ಒಟ್ಟು 4311 ಕಡೆಗಳಲ್ಲಿ , 123 ದಾಸರು , 2721 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಳಾದಿ ರಾಗ :ಸಾರಂಗ ಧ್ರುವತಾಳ ಬಿನ್ನಪವ ಮಾಡುವೆ ಯಜ್ಞ ಶ್ರೀನಿವಾಸ ನಿನ್ನ ಶರಣಗೆ ಹಲವು ಹಂಬಲ ಸಲ್ಲ ಇನ್ನು ತಾನೊಮೊಮ್ಮೆ ಬಯಸಿದೇ ಭಕುತಿಗೆ ಅನ್ಯಥಾವಾಗದಂತೆ ಬಯಸಿಕೊಳಲಿ ಮನ ಚಿನ್ನರ್ಗೆ ಫಲವಿತ್ತೆ ಓದು ಪೇಳುವ ತೆರ ಚನ್ನಾಗಿ ನೀನೆವೇ ಫಲವನ್ನು ಒಲಿದಿತ್ತ ವಾಕು ಆದರಿಸೊ ವಾಸುದೇವವಿಠಲ 1 ಮಟ್ಟತಾಳ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ ದಿಂಡೇರ ಕೈಯಿಂದ ನೋಯಗೊಳಿಸದಿರೊ ಅಂಡಜವಾಹನ ಬಿರುದು ನಿನ್ನದು ನೋಡು ಕೊಂಡಾಡುವೆ ವಾಸುದೇವವಿಠಲರೇಯ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ 2 ತ್ರಿವಿಡಿ ತಾಳ ಆವಾವ ಆಶ್ರಮವನ್ನು ಒಲಿದಿತ್ತು ನೀನೇವೆ ಆವಾವ ಬಗೆಯಲ್ಲಿ ಸಾಧನ ಮಾಡಿಸೊ ಆವಾವ ಬಗೆಯಲ್ಲಿ ಬಲ್ಲ ಸರ್ವಜ್ಞನೆ ಆವಾವ ವಿಧದಿಂದ ಬಿನ್ನೈಪುದೇನೆಲೊ ಕಾವ ಕರುಣಿ ವಾಸುದೇವವಿಠಲರೇಯಾ ಆವಾವ ಬಗೆಗಳ ಬಿನ್ನೈಪುದೇನಯ್ಯಾ 3 ಅಟ್ಟತಾಳ ಕೊಡಗೈಯ್ಯ ದೊರೆ ಎಂದು ನಂಬಿಲ್ಲಿಗೆ ಬಂದ ಬಡನಡವಳ ನೀನು ಕಡೆಗೆ ನೋಡುವರೇನೊ ತೊಡರುಗಳಿದ್ದರು ಬಿಡಿಸುವ ಬಗೆ ಬಲ್ಲ್ಯೋ ತಡೆಕೊಡುವ ದೋಷ ಒಡೆಯ ನಿನ್ನೆದುರಿಗೆ ಅಡರಿ ನಿಲ್ಲುವದುಂಟೆ ಆವಾವ ಕಾಲಕ್ಕೆ ಪೊಡವಿಯ ತಳದಲ್ಲಿ ಪುಟ್ಟಿ ಸಾಧನಗಳು ಪಡಿಯಲಿಬೇಕೆಂಬ ಭಕುತ ಜನರುಗಳು ಕಡಿಮೇನೊ ಅವರೊಶ ಮಾಡಿಸೊ ಭಕ್ತರ ಬಿಡಿಯ ಬಿರುದಿನ ವಾಸುದೇವವಿಟ್ಠಲ 4 ಆದಿತಾಳ ಒಂದೊಂದು ಕೊಡಲು ಮತ್ತೊಂದು