ಒಟ್ಟು 7812 ಕಡೆಗಳಲ್ಲಿ , 132 ದಾಸರು , 3804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುತ್ತಿ ಎನಗೆ ಬಡಿತವ್ವ ಹರಿ ಭಕ್ತರ ಮನಿಯನ ದೆವ್ವ ಪ ಅತ್ತಿತ್ತಮಾಡಿ ಬೆನ್ನ್ಹತ್ತಿ ಬಿಡದೆ ಎನ್ನ ನೆತ್ತಿಕೊಂಡು ಓಡ್ಹೋಯ್ತವ್ವ ಅ.ಪ ಬಿದ್ದರೆ ಬೀಳಗೊಡಲಿಲ್ಲವ್ವ ಸುಮ್ಮ ನಿದ್ದರೆ ಇರಗೊಡಲಿಲ್ಲವ್ವ ಬುದ್ಧಿಭ್ರಮಿಸಿ ಬಲುಗದ್ದಲಮಾಡೆನ್ನ ಮುದ್ದಿಟ್ಟೆಬ್ಬಿಸಿಕೊಂಡ್ಹೋಯ್ತವ್ವ 1 ಉಟ್ಟದಟ್ಟಬಿಡಿಸೊಗಿತವ್ವ ಬಂದ ಎರವು ಮಾಡಿತವ್ವ ವೊಷ್ಟು ಬಿಡಿಸಿ ಎನ್ನ ಗಟ್ಟ್ಯಪ್ಪಿ ತಿರುಗದ ಬೆಟ್ಟಕ್ಕೆ ಎಳಕೊಂಡ್ಹೋಯ್ತವ್ವ 2 ಭೋರಿಟ್ಟತ್ತರು ಎನ್ನ ಬಳಗವ್ವ ಸಮೀ ಪಾರನು ಬರಗೊಡಲಿಲ್ಲವ್ವ ಸಾರಸೌಖ್ಯಕ್ಕಾಧಾರ ಶ್ರೀರಾಮಪಾದ ಸೇರಿಸಾನಂದಪದವೇರಿಸಿತವ್ವ 3
--------------
ರಾಮದಾಸರು
ಮುದದಿ ನಕ್ರನ ಕೊಂದು ಸಲಹಿದ ಸದುಭಕುತರ ಬಂಧು 1 ನಾರಿಯು ತನ್ನ ಕರೆದಾ ಮಾತ್ರದಿ ಸೀರೆಯ ಮಳೆಗರೆದಾ ಕ್ರೂರ ಖಳರ ಮುರಿದಾ ಪಾಂಡವ- ರಾರಣ್ಯದಿ ಪೊರೆದಾ ನಾರಗೆ ಅಜಮಿಳ ನಾರಾಯಣನೆನೆ ಪಾರುಗಾಣಿಸಿದಪಾರಗುಣನಿಧಿಯಾ 2 ಒಂದು ಬಾರಿಗೆ ಶ್ರೀಶನ ನೆನೆದರೆ ದುರಿತ ನಾಶಾ ಬೆಂದದ್ದು ಬಹುಪಾಶಾ ಅವಗಿ- ನ್ನೆಂದಿಗಿಲ್ಲವೊ ಕ್ಲೇಶಾ ತಂದೆ ಕದರಂಡಲಗಿ ಹನುಮಯ್ಯನೊಡೆಯ ಗೋ- ವಿಂದನ ನೆನೆದವರೆಂದಿಗು ಧನ್ಯರು 3
--------------
ಕದರುಂಡಲಗಿ ಹನುಮಯ್ಯ
ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1 ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2 ಕರ ವಿಡಿದಿಂದುದ್ಫಸದಿಹದು ಬಾಹಳರದು 3
--------------
ರುಕ್ಮಾಂಗದರು
