ಒಟ್ಟು 29700 ಕಡೆಗಳಲ್ಲಿ , 137 ದಾಸರು , 8961 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುನಿಕರÀ ಸಂಸೇವ್ಯ ಸತಿಪತಿಯ ಬಿಂಬ ಪ ಪರಮ ಪಾವನ ನಾಮ ಪಾಹಿ ಪಾಹೀ ಎನ್ನ ಅ.ಪ ಪತಿತಪಾವನ ಪರಮಗತಿ ನೀನು ಸರ್ವಸ್ವ ಸತತ ತತ್ವದ ಪಾಲಿಸು ಎನ್ನ ಶಿರದಿ ಹಿತದಿಂದ ನೆಲಸಿರಲಿ ಹರಿದಾಸ್ಯ ಕೊಟ್ಟೆನಗೆ ರತಿ ಬಿಡಿಸು ವಿಷಯದಲಿ ಮನ ನಿನ್ನ ಬಿಡದಿರಲಿ 1 ನಿನ್ನ ಕ್ರಿಯ ಗುಣರೂಪ ನಿನ್ನ ತಿಳಿಯದೆ ನಡೆದೆ ಘನ್ನಭಾವವ ನೀಡು ಪೂರ್ಣದಯದಿ ಅನ್ಯವೆಂದಿಗು ಒಲ್ಲೆ ಅನ್ನನೀಯನಗಾಗು ಪೂರ್ಣಪ್ರಜ್ಞರ ದೈವ ಪನ್ನಗಾದ್ರಿನಿಲಯ 2 ಲಕ್ಷ್ಮೀನಿಲಯ ಜಯೇಶವಿಠಲನೆ ವಿಧಿವಂದ್ಯ ಲಕ್ಷ್ಯನಿನ್ನಲಿ ನೆಲಸು ಸತತ ಬಿಡದೆ ಪೃಷ್ಯೇಶ ತವ ಕರುಣ ಬಂದು ಎನ್ನೊಳು ಬೀಳೆ ಭವ ಹಿಂಗಿ ಮೋಕ್ಷಸುಖ ಕರಗತವೊ 3
--------------
ಜಯೇಶವಿಠಲ
ಗುರುಪರಮ ಸ್ವರೂಪ ಧ್ರುವ ಇಡದು ತುಂಬೇದ ನೋಡಿ ಎಡಬಲ ಪೂರ್ಣ ಬಿಡದೆ ಸೂಸುತಲ್ಯದೆ ಜಡಿದು ನಿಧಾನ 1 ಸಂಧಿಸಿಹದು ನೋಡಿ ಹಿಂದೆಮುಂದೆಲ್ಲ ಒಂದು ಮನದಿ ನೋಡಿ ಬಂದು ನೀವೆಲ್ಲ 2 ಬೆಳದುಕೊಂಬುವಂತೆ ಹೊಳೆಯುತವಲ್ಲ ಸುಳುಹು ಶ್ರೀ ಕೃಷ್ಣನ ತಿಳುವವರಿಲ್ಲ 3 ಕಣ್ಣುಗೆಟ್ಟಿರಬ್ಯಾಡಿ ಕಾಣದೆ ಖೂನ ತ ನ್ನೊಳಗದೆ ನೋಡಿ ಸಾನ್ನಿಧ್ಯಪೂರ್ಣ 4 ಭಾಸುತಲ್ಯದೆ ಭಾಸ್ಕರಕೋಟಿ ತೇಜ ದಾಸ ಮಹಿಪತಿ ಪ್ರಾಣದೊಡಿಯ ಸಹಜ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಬೋಧ ಪರಮಸುಖಕಾರಿ ಬಾರಿ ಬಾರಿಗೂ ಕೇಳೈ ಭವರೋಗೀ ಪ ಬಿಡು ಬಾಳಿನ ಭ್ರಮೆಯ ಸಂಸಾರಿ ದುಃಖದ ಬಾಳಿದು ವಿನಾಶಕಾರಿ ಇದರೊಳು ಸಿಗುತಿಹ ಸುಖವು ವಿಕಾರಿ ತಿಳಿಯೈ ಮುಕ್ತನಾಗಲಿದು ದಾರಿ 1 ಆರಿ ನಿನ್ನಯ ನಿಜವಾ ಸುವಿಚಾರಿ ಅರಿವೇ ನಿನ್ನಯ ಈ ಭವತಾರಿ ಬೇರಾವುದು ನಿನಗಾಗದು ದಾರಿ ಈ ನುಡಿ ಪೇಳುತಿಹುದು ಶೃತಿಸಾರಿ 2 ಜಾಗರಾ ಕನಸು ನಿದ್ರೆಯ ಮೀರಿ ಅಮರವಾಗಿರುವ ಪದವನೆ ತೋರಿ ಅದೆ ನೀನೆನ್ನುತ ಪರಿಪರಿ ಸಾರಿ ಶಂಕರಭೋಧವಿದುವೆ ಭವಹಾರಿ3
--------------
ಶಂಕರಭಟ್ಟ ಅಗ್ನಿಹೋತ್ರಿ
ಗುರುಭಕುತಿಯಲಿ ಮನವಸ್ಥಿರವ ಗೊಳ್ಳಲಿಬೇಕು ಅರತು ಸದ್ಭಾವದಲಿ ದೃಢಗೊಳ್ಳಬೇಕು ಧ್ರುವ ನಿಶ್ಚಯವಿಡಬೇಕು ದುಶ್ಚಲವ ಬಿಡಬೇಕು ನಿಶ್ಚಿಂತದಲಿ ನಿಜಸುಖ ಪಡೆಯಬೇಕು 1 ನಂಬಿನಡಿಯಬೇಕು ಡಂಭಕವ ಬಿಡಬೇಕು ಹಂಬಲಿಸಿ ಅಂಬುಜಾಕ್ಷನ ನೋಡಬೇಕು 2 ವಿಶ್ವಾಸವಿಡಬೇಕು ವಿಷಗುಣವ ಬಿಡಬೇಕು ವಿಶ್ವವ್ಯಾಪಕನ ವಿಶ್ವದಿ ನೋಡಬೇಕು 3 ರತಿ ಪ್ರೇಮ ಬಿಡಬೇಕು ಅತಿ ಹರುಷ ಪಡಬೇಕು ಸ್ತುತಿಸ್ತವನವನು ಪಾಡಿಗತಿ ಪಡೆಯಬೇಕು 4 ಆರು ಜರಿಯಬೇಕು ಮೂರು ಹರಿಯಬೇಕು ಅರಿತು ಗುರುಪಾದ ಮಹಿಪತಿಬೆರೆಯಬೇಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಭಕ್ತನೆ ಭಕ್ತ ಮೂರುಗುಣಕೆ ತಾ ವಿರಕ್ತ ಧ್ರುವ ನಾದಬಿಂದು ಕಳೆಯು ಭೇದಿಸಿದವಗ್ಯಾತರ ಚಳಿಯು ಆದಿತತ್ವದ ಕಳೆಯು ಎದುರಿಟ್ಟು ದಾವನ ಬಳೆಯು 1 ಆಶಾಪಾಶಕೆ ಸಿಲ್ಕಿ ಮೋಸಹೋಗನು ಎಂದಿಗೆ ಹೋಕ ವಾಸುದೇವನ ಸಖ ಭಾಸುತಿಹುದು ಆವಾಗನೇಕ 2 ಅಲ್ಪನಲ್ಲವೆ ತಾನು ಕಲ್ಪತರು ಕಾಮಧೇನು ಕಲ್ಪನೇಕರಹಿತನು ನಿಲುಕಡೆ ಕಂಡಿಹ್ಯ ನೆಲೆನಿಭನು 3 ಯೋಗಿ ನಾ ನೀನೆಂಬುದು ನುಡಿಯಲಿ ತ್ಯಾಗಿ ಭೋಗಿ ಜನನ ಮರಣ ಕಳೆದಿಹ ನೀಗಿ4 ಅಮೃತ ಸ್ವಾದ ನೀಡುವ ಭಯ ನಿಜವಾದ ಬೋಧ ಪಾದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಭಕ್ತನೆವೆ ಧನ್ಯನು ಬಲು ಮಾನ್ಯನು ಪ ಗುರುದಯ ಸಂಗಡಿಯನು ಹಿಡಿದಿಹನು | ತರಣೋಪಾಯವ ಕೂಡಿದಾ ನಲಿದಾಡಿದಾ 1 ಅನ್ಯ ಮಾರ್ಗವ ನೋಡನು ತಾ ಕೂಡನು | ತನ್ನ ನಿಷ್ಠೆಯೊಳಾಡುವಾ ಗತಿ ಬೇಡುವಾ 2 ಗುರು ಮಾತೇ ಮಂತ್ರ ವೆಂಬನು | ಸವಿ ದುಂಬನು | ಗುರು ಸೇವೆಯಲಿ ಬಾಳುವಾ ಅದೇ ಕೇಳುವಾ 3 ಪುಂಡಲೀಕನ ಭಕ್ತಿಯಾ | ಆಸಕ್ತಿಯಾ | ಕಂಡು ತಾನೆವೆ ಬಂದನು ಮುಕುಂದನು 4 ಸಾರಥಿ | ನೆರೆ ಭಕ್ತಿ ಕೀಲ ಬೋಧನಾ ಹೇಳಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುಭಕ್ತಿ ಮನವೆ ನೀ ಮಾಡು ಸ್ಥಿರ ಗುರುತಿಟ್ಟು ಬಾಹುದು ಪರಾತ್ಪರ ಸರಿಗಾಣೆನೊ ಪುಣ್ಯಕೆ ನೋಡಿದರ ಕರಕೊಂಬುದಿದೆ ಸುಖ ಸಜ್ಜನರ 1 ಹಿಡಿಬೇಕು ಸದಾ ಗುರುಭಾವದೃಢ ಉಪಾಧಿ ಜಡ ಪಡಕೊಂಬುದು ಮಾಡಬಾರದು ತಡ ಒಡಲ ಹೊಕ್ಕರ ಸದ್ಗುರು ಕೈಯಬಿಡ 2 ಗುರುನಾಮ ನಿಧಾನ ನೆನಿಯೊ ಸದ ಸುರಲೋಕಕೆ ಪಾವನ ಮಾಡುವದ ಪರತತ್ವಕೆ ಪಾರನೆದೋರುವದ ಸ್ಮರಿಸಿನ್ನು ಮಹಿಪತಿ ಮುಖ್ಯವಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಮಾರ್ಗ ಧನ್ಯಧನ್ಯವೆನ್ನಿ ಕರುಮುಗಿದು ಅನ್ನಿ ಧ್ರುವ ಮರೆವ ಗರ್ವವ ಮುರಿವ ಹರಿವ ಮೂರೆರಡಂಕುರವ ತೋರುವ ದೋರುವ ಯರ್ಹ ಪಜರುವ ಹೊಡೆವ ಮರುವ್ಹ ಅರುವ ಗುರುವಿನ ಕರುವ್ಹ ಬೆರುವ ಪರಾತ್ಪರವ ಇರುವ ಹರುಷದಿ ಸ್ಥಿರುವ ಕರೆವ ಸಾರಾಯ ಸುರೆವ 1 ಕಾಯ ಕಳವಳವ ಅಳೆವ ಚಿತ್ತ ಚಂಚಲವ ಗಳುವ ಭಾವದುಶ್ಚಲವ ಉಳುವ ಉಪಾಯಲಳಿವ ನಲುವ ನೋಡಿ ನಿಶ್ಚಲವ ಬಲಿವ ಭಕ್ತಿ ಅಚಲವ ತಿಳುವ ಸದ್ವಸ್ತುದ ಹೊಳೆವ 2 ಕೆಡುವ ಬುದ್ದಿಯ ಬಿಡುವ ಕಡೆವ ಸಂದೇಹ ದೃಢವ ನುಡಿವ ಶ್ರುತಿಯಂತೆ ನಡುವ ಜಡೆವ ಸದ್ಬಕ್ತಿವಿಡುವ ತುಡುವ ವೈರಾಗ್ಯನೆ ಮುಡುವ ಸದ್ಗತಿ ಸದ್ಗುರುಗತಿಪಡೆವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಶರಣು ಹೊಕ್ಕೆನು ಪೊರೆಯಬೇಕೆನ್ನ ದೊರೆಯೆ ಪ. ವರ ತಂದೆ ಮುದ್ದುಮೋಹನ ದಾಸಾರ್ಯರೆ ಪರಿಪರಿಯಿಂದ ಭಕ್ತರನು ಪೊರೆಯುವರೆ ಪರಮಾರ್ಥ ಚಂದ್ರೋದಯದ ಪ್ರಕಾಶಕರೆ ಪರಿಮಳ ಸುನಾಮದಲಿ ಸರ್ವತ್ರವ್ಯಾಪಕರೆ 1 ತರತರದ ಸುಗುಣ ಮಣಿಮಾಲೆಯಿಂ ಶೋಭಿಪರೆ ವರಶಿಷ್ಯ ರತ್ನಪದಕಗಳಿಂದಲೊಪ್ಪಿಹರೆ ಸುರರಗಣ ಮಧ್ಯದಲಿ ಪರಿಶೋಭಿಸುತಲಿಹರೆ ಮೊರೆಹೊಕ್ಕವರ ಕಾಯ್ವ ಪರಮ ಕರುಣಾಕರರೆ 2 ಕನಸಿನಲಿ ಮನಸಿನಲಿ ಕಳವಳವ ಹರಿಸುವರೆ ಮನಸಿಜಪಿತನನ್ನು ಮನದಿ ನೆನೆಯುವರೆ ಇನಕೋಟಿತೇಜ ಶ್ರೀ ಶ್ರೀನಿವಾಸನ ಕೃಪೆಗೆ ಅನುಮಾನವಿಲ್ಲದೆಲೆ ಅರ್ಹತೆಯ ಕೊಡಿಸುವರೆ 3 ಭಕ್ತರನು ಪೊರೆಯುವ ಕಾರುಣ್ಯನಿಧಿ ಎಂದು ಪಾದ ನಂಬಿರುವೆ ಭಕ್ತವತ್ಸಲ ಶೇಷಶಯನನಾ ಸೇವೆಯನು ನಿತ್ಯ ಮಾಳ್ಪಂಥ ಸೌಭಾಗ್ಯ ನೀಡುವುದು 4 ಕವಿದಿರುವ ಅಜ್ಞಾನಪರೆಯನ್ನು ಛೇದಿಸುತ ಸವಿಯಾದ ಹರಿಯ ನಾಮಾಮೃತ ಉಣಿಸಿ ಪವನನಂತರ್ಯಮಿ ಗೋಪಾಲಕೃಷ್ಣವಿಠ್ಠಲ ತವಕದಿಂದಲಿ ಪೊಳೆವ ಸುಜ್ಞಾನ ನೀಡುವುದು 5
--------------
ಅಂಬಾಬಾಯಿ
ಗುರುರಾಘವೇಂದ್ರ ಶರಣರ ಸುರ ತರುವೆ ಕರುಣಸಾಂದ್ರ ಪ ಧರೆಯೊಳು ನಿನ್ನ ಶ್ರೀ ಚರಣಕಮಲ ಪ್ರಭೆ ಪರಿ ಉದ್ಧರಿಸು ಈ ಶರಣನ್ನ ಅ.