ಕೊಡಲಿ ಎಂದು ಸಂದಣಿಸುತಲಿವೆ ವಿಷಯಗಳೊಂದು ತಂದೆ ತಡಮಾಡಬೇಡವೊ ಅದರಿಂದ ಒಂದೆ ಸಾಧನ ಬಹಳಾಗುವದೊ ಇಂದಿರೇಶ ಬಯಸಿದೆ ನಿನ್ನಲ್ಲಿ ಬಂದು ಒದಗಿಸೊ ವಾಸುದೇವವಿಠಲ 5 ಜತೆ ಕರುಣಾಳು ಸ್ವಾತಂತ್ರ ವಾಸುದೇವವಿಠಲ ಸರ್ವಜ್ಞ ನಿನಗೆ ಮೊರೆ ಇಡೊದಿದೆ ಚಿತ್ರ 6
--------------
ವ್ಯಾಸತತ್ವಜ್ಞದಾಸರು
ಸೂತ್ರನಾಮಕ | ಸುಂದರನೇಕ | ಸೂತ್ರನಾಮಕ ಪ ಸತ್ಪಾತ್ರ ವಿನುತ ಶುಭಗಾತ್ರ ಪವಿತ್ರ ಅ.ಪ. ರಾಮಪದ ಭೃಂಗಾ | ರಾವಣ ಮದಭಂಗ | ಗಜಸಿಂಗಾತಾಮಸ ಕುಲಕೆ ನೀ ಧೂಮಕೇತು ಬುಧಸೌಮನಸಾಗ್ರಣಿ ಕಾಮಿತ ಫಲದಾ 1 ಪಾಂಡುನಂದನಾ | ಪಾಲಿಸು ಯನ್ನಾ | ಖಂಡ ಪಾವನಾಅಂಡಜಾಧಿಪನ ಕಂಡು ಭಜಿಸಿ ದೋ-ರ್ದಂಡ ಖಳ ಕುಲ ಚಂಡ ಪ್ರಚಂಡಾ 2 ಜ್ಞಾನದಾಯಕಾ | ಆನಂದತೀರ್ಥ | ದೀನ ಪೋಷಕಭಾನುಕೋಟಿ ತೇಜ ವ್ಯಾಸ ವಿಠಲನಧ್ಯಾನದೊಳಿಹ ಮಮ ಮಾನಸ ಹಂಸಾ 3
--------------
ವ್ಯಾಸವಿಠ್ಠಲರು
ಸೂರ್ಯ | ಕಾಯೊಯತಿ ಸತ್ಯ ಧ್ಯಾನಾಖ್ಯವರ್ಯಾ ಪ ಧೃತ - ಕ್ಷಿತಿಯೊಳಗೆ ದುರ್ಮತವ ಖಂಡಿಸಿ | ಅತಿಹಿತದಿ ದ್ವೈತವನೆ ಬೋಧಿಸಿವಿತತ ಹರಿ ಪರನೆಂದು ಸಾಧಿಸಿ | ಮತಿಯ ಮನುಜರ್ಗೊರೆದ ತಾಪಸಿ ಅ.ಪ. ಪಾದ ವನಜಾ |ಸಾಪರೋಕ್ಷೀಕೃತ ಯತಿಜ | ತೋರೊಸುಪಥ ಮುಕ್ತಿಗೆ ಹತ ದಿತಿಜ |ಶ್ರೀ ಪತಿಯ ಚರಣಾಬ್ಜ ಮಧುಪನೆ | ಕೋಪ ಸಲ್ಲದು ಕೃಪೆ ಪಯೋನಿಧಿಪಾಪ ರಹಿತನ ಮಾಡಿಯನ್ನನು | ಪ್ರಾಪಿಸೆನಗೆ ಜ್ಞಾನಖ್ಯ ಸೂರ್ಯನ 1 ಕಾಶಿ ರಾಮೇಶ್ವರ ಕುಂಭ | ಕೋಣದೇಶ ಯಾತ್ರೆಗಳ್ಮಾಡಿ ಡಿಂಬಾ |ಮೀಸಲೆನಿಸಿ ಜಯಸ್ತಂಭಾ | ಹೂಡಿಶ್ರೀಶ ಸರ್ವೋತ್ತಮನೆಂಬಾ ||ಭಾಷೆಯನು ಕೈಗೊಂಡು ಚರಿಸುತ | ಕೃಷಿಯ ಮಾಡಿದೆ ಹರಿಯ ಮತವನುತೋಷಿಸಿದೆ ಸದ್ವೈಷ್ಣ್ವವೃಂದವ | ವಿಶದ ವಿದ್ವತ್ಸಭೆಯ ನೆರೆಸೀ 2 ಚಿತ್ತ ವಿಡುತ ಲಯದಿ ಚಿಂತನಾ | ಸಾರಿಸತ್ಯ ಪಾಂಡುರಂಗ ವಿಠಲನಾ |ಹತ್ತಿರ ಕಿತ್ತೊಗೆದೆ ತನುವಿನ ವರಚೈತ್ರ ಶುಕ್ಲದಿ ಆರೆಡನೆ ದಿಣ |ಕ್ಷಾತ್ರ ತೇಜದಿ ಮೆರೆದೆ ಗುರುವರ | ಕ್ಷಿತಿಯೊಳಗೆ ಸುರಾರು ನಿಮಗೆವಿತತ ಗುರುಗೋವಿಂದ ವಿಠಲನ | ಚಿತ್ತದಲಿ ಸ್ಮರಿಸುತ್ತ ಪೊರಟ 3
--------------
ಗುರುಗೋವಿಂದವಿಠಲರು
ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೂರ್ಯಾಂತರ್ಗತ ನಾರಾಯಣ ಪಾಹಿ ಆರ್ಯ ಮಾರುತಿ ಪಂಚಪ್ರಾಣ ಪ ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ. ದ್ರುಪದನ ಸುತೆ ನಿನ್ನ ಕರೆಯೆ ಅಂದು ಕೃಪಣ ವತ್ಸಲ ಶೀರೆ ಮಳೆಯೇ ಅಪರಿಮಿತವು ನೀರ ಸುರಿಯೆ ಸ್ವಾಮಿ ಕುಪಿತ ದೈತ್ಯರ ಗರ್ವ ಮುರಿಯೇ ಜನಸೋ ಜನರ ವಿಪತ್ತು ಕಳೆದೆ ಈ ಪರಿಯ ದೇವರನೆಲ್ಲಿ ಕಾಣೆನೊ ತಪನಕೋಟ ಪ್ರಕಾಶ ಬಲ ಉಳ್ಳ ಕಪಿಲರೂಪನೆ ಜ್ಞಾನದಾಯಕ 1 ಹೃದಯ ಮಂಟಪದೊಳಗೆಲ್ಲ ಪ್ರಾಣ- ದದುಭುತ ಮಹಿಮೆಯ ಬಲ್ಲ ಸದಮಲನಾಗಿ ತಾವೆಲ್ಲ ಕಾರ್ಯ ಮುದದಿ ಮಾಡಿಸುವ ಶ್ರೀನಲ್ಲ ಹದುಳ ಕೊಡುತಲಿ ಬದಿಲಿ ತಾನಿದ್ದು ಒದಗಿ ನಿನಗೆಲ್ಲ ಮದುವೆ ಮಾಡಿದ ಪದುಮಜಾಂಡೋದರ ಸುದತಿಯ ಮುದದಿ ರಮಿಸೆಂದು ಒದಗಿ ಬೇಡುವೆ 2 ಎನ್ನ ಬಿನ್ನಪವನ್ನು ಕೇಳೊ ಪ್ರಿಯ ಮನ್ನಿಸಿ ನೋಡೊ ದಯಾಳೋ ಹೆಣ್ಣಬಲೆಯ ಮಾತು ಕೇಳೂ ನಾನು ನಿನ್ನವಳಲ್ಲವೇನು ಹೇಳೋ ನಿನ್ನ ಮನದನುಮಾನ ತಿಳಿಯಿತು ಕನ್ಯಾವಸ್ಥೆಯು ಎನ್ನದೆನ್ನದೆ ಚೆನ್ನ ಶ್ರೀನಿಧಿವಿಠಲ ಪ್ರಾಯದ ಕನ್ನೆ ಇವಳನು ದೇವ ಕೂಡಿಕೊ 3
