ಒಟ್ಟು 3897 ಕಡೆಗಳಲ್ಲಿ , 120 ದಾಸರು , 2514 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವಿಯ ನೋಡಿರೊಪರದೇವಿಯ ನೋಡಿರೋಭಾವಿಸೆಅನುದಿನಹೃದಯದಿ ಬೆಳಗುವ ಕಳೆಯ ಚಿತ್ಪ್ರಭೆಯ ಪ್ರಭೆಯಪಎಲ್ಲರ ಕೈಯಲಿ ಪೂಜೆಯಕೊಂಬ ಗುಣಿಯ ರತ್ನದ ಗಣಿಯಒಲ್ಲೆನೆಂದರು ವರಗಳ ಕೊಡುವ ದಯಾಮಯಿಯ ಭಕ್ತ ಪ್ರಿಯೆಯಬೆಲ್ಲದಂದದಿ ಮಾತುಗಳಾಡುವ ಸುಧೆಯ ಸುಖ ಶಾರದೆಯಬಲ್ಲಿದಶತ್ರುಗಳಾಗಿಹ ರವರನು ಬಡಿವ ಕಡಿದುಡಿವ1ಬ್ರಹ್ಮ ವಿಷ್ಣುರುದ್ರಾದಿಗಳವರ ತಾಯಿ ಮಹಾಮಾಯಿಬೊಮ್ಮನು ಬರೆದಿಹ ಪ್ರಾರಬ್ಧವೆಲ್ಲವ ಸೆಳೆವ ಎಲ್ಲವ ಕಳೆವಚಿಮ್ಮಿ ಹಾಕುವಳು ಕಂಟಕಂಗಳ ಬಿಡಿಸಿಅಭಯಕೊಡಿಸಿತಮ್ಮವರೆಂದೇ ಭಕ್ತರ ಬದಿಯಲಿ ಇಹಳ ಮಹಾಮಹಿಮಳ2ಚಿತ್ಕಲಾತ್ಮ ಚಿದಾನಂದನೆಂಬ ವಿಭುವಾಮಹಾ ಪ್ರಭುವಹತ್ತಿರ ನಿಂತು ಬೆಳಗುತಲಿಹಳು ಕೋಟಿ ಸೂರ್ಯರ ಸಾಟಿಮತ್ತೇ ಮೀರಿಯೆ ಬ್ರಹ್ಮರಂದ್ರಕೆ ಸಾಗಿ ತಾ ವಾಸವಾಗಿನಿತ್ಯದಿ ಜ್ಯೋತಿರ್ಮಯವಾಗಿ ತೋರುವ ಸಖಿಯ ಬಗಳಾಮುಖಿಯ3
--------------
ಚಿದಾನಂದ ಅವಧೂತರು
ದೇಹ ಮನೇಂದ್ರಿಯವೆಲ್ಲಾಆತ್ಮಸಹಾಯದಿ ಚರಿಸುವವೆಲ್ಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಮೂಢರು ತಿಳಿಯರು ಸುಮ್ಮೇದೇಹವ ಕೂಡುತೆ ಮಾಡಿತು ಹೆಮ್ಮೆ1ವಪು ಜಡವದು ಪ್ರಕಾಶಾ |ಸ್ವರೂಪವಿಡಿದಾಗುವದಾಭಾಸಾ2ಪಾವಕನಾಗಿರೆ ಲೋಹವಾಗಿರೆ |ಪಾವಕಲೋಹದ ಹತಿಗೆ3ಮಾಲಾ ಸರ್ಪವದಾಗೆ |ತೋರದೆ ವ್ಯಾಳೆನಿಸುದು ಮಾಲ್ವೋಗೆ (ಮಾಲೆಹೋಗೆ)4ಅಧಿಷ್ಠಾನ ದೃಷ್ಟಿಯಿಂದಾ |ಪ್ರಾಣಿಗೆ ದೊರಕದು ಶಂಕರ ಪದಾ5
--------------
ಜಕ್ಕಪ್ಪಯ್ಯನವರು
ದೊರೆಗಳಿಗೆ ಯದುಪತಿ ಗರವು ಹಮ್ಮನೆ ಬಿಟ್ಟುಬರಬೇಕು ಎಂದು ಹಸೆಮೇಲೆಹಸೆಮೇಲೆ ಹರುಷದಲೆಮುದದಿ ಪಾಂಡವರು ಬರಬೇಕು ಪ.ನೂರು ಸೂರ್ಯನ ಬೆಳಕಿನಥೋರ ಮುತ್ತಿನ ಹಸೆಗೆವೀರಪಾಂಡವರು ಬರಬೇಕುಬರಬೇಕು ಎನುತಲೆನಾರಿ ರುಕ್ಮಿಣಿಯು ಕರೆದಳು 1ಮತ್ತೆ ಸೂರ್ಯನ ಬೆಳಕಿಲಿವಿಸ್ತರಿಸಿದಹಸೆಮ್ಯಾಲೆಚಿತ್ತೈಸಬೇಕು ಐವರುಚಿತ್ತೈಸಬೇಕು ಐವರು ಎನುತಲಿಸತ್ಯಭಾಮೆಯು ಕರೆದಳು 2ಥೋರ ಮುತ್ತಿನ ಹಸೆಗೆಚಾರುರತ್ನವ ರಚಿಸಿವೀರ ಪಾಂಡವರÀ ಕರೆದರುವೀರ ಪಾಂಡವರÀ ಕರೆದರುಆರು ನಾರಿಯರು ಹರುಷದಿ 3ಹದಿನಾರು ಸಾವಿರ ಚದುರೆಯರುಹರುಷದಿ ಅದ್ಬುತವಾಗಿಬೆಳಗೋಹಸೆ ಮೇಲೆಅದ್ಬುತ ಬೆಳಗೊ ಹಸೆಮೇಲೆಮುದದಿ ಪಾಂಡವರ ಕರೆದರು 4ವೀರ ರಾಮೇಶನ ತಂಗಿಯರುಪೋರಬುದ್ಧಿಯಬಿಟ್ಟುನಾರಿಯರು ಬನ್ನಿರಿಹಸೆಮ್ಯಾಲೆಹಸೆಮ್ಯಾಲೆ ಹರುಷದಿನೂರು ನಾರಿಯರು ಕರೆದರು 5