ಪ. ಸುಕೃತ ಸ್ವರೂಪ ದರುಶನ ಮಾತ್ರದಿ ಭವ ಶ್ರಮ ಹರಿಸುವ ಪ್ರತಾಪ ರಮೆ ಅರಸನ ಗುಣ ಸಮುದಾಯದೊಳು ಮಗ್ನ ಭ್ರಮೆರಹಿತ ಸ್ಥಿರಚಿತ್ತ ನಮೋ ನಮೋ ನಿನಗೆ ಅಮಿತ ಮತಿಯ ಕರುಣ ಕವಚವ ಅಮಿತಕಾಲದಿ ಕೊಟ್ಟು ಮೆರೆಯುವ ಅಮಿತ ಮಂಗಳದಾಯಿ ತತ್ವದ ಕಮಲ ವೈಭವ ಸಲಹಲೆನ್ನನು 1 ಪಾವನ ಸುಯತಿ ರನ್ನ ಲಾಲಿಸು ವಾಕು ಸಾವಧಾನದಿ ಘನ್ನ ಭವ ಭವಣೆ ದಾವಾಗ್ನಿಯೊಳು ನೊಂದೆ ಶ್ರೀ ವರನ ದಾಸ ಕಾವ ದೃಷ್ಟಿಯಲಿ ನೋಡೊ ನಿತ್ಯ ಮಂಗಳ ಭಾವರೂಪ ಗುಣತ್ರಯಗಳ ಆವ ಕಾಲಕು ಬಿಡದೆ ನೋಡುವ ಭೂವಿ ಬುಧಮಣಿ ಪಾಲಿಸೆನ್ನನು 2 ತುಂಗಾತೀರ ನಿವಾಸ ರಾಘವೇಂದ್ರ ಗುರು ತುಂಗ ಮಹಿಮ ನಿರ್ದೋಷ ಮಂಗಳಾಸಮಹರಿ ಗಂಗಾಪಿತನ ಕೂಡಿ ತುಂಗಪೂಜೆಯ ಕೊಂಡ್ವರಂಗಳ ಬೀರುವ ಪಾದ ತೀರ್ಥದಿ ಭವ ಭಂಗ ಬಗೆಯನು ಬಲ್ಲ ಮಹಾತ್ಮ ರಂಗ ಜಯೇಶವಿಠಲ ದೇವನ ಸಂಗ ನೀಡುವ ಕೃಪೆಯ ಮಾಳ್ಪ 3
--------------
ಜಯೇಶವಿಠಲ
ಗುರುರಾಜ | ನಮಿಪರ ಸುರಭೋಜ ಗುರುರಾಜ ಪ. ವರತಂದೆ ಮುದ್ದುಮೋಹನರೆಂದೆನಿಸುತ ಮೆರೆಯುತ ಜಗದೊಳು ಪೊರೆಯುವ ಕರುಣಿ 1 ಅಜ್ಞತೆ ತೊಲಗಿಸಿ ಸುಜ್ಞತೆ ಕೊಡುತಲಿ ವಿಘ್ನವ ತರಿಯುವ ಪ್ರಾಜ್ಞ ಮೂರುತಿಯೆ 2 ಸರಸಿಜಾಕ್ಷನ ಪದ ಹರುಷದಿ ಭಜಿಸುವ ಪರಮಪ್ರಿಯರು ಎಂದು ಬಿರುದು ಪೊತ್ತಿಹರೆ 3 ನಾಗಶಯನನಿಗೆ ಭೋಗವಪಡಿಸುವ ಆಗಮಜ್ಞರೆ ನಿಮಗೆ ಬಾಗುವೆ ಸತತ 4 ಸಾಸಿರ ಫಣೆಯಿಂದ ಸೂಸುವ ಕಾಂತಿಯೊಳ್ ವಾಸವ ವಿನುತ 5 ದೇವತಾಂಶದ ಗುರು ಪವಮಾನಿಗೆ ಪ್ರಿಯ ಭಾವಿಸಿ ಭಜಿಪರ ಕಾವ ಕರುಣಾಳು 6 ಶಾಂತಚಿತ್ತದಿ ಬಹು ಸಂತೋಷಪಡುತಲಿ ಅಂತರಂಗದಿ ಹರಿಯ ಚಿಂತಿಸುತಿರುವ 7 ಉದ್ಭವಿಸಿ ಜಗದಿ ಅಧ್ಭುತ ಮಹಿಮೆಯ ಒಬ್ಬೊಬ್ಬರಿಗೆ ತೋರಿ ಹಬ್ಬಿಪೆ ಹರುಷ 8 ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನನು ದೃಷ್ಟಿಗೆ ತೋರಿಸಿ ಕಷ್ಟ ಬಿಡಿಸಿರಿ 9