--------------
ಶ್ರೀನಿಧಿವಿಠಲರು
ಸೃಷ್ಟೀಶ ಕೃಪೆದೋರಿದ ಬಾಲನಮಾನನಷ್ಟವ ಜಾರಿಸಿದ ಪ ನ್ಯಾಯಕೆ ಪೋಪಕಾಲದಿ ಪುಟ್ಟಯಾಖ್ಯನ ಸ್ವಪ್ನದಲಿ ತಾಂ- ಬಿಟ್ಟು ಬನ್ನಿರಿಯೆನುತಪೇಳ್ದಾ ಅ.ಪ ಎಲ್ಲಾರ ನಿನ್ನೊಳಗೆ ಸೇರಿಸಿ ಮುಂದೆ- ಉಲ್ಲಾಸಕೊಡುವೆ ನಿನಗೆ ಕಲ್ಲಿನಂದದಿ ಮೌನಧರಿಸುತ- ಖುಲ್ಲಮನುಜರ ಸಂಗವರ್ಜಿಸಿ ನಿಲ್ಲಿಸು ಮನವನೆನುತಲಿ 1 ಗುರುತು ಕಾಣುವದೆಂದಿಗೆ ಪರಮ ತಿರುಮಂತ್ರಾರ್ಥ ಅಷ್ಟಾ- ಕ್ಷರಿಯ ಜಪತಪಧ್ಯಾನಮಾಡುವ ದೊರಯದೆಂದಿಗು ಕೀರ್ತಿ ಎನುತಲಿ 2 ಮತಧರ್ಮಜ್ಞಾನಿಗಳು ಪೇಳಿರುವಂತ ಮತಶಾಸ್ತ್ರವೀಕ್ಷಿಸದೆ ಸತತದೂಷಣೆಗೈದು ಸುಜನರ - ಕ್ಷಿತಿಯ ಭೋಗವನಂಬಿ ಗರ್ವದಿ ಹಿತವತಪ್ಪಿಸಿ ಕರವಪಿಡಿಯುತ 3 ಸ್ಥಿರವಲ್ಲಕಾಯವೆಂದು ಸಾತ್ವಿಕಶೃತಿಯೊ- ಳಿರುವ ಸತ್ಯ ನೋಡೆಂದು ನಿರುತಬೋಧಿಸಿ ಜನನಮರಣವ ತರಿದು ಎನ್ನನೆ ಯಜಿಸು ಯೆನುತಲಿ- ಹರಸಿ ಮೋಕ್ಷವನಿತ್ತ ಆರ್ಯನು 4 ಬಿಟ್ಟು ಸತಿಸುತರೆಲ್ಲರ ಎನ್ನೊಳುಮನವ ನಿಟ್ಟುನಂಬಿದಭಕ್ತರ ಬಿಟ್ಟುಕೊಡೆನಾನೆಂದು ಹೃದಯಾ- ಧಿಷ್ಟಿತನು ತಾನಾಗಿ ಅಭಯವ ಇಷ್ಟಶ್ರೀಗುರುರಂಗನೀಕ್ಷಿಸಿ 5
--------------
ರಂಗದಾಸರು
ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸೇರಿ ಬದುಕುವೆ ನಮ್ಮ ಸ್ವಾಮಿಯಂಘ್ರಿಯನುಭೂರಿ ದೋಷಗಳನ್ನು ಬಯಲ ಮಾಳ್ಪುದನು ಪನಿರ್ಗುಣದ ರೂಪವದು ನಿಲುಕದೆಂದಿಗೂ ಮನಕೆದುರ್ಗುಣದ ಪುಂಜಕ್ಕೆ ದೊರಕುವುದೆ ಹುಡುಕೆಅರ್ಗಳದ ವೃತ್ತಿಗಳಲಾಳಿ ಮುಳುಗಿರಲಿದಕೆಮುಗ್ಗಿ ಮೋಹಿಪ ನಾನು ಮಥಿಸಲಿನ್ನೇಕೆ 1ಸಗುಣಮೂರ್ತಿಯ ನೋಡೆ ಸ್ಥಿರದಿ ಬುದ್ಧಿಯು ನಿಲದುಅಗಣಿತದ ವಾಸನೆಯೊಳತಿಬದ್ಧವಡೆದುಬಿಗಿ ಭದ್ರವಾಗಿರಲು ಬಹು ಕರ್ಮವೆಳೆದೆಳೆದುಬಗೆಯದನು ನೆರೆ ನೋಡಿ ಬಿಟ್ಟದನು ಜರೆದು 2ಧ್ಯಾನಿಪರು ಧ್ಯಾನಿಸಲಿ ಧೈರ್ಯದಲಿ ಬ್ರಹ್ಮವನುಜ್ಞಾನಿಗಳು ತಿಳಿಯಲಾ ಗೂಢ ತತ್ವವನುಮಾನರಹಿತರು ಹರಿಗೆ ಮಾಡಲಾ ಕರ್ಮವನುನಾನೊಂದನೊಡಬಡೆನು ನೋಡಿ ಕಠಿಣವನು 3ವೇದಶಾಸ್ತ್ರಗಳೋದಿ ವಾದಿಸಲಿ ವಾದಿಗಳುಸಾಧಿಸಲಿ ಸ್ವರ್ಗವನು ಸಕಲ ಶ್ರೌತಿಗಳುಬೋಧಿಸಲಿ ಪರರಿಂಗೆ ಬಹುತತ್ವಭೇದಿಗಳುಮಾಧವನಿಗೆರಗುವದೆ ಮತವೆನಗೆ ಕೇಳು 4ಪಾದಪದ್ಮವನಂಬಿ ಪಡೆದರಮಿತರು ಗತಿಯ ಓದಿದವರೈದಿದರು ವಾಸನೆಯ ಬಗೆಯಕಾದು ರಕ್ಷಿಪುದಂಘ್ರಿ ಕೊಡುವುದಮಿತದ ಸಿರಿಯವಾದಿಸದೆ ನಂಬಿದೆನು ವಿಧಿಜನಕನಡಿಯ 5ಇದು ತಾನೆ ಲೋಕಗಳನೆಲ್ಲವಾಳುವ ದೊರೆಯುಇದು ತಾನೆ ಯೋಗಿಗಳಿಗಿದಿರಾದ ಬಗೆಯುಇದು ವಿಷಯದೊಳಗಿರುವರೆಬ್ಬಿಸುತ್ತಿಹ ಸುಧೆಯುಇದನೆ ನಾನಂಬಿದೆನು ಯಾಕೆ ಕರೆಕರೆಯು 6ತರುಬಿ ನಿಂದಿದೆ ಲೋಕ ತತ್ಪಾದಪದ್ಮವನುಹೊರೆಯುತಿಹುದಾ ಜನವ ಹೊಣೆಯಾಗಿ ತಾನು ತಿರುಪತೀಶ್ವರ ನನಗೆ ತೋರ್ದನೀ ಮತಿಯನ್ನುವರದೇಶ ನನಗೊಲಿದವೊಡೆಯ ವೆಂಕಟನು 7ಓಂ ತೀರ್ಥಪಾದಾಯ ನಮಃ
--------------
ತಿಮ್ಮಪ್ಪದಾಸರು
ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ ಅ- | ಪಾರ ಜನುಮಕ್ಕೆ ನೀನೆ ದೈವವೆಂದು ಪ ಶೂನ್ಯಜ್ಞನು ನಾನು ಅನ್ಯಾಥಾ ಗತಿ ಅರಿಯೆ | ಅನ್ಯರಲ್ಲಿಗೆ ಕೊಡದೆ ಧನ್ಯನ ಮಾಡೊ ಬಿಡದೆ 1 ಕಲ್ಪತರುವೆ ಎಂದು ವಪ್ಪದಿಂದಲಿ ಬಂದೆ | ಆಲ್ಪರಿಯದಂತೆ ನಾಗತಲ್ಪನೆ ಫಲವೀಯೋ 2 ವರುಷಾವರುಷ ಹೀಗೆ ದರುಶನಕೊಡು ಎನಗೆ | ಹರುಷವಾಗಲಿ ಪರಮಪುರುಷ ವಿಜಯವಿಠ್ಠಲಾ 3
