ಒಟ್ಟು 7653 ಕಡೆಗಳಲ್ಲಿ , 131 ದಾಸರು , 4746 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಹಳ ದೇಹವ ದಂಡನೆ ಮಾಡಿ ದೇಹ ಘನ ಬಳಲಿಸಿ ಅಹಿಶಯನನು ನಿನ್ನ ಬೆಂಬಲನಾಗಿಹ ಚಿಂತೆ ಮಾಡಲಿ ಬ್ಯಾಡಾ ಪ ಅರಿವರ್ಗಗಳು ಕ್ರೀಡಿಸುತಿಹ ಮನದಿ ಧರ್ಮವ ಮಾಡಲಾದೀತೆ ಪಾಪಿಗೆ ಹಿತವಾದೀತೆ 1 ದುರ್ವಿಕ್ಷಯ ಭುಂಜಿಪ ದುರುಳಗೆ ಅಸಮ ಫಲಪ್ರದ ಹರಿದಿನ ಮಾಡ್ದರೆ ನರಕ ಬಾಧೆ ಬಿಟ್ಟೀತೆ 2 ಪರವಿತ್ತವಪಹರಿಸಿ ಧರೆಯ ಪ್ರದಕ್ಷಿಣೆ ಮಾಡ್ದರೆ ಗತಿಯಾದೀತೆ ನರಸಿಂಹವಿಠ್ಠಲನ ಸ್ಮರಿಪ ಸುಜ್ಞಾನಿಗಿ ಬಹುಭಾಗ್ಯ ತಪ್ಪೀತೆ 3
--------------
ನರಸಿಂಹವಿಠಲರು
ಬಹಳ ನಂಬಿದೆ ಭಕ್ತಪಾಲ ಶ್ರೀ ಲಕ್ಷೀಯ ಲೋಲ ವೆಂಕಟರಾಯನ ಮೂರು ಲೋಕದೊಡೆÉಯನ ಮುಕ್ತಿಯ ಕೊಡುವನ ಪಾಲಿಸಿ ಜಗವನುದ್ಧರಿಸಿದ ದೇವನ ಪ. ಜಲದೊಳು ಪೊಕ್ಕು ವೇದವ ತಂದು ಅಜವನಿಗಿತ್ತು ಬಲುಗಿರಿ ಕುಸಿಯಲು ಬೆನ್ನಿನಿಂದಲಿ ತಳೆದು ನೆಲನ ಕದ್ದಸುರನ ಕೊಂದು ಕಂಬದಿ ನಿಂದು ಬಲಿಯ ದಾನವ ಬೇಡಿ ಜಲ ಪರುಷವ ನೀಡಿ ಮತ್ತೆ ಮಾತೆಯ ಕಡಿದು ಛಲದಿ ರಾವಣನ ಸಂಹರಿಸಿ ಸೀತೆಯ ತರಿಸಿ ಬಲುಸತಿಯರನಾಳಿ ಬವುದ್ಧ ರೂಪವ ತಾಳಿ ಅಲ್ಲದಶ್ವವೇರಿದ ಅತಿ ಚೆಲುವ ದೇವನ 1 ನಿಗಮ ಚೋರನ ಕೊಂದು ನೀರೊಳು ಮುಳುಗ್ಯಾಡಿ ನಗವ ಬೆನ್ನಲಿ ಪೊತ್ತು ಸುರರಿಗಮೃತವಿತ್ತು ಬಗೆದು ಧಾರುಣಿಯನ್ನು [ಚೀರಿ ಹರಹಿ] ಹಿರಣ್ಯಕನ ಮಿಗಿಲಾದ ಬಲಿಯ ಮೆಟ್ಟಿ ಸೊಗಸಿಂದ ಕಾಮಧೇನುವ ತಂದು ಕೌಸಲ್ಯಾ ಮಗನಾಗಿ ಹುಟ್ಟಿ ರಕ್ಕಸÀರನ್ನು ತರಿದೊಟ್ಟಿ ವಿಗಡ ಮಾವನ ಕೊಂದು ಮತ್ತೆ ತ್ರಿಪುರವ ಗೆಲಿದು ಜಗದೊಳುದ್ದಂಡ ರಾವುತನಾದ ದೇವನ 2 ಆದಿಪೊಳ[ಕು] ಕ್ಷೀರಾಂಬುಧಿ ಮಥsÀನವ ಆಡಿ ಕೂರುಮನಾಗಿ ಮತ್ತ ಹಿರಣ್ಯಕನ ದಾಡೆಯಿಂದಲಿ ಸೀಳಿ ಜೋಡು ರೂಪವ ತಾಳಿ ಬೇಡಿ ಮೂರಡಿ ನೆಲವ ತೀಡಿ ಕ್ಷತ್ರಿಯರ ಸಂಹರಿಸಿ ಕಾಡೊಳು ಚರಿಸಿ ಗಾಡಿಗಾತಿಯರ ಮನೆಯೊಳುಳ್ಯಾಡಿ ಸತಿಯರ ವ್ರತ- ಗೇಡಿ ಭಕ್ತರಿಗೆ ಅಭಯವ ನೀಡಿ ಹೆಳವನಕಟ್ಟೆ ಕಾಡುಗಲ್ಲಲ್ಲಿ ನಿಂತ ಕಲಿ ವೆಂಕಟೇಶನ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಾ ಗೋಪತಿ ಗೋಪನೆ ಮನ್ಮನಕೆ | ತಡಮಾಡುವುದ್ಯಾಕೆಭೋಗಿ ಮದಾಪಹ | ಆಗಮ ವೇದ್ಯನೆ | ನಮಿಸುವೆ ತವಪದಕೆ ಪ ಯೋಗಿ ವರೇಣ್ಯಾ ಅ.ಪ. ನೀರಜ ಸಂಭವಮುರಾರಿಗಳಿಂದಲಿ ಆರಾಧಿಪ ಪದ 1 ನವನೀತ ಚೋರ | ಪಾವನ ಚರಿತ | ಸ್ವರತ ಅನವರತಭುವನೈಕ ವಂದ್ಯ ವಿಶೋಕದಾತ | ಸಮಅಧಿಕ ರಹಿತಅವನಿಜೆ ವಲ್ಲಭ | ತ್ರಿವಿಧರಿ ಗೋಸುಗವಿವಿಧ ರೂಪಂಗಳ | ತಾಳುವ ಖ್ಯಾತ 2 ಹಂಸ ಡಿಬಿಕ ಶಕಟಾರಿ ಮುರವೈರಿ | ಮುಷ್ಠಿಕಮಲ್ಲಾರಿಕಂಸಾರಿ ವತ್ಸಾರಿ ಪರಮ ಉದಾರಿ | ಬಾಬಾರೆಲೊ ಶೌರಿಶಿಂಶುಮಾರ ಸುರ ಸಂಶಯ ಹರಿಸಲು |ಸ್ವಾಂಶದಿ ಜನಿಸುತ ಭಕ್ತರುದ್ಧರಿಸಲು 3 ಕರುಣ ವನದಿ ಶರಣಾಗತ ಪರಿಪಾಲ || ಶಿರಹರ ಶಿಶುಪಾಲತರಳ ದೃವಾದಿಯ ಪೊರೆವುದು ತವಶೀಲ | ಪಾಲಿಸು ಶ್ರೀಲೋಲಕರಣ ನಿಯಾಮಕ ವರ್ಣ ವೇದ್ಯತವಚರಣ ಬಯಸುವೆ ಹೃದಯ ಸದನಕೇ 4 ತೋಂಡ ಬೋವ ಮಾಯಾ ಪಟಲ 5
--------------
ಗುರುಗೋವಿಂದವಿಠಲರು
ಬಾ ಬಾ ಬಾ ಗುಹನೇ ಪ ವಲ್ಲಭನುತರು ಮನಕುಲ್ಲಾಸದೋರುತ 1 ಬುರು ಆಯುಧಗಳ ಧರಿಸಿಹ ಷಣ್ಮುಖ | ಬಾ 2 ಪಟ್ಟಣಕಟ್ಟುವ ದಿಟ್ಟ ಕುಮಾರ ನೀ ಬಾ 3 ಕಂಬು ಕಂಧರ ಅಷ್ಟಮಿ ಚಂದ್ರಲಲಾಟನೆ ಬಾ 4 ಚರಣದ ದಾಸರ ನಿರತದಿ ಪೊರೆಯಲು ಬಾ 5
--------------
ಬೆಳ್ಳೆ ದಾಸಪ್ಪಯ್ಯ
