರವೆನ್ನೊಳು ಸಾರ ಪ್ರೇಮವು ರುಕ್ಮಿಣಿಯೊಳು ಪಾರಿಜಾತದ ಪುಷ್ಪವವಳಿಗೆ ನೀರಸೋಕ್ತಿಗಳೆನ್ನ ಪಾಲಿಗೆ 4 ಅಮರ ಮುನಿಪನು ನಿನ್ನ ಸಮುಖದೊಳ್ ಅಮಿತವಾಗಿ ತಾ ಸ್ತುತಿಸೆ ಭೈಷ್ಮಿಯ ಕುಮತಿಯಿಂದ ತಾನೆನ್ನ ತೆಗಳಲು ಅಮಮಯೆಂದೆಯಾ ಅಪ್ರಮೇಯನೆ 5 ಕುಸುಮ ಮಾಲೆಯು ಉರಗನಾದೊಡೆ ಮಾಳ್ಪುದೇನು ಶರದ ಚಂದ್ರನ ಕಿರಣ ತಪಿಪೊಡೆ ಹಿರಿದು ಕರ್ಮವ ಫಲವಿದೆಲ್ಲವೇ 6 ಕರಿಗಿರೀಶನ ಚಿತ್ತವೀಪರಿ ಇರಲು ಸುಮ್ಮನೆ ಕೊರಗಲೇತಕೆ ಸರುವ ಸಂಗವ ತೊರೆದು ತಪದೊಳು ನಿರತಳಾಗುವೆ ನೀರಜಾಕ್ಷ ಕೇಳ್ 7
--------------
ವರಾವಾಣಿರಾಮರಾಯದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಾಧವ ಸ್ವಾಮಿ ಪ. ಬಿಕ್ಕಿ ಬಿಕ್ಕಿಯಳುತ ಬಂದ ಗೋಪಿಯ ಕಂದಉಕ್ಕಿಹರಿವ ಕಣ್ಣನೀರ ತೊಡೆದಳೆಶೋದೆಅಕ್ಕರದಿಂದಲಿ ಮಗನ ಅತಿಮುದ್ದನಾಡಿಮಕ್ಕಳ ಮಾಣಿಕ್ಯವೆ ನೀ ಮನೆಯೊಳಗಾಡೈ 1 ಹಳ್ಳಿಯ ಮಕ್ಕಳು ಎನ್ನ ಬೈದರಮ್ಮಕಳ್ಳನೆಂದು ಎನ್ನಕೂಡೆ ಆಡಲೊಲ್ಲರುಮೆಲ್ಲನೆ ಬೈಯುತ್ತ ಬರಲು ಕಲ್ಲಲಿಟ್ಟರಮಯ್ಯಅಲ್ಲಿಂದಂಜಿ ಅಳುತ ನಾನು ಓಡುತ ಬಂದೆ 2 ಬಾಗಿಲ ಗೊಲ್ಲರು ಗೋಪಗೋಪಿಯರೆಲ್ಲಹಗಲುಗಳ್ಳ ಹಾಲು ಬೆಣ್ಣೆ ಚೋರನೆಂದರುಮಗುವೆಂದೆನಿಸಿಕೊಂಡು ಮನೆಯೊಳಗಾಡೈಹೋಗುನ್ನಂತ ಉಡುಪಿಯಲ್ಲಿ ಮುದ್ದು ಹಯವದನರಾಯ 3
--------------
ವಾದಿರಾಜ
ಮಾಧವ ಕಮಲ ಪಾ ದವ ತೋರಿಪಾಲಿಸೋ ಬಾಲಗೋಪಾಲ ಪ ದಿವಿಜೇಶ ವನಜಸಂಭವ ನಿತ್ಯನೇಮ ರಾ ಧೆವಲ್ಲಭ ಸಂಗೀತ ಲೋಲಾ ಅ.ಪ ನೆಂಬುದು ನಿಜವೆಂಬುದ ತೋರೋ ಅಂಬುದ ಶ್ಯಾಮರೋಲಂಬನಂದದೆ ಪಾ ದಾಂಬುಜಯುಗಳವ ನಂಬಿದೆನಯ್ಯ 1 ತಂದೆ ಕರೆಯಲೈತಂದೆ ಕರಿಯು ಕೂಗೆ ಒಂದು ನಿಮಿಷಾರ್ಧದಿ ಬಂದೆ ಕೃಪಾಳು ಇಂದಿರೆಯರಸ ಗೋವಿಂದ ಮಾಂಗಿರಿರಂಗ ಮಂದರಧರ ಬಾರೆಂದು ಬೇಡುವೆನಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾಧವ ನಮ್ಮ ಶ್ರೀಧವ ಬಾಧೆಪಡಿಸದೆ ತನ್ನ ಪಾದದಾಸರ ಕಾಯ್ವ ಪ ನಿರುತ ನೀರೊಳು ನಿಂದ ಈತ ಚಾರು ನಿಗಮಗಳ ತಂದ ಬಲು ಭಾರ ಪೊತ್ತನು ಬೆನ್ನಲಿಂದ ಆಹ ಕೋರೆದಾಡೆಯಲಿಂದ ಘೋರದೈತ್ಯನ ಸಂ ಹಾರವ ಮಾಡಿ ಭೂಭಾರವನಿಳುಹಿದ 1 ಅರಮನೆಕಂಬದಲಿಂದ ಕಡು ಘೋರ ರೂಪವ ತಾಳಿ ಬಂದ ಮಹ ದುರುಳನುದರ ಬಗಿದುಕೊಂದ ಆಹ ಧರೆಯನೀರಡಿ ಮಾಡಿವ ದನುಜನ ತುಳಿದು ಚರಣದಾಸರ ಮನದೊರವಿತ್ತು ಸಲಹಿದ 2 ವೀರತನದಿ ಕೊಡಲಿಪಿಡಿದ ಧರೆಯ ಸಾರಕ್ಷತ್ರಿಯಮೂಲವಳಿದ ದೇವ ಧಾರುಣಿಯೊಳು ನರನಾದ ಅಹ ತೋರಿ ವಿಪಿನವಾಸ ಮೀರಿದಸುರನ ಕೊಂದು ಮೂರುಲೋಕದ ಕಷ್ಟ ದೂರಮಾಡಿದ ಶೂರ 3 ಗೊಲ್ಲಕುಲದಿ ಜನಿಸಿದ ಪುಂಡ ಬಿಲ್ಲಿನಾಟವ ರಚಿಸಿದ ವೀರ ಖುಲ್ಲ ಕಂಸನ ಮದ ಮುರಿದ ಆಹ ನಲ್ಲೇರ್ಹದಿನಾರು ಸಹಸ್ರಬಲ್ಲಿದತನದಾಳಿ ಎಲ್ಲ ಭಕ್ತರ ಇಷ್ಟಸಲ್ಲಿಸಿ ಪೊರೆದನು 4 ಸಾರಿಬತ್ತಲೆ ಕದಲಿದ ಪರಮ ನಾರಿಯರ ವ್ರತ ಭಂಗಿಸಿ ಮೆರೆದ ಮೂರುಪುರದ ಗರ್ವಮುರಿದ ಆಹ ಪಾರುಮಾಡಿದ ಸುರರ ಘೋರಕಂಟಕದಿಂದ ಏರಿದ ಹಯ ನಮ್ಮ ಧೀರ ಶ್ರೀ ಗುರು ರಾಮ 5
--------------
ರಾಮದಾಸರು
ಮಾಧವ ಮಧುಸೂದನ ಹರಿ ಜೋ ಜೋ ಯಾದವ ರಾಯ ಶ್ರೀರಂಗನೆ ಜೋ ಜೋ ಪ ವಸುದೇವ ದೇವಕಿ ಸುತನಾಗುದಿಸಿ ವಸುಧÉಯ ಭಾರವನಿಳುಹಿದೆ ಜೋ ಜೋ1 ಶುಕಶೌನಕ ನಾರದಮುನಿ ವಂದ್ಯ ಅಕಳಂಕ ಚರಿತ ಅಚ್ಚುತಾನಂತ ಜೋ ಜೋ2 ಶಿಶುರೂಪನೆತ್ತುತ ಮುದ್ದಿಸುತಿಹ ಅಸುರೆ ಪೂತಣಿ ಅಸುಹೀರಿದೆ ಜೋ ಜೋ 3 ಬಂಡಿಯ ರೂಪದಿ ಬಂದಸುರನ ಸಿರ ಚಂಡಾಡುತ ನಲಿದಾಡಿದೆ ಜೋ ಜೋ 4 ಪೊಂಗೊಳಲೂದುತ ಗಂಗೆಯೊಳಿಹ ಕಾ- ಳಿಂಗನ ಪೆಡೆ ತುಳಿದಾಡಿದೆ ಜೋ ಜೋ 5 ಗೋಪಾಲಕರೊಡನಾಡುತ ನಲಿಯುತ ಪಾಪಿ ಖಳನ ತರಿದಾಡಿದೆ ಜೋ ಜೋ 6 ಸಾಧಾರಣ ವತ್ಸರದಲಿ ಸಲಹುವ ಶ್ರೀದ ಕಮಲನಾಭ ವಿಠ್ಠಲ ಸುಜನರ 7
--------------
ನಿಡಗುರುಕಿ ಜೀವೂಬಾಯಿ