ಒಟ್ಟು 9830 ಕಡೆಗಳಲ್ಲಿ , 132 ದಾಸರು , 5659 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ಕೃಪೆ ಮಾಡೋ ಹರಿಯೇ ಲೋಕವಿನುತ ಸಿರಿಯೇ ಪ ಶ್ರೀಕರ ಭಾಸ್ವರಾ ಭಕ್ತಸುಧಾಕರ ಶೋಕಹರಣಾ ನೀ ಶೂರಾ ಅ.ಪ ನಡು ನೀರೋಳೆನ್ನ ಕೈಯ ಬಿಡಬೇಡ ಮಾರನಯ್ಯ ಅಡಿಗೆರಗುವೆನಯ್ಯ ಕೊಡು ನಿನ್ನ ನಾಮಾವಳಿಯ ದೃಢದೆ ಭಜಿಪೆನಯ್ಯ ಮೃಡನುತಾನೇ ಗೋವಿಂದಯ್ಯ 1 ಕಳೆದ ದುರಿತಾವೃತ ಉಳಿದುದು ವೋವರಾ ಅಳಿವ ಕಾಲವಿದಿನ್ನು ಬಳಲಿಸೋಲುವೆ[ನಯ್ಯ] ಘಳಿಲನೆ ನಿನ್ನ ನಾಮಾವಳಿಯ ಸ್ಮರಣೆಯ 2 ಅನ್ಯರ ಭಜಿಸೆನು ಅನ್ಯರ ನುತಿಸೆನು ಅನ್ಯರಿಗೆರಗೆನು ಅನ್ಯರ [ಪೂಜಿ]ಸೆನು [ಅ ನನ್ಯ ಶರಣನೆ ಮನ್ನಿಸೊ ಶರಣುಬಂದಿಹೆನು] 3 ಕಾವಧೀರನು ಇನ್ನು ಅವನೇ ಶ್ರೀಹರಿ ಸೇವಕರಿಗೆ ನಾನು ಸೇವಕನೆನ್ನುತಾ ಭಾವಿಸೋ ದೇವದೇವಾ ಮಾವಿನಾಕೆರೆರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಕೈಯ ಬಿಟ್ಟರಿನ್ಯಾತಕೆನಗೀ ಸುಖ ಗೋಕುಲಗಣನಾಯಕ ಪ ಲೋಕೈಕ ನಾಥನೆಂದಾ ರೈಉಸುರಿದ ಮುನಿಯ ಯಾಕೀ ಪರಿಯೊಳೆನ್ನ ಕಾಕುಮಾಡುವೆರಂಗಾ ನೂಕಿ ನಿಮ್ಮಾಶ್ರಯವ ಮಾಡೈ ಎಂದಿಹ ವ್ಯಾಕುಲಾಂತ ಪರಾತ್ಮ ಸತ್ಯ ಸ ಲೊಕ ಸರ್ವಸಯೇಕ ಭೀಮಾ 1 ಸಮಾಜದೀ ಭೀತಿಯಿಂದ ಮಿತ ದು:ಖವನುಂಡೆ ಸುಮನ ಸತ್ಯ ಸಮಾಜ ಭೌಮನೆ ಅಮರಗುಣ ಕಟಕಾಮಣಿಯೆ ಸ ದ್ವಿಮಲ ಚರಿತ ವಿಶಾಲ ಭೂಪಾ2 ಕಿಂತುಭವದ್ಧರ್ಶನೇನಆಹಂಬೆಲ್ಲ ಕಥಯಾಮಿಕಾಲಾಂತಕೋ ಚಕ್ರಸುಧಾರ ತ್ವರಿತದಿ ಕಂತು ಜನಕನೆ ಪಾಲಿಸೆನ್ನು ಪಂಥವೇತಕೊ ಪರಮಜೀಯಾ 3 ಭ್ರಷ್ಟಸಂಗವ ಬಿಡಿಸಿ ಪಾಲಿಸೊ ವಿ ಶಿಷ್ಟಾದ್ವೈತನೆ ಕೃಷ್ಣನಾಮನೆ ಸೃಷ್ಟಿ ಶ್ರೀಗುರು[ತುಳಸಿ]ಕುಲ ಶ್ರೀರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ನೀ ಕೈಯ ಬಿಡಲು ಸಾಕುವರಾರಲೋ ಪ ಪಾದಸ್ಮರಿಸುತಲಿರುವವನ 1 ಸಂತತ ಪಾಲಿಸಿದೆ 2 ನರಹರಿಯನ್ನಯ 3