ಬಾ ಬಾ ಬಾ ಬಾ ಭಕ್ತಾಧಾರ ಬಾ ಬಾರೊ ಶ್ರೀಧರ ಪ ಬಾ ಬಾ ಬಾರೆಂದು ಬೇಡಲು ಪ್ರಹ್ಲಾದ ಕೋರಿದ ಕಂಬದಿ ತೋರಿ ಬಂದೆ ಹರಿ ಅ.ಪ. ಎಲ್ಲಿಹ ನಿನ್ನ ಹರಿಯ ತೋರೊ ಕೊಲ್ಲುವೆನೆನಲಾ ಖುಲ್ಲ ದೈತ್ಯನ ಉದರವ ಸೀಳಿ ಕರುಳನು ಚೆಲ್ಲಿ ಎಲ್ಲೆಲ್ಲಿ ನೋಡಲು ನೀನಿಲ್ಲದಿಲ್ಲವೆಂಬ ಸೊಲ್ಲು ನಿಜಕೆ ತಂದ ಬಲ್ಲಿದ ಹರಿಯೆ 1 ಸರ್ವಾಧಾರನೆ ಸರ್ವೋತ್ತಮನೆ ಸರ್ವಕಾರಣನೆ ಸರ್ವೇಶ ಬಂಧು ನೀ ಸಲಹೆಂದು ಕರಿಮೊರೆಯಿಡಲಂದು ಸರ್ವತ್ರಿದಶರು ಬೆದರುತ ನೋಡಲು ಸರ್ವಮೂಲ ನೀನೊರ್ವನೆ ಬಂದೈ 2 ಪಾಪಿ ದುಶ್ಯಾಸನ ಸಭೆಯೊಳಗಂದು ನಿರಪರಾಧಿನಿ ದ್ರೌಪದಿಯನ್ನು ಹಿಡಿದೆಳತಂದು ಹಿಂಸಿಸುತಿರಲಂದು ಹೇ ಪರಮಾತ್ಮನೆ ನೀ ಪಾಲಿಸು ಎನೆ ಆಪತ್ತಿಗೊದಗಿದ ಭೂಪ ಶ್ರೀಕಾಂತನೆ 3
--------------
ಲಕ್ಷ್ಮೀನಾರಯಣರಾಯರು
ಬಾ ಬಾ ಬಾ ಮೆಲ್ಲಡಿ ಇಡುತಲಿ ಕರಿಗಿರಿ ನರಹರಿ ಪ. ಪದ್ಮನಾಭ ಹೃ ತ್ಪದ್ಮದಿ ನೆಲಸುತ ಪದ್ಮಿನಿಯೊಡನೇ 1 ದಾಸರ ಮೇಳವ ಶ್ರೀಶನೆ ಕೇಳುತ ವಾಸುದೇವ ನಮ್ಮ ಆಶೆ ಪೂರೈಸಲು 2 ರಂಗ ಉತ್ತುಂಗ ಕಾಳಿಂಗಮರ್ದನ ಯದು ಪುಂಗವ ಶ್ರೀ ಭೂ ಸಂಗದಿ ರಥದಲಿ 3 ಶುದ್ಧ ಸಾತ್ವಕ ನಮ್ಮ ಉದ್ಧಾರಕ ತಂದೆ ಮುದ್ದು ಮೋಹನರಾ ಮುದ್ದಿನ ದೇವನೆ 4 ಆಪದ್ಬಾಂಧರ ಶ್ರೀಪತಿ ಕರುಣದಿ ಗೋಪಾಲಕೃಷ್ಣವಿಠ್ಠಲ ಸರ್ವೇಶ್ವರ5
--------------
ಅಂಬಾಬಾಯಿ
ಬಾ ಬಾ ಬಾರೈಯ್ಯಾ ಶ್ರೀ ಗಿರಿದೊರೆಯೆ ಸಿರಿ ಹರಿಯೆ ಚಿ ಪ ನೀ ಬರುವೆಂದಬುಜಾಭವಾದೀ ಸುರರು ಕಾದೂಕೊಂಡಿಹರು ಶ್ರೀ ಭೂಮಿ ಸಹಿತದಿ ಶ್ರೀ ಗಿರಿಯಿಳಿದು ಈ ಭವನವನು ನೀ ಪಾವನ ಮಾಡಲು ಅ.ಪ ಕರೆದರೆ ಬರೆ ಯಾಕೊ ಬಡವರೊಳೀಪರಿಯ ಪಂಥವು ಸಾಕೊ ಸುಲಭನಾಗಿರಬೇಕೊ ಕೊಡುವ ದೊರೆಯೆಂದು ದೃಢದಿ ತಿಳಿದು ನಿ ನ್ನಡಿ ಬಿಡದೆ ಬಲು ಕಾಡದೆ ಬಿಡುವರೆ 1 ಭವ ಶರಧಿಗೆ ನಾವೆ ಬಡವರಾದರೀಯೂ ನೀನಲ್ಲವೆ ಕೊಡೆನಗೆ ನಿನಸೇವೆ ಒಡೆಯ ನೀನಲ್ಲದೆ ಬಡದೇವತೆಗಳು ಕೊಡಬಲ್ಲವೆ ಪೇಳು ತಡಮಾಡದೆ ನೀ 2 ಹದಿನಾಲ್ಕು ಲೋಕದೊರೆಯು ನೀನು ಎನುತ ತಿಳಿದು ನಾನು ಪದುಳದಿ ನಿನ್ನ ಸೇವಿಸ ಬಂದೆನು ಕೇಳಯ್ಯಾ ಇನ್ನು ಪದುಮನಾಭನೆ ನೀ ಸದಯದಿ ನೋಡಿ ಇದನೆ ಕರುಣಿಸು ನಿನ್ನ ಪದಸೇವೆಯನು 3 ಸಿರಿ ಧರೆ ನಾರಿಯರ ನಾ ಕೇಳಲಿಲ್ಲಾ ಕೊಟ್ಟರು ಬೇಕಿಲ್ಲ ದೊರೆತನ ಬಯಸಿ ನಾ ಬೇಡ ಬಂದಿಲ್ಲ ಕೇಳೆನ್ನೆಯ ಸೊಲ್ಲ ಪರಿ ಬೇಡುವೆ ನಿನ್ನ ಪದಸೇವಕರ ಪರಿಚಾರಕರನೆನಿಸೊ ಪರಮ ದಯಾಳೊ 4 ಮಾತಿದು ಪುಸಿಯಲ್ಲ ನೀರಜ ಭವಾಂಡದಿ ನಿನಗೆದುರ್ಯಾರಿಲ್ಲ ರಂಗೇಶವಿಠಲ ದೂರ ನೋಡುತಲಿ ಘೋರಪಾತಕರೊಳು ಸೇರಿಸದೆನ್ನನು ಪಾರುಮಾಡಲು ಬೇಗ5
--------------
ರಂಗೇಶವಿಠಲದಾಸರು
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ
ಬಾ ಬಾ ರಾಘವ ಬಾ ವೀರ ರಾಘವ ಪ ಮತ್ಸ್ಯರೂಪನಾಗಿ ಹೆಚ್ಚಿದ ದೈತ್ಯನ ಇಚ್ಛೆಯಿಂದಲಿ ಕೊಂದ ಅಚ್ಯುತರಾಯನೆ 1 ಕೂರ್ಮರೂಪನಾಗಿ ಅಮರರಿಗೊಲಿದು ನೀ ಕಾಮಜನಕ ಸುಪ್ರೇಮಾವನಿತ್ಯಂತೆ4 2 ವರಹರೂಪನಾಗಿ ಧರಣಿಯ ಚೋರನ ಶಿರವ ತಂದು ನೀ ಜಗವ ಪೊರೆದ್ಯಂತೆ 3 ದುರುಳ ರಕ್ಕಸನ ಕರುಳ ತೆಗೆದು ನಿನ್ನ ಕೊರಳೊಳಗಿಟ್ಯಂತೆ 4 ಚೆಲುವತನದಿ ಪೋಗಿ ಬಲಿಯದಾನವ ಬೇಡಿ ಕಲುಷ ಹರಿಸಿ ಅವನ ಪಾತಾಳಕ್ಕೊತ್ತಿದ್ಯಂತೆ 5 ಕೊಡಲಿಯ ಪಿಡಿಯುತ ದುಗುಡ ರಾಯರುಗಳ ಸೊ ಗಡು ಮುರಿದು ನೀ ಸಡಗರ ಪಟ್ಯಂತೆ 6 ಸೀತೆಗೋಸ್ಕರ ಪೋಗಿ ಸೇತುವೆಯನೆ ಕಟ್ಟಿ ಭೂತ ರಾವಣನ ಖ್ಯಾತಿಯಿಂದಲಿ ಕೊಂದ 7 ವಾರಿಜಾಕ್ಷಿಯರ ಕೂಡಿ ನೀರಾಟದೊಳು ಪೊಕ್ಕು ನೀರೆಯರ1 ಮನ ಅಪಹಾರಮಾಡಿದ ಕೃಷ್ಣ 8 ಚಿತ್ತಜಪಿತ ನೀನು ಬತ್ತಲೆಯೊಳು ಬಂದು ಉತ್ತಮ ಸ್ತ್ರೀಯರ ವ್ರತಗಳಳಿದ್ಯಂತೆ 9 ಸುಂದರ ವಾಜಿಯ ಚೆಂದಾದಿಂದೇರುತ ಮಂದಗಮನೆಯರ ನಂದವಳಿದ್ಯಂತೆ 10 ದೋಷರಹಿತ ನಮ್ಮ ಶೇಷವಿಠ್ಠಲನೆ ಬ್ಯಾಸರವಿಲ್ಲದೆ ಪೋಷಿಸಿ ಸಲಹಲು 11
--------------
ಬಾಗೇಪಲ್ಲಿ ಶೇಷದಾಸರು
ಬಾ ಬಾರೊ ನೀಬಾರೊ ರಂಗಯ್ಯ ಓಡಿ ಪ ಬಾರೊ ರಂಗಯ್ಯ ಓಡಿ ತೋರೊ ಕೃಪೆಯ ಮಾಡಿ ದಾರಿಯ ಕಾಣೆ ಭವದೂರ ಧೀರ ಬೇಗ 1 ತನಯನು ಅಗಲಿರೆ ಮನಕೆ ನೀ ತೆರೆದರೆ ಅನುಚಿತವಲ್ಲ ವೇನೊ ಇನಕುಲಚಂದ್ರ ಬೇಗ2 ಸುರುಪತಿ ವಿನುತನೆ ಧರಸತಿಗೆ ನತನೆ ಗುರುವು ತುಲಶೀರಾಮಾ ಧೊರೆಯೆ ಸರಿಯೆ ಬೇಗ 3
--------------
ಚನ್ನಪಟ್ಟಣದ ಅಹೋಬಲದಾಸರು
ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ 1 ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ 2 ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ 3
--------------
ಕನಕದಾಸ
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೇ ಕೂಗಿಡುವ ಧ್ವನಿಯು ಕೇಳುವುದಿಲ್ಲವೇ ನಿನಗೆ ಪ ಪರಮಪದದೊಳಗೆ ವಿಷಧರನ ತಲ್ಪದೊಳು ಇಂ ದಿರೆಯರಸಿ ಹರುಷವಾರಿಧಿಯೊಳಿರಲೂ ಕರಿ ಗುಪ್ತಕಂಠಧ್ವನಿಯಿಂದಾದಿಮೂಲವೆಂದೊದರೆ ಆಕ್ಷಣ ಕರಿಯ ಕಾಯ್ದೆ ಜಗವರಿಯೆ 1 ಕಡುಮುನಿಸಿನಿಂ ಖಳನು ಖಡ್ಗವನು ಪಿಡಿದು ನಿ ನ್ನೊಡೆಯರಾರೆಂದು ತೋರೆನುತ ಬಡಿಯೆ ದೃಢಭಕುತ ಶಿಶುವು ಕಂಗೆಡದೆ ನಿನ್ನನು ಕರೆಯೆ ಘುಡಿಘುಡಿಸಿಕಂಬದಿಂದೊಡೆದು ಮೂಡಿದೆ ಹರಿಯೆ 2 ಯಮಸುತನರಾಣಿಗಕ್ಷಯ ವಸ್ತ್ರವನಿತ್ತು ಕ್ರಮದಿಂದ ಅಜಮಿಳನ ಪೊರದೆ ಅಂದೂ ಸಮಯಾಸಮಯ ಉಂಟೆ ಭಕುತವತ್ಸಲ ನಿನಗೆ ಕಮಲಾಕ್ಷ ವೈಕುಂಠಚನ್ನಕೇಶವ ಬೇಗ 3
--------------
ಬೇಲೂರು ವೈಕುಂಠದಾಸರು
ಬಾಗಿಲು ತೆರೆಯುವ ಹಾಡು ನಾರಿ ಶಿರೋಮಣಿ ವಾರಿಜ ಮುಖಿಯೆ ಗಂಭೀರಳೆ ಬಾಗಿಲು ತೆರೆಯೇ |ಗಂಭೀರಳೆ ಬಾಗಿಲ ತೆರೆಯೇ ಪ ಆರು ನಿನ್ನಯ ಪೆಸರೆನಗೆ ಪೇಳದಲೆ ದ್ವಾರವ ತೆಗೆಯೆನು ನಾನು |ನಾ ದ್ವಾರವ ತೆಗೆಯೆನು ನಾನು ಅ.ಪ. ನೀರೊಳು ಸಂಚರಿಸಿ ಕ್ರೂರ ತಮನ ಕೊಂದಧೀರ ಮತ್ಸ್ಯನು ಕಾಣೆ ನಾರೀ | ನಾಧೀರ ಮತ್ಸ್ಯನು ಕಾಣೆ ನಾರೀ ||ಧೀರ ಮತ್ಸ್ಯನು ನೀನಾದರೊಳಿತು ದೊಡ್ಡವಾರಿಧಿಯೊಳಗಿರು ಹೋಗಯ್ಯ | ದೊಡ್ಡವಾರಿಧಿಯೊಳಗಿರು ಹೋಗಯ್ಯ 1 ಶರಧಿ ಕೂರ್ಮ ಕೂರ್ಮ ಕಾಣೆ ||ಗಿರಿಯ ತಾಳಿದ ಕೂರ್ಮನಾದರೊಳಿತು | ದೊಡ್ಡಮಡುವಿನೊಳಗೆ ಇರು ಹೋಗಯ್ಯ | ದೊಡ್ಡಮಡುವಿನೊಳಗೆ ಇರು ಹೋಗಯ್ಯ2 ಧರೆಯ ಕದ್ದಸುರನ ದಾಡಿಯಿಂದಲಿ ಸೀಳ್ದವರಹ ಕಾಣೆಲೆ ವಾರಿಜಾಕ್ಷಿ | ನಾವರಹ ಕಾಣೆಲೆ ವಾರಿಜಾಕ್ಷೀ ||ವರಹ ನೀನಾದರೊಳಿತು ನಡೆ ನಡೆ | ದೊಡ್ಡವನಾಂತ್ರದೊಳಗಿರು ಹೋಗಯ್ಯ || ದೊಡ್ಡವನಾಂತರದೊಳಗಿರು ಹೋಗಯ್ಯ 3 ಮೃಗ ಮೃಗ ಮೃಗ ನೀನಾದರೊಳಿತು ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ | ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ 4 ಭೂಮಿ ಈರಡಿ ಮಾಡಿ ಬಲಿಯ ಪಾತಾಳಕಿಟ್ಟವಾಮನ ಕಾಣೇ ವಾರಿಜಾಕ್ಷೀ | ನಾವಾಮನ ಕಾಣೇ ವಾರಿಜಾಕ್ಷೀ ||ವಾಮನ ನೀನಾದರೊಳಿತು ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ | ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ 5 ತಂದೆ ಆಜ್ಞೆಯ ಪೊತ್ತು ತಾಯಿ ಸೋದರನ್ನಕೊಂದವ ನಾನೇ ಕೋಮಲಾಂಗೀ | ನಾಕೊಂದವ ನಾನೇ ಕೋಮಲಾಂಗೀ ||ಕೊಂದವ ನೀನಾದರೊಳಿತು ಮುನಿವೃಂದದಲ್ಲಿ ಇರು ಹೋಗಯ್ಯಾ | ಮುನಿವೃಂದಾದಲ್ಲಿ ಇರು ಹೋಗಯ್ಯ 6 ಲಂಡ ರಾವಣನ ಶಿರವ ಚಂಡಾಡಿ ಸೀತೆ ತಂದ | ಪ್ರ-ಚಂಡ ವಿಕ್ರಮ ರಾಮ ಕಾಣೇ | ನಾ ಪ್ರ-ಚಂಡ ವಿಕ್ರಮ ರಾಮ ಕಾಣೇ ||ಪ್ರಚಂಡ ವಿಕ್ರಮನಾದರೊಳಿತು ಕೋತಿಹಿಂಡುಗಳೊಳಗಿರು ಹೋಗಯ್ಯ | ಕೋತಿಹಿಂಡುಗಳೊಳಗಿರು ಹೋಗಯ್ಯ 7 ಮಧುರಾಪುರದಿ ಪುಟ್ಟಿ ಮಾವ ಕಂಸನ ಕೊಂದಚದುರ ಕಾಣೆಲೆ ಶಾಮಲಾಂಗೀ | ನಾಚದುರ ಕಾಣಲೆ ಶಾಮಲಾಂಗೀ ||ಚದುರ ನೀನಾದರೊಳಿತು ನಡೆ ನಡೆ ಗೋಪೇ-ರಧರ ಚುಂಬಿಸುತಿರು ಹೋಗಯ್ಯ | ಗೋಪೇ-ರಧರ ಚುಂಬಿಸುತಿರು ಹೋಗಯ್ಯ 8 ಶುದ್ಧ ಖಳನು ಆಗಿ ವ್ರತವನಳಿದು ಬಂದಬೌದ್ಧ ಕಾಣಲೇ ಮಂದಗಮನೇ | ನಾಬೌದ್ಧ ಕಾಣಲೇ ಮಂದಗಮನೇ ||ಬೌದ್ಧನು ನೀನಾದರೊಳಿತು ನಡೆ ನಡೆ ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ | ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ 9 ತುರಗವನೇರಿ ಕಲಿಯ ಕಡಿದು ಶಾಂತನ ಸಹೋ-ದರಗೆ ರಾಜ್ಯವನಿತ್ತೆ ಕಾಣೇ | ಸಹೋ-ದರಗೆ ರಾಜ್ಯವನಿತ್ತೆ ಕಾಣೇ ||ಪರಮ ಪುರುಷನಹುದೋ ರಾಹುತರಿರುವಸ್ಥಳದಲ್ಲಿರು ಹೋಗಯ್ಯ | ನೀರಾಹುತರಿರುವ ಸ್ಥಳದಲ್ಲಿರು ಹೋಗಯ್ಯ 10 ಕನ್ಯಾಮಣಿಯೆ ಕೋಮಲೆಯೇ ಗುಣಪೂರ್ಣ ಮೋ-ಹನ್ನ ವಿಠಲ ರಾಯ ಕಾಣೆ | ನಾ ಮೋ-ಹನ್ನ ವಿಠಲ ರಾಯ ಕಾಣೆ ||ಎನ್ನ ಅಪರಾಧ ಕ್ಷಮಿಸಬೇಕು ಎನುತಲಿಚೆನ್ನಾಗಿ ಪಾದಕ್ಕೆರಗಿದಳು ದೇವಿ 11
--------------
ಮೋಹನದಾಸರು