ಮುಂದೆ ನಡಿ ಬೇಗ ಬೇಗನೆ ಪ ಮುಂದೆ ನಡಿ ಬೇಗ ಬೇಗನೆ ನಂದತನಯ ನಾರಿ ಪತಸಿಇಂದು ನಿನ್ನ ಬೇಡಿಕೊಂಬೆ ಸುಂದರಾಂಗ ಸಣ್ಣ ಕೂಸೆ ಅ.ಪ ಕಾಲಿನೊಳಗೆ ರುಳಿಯ ಗೆಜ್ಜೆ ಬಹಳ ಭಾರವಾಯಿತೇನೋನೀಲವಾಲೆಗಳನು ಮುಖದ ಮೇಲೆ ಮಾಡಿಕೊಂಡು ನಡೆಯೊ 1 ಗೋಪಿ ಮುತ್ತಿನಂಥ ಮುದ್ದು ಕೂಸ2 ಮೆಲ್ಲಮೆಲ್ಲನ್ಹೀಗೆ ಪೋದರೆ ಇಲ್ಲೆ ಕತ್ತಲಾಯಿತಯ್ಯಗೊಲ್ಲರ್ಹುಡುಗ ಇಂದಿರೇಶ ಇಲ್ಲೆ ನಿಲ್ಲೊ ಎತ್ತಿಕೊಂಬೆ 3
--------------
ಇಂದಿರೇಶರು
ಮುಂದೆನಗೆ ಗತಿಯೇನೋ ಇಂದಿರೇಶಾ ತಂದೆ ನೀನೆಂದೆನುತ ತಪ್ಪನೊಪ್ಪಿಸುವೇ ಪ ಶ್ರೀಕಾಂತನೇ ನಿನಗೆ ಅಭಿಷೇಕ ಮಾಡದೆಯೆ ನಾ ಕಂಠಪರಿಯಂತ ಕುಡಿದೆನೊ ಹಾಲ ಬೇಕೆಂದು ಹರಿವಾಸರಂಗಳಾಚರಿಸದೆಯೆ ಸಾಕೆಂಬವೊಲು ಸುಖವ ಸೂರೆಗೊಂಡೇ 1 ಅತಿಶಯದಿ ನಾನಿನ್ನ ಪೂಜೆಯನು ಮಾಡದೆಯೆ ಸತಿಸುತರೆ ಸರ್ವಸ್ವವೆಂದಿರ್ದೆನೋ ಹಿತಮಿತ್ರ ಬಾಂಧವರೊಳತಿ ವಂಚನೆಯಮಾಡಿ ಮತಿವಿಕಳನಾದೆನೋ ಪತಿತಪಾವನನೇ 2 ಕಲ್ಯಾಣ ಸಮಯದಲಿ ಕಲಹಗಳ ಹೂಡುತ್ತ ಉಲ್ಲಪದಿ ನಾಕುಳಿತು ನೋಡುತಿದ್ದೆ ಸಲ್ಲಲಿತ ವಾಕ್ಯಗಳನಾಡದೆಯೆ ಸರ್ವತ್ರ ಖುಲ್ಲುಮಾತುಗಳಾಡಿ ನೋಯಿಸಿದೆ ನರರ 3 ತಾರೆಂಬುದಕೆನಾನು ತೌರುಮನೆಯಾಗಿರುವೆ ಪಾರಮಾರ್ಥಕವಾಗಿ ಕೊಡುವುದರಿಯೆ ವೀರವೈಷ್ಣವರಲ್ಲಿ ವಂದಿಸದೆ ದೂಷಿಸುತ ಘೋರಪಾತಕಿಯಾಗಿ ಇರುವೆಯೀ ಜಗದಿ 4 ನರ್ಮದಾನದಿ ಸ್ನಾನ ನಿರ್ಮಲೋದಕಪಾನ ಧರ್ಮ ಮರ್ಮಗಳರಿತು ಮಾಡುವುದು ದಾನ ಪೆರ್ಮೆಯಂಶ್ರೀಹರಿಯ ಧ್ಯಾನ ನಿದಾನ ನೆಮ್ಮದಿಯ ಮಾರ್ಗದಿಂ ಪೊರೆ ನಾನು ದೀನ 5 ನಿತ್ಯ ಜೀವಿಸುವುದನ್ನು ಕಾಡದೆಯೆ ಕಡೆಯಲ್ಲಿ ಉಸಿರುಬಿಡುವುದನು ನೋಡುತ್ತ ಗುರುತರದ ಶ್ರೀಪತಿಯ ಪದಯುಗಕೆ ಗಾಢದಿಂ ಮುಡಿಯಿಕ್ಕಿ ಪಿಡಿವಂತೆ ಮಾಡು 6 ನೀನು ಒಲಿಯುವ ಪರಿಯದಾವುದನು ಮಾಡಿಲ್ಲ ಏನು ಮಾಡಲು ಎನಗೆ ಮನಸು ಬರದು ದೀನ ಪಾಲಕ ನಮ್ಮ ಹೆಜ್ಜಾಜಿ ಕೇಶವನೆ ಸಾನುರಾಗದಿ ನಿನ್ನ ಧ್ಯಾನಿಪುದ ನೀಡೈ7