--------------
ಹೆನ್ನೆರಂಗದಾಸರು
ನೀ ಕೊಟ್ಟಿದುಣುವಲ್ಲಿ ಭಕ್ತಿ ಹರುಷ ಪ ಶ್ರೀಕಾಂತ ನೀಡೆನಗೆ ಸಾಕು ಬೇಕೆನ್ನಿಸದೆ ಅ.ಪ. ನಾ ಬಲ್ಲೆನೆ ಎನ್ನ ಹಿತಾಹಿತಗಳ ಬಗೆಯ ನೀ ಬಲ್ಲ ಸರ್ವಜ್ಞ ನಮ್ಮ ಕ್ಷೇಮ ನೀ ಬಂಧು ಅನಿಮಿತ್ತ ಅನಂತ ಕಾಲಕ್ಕೂ ಆ ಬ್ರಹ್ಮಸ್ತಂಭಾಂತ ಸಂಸಾರಿ ಸರ್ವೇಶ 1 ಕಂಸಮರ್ದನ ಎನ್ನ ಸಂಶಯಗಳಿಯಯ್ಯ ಹಂಸ ಸದ್ಗುಣ ಪೂರ್ಣ ಪುರುಷ ಶ್ರೀಶ ಪರಿ ಹರಿಸಿ ನಿನ್ನ ಜ್ಞಾನವ ನೀಡೊ ಸ್ವಾಂಶಿಗಳ ಗುಣರೂಪ ಕ್ರಿಯದಿಂದ ದೇವ 2 ನಿತ್ಯ ಮಿತ್ರನೆ ನಮಗೆ ಅನುಗಾಲ ಸಲಹುವಿ ತಾಯಿಯಂತೆ ಬಿನಗು ದೈವಗಳಳಿವ ಜಯೇಶವಿಠಲ ನಿತ್ಯ ಮೂರ್ತಿ 3 ನೀನಿತ್ತ ಭೋಗಗಳು ನಿನಗೊಪ್ಪಿಸುವೆನೆನಲು ಏನು ಕಾರಣ ಬರದು ಆನಿವರದನೆ ಕೇಳೋ ಪ್ರಾಣಪತಿ ಜಯೇಶವಿಠಲನೆ ಕರುಣಾಬ್ಧಿ 4
--------------
ಜಯೇಶವಿಠಲ
ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೀ ಯಾಕ ಮನವೇ ಚಿಂತಿಸಿ ಬಳಲುವೆ ಬರಿದೇ | ಶ್ರೀಯರಸನ ಮೊರೆ ಹೋಗದೇ ಪ ಸಾಧುರಾ ಸಂಗ ಜರಿದು ಕುಜನರ ನೆರೆವಿಡಿದು | ಮೇದಿನಿಯೊಳು ನಿನ್ನ ನೀ ಮರೆದು 1 ಇರಲು ಮುಳ್ಳಿನಾಗ್ರದಲಿ ಹೀನ ಕೀಟಕಾವಳಿ | ಪೊರೆವಾನಿತ್ತು ಆಹಾರದಯಲೀ 2 ಮನುಜರಿಗೆ ತಲೆವಾಗಿ ಗೇಣು ವಡಕಲಾಗಿ | ಮನಸಾ ಹಿಡಿವರೇ ಪರರು ಹೋಗಿ 3 ಹುಟ್ಟಿಸಿದಾ ದೇವನು ಹುಲ್ಲು ಮೇಯಿಸುವನೇನು | ಅಷ್ಟಾಸಾಯಸ ಬಡದಿರು ನೀನು 4 ಅನುದಿನ ಗುರುಮಹಿಪತಿ ಚರಣಾ | ತಂದಿದಿರುಡುವ ನಿಧಾನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀಚನಲ್ಲವೇ ಇವನು ನೀಚನಲ್ಲವೇ ಪ ಕೀಚಕಾರಿಪ್ರಿಯನ ಗುಣವ ಯೋಚಿಸದಲೆ ಯಾಚಿಸುವÀನು ಅ.ಪ. ಶ್ರೀಕಳತ್ರನಂಘ್ರಿ ಕಮಲವೇಕಚಿತ್ತದಲ್ಲಿ ಮನೋ ವ್ಯಾಕುಲಗಳ ಬಿಟ್ಟು ಸುಖೋದ್ರೇಕದಿಂದ ಭಜಿಸದವನು 1 ಲೋಕವಾರ್ತೆಗಳಲಿ ಏಡ ಮೂಕರೆನಿಸಿ ವಿಷಯಗಳವ ಲೋಕಿಸದಲೆ ಶ್ರೀಶಗಿವು ಪ್ರತೀಕವೆಂದು ತಿಳಿಯದವನು 2 ಜನನಿ ಜನಕರಂತೆ ಜನಾರ್ದನನು ಸಲಹುತಿರಲು ಬಿಟ್ಟು ಧನಿಕರ ಮನೆಮನೆಗಳರಸಿ ಶುನಕನಂತೆ ತಿರುಗುವವನು 3 ಹರಿಕಥಾಮೃತವ ಬಿಟ್ಟು ನರ ಚರಿತ್ರೆಯಿಂದ ದ ರ್ದುರಗಳಂತೆ ಹರಟೆ ದಿವಸ ಬರಿದೆ ಕಳೆಯುತಿಪ್ಪ ಮನುಜ4 ಕರ್ಮ ತೊರೆದು ಪರರ ಗೃಹಗಳಲ್ಲಿ ಸಂಚರಿಸುತ ನಿಂದಿಸುವ ಮನುಜ5 ಬಹಳ ದ್ರವ್ಯದಿಂದ ಗರುಡ ವಾಹನನಂಘ್ರಿ ಭಜಿಸಿ ಅನು ಗ್ರಹವ ಮಾಡು ಎಂದು ಬೇಡಿ ಐಹಿಕಸುಖವ ಬಯಸುವವನು 6 ಕರಣ ಜನ್ಯ ಪುಣ್ಯಪಾಪವೆರಡು ಹರಿಯಧೀನವೆಂದು ಸ್ಮರಿಸುತಲತಿ ಭಕುತಿಯಿಂದ ಹರುಷಪಡದಲಿಪ್ಪ ಮನುಜ 7 ಜೀವನ ಕರ್ತೃತ್ವ ಬಿಟ್ಟು ದೇವನೊಬ್ಬ ಕರ್ತೃ ರಮಾ ದೇವಿ ಮೊದಲುಗೊಂಡು ಹರಿಯ ಸೇವಕರೆಂದರಿಯದವನು 8 ವಾತಜನಕನೆನಿಪ ಜಗನ್ನಾಥವಿಠ್ಠಲನ ಪದಾಬ್ಜ ಭವ ವೈತರಣಿಯ ದಾಟದವನು 9
--------------
ಜಗನ್ನಾಥದಾಸರು
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀಚಮನಸೆ ನೀ ಯೋಚಿಸಿ ಕೆಡಬೇಡ ಬರಿದೆ ಪ ಸಾರವಿಲ್ಲದ ನಿಸ್ಸಾರ ಸಂಸಾರವೆಂಬುದು ಮಾಯಾಬಜಾರ ತೋರಿ ಅಡಗುತಿಹ್ಯದು ನಿಮಿಷ ನೀರಮೇಲಿನ ಗುರುಳೆತೆರದಿ ಪರಿ ಸ್ಥಿರವಲ್ಲದನರಿದು ನೋಡೋ 1 ಕಾರಣಲ್ಲದ ಕಾಯವಿದು ಮೂರುದಿನದಸುಖವ ಬಯಸಿ ಮೀರಿಸಿ ಗುರುಹಿರಿಯರ್ವಚನ ಪಾರಮಾರ್ಥವಿಚಾರ ಮರೆಸಿ ಸೂರೆಗೈದು ಸ್ವರ್ಗಭೋಗ ಘೋರನರಕಕೆಳಸುತಿಹ್ಯದು 2 ಆಶಾಬದ್ಧನಾಗಿ ಭವಪಾಶದೊಳಗೆ ಸಿಲುಕಬೇಡೆಲೊ ವಾಸನಳಿದು ಐಹಿಕಸುಖದ ಕ್ಲೇಶನೀಗಿ ಸುಶೀಲನಾಗಿ ಬೇಸರಿಲ್ಲದೆ ಶ್ರೀಶಜಗದೀಶ ಶ್ರೀರಾಮನಂಘ್ರಿ ಭಜಿಸು 3