--------------
ಗಲಗಲಿಅವ್ವನವರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧನವಗಳಿಸಬೇಕಿಂತಹದು - ಈಜನರಿಗೆ ಕಾಣಿಸದಂತಹದು ಪ.ಕೊಟ್ಟರೆ ತೀರದಂತಹದು - ತನ್ನಬಿಟ್ಟು ಅಗಲಿ ಇರದಂತಹದುಕಟ್ಟಿದ ಗಂಟನು ಬಯಲೊಳಗಿಟ್ಟರೆಮುಟ್ಟರು ಆರು ಅಂತಹದು 1ಕರ್ಮವ ನೋಡಿಸುವಂತಹದುಧರ್ಮವ ಮಾಡಿಸುವಂತಹದುನಿರ್ಮಲವಾಗಿದೆ ಮನಸಿನೊಳಗೆ ನಿಜಧರ್ಮವ ತೋರಿಸುವಂತಹದು 2ಅಜ್ಞಾನವು ಬಾರದಂತಹದು - ನಿಜಸುಜ್ಞಾನವ ತೋರುವಂತಹದುವಿಜಾÕನಮೂರ್ತಿ ಪುರಂದರವಿಠಲನಪ್ರಜೆÕಯನ್ನು ಕೊಡುವಂತಹದು 3
--------------
ಪುರಂದರದಾಸರು
ಧರ್ಮ ದೊರಕುವದೇ | ದುಷ್ಕರ್ಮಿಸತ್ತಿಯೊಳುಪುರುಷಾಧಮನಿಗೆ ಧರ್ಮ ದೊರಕುವದೆ ಪ.ಧನವಿದ್ದರೇನಯ್ಯ ಮನವಿಲ್ಲವು | ಮನವಿದ್ದರೇನಯ್ಯ ಧನವಿಲ್ಲವು |ಧನವು ಮನವು ಯರಡುಂಡ್ಯಾದ ಮನುಜಗೆಅನುಕೂಲವಾದಂಥ ಸತಿಯಿಲ್ಲವಯ್ಯ 1ಧರ್ಮಯಾಗ ಮಾಡವ ಧರ್ಮ ನಾಳೆಯಾದೆನಬ್ಯಾಡನಾಳ್ಯಾರೊ ನಾವ್ಯಾರೊ ಯಲೊ ಮಾನವಾ | ಊಳಿಗದವ ಬಂದುಬಾಬಾರೆಂದೆಳವಾಗ ಆಗ ಮಾಡುವೆನೆಂದರೆ ದೊರಕುವುದೇ ಧರ್ಮ2ಬಾಡಿಗೆ ಮನೆಯಂತೆಯೊ ದೇಹವ ನಚ್ಚಿ ಮಾಡುವೆಪರಿಪರಿಯಾಗವನು | ಈ ಬೀಡಬಿಟ್ಟು ಆ ಬೀಡ ಹೋದ ಮೇಲೆಆಗ ಮಾಡುವೆನೆಂದರೆ ದೊರಕುವದೆ 3ತನ್ನ ಕಣ್ಣ ಮುಂದೆ ಹೋಹ ಜೀವವ ಕಂಡುಇನ್ನು ನಾಚಿಕೆಯಿಲ್ಲವೆ ತನಗೆ | ನನ್ನದು ನನ್ನದುವಂದಾನೊಂದು ಪರಿಯಲ್ಲಿ ತೊಳಲಿ ಬಳಲಿ ಜೀವಮುಂದನ ಜನ್ಮಕೆ ಸಾಧನವು ತಂದೆ ಶ್ರೀಪುರಂದರವಿಠಲರಾಯನನ ಸಂದೇಹವಿಲ್ಲದೆ ನೆನೆ ಕಂಡ್ಯಾ ಮನುಜ 5
--------------
ಪುರಂದರದಾಸರು
ನಗಲುಬಹುದು ನಗಲುಬಹುದುನಗು ನಗು ರಂಗಯ್ಯಜಗದ ಮಾತು ಅ‌ಘದ ಧಾತುಬಗೆಯನರಿತು ಮುಗಳುನಗೆಯ ಪ.ಒರೆದು ಒರೆದು ಭಾರತದರ್ಥಅರಿದುಅರಿದುವರಭಾಗವತಪರಿಯ ಪರಿಯ ಪುರಾಣಶ್ರ್ರುತಿಯಪಾರಾಯಣ ಮಾಡಿ ಕುರುಡಬಧಿರನರರ ತೆರದಿಅರಹುಮರಹುಬೆರೆತು ಬೆರೆತು ತರತಮಿಲ್ಲದೆಹರಿಹರಜರು ಬೇರೆಬೇರಿಲ್ಲೆಂಬಪರಮಪಾತಕರಿರವ ನೋಡಿ 1ಮಕ್ಕಳ ಮಡದೇರಕ್ಕರ ಬಡಿಸಿರೊಕ್ಕದ ಮದದಿ ಸೊಕ್ಕಿ ಸಜ್ಜನರಲೆಕ್ಕಿಸದವಗೆ ರಕ್ಕಸರಂತೆನಿಕ್ಕರ ನುಡಿದು ಕಕ್ಕಸದಿಂದಪುಕ್ಕಟೆ ಪುಣ್ಯದ ಲೆಕ್ಕವ ಕಳೆದುಘಕ್ಕನೆ ಜವನೋರಿಕ್ಕಿದ ಬಲೆಗೆಸಿಕ್ಕಿ ಬಳಲುತ ನರ್ಕವನುಂಬಮೂರ್ಖರ ತಾಮಸಮುಖ್ಯರ ನೋಡಿ 2ಸುಂದೋಪಸುಂದ ಜಲಂಧರ ಕೀಚಕಕಂದರದಶಕ ಸೈಂಧವ ಜಟಾದ್ಯರಂದು ಪರಸ್ತ್ರೀಯ ಸೌಂದರ್ಯಕ್ಕೆ ಮತಿಗುಂದಿ ಲಯವಾದರೆಂದುಕೇಳಿಇಂದುಮುಖಿಯರ ಚಂದಕೆ ಹುಚ್ಚಿಟ್ಟುಕಂದರ್ಪವಿಶಿಖವೃಂದ ವಶಾಗಿ ನೂರೊಂದುಕುಲ ಯಮಮಂದಿರ ಹೊಂದಿಪಮಂದರಮದೋನ್ಮತ್ತಾಂಧರ ನೋಡಿ3ಸುರರ ಸಂಪದ ಪರಮಪದಕೆಕಾರಣವಾಗಿರೆ ಸುರೇತರರೆಲ್ಲಇರುಳೆ ಹಗಲೆ ಸೈರಿಸಲಾರದೆಒರಗಿಹೋದ ವಿವರಕೇಳಿದುರುಳಕೌರವರ್ವರ ಪಾಂಡವರಸಿರಿತಮ್ಮದೆಂದ್ಹುರಿದು ಹೋಗಿರೆಪರರ ದ್ರವ್ಯಕ್ಕೆ ಮರುಗಿ ಬಯಸಿನರರು ಕೆಡುವ ಪರಿಯ ನೋಡಿ 4ಪ್ರತಿದಿನ ನಿನ್ನ ಪ್ರತಿಮ ಪೂಜೆ ಸದ್ವ್ರತವ ಮಾಡಿ ಸತ್ಕಥೆಯ ಶ್ರೀಮಧ್ವಮತ ಮಹಿಮೆಯನತಿಕ್ರಮಿಸಿ ಕುತ್ಸಿತವೆನಿಸುವ ಪಥದಲಿಪತಿತರಾಗಿ ಸದ್ಗತಿಯ ಕಾಣದಚತುರ ಪರಿಯ ಅಮಿತ ಭಕ್ಷಕರಸ್ಥಿತಿಯರಿತು ಮಾನಾಥ ಪ್ರಸನ್ವೆಂಕಟಪತಿಯೆ ನೀ ಮಂದಸ್ಮಿತದಲಿ 5
--------------
ಪ್ರಸನ್ನವೆಂಕಟದಾಸರು
ನಂಬಿ ಚೊಕ್ಕಟಿಂಬು ಪಡೆಯಿರೈ ಪ.ಇಂಬುಪಡೆದು ಹರಿಯಚರಣಅಂಬುಜಬಂಡುಂಡು ಮಿಕ್ಕಹಂಬಲವ ಉಳಿದುಭೂರಿಸಂಭ್ರ್ರಮಿಸುವವರಕೇಳಿಅ.ಪ.ಹರಿವ ಮನವಕಟ್ಟಿವಿೂರಿಬರುವ ದುರಿತಕಂಜದೆ ಸುತ್ತಿರುವ ಮಾಯಾಪಾಶ ಹರಿವ ಹರುವನಾಲಿಸಿಗುರುವಿನಾಜ್ಞಾದಂತೆ ಪುಣ್ಯದುರುಹು ಬಲ್ಲ ಪ್ರೇಕ್ಷಕಲ್ಪತರುವ ಪಿಡಿದು ನಷ್ಟ ಕಳೇವರವು ತನ್ನದಲ್ಲವೆಂದು 1ಆವಾಗೆ ಸಚ್ಛಾಸ್ತ್ರ ಶ್ರವಣಭಾವಗುಟ್ಟುಕೇಳಿಭಕುತಿಠಾವುಗಂಡು ಹಸಿವು ತೃಷೆಯಕಾವಘಸಣೆಯಸಾವಿಗ್ಹೊಂದದಂತೆ ಸಾಧುಸೇವ್ಯಗರುಡಗಮನನಂಘ್ರಿಸೇವೆಗಧ್ಯಕ್ಷಿತರಾಗಿ ನೀವೀಗ ವೈರಾಗ್ಯ ಬಲಿದು 2ಕ್ಷುದ್ರಭೋಗಬಯಸದೆ ದಾರಿದ್ರ ಭೀತನಾಗದೆ ಸಮುದ್ರಭವನನೆಂದು ಶ್ರೀಮುದ್ರಾಭರಣದಭದ್ರ ಭಾಗವತನು ಆಭದ್ರ ಬುದ್ಧಿಯಲ್ಲಿ ಕೂಡಿಚಿದ್ರೂಪ ಪ್ರಸನ್ನವೆಂಕಟಾದ್ರಿ ಭೋಗಶಯನನೆಂದು 3
--------------
ಪ್ರಸನ್ನವೆಂಕಟದಾಸರು