--------------
ಶಾಮಶರ್ಮರು
ಮುದ್ದು ಕೃಷ್ಣ ಮುನಿ ಶರಣ ಉದ್ಧರಿಸು ನೀ ಉಡುಪಿ ರನ್ನ ಪ. ಮುದ್ದೆ ಬೆಣ್ಣೆ ಕೊಡುವೆ ಚೆನ್ನ ಮಧ್ವಮುನಿಯ ಮನ ಪ್ರಸನ್ನ ಅ.ಪ. ಲೀಲೆಯಿಂದ ಕೊಳಲನೂದಿ ಕಾಳಿಮಡುವ ಕಲಕಿ ನಿಂದ ಲೀಲೆ ಕೇಳೆ ಮನಕಾನಂದ 1 ನಿನ್ನ ಮಹಿಮೆ ಅಧಿಕವಾಗಿ ಎನ್ನ ಮನಕೆ ಹರುಷವಾಗಿ ಪನ್ನಗೇಂದ್ರಶಯನ ಸ್ವಾಮಿ ನಿನ್ನ ರೂಪ ತೋರೊ ಪ್ರೇಮಿ 2 ಪೊರೆ ಗೋಪಾಲಕೃಷ್ಣವಿಠ್ಠಲ ನಿರುತ ನಿನ್ನ ಚರಣ ಕಮಲ ಮೊರೆಯ ಹೊಕ್ಕೆ ಮರೆಯದೆನ್ನ ಕರುಣೆಯಿಂದ ಕಾಯೊ ಘನ್ನ 3
--------------
ಅಂಬಾಬಾಯಿ
ಮುದ್ದು ಕೃಷ್ಣನ್ನ ನೋಡ ಬನ್ನಿರೆಲ್ಲ ನಮ್ಮ ಸಿರಿ ಭೂಮಿ ನಲ್ಲ ಪ. ಪಂಚ ಪಂಚ ಉಷಃ ಕಾಲದಲಿ ಎದ್ದು ಯತಿವರರು ಪಂಚಬಾಣನ ಪಿತಗೆ ನಿರ್ಮಾಲ್ಯ ತೆಗೆದು ಪಂಚ ಗಂಗೋದಕದಿ ಸ್ನಾನಗೈಸುತ ಹರಿಗೆ ಪಂಚವಿಧ ಪಕ್ವಾನ್ನ ಉಣಿಸಿ ದಣಿಸಿಹರು 1 ಕಾಲ್ಕಡಗ ಗೆಜ್ಜೆ ಪೈಜಣ ಘಲ್ಲು ಘಲ್ಲೆನುತ ಮೇಲೆ ಉಡುದಾರ ಉಡುಗೆಜ್ಜೆ ನಡುವಿನಲಿ ಬಾಲಕೃಷ್ಣಗೆ ಅಸಲಿ ಹುಲಿ ಉಗುರು ಹೊನ್ನು ಸರ ತೋಳ ಬಾಪುರಿಗಡಗ ಉಂಗುರಗಳ್ಹೊಳೆಯೆ 2 ಮುದ್ದು ಮುಖಕೊಂದು ಮೂಗುತಿ ಕರ್ಣಕುಂಡಲವು ಕದ್ದು ಬೆಣ್ಣೆಯನು ಕಡಗೋಲ ಪಿಡಿದಿಹನು ತಿದ್ದಿದ ತಿಲುಕ ಮುಂಗುರುಳೂ ಮುತ್ತಿನ ಸಾಲು ಶುದ್ಧ ಚಿನ್ನದ ರತ್ನ ಮಕುಟ ಶಿರದಲ್ಲಿ 3 ರಮ್ಯವಾಗಿಪ್ಪ ವೈಕುಂಠಪುರಿಯನೆ ಬಿಟ್ಟು ಜನ್ಮಸ್ಥಳವಾದ ಗೋಕುಲವ ತ್ಯಜಿಸಿ ತಮ್ಮವರಿಗಾಗಿ ಕಟ್ಟಿದ ದ್ವಾರಕಿಯ ಕಳೆದು ಬ್ರಹ್ಮಾದಿ ವಂದ್ಯ ತಾನಿಲ್ಲಿ ನೆಲೆಸಿಹನು 4 ಅಪಾರ ಮಹಿಮನು ಆನಂದ ತೀರ್ಥರಿಗೊಲಿದು ಪಾಪಿ ಜನರುಗಳ ಉದ್ಧರಿಸಬೇಕೆಂದು ಶ್ರೀಪತಿಯು ತಾ ಪುಟ್ಟ ರೂಪಧಾರಕನಾಗಿ ಗೋಪಾಲಕೃಷ್ಣವಿಠ್ಠಲನಿಲ್ಲಿ ನಿಂತ 5