--------------
ರಾಮದಾಸರು
ನೀಡೆಲೋ ಶ್ರೀರಂಗಾ ನಿನ್ನ ದಾಸರ ಸಂಗಾ ಪ ಕೂಡಿಸಿ ತವ ಚರಿತಾಮರ ಗಂಗಾ | ಮಾಡುವದು ಭವಭಂಗಾ1 ಮೂಡಲುದಯದಲಿ ಜ್ಞಾನಪತಂಗಾ | ಓಡುದು ತಮ ಅಂತರಂಗಾ 2 ಸುಗಮದಿ ಗುರುಮಹಿಪತಿ ಪ್ರಭು | ಕಂಗಳಿಗೆ ದೋರುವುದು ಸುಖದಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀತಿವಂತನಾದ: ನೀತಿ ವಂತನಾದ ನಿಗಮಗೋಚರ ದೇವ | ಮಾತಿಗೆ ನಿಜಶೀಲ ಮಾತುಗಳಾಡಿ ಪ ಕೂಸಿನ ಮೊಲೆಯವಳ | ಕೊಸರಿಮುತ್ತನೆ ಇಟ್ಟು | ಚೂಶಿಯ ಮಾಡಿ ಬಲು ಘನವಾಗಿ ಮನಿಯೊಳು 1 ಚದಗತನದಿಯಲ್ಲ | ಚಲುವೆಯರೂಡಗೂಡಿ ಅಧರಾಮೃತ ಸವಿದು ಆನಂದದಲಿ ಇನ್ನು 2 ನೀರಿಗೆ ಹೋಗುವಂಥಹ ನಿಜ ಸ್ತ್ರೀಯರನೆ ಕಂಡು ತೋರಿವಟ್ಟಳ ಹಿಡಿದು ತುಟಿಯನೆ ಕಡಿದು 3 ಕೆಳದೆರು ಜಲದಲ್ಲಿ ಕ್ರೀಡೆನಾಡುವ ವೇಳೆ ಕೆಳಗಿದ್ದ ಶೀರೆಗಳ ಕೊಂಡು ಮರವನೇರಿ 4 ಈ ಪರಿಚರ್ಯಗಳಷ್ಟು ತನ್ನಲಿದ್ದು ಭೂಪ ಹೆನ್ನೆ ವಿಠಲ ಪೂಜಿತನಾÀನು 5
--------------
ಹೆನ್ನೆರಂಗದಾಸರು
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನಲ್ಲದಲೆ ಇನ್ನು ನಾನಾರ ಕೂಗಲೊ ಮಾನನಿಧಿ ಗೋಪಾಲ ಶ್ರೀನಿಧಿಯೇ ಪ. ಶ್ರೀನಿವಾಸನೆ ಎನ್ನ ನಾನಾ ಪರಿಯ ಕಷ್ಟ ನೀನೆ ಬಿಡಿಸಿ ಸಲಹೊ ಮಾನಾಭಿಮಾನದೊಡೆಯ ಅ.