ನಂಬಿರೈ ಕರುಣಾಂಬುಧಿ ಕೋಮಲಕಂಬುಕಂಧರಹರಿಯಪ.ಯೋಗಿಮನಮುದ ರಾಗ ಮೂರುತಿಯ ದೊರೆಯಪಾಲಿತ ಕೌಂತೇಯಭಾಗವತತನಕಾಗಿ ತಾ ದಯವಗೈದ ಭರದಿಂದ ತೋರ್ವಯೋಗ ಮಾಯಾಧೀಶ ಸತ್ಸಕಲಾಗಮಾರ್ಚಿತಭೋಗಿಶಯನಸ-ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ 1ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟುಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದುನಿಂದುವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು 2ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನುದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನುಘಾಸಿಯಾಗದೆ ಧನಿಯ ಹಣವನುಸೂಸಿ ಕರುಣಾರಾಸ ರಾಜ್ಯದವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ 3ಕಷ್ಟವಿಲ್ಲದೆ ಇಷ್ಟ ದೊರಕುವದು ನೆನೆದುಸುಖದಿಂ ಬಾಳುವದುದೃಷ್ಟಿಯಿಂದಲಿನೋಡುನಮ್ಮ ದೊರೆಯ ಹರಿಯಪರಿಯ ನೀನರಿಯಾಸಿಟ್ಟುಮಾಡುವ ಸ್ವಾಮಿನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ 4ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ಕಾಲಭೈರವ ಹರಿಯ ಚರಣ-ಸಮೀಪದೊಳಗಿದ್ದು ಮೆರೆವ ಪ.ಸಮೀಚೀನಜ್ಞಾನಭಕ್ತ-ಸಮೂಹವಕಾವಲಕ್ಷ್ಮೀ-ರಮಣನ ಕಾರ್ಯಮಂತ್ರಿ-ಯು ಮಾಧವನ ಸಮಾನಬಲ ಅ.ಪ.ಬೆಟ್ಟದೊಡೆಯ ಶ್ರೀನಿವಾಸನ ಪಾದಕಮಲ-ಮುಟ್ಟಿ ಭಜಿಪ ವೈರಿಮರ್ದನಸೃಷ್ಟಿ ಮೂರರಲ್ಲಿ ಕೀರ್ತಿ-ಪಟ್ಟ ದಿಟ್ಟ ಧೀರಪರಮನಿಷ್ಠ ಪುಷ್ಪ ತುಷ್ಟಿಪ್ರದ ಬ-ಲಿಷ್ಠ ಶ್ರೇಷ್ಠ ಭೂತಪತಿಯೆ 1ಶ್ರೀನಿವಾಸನಾಜೆÕ ಮೀರದೆ ನಡೆಸುವದೆ ಪ್ರ-ಧಾನ ಕಾರ್ಯ ನಿನ್ನದೆಂಬುದೆತಾನು ಕಿಂಚಿದರಿತು ಸನ್ನಿ-ಧಾನವನ್ನೋಲೈಸಿ ಬಂದೆದೀನಬಂಧು ಸುಗುಣಸಿಂಧುಮಾನತ್ರಾಣವಿತ್ತು ಸಲಹೊ 2ಅಂತರಂಗದಲ್ಲಿ ಪ್ರಾರ್ಥನೆ-ಮಾಡಿದರೆಸ್ವಂತ ಬಂದುಮಾಡುರಕ್ಷಣೆಅಂತ್ಯಕಾಲದಲ್ಲಿ ಹರಿಯಚಿಂತನೆಗೆ ವಿಘ್ನ ಬಾರ-ದಂತೆಕಾವಮಹಾ ತೇಜೋ-ವಂತ ಹೊಂಕಾರಿಸೂರಿ3ಕಾಲಕಾಲದಲ್ಲಿ ಭಕ್ತರ ಮನೋಭೀಷ್ಟಪಾಲಿಸುವ ಚಂದ್ರಶೇಖರಖೂಳಜನರ ಗರ್ವಮುರಿವಶೂಲಪಾಣಿ ಸುಗುಣಶ್ರೇಣಿಮೂಲಪತಿಯ ಪಾದಪದ್ಮಮೂಲದೊಳಗೆ ನಲಿವ ಚೆಲುವ 4ತೋರಿಕೊಳ್ಳದೆಭೂರಿಮಹಿಮೆಯ ಭಕ್ತರಿಂಗಾ-ಧಾರವಾಗಿ ರಾಜಿಸಿರುವೆಯಧೀರ ಲಕ್ಷ್ಮೀನಾರಾಯಣನಸೇರಿದಾನತರ್ಗೆ ಮಂ-ದಾರಮಹೋದಾರ ಗಂ-ಭೀರ ಧೀರ ಚಾರುಚರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ರಾಮ ಕಳುಹಿಸಿದನಮ್ಮಾ |ಮಮ ಸ್ವಾಮಿ ಬದುಕಿಹನೆ ಪೇಳೋ ತಮ್ಮ ಪವಾಸುದೇವನು ಜಗದ ಸೃಜಿಸುವನು ಕೆಡಿಸುವನು |ನಾಶವೆಲ್ಲಿಹದು ರಘುವರ್ಯಗಮ್ಮಾ ||ವಾಸವಾಗಿರೆ ವನದಿಮೃಗತರಲು ಪೋಗಿ ಜಗ- |ದೀಶ ನುಡಿದನು ಕಡೆಯ ಮಾತು ತಮ್ಮ 1ಖಳಮಾಯೆಯಲಿ ಬರಲು ರಾಘವನು ಸಂಹರಿಸೆ |ನೆಲಕುರುಳಿ ಕೂಗಿದನು ಅವನೇ ಅಮ್ಮಾ ||ಬಲುವಿಂದ ಲಕ್ಷ್ಮಣನ ಬೈದು ಅಟ್ಟಿದೆ ನಾನು |ಜಲಜಾಕ್ಷನೋರ್ವನಿಹನೇನೋ ತಮ್ಮ 2ಅನುಜಯುಕ್ತದಿ ದೇವ ಕಪಿದಂಡು ನೆರಹಿಹನು |ಹನುಮಂತ ನಾ ರಾಮದೂತನಮ್ಮಾ ||ಇನಿತು ಸತ್ಯವೊ ಅನೃತವೊ ನಂಬಿಗ್ಯಾಗದು |ಮನದ ಅನುಮಾನ ಬಿಡುವಂತೆ ಮಾಡೋ ತಮ್ಮ 3ಸಿರಿಕಾಂತ ಶ್ರೀಮಂತ ಕರುಣದಲಿ ಕೊಟ್ಟಿಹನು |ಗುರುತಿನುಂಗುರವನಿದು ನೋಡಿರಮ್ಮಾ ||ಪರಮಾತ್ಮನಿಗೆ ದೂತನಹುದುಶುಭವಾರ್ತೆಗಳೆ |ಇರುವನೆಲ್ಲೆದು ವಿಸ್ತರಿಸೆಲೊ ತಮ್ಮಾ 4ಕಾನನದೆ ಚರಿಸುತ ರವಿಸುತಗೊಲಿದು ಶುಕ್ರಜನ |ಹಾನಿ ಮಾಡಿದನಲ್ಲೇ ಇರುವನಮ್ಮಾ ||ಜಾನಕಿಯೆಂದೆನ್ನನು ನಿತ್ಯದಲಿ ನೆನೆಸಿ |ಏನು ಮಾಡುವನೊ ಪೇಳುವದೋ ತಮ್ಮ 5ನಿನ್ನಗಲಿ ವ್ಯಾಕುಲದಿ ನರರಂತೆ ಕೇಶವನು |ಅನ್ನ ಉದಕವನೆಲ್ಲಾ ಜರಿದನಮ್ಮಾ ||ಪನ್ನಗಾರಿ ಧ್ವಜನು ದನುಜರ ಗೆಲಿದು |ಯನ್ನ ಕೂಡುವದು ನಾ ಕಾಣೆ ತಮ್ಮ 6ತಾಯೆ ರಾವಣನಳಿದು ನಾನೊಯ್ವೆ ನಿನ್ನೀಗ |ನೋಯಿಸದೆ ಹರಿಗೀಡು ಆವನಮ್ಮಾ ||ನಾಯಕನು ನೀಂ ಭೃತ್ಯರೊಳು ತ್ವರಿತ ಬಹುದೆಂದು |ಕಾಯಜಪಿತನಿಗೆ ಬಿನ್ನೈಸೊ ತಮ್ಮ 7ಪೋಗಿ ಬರುವೆನು ನಿಮ್ಮ ಗುರುತು ಏನಿದೆ ಕೊಟ್ಟು |ಬೇಗನಪ್ಪಣೆಯೆನಗೆ ಈವದಮ್ಮಾ ||ನಾಗಶಯನಗೆ ರಾಗಟೆಯನಿತ್ತು ಪದಕೆ ತಲೆ |ಬಾಗಿರುವಳೇಳದಲೆಯೆನ್ನೋ ತಮ್ಮ 8ನಳಿನಮುಖಿಯೆ ನಮೋ ನಮೋ ದಯೆಯಿರಲಿ ಸ್ವಲ್ಪ ದಿನ |ದೊಳಗೆ ಬರುವೆವು ಚಿಂತೆ ಬೇಡವಮ್ಮ ||ಭಳಿ ಭಳಿರೆ ಪ್ರಾಣೇಶ ವಿಠ್ಠಲನ ಪೂರ್ಣ ದಯೆ |ಗಳಿಸಿ ಅಜಪಟ್ಟವನು ಆಳೋ ತಮ್ಮ 9
--------------
ಪ್ರಾಣೇಶದಾಸರು
ನಮೋ ನಮೋ ಶ್ರೀ ಭೀಮ | ನಮೋ ನಮೋ ಜಿತಕಾಮ |ಕಮಲಾಕ್ಷ ದಾಸ | ಪೊರೆಯಬ್ಜಾಪ್ತ ಭಾಸ ಪಘನಗಿರಿಯೊಳಗೆ ಕುಂತಿ ನಿನ್ನೆತ್ತಿಕೊಂಡಿರಲು |ಧ್ವನಿ ಮಾಡೆ ಹುಲಿ ತಾಯಿ ನಡುಗಿ ಬಿಸುಟೀ ||ತನುವು ನಿನ್ನದು ಸೋಂಕೆ ನಗವೊಡೆದು ಶತಶೃಂಗ- |ವೆನಿಸಿಕೊಂಡಿತೋ ದ್ವಾಪರದಿ ಬಲವಂತ 1ಲೋಕದೊಳು ಮನುಜರಾ ಶಿಶುಗಳಂದದಿ ಬೆಳೆದು |ಪಾಕಶಾಸನಿ ಯಮಜ ಯಮಳರ ಜನನೀ |ಯಾ ಕೂಡಿಕೊಂಡು ಇಭಪುರಿಗೈದಿ ಮೋದದಲಿ |ಸಾಕಿಕೊಂಡೆಯಂಬಿಕೆಯ ಮಗನಿಂದಾ 2ಚಿಕ್ಕವರೊಡನೆ ಚಂಡು ಬುಗುರಿ ಈಸಿರೆ ಓಟ |ತೆಕ್ಕೆ ಮುಷ್ಟಿ ಮರಗಳನೇರುವಲ್ಲಿ ||ಸೊಕ್ಕಿದವನಿವನೆಂದು ಆವಾಗಲೆಲ್ಲರಿಗೆ |ಬಿಕ್ಕಿ ಬಾಯ್ದೆರೆವಂತೆ ಮಾಡಿ ತೋರಿಸಿದೆ 3ಅಹಿತರಾದವರು ನೀರೊಳಗೆ ಕೆಡಹಲು ಎದ್ದೆ |ಅಹಿಗಳಿಂ ಕಟ್ಟಿಸಲು ನೋಯದಿದ್ದೆ ||ಸಹಿಸದಲೇ ವಿಷಹಾಕಿ ಬದುಕಲ್ಕೆ ಹೊರಘಾಕೆ |ಮಹಮೋಸ ಮಾಡೆ ಗೆದ್ದು ಧರಿಯೊಳು ಮೆರೆದೆ 4ಸೋಕಿಯಸುರಿಯ ಮಗನ ಪಡೆದು ಖಲನನು ತರಿದು |ಏಕಚಕ್ರ ನಗರದಲ್ಲಿದ್ದು |ಬೇಕೆಂದು ನೀನಾಗಿ ಪೋಗಿ ಬಕನನು ಕೊಂದೆ |ಈ ಕುಂಭಿಣೀಯೊಳು ನಿನಗಿದಿರಾರು ದೇವಾ 5ಪಾಂಚಾಲಿಯನು ಗಳಿಸೆ ಕೋಪದಿಂ ಬಂದಹರಿ|ವಂಚಕರ ದರ್ಪವ ಭಂಗಿಸಿ ಲೀಲೆಯಿಂ |ಮಿಂಚುವಾ ಗದೆಲಿಹ ನಿಶ್ಚಿಂತ ಬಲವಂತ |ಮುಂಚಿನಜ ಪ್ರಣತ ಸುರಭೂಜ ರವಿತೇಜ 6ಈ ಪರಿಯಿಂದ ಕೆಲಕಾಲವಲ್ಲೆಲ್ಲ |ಕಾಪಾಡಿ ವಜ್ರಿಪ್ರಸ್ಥಕೈ ತಂದು ||ಪಾಪಿ ಜರಿಜನ ಕೊಂದು ರಾಜಸೂಯವ ಮಾಡಿ |ನೀಂ ಪಾಲಿಸಿದೆಯವನಿ ಸದ್ಧರ್ಮದಿಂದ 7ದ್ಯೂತವಾಡಿದ ಸಮಯದಲ್ಲಿ ದ್ರೌಪದಿಯಳನು |ಪಾತಕಿವಸವೆಳೆಯೆ ಕೋಪದಿಂದ ||ಘಾತಿಸುವೆನೆಂದಬ್ಬರಿಸಿ ಪಲ್ಗಡಿದು ಲಕ್ಷ್ಮೀ |ನಾಥನಿಚ್ಛೆಂಗೆ ಈಗೇಂದು ಕೈಮರೆದೇ 8ತಮೋ ಯೋಗ್ಯನಾ ಪಾಪಪೂರ್ಣದಾಹದಕೆ ಬ- |ಹು ಮಿತಿಯಿಂದ ವನವಾಸ ಪತ್ಕರಿಸಿದೆ ||ಸಮರಾಂಗಣದೊಳಿವರ ಹೀಗೆ ಸವರುವೆನೆಂದು |ಸುಮನಸಾರಾಧ್ಯ ಬಾಹುಗಳೆತ್ತಿ ನಡೆದೆ 9ಕಾನನದಿ ಕಿರ್ಮೀರನಂ ಕೊಂದು ಋಷಿಯಿಂದ |ಮಾನವಂ ಕೈಕೊಂಡು ಮತ್ತೆ ಮುಂದೆ ||ಆ ನಗದಿ ಬಹುಕಾಲ ಸೇರಿಕೊಂಡಿದ್ದಂಥ |ದಾನವರ ಮಡುಹಿ ಸೌಗಂಧಿಕವ ತಂದೆ 10ನಿನ್ನೊಳಗೆ ನೀಂ ಲೀಲೆ ಮಾಡಿದ್ಯಾ ಸಮಯದಲಿ |ಚಿನ್ನದೋಪಮ ಪುಷ್ಪವೊಂದು ಬೀಳೆ ||ನಿನ್ನರಸಿಯಿದು ಎನಗೆ ಇಷ್ಟವೆನಲವಳ ನುಡಿ |ಮನ್ನಿಸುತೆ ಪೋಗಿ ಮಣಿಮಂತನೊಂಚಿಸಿದೆ 11ದ್ವೈತ ವನದೊಳು ಬಂದುಮೃಗಬೇಟೆಯಾಡೆ ಪುರು |ಹೂತ ಪದವಾಳ್ದವನು ಮೆಯ್ಯ ಸುತ್ತಲ್ ||ನೀತವಕಬೀಳದೆ ಅವನ ಪುನೀತನ ಮಾಡಿ |ಖ್ಯಾತಿ ತಂದಿತ್ತೆಯಂತಕನ ಸುತಗಂದು 12ಮತ್ಸ್ಯ ದೇಶಾಧಿಪನ ಮನೆಯಲ್ಲಿ ಇದ್ದಾಗ |ಹೆಚ್ಚಿನಾ ಬಲದ ಮಲ್ಲನ ಕೆಡಹಿದೆ ||ಅಚ್ಚ ಪಾಪಾತ್ಮ ಕೀಚಕನನ್ವಯ ತಂದೆ |ಅಚ್ಯುತನ ನಿಜದಾಸ ಭಕ್ತರಘನಾಶ 13ಎಂಟೈದು ವರುಷ ಈ ರೀತಿಯಲಿ ಕಳೆದು ವೈ- |ಕುಂಠಪತಿ ದಯದಿಂದ ಉಪಪ್ಲಾವ್ಯದಿ ||ಗಂಟು ಹಾಕಿದಿ ದುರಾತ್ಮನ ಕೂಡ ಸಂಗರಕೆ |ಕಂಠೀರವರವದಿಂ ತಲೆದೂಗಿ ನಡೆದೆ 14ಮುತ್ತೆ ಭೀಷ್ಮಗೆ ವಂದು ಸ್ವಲ್ಪಮಾತ್ರಕೆಮಾನ|ವಿತ್ತಂತೆ ತೋರಿ ಎಲ್ಲರ ರಥವನೂ |ಕತ್ತರಿಸಿ ಹಿಂದಕ್ಕೋಡಿಸಿದೆ ನಿನ್ನಾರ್ಭಟಕೆ |ಹತ್ತು ದಿಕ್ಕಿನೊಳೊಬ್ಬರಿದಿರಾಗಲಿಲ್ಲ 15ಪ್ರಹ್ಲಾದನವತಾರ ಬಾಹ್ಲೀಕನನು ಗೆದ್ದು |ಮಹೀಜಸುತನಾನಿಮಸ್ತಕಶೀಳಿದೆ ||ಬಹುಖೋಡಿಧಾರ್ತರಾಷ್ಟ್ರರ ಕೊಂದು ಹರೆಬಿಟ್ಟ |ಅಹಿಯಂತೆ ರಣರಂಗದಲ್ಲಿ ಸಂಚರಿಸಿದೆ 16ಕಡು ಕೋಪದಿಂದ ಹೂಂಕರಿಸಿಯುರಿಯುಗುಳುತಲಿ |ಪೊಡವಿ ನಡುಗಿಸಿನಭಬೇಯಿಸುತ್ತಲಿ ||ಪಿಡಿದು ದುಶ್ಶಾಸನನ ತೊಡೆಯಲ್ಲಿ ನೆರೆಗೆಡಹಿ |ಒಡಲ ಛೇದಿಸಿ ರಕ್ತಮಜ್ಜನವಗೈದೆ 17ಕರುಳ ದಂಡೆಯ ಮಾಡಿ ಅರಸಿ ಮಂಡೆಗೆ ಮುಡಿಸಿ |ಖರೆಯ ಮಾಡಿದೆ ಉಭಯತರ ಶಪಥವ ||ಕರೆದೆ ಕುರು ಪಾಂಡವರ ಬಿಡಿಸ ಬನ್ನೀರೆಂದು |ಮರುಳಗೊಂಡರೆಲ್ಲ ನಿನ್ನರೂಪನೋಡುತಲಿ 18ಸ್ವಾಮಿ ಪ್ರಾಣೇಶ ವಿಠಲನ ಆಜೆÕಯ ವಹಿಸಿ |ಭೂಮಿ ಭಾರಿಳುಹುದಕೆ ಅವತರಿಸಿದೆ ||ನಾ ಮಾಡುವೆನೆ ಪೂರ್ತಿ ನಿನ್ನ ಮಹಿಮೆಯ ಸಮರ |ಭೀಮಕರಪಿಡಿದು ಸಲಹುವದೋ ಪ್ರತಿದಿನದಿ 19
--------------
ಪ್ರಾಣೇಶದಾಸರು
ನರಜನ್ಮ ಬಂದುದಕೆ ಇಪ್ಪತ್ತು ಆರುಕಳೆ|ವರದೊಳಿಹ ಹರಿರೂಪ ಚಿಂತಿಸುವದೂ ಪಎರಡನಂತದ ಮ್ಯಾಲೆ ಒಂಬತ್ತಧಿಕ ನೂರು |ಸ್ವರುಪದೊಳಗಿಹವು ಆಮ್ಯಾಲೆ ಇಚ್ಛಾ ||ವರಣದಲಿ ಒಂದು ಲಿಂಗದಲಿ ಆರೊಂದಧಿಕ |ಅರುವತ್ತು ರೂಪಗಳು ಉಂಟು ಕೇಳೀ 1ಎಪ್ಪತ್ತರೊಂಬತ್ತಧಿಕ ನೂರು ಅವ್ಯಕ್ತ- |ಕಿಪ್ಪವು ಅವಿದ್ಯದೊಳು ಯೇಳು ಅಧಿಕಾ ||ಇಪ್ಪತ್ತುಕರ್ಮಕಾಮಾವರಣದಲಿ ಮೂರು |ಇಪ್ಪತ್ತು ಮೂರು ಅರುವತ್ತು ಎಂಟೂ 2ಮಾರಮಣ ಜೀವ ಪರಮಾಚ್ಚಾದಿಕೆರಡರೊಳು |ಬ್ಯಾರೆ ಬ್ಯಾರಿಪ್ಪ ಒಂಬತ್ತು ರೂಪಾ ||ನಾರಾಯಣಾದಿ ಐದರೊಳಗೊಂದೊಂದೇವೆ |ತೋರುತಿಹವಜಪಿತನ ವಿಮಲ ಮೂರ್ತೀ 3ಎರಡು ಲಕ್ಷೆರಡು ಸಾವಿರದ ನಾನೂರು ಈ- |ರೆರಡಧಿಕ ತೊಂಬತ್ತು ಅನಿರುದ್ಧದೀ ||ಮೆರವ ಶ್ರೀವಾಸುದೇವನಾರಾಯಣ ಕವಚದಿ |ಇರುವ ಒಂದೊಂದು ಆನಂದಮಯದೀ 4ಇನ್ನುವಿಜ್ಞಾನಮನವಾಙುï ಶ್ರೋತೃ ಚಕ್ಷು ಪ್ರಾ- |ಣನ್ನಮಯ ಹೀಗೆ ಯೇಳೊಂದರೊಳಗೇ ||ವನ್ನಜಾಕ್ಷನರೂಪಒಂದೊಂದೆ ಇಹವೆಂದು |ಚೆನ್ನಾಗಿ ಭಕ್ತಿಪೂರ್ವಕ ತಿಳಿವದೂ5ಸ್ಥೂಲವಾದಂಗದಲಿ ಮೂವತ್ತೆರಡು ಕೋಟಿ |ಯೇಳೂ ಲಕ್ಷದ ಮೇಲೆ ರಮ್ಯವಾಗೀ ||ಶ್ರೀಲೋಲ ತೊಂಬತ್ತು ಮೂರು ಸಾವಿರದ ಹದಿ- |ನೇಳಧಿಕ ಎಂಟು ಶತರೂಪದಲಿಹಾ 6ಈರನಂತ ಮೂವತ್ತೆರಡು ಕೋಟಿ ನವಲಕ್ಷ |ಆರಧಿಕ ತೊಂಬತ್ತು ಸಾವಿರೆಂಟೂ ||ನೂರು ಐವತ್ತೆಂಟು ರೂಪಗಳು ಸ್ತಂಭಾದಿ |ವಾರಿಜಭವಾಂತ ದೇಹಗಳೊಳೀಹವೂ 7ಮೋದತೀರ್ಥರ ಮತವ ಪೊಂದಿದವರೀರೂಪ|ಸಾದರದಿ ಚಿಂತಿಸುವದೇ ಮೋಕ್ಷಕೇ ||ಸಾಧನವಿದು ಸಾತ್ವಿಕರಿಗಲ್ಲದಲೆ ಅನ್ಯ- |ವಾದಿಗಳಿಗುಪದೇಶ ಮಾಡಸಲ್ಲಾ8ಪ್ರಾಣೇಶ ವಿಠ್ಠಲನ ಸುಮೂರ್ತಿ ಈ ಪರಿಯಿಂದ |ಧ್ಯಾನಕ್ಕೆ ತಂದು ಹಿಗ್ಗದಲೆ ಬರಿದೇ ||ಏನು ಓದಿದರು ಕೇಳಿದರು ತಪ ಮಾಡಿದರು |ಆನಿ ತಿಂದಕಪಿತ್ಥದಂತೆರಿವದೂ 9
--------------
ಪ್ರಾಣೇಶದಾಸರು
ನರರ ಪಾಡಲು ಬೇಡ ನಾಯಿ ಮನವೆಮುರಹರನ ಭಕುತಿನೆಲೆ ಹೊಂದು ಮನವೆ ಪ.ದಾರಿದ್ರ್ಯ ವ್ಯಸನದೊಳು ಮುಳುಗಿ ನರಧನಿಕರನುಆರಾಧನೆಯ ಮಾಡಿ ಬರಿದೆ ಕೆಡುವೆಘೋರನರಕದ ಭಯಗಳನು ನೋಡೈ ತಿಳಿದುನಾರಸಿಂಹನ ನಂಬು ದೃಢದಿ ಮನವೆ 1ಬಲ್ಲಿದರ ಬಳಿವಿಡಿದು ಪೋಗಿ ಭ್ರಮೆಗೊಳ್ಳದಿರುಭುಲ್ಲೈಸಿ ಬಳಲಿಮೃಗತೃಷೆಯಂದದಿಫುಲ್ಲಲೋಚನ ಹರಿಯ ದಾಸರನು ಅನುಸರಿಸಿಸೊಲ್ಲುಸೊಲ್ಲಿಗೆ ಸುಧೆಯ ಸವಿದುಣ್ಣು ಮನವೆ2ಮದದಿ ಮತ್ಸರದಿ ಪ್ರಜ್ವಲಿಸುತಿಹ ದೇಹದಲಿಕುದಿಯದಿರುತ್ರಿವಿಧತಾಪದಲಿ ಉಕ್ಕಿಹದಿನಾಲ್ಕು ಭುವನದೊಡೆಯನ ನಂಬಿದರೆ ನಿನಗೆಪದವಿತ್ತು ಪೊರೆಯನೆ ಪೇಳು ಮನವೆ 3ಮಂದಮತಿಯಾಗಿ ಬಹುವಿಷಯ ಭ್ರಾಂತಿಯಲಿ ಮದಾಂಧರನೋಲೈಸಿ ಕೃಶವಾದರೆಮುಂದುಗಾಣದೆ ಖಳರು ನೋಯಿಸಿ ನುಡಿದರೆಕಂದಿ ಕುಂದಿ ಬಳಲುವೆಯಲಾ ಮರುಳು ಮನವೆ 4ಮುನ್ನಸಂಚಿತಸುಕೃತವೆಂತುಟೊ ತಂದೆ ಪ್ರಸನ್ನವೆಂಕಟಪತಿಯ ಒಲುಮ್ಯಾಯಿತುಇನ್ನಾದರೆಚ್ಚರಿತು ವಿವಿಧ ಭಕುತಿಯ ಗಳಿಸಿಧನ್ಯ ನೀನೆನಿಸಿ ಸಾರ್ಥಕವಾಗು ಮನವೆ 5
--------------
ಪ್ರಸನ್ನವೆಂಕಟದಾಸರು
ನಲಿನಲಿದು ಬಾ ತ್ರಿಜಗದಾಂಬೆ ಪ.ಮಾನಸದೊಳು ಸುಜ್ಞಾನಬೋಧಳಾಗಿಆತನದೇವಕದಂಬೆ ಅ.ಪ.ವಿದ್ಯಾ ಬುದ್ಧಿ ವಿನಯ ಮಂಗಳಗಳಸಾಧ್ವಿ ನಿನ್ನಲಿ ಬೇಡಿಕೊಂಬೆ 1ನಲಿದೆನ್ನಯ ಜಿಹ್ವಾಗ್ರದಿ ನೆಲಸುತಸುಲಭದೋರೆಯೆ ಸುಲಲಿತವ ಶಿವೆ 2ಧೀರ ಲಕ್ಷ್ಮೀನಾರಾಯಣಾಶ್ರಿತೆ-ಪರಮೇಷ್ಠಿಪರಿರಂಭೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