--------------
ವಿಜಯದಾಸ
ಸೇರಿದೆನು ಸೇರಿದೆನು ಗುರುವರನ ಪದವಾ ಮೀರಿದೆನು ಘೋರತರ ನರಕದತಿಭಯವಾ ಪದೂರ್ವೆ ಮೊದಲಾದ ತೃಣಧಾನ್ಯ ಗರ್ಭವ ಮೆಟ್ಟಿಸರ್ವ ಸ್ಥಾವರ ಜಾತಿಗಳಲಿ ಪುಟ್ಟಿಪಾರ್ವಪಕ್ಷಿಗಳ ಬಸುರೊಳು ಪುಟ್ಟಿ ಬಹಳ ಪಶೂದರ್ವೀಕರಂಗಳಲಿ ಪುಟ್ಟಿ ಕಂಗೆಟ್ಟೂ1ಮನುಜರೊಳು ಪದಿನೆಂಟು ಜಾತಿಗಳೊಳಗೆ ಬಂದುಬಿನುಗುತನದಿಂದಖಿಳ ವಿಷಯಗಳ ತಿಂದೂಅನುವರಿಯದಜ್ಞಾನದೊಳಗೆ ಬಳಿಸಂದು ಪಾರ್ವನ ಜನ್ಮದಲಿ ವಿಹಿತಕರ್ಮದಲಿ ಮನನಿಂದು2ಮೆಲ್ಲ ಮೆಲ್ಲನೆ ಕಾಮ್ಯ ನಿಷ್ಕಾಮ ಕರ್ಮಗಳಬಲ್ಲ ಬಲ್ಲಂತೆ ಮಾಡುತ ಪೂರ್ವದಾಸಲ್ಲಲಿತ ಪುಣ್ಯದೊಳು ಭಕ್ತಿಯೊಳ್ಮನ ಮುಟ್ಟಿಅಲ್ಲಲ್ಲಿ ಹರಿನಾಮ ಕಥೆಯೊಳಳವಟ್ಟೂ 3ಭಾಗವತ ಜನ ಸಂಗದಿಂದ ಹರಿಕಥೆಗಳನುರಾಗದಿಂ ಕೇಳಿ ಗುರುವಿನ ಮಹಿಮೆಯಾಶ್ರೀಗುರುಗಳಿಂದಲೆ ಧನ್ಯತ್ವವಹುದೆಂದುಯೋಗ ಸಂಪದವೆ ತನಗಾಗಬೇಕೆಂದೂ 4ಸದಸದ್ವಿವೇಕ ಶಮೆ ದಮೆ ತಿತಿಕ್ಷೆಗಳಿಂದಲಧಿಕ ಮೋಕ್ಷೇಛ್ಛೆ ಮುಂತಾದ ಸಾಧನವೂಒದವಿರಲು ಬೇಕು ಗೋಪಾಲಾರ್ಯ ಗುರುವರನಪದವೆ ಸತ್ಯಾನಂದ ರೂಪವೆಂತೆಂದೂ 5
--------------
ಗೋಪಾಲಾರ್ಯರು
ಸೈ ಸೈ ಸದ್ಗುರುವಿನ ದಯದಿಂದೆಲ್ಲಾ ಮೈ ಮರೆತೆನೆ |ಐ ಅದು ಏನು ಕಾರಣ ಮೈ ಮರೆದು ಮತ್ತುಳಿದೆನೆ | ಕೈ ಕೈ ತಲೆ ಮೇಲಿಡಲು ವೈರಾಗ್ಯ ಪಡೆದೆನೆ |ಥೈ ಥೈಯಂತ ಕುಣಿಸಿ ತನ್ನಂತೆ ತಾ ಮಾಡಿದನೆ ¥ ನಾನೂ ನೀನೆಂಬುದು ಮರೆಸಿ ತಾನೇ ತಾನಾದನೆ |ಮಾನ ಅಪಮಾನ ಎರಡೂ ಪಾನ ಮಾಡಿದನೆ |ಜ್ಞಾನ ಮಾರ್ಗವ ತೋರಿ ಧ್ಯಾನ ಹೇಳಿದನೆ |ಖೂನ ತೋರಿಸಿ ವಿನೋದ ಮಾಡಿದನೆ 1 ನಾದ ಶಬ್ದದಿ ಮನಲುಬ್ಧ ಮಾಡಿದನೆ |ವಾದಿ ದುರ್ವಾದಿಗೂಡ ಕಾದಿ ಗೆಲಿಸಿದನೆ |ಭೇದಾಭೇದವ ಅರಿಯದ ಹಾದೀ ತೋರಿದನೆ |ಈದ ಹುಲಿಯಂಥ ಮನಸು ಸಾದ ಮಾಡಿದನೆ 2 ಭೃಕುಟಿ ಮಧ್ಯದಿ ವಸ್ತು ಪ್ರಕಟ ಮಾಡಿದನೆ | ಆಸನ ದ್ವಾರ ಕವಾಟವ ಬಲಿಸಿ ಶ್ವಾಶಗಳೆಲ್ಲಾ ನಿಲಿಸಿದನೆ | ನಾಸಿಕಾಗ್ರದ ಕೊನೆಯ ಮೇಲೆ ಭಾನು ಪ್ರಕಾಶವ ತೋರಿದನೆ | ಈಶನು ದತ್ತ ಮಹೇಶ ದಿಗಂಬರ ಘೋಷದೊಳಗೆ ಮನವೀಸಿದನೆ 3
--------------
ಭೀಮಾಶಂಕರ
ಸೋಜಿಗ ಸೋಜಿಗ ಗೋವಿಂದನ ಸೋಜಿಗ ಗೋಪಾಲನ ಸೋಜಿಗ ಪ ಇಂದಿರೆ ರಮಣ ಈ ಪರಬ್ರಹ್ಮ | ಮಂದರೋದ್ಧಾರ ಈ ದೇವಾ | ತಂದೆ ತಾಯಿ ತ್ರೈಲೋಕ್ಯಕ್ಕೆ ತಾನಾಗಿ ನಂದ | ಆನಂದ ಯಶೋದೆಗೆ ಮಗನಾದ ನೋಡಮ್ಮ || ಸೋಜಿಗ 1 ಸದಮಲ ಸ್ವರೂಪ ಸಚ್ಚಿದಾನಂದನು |ಮುನಿಜನ ವಂದಿಪನು ಈ ದೇವ ಮುನಿಜನ ವಂದಿಪನು |ಪದುಮನಾಭ ಪೀತಾಂಬರಧರ ದೇವ ವಿದುರನ | ಆವಿದುರನ ಮನೆಯಲ್ಲಿ ಉಂಡದ್ದು ನೋಡಮ್ಮ ಸೋಜಿಗ2 ನಾನಾ ದೇವರ ದೇವ ನಾರಾಯಣ ಹರಿ ನಿಜಸುರ ವಂದಿ-ಪನು ಈ ದೇವ | ಭಾನು ಕೋಟಿ ತೇಜ ಜ್ಞಾನ-ಬೋಧನ ಸ್ವಾಮಿ | ತಾನಾಗಿ ಭಕುತಿಗೆ ಒಲಿದದ್ದುನೋಡಮ್ಮ ಸೋಜಿಗ 3
--------------
ಜ್ಞಾನಬೋದಕರು
ಸೋಜೀಗ ರೊಳಗತಿ ಸೋಜೀಗ ರಾಘವೇಂದ್ರಾ ಗುರು ಪ ಸೋಜೀಗ ವಲ್ಲವೆ ರಾಜಾ ಗುರುವು ನೀನು ನೈಜ ರೂಪದಿ ಬಂದು ಮಾಜಾದೆ ಪೊರೆವುದು ಅ.