--------------
ಅಂಬಾಬಾಯಿ
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗುರುರಾಜ ನುತ ವಿಠಲ | ಪೊರೆಯ ಬೇಕಿವಳಾ ಪ ಕರುಣ ಪಯೋ ನಿಧಿಯೆ | ಶರಣು ಬಂದವಳಾ ಅ.ಪ. ಮರುತ ಮತದಲ್ಲಿದ್ದು ಗುರು ಹಿರಿಯರಾ ಸೇವೆನಿರುತ ಗೈಯುವ ಮನವ | ಉಳ್ಳವಳೊ ಈಕೇಕರುಣಾ ಪಯೋ ನಿಧಿಯೇ | ಮರುತಾಂತರಾತ್ಮಕನೆಕರಪಿಡಿದು ಪೊರೆಯೋ | ಪ್ರಾರ್ಥಿಸುವೆ ಹರಿಯೇ 1 ಕಂಸಾರಿ ತವನಾಮ | ಅಮೃತವನೆ ಉಣಿಸುತ್ತಸಂಸಾರ ಶರಧಿಗೆ | ಪ್ಲವವೆನಿಸೊ ದೇವಸಂಶಯವು ರಹಿತಾಗಿ | ಹರಿಯೆ ಸರ್ವೋತ್ತಮನೆಶಂಸನದಿ ಮತಿಕೊಟ್ಟು | ಕಾಯೊ ಕಮಲಾಕ್ಷ 2 ಕೋವಿದೋತ್ತಂಸ ಹರಿ | ಗೋವರ್ಧನೋದ್ಧರನೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾನೀವೊಲಿಯದಿನ್ನಿಲ್ಲ | ತ್ರೈಭುವನದಿ ದೇವಭಾವುಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 3
--------------
ಗುರುಗೋವಿಂದವಿಠಲರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ಗುರುರಾಜನೇ ಎನ್ನ ಪರಿಪಾಲಿಪುದ ಬಿಟ್ಟು ವರ ಮಂತ್ರಾಲಯದೊಳಿರುವುದುಚಿತವೇನೋ ಪ ಬಡ ಭಕ್ತನನು ಕಷ್ಟ ಕಡಲೊಳಿರಿಸಿ ತುಂಗಾ ದಡದಿನಿಂತೆನ್ನ ಕೈ ಬಿಡುವುದುಚಿತವೇನೋ 1 ಅಡಿ ಸೇವಕನೊಳಿಂಥಾ ಕಡು ಕೋಪವ್ಯಾತಕೋ ನುಡಿ ನುಡಿಗೆನ್ನ ತಪ್ಪು ಹಿಡಿದು ಪೋಗುವರೇನೊ 2 ಒಡೆಯ ಶ್ರೀ ಹನುಮೇಶವಿಠಲನ ದಾಸನೇ ಬಡವನಿರುವೆನೆಂದು ನೋಡದಿರುವರೇನೊ 3
--------------
ಹನುಮೇಶವಿಠಲ