--------------
ಅಂಬಾಬಾಯಿ
ಮುದ್ದು ಕೃಷ್ಣಯ್ಯನ ನೋಡಾನ ಬನ್ನಿ ಪ ಕೃಷ್ಣಗೆ ಪೂಜೆಯ ಮಾಡಾನ ಬನ್ನಿ ಅ.ಪ ಚಿನ್ನದ ತೊಟ್ಟಿಲಲ್ಲಿ ಚೆನ್ನಾಗಿ ಕುಂತವ್ನೆ ಚೆನ್ನ ಚೆಲುವನಕ್ಕೋ ನಗುತವ್ನೇ ಕನ್ನೆ ರಾಧಮ್ಮಗೆ ಸನ್ನೆಯ ಮಾಡುತವ್ನೆ ಬನ್ನಿ ಬನ್ನಿ ಎಂದು ಕರಿತವ್ನೆ 1 ಹುಬ್ಬಹಾರಿಸ್ತವ್ನೆ ಮಬ್ಬ ತೋರಿಸ್ತವ್ನೆ ಅಬ್ಬಬ್ಬ ಇವನಾಟ ಬಲ್ ತಮಾಸೆ ಒಬ್ಬಿಟ್ಟು ಬೇಕಂತ ಕೈಲೇ ತೋರಿಸ್ತಾನೆ ಅಬ್ಬ ಇವ ಏಳೋದು ಒಂಥರ ಬಾಸೆ 2 ಎಂಥ ಮುದ್ದಿನ ಮೊಗ ಚೆಂದುಳ್ಳಿ ಚೆಲುವ ಇಂಥವ್ನ ನೀವೆಲ್ಲೂ ಕಂಡಿಲ್ಲ ಬನ್ರೋ ನಿಂತು ನೋಡಬೇಕಿವಗೆ ಆಲು ಮೊಸರು ಬೆಣ್ಣೆ ಹಣ್ ತುಂಬಿದ ಗಂಗಾಳ ತನ್ರೋ 3 ಕಿನ್ನರ ಗೆಜ್ಜೆ ಕೈಗೆ ಔಜುಬಂದಿ ತೊಟ್ಟವ್ನೆ ಕಣ್ಗೆ ಕಪ್ಪಾ ಹಚ್ಚಿ ನವಿಲ್ಗರಿ ತಲ್ಗಿಟ್ಟಿ ಹಣೆ ಉದ್ದಾದ ತಿಲಕ ಇಟ್ಟವ್ನೇ 4 ರಾಮ್ನೂ ನಾನೆಂತಾನೇ ಭೀಮ್ನೂ ನಾನೆಂತಾನೇ ಕಾಮ್ನಪ್ಪನೂ ನಾನೆ ನೋಡಂತಾನೆ ನಿಮ್ಮೂರ ದೇವ್ರಾಣೆ ನಾನೆ ಮಾಂಗಿರಿರಂಗ ನಿಮ್ನ ಕಾಯೋಕ್ಬಂದೆ ಅಂತಾನೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುದ್ದು ತಾರೋ ರಂಗಾ ಮುದ್ದು ತಾರೋ ಕೃಷ್ಣಾ ಸಿದ್ಧ ವೇದಾ ಗಮಾ ಭೇದ್ಯ ಮೋಹನ್ನಾ ಪ ಕಾಣಲಿಕ್ಕೆ ಹಸಿವೆ ತೃಷೆಗಳೇ ಮರೆವದು ಏಣಾಂಕ ಬಿಂಬ ಮೊದಾ ಬಾಯಿಂದಾ 1 ಕರ್ಪುರವಾ ಕರಡಿಗಿಯಂತೆ ಹೊಳೆವುತಾ ವಪ್ಪುತಿಹ ಚಲ್ವ ಪುಟ್ಟ ಬಾಯಿಂದಾ2 ಅಮ್ಮ ತಾರಮ್ಮ ನಾನುಂಡೆನೆಂದು ಕೈಯ ಬೀಸಿ ಝಮ್ಮನೇ ತೊಡಲು ನುಡಿ ಬಾಯಿಂದಾ 3 ತಪ್ಪ ಹೆಜ್ಜೆಯನಿಟ್ಟು ಘಲಘಲನೆ ನಡೆವುತ ಧಪ್ಪನೆ ಬೀಳುತ್ತಾ ಬಿರಿವ ಬಾಯಿಂದಾ4 ಹಣೆಯ ಅರಳೆಲೆ ಮಾಗಾಯಿಗಳಲ್ಲಾ ಆಡಿಸುತಾ ಕುಣಿದು ಬೆಣ್ಣೆಯ ಬೇಡುವ ಬಾಯಿಂದಾ5 ಕೋರಳಿಗೆ ಅಂಟಹಾಕಿ ಕೈಗಳಿಂದಾ ಬಿಗಿದಪ್ಪಿ ಗುರು ಮಹಿಪತಿ ನಂದನ ಜೀವನ್ನಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮುದ್ದು ಬಾಲಕ ತವನಿದ್ದೆ ಬಂದಿದೆ ಕಣ್ಣುಎದ್ದು ಮುಚ್ಚುತಲಿಹುದು ಪದ್ಮ ಪತ್ರಾಕ್ಷ ಪ ಬಾರೋ ಮಲಗು ಎನ್ನ ಏರುಪೊಟ್ಟೆಯ ಮೇಲೆಸಾರಸಾಕ್ಷನೆ ಚುಕ್ಕಭೂರಿ ತಟ್ಟುವೆನು 1 ಕರಗಳ ಹೆಗಲಲ್ಲಿ ಚರಣಗಳನೆ ಚಾಚುಸರಳ ಮಲಗೋ ಪಾದಾಭರಣ ಒತ್ತುವುದುಕಂಠಾಭರಣ ಒತ್ತುವುದು 2 ಕೇಶ ಬರುವುದೆನ್ನ ಆಶದೊಳಗೆಇಂದಿರೇಶ ಟೊಪ್ಪಿಗೆ ಕಟ್ಟು ಕೂಸು ಮಸ್ತಕದಿ 3
--------------
ಇಂದಿರೇಶರು
ಮುದ್ದು ಮುಖದ ಲಕುಮಿ ಎನಗೆ ಶುದ್ಧ ಜ್ಞಾನವÀ ನೀಡೆ ಪ. ಬಿದ್ದಿಹೆ ನಿನ್ನ ಪದದಲಿ ನಿರುತ ಮದ್ಬಿಂಬನ ತೋರೆ ಅ.ಪ. ಹರಿಸರ್ವೋತ್ತಮ ಸುರರಕ್ಷಕನೆಂಬ ಖರೆಯ ಜ್ಞಾನವ ನೀಡೆ ಕರಕರೆಗೊಳಿಸದೆ ದುರ್ವಿಷಯದಲೆನ್ನ ಹರಿಯ ಧ್ಯಾನವನೀಡೆ 1 ನಗೆಮೊಗ ಚಲುವೆ ಖಗವಾಹನ ಪ್ರಿಯೆ ಜಗದೊಡೆಯನ ತೋರೆ ನಿತ್ಯ ಬಗೆ ಬಗೆ ಲೀಲೆಯ ಸುಗುಣವಂತೆ ತಿಳಿಸೆ 2 ಸೃಷ್ಟಿಕರ್ತಗೆ ಪಟ್ಟದ ನಾರಿಯೆ ದೃಷ್ಟ ಇಂದ್ರಿಯವಳಿಯೆ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲ ಸತಿಯೆ 3
--------------
ಅಂಬಾಬಾಯಿ
ಮುದ್ದು ಮೋಹನ ಗುರುಗಳಂಘ್ರಿ | ಶ್ರದ್ಧಾ ಭಕುತೀಲಿಬುದ್ಧಿ ಪೂರ್ವಕ ಭಜಿಪ ಜನರ | ನ್ನುದ್ಧರೀಸುವಾ ಪ ಕರ್ಮ ನಿಷ್ಠಾತೃಸುಮ್ಮನಸ ವಿಜಯಗುರವ | ನಮ್ಮಿತುತಿಸುವ 1 ತೀರ್ಥಕ್ಷೇತ್ರ ಚರಿಸೂತ | ಮೂರ್ತಿದರ್ಶನಾಸಾರ್ಥಕವ ಮಾಡಿಕೊಂಡ | ತೀರ್ಥಪಾವನಾ |ಕಾರ್ತಸ್ವರೇತ್ಯಾದಿವಿತ್ತ | ಪಾರ್ಥಿವಸಮಾಶಾಸ್ತ್ರ ಪ್ರಾಕೃತಾದಿ ತಿಳಿಪ | ಹರಿ ಸರ್ವೋತ್ತಮ 2 ಶ್ರೀ ವರರಿಂದುಪದಿಷ್ಟ | ವಿಠಲ ಪ್ರತಿಷ್ಟಓ ವಿಸಾಧೀಸಲು ಹರಿಯೊಳ್ | ಪ್ರಾಯೋಪವಿಷ್ಟ |ಭಾವಿ ಬ್ರಹ್ಮನಲ್ಲಿ ಗುರು ಗೋವಿಂದ ವಿಠಲನಭಾವ ಅಷ್ಟ ಕುಸುಮದಿ | ಸೇವಿಸೀದನ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನ ದಾಸ | ತಿದ್ದಿಯನ್ನಯ ದೋಷಉದ್ಧರಿಸೊ ಬುಧತೋಷ | ನಮಿಪೆ ನಿನ್ನನಿಶಾ ಪ ದಾಸ ದೀಕ್ಷೆಯ ವಹಿಸಿ | ಕ್ಲೇಶಗಳ ಬಹುದಹಿಸಿದೇಶ ದೇಶವ ಚರಿಸಿ | ಹರಿ ಪ್ರತಿಮೆಗಳ ಭಜಿಸಿ | ಮೀಸಲೆನಿಸಿದ ಮತವ | ವ್ಯಾಸರಿಗೆ ಸಮ್ಮತವದಾಸರಾಯರ ಮಾತ | ಬೀರಿರುವ ಖ್ಯಾತಾ1 ಕರಿಗಿರಿಯ ದುರ್ಗದಲಿ | ವರ ರಥೋತ್ಸವ ಸಮಯನರಸಿಪುರ ಶೇಷಪ್ಪ | ವರ ಕುವರ ನಾಗಾಖ್ಯಗೆಕರುಣಿಸುತ ಲಂಕಿತವ | ಪರಿಸರನ ಮತರಸವಒರೆದು ಸಲಹಿದೆ ಗುರುವೆ | ನೀ ಪರಮ ಗುರುವೇ 2 ಸುಜನ | ಆರ್ತರುದ್ಧರಣಾ 3 ತಂಬ್ರೂಹಿ ಎನುವಂಥ | ತಂಬೂರಿ ನೀ ಕೊಡುತತುಂಬಿ ದ್ವ್ಯೊಭವದಿಂದ | ಪೊರೆದೆ ಮುದದಿಂದಾ |ಉಂಬುಡುವುದೂ ಹರಿಗೆ | ಕೊಂಬ ಸರ್ವವ ಹರಿಗೆಎಂಬ ಜ್ಞಾನವನಿತ್ತು | ಸಂಭ್ರಮವ ಬಿತ್ತೂ 4 ಅಮಿತ ಗುಣ ಪೂರ್ಣಾ |ಸಿರಿಪತಿ ಶ್ರೀಗುರೂ | ಗೋವಿಂದ ವಿಠ್ಠಲನಉರುತರದಿ ಭಜಿಪಂಥ | ಕರುಣಿಸೆಲೊ ಪಂಥ 5
--------------
ಗುರುಗೋವಿಂದವಿಠಲರು
ಮುದ್ದು ಮೋಹನ ದಾಸರೇ ನಿಮ್ಮ | ಶುದ್ಧ ಪಾದವ ನಂಬಿದೇತಿದ್ದಿಯೆನ್ನಯನಾದ್ಯ ವಿದ್ಯೆಯ | ಬುದ್ಧಿ ನಿಲಿಸಿರಿ ಹರಿಯಲೀ ಪ ನಡುಮನೆ ದ್ವಿಜನೆಂಬನಾ | ವಡ್ಡಲೊಳು ಉದಿಸೀದನಾ |ಆಡ್ಯಮತವನುಕರಿಸಿದಾ | ದೊಡ್ಡ ಬಳ್ಳಾಪುರದಲೀ1 ವಿಕೃತಿ ಸಂವತ್ಸರದಲೀ | ಪ್ರಕೃತ ಜನ್ಮವ ಪಡೆದನಾಸುಕೃತ ಪೊಗಳುವ ಜನರ ದು | ಷ್ಕøತವ ನೀ ಪರಿಹರಿಸುವೀ 2 ಚಿಪ್ಪಗಿರಿ ಸುಕ್ಷೇತ್ರದೀ | ಗೊಪ್ಪ ಶ್ರೀ ಅಂಕಿತವನೂ ಅಪ್ಪ ಶ್ರೀ ವರರಿಂದಲೀ | ವಪ್ಪಿ ನೀ ಕೈಗೊಂಡೆಯೋ 3 ಮೂರೊಂದು ಸಲ ಶ್ರೀಕಾಶಿಗೇ | ಭೂರಿಸಲ ಶ್ರೀ ಉಡುಪಿಗೇಸಾರಿ ವೆಂಕಟ ಪತಿಯನೂ | ಬಾರಿ ಬಾರಿಗೆ ನೋಡಿದೇ4 ದಾಸ ಪೀಳಿಗೆ ಬೆಳೆಸಲೂ | ಶೇಷನಾಮಕ ದಿವಿಜಗೇಭಾಸಿಸುವ ಅಂಕಿತವನಿತ್ತೂ | ಪೋಷಿಸಿದೆ ಸದ್ವೈಷ್ಣವತತ್ವ 5 ಸುಜನ ಜನ ಸಂಸೇವಿಸೆ | ವಿಜಯ ವಿಠಲನ ಸ್ಥಾಪಿಸೇಭಜನೆ ಗೈಯುತ ಮೆರೆದೆಯೊ | ನಿಜಪುರದಿ ನೀ ನಿಲ್ಲುತಾ 6 ಸಿರಿಯಧರಿಸಿ ಮೆರೆಯುವ ಗುರು | ಗೋವಿಂದ ವಿಠಲನ ಭಜಿಸುವಾಪರಮ ಗುರುಗಳೆ ನಿಮ್ಮ ಚರಣವ | ಪರಿಪರೀಯಲಿ ಪೂಜಿಪೆ 7
--------------
ಗುರುಗೋವಿಂದವಿಠಲರು
ಮುದ್ದು ಮೋಹನ ರಾಯಾ | ಸುಜನರಉದ್ಧರಿಸಿದ್ಯೊ ಜೀಯಾ | ಪ ಶ್ರದ್ಧಾಳುತನದಲಿ | ಬದ್ಧ ದೀಕ್ಷಿತನೆಮಧ್ವಮತವು ಎನೆ | ದುಗ್ಧಾಬ್ದಿ ಚಂದಿರ ಅ.ಪ. ಚಿಪ್ಪಗಿರಿ ಸುಕ್ಷೇತ್ರಾ | ದೊಳಗೆಅಪ್ಪ ಶ್ರೀ ವರರಿಂದಾ |ಗೊಪ್ಪ ಸದುಪ ದೇಶ | ಅಪ್ಪುತದಾಸನೆನೆಪ್ಪು ಕೊಡುತ ತಿ | ಮ್ಮಪ್ಪನೊಳಗೆಮನ 1 ತೀರ್ಥಕ್ಷೇತ್ರ ಚರಿಸೆ | ದೇಹವುಸಾರ್ಥಕಾಯಿತು ಎನಿಸೀ |ಯಾತ್ರೆ ಮಾಡಿದೆ ಸ | ತ್ಪಾತ್ರರ ಸೇರುತಗಾತ್ರ ಗೈಸಿದೆ ಪಾವಿ | ತ್ರ್ಯ ಬಾಹ್ಯಾಂತರ 2 ಗುರುಗೋವಿಂದ ವಿಠಲನೇ | ಪರತತ್ವಸರ್ವೋತ್ತಮನವನೇ |ಒರೆಯುತ ಸುಜನರ | ಪರಿಪಾಲಿಸಿದಿಯೊವರಬಳ್ಳಾಪುರದಲಿ | ವಿಠಲನ ಸನಿಯ 3
--------------
ಗುರುಗೋವಿಂದವಿಠಲರು