ಪ ಬೆಂಬಲ ನಿನಗೆಂದು ಸ್ತಂಭದಿ ಹರಿ ಬಂದ ಇಂಬು ಪಾಲಿಸು ಗುರುವೇ ನಂಬೀದ ಜನಗಣ ಡಿಂಭದಿ ನೀ ಮೂಡಿ ಅಂಬಕ ದೊಳು ಕಂಡೇ 1 ಇಲ್ಲ ಹರಿಯು ಎಂಬ ಕ್ಷುಲ್ಲ ಸಂಶಯ ವೆಂಬ ಹಲ್ಲು ಮುರಿದು ಭಕ್ತರಲ್ಲಿ ತುಂಬುವೆ ಭಕ್ತಿ ಇಲ್ಲದಿರಲು ನೀನು ಕಳ್ಳ ಕಲಿಯು ಜಗ ವೆಲ್ಲ ತುಂಬುತ ಶೃತಿ ಸುಳ್ಳು ಎನಿಸುತಿದ್ದಾ 2 ನಿರುತ ನೀಡುತ ಹರಿಕೆ ಕರೆದು ಪೊರೆವೆ ಜನರ ಸರಿಯು ಕಾಣೆನು ನಿನಗೆ ಹರಿಯ ಕಿಂಕರ ಶರಣು ಮರುತ ದೇವನ ಮತ ಮೆರೆಸಿ ಕುಣಿಸುತ್ತಿರುವೆ ಶರಣ ಜನರ ಪೊರೆವ ಪರಮಾಪ್ತ ಸಿದ್ಧವೋ 3 ಹುಣ್ಣು ಅಳಿಸಿ ಭಕ್ತಿ ಹಣ್ಣು ತಿನ್ನಿಸಿ ಜ್ಞಾನ ಕಣ್ಣು ಪಾಲಿಪ ಗುರು ಮಣ್ಣು ಗೂಡಿಸೊ ಭವವ ಸಣ್ಣವರೆಮ್ಮ ಶಂಕು ಕರ್ಣನೆ ಸಲಹೈಯ್ಯ ಗಣ್ಯರೊಳಗೆ ಗಣ್ಯ ಪೂರ್ಣ ಪ್ರಜ್ಞರ ಪ್ರೀಯಾ 4 ಹಿಂದೆ ಹೋಯಿತು ಹೊತ್ತು ಮುಂದೆ ಕಾದಿದೆ ಮೃತ್ಯು ಇಂದು ಭಾರವ ಪೊತ್ತು ಕಂದರೆಮ್ಮನು ಕಾಯೋ ಇಂದ್ರ ತಾತನ ಹೃದಯ ಮಂದೀರದಲಿ ನಲಿವ ಇಂದಿರೇಶ ಕೃಷ್ಣವಿಠಲ ರಾಯನ ತೋರು 5
--------------
ಕೃಷ್ಣವಿಠಲದಾಸರು
ಸ್ಕಂದಗುರು ಸ್ಕಂದಗುರು ಸುರ- ವೃಂದ ಮುನಿಜನರು ವಂದಿಪರುಪ. ಮಂದರಧರ ಗೋವಿಂದನ ಶರಣರ ಸಂದೋಹಕಾವ ವೃಂದಾರಕತರುಅ.ಪ. ತಾಮಸರು ದ್ವೇಷ ಬೇಡುವರು ಕಾಮಿತ ಕೇಳ್ವರು ರಾಜಸರು ಸ್ವಾಮಿ ಶ್ರೀಹರಿಯ ಭಕ್ತಿಜ್ಞಾನವ ಪ್ರೇಮದಿ ಕೇಳ್ವರು ಸಾತ್ವಿಕರು1 ವಿಘ್ನಹರನು ನಿನ್ನಗ್ರಜನು ವಿಬು- ಧಾಗ್ರಣಿಯೆನಿಸುವೆಯೊ ನೀನು ಉಗ್ರ ತ್ರಿಯಂಬಕತಾತನು ಖ್ಯಾತನು ದುರ್ಗಾದೇವಿಯೆ ಜನನಿ ನಿರುಪಮಳು2 ತಾರಕಾಂತಕ ನಿಶ್ಯೋಕ ಲಕ್ಷ್ಮೀ- ನಾರಾಯಣನಿಗೆ ಸಖ ಭೂರಿನಿಗಮಾರ್ಥಸಾರ ಕೋವಿದನೆ ಧೀರನೆ ವೀರ ಮಹಾರಣಶೂರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್