ಪ. ಕಡುಕೋಪದಿಂ ಖಳನು ಹುಡುಗನ ಬಾಧಿಸೆ ದೃಢ ಭಕ್ತಿಯಿಂದ ನಿನ್ನಡಿಯ ಭಜಿಸೆ ಕೆಡಹಿ ಅಸುರನ ಕೊಂದು ಒಡನೆ ಭಕ್ತನ ಕಾಯ್ದೆ 1 ತೊಡೆಯನೇರಲು ಬರೆ ಜಡಿದು ನೂಕಲು ತಾಯಿ ಒಡನೆ ಮನದಿ ನೊಂದು ಪೊಡಮಡುತ ಅಡವಿ ಅಡವಿ ತಿರುಗಿ ದೃಢದಿ ಭಜಿಸೆ ಧ್ರುವ ಒಡನೆ ಓಡಿ ಬಂದು ದೃಢಪಟ್ಟ ಕೊಡಲಿಲ್ಲೆ 2 ಕರಿ ಕರೆಯೆ ತಡೆಯದೆ ಸಲಹಿದ ಪೊಡವೀಶ ನೀನಲ್ಲೆ ಕಡುಕರುಣಿ ಬಡವಗೆ ಸಿರಿಯಿತ್ತೆ ಮಡದಿಗಕ್ಷಯವಿತ್ತೆ ಕಡುದ್ರೋಹಿಗಳ ಕೊಲಿಸಿ ಒಡನೆ ಐವರ ಕಾಯ್ದೆ3 ಚಿನುಮಯ ಗುಣಪೂರ್ಣ ಅಣು ಮಹತ್ ಅಂತರಾತ್ಮ ಎಣಿಸಲಾಹೊದೆ ನಿನ್ನ ಘನ ಮಹಿಮೆ ಮನಸಿಜಪಿತ ಸರ್ವ ಮನನಿಯಾಮಕ ಹರಿ ಮನದಲ್ಲಿ ನೀ ನಿಲ್ಲೊ 4 ಶ್ರೀಪದ್ಮಭವನುತ ನಾ ಪಾಮರಾಳಿಹೆ ಗೋಪಾಲಕೃಷ್ಣವಿಠಲ ಶ್ರೀಪತಿಯೆ ನೀ ಪಾರು ಮಾಡದೆ ಕಾಪಾಡುವವರ್ಯಾರೊ ತಾಪ ಬಿಡಿಸಿ ಸಲಹೋ5
--------------
ಅಂಬಾಬಾಯಿ
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನಹುದೋ ಘನ ಮಹಿಮ ಮುನಿಜನರೊಡಿಯ ಪೂರ್ಣ ದೀನದಯಾಳು ನೀನೆ ಹರಿಯೆ 1 ಪತಿತಪಾವನನೆಂದು ಶ್ರುತಿ ಸಾರುವರು ಕೇಳಿ ಅತಿ ಹರುಷದಲಿ ಬಂದೆನೊ ಹರಿಯೆ 2 ಮತಿ ಹೀನನವಗುಣವ ಕ್ಷಿತಿಯೊಳು ನೀ ನೋಡದೆ ಪಥವಗೊಳಿಸುವದು ಎನಗೆ ಹರಿಯೆ 3 ಮರೆಯ ಹೊಕ್ಕಿಹೆ ನಿಮ್ಮ ಚರಣಕಮಲಕೆ ಪೂರ್ಣ ಕರುಣದ ಅಭಯ ತೋರೊ ಎನಗೆ ಹರಿಯೆ 4 ಅರಿಯೆ ನಾ ನಿಮ್ಮ ವಿನಾ ಬ್ಯಾರೆ ಇನ್ನೊಂದು ಪಥ ಶಿರವ ನಮಿಸಿಹೆನೊ ನಿಮಗೆ ಹರಿಯೆ 5 ಶರಣಾಗತರ ಹೊರೆವ ಬಿರದು ನಿಮ್ಮದು ಪೂರ್ಣ ಸಾರುವದು ತಿಳಿದುಕೊಳ್ಳೊ ಹರಿಯೆ 6 ಬಿಡಲರಿಯೆ ನಾ ನಿಮ್ಮ ಪಿಡಿದು ಶ್ರೀಪಾದವನು ನೋಡಿ ದಯಮಾಡೊ ಎನಗೆ ಹರಿಯೆ 7 ಬ್ಯಾರೆ ಗತಿ ಕಾಣೆ ನಿಮ್ಮ ಚರಣಕಮಲದಾಣೆ ಸಿರಿ ಸಕಲಪದವು ನೀನೆ ಹರಿಯೆ 8 ಭಿನ್ನವಿಲ್ಲದೆ ನೋಡಿ ಚೆನ್ನಾಗಿ ಮಹಿಪತಿಯ ಧನ್ಯಗೈಸೊ ಪ್ರಾಣವ ಹರಿಯೆ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು