ಒಟ್ಟು 9830 ಕಡೆಗಳಲ್ಲಿ , 132 ದಾಸರು , 5659 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ಸಜ್ಜನರ ಬಂಧು ಪ ಕರಿಮರಿಬಳಗ ಬಂದೊದಗಿದರೇನು ಪರಿಪರಿ ಕ್ಲೇಶವ ಬಿಡಿಸಲಿಲ್ಲ ಹರಿ ನೀನೆ ಗತಿಯೆಂದರೆ ಆ ಕ್ಷಣದಲ್ಲಿ ಕರಿಬಂಧನ ಪರಿಹರಿಸಿದೆ ಕೃಷ್ಣ 1 ಪಿತರು ಮಾತೆಯರಿದ್ದರೇನು ಸುತರಾಪತ್ತಿಗೊದಗಲಿಲ್ಲ ಗತಿ ನೀನೆಂದರೆ ಧ್ರುವ ಪ್ರಹ್ಲಾದರಿ- ಗ್ಹಿತ ಮಾಡಿದೆ ಶ್ರೀಪತಿ ಪರಮಾತ್ಮ 2 ವಲ್ಲಭರೈವರಿದ್ದರೇನು ವಸನ ದ್ರೌಪದಿಗುಡಿಸಲಿಲ್ಲ ಫುಲ್ಲಾಕ್ಷನೆ ಗತಿಯೆಂದರೆ ನೀ ತಡ- ವಿಲ್ಲದಲಕ್ಷಯ ನೀಡಿದೆ ದೊರೆಯೆ 3 ಮನೆಧನ ಧಾನ್ಯಗಳಿದ್ದರು ಧನಂಜಯ- ನ್ವನವಾಸಗಳನು ಬಿಡಿಸಲಿಲ್ಲ ವನಜಾಕ್ಷನೆ ವಾರಣಾವತಿ ದೊರೆತನ ವಿನಯದಿ ಕೊಟ್ಟಿದ್ದಿಂದಿರಾಪತಿಯೆ 4 ಭವ ಘೋರ ದುರಿತ ಯಮಬಾಧೆಗಳ ತಪ್ಪಿಸುವೋರಿಲ್ಲ ಶ್ರೀರಮಣನೆ ಭೀಮೇಶಕೃಷ್ಣನೆಂದು ಸಾರುವರಿಗೆ ಕರುಣಾವಾರಿಧಿ ಹರಿಯೆ 5
--------------
ಹರಪನಹಳ್ಳಿಭೀಮವ್ವ
ನೀನೆಂನ ಕಾಯಬೇಕೊ ಕೇಶವನೇ ನೀನೆಂನ ಸಲಹಬೇಕು ಪ ನೀನೆಂನ ಕಾಯದಿದ್ದರೆ ಕಾವರಾರಯ್ಯಾ ನಾನಂಬಿ ಮರೆಹೊಕ್ಕೆ ಶರಣರಕ್ಷಕನೇ ಅ.ಪ. ಮುಂದೆ ನೋಡಿದರೆ ಹೆಬ್ಬಾವು ನುಂಗುತಲಿದೆ ಬಂದು ಬಾಂಧವರೆಲ್ಲ ತಲೆಯ ಮೇಲೆರಿವರು ಬಂದೆನ್ನ ಕಾಯ್ವರನೊಬ್ಬ ಕಾಣೆ 1 ನಂಬುತ್ತ ಗಿಡವೇರೆ ಗಿಡವು ಬಾಗುತಲಿದೆ ನಂಬಿದ ಹರಿಗೋಲು ಮುಳುಗುತ್ತಲಿದೆಯೋ ತುಂಬಿದ ಪಟ್ಟಣ ಸೂರೆಯಾಗುತಲಿದೆ ಕಂಬನಿ ನೀಗುವ ಪ್ರಾಣೆಯಕಾಣೆ2 ಪಶುಗಳ ಕಾಯ್ದೆ ನೀ ಬಾಲ ಕ್ರೀಡೆಯೊಳಾಗ ವಿಷದ ಕಾಳಿಂಗನ ಸೊಕ್ಕನು ಮುರಿದೇ ದಶರೂಪಗಳ ತಾಳ್ದು ಸುಜನರ ಪೊರೆದಂತೆ ಶಿಶುವನು ರಕ್ಷಿಸೈ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇ ದಯಾಳು ದೊರೆ ಸದ್ಗುರುನಾಥನೀನೇ ದಯಾಳು ದೊರೆ ಪ ಸತಿಸುತ ಮಿತ್ರರ ನೀನೇ ಮರೆಸಿದೆಮತಿಯನೆ ತುಂಬಿದೆ ಸದ್ಗುರುನಾಥ1 ನನ್ನನು ವೈದೆ ನಿನ್ನನು ಮಾಡಿದೆನನ್ನತನವ ಕಳೆದೆ ಸದ್ಗುರುನಾಥ 2 ಭವ ನಿನ್ನನು ಸ್ಮರಿಸೆನೀ ಚಿದಾನಂದರಸೇ ಸದ್ಗುರುನಾಥ 3
--------------
ಚಿದಾನಂದ ಅವಧೂತರು
ನೀನೇ ನಿನ್ನ ಮರೆದಿಹುದೇನು ಮನವೇ | ಸುಜ್ಞಾನದಿಂದ ನಿಜವನೀ ನರಿಯಲಿಲ್ಲವೇ ಪ ಶ್ವಾನ ಸೂಕರಾದಿ ಅತಿ ಹೀನ ಯೋನಿಯಲಿ ಸುಖದೊಳು | ನಾನಾ ಪರಿಯಲಿ ಬಾಹುದೇನು ಅನುವೇ 1 ಹರಿವ ಮೃಗಜಲಕ ಬೆಂಬತ್ತಿ ಪೋಪಾ ಹರಿಣನಂತೆ | ಹರಿದು ವಿಷಯ ಕೂಡಾ ಕೆಡುದೇನು ಗುಣವೇ 2 ನಿನ್ನ ಬಯಕೆಯಂತಾದಡೆ ಮನ್ನಿಸುವ ಅಲ್ಲದಡೆ | ಘನ್ನ ಚಿಂತೆಯೊಳು ಬೀಳುತಿಹುದೇನು ಸುಖವೇ 4 ನೆನೆದು ತರಿಸು ಮಹಿಪತಿ ಚರಣಾ ಚಿನ್ನ ಕೃಷ್ಣ ನಾ | ತನುವಿನೊಳಗಾಡುತಿಹ ನಿಜ ಮನವೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೇ ಸಕಲವೆನಗೆ ಶ್ರೀರಾಮಚಂದ್ರ ನೀನೇ ದೊರೆಯರಸನೊ ಪ ಶ್ರೀನಿಧಿಯೆ ನಿನ್ನವರುಸತತ ಸಾನುರಾಗದ ಬಳಗವಹುದೈ ದೀನಜನಮಂದಾರ ನೇಹಂ ಶ್ರೀನಿಕೇತನ ಸತ್ಯಸಾರ ಅ.ಪ ತಾಮತಿಯು ಶ್ರೀ ಮನೋಹರ ಸಹಜರೆಲ್ಲ ಪ್ರೇಮ ಪಂಚ ರಾಮರೂಪವ ತೋರ್ಪನಾಡಿಯು 1 ಧನ್ಯ ಶರೀರವು ಮಾನ್ಯಗೆ ತಾಮಸದ ಸರೃಹವೂ ಕಣ್ಣನಿದ್ರೆಯು ಯೋಗಮುದ್ರೆಯು ಚಿಣ್ಣನ ಸಂಚರಂಗಳು ಸ್ವಾಮಿ ನಿನಗೆ ಪ್ರದಕ್ಷಿಣೆ 2 ಬಾಲನ ಮಾತುಗಳು ವೇದೊಕ್ತ ಸಶೀಲನ ಸ್ತೋತ್ರಗಳು ಕಾಲಂಕಾಲಗಳಲ್ಲಿ ಗೈಯುವ ಕಾರ್ಯಗಳು ಪರಮಾತ್ಮ ಸೇವೆಯು ಶ್ರೀಲತಾಂಗಿಯ ಲೋಲ ಧ್ಯಾನಿಪೆ ಪಾಲಿಸೈ ಜಾಜೀಶ ಕೇಶವ3
--------------
ಶಾಮಶರ್ಮರು
ನೀನೇನ ಮಾಡಲಾಪಿಯೋ ಲಕುಮೀಶಾ | ನಾನೀಗ ಪಡೆದದ್ದು ಉಣದಲೆ ಪೋಗುವದೆ | ಪ ಲೋಕದೊಳಗೆ ನಿನ್ನ ಕೊಂಡಾಡಿ ಪ್ರತಿದಿನ ಏಕ ಭಕುತಿಲಿ ಸರ್ವೋತ್ತಮನೆಂದು ಏಕಾಂತ ಭಜಿಪÀ ಮನುಜಗಾದರು ಬರೆದ ವಾಕು ತಪ್ಪುವದೇನೋ ಅಜನು ನಿರ್ನೈಸಿದ1 ಮುಂದೆ ಕೊಡುವ ಫಲಕೆ ಕರ್ತ ನೀನಲ್ಲದೆ ಹಿಂದಣಿಂದಲಿ ಬರುವ ಕಾಲಾಖ್ಯಕೆ ಒಂದು ಬಿಂದು ಮಾತ್ರ ತೊಲಗಿಪ ನಡತಿ ಕಾಣೆ ಅಂದಲ್ಲಿ ಏನು ಫಲ ಎನ್ನ ಕರ್ಮವಷ್ಟೇ 2 ಇದ್ದದೊಂದು ಮರಿ ಅಡಗಾಣಿಸಿ ಬಂದು ಹದ್ದು ತಾ ವೈಯಲು ಆ ಕುರುಬ ಯೆಲ್ಲಿ ಇದ್ದರೇನು ಭಯ ವಿಜಯವಿಠ್ಠಲ ನಿನ್ನ ಪೊದ್ದಿದವಗಾದರು ಅನುಭವಿಸದೆ ಬಿಡದು3
--------------
ವಿಜಯದಾಸ
ನೀನೇನು ಮಾಡಲಾಪೆನಾನು ಮುನ್ನ ಜನ್ಮ ಪಡೆದಲ್ಲದೆ ರಂಗ ಪ ಯೋನಿ ಮುಖದಲಿ ಬಾಹಹೀನತ್ವವನು ನೀನು ಕಳೆಯಲಾಪೆಯನಾನು ನನ್ನದು ಎಂಬ ಅಹಂಕಾರವಿರೆ ನಿನ್ನಧ್ಯಾನಿಸಲು ಬುದ್ಧಿಯ ಕೊಡಲಾಪೆಯ 1 ಸಂಚಿತವಾಗಿರುವ ಪ್ರಾರಬ್ಧದೊಳಗೊಂದುಕಿಂಚಿತಾದರೂ ನೀನು ಕಳೆಯಲಾಪೆಯಪಂಚೇಂದ್ರಿಯಂಗಳು ದೆಸೆದೆಸೆಗೆ ಎಳೆದಾಗವಂಚನೆ ಇಲ್ಲದೆ ನೀನಡ್ಡ ಬರಲಾಪೆಯ2 ಸರಸಿಜೋದ್ಭವಗೆ ಬುದ್ಧಿಯ ಪೇಳಿ ಪಣೆಯೊಳುಬರೆದ ಬರೆಹವನು ನೀನು ತೊಡೆಯಲಾಪೆಯಪರಬ್ರಹ್ಮ ಕಾಗಿನೆಲೆಯಾದಿಕೇಶವ ನಿನ್ನಸ್ಮರಣೆಗೈಯಲು ಕಾಯದಿರಲಾಪೆಯ 3
--------------
ಕನಕದಾಸ
ನೀನೊಲಿದು ನಿನ್ನ ಸೇವೆಯನು ಕೊಡು ಹರಿಯೇ ಪ ನಾನೊರಲುವಾ ಕೂಗು ಕೇಳಿಸದೆ ದೊರೆಯೇ ಅ.ಪ ಸಂಸಾರ ಸುಖಗಳನು ಅನುಭವಿಸಿ ಸಾಕಾಯ್ತು ಹಿಂಸೆ ಚಿಂತೆಯ ರುಚಿಯ ತಿಳಿದುದಾಯ್ತು ಹಂಸನೀರೊಳಗಿದ್ದು ನೀರರಿಯದಂತಾಯ್ತು ಕಂಸಾರಿ ಸಾಕಿನ್ನು ಭೂಮಿ ಬೇಸರವಾಯ್ತು 1 ಶತಪಾಪಿ ನಾನಾಗಿ ಪತಿತಜನ್ಮವನಾಂತು ವ್ರತ ನೇಮ ನಿಷ್ಠೆಗಳ ಮರೆತು ಕುಳಿತು ಮಿತವಿಲ್ಲದನ್ಯಾಯಕಾರ್ಯದಿಂ ಬಸವಳಿದು ಸತಿಸುತೆಯರಾಟದಲಿ ನಿನ್ನ ಮರೆತೆ2 ಕರುಣಾ ಸಮುದ್ರ ನೀನಲ್ಲವೇ ಹರಿಯೇ ಪೊರೆಯೋ ಮಾಂಗಿರಿರಂಗ ಕರುಣಾಂತರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೊಲಿಯಬೇಕು ನೀನೊಲಿಯಬೇಕು 'ಜ್ಞಾನ'ೀನನಿಗೆ ನಿತ್ಯಾನಂದ ಮೂರುತಿಯೆ ವಾಸುದೇವಾರ್ಯ ಪನರಳಿ ಬಹುಭವದಿ ನಾನಾ ಯೋನಿಮುಖಗಳಿಂದುರುಳಿ ಕೋಟಲೆಗೊಂಡು ಪುಳು ಪಕ್ಷಿ ಪಶು ಜಲಜತರು ಶಿಲೆಗಳೆನಿಪ ಹಲವಲಿ ನವೆಸವೆದು ಸ್ತ್ರೀಪುರುಷತ್ವ ಭೇದವಹ ನರಜನುಮ ಬಹರೆ 1ಪುರುಷನೆನಿಸಿದರು ಪಾದೋರು ಬಾಹುಜ ಭೇದವರಿತು 'ಪ್ರತ್ವ 'ದ್ಯಾ ನಯ 'ಜ್ಞಾನಶರಧಿಯೆನಿಸುವ ಭಾಗ್ಯ ಬರುವ ಸಾಧನಗಳನುಕರುಣಿಸುವ ಪರಮೇಶನೊಲಿವಂತೆನಗೆ 2'ವೃತ ಫಲವಹ ಸಶಾಸ್ತ್ರ ನಿಗಮಾಧೀತಿಯೊಪ್ಪದಿತದುಕ್ತ ಕರ್ಮಾಚರಣೆಗೈಯುತ ಸಮರ್ಪಿಸುತ್ತೀಶ್ವರಗೆ ತತ್ಫಲವ ಬಯಸದೆತೆಪ್ಪಗಿರುವಧಿಕಾರಿಯಪ್ಪ ಸತ್ಪಥಕೆ3ಶೃತಿಯುಕ್ತಿ ಸ್ವಾನುಭವಗಳ ಬಲದಿ ಮನನಗೈಯುತಲಿ ನಿತ್ಯಾನಿತ್ಯ ವಸ್ತುಗಳ ತಿಳಿದನರ್ಥತೆಯರ್ಥಗಳೊಳು ವೈರಾಗ್ಯ ಭಾಗ್ಯವನೀವಮತಿ ಬಂದು ಭಕತಿ ಜ್ಞಾನಗಳಳವಡುವರೆ 4ಬಂದ ವೈರಾಗ್ಯ ನೆಲೆಗೊಂಡು ಬಳಸಿದ ಕ್ರಿಯಾದಂದುಗವು ಸಡಿಲಿ ಬ'ರಂಗ ವ್ಯಾಪಿಸಿ ಕನಸೆಂದು ಕಾಣುತಲೂಡಲುಣುತಲುಡಿಸಿದರುಡುತತಿಂದು ತೇಗುವ ಕರ್ಮ ಬೆಂದು ಸುಖಿಯಹರೆ 5ಹೊರಗೊಳಗುಗಾಣದಾಗಸದಂತೆ ಬಯಲಾಗಿಕರಣಗಳ ಕಾಲಾಟವುಡುಗಿ ಸ್ವ ವ್ಯತಿರಿಕ್ತವರಸಿದರು ಸಂತೃಪ್ತಿ ತೋರದೆ ಸ್ವಾನುಭವಬರಿಯರಿವೆ ನೆಲೆಯಾಗಿ ತಾನೆ ತಾನಹರೆ 6ನಿಂತವೇದಾಂತ ಪದ್ಧತಿಯ ನಿಲಿಸುವರೆ ಮೊದಲಂತೆ ಕೃಷ್ಣಾವತಾರದಿ ಪಾರ್ಥಗೊರೆದ ಕೃಪೆವಂತ ನೀ ಮರಳಿ ಚಿಕನಾಗಪುರದಲಿ ಹೊಳೆದನಂತಮ'ಮನಾಗಿರುವೆ ವಾಸುದೇವಾರ್ಯ 7
--------------
ತಿಮ್ಮಪ್ಪದಾಸರು
ನೀನೋಲಿದುದ್ದಕ್ಕೀ ಇಹ ಸೌಖ್ಯವೇಯಿನ್ನು ನಾನೊಲ್ಲೆ ನಾನೊಲ್ಲೆ ಸರ್ವೇಶಾ ಪ ನಿನ್ನನುರಾಗದಿ ಗತಿಯೆಂದು ನಂಬಿದ ಮಾನವನೊಡನೆ ನೀನಾಡುವದೆಲ್ಲಾ ಅ.ಪ ಷಡುರಸ ನಾನಾ ಸುಭೋಜನವ ಬಿಡಿಸಯ್ಯ ದಾನವ ಭಂಜನ ಒಡಲಿಗೋಸುಗ ನಿನ್ನನು ಸೇವಿಸುವೆ ತೋರಿಸದಿರೆ | ದಿವ್ಯಾಂಬರಗಳ ಉಡಿಸಿ ಸ್ವರ್ಣಾಭರಣಗಳ ತೊಡಿಸಿ | ಬರಿ ಮಾತಿನಲಿ ಮೊರೆ ಯಿಡುವೆನೊ ವಾಕ್ಕಾಯದಿಂದಲೀ 1 ಜನರು ಜನಪರಿಂದ ಮನ್ನಣೆ ಸ್ವಲ್ಪ | ಎನಗೆ ಹತ್ತದು ಕಾಣೊ ನಿನ್ನಾಣೆ || ಮನುಜನ ಸೈಸಿದವನ ಬಾಯೆನೆ ಬರೆವಾ | ವಿಭವ ದೊರೆಯದೆ | ಜನುಮದಲಿ ಬಂದದಕೆ ಮಹಾ ಸಾಧನವಿಧಾರಿ ತೋರಿಸಿ | ನಿನ್ನ ದಾಸನೆನಿಸದೆ | ನಿಸ್ಸಾರವೆಣಿಸಿ ತೋರ್ಪ ದೇವ ಸೈಸೈ 2 ಥಂಡ ಥsÀಂಡದಲೆನ್ನ ಮರುಗಿಸಿ | ಮಂಡಲದೊಳು ಪ್ರಚಂಡನೆನಿಸದಿರು | ಉಂಡ ಪರಾನ್ನಕೆ ದಂಡನೆ ಬಹಳಲ್ಲಿ | ತೊಂಡ ನಾನಯ್ಯ ಕರುಣಸಾಗರ | ಖಂಡ ಮತಿಯನು ಕೊಡದೆ ಮುಕ್ತರ | ಅಂಡ ಜಾಂಸಗ ವಿಜಯವಿಠ್ಠಲಾ 3
--------------
ವಿಜಯದಾಸ
ನೀನ್ಯಾಕೊ ನಿನ್ನ ಗೊಡಿವ್ಯಾಕೊ ಹನುಮೇಶ ಪ ಅನ್ಯಮತಿ ಪೊಂದಿ ಮಿಥ್ಯಾಜ್ಞಾನಿಯಾಗದೆ ಪಾದ ಪೊಂದಿದ್ದರೆ ಸಾಕೊ ಅ.ಪ ಜೀವೋತ್ತಮರ ಭಾವವನನುಸರಿಸಿ ನೋವಾಗುವ ಮಾರ್ಗವ ಜರಿದು ಭಾವಜನಯ್ಯ ನಿನ್ನ ಭಾವವ ಕಂಡು ಆವಾಗಲು ಸುಖಿಪರ ಗೃಹ ಕಾವನಾದರೆ ಸಾಕು 1 ದೇಹಸ್ಥಿರವಲ್ಲ ದಹನಶೀಲಭವ ಇಹಸುಖ ಹೇಯವೆಂದು ಮೋಹಪಾಶಕೆ ಸಿಗಿಸದೆ ನಿನ್ನನುಪಮ ಮಹಿಮೆಗಳ ಕೇಳುತ ಆನಂದವಾದರೆ ಸಾಕು 2 ಮೋದತೀರ್ಥರೆ ಸದ್ಗುರು ಭೇದ ಜ್ಞಾನವೆ ಗತಿಪ್ರದ ವೇದ ಸಚ್ಛಾಸ್ತ್ರಂಗಳೆ ಸತ್ಯ ತಿಳಿದು ಆದಿ ವಿಜಯ ರಾಮಚಂದ್ರವಿಠಲನೆ ಅಗಾಧಮಹಿಮ ಮಮ ಪ್ರೀಯನೆಂಬ ಭಕ್ತಿ ಇತ್ತರೆ ಸಾಕೊ3
--------------
ವಿಜಯ ರಾಮಚಂದ್ರವಿಠಲ
ನೀರ ತರಂಗಿಣಿ ತೀರ ನಾರಸಿಂಹ ಪ ಸಾರಿದೆನೊ ತವಪಾದ ಪಂಕಜ ತೋರು ಮನದಲಿ ತವಕದಿ ಅ ನಾರದನುತ ಚಿಚ್ಛರೀರವ ಶ್ರೀ ಭೂದು ರ್ಗಾರಮಣ ದುರಿತಾರಿ ಬ್ರಹ್ಮ ಸ ಮೀರ ಮುಖ ವಿಬುಧಾರ್ಚಿತ ಚಾರು ಚರಣಯುಗ ಕ್ಷೀರಾಬ್ಧಿ ಶಯನ ಮ ದ್ಭಾರ ನಿನ್ನದು ಮೂರು ಲೋಕದ ಸೂರಿಗಮ್ಯ ಸುಖಾತ್ಮಕ 1 ವೇದವೇದ್ಯ ಸಂಸಾರೋದಧಿ ತಾರಕ ಛೇದ ಭೇದ ವಿಷಾದವೇ ಮೊದ ಶ್ರೀದ ಶ್ರೀಶ ಅನಂತ ಆಪ್ತಕಾಮ ಬಾದರಾಯಣ ಭಕ್ತವರ ಪ್ರ ಹ್ಲಾದಪೋಷಕ ಪಾಹಿ ಮಾಂ 2 ಹೋತಹೃದ್ಯ ಜಗನ್ನಾಥವಿಠಲ ನಿನ್ನ ಮಾತು ಮಾತಿಗೆ ಸ್ಮರಿಸುತಿಹ ಸ ಚ್ಚೇತನರನು ನೀ ಸರ್ವದಾ ವೀತಶೋಕ ಭವಭೀತಿ ಬಿಡಿಸಿ ತವ ದೂತರೊಳಗಿಡು ಮಾತರಿಶ್ವಗ ಭೂತಭಾವನ ಭವ್ಯದ3
--------------
ಜಗನ್ನಾಥದಾಸರು